Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಳಗಾವಿ : ಪ್ರೀತಿ ವಿಚಾರಕ್ಕೆ ಬುದ್ಧಿವಾದ ಹೇಳಿದಕ್ಕೆ ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಬಸ್ ನಿಲ್ದಾಣದ ಬಳಿ ಈ ಒಂದು ಘಟನೆ ನಡೆದಿದೆ. ಕಣ್ಣಿಗೆ ಕಾರದಪುಡಿ ಎರಚಿ ಚಾಕುವಿನಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.ಮಡಿವಾಳಪ್ಪ ಬೊಗಟಿಗೆ ದರ್ಶನ್ ಮೇಟಿ (20) ಎಂಬ ಯುವಕ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡ ಮಡಿವಾಳಪ್ಪಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಡುಗಿ ವಿಚಾರಕ್ಕೆ ಕರೆದು ಮಡಿವಾಳಪ್ಪ ಬುದ್ಧಿವಾದ ಹೇಳಿದ್ದ. ಯುವತಿ ಒಬ್ಬಳ ಜೊತೆಗೆ ದರ್ಶನ್ ದೇವಸ್ಥಾನಕ್ಕೆ ಹೋಗಿದ್ದ ಯುವತಿ ಕುಟುಂಬಸ್ಥರ ಸಮುಖದಲ್ಲಿ ಮಡಿವಾಳಪ್ಪ ಬುದ್ಧಿವಾದ ಹೇಳಿದ್ದ. ಇದರಿಂದ ಕುಪಿತಗೊಂಡು ದರ್ಶನ್ ಕಾರದಪುಡಿ ಎರಚಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೀದರ್ : ಔರಾದ್ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲಗೆ ಸೈಬರ್ ವಂಚಕರು ಲಕ್ಷಾಂತರ ರೂಪಾಯಿ ವಂಚನೆ ಎಸಗಿದ್ದಾರೆ. ಸಿಬಿಐ, ಇಡಿ ಮತ್ತು ಜಡ್ಜ್ ಹೆಸರಿನಲ್ಲಿ ವಂಚಕರು ವಿಡಿಯೋ ಕಾಲ್ ಮಾಡಿದ್ದಾರೆ. ಮಾಜಿ ಶಾಸಕರಿಂದ ಹಂತ ಹಂತವಾಗಿ 30 ಲಕ್ಷ ಪಡೆದು ವಂಚನೆ ಎಸಗಿದ್ದಾರೆ. ಈ ಕುರಿತು ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊದಲು ಒಬ್ಬ ಖದಿಮ cbi ಅಧಿಕಾರಿ ಎಂದು ಕರೆ ಮಾಡಿದ್ದಾನೆ. ನೀವು ನರೇಶ ಗೋವಿಲ್ ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಭಾಗಿಯಾಗಿದ್ದಾರೆ ಎಂದು ಕರೆ ಮಾಡಿದ್ದಾನೆ ಆಗಸ್ಟ್ 13ರಂದು ಸಿಬಿಐ ಡಿಸಿಪಿ ಅಂತ ಮಾಡಿ ಶಾಸಕರಿಗೆ ಮತ್ತೊಬ್ಬ ಕರೆ ಮಾಡಿದ್ದಾನೆ. ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ ಕಾಲ್ ಕಟ್ ಮಾಡಬೇಡಿ ಅಂತ ಹೇಳಿದ್ದಾನೆ. ಬಳಿಕ ಆನ್ಲೈನ್ ಮೂಲಕ ಫೇಕ್ ಜಡ್ಜ್ ಮುಂದೆ ಹಾಜರುಪಡಿಸಿದ್ದರು. ಕೋರ್ಟ್ ಹಾಲ್ ಥರ ದೃಶ್ಯ ಕ್ರಿಯೇಟ್ ಮಾಡಿ ನಂಬಿಕೆ ಹುಟ್ಟಿಸಿದ್ದಾರೆ. ನಿಮ್ಮದು ತಪ್ಪಿಲ್ಲ ಎಂದು ಮುಚ್ಚಳಿಕೆ ಬರೆದು ಕೊಡಿ…

