Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಿನ್ನೆ ಬಂಗ್ಲೆ ಗುಡ್ಡದಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ 7 ಮಾನವನ ತಲೆ ಬುರುಡೆಗಳು ಸೇರಿದಂತೆ ಅಸ್ತಿಪಂಜರದ ಮೂಳೆಗಳು ದೊರೆತಿದ್ದವು. ಇವೆಲ್ಲವನ್ನು ಇದೀಗ ಎಸ್ಐಟಿ ಅಧಿಕಾರಿಗಳು FSL ಗೆ ಕಳುಹಿಸಿದ್ದಾರೆ. ಅಲ್ಲದೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ಮತ್ತಷ್ಟು ಚುರುಕಾಗಿದ್ದು, ಬಂಗ್ಲೆಗುಡ್ಡ ಪ್ರದೇಶಗಳಲ್ಲಿ ನಿನ್ನೆ 7 ಸ್ಥಳಗಳಲ್ಲಿ 7 ತಲೆ ಬುರುಡೆಗಳು ಪತ್ತೆಯಾಗಿವೆ. ಇದೀಗ ವೈದ್ಯರು ತಲೆ ಬುರುಡೆಗಳು ಎಲ್ಲಾ ಪುರುಷರದ್ದು ಅಂತ ಹೇಳುತ್ತಿದ್ದಾರೆ ಮೇಲ್ನೋಟಕ್ಕೆ ಇದು ಪುರುಷರ ಬುರುಡೆಗಳು ಅಂತ ಹೇಳಿದ್ದಾರೆ ಮಹಜರು ವೇಳೆ ಎಸ್ಐಟಿ ತಂಡದಲ್ಲಿ ಬುರುಡೆ ಬಗ್ಗೆ ಸದ್ಯ ಪ್ರಾಥಮಿಕವಾಗಿ ಹೇಳಿಕೆ ನೀಡಿದ್ದಾರೆ ಆದರೆ ಎಲ್ಲವೂ ಎಫ್ ಎಸ್ ಎಲ್ ವರದಿಯಿಂದಲೇ ಬಯಲಾಗಬೇಕಾಗಿದೆ. ಇನ್ನು ನಿನ್ನೆ ಎಸ್ಐಟಿ ಅಧಿಕಾರಿಗಳು ಬಂಗ್ಲೆ ಗುಡ್ಡದಲ್ಲಿ ತಲೆಬುರುಡೆ ಅಸ್ತಿಪಂಜರದ ಜೊತೆಗೆ ಕೊಡಗು ಜಿಲ್ಲೆಯ ವಿರುದ್ಧ ಯುಬಿ ಅಯ್ಯಪ್ಪ ಅವರ ಐಡಿ ಕಾರ್ಡ್ ಸಿಕ್ಕಿತ್ತು. ಸಿಕ್ಕಿರೋದು ಎನ್ನಲಾಗುತ್ತಿದೆ ತಲೆಬುರುಡೆ…

Read More

ಹಾಸನ: ಹಾಸನದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಪಾರ್ಕ್ ನಲ್ಲಿ ಸ್ನೇಹಿತೆಯರ ಜೊತೆಗೆ ಕೈ ಹಿಡಿದುಕೊಂಡು ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹರಿಬಿಟ್ಟಿದ್ದಕ್ಕಾಗಿ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ತಾಲೂಕಿನ, ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೊಸಳೆಹೊಸಳ್ಳಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಪವನ್.ಕೆ (21) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಸೆ. 17ರಂದು ಮಧ್ಯಾಹ್ನ ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಪವನ್, ಇಬ್ಬರು ಸ್ನೇಹಿತೆಯರ ಜೊತೆ ಕುಳಿತಿದ್ದ. ಈ ವೇಳೆ ಓರ್ವ ಯುವತಿಯ ಕೈ ಹಿಡಿದು ಪವನ್ ಆತ್ಮೀಯತೆಯಿಂದ ಮಾತನಾಡುತ್ತಿದ್ದ. ಈ ದೃಶ್ಯವನ್ನು ಅಪರಿಚಿತ ಯುವತಿಯೊಬ್ಬಳು ಮೊಬೈಲ್‌ನಲ್ಲಿ ಸೆರೆ ಹಿಡಿದು, ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹರಿಬಿಟ್ಟಿದ್ದಳು. ಈ ಬಗ್ಗೆ ಯುವತಿಯು ಸಾಕಷ್ಟು ಟೀಕೆ ಜೊತೆಗೆ ವ್ಯಂಗ್ಯ ಸಂಭಾಷಣೆ ಮಾಡಿ ವೀಡಿಯೋ ಅಪ್‌ಲೋಡ್ ಮಾಡಿದ್ದಳು. ಈ ವೀಡಿಯೋವನ್ನು ಪವನ್ ಸಹಪಾಠಿಗಳು ಸೇರಿದಂತೆ ಅನೇಕರು ವೀಕ್ಷಣೆ ಮಾಡಿದ್ದರು. ಇದರಿಂದ ನನ್ನೊಂದಿಗಿದ್ದ ಯುವತಿಯರಿಗೆ ಏನಾದರೂ ತೊಂದರೆ…

