Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ನಿರ್ಬಂಧ ಹೇರಿದ್ದಾಯಿತು ಇದೀಗ ಮತ್ತೊಂದು ಪ್ಲಾನ್ ಮಾಡಿಕೊಂಡಿರುವ ರಾಜ್ಯ ಸರ್ಕಾರ ಆರ್ ಎಸ್ ಎಸ್ ಸಂಬಂಧಿತ ಸಂಸ್ಥೆಗಳ ಜಮೀನುಗಳಿಗೆ ಅಂಕುಶ ಹಾಕುವ ಚಿಂತನೆ ನಡೆಸುತ್ತಿದೆ. ಸಚಿವ ಪ್ರಿಯಾಂಕ ಖರ್ಗೆಗೆ ಕಾಂಗ್ರೆಸ್ ನಾಯಕರು ಈ ಕುರಿತು ಸಲಹೆ ನೀಡಿದ್ದು, ಸಂಘ ಸಂಸ್ಥೆಗಳಿಗೆ ಮಂಜೂರು ಮಾಡಿದ್ದ ಭೂಮಿಯನ್ನು ಪರಿಶೀಲನೆ ಮಾಡುವಂತೆ ಸೂಚಿಸಿದ್ದಾರೆ. ಸರ್ಕಾರ ಮಂಜೂರು ಮಾಡಿದ ಭೂಮಿ ಪರಿಶೀಲನೆಗೆ ಇದೀಗ ಚಿಂತನೆ ನಡೆಯುತ್ತಿದೆ. 2023ರಲ್ಲೂ ಸರ್ಕಾರ ಬಂದ ಆರಂಭದಲ್ಲೇ ಈ ಕುರಿತು ಪರಿಶೀಲನೆ ನಡೆದಿತ್ತು. ಬಳಿಕ ಆರ್ ಎಸ್ ಎಸ್ ಲ್ಯಾಂಡ್ ಆಡಿಟ್ ಸ್ಥಗಿತಗೊಂಡಿತ್ತು. ಹಂಚಿಕೆಯಾದ ವಿವಾಹಿತ ಭೂಮಿಗಳ ಶಾರ್ಟ್ ಲೀಸ್ಟ್ ಅಲ್ಲಿ ಪರಿಶೀಲನೆ ಕುರಿತು ಚಿಂತನೆ ನಡೆಸಲಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರ್ ಎಸ್ ಎಸ್ ಕೆ ಹಂಚಿದ್ದ ಜಮೀನು ಇದಾಗಿದ್ದು, ಹಂಚಿಕ ಮಂಡಿಸಿದ ಭೂಮಿಯನ್ನು ಸರ್ಕಾರ ಪರಿಶೀಲನೆ ಮಾಡಲಿದೆ. ಬೆಂಗಳೂರಿನ ದೇವನಹಳ್ಳಿಯ ಗ ಹರಳೂರಿನಲ್ಲಿ ಚಾಣಕ್ಯ ವಿವಿಸ್ಥಾಪನೆಗೆ ಭೂಮಿ ಮಂಜೂರು ಮಾಡಿತ್ತು.…

