Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬಳ್ಳಾರಿ : ಬಳ್ಳಾರಿಯಲ್ಲಿ ಜೆಸ್ಕಾಂ ನಿರ್ಲಕ್ಷಕ್ಕೆ ಬಾಲಕನೊಬ್ಬ ಕೈ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. 11 ಕೆ.ವಿ ವಿದ್ಯುತ್ ವೈರ್ ತಗುಲಿ ಕೈ ಕಟ್ಟಾಗಿದೆ. ಮನೆ ಮೇಲೆ ಆಟವಾಡುವಾಗ ಕೈಯಲ್ಲಿದ್ದ ವೈರಿಗೆ ಟಚ್ ಆಗಿದೆ, ಬಳ್ಳಾರಿಯ ವಿರಾಟ್ ನಗರದಲ್ಲಿ ಒಂದು ಘಟನೆ ಸಂಭವಿಸಿದೆ. ಬಾಲಕನ ಕೈಯಲ್ಲಿದ್ದ ವೈರ್ ಗೆ ತಗುಲಿದ ವಿದ್ಯುತ್ ತಂತಿ ಶಾಕ್ ಹೊಡೆದ ತೀವ್ರತೆಗೆ ಬಾಲಕನ ಕೈ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ 11 ಕೆ.ವಿ ವೈರ್ ಗೆ ಪ್ಲಾಸ್ಟಿಕ್ ಹಾಕದೆ ನಿರ್ಲಕ್ಷ ತೊರಿದ್ದು ಅಪಾರ್ಟ್ಮೆಂಟ್ ಮಾಲಿಕ ಮತ್ತು ಜೆಸ್ಕಾಂ ಇಂಜಿನಿಯರ್ ಮೇಲೆ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.aa
ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಎಸ್. ನಾರಾಯಣ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದ್ದು ಎಸ್ ನಾರಾಯಣ ಅವರ ಸೊಸೆ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿ ಬೆಂಗಳೂರಿನ ಜ್ಞಾನ ಭಾರತಿ ಠಾಣೆಗೆ ದೂರು ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ಎಸ್ ನಾರಾಯಣ ಹಾಗೂ ಅವರ ಪತ್ನಿ, ಪುತ್ರನ ವಿರುದ್ಧ FIR ಸಹ ದಾಖಲಾಗಿದೆ. ಈ ವಿಚಾರವಾಗಿ ಎಸ್ ನಾರಾಯಣ ನನ್ನ ಮನೆಯ ಹೆಣ್ಣು ಮಕ್ಕಳು ದುಡಿಯುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್ ನಾರಾಯಣ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಅವರು ದುಡಿದು ನನ್ನ ಸಾಕಬೇಕಾ? ನನ್ನ ಬಳಿ ಎಂಟು ಜನ ಕೆಲಸದವರು ಇದ್ದಾರೆ ನಮ್ಮ ಸೊಸೆ ಪವಿತ್ರ ಮನೆ ಬಿಟ್ಟು ಹೋಗಿ 14 ತಿಂಗಳಾಯಿತು ವರದಕ್ಷಿಣೆ ಪಿಡುಗು ತೊಲಗಿಸಬೇಕು ಅಂತ ಸಿನಿಮಾ ಮಾಡಿದವನು ನಾನು ಎಂದರು. ಪವನ್ ಪವಿತ್ರ ಪ್ರೀತಿಸಿ ಮದುವೆಯಾಗಿದ್ದರು ನಾವು ಸಹ ಅದಕ್ಕೆ ವಿರೋಧ…
ತುಮಕೂರು : ಇತ್ತೀಚಿಗೆ ಸದನದಲ್ಲಿ ಡಿಕೆ ಶಿವಕುಮಾರ್ ಮೊನ್ನೆ ಮೊನ್ನೆ ಅಷ್ಟೇ RSS ಗೀತೆ ಹಾಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಈಗ ಗೃಹ ಸಚಿವ ಜಿ.ಪರಮೇಶ್ವರ್ ಅವರ ನಡೆ ಕೂಡ ಚರ್ಚೆಗೆ ಗ್ರಾಸವಾಗಿದ್ದು, ಎಬಿವಿಪಿ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ರಾಣಿ ಅಬ್ಬಕ್ಕದೇವಿ 500ನೇ ಜಯಂತಿ ಪ್ರಯುಕ್ತ ನಿನ್ನೆ ಪಂಜಿನ ಮೆರವಣಿಗೆ ನಡೆಸಲಾಗುತ್ತಿತ್ತು. ಈ ಕಾರ್ಯಕ್ರಮದಲ್ಲಿ ಜಿ. ಪರಮೇಶ್ವರ್ ಭಾಗಿಯಾಗಿದ್ದಾರೆ ಎನ್ನಲಾಗಿದೆ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ಪರಮೇಶ್ವರ್ ಭಾಗಿಯಾಗಿದ್ದಾರೆ. ರಾಣಿ ಅಬ್ಬಕ್ಕ ದೇವಿ 500ನೇ ಜಯಂತಿ ಪ್ರಯುಕ್ತ ರಥಯಾತ್ರೆ ನಡೆಸಲಾಗಿತ್ತು. ಈ ಒಂದು ಪಂಜಿನ ಮೆರವಣಿಗೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಇನ್ನು ಎಬಿವಿಪಿ ರಥಯಾತ್ರೆ ಕಾರ್ಯಕ್ರಮದಲ್ಲಿ ಪರಮೇಶ್ವರ ಭಾಗಿಯಾಗಿರುವ ವಿಚಾರವಾಗಿ ನಾನು ಯಾವುದೇ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ನಾನು ಬರುವ ದಾರಿಯಲ್ಲಿ…
ಬೆಂಗಳೂರು : ಜೈಲು ವಾರ್ಡನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಲಾಗುತ್ತಿದ್ದೂ, ತಂಬಾಕು, ಮಾದಕ ವಸ್ತು ಪೂರೈಸುತ್ತಿದ್ದ ವಾರ್ಡನ್ ಕಲ್ಲಪ್ಪ ಎನ್ನುವನನ್ನು ಅರೆಸ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರ ಠಾಣೆ ಪೊಲೀಸರಿಂದ ಆರೋಪಿ ಕಲ್ಲಪ್ಪನನ್ನ ಅರೆಸ್ಟ್ ಮಾಡಲಾಗಿದೆ.