Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನ ಆರ್ಸಿಬಿ ಅಭಿಮಾನಿಗಳು ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕ್ಯಾಬಿನೆಟ್ ನಿರ್ಧರಿಸಿದೆ. ಅಲ್ಲದೇ ಆರ್ ಸಿ ಬಿ, ಕೆ ಎಸ್ ಸಿ ಎ, ಡಿಎನ್ ಎ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ಒಂದು ನಿರ್ಧಾರ ತೆಗೆದುಕೊಳ್ಳಲಾಯಿತು. ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ ತೆಗೆದುಕೊಂಡಿದ್ದು, ಆರ್ಸಿಬಿ ಡಿಎನ್ಎ ಕೆಎಎಸ್ಇಎ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಇದೀಗ ಸಂಪುಟ ನಿರ್ಧಾರ ತೆಗೆದುಕೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ತೆಗೆದುಕೊಳ್ಳಲಾಯಿತು.
ಕಪ್ಪು ನಾಲಿಗೆಯನ್ನು ಹೊಂದಿರುವ ಯಾರಾದರೂ ನಿಮ್ಮನ್ನು ನಿಂದಿಸಿದರೆ, ಮೊದಲು ಇದನ್ನು ಮಾಡಿ, ಯಾವುದೇ ಸಮಸ್ಯೆ ಇರುವುದಿಲ್ಲ
ಸಾಮಾನ್ಯವಾಗಿ ಕಪ್ಪು ನಾಲಿಗೆ ಇರುವವರನ್ನು ಕಂಡರೆ ನಮಗೆ ಸ್ವಲ್ಪ ಭಯವಾಗುತ್ತದೆ. ಅವರು ನಮ್ಮನ್ನು ಏನಾದರೂ ಬೈದರೆ, ಅದು ಕೆಲಸ ಮಾಡುತ್ತದೆ ಎಂಬ ಭಾವನೆ ನಮ್ಮಲ್ಲಿದೆ. ಕಪ್ಪು ನಾಲಿಗೆಯ ಶಾಪ ನಿಜವಾಗಿಯೂ ಕೆಲಸ ಮಾಡುತ್ತದೆಯೇ? ಸಾಯುವುದಿಲ್ಲವೇ? ಕಪ್ಪು ನಾಲಿಗೆಯುಳ್ಳವರು ನಮ್ಮನ್ನು ಶಪಿಸಿದರೆ ಆ ಶಾಪದಿಂದ ಪಾರಾಗಲು ನಾವು ಏನು ಮಾಡಬೇಕು ಎಂಬ ಆಧ್ಯಾತ್ಮಿಕ ಮಾಹಿತಿಯನ್ನು ಈ ಪೋಸ್ಟ್ ಮೂಲಕ ನಾವು ತಿಳಿಯಲಿದ್ದೇವೆ . ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ,…
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತವಾಗಿದೆ. ಈ ವೇಳೆ ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನ ಚಾಲಕ ಹಾಗೂ ನಾಲ್ಕೈದು ವಿದ್ಯಾರ್ಥಿಗಳಿಗೆ ತೀವ್ರತರವಾದ ಗಾಯಗಳಾಗಿದ್ದು, ತಕ್ಷಣ ಮುಂಬಾಳು ಪ್ರದೇಶದ ಸ್ಥಳೀಯರು ಸಾಗರದ ಮರ್ಕಜ್ ಶಾಲೆಗೆಂದು ವಿದ್ಯಾರ್ಥಿಗಳನ್ನು ಕರೆದು ಕೊಂಡು ಬರುತ್ತಿದ್ದ ಬಸ್ಸಿನಲ್ಲಿ ಬರುವಾಗ ಅಪಘಾತ ಸಂಭಾವಿಸಿದೆ. ತಕ್ಷಣ ಗಾಯಾಳುಗಳನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಮಯದಲ್ಲಿ ಮುಂಬಾಳು ಹಿಸಾಬಾ ಸಮಿತಿಯ ಉಸ್ಮಾನ್ ಹಾಗೂ ಮರ್ಕಜ್ ಬಸ್ಸಿನ ಚಾಲಕ ಜಿಯಾವುಲ್ಲಾ ಅವರ ಮಾನವೀಯತೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವರದಿ: ರಫೀಕ್ ಎಂ ಬ್ಯಾರಿ, ಸಾಗರ
ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರೆದಿದ್ದು, 20ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಜನರ ಮೇಲೆ ಬೀದಿನಾಯಿಗಳು ದಾಳಿ ಮಾಡಿವೆ. ಎಂ ಜಿ ರಸ್ತೆ, ಮಾರ್ಕೆಟ್ ರಸ್ತೆಯಲ್ಲಿ ಬೀದಿನಾಯಿಗಳು 20 ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿವೆ. ಗಾಯಗೊಂಡ 20 ಜನರನ್ನು ಮಲ್ಲೇಗೌಡ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯೂ ಸಹ ಬೀದಿ ನಾಯಿಗಳು 8 ಜನರ ಮೇಲೆ ದಾಳಿ ಮಾಡಿದ್ದವು. ಬೀದಿ ನಾಯಿಗಳ ದಾಳಿಯಿಂದ ಜನರು ಇದೀಗ ಕಂಗಾಲಾಗಿದ್ದಾರೆ. ಮಕ್ಕಳು ಸೇರಿದಂತೆ 20 ಜನರ ಮೇಲೆ ಬೀದಿನಾಯಿಗಳು ದಾಳಿ ಮಾಡಿವೆ. ಮೂರು ದಿನಗಳಲ್ಲಿ 35ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟದ ನಗರ ಸಭೆಯ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಲ್ಲಿ ಕಾಲ್ತುಳಿತ ಪ್ರಕರಣ : ಕೊಹ್ಲಿ ಬಗ್ಗೆ ಪ್ರಸ್ತಾಪಿಸಿದರೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ : ಜಿ.ಪರಮೇಶ್ವರ್