Read More

ಕಲಬುರ್ಗಿ : ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧದ ಕೋರುತ್ತಂತೆ ಪ್ರತಿಭಾ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಸಚಿವ ಸಂಪುಟದಲ್ಲಿ ಆರ್ ಎಸ್ ಎಸ್ ಸೇರಿದಂತೆ ಸಂಘ ಸಂಸ್ಥೆಗಳು ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯುವುದು ಕಡ್ಡಾಯ ಎಂದು ಮಹತ್ವದ ನಿರ್ಧಾರ ತೆಗೆದುಕೊಂಡಿತು. ಇದರ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಸಡ್ಡು ಹೊಡೆಯಲು ಆರ್ಎಸ್ಎಸ್ ನಾಳೆ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಪಥಸಂಚಲನ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರದ ಚಿತ್ತಾಪುದರಲ್ಲಿ ಭಗವಾ ಧ್ವಜಗಳನ್ನು ತೆರವುಗೊಳಿಸಲಾಗಿದೆ. ತಡರಾತ್ರಿ ಪುರಸಭೆ ಅಧಿಕಾರಿಗಳು ಬ್ಯಾನರ್ ಅದೆಲ್ಲವನ್ನು ತೆರವು ಮಾಡಿದ್ದಾರೆ. ಪ್ರವೀಣ್ ಪರವಾನಿಗೆ ಇಲ್ಲದೆ ಅನುಮತಿ ಪಡೆಯದೆ ಭಗವಧ್ವಜ ಬ್ಯಾನರ್ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಅಧಿಕಾರಿಗಳ ಈ ನಡೆಗೆ ಆರ್ ಎಸ್ ಎಸ್ ನ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುರಸಭೆ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೆ, ಸಂಪುಟ ಸಭೆಯಲ್ಲಿ ಆರ್ ಎಸ್ ಎಸ್ ಸೇರಿದಂತೆ ಖಾಸಗಿ ಸಂಘ ಸಂಸ್ಥೆಗಳು ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ನಡೆಸಬೇಕಾದರೆ, ಅನುಮತಿ ಪಡೆಯುವುದು ಕಡ್ಡಾಯ ಎಂದು ನಿರ್ಧಾರ ತೆಗೆದುಕೊಂಡಿತು. ಇದೀಗ ಒಂದಡೆ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಪರೋಕ್ಷವಾಗಿ ನಿಷೇಧದ ಪ್ರಯತ್ನ ನಡೆಯುತ್ತಿದ್ದರೆ, ಮತ್ತೊಂದು ಕಡೆ ಆರ್ ಎಸ್ ಎಸ್ ಸಂಬಂಧಿತ ಕಾರ್ಯಕ್ರಮಗಳು ಮುಂದುವರೆದಿದೆ. ಹೌದು ಆರ್‌ಎಸ್‌ ಶತಮಾನೋತ್ಸವ ಹಿನ್ನೆಲೆಯಲ್ಲಿ ಇದೀಗ ಬೌದ್ಧಿಕ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ನವೆಂಬರ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್‌ ಬೌದ್ಧಿಕ ಕಾರ್ಯಕ್ರಮ ನಡೆಯಲಿದೆ. ಈ ಒಂದು ಕಾರ್ಯಕ್ರಮ ಎರಡು ದಿನ ನಡೆಯಲಿದ್ದು ಮೋಹನ್ ಭಾಗವತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನವೆಂಬರ್ 8 ಮತ್ತು 9ರಂದು ಹೊಸಕೆರೆಹಳ್ಳಿಯ ಪಿ ಇ ಎಸ್ ಕಾಲೇಜಿನಲ್ಲಿ ಈ ಒಂದು ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಭಾರತ ಭಾಗದಿಂದ ಸುಮಾರು 1000…

Read More

ಆಂಧ್ರಪ್ರದೇಶ : ಹೋಟೆಲ್ ನಲ್ಲಿ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ಜನರು ತೀವ್ರವಾಗಿ ಅಸ್ವಸ್ಥಗೊಂಡಿರುವ ಘಟನೆ ಆಂಧ್ರಪ್ರದೇಶದ ಅಂಬೇಡ್ಕರ್ ಕೋನಸಿಮಾ ಜಿಲ್ಲೆಯಲ್ಲಿ ನಡೆದಿದೆ. ಅಸ್ವಸ್ಥಗೊಂಡ 16 ಜನರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಪಹಾರ ಸೇವಿಸಿದ ಬಳಿಕ ವಾಂತಿ ಭೇಧಿ ಕಾಣಿಸಿಕೊಂಡು ಗ್ರಾಹಕರು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಎರಡು ದಿನಗಳ ಹಿಂದೆ ಜನರು ಈ ಹೋಟೆಲ್ನಲ್ಲಿ ಉಪಹಾರ ಸೇವಿಸಿದ್ದರು. ಅಂಬಾಜಿಪೇಟೆ ಮಂಡಲದ ಮಹಾಚವರಂ ನಲ್ಲಿ ಈ ಒಂದು ಘಟನೆ ನಡೆದಿದೆ.

Read More

ಬೆಂಗಳೂರು : ರಾಜ್ಯದ ಸರ್ಕಾರಿ ಆವರಣಗಳಲ್ಲಿ RSS ಸೇರಿದಂತೆ ಯಾವುದೇ ಸಂಘಟನೆಗಳು ಖಾಸಗಿ ಕಾರ್ಯಕ್ರಮ ನಡೆಸಬೇಕೆಂದರೆ ಇನ್ಮುಂದೆ ಅನುಮತಿ ಪಡೆಯೋದು ಕಡ್ಡಾಯ ಎಂದು ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು. ಇದೀಗ ಇದೆ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಹಾಗೂ ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಆಗ್ರಹಿಸಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಟ್ವೀಟ್ ನಲ್ಲಿ ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯ ಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ಸ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ. https://twitter.com/BasanagoudaBJP/status/1979102508816429269?t=53V2LbGDJexKpV1PvTV6kA&s=19

