Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಮುಂಬೈ : ಬೆಟ್ಟಿಂಗ್ ಪ್ರಕರಣದಲ್ಲಿ ನಟಿ ಊರ್ವಶಿ ರೌಟೇಲಾ ಅವರಿಗೆ ಮತ್ತು ಮಾಜಿ ಸಂಸದೆ ಮಿಮಿ ಚಕ್ರವರ್ತಿ ಅವರಿಗೆ ಇಂದು ED ಅಧಿಕಾರಿಗಳಿಂದ ಸಮನ್ಸ್ ಜಾರಿ ಮಾಡಿದೆ. 1xBet ಆ್ಯಪ್ ಪ್ರಕರಣದಲ್ಲಿ ಇಬ್ಬರನ್ನೂ ED ಪ್ರಧಾನ ಕಚೇರಿಗೆ ಹಾಜರಾಗುವಂತೆ ಕೇಳಲಾಗಿದೆ. ಇದಕ್ಕೂ ಮೊದಲು, ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರನ್ನು ED ವಿಚಾರಣೆ ನಡೆಸಿತ್ತು.
ಬಾಗಲಕೋಟೆ : ಸುಮಾರು 30ಕ್ಕೂ ಹೆಚ್ಚು ಜನರಿಗೆ ಕಚ್ಚಿ ಮಂಗ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಕೊನೆಗೂ ಹುಚ್ಚು ಮಂಗ ಸೆರೆ ಸಿಕ್ಕಿದೆ. ಹೌದು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹುಚ್ಚು ಮಂಗವು ಸುಮಾರು 30ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿತ್ತು. ಇದೀಗ ಜನರು ಮಂಗನನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಮಂಗನ ಸೆರೆ ಹಿಡಿಯುವ ತಂಡದ ಕಾರ್ಯಚರಣೆ ನಡೆಸಿದ್ದು ಜನರ ಮೈ ಮೇಲೆ ಎರಗಿ ಕರಿಮಂಗ ಕಚ್ಚಿ ಗಾಯಗೊಳಿಸಿತ್ತು. ಇದೀಗ ಮಂಗನನ್ನು ಹಿಡಿದು ಜನರು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮಂಗನನ್ನು ಬೋನಿನಲ್ಲಿ ಹಾಕಿಕೊಂಡು ತೆರಳಿದ್ದಾರೆ.
ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಪ್ರವೇಶಕ್ಕೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ ವಿಧಿಸಲಾಗಿದೆ. ನಿರ್ಬಂಧ ವಿಧಿಸಿ ಕಲ್ಬುರ್ಗಿ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ ಆದೇಶ ಹೊರಡಿಸಿದ್ದಾರೆ. ಜೇವರ್ಗಿ ಪಟ್ಟಣದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದು ಶೋಭಾ ಯಾತ್ರೆಗೆ ಪ್ರಮೋದನೆ ಮುತಾಲಿಕ್ ಚಾಲನೆ ನೀಡಲು ಬರಬೇಕಿತ್ತು ಪ್ರಚೊದನಕಾರಿ ಭಾಷಣ ಹಾಗೂ ಕೋಮುದ್ವೇಷ ಭಾಷಣದ ಹಿನ್ನೆಲೆಯಲ್ಲಿ ಮುತಾಲಿಕ್ ಗೆ ನಿರ್ಬಂಧ ವಿಧಿಸಲಾಗಿದೆ ನಾಳೆ ಬೆಳಿಗ್ಗೆ 6 ಗಂಟೆವರೆಗೆ ಮುತಾಲಿಕೆಗೆ ನಿರ್ಬಂಧ ವಿಧಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ತನ್ನ ಮಕ್ಕಳನ್ನು ಬಕೆಟ್ನಲ್ಲಿ ಮುಳುಗಿಸಿ ಕೊಂದು ಬಳಿಕ ತಂದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರುವಂತಹ ಘಟನೆ ನಡೆದಿದೆ. ಘಟನೆಯಲ್ಲಿ ಪತ್ನಿ ಬಚಾವ್ ಆಗಿದ್ದಾರೆ. ಹೊಸಕೋಟೆ ಪೊಲೀಸರ ಪತ್ನಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಿವು ಎಂದು ಗುರುತಿಸಲಾಗಿದೆ. ಶಿವು ಮತ್ತು ಮಂಜುಳಾ ಪ್ರೀತಿಸಿ ಮದುವೆಯಾಗಿದ್ದರು. ಕೆಲಸಕ್ಕೆ ಹೋಗುತ್ತಿದ್ದ ವೇಳೆ ಪ್ರೀತಿ ಮಾಡಿದ್ದು, ಅನ್ಯ ಜಾತಿಯಾಗಿದ್ದ ಕಾರಣ ಪೋಷಕರ ವಿರೋಧದ ನಡುವೆ ಮದುವೆ ಮಾಡಿಕೊಂಡಿದ್ದರು. ಮದುವೆ ನಂತರ ಚೆನ್ನಾಗಿದ್ದ ಕುಟುಂಬಕ್ಕೆ ಅಪಘಾತದ ಬರೆ ಬಿದ್ದಿತ್ತು. ರಸ್ತೆ ಅಪಘಾತದಲ್ಲಿ ಶಿವು ಕಾಲು ಮುರಿದುಕೊಂಡು ಆಸ್ವತ್ರೆ ಪಾಲಾಗಿದ್ದ. ಎರಡು ಮನೆಯವರ ಸಹಕಾರವಿಲ್ಲದ ಕುಟುಂಬ ಕಾರಣ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಮನೆ ನಿರ್ವಹಣೆಗೆ ಮಹಿಳೆ ಕೆಲಸಕ್ಕೆ ಹೋಗ್ತಿದ್ರೆ, ಗಂಡ ಮನೆಯಲ್ಲೆ ಇರ್ತಿದ್ದ. ಇತ್ತೀಚೆಗೆ ಪತ್ನಿ ಶೀಲದ ಮೇಲೂ ಶಿವು ಅನುಮಾನ ಪಡುತ್ತಿದ್ದ.…
ಬೆಂಗಳೂರು : ಬೆಂಗಳೂರಲ್ಲಿ ನಾಳೆಯಿಂದ ಮೂರು ದಿನ ಕಾವೇರಿ ನೀರು ಸರಬರಾಜು ಬಂದ್ ಆಗಲಿದೆ. ಸೆಪ್ಟೆಂಬರ್ 15 ರಿಂದ 17ರವರೆಗೆ ಕಾವೇರಿ ನೀರು ಸರಬರಾಜು ಸ್ಥಗಿತಗೊಳಿಸಲಾಗುತ್ತಿದೆ. ಸುಮಾರು 68 ಗಂಟೆಗಳ ಕಾಲ ನೀರು ಸರಬರಾಜು ಬಂದ್ ಮಾಡಲಾಗುತ್ತಿದೆ. ಹಾಗಾಗಿ ಅಗತ್ಯದಷ್ಟು ನೀರು ಸಂಗ್ರಹಿಸಿಕೊಳ್ಳಲು ಜಳಮಂಡಳಿ ಸೂಚನೆ ನೀಡಿದೆ. ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಹಾಗೂ 17ರಂದು ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಚಿತವಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಜಲಮಂಡಳಿ ಮನವಿ ಮಾಡಿದೆ.ನಿಯಮಿತ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳಲ್ಲಿ ಜಲರೇಚಕ ಯಂತ್ರಾಗಾರಗಳನ್ನು ಸೆ.15, 16 ಹಾಗೂ 17ರಂದು ಸ್ಥಗಿತಗೊಳಿಸಲಾಗುತ್ತದೆ. ಕಾವೇರಿ 5ನೇ ಹಂತ ಸೆಪ್ಟೆಂಬರ್.15ರಿಂದ ಬೆಳಿಗ್ಗೆ 1 ರಿಂದ ಸೆಪ್ಟೆಂಬರ್ೆ.17ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳ ಕಾಲ ಕಾವೇರಿ 1, 2, 3, 4,ರಲ್ಲಿ ಸೆಪ್ಟೆಂಬರ್ 16ರ ಬೆಳಿಗ್ಗೆ 6ರಿಂದ…
ಬೆಂಗಳೂರು : ಇತ್ತೀಚಿಗೆ ನಟ ದರ್ಶನ್ ಅಭಿಮಾನಿಗಳು ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಹಾಕಿ ನಿಂದನೆ ಮಾಡಿದ್ದ ಪ್ರಕರಣ ಭಾರಿ ಸದ್ದು ಮಾಡಿತ್ತು. ಬಳಿಕ ರಮ್ಯಾ ಈ ಕುರಿತು ಬೆಂಗಳೂರು ಕಮಿಷನರ್ ಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹಲವರನ್ನು ಅರೆಸ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲೆ ದರ್ಶನ್ ಪತ್ನಿ ವಿಜಯಲಕ್ಷ್ಮಿಗೂ ಅಶ್ಲೀಲ ಮೆಸೇಜ್ ಬಂದಿದ್ದು ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ರು ಈ ಕುರಿತು ವಿವರಣೆ ನೀಡುವಂತೆ ಇದೀಗ 2ನೇ ಬಾರಿ ನೋಟಿಸ್ ನೀಡಿದ್ದಾರೆ. ಹೌದು ಕೊಲೆ ಆರೋಪಿ ನಟ ದರ್ಶನ್ ಪತ್ನಿಗೆ ಅಶ್ಲೀಲ ಮೆಸ್ಸೇಜ್ ಮಾಡಿದರ ಕುರಿತು ವಿವರಣೆ ನೀಡುವಂತೆ ಇದೀಗ ಪೊಲೀಸರು ಮತ್ತೊಂದು ನೋಟಿಸ್ ಕಳುಹಿಸಿದ್ದಾರೆ. ಎರಡು ನೋಟಿಸ್ಗು ಸಹ ವಿಜಯಲಕ್ಷ್ಮಿ ಯಾವುದೇ ಉತ್ತರ ನೀಡಿಲ್ಲ. ಘಟನೆ ಬಗ್ಗೆ ಹೇಳಿಕೆ ದಾಖಲಿಸಿಕೊಳ್ಳಲು ಪೊಲೀಸರು ನೋಟಿಸ್ ನೀಡಿದ್ದಾರೆ ಆದರೆ ಎರಡನೇ ಬಾರಿ ನೋಟಿಸ್ ನೀಡಿದರು ಕೂಡ ವಿಜಯಲಕ್ಷ್ಮಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.ಬಳಿಕ ಮಹಿಳಾ ಆಯೋಗದಿಂದ ಸುಮೊಟೊ ಕೇಸ್ ದಾಖಲಿಸುವಂತೆ…
ಬೆಂಗಳೂರು : ಈಗಾಗಲೇ ವರ್ಷದ ಆರಂಭದಲ್ಲಿ ಕೆಎಸ್ಆರ್ಟಿಸಿ ಟಿಕೆಟ್, ಮೆಟ್ರೋ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿತು ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು ಇನ್ನೂ ಐದು ತಿಂಗಳಲ್ಲಿ ಮೆಟ್ರೋ ಪ್ರಯಾಣದ ಟಿಕೆಟ್ ದರ ಶೇಕಡ 5ರಷ್ಟು ಮತ್ತೆ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೌದು ಇತ್ತೀಚೆಗೆ ತಾನೇ ಮೆಟ್ರೋ ಪ್ರಯಾಣ ದರು ಏರಿಕೆ ಮಾಡಲಾಗಿದೆ. ಬರೋಬ್ಬರಿ ಶೇಕಡಾ 71ರಷ್ಟು ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಈ ದರ ಏರಿಕೆಯಿಂದ ಪ್ರಯಾಣಿಕ ಇನ್ನು ಚೇತರಿಸಿಕೊಂಡಿಲ್ಲ. ಇದರ ಬೆನ್ನಲ್ಲೇ ಮೆಟ್ರೋ ಮತ್ತೊಂದು ದರ ಏರಿಕೆ ನಿರ್ಧಾರ ಮಾಡಿದೆ. ಇನ್ನು ಮುಂದೆ ಮೆಟ್ರೋ ಪ್ರಯಾಣ ದರ ಪ್ರತಿ ವರ್ಷ ಏರಿಕೆಯಾಗಲಿದೆ. ಇನ್ನು ಮುಂದೆ ಮೆಟ್ರೋ ಪ್ರಯಾಣ ದರ ಪ್ರತಿ ವರ್ಷ ಏರಿಕೆಯಾಗಲಿದೆ. ದರ ಏರಿಕೆ ಸಮಿತಿ ಶಿಫಾರಸ್ಸಿನಂತೆ ಪ್ರತಿ ವರ್ಷವೂ ಮೆಟ್ರೋ ಪ್ರಯಾಣ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಇದೀಗ ಪ್ರತಿ ವರ್ಷ…
ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗುಮ್ಮಲಪಲ್ಲಿ ಗ್ರಾಮದಲ್ಲಿ ವೃದ್ದೆಯ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೊಮ್ಮಲಪಲ್ಲಿ ಗ್ರಾಮದಲ್ಲಿ ಅತ್ತೆ ಮೇಲೆ ಹಲ್ಲೆಗೈದಿದ್ದ ಸೊಸೆ ರೇಖಾ ಹಾಗೂ ಆಕೆಯ ಪ್ರಿಯಕರನನ್ನು ಅರೆಸ್ಟ್ ಮಾಡಲಾಗಿದೆ. ಅತ್ತೆ ರಮಣಮ್ಮ ಮೇಲೆ ಸೊಸೆ ರೇಖಾ ಹಲ್ಲೇ ಮಾಡಿದ್ದಾಳೆ. ಪ್ರಿಯಕರ ಶಶಿಕುಮಾರ್ ಜೊತೆಗೆ ಸೇರಿಕೊಂಡು ಅತ್ತೆ ರಮಣಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಏಳು ವರ್ಷಗಳ ಹಿಂದೆ ಪ್ರೀತಿಸಿ ಆಂಧ್ರ ಮೂಲದ ರೇಖಾ ಮದುವೆಯಾಗಿದ್ದಳು. ತುಂಬಲಪಲ್ಲಿಯ ಮಂಜುನಾಥ ರೆಡ್ಡಿ ಯನ್ನು ಪ್ರೀತಿಸಿ ವಿವಾಹವಾಗಿದ್ದಳು.