Author: kannadanewsnow05

ಮೈಸೂರು : ಮೈಸೂರಲ್ಲಿ ಘೋರವಾದ ಘಟನೆ ನಡೆದಿದ್ದು, ಹಾಸ್ಟೆಲ್ ನಲ್ಲಿ ಬಿ ಎಸ್ ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಟೆರೇಶಿಯನ್ ಕಾಲೇಜು ಹಾಸ್ಟೆಲ್ ನಲ್ಲಿ ಜೆ ಶಖಿನಾ (20) ಆತ್ಮಹತ್ಯೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಇಂದು 6 ನೇ ಸೆಮಿಸ್ಟರ್ ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಾಗಿತ್ತು. ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ

Read More

ಬೆಂಗಳೂರು : ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಹಂತ ಹಂತವಾಗಿ ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತೆ ಎಂದರು. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಎನ್‌ಪಿಎಸ್ ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು ಒಪಿಎಸ್ ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. 1964ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಸುದೀರ್ಘ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್…

Read More

ಮೈಸೂರು : 3 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಚೆಸ್ಕಾಂ ಎಇಇ ಒಬ್ಬ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ. ಚೆಸ್ಕಾಂ ವಿಜಿಲೆನ್ಸ್ ಅಧಿಕಾರಿಯಾಗಿದ್ದ ದೀಪಕ್ ಇಂದು 3 ಲಕ್ಷ್ಮ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ನೇತೃತ್ವದಲ್ಲಿ ದಾಳಿ ನಡೆದಿದೆ. ಅನಧಿಕೃತ ಸಂಪರ್ಕದ ಪೆನಾಲ್ಟಿ ಹಣ ಕಡಿಮೆ ಮಾಡಲು ದೀಪಕ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಖಾಸಗಿ ಹೋಟೆಲ್ ನಲ್ಲಿ 3 ಲಕ್ಷ ಲಂಚ ಸ್ವೀಕರಿಸುವಾಗ ದೀಪಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಸದ್ಯ ದೀಪಕ್ನನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಉದೇಶ್ ಮಾರ್ಗದರ್ಶನದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.

Read More

ಬೆಂಗಳೂರು : ಲಂಚ ಪಡೆಯುವ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಲೋಕಾಯುಕ್ತ ಅಧಿಕಾರಿಯೇ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವುದು ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ ತಂದಿದೆ. ಸರ್ಕಾರಿ ನೌಕರರನ್ನು ಬೆದರಿಸಿ ಕೋಟ್ಯಾಂತರ ರೂಪಾಯಿ ಹಣ ವಸೂಲಿ ಮಾಡಿದ್ದ ಆರೋಪದ ಮೇಲೆ ಇದೀಗ ಲೋಕಾಯುಕ್ತ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಶ್ರೀನಾಥ್ ಜೋಶಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ಹೌದು ಲೋಕಾಯುಕ್ತ ಪೊಲೀಸರಿಂದ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ ಮಾಡಲಾಗಿದೆ. ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ಶ್ರೀನಾಥ್ ಜೋಶಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ನೀಡಿದೆ. ಆದರೆ ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಶ್ರೀನಾಥ್ ಜೋಶಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಆಗಿ ಶ್ರೀನಾಜೋಷಿ ಸೇವೆ ಸಲ್ಲಿಸುತ್ತಿದ್ದರು. ನಿರೀಕ್ಷಣಾ ಜಾಮಿನ ಕೋರಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ನಾಳೆ ನಿಗದಿ ಮಾಡಿದೆ. ಇದೆ ವೇಳೆ ಲೋಕಾಯುಕ್ತ ಪೊಲೀಸರಿಗು ನೋಟಿಸ್ ನೀಡಿದೆ.