Read More

ಮೈಸೂರು : ಸಾಹಿತಿ ಭಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಕುರುಬರಹಳ್ಳಿ ಸರ್ಕಲ್ ಇಂದ ಬಿಜೆಪಿ ಇಂದು ಚಾಮುಂಡಿ ಹಮ್ಮಿಕೊಂಡಿತ್ತು. ಈ ವೇಳೆ ಬಿಜೆಪಿ ಶಾಸಕ ಶ್ರೀವತ್ಸ ಸ್ಥಳಕ್ಕೆ ಆಗಮಿಸಿದ್ದರು. ಆಗ ಪೊಲೀಸರು ಶಾಸಕ ಶ್ರೀವತ್ಸರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರ ಜೊತೆಗೆ ಬಿಜೆಪಿ ಶಾಸಕ ಶ್ರೀವತ್ಸ ವಾಗುವ ನಡೆಸಿದರು. ಕನಿಷ್ಠ ನಿಂತ್ಕೊಳ್ಳಕ್ಕಾದರೂ ಅವಕಾಶ ಕೊಡಿ ಇನ್ನು ಪ್ರತಿಭಟನೆನೆ ಶುರು ಮಾಡಿಲ್ಲ ಆಗಲೇ ಮಾಡುತ್ತಿದ್ದೀರಾ ಸುಮ್ನೆ ಬಂದು ನಿಂತ್ಕೊಂಡ್ರು ಅರೆಸ್ಟ್ ಮಾಡುತ್ತೀರಾ ಏನು ಅಂತ ಕೇಳಬಾರದು ಅಂತ ಶ್ರೀವತ್ಸ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಹಿತ ದಲಿತ ಮಹಾಸಭಾ ಕಾರ್ಯಕ್ರಮಕ್ಕೂ ಬ್ರೇಕ್ ಹಾಕಲಾಗಿದ್ದು, ದಲಿತ ಮಹಾಸಭಾ ಕಾರ್ಯಕ್ರಮಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ.

Read More

೯-೯-೨೦೨೫ ಇಂದು ಬ್ರಹ್ಮಾಂಡದ ಮಾಯಾಲೋಕದ ೯೯೯ನೇ ದಿನ. ನಮ್ಮ ಜೀವನದಲ್ಲಿ ಸಮಸ್ಯೆಗಳು ಪ್ರತಿದಿನ ನಮ್ಮನ್ನು ಬೆನ್ನಟ್ಟುತ್ತಲೇ ಇರುತ್ತವೆ. ಆದರೂ ನಾವು ನಮ್ಮ ಉಳಿದ ಜೀವನವನ್ನು ಚೆನ್ನಾಗಿ ಬದುಕಲು ಓಡುತ್ತಲೇ ಇರುತ್ತೇವೆ. ನಮ್ಮನ್ನು ಬೆನ್ನಟ್ಟುವ ನಿರಂತರ ಸಮಸ್ಯೆಗಳಿಂದ ಮುಕ್ತರಾಗಲು ದೇವರು ನಮಗೆ ಕೆಲವು ಶಕ್ತಿಶಾಲಿ ದಿನಗಳನ್ನು ನೀಡುತ್ತಾನೆ. ಆ ಕ್ರಮದಲ್ಲಿ, ಇಂದು ಅತ್ಯಂತ ಶಕ್ತಿಶಾಲಿ ವಿಶ್ವ ದಿನ. ಈ ದಿನದ ವಿಶೇಷತೆ ಏನು? ಈ ಶುಭ ದಿನದಂದು ನಾವು ಮಾಡಬೇಕಾದ ಪರಿಹಾರಗಳೇನು? ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ,…