Read More

ಉತ್ತರಕನ್ನಡ / ಗದಗ : ರಾಜ್ಯದಲ್ಲಿ ಇಂದು ಪ್ರತ್ಯೇಕವಾಗಿ ಎರಡು ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ ಉತ್ತರ ಕನ್ನಡದಲ್ಲಿ ಲಾರಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಮಧ್ಯ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದರೆ, ಇನ್ನೂ ಗದಗದಲ್ಲಿ ಕಾರಿಗೆ ಗೋವಾ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸಾವನಪ್ಪಿದ್ದಾರೆ. ಲಾರಿ-‘KSRTC’ ಬಸ್ ಮಧ್ಯ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವು! ಉತ್ತರ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಇಬ್ಬರು ಸಾವನಪ್ಪಿದ್ದಾರೆ. ಕಂಚಿನ ಬಾಗಿಲು ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನ ಬಾಗಿಲು ಎಂಬಲ್ಲಿ ಅಪಘಾತ ಸಂಭವಿಸಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ದಿಂದ ಲಾರಿ ಯಲ್ಲಾಪುರ ಕಡೆಗೆ ತೆರಳುತ್ತಿತ್ತು. ಈ ವೇಳೆ KSRTC ಬಸ್ ಲಾರಿ ಮಧ್ಯ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕ ಮತ್ತು ಬಸ್…

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಸೇರಿದಂತೆ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದರು. ಬಿಡಿಎ ಅಪಾರ್ಟ್ಮೆಂಟ್ ಟೆಂಡರ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ಸೇರಿದಂತೆ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು 8.41 ಕೋಟಿ ಹಣ ನಕಲಿ ಕಂಪನಿಗಳ ಮೂಲಕ ವರ್ಗಾವಣೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಬಿ ಎಸ್ ಯಡಿಯೂರಪ್ಪ ಮೊಮ್ಮಗ ಶಶಿಧರ್ ಮರಡಿ ಕಂಪನಿಗೆ ಈ ಒಂದು ಹಣ ವರ್ಗಾವಣೆ ಮಾಡಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ಕುರಿತು ಟಿಜಿ ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು. ಬಿಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ, ಶಶಿಧರ ಮರಡಿ, ಸಂಜಯ ಶ್ರೀ, ಚಂದ್ರಕಾಂತ್, ರಾಮಲಿಂಗಂ, ಎಸ್. ಟಿ ಸೋಮಶೇಖರ್, ಜಿ ಸಿ ಪ್ರಕಾಶ್, ಕೆ ರವಿ ಹಾಗೂ…

Read More

ಬೆಂಗಳೂರು : ಸೆಪ್ಟೆಂಬರ್ 22ರಂದು ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಯಲಿದ್ದು ಈ ವಿಚಾರವಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಅಲ್ಲದೇ ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವ ಕುರಿತು ಕೆಲ ಸಚಿವರು ಟೇಬಲ್ ಕುಟ್ಟಿ ಆಕ್ರೋಶ ಹೊರಹಾಕಿದ್ದಾರೆ ಸಚಿವರ ಈ ಒಂದು ನಡೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ. ಹೌದು ಜಾತಿ ಗಣತಿ ಸಮೀಕ್ಷೆ ಮುಂದೂಡುವ ವಿಚಾರವಾಗಿ ಇಂದು ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಸಿದ್ದರಾಮಯ್ಯ ಮಾತಿಗೂ ಕೂಡ ಅವಕಾಶ ನೀಡಿದಂತೆ ಸಚಿವರು ಆಕ್ರೋಶ ಹೊರ ಹಾಕಿದ್ದಾರೆ. ಜಾತಿ ಗಣತಿ ಗೊಂದಲದ ಕುರಿತು ಸಚಿವರು ಟೇಬಲ್ ಕುಟ್ಟಿ ಆಕ್ರೋಶ ಹೊರ ಹಾಕಿದ್ದಾರೆ. ಸಚಿವರ ಆಕ್ರೋಶಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸೀಟ್ ನಿಂದ ಗೆದ್ದು ಅತ್ತಿತ್ತ ಓಡಾಡಿದ್ದಾರೆ. ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಂದೂ ಕೂಡ ಹೀಗೆ ಅದು ಓಡಾಡಿರಲಿಲ್ಲ. ಸಚಿವರ ಆಕ್ರೋಶದ ಅರಿವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ.…

