Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಹಾಸನ : ಗಣಪತಿ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 9 ಜನರು ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ ರಾಜೇಶ್ ಸಾವನ ಪ್ರವಹಿನಲೆಯಲ್ಲಿ ಮೊಸಳೆ ಹೊಸಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗೆ ಪ್ರಯ ಘೋಷಣೆ ಮಾಡಲಾಗಿದೆ. ತಡರಾತ್ರಿ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಒಂದು ಅಪಘಾತ ಸಂಭವಿಸಿತ್ತು. ಬಿಎ ವಿದ್ಯಾರ್ಥಿ ವಿ ರಾಜೇಶ್ ಗೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ನಿನ್ನೆ ರಾತ್ರಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಡ್ಯಾನ್ಸ್ ಮಾಡುವಾಗ ಏಕಾಏಕಿ ನಿಯಂತ್ರಣ ಕಳೆದುಕೊಂಡ ಕ್ಯಾಂಟರ್ ಒಂದು ನುಗ್ಗಿದೆ. ಈ ಒಂದು ಘಟನೆಯಲ್ಲಿ 9 ಜನರು ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಾಜೇಶ್ ಸಾವಿಗೆ ಉಪನ್ಯಾಸಕರು ಹಾಗೂ ಸಹಪಾಠಿಗಳು ಇದೀಗ ಕಂಪನಿ ಮಡಿದಿದ್ದಾರೆ.

Read More

ಹಾಸನ : ಗಣೇಶ ಮೆರವಣಿಗೆ ವೇಳೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. 17ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಹೇಳಿದ್ದಾರೆ. ಇನ್ನು ಮೃತರ ಪೈಕಿ ಬಹುತೇಕರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳಾಗಿದ್ದಾರೆ. ತಮ್ಮ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಾವನ್ನಪ್ಪಿದವರ ವಿವರ ಬಳ್ಳಾರಿ ನಿವಾಸಿ ಅಂತಿಮ ಬಿಇ ವಿದ್ಯಾರ್ಥಿ ಪ್ರವೀಣ್​​​​​, ಹೊಳೆನರಸೀಪುರ ತಾಲೂಕಿನ ಹಳೆಕೋಟೆ ಹೋಬಳಿ ಕೆ.ಬಿ.ಪಾಳ್ಯ ನಿವಾಸಿ ರಾಜೇಶ್​(17), ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ(17), ಮುತ್ತಿಗೆಹೀರಳ್ಳಿ ಗ್ರಾಮದ ನಿವಾಸಿ ಗೋಕುಲ್(17), ಕಬ್ಬಿನಹಳ್ಳಿ ನಿವಾಸಿಗಳಾದ ಕುಮಾರ(25), ಪ್ರವೀಣ(25), ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಗವಿ ಗಂಗಾಪುರ ಗ್ರಾಮ ನಿವಾಸಿ ಮಿಥುನ್(23), ಚಿಕ್ಕಮಗಳೂರು ಜಿಲ್ಲೆಯ ಮಾಣೇನಹಳ್ಳಿ ನಿವಾಸಿ ಬಿಇ ವಿದ್ಯಾರ್ಥಿ ಸುರೇಶ್(19), ಹಾಸನ ತಾಲೂಕಿನ ಬಂಟರಹಳ್ಳಿ…