Read More

ಬೆಂಗಳೂರು : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೊಲೆ ಬಳಿಕ ಆರೋಪಿ ವಿಘ್ನೇಶ್ ತಮಿಳುನಾಡಿಗೆ ಪರಾರಿಯಾಗಿದ್ದ ಎಂದು ಶಂಕೆ ವ್ಯಕ್ತವಾಗಿತ್ತು. ಆರೋಪಿ ಪತ್ತೆಗೆ ಪ್ರತ್ಯೇಕ ಎರಡು ತಂಡಗಳನ್ನ ರಚನೆ ಮಾಡಿ ಹುಡುಕಾಟ ನಡೆಸಿದ್ದು, ಸದ್ಯ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯ ಶ್ರೀರಾಂಪುರ ಠಾಣೆ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ವಿಘ್ನೇಶ್ ಜೊತೆಗೆ ಹರೀಶನನ್ನ ಬಂಧಿಸಲಾಗಿದೆ. ಕೊಲೆಯ ಬಳಿಕ ವಿಘ್ನೇಶ್ ನನ್ನು ಬೈಕ್ ನಲ್ಲಿ ಹರೀಶ್ ಕರೆದೋಯ್ದಿದ್ದ. ಬೈಕ್ ನಲ್ಲಿ ಸೋಲದೇವನಹಳ್ಳಿ ಕಡೆಗೆ ಕರೆದುಕೊಂಡು ಹೋಗಿದ್ದ. ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ ಪೊಲೀಸರು, ಸೋಲದೇವನಹಳ್ಳಿ ಮನೆಯೊಂದರಲ್ಲಿ ಇದ್ದಾರೆ ಎಂಬ ಮಾಹಿತಿ ಬಂದಿದೆ. ಕೊಲೆ ನಡೆದ 14 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಮೃತ ಯುವತಿಗೆ ಬಲವಂತವಾಗಿ ಮಾಂಗಲ್ಯ ಕೂಡ ಕಟ್ಟಿದ್ದನಂತೆ. ಈ ವಿಚಾರ ಮನೆಯಲ್ಲಿ ತಿಳಿಸಿದ್ರೆ ಕೊಲೆ ಮಾಡ್ತೇನೆ ಎಂದು ಬೆದರಿಸಿದ್ದನಂತೆ. ಇನ್ನೂ ಇಬ್ಬರು ಒಂದೇ…

Read More

ಕಲಬುರ್ಗಿ : ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಿಡಿಸಿರುವ ಮತಗಳ್ಳತನ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದ್ದು,ರಾಷ್ಟ್ರ ರಾಜ್ಯಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಈ ಸಂಬಂಧ ದೇಶಾದ್ಯಂತ ಬಿಜೆಪಿ ವಿರುದ್ಧ ಆರಂಭಿಸಿರುವ ಮತಗಳ್ಳತನ ಆಭಿಯಾನಕ್ಕೆ ಪ್ರಮುಖ ಸಾಕ್ಷಿಯಾಗಿ ಬಳಕೆಯಾಗಿದ್ದ ಕರ್ನಾಟಕದ ಆಳಂದ ಕ್ಷೇತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತನಿಖೆ ಚುರುಕು ಪಡೆದುಕೊಂಡಿದೆ. ಇದೀಗ ಆಳಂದ ಕ್ಷೇತ್ರದ ಬಿಜೆಪಿ ಶಾಸಕನ ಮನೆ ಮೇಲೆ ಎಸ್​​ಐಟಿ ದಾಳಿ ಮಾಡಿದೆ. ಹೌದು ಮಾಜಿ ಶಾಸಕ ಸುಭಾಷ್ ಗುತ್ತೇದಾರ ಮನೆಯ ಮೇಲೆ SIT ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಭಾಷ್ ಗುತ್ತೇದಾರ್ ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಿದೆ. ಎಸ್​ಐಟಿ ಎಸ್​​ಪಿ ಶುಭಾನ್ವಿತಾ ನೇತೃತ್ವದ ತಂಡ ಕಲಬುರಗಿಯ ಗುಬ್ಬಿ ಕಾಲೋನಿಯಲ್ಲಿರುವ ಸುಭಾಷ್ ಗುತ್ತೇದಾರ್ ಮನೆ ಹಾಗೂ ಸಿಎ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಆಳಂದ ಕ್ಷೇತ್ರದ ಜೊತೆ ಕಲಬುರಗಿಯ ಇನ್ನು ಎರಡು ಕ್ಷೇತ್ರಗಳಲ್ಲಿ ನಡೆದ ಮತ ಅಕ್ರಮ ಪ್ರಕರಣದಲ್ಲಿ ಎಸ್ ಐಟಿ ಕೈಹಾಕಿದ್ದು ತನಿಖೆ…