Read More

ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಒಂದಕ್ಕೆ ಗೋವಾ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ರವಿ ನೆಲ್ಲೂರು ಅರ್ಜುನ್ ನೆಲ್ಲೂರು ಸೇರಿದಂತೆ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ ಮೃತಪಟ್ಟವರು ಹಾವೇರಿ ಜಿಲ್ಲೆಯ ಹುನಗುಂದ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದ ಕುರಿತು ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಇಬ್ಬರು ಸಾವನಪ್ಪಿದ್ದಾರೆ. ಕಂಚಿನ ಬಾಗಿಲು ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನ ಬಾಗಿಲು ಎಂಬಲ್ಲಿ ಅಪಘಾತ ಸಂಭವಿಸಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ದಿಂದ ಲಾರಿ ಯಲ್ಲಾಪುರ ಕಡೆಗೆ ತೆರಳುತ್ತಿತ್ತು. ಈ ವೇಳೆ KSRTC ಬಸ್ ಲಾರಿ ಮಧ್ಯ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕ ಮತ್ತು ಬಸ್ ನಲ್ಲಿ ಇದ್ದಂತ ಓರ್ವ ಪ್ರಯಾಣಿಕ ಸಾವನಪ್ಪಿದ್ದಾರೆ. ಗಾಯಾಳುಗಳನ್ನು ಅಂಕೋಲಾ ತಾಲೂಕು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಧರ್ಮಸ್ಥಳದಲ್ಲಿ ಗುರುತಿಸಿದ ಸ್ಥಳ ಅಲೆಯಲು ಸೂಚನೆ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಪುರಂದರ ಗೌಡ ಮತ್ತು ತುಕಾರಾಮ ಗೌಡ ವಿಚಾರಣೆ ನಡೆಯಿತು. ವಿಚಾರಣೆಯ ವೇಳೆ ಎಸ್ ಪಿ ಪಿ ಬಿ ಏನ್ ಜಗದೀಶ್ ವಾದ ಮಂಡಿಸಿದರು. ಯಾವ ಕಾರಣಕ್ಕೆ ಷಡ್ಯಂತರವಿದೆ ಎಂದು ಹೈಕೋರ್ಟ್ ಪ್ರಶ್ನಿಸಿತು. ಷಡ್ಯಂತ್ರ ಏಕೆ ಎಂಬುವುದರ ಬಗ್ಗೆ ಇನ್ನೂ ತಿಳಿದು ಬರಬೇಕಿದೆ. ಸ್ವತಂತ್ರವಾದ ಮಾಹಿತಿಯನ್ನೇ ನೀಡಿಲ್ಲ ಎಂದು ಜಗದೀಶ್ ಉತ್ತರಿಸಿದರು. ನಿಮ್ಮ ಮನವಿಯೇ ಚಿನ್ನಯ್ಯನ ಹೇಳಿಕೆಯನ್ನು ಆಧರಿಸಿದೆ. ನಿಮ್ಮ ಮನವಿ ಪರಿಗಣಿಸಿದರೆ ನಾಳೆ ಮತ್ತಷ್ಟು ಜನ ಬರಬಹುದು ಎಂದು ಜಡ್ಜ್ ಇದೆ ವೇಳೆ ತಿಳಿಸಿದರು. ಚಿನ್ನಯ ಎರಡು ವರ್ಷದ ಹಿಂದೆಯೇ ಧರ್ಮಸ್ಥಳಕ್ಕೆ ಮರಳಿದ್ದ ತಲೆ ಬುರುಡೆಯನ್ನು ಬೇರೆಯವರು ತನಗೆ ಕೊಟ್ಟಿದ್ದಾರೆ ಎಂದು ಹೇಳಿದ್ದಾನೆ. ಚಿನ್ನಯ್ಯನ ಹೇಳಿಕೆಯನ್ನು ದಾಖಲಿಸಲು ಇಂದು ಕರೆದೊಯ್ಯಲಾಗಿದೆ. ಆದರೆ ಮ್ಯಾಜಿಸ್ಟ್ರೇಟ್ ಇಂದು ಚೆನ್ನಯ್ಯನ ಹೇಳಿಕೆ ದಾಖಲಿಸಿಲ್ಲ. ಪುರಂದರ ಮತ್ತು ತುಕಾರಾಂ ಕೂಡ ಚಿನ್ನಯ ಹೇಳಿಕೆ ಆಧರಿಸಿ ದೂರು ನೀಡಿದ್ದಾರೆ ಸ್ವತಂತ್ರವಾದ ಮಾಹಿತಿ…