ಆರೋಪಿ ಕಲ್ಲಪ್ಪನನ್ನು ಬಂಧಿಸಿ 100 ಗ್ರಾಂ ಆಶಿಶ್ ಆಯಿಲ್ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ಕಲ್ಲಪ್ಪ ಮಾದಕ ವಸ್ತು ಕಾಶೀಶೈಲ್ ತಂಬಾಕು ಯಾರಿಂದ ಪಡೆಯುತ್ತಿದ್ದ ಹಾಗೂ ಜೈಲಿನಲ್ಲಿರುವ ಯಾವ ಕೈದಿಗಳಿಗೆ ಪೂರೈಕೆ ಮಾಡುತ್ತಿದ್ದ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 2018 ರಲ್ಲಿ ಕಾರಾಗೃಹದ ಇಲಾಖೆಗೆ ಸೇರಿದ ಕೆಲತಿಗಳಿಂದ ಸೆಪ್ಟೆಂಬರ್ 7 ರಂದು ಸಂಜೆ ಜೈಲಿನ ಪ್ರವೇಶ ದ್ವಾರದ ಬಳಿ ಕಲ್ಲಪ್ಪನನ್ನು ಪರಿಶೀಲನೆ ಮಾಡಲಾಯಿತು. ಡ್ಯೂಟಿಗೆ ಬರುವ ವೇಳೆ ಸಿಐಎಸ್ಎಫ್ ಸಿಬ್ಬಂದಿಗಳು ಕಳ್ಳಪ್ಪನನ್ನು ಪರಿಶೀಲನೆ ಮಾಡಿದ್ದಾರೆ, ಈ ವೇಳೆ ತಂಬಾಕು ಹಾಗು ಆಶಿಶ್ ಪತ್ತೆಯಾಗಿದೆ
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ನ್ಯಾಯಾಲಯವು ನಟ ದರ್ಶನ್ ಅವರನ್ನು ಬಳ್ಳಾರಿ ಜಿಲ್ಲೆಗೆ ಸ್ಥಳಾಂತರಿಸಲು ಸಕಾರಣಗಳಿಲ್ಲ ಎಂದು ಹೇಳಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಅರ್ಜಿಯನ್ನು ತಿರಸ್ಕೃತಗೊಳಿಸಿತ್ತು. ಇನ್ನೊಂದು ಅರ್ಜಿಯಲ್ಲಿ ದರ್ಶನ್ ಪರ ವಕೀಲರು ಹಾಸಿಗೆ ದಿಂಬು ನೀಡಬೇಕು ಎಂದು ಮನವಿ ಸಲ್ಲಿಸಿದ್ದು, ಇದೀಗ ಜಲ್ಲಿ ಸಿಬ್ಬಂದಿಗಳು ದರ್ಶನಗೆ ಹಾಸಿಗೆ ದಿಂಬು ನೀಡಿದ್ದಾರೆ. ಹೌದು ಕೊಲೆ ಆರೋಪಿ ದರ್ಶನ್ ಜೈಲಲ್ಲಿ ಕೊಂಚ ನಿರಾಳ ಆಗಿದ್ದಾರೆ. ಜೈಲಿನ ಸಿಬ್ಬಂದಿಗಳು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ನೀಡಿದ್ದು, ನಿನ್ನೆ ಹಾಸಿಗೆ ಮೇಲೆ ದರ್ಶನ್ ನೆಮ್ಮದಿಯಾಗಿ ನಿದ್ರೆ ಮಾಡಿದ್ದಾರೆ. ಜೈಲಿನ ಬ್ಯಾರಕ್ ಮುಂಭಾಗ ದರ್ಶನ್ ವಾಕ್ ಸಹ ಮಾಡಿದ್ದಾರೆ. ಕೈಯಲ್ಲಾಗಿದ್ದ ಫಂಗಸ್ಗೆ ಜೈಲು ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಮಾನಸಿಕವಾಗಿ ಹೋಗಿರುವ ದರ್ಶನಿಗೆ ಜೈಲಿನ ಮನೋವೈದ್ಯರು ಕೌನ್ಸಿಲಿಂಗ್ ನಡೆಸಿದ್ದಾರೆ.