Read More

ಬೆಳಗಾವಿ : ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದಾಗಿನಿಂದಲೂ, ಪುರುಷರಿಗೆ ಬಸ್ನಲ್ಲಿ ಕುಳಿತುಕೊಳ್ಳಲು ಸೀಟ್ ಸಿಗುವುದೇ ಅಪರೂಪ ಅಂತದರಲ್ಲಿ ಇದೀಗ ಬಸ್ ನಲ್ಲಿ ಕಿಟಕಿ ಪಕ್ಕ ಸೀಟ್ ಗಾಗಿ ಯುವಕರ ಮಧ್ಯ ಗಲಾಟೆ ನಡೆದು ಓರ್ವ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಬಿಟಿಗೆ ಬರುತ್ತಿದ್ದ ಬಸ್​ನಲ್ಲಿ ಕಿಟಕಿ ಪಕ್ಕದ ಸೀಟ್​ಗಾಗಿ ಯುವಕರ ಮಧ್ಯೆ ಗಲಾಟೆ ನಡೆದಿದ್ದು, ಓರ್ವ ಯುವಕನಿಗೆ ಚಾಕು ಇರಿಯಲಾಗಿದೆ.ಗ್ರಾಮದ ಮಜ್ಜು ಸನದಿ(20) ಎಂಬ ಯುವಕ ಎದೆ ಭಾಗಕ್ಕೆ ಯುವಕರ ಗ್ಯಾಂಗ್​ ಒಂದು ಚಾಕು ಇರಿದು ಪರಾರಿ ಆಗಿದೆ. ಹೊಟ್ಟೆಯ ಭಾಗಕ್ಕೆ ಚಾಕು ಇರಿದಿದ್ದರಿಂದ ತೀವ್ರವಾಗಿ ರಕ್ತಸ್ರಾವ ಆಗಿತ್ತು. ತಕ್ಷಣ ಗಾಯಾಳು ಯುವಕನನ್ನು ಬೆಳಗಾವಿ ಬಿಮ್ಸ್​ ಆಸ್ಪತ್ರೆ ಐಸಿಯುನಲ್ಲಿ ಮಜ್ಜುಗೆ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಡಿಸಿಪಿ ರೋಹನ್​ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆ ನಡೆದಿದ್ದು, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ 13ನೇ ಕ್ರಾಸ್ ನಲ್ಲಿರುವ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಟ್ಟಡದಿಂದ ಕೆಳಗೆ ಬಿದ್ದಿದ್ದರಿಂದ ವಿದ್ಯಾರ್ಥಿನಿಯ ತಲೆಗೆ ಗಂಭೀರವಾದ ಗಾಯಗಳಾಗಿವೆ. ವಿದ್ಯಾರ್ಥಿನಿಯನ್ನು ತಕ್ಷಣ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ ತಿಂಡಿ ತಿನ್ನದೇ ಬಾಲಕಿ ಶಾಲೆಗೆ ಬಂದಿದ್ದಾಳೆ ಈ ವೇಳೆ ಕಟ್ಟಡದಿಂದ ಕೆಳಗೆ ನೋಡಿದಾಗ ತಲೆ ಸುತ್ತಿ ಕಟ್ಟಡದಿಂದ ಬಿದ್ದಿದ್ದಾಳೆ ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಡಾ. ಅಶ್ವತ್ ನಾರಾಯಣ ಭೇಟಿ ನೀಡಿ, ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದ್ದಾರೆ.

Read More

ಬೆಂಗಳೂರು : ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಇದೀಗ ಮತ್ತೊಂದು ಬಲಿಯಾಗಿದೆ. ವಿದ್ಯುತ್ ಶಾಕ್ ನಿಂದ ವ್ಯಕ್ತಿ ಒಬ್ಬರು ಸಾವನ್ನಪ್ಪಿದ್ದಾರೆ. ವಿದ್ಯುತ್ ದುರಸ್ತಿ ಮಾಡುತ್ತಿದ್ದ ಜಯರಾಮ್ ಎನ್ನುವವರು ಇದೀಗ ಸಾವನಪ್ಪಿದ್ದಾರೆ. ಬೆಂಗಳೂರಿನ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಸ್ಕಾಂ ಅಧಿಕಾರಿಗಳಿಂದ ಇದೀಗ ಮತ್ತೊಂದು ಎಡವಟ್ಟು ಸಂಭವಿಸಿದ್ದು, ಪದೇ ಪದೇ ವಿದ್ಯುತ್ ಕೈ ಕೊಟ್ಟಾಗ ಬೆಸ್ಕಾಂ ಸಿಬ್ಬಂದಿಗಳು ಮಾಡಬೇಕಾದ ಅಂತಹ ಕೆಲಸವನ್ನು ಜಯರಾಮ್ ಮಾಡಿದ್ದಾರೆ. ಆದರೆ ಜಯರಾಮ್ ಲೈಟ್ ಕಂಬ ದುರಸ್ತಿ ಮಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಘಟನೆ ಸಂಭಂದ ಸಾರ್ವಜನಿಕರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Read More

