Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22ರಂದು ಜಾತಿಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಈಗಾಗಲೇ ಈ ಕುರಿತು ಆದೇಶ ಹೊರಡಿಸಿದೆ. ಇದರ ಮಧ್ಯ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಕುರಿತು ಕೆಲವು ಸಚಿವರಿಂದ ಪರ ವಿರೋಧ ಚರ್ಚೆಯಾಗುತ್ತಿರುವ ಬೆನ್ನಲ್ಲೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಜಾತಿಗತಿ ಸಮೀಕ್ಷೆ ಕುರಿತು ಬಿಡುಗಡೆ ಮಾಡಿರುವ ಕೈಪಿಡಿ ಮೂಲೆಗುಂಪಾಗಿದೆ. ಹೌದು ಹಿಂದುಳಿದ ವರ್ಗದ ಆಯೋಗದ ಮಹಾ ಎಡವಟ್ಟಿನಿಂದ ಜಾತಿ ಸಮೀಕ್ಷೆ ತಯಾರಿ ಎಡವಟ್ಟಿನ ಹಿನ್ನೆಲೆಯಲ್ಲಿ 2 ಲಕ್ಷ ಹೊಸ ಜಾತಿಗತಿ ಕೈಪಿಡಿ ಇದೀಗ ತಿಪ್ಪೆಗೆ ಸೇರಿದೆ. ಮೊನ್ನೆ ಮೊನ್ನೆ ಅಷ್ಟೇ ಸಿಎಂ ಸಿದ್ದರಾಮಯ್ಯ ಕೈಪಿಡಿ ಬಿಡುಗಡೆ ಮಾಡಿರುವ ಕೈಪಿಡಿ ಮೂಲೆಗುಂಪಾಗಿದೆ. ಹಿಂದುಳಿದ ಆಯೋಗದ ಮಹಾ ಎಡವಟ್ಟಿನಿಂದ ಇದೀಗ ಸಿಎಂ ಸಿದ್ದರಾಮಯ್ಯ ಅವರೇ ಬಿಡುಗಡೆಗೊಳಿಸಿರುವ ಕೈಪಿಡಿ ಮೂಲೆಗುಂಪಾಗಿದೆ. ಸುಮಾರು 1 ಕೋಟಿ ಖರ್ಚಿನಲ್ಲಿ ಈ ಒಂದು ಕೈಪಿಡಿ ತಯಾರಿಸಲಾಗಿತ್ತು. ಈಗ ಮತ್ತೆ ಹೊಸ ಕೈಪಡಿ ತಯಾರಿಕೆಗೆ ಹಿಂದುಳಿದ ವರ್ಗಗಳ ಆಯೋಗ ಮುಂದಾಗಿದೆ. ಸೆಪ್ಟೆಂಬರ್ 22 ರಿಂದ ಆರಂಭ…
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವಡೆ ಭಾರಿ ಮಳೆ ಸುರಿಯುತ್ತಿದ್ದು ಇನ್ನೂ ಹಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಇದೀಗ ಬೆಂಗಳೂರಿನಲ್ಲಿ ನಗರದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಬೆಂಗಳೂರು ನಗರದ ಶಾಂತಿನಗರ ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಕಬ್ಬನ್ ಪಾರ್ಕ್ ಹಾಗು ವಿಧಾನಸೌಧ ಸೇರಿದಂತೆ ನಗರದ ಹಲವೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಭಾರಿ ಮಳೆ ಹಿನ್ನೆಲೆ ವಾಹನ ಸವಾರರು ಪರದಾಟ ನಡೆಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಆಗಿದೆ. ನಗರದ ಅವಲಹಳ್ಳಿ ಖಾಸಗಿ ಕಾಲೇಜಿನಲ್ಲಿ ಈ ಒಂದು ಗಲಾಟೆ ನಡೆದಿದೆ. ಕಾರಣ ಏನು ಅಂದರೆ ಓಣಂ ವಿಚಾರವಾಗಿ ಕೇರಳ ವಿದ್ಯಾರ್ಥಿಗಳ ನಡುವೆ ಈ ಒಂದು ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ. ಹೌದು ಓಣಂ ವಿಚಾರವಾಗಿ ಪರಸ್ಪರ ವಿದ್ಯಾರ್ಥಿಗಳ ಗುಂಪು ಹೊಡೆದಾಡಿಕೊಂಡಿದೆ. ಕಾಲೇಜಿನಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳು ಗಲಾಟೆ ನಡೆಸಿದ್ದಾರೆ. ಓಣಂ ವಿಚಾರವಾಗಿ ಕೇರಳ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ ಕಾಲೇಜಿನಲ್ಲಿ ಸೀನಿಯರ್ಸ್ ಮತ್ತು ಜೂನಿಯರ್ಸ್ ನಡುವೆ ಗಲಾಟೆ ನಡೆದಿದೆ. ಪೊಲೀಸರು ವಿದ್ಯಾರ್ಥಿಗಳ ಗಲಾಟೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ಐಟಿ ಅಧಿಕಾರಿಗಳು ಬಂಗ್ಲೆ ಗುಡ್ಡದಲ್ಲಿನ ಶೋಧ ಸಂಪೂರ್ಣವಾಗಿ ಮುಕ್ತಾಯಗೊಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಈ ಒಂದು ಬಂಗ್ಲೆಗುಡ್ಡದಲ್ಲಿ 7 ಮಾನವನ ತಲೆ ಬುರುಡೆ ಸೇರಿದಂತೆ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿವೆ. ಇದೀಗ ಶೋಧ ಮುಕ್ತಾಯಗೊಳಿಸಿ ಎಸ್ಐಟಿ ಅಧಿಕಾರಿಗಳು ಕಚೇರಿಗೆ ಮರಳಿದ್ದಾರೆ. ಇಂದು ಧರ್ಮಸ್ಥಳದಲ್ಲಿ ಎಸ್ಐಟಿ ತಂಡ ಶೋಧ ಕಾರ್ಯ ಸಂಪೂರ್ಣವಾಗಿ ಅಂತ್ಯಗೊಳಿಸಿದೆ. ಬುರುಡೆ ಮತ್ತು ಅಸ್ತಿ ಪಂಜರದ ಬಳಿ ವ್ಯಕ್ತಿ ಒಬ್ಬರ ಐಡಿ ಕಾರ್ಡ್ ಪತ್ತೆಯಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ.ಶೇಟಗೇರಿ ಗ್ರಾಮದ ಯುಬಿ ಐಯಪ್ಪ ಎನ್ನುವವರ ಐಡಿ ಕಾರ್ಡ್ ಪತ್ತೆಯಾಗಿದೆ. 7 ವರ್ಷಗಳ ಹಿಂದೆ ವೃದ್ಧ ಯುಬಿ ಐಯ್ಯಪ್ಪ ನಾಪತ್ತೆಯಾಗಿದ್ದರು. ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ಎಂದು ಹೇಳಿದಾಗ ಯು.ಬಿ ಅಯ್ಯಪ್ಪ ನಾಪತ್ತೆಯಾಗಿದ್ದರು.ಈ ಕುರಿತು ಸಂಬಂಧಿಕರು ಕುಟ್ಟ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಅಯ್ಯಪ್ಪ ಅವರಿಗಾಗಿ ಕುಟುಂಬಸ್ಥರು ಬಹಳಷ್ಟು ಹುಡುಕಾಡಿದರು. ಇದೀಗ ಇದು ಎಸ್ಐಟಿ ಶೋಧದ ವೇಳೆ ಯು.ಬಿ…
ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಈ ಒಂದು ಸಂಪುಟ ಸಭೆಯಲ್ಲಿ ದೌರ್ಜನಕ್ಕೆ ಒಳಗಾಗಿ ಮೃತಪಟ್ಟಿರುವ ಎಸ್ಸಿ ಎಸ್ಟಿ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹೌದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ತೀರ್ಮಾನ ತೆಗೆದುಕೊಳ್ಳಲಾಯಿತು. ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್ಸಿ ಎಸ್ಟಿ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರಿ ನೌಕರಿಗೆ ಸಂಪುಟ ಸಭೆ ಇದೀಗ ಒಪ್ಪಿಗೆ ನೀಡಿದೆ. ಗ್ರೂಪ್ ಸಿ, ಗ್ರೂಪ್ ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. DPAR ನಿಯಮಾವಳಿಗೆ ತಿದ್ದುಪಡಿ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
ಬೆಂಗಳೂರು : ರಾಜ್ಯ ಸರ್ಕಾರ ಸೆಪ್ಟೆಂಬರ್ 22ರಂದು ರಾಜ್ಯದಲ್ಲಿ ಜಾತಿಗಣಿತಿ ನಡೆಸಲು ದಿನಾಂಕ ಫಿಕ್ಸ್ ಮಾಡಿದೆ. ಆದರೆ ಜಾತಿ ಗಣತಿಗೆ ಪರ ಮತ್ತು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಜಾತಿ ಗಣತಿ ಸಮೀಕ್ಷೆ ಕುರಿತಂತೆ ಇಂದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆಯಲ್ಲಿ ಸುಧೀರ್ಘವಾದ ಚರ್ಚೆ ನಡೆಯಿತು. ಈ ವೇಳೆ ಈ ಒಂದು ಜಾತಿ ಗಣತಿ ಸಮೀಕ್ಷೆ ಮುಂದೊಡುವಂತೆ ಸಚಿವರು ಆಗ್ರಹಿಸಿದರು. ಇದೆ ವೇಳೆ ಸಿಎಂ ಸಿದ್ದರಾಮಯ್ಯ ನನ್ನನ್ನು ಮೇಲ್ವರ್ಗದ ವಿರೋಧಿ ಎಂದು ಆರೋಪಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ದಿನೇ ದಿನೇ ಜಾತಿವಾರು ಗೊಂದಲ ಸೃಷ್ಟಿಯಾಗುತ್ತಿದೆ .ಸಮೀಕ್ಷೆಯ ಸಾಧಕ ಭಾದಕಗಳ ಬಗ್ಗೆ ಸಚಿವರು ಪ್ರಸ್ತಾಪಿಸಿದರು. ಈಗಾಗಲೇ ಜಾತಿ ಗಣತಿ ಸಮೀಕ್ಷೆ ಘೋಷಿಸಿದ್ದೇವೆ ಈಗ ಏನು ಮಾಡಬೇಕು ಎಂಬುದರ ಸಮಾಲೋಚನೆ ನಡೆಯಿತು. ಇದೆ ವೇಳೆ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದು ತಮ್ಮ ವಿರುದ್ಧ ಅನಗತ್ಯ ಆರೋಪ ಮಾಡಲಾಗುತ್ತಿದೆ.…