ಶಿವಮೊಗ್ಗ : ರಾಷ್ಟ್ರೀಯ ಅಪಘಾತದಲ್ಲಿ ಹಸೆಮಣೆ ಇರಬೇಕಿದ್ದ ಜೋಡಿ ಸಾವನ್ನಪ್ಪಿದ್ದಾರೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ಈ ಒಂದು ಘಟನೆ ಸಂಭವಿಸಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಓಮಿನಿ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿಯಾಗಿ ಬೈಕ್ ನಲ್ಲಿ ಇದ್ದಂತಹ ಹಸೆಮಣೆ ಎರಬೇಕಿದ್ದ ಜೋಡಿಗಳು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಶಿಕಾರಿಪುರ ತಾಲೂಕಿನ ಮಟ್ಟಿಕೊಪ್ಪ ಗ್ರಾಮದ ರೇಖಾ (20) ಹಾಗೂ ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ (25) ಸಾವನಪ್ಪಿದ್ದಾರೆ. ಘಟನಾಸ್ಥಳಕ್ಕೆ ಪೊಲೀಸ್ರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಎಸ್ ನಾರಾಯಣ ಮತ್ತು ಕುಟುಂಬದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಅಡಿ ಇದೀಗ ಕೇಸ್ ದಾಖಲಾಗಿದೆ.ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಾವ ನಾರಾಯಣ, ಅತ್ತೆ ಭಾಗ್ಯವತಿ, ಪತಿ ಪವನ್ ವಿರುದ್ಧ ಸೊಸೆ ಪವಿತ್ರ ಬೆಂಗಳೂರಿನ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ. 2021 ರಲ್ಲಿ ಎಸ್ ನಾರಾಯಣ ಪುತ್ರ ಪವನ್ ಹಾಗೂ ಪವಿತ್ರ ಮದುವೆ ನಡೆದಿತ್ತು. ಮದುವೆಯಲ್ಲಿ ವರದಕ್ಷಿಣೆ ಕೊಟ್ಟರು ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮದುವೆಯಲ್ಲಿ ಒಂದು ಲಕ್ಷ ಮೌಲ್ಯದ ಉಂಗುರ ಮದುವೆ ಖರ್ಚು ಮಾಡಿದ್ದರು ಕೆಲಸ ಇಲ್ಲದೆ ಎಸ್ ನಾರಾಯಣ ಪುತ್ರ ಪವನ್ ಮನೆಯಲ್ಲಿಯೇ ಇದ್ದ ಎಂದು ಆರೋಪಿಸಲಾಗಿದೆ. ಆರ್ಥಿಕ ಸಂಕಷ್ಟ ಹಿನ್ನೆಲೆಯಲ್ಲಿ ನಾನೇ ಮನೆಯನ್ನು ನಡೆಸುತ್ತಿದ್ದೆ. ಕೆಲಸ ಮಾಡಿ ಪವನ ಪತ್ನಿ ಪವಿತ್ರ ಮನೆ ನಡೆಸುತ್ತಿದ್ದರು. ಈ ವೇಳೆ ತಾಯೆ ಒಡೆಯವೇಯನ್ನು ಅಡವಿಟ್ಟು ಪವಿತ್ರ ಹಣ ಕೊಟ್ಟಿದ್ದಾರೆ. ಆದರೆ ಕಲಾ…
ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘೋರ ಕೃತ್ಯ ನಡೆದಿದೆ. ಬನ್ನೇರುಘಟ್ಟ ಖಾಸಗಿ ಶಾಲಾ ಹಾಸ್ಟೆಲ್ ನಲ್ಲಿ ಈ ಒಂದು ಘಟನೆ ನಡೆದಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ 10ನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಹೊಸದಾಗಿ ಶಾಲಾ ಹಾಸ್ಟೆಲ್ ಗೆ ಸಂತ್ರಸ್ತ ವಿದ್ಯಾರ್ಥಿ ಸೇರಿಕೊಂಡಿದ್ದ. ರಾಗಿಂಗ್ ಬಗ್ಗೆ ಹಾಸ್ಟೆಲ್ ವಾರ್ಡನ್ ಮತ್ತು ಪ್ರಿನ್ಸಿಪಾಲ್ ಗೆ ಆತ ದೂರು ನೀಡಿದ್ದಾನೆ. ಅವರಿಗೆ ದೂರು ನೀಡಿದ್ದಾನೆ ಎಂದು ವಿದ್ಯಾರ್ಥಿಗಳು 10ನೇ ತರಗತಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಸೆ.3 ರಿಂದ 6 ವರೆಗೆ 4 ದಿನಗಳ ಕಾಲ ಕೊಠಡಿಯಲ್ಲಿ ಕೂಡಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದರ ಜೊತೆಗೆ ಹ್ಯಾಂಗರ್ ಇಂದ ಸಹ ಹಲ್ಲೆ ನಡೆಸಿದ್ದಾರೆ. ಪ್ರಿನ್ಸಿಪಾಲ್ ಮತ್ತು ವಾರ್ಡನ್ ಯಾವುದೇ ಕ್ರಮ ಕೈಗೊಳ್ಳದ…
