Author: kannadanewsnow05

ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪ್ರೆಸ್ಟೀಜ್ ಫಾಲ್ಕಾನ್ ಸಿಟಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 22.12.2025 (ಸೋಮವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪೋರಮ್ ಮಾಲ್, ಫ್ರೇಸ್ಟೀಜ್ ಪಾಲ್ಕಾನ್ ಸಿಟಿ ಅರ‍್ಟ್ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮೇನ್ ರೋಡ್, ನಾರಾಯಣ ನಗರ 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಜೋತಿ ಲೇಔಟ್, ಗಂಗಪತಿಪುರ, ಸುಪ್ರಜ ನಗರ, ಜೆಎಸ್ಎಸ್ ಶಾಲೆ ಸುತ್ತಮುತ್ತಲ ಪ್ರದೇಶಗಳು, ಕೋಣನಕುಂಟೆ ಸರ್ಕಾರಿ ಶಾಲೆ, ಜರಗನಹಳ್ಳಿ ರ‍್ಕ್, ಗಂಗಾಧರೇಶ್ವರ ದೇವಸ್ಥಾನ, ಬಸವರಾಜು ಲೇಔಟ್, ಶಾಂತಿ ಸ್ಹಾ ಮಿಲ್, ರಾಜೀವ್ ಗಾಂಧಿ ರಸ್ತೆ, ಸಾರಕ್ಕಿ ಕೆರೆ, ಸಾರಕ್ಕಿ ಸಿಗ್ನಲ್, ನಾಗಜು9ನ ಪ್ರೀಮಿಯರ್ ಅರ‍್ಟ್ಮೆಂಟ್, ಚುಂಚಗಟ್ಟ ವಿಲ್ಲೇಜ್, ಶ್ರೀನಿಧಿ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ತಾಲೂಕಿನ ನಂದಿಕೂರ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ. ನಂದಿಕೂರ ಗ್ರಾಮದಲ್ಲಿ ಮಲ್ಲಿನಾಥ ಬಿರಾದಾರ್ ಮನೆಯಲ್ಲಿ ಜ್ಯೋತಿ ಪಾಟೀಲ್ ಆತ್ಮಹತ್ಯೆ ಶರಣಾಗಿದ್ದಾರೆ.ಬಿಜೆಪಿ ಕಾರ್ಯಕರ್ತನಾಗಿರುವ ನಂದಿಕೂರ್ ಗ್ರಾಮದ ಮಲ್ಲಿನಾಥ್ ಮನೆಯಲ್ಲಿ ಇಲ್ಲದ ವೇಳೆ ಜ್ಯೋತಿ ಪಾಟೀಲ್ ಬಾಗಿಲು ಬಡಿದು ಎಬ್ಬಿಸಿದ್ದಾರೆ. ಮಲ್ಲಿನಾಥ ಬಿರಾದರ್ ಪತ್ನಿ, ಮೂವರು ಮಕ್ಕಳು ಮನೆಯಲ್ಲಿ ವಾಸವಿದ್ದರು. ಬಾಗಿಲು ತೆರೆದ ತಕ್ಷಣ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡಿದ್ದಾರೆ ಜ್ಯೋತಿ ಪಾಟೀಲ್ ಕಲಬುರ್ಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ರಾಜಕೀಯ ಒತ್ತಡಕ್ಕೆ ಅಮಾನತು ಮಾಡಿದ್ದಾರೆ ಎಂದು ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮುಖ್ಯ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಹರಗಾಪುರದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಸುರೇಖಾ ಬಾಯಣ್ಣವರ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದಲ್ಲಿ ಇವರು ಮುಖ್ಯ ಶಿಕ್ಷಕಿಯಾಗಿದ್ದರು. ಸುರೇಖಾ ಅವರು ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ನೇಮಕ ಮಂದೂಡಿದ್ದಾರೆ. ಪವನ್ ಪಾಟೀಲ್ ಎಂಬಾತ ಅಕ್ರಮ ಚುನಾವಣೆ ನಡೆಸುತ್ತಿದ್ದ ಎಂದು ಆರೋಪಿಸಿದ್ದಾರೆ. ಇದನ್ನು ಗಮನಿಸಿ ಆ ದಿನ ನಾನು ಚುನಾವಣೆ ಮುಂದೂಡಿದ್ದೆ ಎಂದು ಸೆಲ್ಫಿ ವಿಡಿಯೋ ದಲ್ಲಿ ತಿಳಿಸಿದ್ದಾರೆ. ಇದರಿಂದ ಪವನ್ ತಮ್ಮ ಅವರು ಅಧ್ಯಕ್ಷ ಆಗಲಿಲ್ಲ ಅಂತ ದ್ವೇಷ ಕಾರುತ್ತಿದ್ದಾನೆ. ಸಚಿವ ಸತೀಶ್ ಜಾರಕಿಹೊಳಿ ಹೆಸರು ಹೇಳಿ ಬಿಇಓ ಮೇಲೆ ಒತ್ತಡ ತಂದಿದ್ದಾನೆ ಎಂದು ಆರೋಪಿಸಿದ್ದಾರೆ ಸೆಲ್ಫಿ ವಿಡಿಯೋದಲ್ಲಿ ಮಾನ್ಯ ಶಿಕ್ಷಕರಲ್ಲಿ ನಾನು ವಿನ್ಯಪೂರ್ವಕವಾಗಿ ಬೇಡಿಕೊಳ್ಳುತ್ತೇನೆ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಯಾದ ಸುರೇಖಾ ಬಾಯಣ್ಣನವರ ಆದ…