ಬೆಂಗಳೂರು : ರಸ್ತೆ ಗುಂಡಿ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಇದೀಗ ಎಚ್ ಡಿ ಕುಮಾರಸ್ವಾಮಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬರಿ ಟ್ವೀಟ್ ಮಾಡಿಕೊಂಡು ಕೂರೋದಲ್ಲ ನೀನು ಕೇಂದ್ರ ಸಚಿವ ಬೆಂಗಳೂರಿಗೆ ನಿನ್ನ ಕೊಡುಗೆ ಏನಪ್ಪಾ ಎಂದು ಪ್ರಶ್ನಿಸಿದ್ದಾರೆ. ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಅಂತ ಹೇಳಿದ್ದೆ ಎಲ್ಲಿ ಮೇಕದ ಟು ಯೋಜನೆಗೆ ಅನುಮತಿ ಕೊಡಿಸಿದೆ ಬರಿ ಡಿಲೀಟ್ ಮಾಡಿಕೊಂಡು ಕುಳಿತುಕೊಂಡರೆ ಆಗುವುದಿಲ್ಲ ರಸ್ತೆಗುಂಡಿ ಮುಟ್ಟುವುದಕ್ಕೆ ಅಕೌಂಟೆಬಿಲಿಟಿ ಫಿಕ್ಸ್ ಮಾಡಿದ್ದೇನೆ ನಿನ್ನೆ ಮಳೆ ನೋಡಿ ಗಾಬರಿ ಆಯಿತು ರಾತ್ರಿ ಎಲ್ಲ ಎಚ್ಚರವಿದ್ದೇ. ಯಾರೋ ನಾಲ್ಕು ಜನ ಟ್ವೀಟ್ ಮಾಡಿ ಬಿಡುತ್ತಾರೆ. ಮುಂಬೈ ಮತ್ತು ಬೇರಿನಗರದ ಗುಂಡಿಗಳ ಬಗ್ಗೆ ಯಾಕೆ ಬರುತ್ತಿಲ್ಲ? ಟ್ವೀಟ್ ಮೂಲಕ ಬೆದರಿಕೆ ಹಾಕುವವರು ರಾಜಕೀಯಕ್ಕೆ ಬರಲಿ ಆಂಧ್ರಪ್ರದೇಶಕ್ಕೆ ಉದ್ಯಮಿಗಳು ಹೋಗುತ್ತಿಲ್ಲ. ಅದಕ್ಕೆ ಕರೆಯುತ್ತಿದ್ದಾರೆ ಶಾಸಕರಿಗೆ ಕೊಡುವ ಅನುದಾನ ರಸ್ತೆಗಳಿಗೆ ಬಳಸಿ ಅಂತ ಹೇಳಿದ್ದೇವೆ. ರಸ್ತೆಗುಂಡಿಗಳ ವಿಚಾರವಾಗಿ ಬಗ್ಗೆ ಸಿಎಂ…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ಐಟಿ ಅಧಿಕಾರಿಗಳು ಬಂಗ್ಲೆ ಗುಡ್ಡದಲ್ಲಿನ ಶೋಧ ಸಂಪೂರ್ಣವಾಗಿ ಮುಕ್ತಾಯಗೊಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಈ ಒಂದು ಬಂಗ್ಲೆಗುಡ್ಡದಲ್ಲಿ 7 ಮಾನವನ ತಲೆ ಬುರುಡೆ ಸೇರಿದಂತೆ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿವೆ. ಇದೀಗ ಶೋಧ ಮುಕ್ತಾಯಗೊಳಿಸಿ ಎಸ್ಐಟಿ ಅಧಿಕಾರಿಗಳು ಕಚೇರಿಗೆ ಮರಳಿದ್ದಾರೆ. ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಅಲ್ಲದೇ ಇದೀಗ ಬುರುಡೆ ಸಹಿತ ಮಾನವನ ಕೆಲವು ಮೂಳೆಗಳು ಸಹ ಪತ್ತೆಯಾಗಿವೆ. ಎಫ್ಎಸ್ಎಲ್ ತಜ್ಞರು ಪತ್ತೆಯಾದ ಮೂಳೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬಂಗ್ಲೆ ಗುಡ್ಡದಲ್ಲಿ ವಿಠಲ ಗೌಡ ತೋರಿಸಿದ ಜಾಗದಲ್ಲಿ ಬುರುಡೆಗಳು ಮತ್ತು ಅಸ್ತಿ ಪಂಜರಗಳು ಪತ್ತೆಯಾಗಿವೆ ಎನ್ನಲಾಗಿದೆ. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ…