ಬೆಂಗಳೂರು : ರಾಜ್ಯದ ಜನತೆಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು, ಯಾರೆಲ್ಲ ಪಡಿತರ ಚೀಟಿ ಹೊಂದಲು ಅನರ್ಹರೋ ಅಂತವರ ಬಿಪಿಎಲ್ ಕಾರ್ಡ್ ಅನರ್ಹಗೊಳಿಸಲು ಸಿಎಂ ಸಿದ್ದರಾಮಯ್ಯ ಇದೀಗ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಅರ್ಹ ಬಿಪಿಎಲ್ ಕಾರ್ಡ್ದಾರರಿಗೆ ಯಾವುದೇ ತೊಂದರೆ ಆಗಬಾರದು, ಬದಲಿಗೆ ಅವರಿಗೆ ಸುಲಭವಾಗಿ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಆದರೆ ಅನರ್ಹ ಕಾರ್ಡ್ಗಳನ್ನು ಯಾವುದೇ ಮುಲಾಜಿಲ್ಲದೆ ತಕ್ಷಣವೇ ರದ್ದುಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಅಧಿಕಾರಿಗಳ ವಿವರ ಪ್ರಕಾರ, ರಾಜ್ಯದಲ್ಲಿ ಈಗಾಗಲೇ ಗುರುತಿಸಲ್ಪಟ್ಟ 3,65,614 ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದ್ದು ಅಥವಾ ವರ್ಗ ಬದಲಾವಣೆ ಮಾಡಲಾಗಿದೆ. ಸಭೆಯಲ್ಲಿ ಅನ್ನಭಾಗ್ಯ ಯೋಜನೆಗೂ ಸಂಬಂಧಿಸಿದ ಮಹತ್ವದ ವಿಚಾರಗಳು ಚರ್ಚಿಸಲ್ಪಟ್ಟವು. ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯಗಳು ಮತ್ತು ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ವ್ಯವಸ್ಥೆ ಮಾಡಲು ಸಿಎಂ ಸೂಚನೆ ನೀಡಿದರು. ಇದರ ಕುರಿತು ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಆದೇಶಿಸಲಾಯಿತು.
ಬೆಂಗಳೂರು : ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರ ಒಡೆತನದಲ್ಲಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇಂದು ಕಾರ್ಮಿಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೇ. ಟಿ.ಬೇಗೂರಿನಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗು ಆಸ್ಪತ್ರೆಯಲ್ಲಿ ಕಾರ್ಮಿಕ ಆತ್ಮಹತ್ಯೆ ಶರಣಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೆಗೂರಲ್ಲಿ ಸಿದ್ದಾರ್ಥ್ ಮೆಡಿಕಲ್ ಕಾಲೇಜಿನಲ್ಲಿ ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದ ಕಾರ್ಮಿಕ ತಿಮ್ಮೆಗೌಡ (38) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎಂಟು ವರ್ಷದಿಂದ ತಿಮ್ಮೇಗೌಡ ಸಿದ್ದಾರ್ಥ್ ಮೆಡಿಕಲ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು. ಗೃಹ ಸಚಿವ ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಮೆಡಿಕಲ್ ಕಾಲೇಜು ಇದಾಗಿದ್ದು, ಆಸ್ಪತ್ರೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ತಿಮ್ಮೆಗೋಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಆತ್ಮಹತ್ಯೆಗೆ ಶರಣರ ತಿಮ್ಮೇಗೌಡ ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿಯವರು ಎಲೆಕ್ಟ್ರಿಷಿಯನ್ ತಿಮ್ಮೇಗೌಡ ಮಾತೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.