Read More

ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿದ್ದು ಸಿಐಡಿ ಅಧಿಕಾರಿಗಳು ಇದೀಗ ಬೈರತಿ ಬಸವರಾಜ್ ಅವರಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಒಂದು ಪ್ರಕರಣದಲ್ಲಿ ಭೈರತಿ ಬಸವರಾಜ ಪತ್ತೆಗಾಗಿ ಅಧಿಕಾರಿಗಳು ಮೂರು ತಂಡಗಳನ್ನು ರಚಿಸಿದ್ದಾರೆ. ಗೋವಾ ಮಹಾರಾಷ್ಟ್ರದಲ್ಲಿ ಎರಡು ತಂಡಗಳಿಂದ ಈಗಾಗಲೇ ಹುಡುಕಾಟ ನಡೆಸಲಾಗುತ್ತಿದ್ದು ಇನ್ನೂ ನಿನ್ನೆ ಬೆಳಗಾವಿ ಅಧಿವೇಶನ ಮುಗಿದ ಬಳಿಕ ಭೈರತಿ ಬಸವರಾಜ್ ಯಾವ ರಸ್ತೆಯ ಮೂಲಕ ತೆರಳಿದ್ದಾರೆ ಎನ್ನುವುದರ ಕುರಿತು ಸಿಐಡಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಇನ್ನು ಬಂಧನದ ಭೀತಿಯಿಂದ ಭೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದೆ ಬಸವರಾಜ್ ಜೊತೆಗೆ ಫೋನ್ ಸಂಪರ್ಕದಲ್ಲಿರುವವರ ಬಗ್ಗೆ ಕೂಡ ಮಾಹಿತಿ ಕಲೆ ಹಾಕಲಾಗುತ್ತಿದೆ. ಬೆಳಗಾವಿಯಿಂದ ಎಲ್ಲಿಗೆ ಹೋಗಿದ್ದಾರೆ ಎನ್ನುವ ಮಾಹಿತಿ ಹಾಗೂ ಟೋಲ್ ಗಳ ಬಳಿಯ ಸಿಸಿ ಕ್ಯಾಮೆರಾ ಗಳನ್ನು ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಬೆಳಗಾವಿಯಿಂದ ಹೊರ ಹೋಗುವ ಟೋಲ್…

Read More

ಬಳ್ಳಾರಿ : ರಾಜ್ಯದಲ್ಲಿ ವಾಲ್ಮೀಕಿ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಶಾಸಕ ಬಿ ನಾಗೇಂದ್ರ ತಮ್ಮ ಸಚಿವ ಸ್ಥಾನ ಕಳೆದುಕೊಂಡು ಜೈಲಿಗೆ ಹೋಗಿ ಬಂದಿದ್ದಾರೆ ಅಲ್ಲದೆ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಹಲವು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಇದೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಸೇರಿದ 8 ಕೋಟಿಗೂ ಅಧಿಕ ಮೌಲ್ಯದ ಸ್ಥಿರಾಸ್ತಿಯನ್ನು ಇಡಿ ಜಪ್ತಿ ಮಾಡಿಕೊಂಡಿದೆ. ವಸತಿ ಮತ್ತು ವಾಣಿಜ್ಯ ಆಸ್ತಿ ಸೇರಿದಂತೆ 4 ಸ್ಥಿರಾಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್​ಗಳಡಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ. ಈ ಆಸ್ತಿಗಳನ್ನು PMLA ಅಡಿ ‘ಅಪರಾಧದ ಆದಾಯ’ ಎಂದು ಇಡಿ ಕರೆದಿದೆ. ಅಪರಾಧದ ಉಳಿದ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಅವುಗಳಿಗೆ ಬಿ ನಾಗೇಂದ್ರ ಈಗಾಗಲೇ ಬೇರೆ ವ್ಯವಸ್ಥೆ ಮಾಡಿರಬಹುದು ಅಥವಾ ಮರೆಮಾಡಿರಬಹುದು ಎಂದು ಇಡಿ ತಿಳಿಸಿದೆ. https://twitter.com/dir_ed/status/2001993011706905042?t=93Vyra43i3cqVMOGStE_4w&s=19