ಬೆಂಗಳೂರು : ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸುವಂತೆ ಶಿಫಾರಸು ವಿಚಾರವಾಗಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಕಳೆದ 20 ವರ್ಷಗಳಿಂದ ಸಾಕಷ್ಟು ಶಿಫಾರಸುಗಳು ಹೋಗಿವೆ. ಬುಡಕಟ್ಟಿಗೆ ಸೇರಿದ ಅಂಶಗಳು ಇದ್ದರೆ ಎಸ್ಟಿಗೆ ಸೇರುತ್ತದೆ ಸರ್ಕಾರ ಶಿಫಾರಸು ಮಾಡಿದ ತಕ್ಷಣ ಆಗುತ್ತದೆ ಅಂತ ಏನಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣವಾಗಿದ್ದು ಯಾರು ಸಹ ಆತಂಕ ಪಡುವ ಅಗತ್ಯವಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ಎಸ್ ಟಿ ಗೆ ಹೊಸದಾಗಿ ಜಾತಿಗಳು ಸೇರ್ಪಡೆ ಆದರೆ ಎಸ್ ಟಿ ಮೀಸಲಾತಿ ಪ್ರಮಾಣ ಕೂಡ ಹೆಚ್ಚಳ ಆಗಬೇಕು. ಕೇಂದ್ರ ಸರ್ಕಾರ ಇದೆಲ್ಲವನ್ನು ಸುಮ್ಮನೆ ಮಾಡುವುದಿಲ್ಲ ಯಾವುದು ಸರಿಯಾಗಿದೆ ಅದನ್ನು ಮಾತ್ರ ಕೇಂದ್ರ ಸರ್ಕಾರ ಮಾಡುತ್ತದೆ. ಇಂತಹ ಶಿಫಾರಸುಗಳು 20 ವರ್ಷಗಳಿಂದ ಬರುತ್ತಲೇ ಇವೆ. ಎಸ್ ಟಿ ಗೆ ಹೊಸ ಜಾತಿ ಸೇರಿಸುವುದು ಸುಲಭದ ಕೆಲಸ ಅಲ್ಲ. ಅನೇಕ ಶಿಫಾರಸುಗಳು ದೆಹಲಿ ಬೆಂಗಳೂರು ಅಂತ ಸುತ್ತುತ್ತಲೇ ಇವೆ ತಳವಾರ ಪರಿವಾರ ಎರಡನೇ…
ಬೆಂಗಳೂರು : ರಾಜ್ಯ ಅಷ್ಟೇ ಅಲ್ಲದೆ ಇಡೀ ದೇಶದಲ್ಲೇ ಭಾರಿ ಸದ್ದು ಮಾಡಿದ್ದ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪ ಪಟ್ಟಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಎಡಿಜಿಪಿ ಅಮೃತ್ ಪಾಲ್ ಅರ್ಜಿ ವಜಾಗೊಂಡಿದೆ. ನ್ಯಾ. ಜೆ.ಎಂ ಖಾಜಿ ಅವರಿದ್ದ ಹೈಕೋರ್ಟ್ ಪೀಠ ಈ ಒಂದು ಆದೇಶ ಹೊರಡಿಸಿದೆ. ಅಮೃತ್ ಪಾಲ್ ಪಿಎಸ್ಐ ನೇಮಕಾತಿಯ ಉಸ್ತುವಾರಿ ವಹಿಸಿದ್ದರು. ಸೇಫ್ ಲಾಕ್ ಕಿ ಅಮೃತ್ ಪಾಲ್ ಬಳಿಯೇ ಇತ್ತು. ಈ ಒಂದು ಕಿ ಯನ್ನು ಕಿರಿಯಾಧಿಕಾರಿಗಳಿಗೆ ಕೊಟ್ಟು ದುರುಪಯೋಗ ಮಾಡಲಾಗಿದೆ. ಕೃತ್ಯದ ಸಂಬಂಧ ಲಂಚದ ಹಣದ ಭಾಗವು ರಿಕವರಿಯಾಗಿದೆ. ಹಾಗಾಗಿ ಪ್ರಕರಣ ರದ್ದುಪಡಿಸಿಸದಂತೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿದರು. ವಾದ ಪರಿಗಣಿಸಿ ಎಡಿಜಿಪಿ ಅಮೃತ್ ಪಾಲ್ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿತು.