ಬಳ್ಳಾರಿ : ಆತನ ಬಳಿ ಸುಮಾರು 90ಕ್ಕೂ ಹೆಚ್ಚು ಇಮೇಲ್ ಐಡಿ ಇತ್ತು. 10 ನಕಲಿ ಕಾರ್ಡ್ ಗಳು ಸಹ ಇದ್ದವು ಅಲ್ಲದೇ ಕಾಮುಕನ ಮೊಬೈಲ್ ನಲ್ಲಿ 13500 ಮಹಿಳೆಯರ ಅಶ್ಲೀಲ ಫೋಟೋ ಇತ್ತು. ಹೌದು ಬಳ್ಳಾರಿಯಲ್ಲಿ ಇದೀಗ ಮೋಸ್ಟ್ ವಾಂಟೆಡ್ ಕಾಮುಕನನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತ ಆರೋಪಿಯನ್ನು ಸಂಡೂರು ಪಟ್ಟಣದಲ್ಲಿ ಖಾಸಗಿ ಕಂಪನಿಯ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಕಾಮುಕ ಶುಭಂ ಕುಮಾರ್ ಎಂದು ತಿಳಿದುಬಂದಿದೆ. ಬಂಧಿತ ಶುಭಂ ನಗ್ನ ವಿಡಿಯೋ ಕರೆ ಮಾಡುವಂತೆ ಮಹಿಳೆಯರಿಗೆ ಆತ ಕಿರುಕುಳ ನೀಡುತ್ತಿದ್ದ. ಒಪ್ಪದಿದ್ದಾಗ ನಕಲಿ ಖಾತೆ ಸೃಷ್ಟಿಸಿ ಮಾನ ಹಾನಿ ಮಾಡುತ್ತಿದ್ದ. ಮಹಿಳೆಯರಿಗೆ ವಿಡಿಯೋ ಕರೆ ಮಾಡಿ ಎಡಿಟ್ ಮಾಡುತ್ತಿದ್ದ. ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದ. ಶುಭ ಕುಮಾರ್ ನನ್ನು ಇದೀಗ ಅರೆಸ್ಟ್ ಮಾಡಲಾಗಿದೆ.ಕಳೆದ ಎರಡು ವರ್ಷದಿಂದ ಮುಂಬೈ ಪೊಲೀಸರು ಈತನ ಹಿಂದೆ ಬಿದ್ದಿದ್ದರು. ಬಂಧಿತ ಆರೋಪಿ ದೆಹಲಿಯಲ್ಲಿ ಆರೋಪಿ ಶುಭಂ ಕುಮಾರ್ ಡಿಪ್ಲೋಮಾ ಓದಿದ್ದ. ಬಳಿಕ ಬಳ್ಳಾರಿಯ…

Read More

ಮೈಸೂರು : ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಖಾಸಗಿ ಶಾಲೆಯ ವಾಹನ ಪಂಚರಾಗಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿದೆ. ಪರಿಣಾಮ ವಾಹನದಲ್ಲಿದ್ದ 16 ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಇಂದು ಬೆಳಗ್ಗೆ ಪಿರಿಯಾಪಟ್ಟಣ ಬಳಿಯ ಕಂಪಲಪುರದ ಖಾಸಗಿ ಶಾಲೆಯ ವ್ಯಾನ್​ ವಿವಿಧ ಗ್ರಾಮಗಳಿಂದ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೊರಟಿತ್ತು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಪಿರಿಯಾಪಟ್ಟಣ ತಾಲೂಕಿನ ಹಬ್ಬನಕುಪ್ಪೆ ಗ್ರಾಮದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿದೆ. ಗಾಯಗೊಂಡ ಮಕ್ಕಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಗ್ರಾಮಸ್ಥರು ಆಗಮಿಸಿ ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿದರು.

Read More

ಬೆಳಗಾವಿ : ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣನ ಅಬ್ಬರದಿಂದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಅಲ್ಲದೆ ಇದುವರೆಗೂ ಭಾರಿ ಮಳೆಯಿಂದಾಗಿ ಅನೇಕರು ಬಲಿಯಾಗಿದ್ದಾರೆ. ಇದೀಗ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆ ನೀರು ಪಾಲಾಗಿದ್ದಾರೆ. ಹೌದು ಅಪಾಯ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದ ಕೃಷ್ಣ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆಯೊಬ್ಬರು ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಮಾಂಜರಿ ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಮಾಂಜರಿ ಗ್ರಾಮದ ಸಂಗೀತಾ ಶಿವಾಜಿ ಮಾಂಜರೇಕರ್ (40) ಎಂದು ಗುರುತಿಸಲಾಗಿದೆ. ಕೆಲವು ದಿನಗಳಿಂದ ಕೃಷ್ಣಾ ನದಿ ತುಂಬಿ ಹರಿಯುತ್ತಿತ್ತು ಈ ಹಿನ್ನೆಲೆಯಲ್ಲಿ ಮಹಿಳೆ ಬಾಗಿನ ಅರ್ಪಿಸಲು ತೆರಳಿದ್ದರು. ಬಾಗಿನ ಅರ್ಪಿಸುವ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದು, ನೀರು ರಭಸವಾಗಿ ಹರಿತ್ತಿದ್ದ ಪರಿಣಾಮ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಅಂಕಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More