Read More

ಬಳ್ಳಾರಿ : ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳವು ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಬಳ್ಳಾರಿಯ ಚಿನ್ನದ ಉದ್ಯಮಿ ಸೇರಿದಂತೆ ಇಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್‌ ಲೇಪನ ಮಾಡಿದ್ದ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಈ ಹಿಂದೆ ಪ್ರಕರಣ ಸಂಬಂಧ ಕೇರಳದ ಟಿಡಿಬಿಯ ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಅವರನ್ನು ಬಂಧಿಸಲಾಗಿತ್ತು. 2019ರಲ್ಲಿ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ದ್ವಾರಪಾಲಕರ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾರಕ್ಕೆ ವಿದ್ಯುತ್ ಲೇಪನಕ್ಕಾಗಿ ಸ್ಮಾರ್ಟ್ ಕ್ರಿಯೇಷನ್‌ಗೆ ತೆಗೆದಕೊಂಡು ಹೋಗಿದ್ದ. ಆ ವೇಳೆ ಅದರಲ್ಲಿದ್ದ ಚಿನ್ನವನ್ನು ತೆಗೆಯಲಾಗಿದೆ ಎನ್ನುವುದು ಎಸ್‌ಐಟಿ ತನಿಖೆಯಲ್ಲಿ ಗೊತ್ತಾಗಿದೆ. ಇದಕ್ಕೂ ಮುನ್ನ, ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಬಗ್ಗೆ ಕೇರಳ ಹೈಕೋರ್ಟ್ ತೀವ್ರ ಅತೃಪ್ತಿ ವ್ಯಕ್ತಪಡಿಸಿತ್ತು.…

Read More

ತುಮಕೂರು : ತುಮಕೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಆಂಧ್ರ ಪ್ರದೇಶದ ಬಸ್ ಹಾಗು ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಒಂದು ಘಟನೆ ನಡೆದಿದೆ ಮೃತ ಚಾಲಕನನ್ನು ಐರ್ವಲಹಳ್ಳಿ ಗ್ರಾಮದ ರಾಜಶೇಖರ ರೆಡ್ಡಿ (40) ಎಂದು ತಿಳಿದು ಬಂದಿದೆ. ಆಂಧ್ರ ಪ್ರದೇಶದ ಪೆನುಗೊಂಡ ಕಡೆಯಿಂದ ಬಸ್ ಪಾವಗಡ ಕಡೆಗೆ ಬರುತ್ತಿತ್ತು ಬಸ್ ನಲ್ಲಿ ಇದ್ದಂತಹ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಾವಗಡದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಕ್ಷಿಣಕನ್ನಡ : ಧರ್ಮಸ್ಥಳ ವಿರುದ್ಧ ಷಡ್ಯಂತರ ಹಾಗೂ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಶಿವಮೊಗ್ಗ ಸೆಂಟ್ರಲ್ ಜೈಲಿನಿಂದ ಆರೋಪಿ ಚಿನ್ನಯ್ಯ ಬಿಡುಗಡೆಯಾಗಿದ್ದಾನೆ ಬಿಡುಗಡೆ ಬಳಿಕ ಆರೋಪಿ ಚಿನ್ನಯ್ಯ ಐವರ ವಿರುದ್ಧ ಜೀವ ಬೆದರಿಕೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣೆಗೆ ಇದೀಗ ದೂರ ನೀಡಿದ್ದಾನೆ. ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಅಂತ ಚಿನ್ನಯ್ಯ ದೂರು ನೀಡಿದ್ದಾನೆ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣನವರ, ವಿಠಲಗೌಡ, ಟಿ ಜಯಂತ್ ಹಾಗೂ ಸಮೀರ್ ಎಂಡಿ ವಿರುದ್ಧ ಆರೋಪಿ ಚಿನ್ನಯ್ಯ ದೂರು ನೀಡಿದ್ದಾನೆ. ಈ ವೇಳೆ ಬೆಳ್ತಂಗಡಿ ಠಾಣೆಗೆ ಮನವಿ ಸಲ್ಲಿಸಲು ಧರ್ಮಸ್ಥಳ ಪೊಲೀಸರು ಸೂಚನೆ ನೀಡಿದ್ದಾರೆ.