Read More

ಹಾಸನ : ನಿನ್ನೆ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣೇಶ ಮೆರವಣಿಗೆಯ ವೇಳೆ ಕ್ಯಾಂಟರ್ ಹರಿದು ಭೀಕರ ಬಹಾರ ಸಂಭವಿಸಿದ್ದು ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 20 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹ ಸಂತಾಪ ಸೂಚಿಸಿದ್ದು, ಇದೊಂದು ಹೃದಯವಿದ್ರಾವಕ ಘಟನೆ ಮೃತರ ಆತ್ಮಕ್ಕೆ ಶಾಂತಿ ಕೋರಿ ಪ್ರದಾನ ಮಂತ್ರಿ ನರೇಂದ್ರ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ 50,000 ಘೋಷಣೆ ಮಾಡಿದ್ದಾರೆ. ಪಿಎಂ ರಾಷ್ಟೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ ಮಾಡಲಾಗಿದೆ. ಇನ್ನು ರಾಜ್ಯ ಸರ್ಕಾರದಿಂದ ಮೃತ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿ ಇದ್ದಂತಹ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಸುಮ್ಮನಹಳ್ಳಿಯ ಜಂಕ್ಷನ್ ರಸ್ತೆಯಲ್ಲಿ ನಡೆದಿದೆ. ಆಟೋ, ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಆಟೋದಲ್ಲಿದ್ದ ಡಿಯೇಸು ಹಾಗೂ ಜನಿಫರ್ ಅವರು ಸ್ಥಳದಲ್ಲಿ ಸಾವನಪ್ಪಿದ್ದು, ಇನ್ನೂ ಕಾರಿನಲ್ಲಿ ಇದ್ದವರಿಗೆ ಗಂಭೀರವಾದ ಗಾಯಗಳಾಗಿವೆ. ಕೊಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ಯಾಂಟರ್ ಡಿಕ್ಕಿ ಆದ ರಭಸಕ್ಕೆ ಆಟೋ ಎರಡು ತುಂಡುಗಳಾಗಿದ್ದು, ಲಾರಿ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

Read More

ಹಾಸನ : ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಳಿ ನೆನ್ನೆ ರಾತ್ರಿ ಘೋರ ದುರಂತ ಒಂದು ಸಂಭವಿಸಿದ್ದು ಗಣೇಶ ಮೆರವಣಿಗೆ ವೇಳೆ ಏಕಾಏಕಿ ಕ್ಯಾಂಟರ್ ನುಗ್ಗಿ 9 ಜನರು ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ, ಕ್ಯಾಂಟರ್ ಚಾಲಕ ಭುವನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾಸನ ಜಿಲ್ಲೆಯ ಗೊರೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಇನ್ನ ಈ ಒಂದು ಘಟನೆಯಲ್ಲಿ ಕ್ಯಾಂಟರ್ ಚಾಲಕ ಭುವನ್ಗು ಸಹ ಗಂಭೀರವಾದ ಗಾಯಗಳಾಗಿವೆ. ಈ ಹಿನ್ನೆಲೆ ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಚಾಲಕ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂಬುದು ಗೊತ್ತಿಲ್ಲ. ಆ ಬಗ್ಗೆ ಪೊಲೀಸರು ಗೌಪ್ಯತೆ ಕಾಪಾಡಿಕೊಂಡಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರ ಡ್ರಗ್ಸ್ ಮುಕ್ತ ಬೆಂಗಳೂರು ಕನಸು ಕಂಡಿದೆ. ಆದರೆ ಪೊಲೀಸರೇ ಇದೀಗ ಡ್ರಗ್ ಪೆಡ್ಲರ್ಸ್ ಗಳ ಜೊತೆಗೆ ನೇರವಾಗಿ ನಂಟು ಹೊಂದಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸರು ನಂಟು ಹೊಂದಿದ್ದ ಹಿನ್ನೆಲೆಯಲ್ಲಿ ಎರಡು ಠಾಣೆಗಳ ಒಟ್ಟು 11 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಹೌದು ರಾಜ್ಯ ಸರ್ಕಾರ ಡ್ರಗ್ಸ್ ಮುಕ್ತ ಬೆಂಗಳೂರು ಕನಸು ಕಂಡಿದ್ದು ಅದರ ಪೊಲೀಸರು ಡ್ರಗ್ಸ್ ಪೆಡ್ಲರುಗಳ ಜೊತೆಗೆ ನೇರವಾಗಿ ನೆಂಟರು ಹೊಂದಿದ್ದಾರೆ ಜೊತೆಗೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಪಾರ್ಟಿ ಸಹ ಮಾಡಿದ್ದಾರೆ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡಲು ಪೊಲೀಸರೇ ಶ್ರೀರಕ್ಷೆ ಆಗಿದ್ದಾರೆ. ತಿಂಗಳಿಗೆ 1.5 ರಿಂದ 2 ಲಕ್ಷದವರೆಗೆ ಮಾಮೂಲಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಚಾಮರಾಜಪೇಟೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಟಿ ಮಂಜಣ್ಣ ಹೆಡ್ ಕಾನ್ಸೆಪ್ಟ್ಗಳಾದ ರಮೇಶ್ ಶಿವರಾಜ್ ಪಿಸಿ ಮಧುಸೂದನ್, ಪ್ರಸನ್ನ, ಶಂಕರ್ ಬೆಳಗಲಿ, ಆನಂದ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನು ಜಯನಗರ ಠಾಣೆಯ ಎ ಎಸ್ ಐ ಕುಮಾರ್…