Read More

ಉತ್ತರಕನ್ನಡ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಘಟನೆ ಮಾಸುವ ಮುನ್ನವೇ, ಉತ್ತರ ಕನ್ನಡದಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ಬೈಕ್ ಓವರ್ ಟೆಕ್ ವಿಚಾರವಾಗಿ ಮುಸ್ಲಿಂ ಯುವಕನೊಬ್ಬ ಹಿಂದೂ ಯುವಕನಿಗೆ ಚಾಕು ಇರಿದಿದ್ದಾನೆ . ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ರಸ್ತೆಯ ಮಾವಿಹೊಳೆ ಎಂಬಲ್ಲಿ ಈ ಒಂದು ಘಟನೆ ನಡೆದಿದೆ. ವಿವೇಕ್ ನಾಯಕಗೆ ಅದ್ನಾನ್ ನದೀಮ್ ಶೇಕ್ ಎನ್ನುವ ಮುಸ್ಲಿಂ ಯುವಕ ಚಾಕು ಇರಿದಿದ್ದಾನೆ. ಗಾಯಗೊಂಡ ವಿವೇಕ್ ಸುರೇಶ್ ನಾಯಕ್ ಸದ್ಯ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಕುರಿತಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಲೋಕಸಭೆ ಚುನಾವಣೆಯ ವೇಳೆ ಬೆಂಗಳೂರಿನ ಮಹದೇವಪುರದಲ್ಲಿ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ದಾಖಲೆ ಸಮೇತ ಆರೋಪ ಮಾಡಿದ್ದರು. ಇದೀಗ ಆಳಂದ ಕ್ಷೇತ್ರದಲ್ಲಿ ಕೂಡ ಮತಪಟ್ಟಿಯಿಂದ ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ ಎಂದು ಮತ್ತೊಂದು ಆರೋಪ ಮಾಡಿದ್ದಾರೆ ಇದೇ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಯವರು ಅಧಿಕೃತ ಮತಗಳ್ಳತನ ಮಾಡುತ್ತಿರುವ ದಾಖಲೆಗಳು ನನ್ನ ಬಳಿ ಇವೆ ಎಂದು ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಗೂ ಮುನ್ನ 7,250 ಮತದಾರರ ಹೆಸರು ಏಕಾಏಕಿ ಮತದಾರರಿಗೆ ಗೊತ್ತಿಲ್ಲದೆ ಡಿಲೀಟ್ ಆಗ್ತಿತ್ತು. ಅದರ ಬಗ್ಗೆ ಶಾಸಕ ಬಿ.ಆರ್.ಪಾಟೀಲ್ ಮತ್ತು ನಾನು ಎಲೆಕ್ಷನ್ ಕಮಿಷನ್​ಗೆ ದೂರು ಕೊಟ್ಟಿದ್ದೆವು. ಅದರ ಆಧಾರದ ಮೇಲೆ ಕಲಬುರಗಿಯಲ್ಲಿ ಎಫ್ಐಆರ್ ದಾಖಲಿಸಲಾಯಿತು.‌ ಪರಿಶೀಲನೆ ಮಾಡಿದಾಗ 6018 ಮತದಾರರಲ್ಲಿ ಯಾರ್ಯಾರು ಅರ್ಜಿ ಹಾಕಿದ್ರು, ಅದರಲ್ಲಿ 28 ಜನಕ್ಕೆ ಮಾತ್ರ ಮಾಹಿತಿ ಇತ್ತು. ಉಳಿದ ಅರ್ಜಿದಾರರಿಗೆ ಯಾವುದೇ ಮಾಹಿತಿಯೇ ಇರಲಿಲ್ಲ ಎಂದು…

Read More