Read More

ಚಾಮರಾಜನಗರ : ಕೆ ಜಿಗೆ ಚಾಮರಾಜನಗರ ಮೈಸೂರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹುಲಿ ಹಾಗೂ ಚರ್ಚೆಗಳ ಹಾವಳಿ ಹೆಚ್ಚಾಗಿದ್ದು ಇದೀಗ ಚಾಮರಾಜನಗರದಲ್ಲಿ ಒಂದೇ ದಿನ ಐದು ಹುಲಿಗಳು ಕಂಡುಬಂದಿದ್ದು, ಗ್ರಾಮಸ್ಥರು ಹುಲಿಗಳ ಓಡಾಟ ಕಂಡು ಭಯಭೀತರಾಗಿದ್ದಾರೆ. ಹೌದು ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟದಿಂದ ಜನರು ಬೆಚ್ಚಿ ಬೀಳುತ್ತಿದ್ದಾರೆ. ಇದೀಗ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕುಗಳ ಗ್ರಾಮಸ್ಥರಲ್ಲಿ ತೀವ್ರ ವ್ಯಾಘ್ರಾತಂಕ ಮನೆ ಮಾಡಿದೆ. ಒಂದಲ್ಲ, ಎರಡಲ್ಲ.. 5 ಹುಲಿಗಳು ಹಾದುಹೋದ ದೃಶ್ಯ ನಂಜದೇವನಪುರ ಗ್ರಾಮದ ಕುಮಾರಸ್ವಾಮಿ ಎಂಬುವರ ಜಮೀನಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಾಮರಾಜನಗರ ತಾಲೂಕಿನ ನಂಜದೇವಪುರದ ಜಮೀನಿನ‌ ಪಕ್ಕವೇ ಆನೆಮಡುವಿನ ಕೆರೆಯಿದ್ದು, ಅಲ್ಲಿಂದ 5 ಹುಲಿಗಳು ತೆರಳುವಾಗ ಸಿಸಿಟಿವಿಯಲ್ಲಿ ದೃಶ್ಯ ರೆಕಾರ್ಡ್​ ಆಗಿದೆ. ಕೆರೆ ಬಳಿ ಹುಲಿಗಳು ಪ್ರತ್ಯಕ್ಷವಾಗಿದ್ದನ್ನು ತಿಳಿದು ಸುತ್ತಮುತ್ತಲಿನ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

Read More

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿರುವ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ದಾಖಲೆ ತಿರುಚಿ ವಂಚನೆ ಎಸೆಗಿರುವ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳ ಬಳಿ ಹಣ ಪಡೆದು ಹಾಜರಾತಿ ಹಾಕಿ ಕಳ್ಳಾಟ ಮಾಡಿದ್ದಾರೆ ಕಾಲೇಜಿಗೆ ಬಾರದಿದ್ದರು ಕೂಡ ಸಿಬ್ಬಂದಿಗಳು ಹಾಜರಾತಿ ಕೊಡುತ್ತಿದ್ದರು ಸಿಬ್ಬಂದಿ ವಿದ್ಯಾರ್ಥಿಗಳ ಮೇಲೆ ಇದೀಗ ಕ್ರಿಮಿನಲ್ ಕೇಸ್ ದಾಖಲಾಗಿದೆ. ಕಾಲೇಜು ಆಡಳಿತ ಮಂಡಳಿಯಿಂದ ಸಿಬ್ಬಂದಿಗಳು ಮತ್ತು ಹಾಗೂ ವಿದ್ಯಾರ್ಥಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. ನವೆಂಬರ್ 25 ರಂದು ಆನೇಕಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದಾಖಲೆಗಳನ್ನು ತಿರುಚಿ ವಂಚನೆ ಮಾಡಿರುವುದು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಮೇಲೆ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳಿಂದ ಹಣ ಪಡೆದು ಹಾಜರಾತಿ ಕಲಾಟ ಮಾಡುತ್ತಿದ್ದರು ಎಂದು ಆರೋಪ ಕೇಳಿ ಬಂದಿದೆ. ಸಿಬ್ಬಂದಿ ಮೌನೇಶ್ ಬಾಬು, ಹಳೆಯ ವಿದ್ಯಾರ್ಥಿ ಕಿಶೋರ್ ಬಿಟೆಕ್ ವಿದ್ಯಾರ್ಥಿಗಳಾದ ತರುಣ್ ವಿನೋದ್, ತ್ರೀಣಯ್ಯನ ರೆಡ್ಡಿ ಪ್ರವೀಣ್, ಕುಮಾರ್ ರೆಡ್ಡಿ ಹೀಗೆ ಆರು ಮಂದಿ ವಿರುದ್ಧ ಪ್ರಕರಣ ಸಿಬ್ಬಂದಿ ಮೌನೇಶ್ ಕ್ರಿಮಿನಲ್ ಪ್ರಕರಣ…

Read More