Read More

ಹಾಸನ : ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಬೀಕರ ಅಪಘಾತ ಸಂಬಂಧಪಟ್ಟಂತೆ ಗಣಪತಿ ಮೆರವಣಿಗೆ ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಜನರು ಸಾವನಪ್ಪಿದ್ದು, ಇದೇ ವೇಳೆ ಬಿಇ ವಿದ್ಯಾರ್ಥಿ ಮಿಥುನ್ (23) ಎನ್ನುವ ಯುವಕ ಸಹ ದುರಂತವಾಗಿ ಸಾವು ಕಂಡಿದ್ದಾನೆ. ಹುಟ್ಟು ಹಬ್ಬದ ದಿನದಂದೆ ಬಿಇ ವಿದ್ಯಾರ್ಥಿ ಮಿಥುನ್ ಸಾವನ್ನಪ್ಪಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಗವಿಗಂಗಾಪುರದ ನಿವಾಸಿಯಾಗಿರುವ ಮಿಥುನ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ. ಮಿಥುನ ನಿನ್ನೆ ನಡೆದ ಅಪಘಾತದಲ್ಲಿ ಸಾವನಪ್ಪಿದ್ದಾನೆ. ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ಮತ್ತು ದುರಂತವಾಗಿ ಸಾವನ್ನಪ್ಪಿದ್ದಾನೆ. ಮೊಸಳೆಹಳ್ಳಿ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈತ ಬಿಇ ಓದುತ್ತಿದ್ದ ಹಾಸ್ಟೆಲ್ ನಲ್ಲಿ ಸ್ನೇಹಿತರ ಜೊತೆಗೆ ಮಿಥುನ ಹುಟ್ಟುಹಬ್ಬ ಆಚರಿಸಿದ್ದ. ಹುಟ್ಟುಹಬ್ಬ ಮನೆಯಲ್ಲಿ ನಿನ್ನೆ ಗಣೇಶ ವಿಸರ್ಜನೆಯಲ್ಲಿ ಭಾಗಿಯಾಗಿದ್ದಾನೆ. ಆದರೆ ಟ್ರಕ್ ಹರಿದು ವಿದ್ಯಾರ್ಥಿ ಮಿಥುನ್ ಹುಟ್ಟುಹಬ್ಬದ ದಿನದಂದೇ ದುರಂತವಾಗಿ ಸಾವನ್ನಪ್ಪಿದ್ದಾನೆ.