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಲ್ತುಲಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ನ್ಯಾ.ಕುನ್ಹಾ ವರದಿಯಲ್ಲಿ ಆರ್ಸಿಬಿ ತಂಡದ ಪ್ರಮುಖ ಆಟಗಾರ ವಿರಾಟ್ ಕೊಹ್ಲಿ ಅವರ ಬಗ್ಗೆ ಪ್ರಸ್ತಾಪಿಸಿದರೆ ಆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನ್ಯಾ.ಕುನ್ಹಾ ವರದಿ ಮೇಲೆ ಸಂಪುಟದಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ. ಅವರು ಏನು ಶಿಫಾರಸು ಮಾಡಿದ್ದಾರೋ ಅದರಂತೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಅದರಂತೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ . ವಿರಾಟ್ ಕೊಹ್ಲಿ ಬಗ್ಗೆ ವರದಿಯಲ್ಲಿ ಪ್ರಸ್ತಾಪ ಮಾಡಿದರೆ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳುತ್ತೇವೆ. ಒಬ್ಬ ವ್ಯಕ್ತಿ ಅಂತ ಬರಲ್ಲ ತಂಡದ ವಿಚಾರ ಇರುತ್ತದೆ ಆ ಕುರಿತು ನೋಡುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ನವದೆಹಲಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಟ ದರ್ಶನ್ ಹಾಗು 7 ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಇಂದು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ ಮನವಿಯ ಅರ್ಜಿಯ ವಿಚಾರಣೆ ನಡೆಯಲಿದೆ ಹಾಗಾಗಿ ನಟ ದರ್ಶನ್ ಗೆ ಇಂದು ಬಿಗ್ ಡೇ ಅಂತಾನೆ ಹೇಳಬಹುದು. ಹೌದು ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ನಲ್ಲಿ ಜಾಮೀನು ರದ್ದು ಕೋರಿದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ನಟ ದರ್ಶನ್ ಪರವಾಗಿ ವಕೀಲ ಸಿದ್ಧಾರ್ಥ ದವೆ ವಾದ ಮಂಡಿಸಲಿದ್ದಾರೆ. ಈಗಾಗಲೇ ಸುಪ್ರೀಂ ಕೋರ್ಟ್ ಕೇಸಿನ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದೆ. ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಅಂತಿಮ ಆದೇಶ ನೀಡುವ ಸಾಧ್ಯತೆ ಇದೆ. ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ ಹೈಕೋರ್ಟ್…
ಬೆಂಗಳೂರು : ಬೆಂಗಳೂರಲ್ಲಿ ಯುವತಿಯರ ವಿಡಿಯೋ ತೆಗೆದು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡುತ್ತಿದ್ದ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಅಶೋಕನಗರ ಪೊಲೀಸರು ಹುಸೇನ್ ಎನ್ನುವ ಆರೋಪಿಯನ್ನು ಬಂಧಿಸಿದ್ದಾರೆ ಕೊತ್ತನೂರು ಮೂಲದ ಹುಸೇನ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತ ಬೆಂಗಳೂರಿನ ಎಂಜಿ ರೋಡ್ ಮತ್ತು ಬ್ರಿಗೇಡ್ ರೋಡ್ ನಲ್ಲಿ ನಿಂತು ಯುವತಿಯರ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬಳಿಕ ಇನ್ಸ್ಟಾಗ್ರಾಮ್ ನಲ್ಲಿ ಅಸಭ್ಯವಾಗಿ ಪೋಸ್ಟ್ ಮಾಡುತ್ತಿದ್ದ. ಬೆಂಗಳೂರು ನೈಟ್ ಲೈಫ್ ಎಂದು ಟ್ಯಾಗ್ ಲೈನ್ ಕೊಡುತ್ತಿದ್ದ. ಅಸಭ್ಯವಾದ ರೀತಿಯಲ್ಲಿ ವಿಡಿಯೋ ಚಿತ್ರೀಕರಿಸಿ, ಬಳಿಕ ತನ್ನ Dilbar Jaani-64 ಎಂಬ ಪ್ರೊಫೈಲ್ ನಲ್ಲಿ ಅಪ್ಲೋಡ್ ಮಾಡಿ ಬೆಂಗಳೂರು ನೈಟ್ ಲೈಫ್ ಎಂಬ ಟ್ಯಾಗ್ ಲೈನ್ ಕೊಡುತ್ತಿದ್ದ. ಎಂ ಜಿ ರೋಡ್ ಬ್ರಿಗೇಡ್ ರೋಡ್ ಗಳಲ್ಲೇ ಈತ ವಿಡಿಯೋ ಮಾಡುತ್ತಿದ್ದ. ಸದ್ಯ ಪೊಲೀಸರು ಇದೀಗ ಪೋಕ್ಸೋ ಕೇಸ್ ದಾಖಲಿಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಮೈಸೂರು : ಮೈಸೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ಹಿಂಬದಿಯಿಂದ ಸಾರಿಗೆ ಬಸ್ ಅಡಿಕೆ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದಾರೆ ಈ ವೇಳೆ ತಲೆಯ ಮೇಲೆ ಹಿಂಬದಿ ಚಕ್ರ ಹರಿದು ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೌದು ಮೈಸೂರಿನ ವಿವೇಕಾನಂದ ನಗರದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಬೈಕ್ ಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ರಭಸಕ್ಕೆ ಬೈಕ್ ಸವಾರ ನೆಲಕ್ಕೆ ಉರುಳಿದ್ದಾನೆ. ಈ ವೇಳೆ ಸವಾರನ ತಲೆಯ ಮೇಲೆ ಹಿಂಬದಿ ಚಕ್ರ ಹರಿದಿದೆ ಸವಾರ ಪುರುಷೋತ್ತಮಯ್ಯ (80) ಎನ್ನುವವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಬೆಂಗಳೂರು : ನಿನ್ನೆ ಬೆಂಗಳೂರಿನ ಕಲಾಸಿಪಾಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಶೌಚಾಲಯದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು. ಬ್ಯಾಗ್ ನಲ್ಲಿ ಜಿಲೇಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಕಲಾಸಿಪಾಳ್ಯ ಠಾಣೆ ಪೋಲಿಸರಿಂದ ಆರು ತಂಡ ರಚನೆ ಮಾಡಲಾಗಿದೆ. ಸಿಸಿಬಿ ಇಂಟಲಿಜೆನ್ಸ್ ಎಟಿಸಿ ತಂಡದಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜಿಲೆಟಿನ್ ಕಡ್ಡಿ ಜೊತೆಗೆ ಡಿಟೋನೇಟರ್ ಗಳು ಕೂಡ ಪತ್ತೆಯಾಗಿತ್ತು . ಕಲಾಸಿಪಾಳ್ಯದ ಬಸ್ ನಿಲ್ದಾಣದ ಶೌಚಾಲಯದ ಬಳಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದವು. ಈ ಸಂಬಂಧ ಕಲಾಸಿಪಾಳ್ಯ ಠಾಣೆ ಪೋಲಿಸರು ಎಫ್ಐಆರ್ ದಾಖಲಿಸಿದ್ದಾರೆ.
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣ ನಡೆದಿತ್ತು. ಚಿಟ್ ಫಂಡ್ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿಲಾಗಿದ್ದು, ನವಶಕ್ತಿ ಚಿಟ್ ಫಂಡ್ ಅಧ್ಯಕ್ಷ ಶರವಣ ಎಂಬ ಆರೋಪಿಯನ್ನು ಇದೀಗ ಸಿಐಡಿ ಅರೆಸ್ಟ್ ಮಾಡಿದೆ. ಆರೋಪಿ ಶರವಣ ನೂರಾರು ಜನರ ಬಳಿ ಲಕ್ಷಾಂತರ ಹಣ ಪಡೆದು, ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ್ದ. ವಂಚನೆ ಮಾಡಿ ಆರೋಪಿ ಶರವಣ ತಲೆಮರಿಸಿಕೊಂಡಿದ್ದ ರಾಜಾಜಿನಗರ ಸೇರಿ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಬಳಿಕ ವಂಚನೆಗೆ ಸಿಐಡಿ ಗೆ ವರ್ಗಾವಣೆಯಾಗಿತ್ತು. ನೂರಾರು ಜನರಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿ ಆರೋಪಿ ಶರವಣ ವಂಚನೆ ಎಸಗಿದ್ದಾನೆ. ಇದೀಗ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.ನವಶಕ್ತಿ ಚಿಟ್ ಫಂಡ್ ಅಧ್ಯಕ್ಷ ಶರವಣ, ಉಪಾಧ್ಯಕ್ಷ ರಾಘವೇಂದ್ರ ಹಾಗು ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. 300ಕ್ಕೂ ಹೆಚ್ಚು ಜನರಿಗೆ ವಂಚನೆ ಆರೋಪ ಕೇಳಿ ಬಂದಿತ್ತು. ಸದ್ಯ ಆರೋಪಿ ಶರವಣನನ್ನು ಸಿಐಡಿ ಬಂಧಿಸಿ ವಿಚಾರಣೆ ಮಾಡುತ್ತಿದೆ.