ಅತ್ತೆ ರಮಣಮ್ಮಗೆ ಸೊಸೆಯ ಅಕ್ರಮ ಸಂಬಂಧದ ವಿಷಯ ತಿಳಿದಿತ್ತು. ಹೀಗಾಗಿ ಪ್ರಿಯಕರ ಶಶಿಕುಮಾರ್ ಜೊತೆಗೆ ಸೇರಿ ಸೊಸೆ ರೇಖಾ ರಮಣಮ್ಮನ ಮೇಲೆ ಹಲ್ಲೆ ಮಾಡಿದ್ದಾಳೆ ರೇಖಾ ಮತ್ತು ಶಶಿಕುಮಾರ್ ನನ್ನ ರಾಯಲ್ಪಾಡು ತಡೆ ಪೊಲೀಸ್ರು ಅರೆಸ್ಟ್ ಮಾಡಿದ್ದಾರೆ.ಘಟನೆ ಕೋರಿದಂತೆ ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ : ಕೋಲಾರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಇಬ್ಬರು ಸಾವನ್ನುಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ದೊಡ್ಡತಮ್ಮನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡತಮ್ಮನಹಳ್ಳಿ ಗೆಟ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು, ಮೃತರನ್ನು ದೊಡ್ಡತಮ್ಮನಹಳ್ಳಿಯ ಬಾಲು (22) ಹಾಗೂ ಮಿಟ್ಟ ಹಳ್ಳಿಯ ಮಲ್ಲೇಶ್ (32) ಎಂದು ತಿಳಿದುಬಂದಿದೆ. ಘಟನೆ ಸಂಭಂದ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣಕನ್ನಡ : ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಸಾಮಾಜಿಕ ಹೋರಾಟಗಾರ ಸ್ನೇಹ ಮೈ ಕೃಷ್ಣ ಸೌಜನ್ಯ ಅಳಮಾವ ವಿಠಲ ಗೌಡನೇ ಈ ಒಂದು ಕೊಲೆ ಮಾಡಿದ್ದ ಎಂಬ ಗಂಭೀರವಾದ ಆರೋಪ ಮಾಡಿದ್ದರು. ಈ ವಿಚಾರವಾಗಿ ಇದೀಗ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಟ ವಿರುದ್ಧ ಇದೀಗ ದೂರು ದಾಖಲಾಗಿದೆ. ವೆಂಕಪ್ಪ ಕೋಟ್ಯಾನ್ ಎಂವುವರಿಂದ ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಾಗಿದೆ. ಸೌಜನ್ಯಳನ್ನು ಮಾವ ವಿಠ್ಠಲಗೌಡ ಕೊಂದಿದ್ದಾನೆ ಎಂದು ಸ್ನೇಹಮಯಿ ಕೃಷ್ಣ ಗಂಭೀರವಾಗಿ ಆರೋಪಿಸಿದ್ದರು. ಹಾಗಾಗಿ ವೆಂಕಪ್ಪ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಸೌಜನ್ಯಗಳಿಗೆ ನ್ಯಾಯ ಒದಗಿಸುವ ಹೋರಾಟದ ದಾರಿ ತಪ್ಪಿಸಲು ಸ್ನೇಹಮಯಿ ಕೃಷ್ಣ ದುರುದ್ದೇಶ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ ಈ ರೀತಿಯ ಹೇಳಿಕೆ ಹಿಂದೆ ಯಾರಿದ್ದಾರೆ ಎಂಬುವುದರ ಬಗ್ಗೆ ತನಿಖೆಯಾಗಬೇಕು ಸ್ನೇಹಮಯಿ ಕೃಷ್ಣ ಅವರನ್ನು ಕರೆಸಿ ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.