Read More

ಮಂಡ್ಯ : ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಲ್ಲು ತೂರಿದ್ದ ಕಿಂಗ್ ಪಿನ್ ನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಗಣೇಶ ಮೆರವಣಿಗೆಯನ್ನು ಸಹಿಸದೆ ಈ ಒಂದು ಗ್ಯಾಂಗ್ ಕಲ್ಲು ತೂರಾಟ ನಡೆಸುತ್ತದೆ. ಹೌದು ಅನ್ಯ ಕೋಮುವಿನ ಐದರಿಂದ ಆರು ಯುವಕರು ಈ ದುಷ್ಕೃತ್ಯ ಎಸಗಿದ್ದಾರೆ ಅನ್ಯಕೋಮಿನ ಯುವಕರ ಪೂರ್ವ ನಿಯೋಜಿತ ಕೃತ್ಯವಾಗಿದೆ. ಕಲ್ಲು ತೂರಾಟದ ಕಿಂಗ್ ಪಿನ್ ನನ್ನು ಇರ್ಫಾನ್ ಎಂದು ತಿಳಿದುಬಂದಿದೆ. ಈತ ಚನ್ನಪಟ್ಟಣ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮದ್ದೂರಿನಲ್ಲಿ ವಾಸವಾಗಿದ್ದ, ಮಸೀದಿಯ ಮುಂದೆ ಗಣೇಶ ಮೆರವಣಿಗೆ ಸಹಿಸಲಾಗದೆ ಈ ದುಷ್ಕೃತ ಎಸಗಿದ್ದಾನೆ. ಈಗಾಗಲೇ ಪೊಲೀಸರು ಹಲವು ಕಿಡಿಗೇಡಿಗಳನ್ನು ಅರೆಸ್ಟ್ ಮಾಡಿದ್ದು ಇರ್ಫಾನ್ಗಾಗಿ ಬಲೇ ಬೀಸಿದ್ದಾರೆ.

Read More

ಶಿವಮೊಗ್ಗ : ಒಂದು ಕಡೆ ಗಣೇಶ ವಿಸರ್ಜನೆ ವೇಳೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದು, ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಇಂದು ಮದ್ದೂರು ಪಟ್ಟಣ ಬಂದ್ ಗೆ ಕರೆ ನೀಡಿವೆ. ಅಲ್ಲದೆ ಇಂದು ಬಿಜೆಪಿ ನಿಯೋಗ ಮದ್ದೂರು ಪಟ್ಟಣಕ್ಕೆ ಭೇಟಿ ಕೊಡಲಿದೆ. ಇತ್ತ ಇನ್ನೊಂದು ಕಡೆ ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ವರದಿಯಾಗಿದೆ. ಹೌದು ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದ್ದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನೆನ್ನೆ ಈ ಒಂದು ಘಟನೆ ನಡೆದಿದೆ ಪಾಕಿಸ್ತಾನ ಜಿಂದಾಬಾದ್ ಎಂದು ಕಿಡಿಗೇಡಿಗಳು ವಿರುದ್ಧ ಇದೀಗ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ ಕಿಡಿಗೇಡಿಗಳ ವಿರುದ್ಧ ಹಿಂದೂ ಸಂಘಟನೆಗಳು ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್…

Read More

ಬೆಂಗಳೂರು : ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಇದೀಗ ಬಿಗ್ ಶಾಕ್ ನೀಡಿದ್ದು, ಏಕ ಸದಸ್ಯ ಪೀಠ ನೀಡಿದ ಮಧ್ಯಂತರ ಆದೇಶಕ್ಕೆ, ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ. ಸಿಜೆ ವಿಭು ಭಕ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ಪೀಠ ಆದೇಶ ಹೊರಡಿಸಿದೆ.ನವೆಂಬರ್ 26ರ ವರೆಗೆ ಏಕ ಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆಗೆ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಏಕ ಸದಸ್ಯ ಪೀಠದ ಆದೇಶ ಪ್ರಶ್ನೆಗೆ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಆರು ಎಕರೆ ಒತ್ತುವ ರೀತಿಯಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ದಾಖಲೆ ಹಾಜರುಪಡಿಸುವಂತೆ ಎಸ್ಐಟಿ ನೋಟಿಸ್ ಜಾರಿಗೊಳಿಸಿದೆ. ಆದರೆ ಎಸ್ ಐ ಟಿ ರಚನೆಗೆ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತ್ತು. ಹಾಗಾಗಿ ತಡೆಯಾಜ್ಞೆ ತೆರವಿಗೆ ಎಜಿ…