Read More

ಬೆಂಗಳೂರು : ರಾಜ್ಯದ ಹಲವೆಡೆ ಈಗಾಗಲೇ ಭಾರಿ ಮಳೆ ಸುರಿಯುತ್ತಿದ್ದು, ದಕ್ಷಿಣ ಹಾಗೂ ಉತ್ತರ ಕರ್ನಾಟಕ ಬಳಿಕ ಘಟ್ಟಪ್ರದೇಶಗಳಲ್ಲಿ ಸೆ.16ರಿಂದ ಬಿರುಸಾಗಿ ಮಳೆ ಸುರಿಯುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಎಚ್ಚರಿಸಿದೆ. ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬೀದರ್, ವಿಜಯಪುರ, ಬೀದರ್ ಸೇರಿ ರಾಜ್ಯದ ವಿವಿಧ ಸ್ಥಳಗಳಲ್ಲಿ ಶುಕ್ರವಾರ ಮಿಂಚು, ಬಿರುಗಾಳಿ ಸಹಿತ ವರ್ಷಧಾರೆಯಾಯಿತು. ಬಾಗಲಕೋಟೆ, ಕಲಬುರಗಿ, ವಿಜಯಪುರದಲ್ಲಿ ಮುಂದಿನ 3 ದಿನ, ಬೀದ‌ರ್, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರಿನಲ್ಲಿ ಸೆ.13ರಂದು ಜೋರು ಮಳೆ ಬೀಳುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಳಗಾವಿಯಲ್ಲಿ ಸೆ.14ರಿಂದ 2 ದಿನ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರದಲ್ಲಿ ಸೆ.16, 17ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದೇ ವೇಳೆ ದೇಶದಲ್ಲಿ ಈ ಬಾರಿಯ ಮಾನ್ಸೂನ್ ಸೆ.15 ರ ಬಳಿಕ ಕ್ಷೀಣಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Read More

ಚಿಕ್ಕಬಳ್ಳಾಪುರ : ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಆಹಾರ ಇಲಾಖೆಯಲ್ಲಿ ಹೊಸ ತೀರ್ಮಾನ ತೆಗೆದುಕೊಂಡಿದ್ದು, ಅದರಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಹೊಸದಾಗಿ 3500 ಹೊಸ ನ್ಯಾಯಬೆಲೆ ಅಂಗಡಿ ನೀಡಲು ತೀರ್ಮಾನಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾದ್ಯಂತ ಎಲ್ಲ ಆಹಾರ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜಿಲ್ಲಾ ಹಂತದಲ್ಲಿ ಪರಿಷ್ಕರಣೆ ಮಾಡಿ ಒಂದೂವರೆ ತಿಂಗಳ ಒಳಗಾಗಿ ಈ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ರಾಜ್ಯದಲ್ಲಿ ಈಗಾಗಲೇ 20,000 ನ್ಯಾಯಬೆಲೆ ಅಂಗಡಿಗಳಿದ್ದು, ಅದರ ಜತೆಗೆ 3,500 ನ್ಯಾಯಬೆಲೆ ಅಂಗಡಿ ಸೇರಿಸಬೇಕು ಎಂದು ಸಿಎಂ ಜತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾವಂತ ನಿರುದ್ಯೋಗಿಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ ಎಂದು ಹೇಳಿದರು.

Read More

ಹಾಸನ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಘೋರ ದುರಂತ ಒಂದು ಸಂಭವಿಸಿದ್ದು, ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಬಳಿ ಗಣೇಶ ವಿಸರ್ಜನಾ ಮೆರವಣಿಗೆಗೆ ವೇಳೆ ಟ್ರಕ್ ಹರಿದು ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಹಾಸನದಿಂದ ಹೊಳೆನರಸಿಪುರ ಮಾರ್ಗವಾಗಿ ಹೋಗುತ್ತಿದ್ದ ಮಿನಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಗಣೇಶ ವಿಸರ್ಜನೆ ನಡೆಯುತ್ತಿದ್ದ ಮೆರವಣಿಗೆಗೆ ನುಗ್ಗಿದೆ. ಜನರ ಮೇಲೆ ವಾಹನ ಹರಿದ ಪರಿಣಾಮ ಭಾರೀ 6 ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದರೆ. 20 ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, 7 ಜನರಿಗೆ ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ. ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಮೊಸಳೆ ಹೊಸಹಳ್ಳಿ, ಹಿರೇಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು ಎನ್ನಲಾಗಿದೆ. ಏಕಾಏಕಿ…

Read More