Read More

ಉಡುಪಿ : ಉಡುಪಿಯಲ್ಲಿ ಘೋರವಾದ ದುರಂತ ನಡೆದಿದ್ದು, ಯುವಪ್ರೇಮಿಗಳಿಬ್ಬರು ಯಾರು ಇಲ್ಲದ ವೇಳೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯಲ್ಲಿ ಗುರುವಾರ ಸಂಜೆ ನಡೆದಿದೆ. ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಈ ಘಟನೆ ನಡೆದಿದೆ. ಲೇಬರ್ ಕಾಲೋನಿಯ ಬಾಲಕಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ ಬಾಲಕಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ, ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಹಾಗು ಬಾಲಕಿ ಪವಿತ್ರಾ (17) ಎಂದು ತಿಳಿದುಬಂದಿದೆ. ನಗರ ಪೊಲೀಸ್​​ ಠಾಣೆಯ‌ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ‌ ಒಳಕಾಡು ಎರಡು ಮೃತದೇಹಗಳನ್ನು ತೆರವುಗೊಳಿಸಿ ಆ್ಯಂಬುಲೆನ್ಸ್​ ವಾಹನದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಪೊಲೀಸ್​​ ಇಲಾಖೆಗೆ ನೆರವು ನೀಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಕೊಡಗು : ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಐತಿಹಾಸಿಕ ತಲಕಾವೇರಿಯ ಕಾವೇರಿ ತೀರ್ಥರೂಪಿಣಿಯಾಗಿ ತೀರ್ಥೋದ್ಭವದ ಮೂಲಕ ಭಕ್ತರಿಗೆ ದರ್ಶನ ನೀಡಿದಳು. ತೀರ್ಥೋದ್ಭವ ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಹಿಡಿದು ಆಗಮಿಸಿದ್ದು, ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲ‌ನಿವಾಸಿ‌ ಮಹಿಳೆಯರು ಆಗಮಿಸಿದ್ದು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಉದ್ಭವಿಸಿದಳು. ಮಡಿಕೇರಿ ತಾಲ್ಲೂಕಿನ ತಲಕಾವೇರಿಯಲ್ಲಿರುವ ಬ್ರಹ್ಮ ಕುಂಡಿಕೆಯಲ್ಲಿ ಭಕ್ತರಿಗೆ ದರ್ಶನ ತಾಯಿ ಕಾವೇರಿ ದರ್ಶನ ನೀಡಿದಳು. ಈ ಒಂದು ತೀರ್ಥೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜ ಯದುವೀರ್ ಕೃಷ್ಣರಾಜ ದತ್ತ ಒಡೆಯರ್ ಅವರು ಸಹ ಭಾಗವಹಿಸಿದ್ದರು.

Read More

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಮಿಷನ್ ಬಾಂಬ್ ನಡೆಸಿದ್ದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘವು ಇದೀಗ ಸಿಡಿದೆದ್ದಿದೆ. ಸರ್ಕಾರದಲ್ಲಿ ಇದೀಗ ಕಮಿಷನ್ ಜಾಸ್ತಿ ಆಗಿದೆ ಎಂದು ಸಂಘದ ಅಧ್ಯಕ್ಷ ಆರ್ ಮಂಜುನಾಥ್ ಗಂಭೀರವಾದ ಆರೋಪ ಮಾಡಿದ್ದಾರೆ 60% 80% ಅಂತ ಹೇಳಿಲ್ಲ ಒಟ್ನಲ್ಲಿ ಇದೀಗ ಸರ್ಕಾರದಲ್ಲಿ ಕಮಿಷನ್ ಹೆಚ್ಚಳ ಆಗಿದೆ. ಸರ್ಕಾರದಿಂದ ಗುತ್ತಿಗೆದಾರರಿಗೆ ಒಟ್ಟು 33,000 ಕೋಟಿ ಹಣ ಬರಬೇಕಿದೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಆರೋಪ ಮಾಡಿದ್ದು ಸರ್ಕಾರದ ವಿರುದ್ಧ ಕಮಿಷನ್ ಬಾಂಬ್ ಸಿಡಿಸಿದ್ದಾರೆ. ಸರ್ಕಾರ ಬಂದ ಮೇಲೆ ಬಾಕಿ ಹಣ ಬಿಡುಗಡೆ ಮಾಡುತ್ತಿವೆ ಅಂತ ಹೇಳಿದರು. ಎಲ್ಲೋಸೆ ರಿಲೀಸ್ ಗೆ ಕಮಿಷನ್ ತಗೋತೀರಾ ಅಂತ ಹೇಳಿದ್ದೇವೆ ಹೊರತು 60% 80% ಕಮಿಷನ್ ತಗೋತಿದ್ದಾರೆ ಅಂತ ಹೇಳಿಲ್ಲ ಆತರ ಹೇಳಿಲ್ಲ ಎಂದು ಮಂಜುನಾಥ್ ಹೇಳಿದರು. ದೀಪಾವಳಿ ಹಬ್ಬದ ನಂತರ ನಾವು ಹೋರಾಟ ಶುರು ಮಾಡುತ್ತೇವೆ ಮುಷ್ಕರ ನಡೆಸಿ ದೊಡ್ಡದಾಗಿ ಹೋರಾಟ ಮಾಡುತ್ತೇವೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ…

Read More