Read More

ಮಂಗಳೂರು : ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸ್ಫೋಟಕವಾದ ವಿಚಾರ ಬಹಿರಂಗವಾಗಿದ್ದು, ಇದೀಗ ಮಂಗಳೂರಿನಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಮಾಡಿದ್ದು ವಿಠ್ಠಲ ಗೌಡ ಅಂತ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಮಾಡಿದ್ದು ವಿಠ್ಠಲ ಗೌಡ ಈ ಕುರಿತು ನನ್ನ ಬಳಿ ಮಾಹಿತಿ ಮತ್ತು ಸಾಕ್ಷಿಗಳಿವೆ. ಅದೆಲ್ಲವನ್ನು ನಾನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗೆ ಕೊಡುತ್ತೇನೆ ಈ ತನಿಖೆ ಮತ್ತೆ ಮುಂದುವರಿಸುವಂತೆ ದೂರು ನೀಡುತ್ತೇನೆ ಎಂದು ಮಂಗಳೂರಿನಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/the-continuation-of-temporary-stoppages-for-these-trains-at-this-railway-station/ https://kannadanewsnow.com/kannada/breaking-violence-breaks-out-in-massive-protest-against-social-media-ban-in-nepal-one-dead/

Read More

ಬೆಂಗಳೂರು : ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸೆಪ್ಟೆಂಬರ್ 22 ರವರೆಗೆ ಶಾಸಕ ವೀರೇಂದ್ರ ಪಪ್ಪಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಿದ್ದರು. ಈ ವೇಳೆ ರಿಮೈಂಡ್ ಅರ್ಜಿಯಲ್ಲಿ ಇಡಿ ಅಧಿಕಾರಿಗಳು ಕಸ್ಟಡಿಗೆ ಕೇಳಿಲ್ಲ. ಹಾಗಾಗಿ ಇದೀಗ ಶಾಸಕ ವೀರೇಂದ್ರ ಪಪ್ಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.a

Read More

ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಾಲೂಕು ಕಚೇರಿಯಲ್ಲಿನ ಸಭೆಯ ಬಳಿಕ ಹಿಂದು ಕಾರ್ಯಕರ್ತರು ಪ್ರತಿಭಟನೆಯನ್ನು ವಾಪಸ್ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ನಾಳೆ ಬಿಜೆಪಿನೇಯೋಗ ಮದ್ದೂರು ಪಟ್ಟಣಕ್ಕೆ ಭೇಟಿ ನೀಡಲಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯದಲ್ಲಿ ಕಳೆದ ಬಾರಿ ಹನುಮಾನ್ ಧ್ವಜ ಇಳಿಸಿದ್ದರು. ನಾಗಮಂಗಲದಲ್ಲಿ ಕಲ್ಲುತೂರಾಟ ನಡೆಸಿತ್ತು. ಪೊಲೀಸರ ಕೈಗೆ ಬೇಡಿ ಹಾಕಿದಂತೆ ಕಾಣುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ದಾಳಿ ಪ್ರಕರಣ ಹೆಚ್ಚುತ್ತಿವೆ. ಹಿಂದೂಗಳ ಅಪಮಾನ ಮಾಡುವಂತ ಕೆಲಸ ನಡೆಯುತ್ತಿದೆ ಎಂದರು. ನಿನ್ನೆ ಮಂಡ್ಯ ಜಿಲ್ಲೆಯ ಮದ್ದೂರ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕೆಲವು ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮದ್ದೂರು ಪಟ್ಟಣದಲ್ಲಿ ನಿಷೇಧಜ್ಞೆ ಜಾರಿಗೆ ಇದ್ದರೂ ಸಹ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು…

Read More