Author: kannadanewsnow05

ಕಲಬುರ್ಗಿ : ನಾರಾಯಣಪುರ ಜಲಾಶಯದಿಂದ ಕಲ್ಬುರ್ಗಿ, ಯಾದಗಿರಿ ಹಾಗು ಜಿಲ್ಲೆಗಳಿಗೆ ನಾಳೆಯಿಂದ ಏಪ್ರಿಲ್ 6ರ ವರೆಗೆ 0.80 ಟಿಎಂ ಸಿ ನೀರು ಹರಿಸುವಂತೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹೌದು ನಾರಾಯಣಪುರ ಜಲಾಶಯದಿಂದ 0.80 ಟಿಎಂಸಿ ನೀರು ಹರಿಸುವಂತೆ ಕಲಬುರ್ಗಿ ಹೈಕೋರ್ಟ್ ಪೀಠದಿಂದ ರಾಜ್ಯ ಸರ್ಕಾರಕ್ಕೆ ಇದೀಗ ನಿರ್ದೇಶನ ನೀಡಿಲಾಗಿದೆ. ನಾಳೆಯಿಂದ ವರೆಗೆ 0.80 ಟಿಎಂಸಿ ನೀರು ಹರಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ರೈತರ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ಕೆ ನಾವದಗಿ ಅವರು ವಾದ ಮಂಡಿಸಿದರು. ಮಾರ್ಚ್ 14 ರಂದು ನೀರು ಹರಿಸಲು ಸರ್ಕಾರದ ಸಲಹಾ ಸಮಿತಿ ನಿರ್ಧರಿಸಿತ್ತು. ನಂತರ ನಿಲುವು ಬದಲಿಸಿ ಕೃಷಿಗೆ ನೀರು ಹರಿಸಲು ನಿರಾಕರಿಸಿದೆ. ಕೃಷಿ ಚಟುವಟಿಕೆಗೆ ನೀರು ಹರಿಸಲು ರೈತರು ನಿರ್ದೇಶನ ಕೋರಿದ್ದರು. ಇದರಿಂದ ಈ ಭಾಗದ ಸಾವಿರಾರು ರೈತರಿಗೆ ನಷ್ಟವೆಂದು ವಾದ ಮಂಡಿಸಿದರು. ಏಪ್ರಿಲ್ 4 ರಿಂದ ಏಪ್ರಿಲ್ 6ವರೆಗೆ 0.80 ಟಿಎಂಸಿ ನೀರು ಹರಿಸುವಂತೆ ಈ…

Read More

ಚಿತ್ರದುರ್ಗ : ಶಾಲೆಗೆ ತೆರಳುವ ಸಂದರ್ಭದಲ್ಲಿ ವಿದ್ಯುತಂತೆ ಮೈ ಮೇಲೆ ಬಿದ್ದು ಶಿಕ್ಷಕಿ ಒಬ್ಬರು ಇಂದು ಸಾವನ್ನಪ್ಪಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿತ್ತು ಈ ಒಂದು ಘಟನೆ ಮಾತ್ರ ಮುನ್ನವೇ ಚಿತ್ರದುರ್ಗದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಬೋರಮ್ಮ (25) ಮತ್ತು ಪುತ್ರ ಪ್ರಣೀತ್ (3) ಎಂದು ತಿಳಿದುಬಂದಿದೆ.ಬಾತ್ ರೂಮ್​​​ಗೆ ಎಳೆದಿದ್ದ ವೈಯರ್ ಅನ್ನು ಮೊದಲು ಅಜಯ್ ಗೆ ತಾಗಿದ್ದು, ರಕ್ಷಣೆಗೆ ಹೋದ ತಾಯಿ ಬೋರಮ್ಮ ಅವರಿಗೂ ವಿದ್ಯುತ್ ಪ್ರವಹಿಸಿ ಇಬ್ಬರೂ ಸಾವನ್ನಪ್ಪಿದ್ದಾರೆ. ಕೊಪ್ಪಳದಲ್ಲಿ ಶಿಕ್ಷಕಿ ಸಾವು ಇನ್ನು ಕೊಪ್ಪಳದಲ್ಲಿ ಕೂಡ ಅಂತದ್ದೆ ಘಟನೆ ನಡೆದಿದ್ದು, ಶಾಲೆಗೆ ಹೊರಟಿದ್ದ ವೇಳೆ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಜಂಗಮರ ಕಲ್ಗುಡಿಯಲ್ಲಿ ಮೃತ ಶಿಕ್ಷಕಿಯನ್ನು ಜಂಗಮರ ಕಲ್ಗುಡಿ ಗ್ರಾಮದ ಹೊಸಕೇರಿಯ…

Read More

ನವದೆಹಲಿ : ದೆಹಲಿಯಲ್ಲಿ ನೂತನವಾಗಿ ಕರ್ನಾಟಕ ಭವನ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿದರು. ದೆಹಲಿ ಪ್ರವಾಸದಲ್ಲಿ ಇರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದ ಕುರಿತು ಕಾಂಗ್ರೆಸ್ ಹೈಕಮಾಂಡ್ ನೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಪರಿಷತ್ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಪಕ್ಷದ ಹೈಕಮಾಂಡ್ಗೆ ಸಿಎಂ ಸಿದ್ಧರಾಮಯ್ಯ ನೀಡಿದರು. ಪ್ರಾದೇಶಿಕ ಮತ್ತು ಜಾತಿವಾರು ಲೆಕ್ಕಾಚಾರದಲ್ಲಿ ಸಿಎಂ ಸಿದರಾಮಯ್ಯ ಪರಿಷತ್ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ಗೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲಾ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Read More

ಬೆಳಗಾವಿ : 4 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಪರಾಧಿಗೆ 20 ವರ್ಷ ಜೈಲು ಶಿಕ್ಷ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ಬೆಳಗಾವಿಯ ಪೋಕ್ಸೋ ಕೋರ್ಟ್ ಜಡ್ಜ್ ಸಿಎಂ ಪುಷ್ಪಲತಾ ಆದೇಶ ಹೊರಡಿಸಿದ್ದಾರೆ. ಅಪರಾಧಿ ನಿಸಾರ್ ಅಹ್ಮದ್ ಫಕ್ರು ಸಾಬ್ ಚಪ್ಗಾವಿಗೆ 20 ವರ್ಷ ಶಿಕ್ಷೆ ವಿಧಿಸಿ ಬೆಳಗಾವಿಯ ಪೋಕ್ಸೋ ಕೋರ್ಟ್ ಜಡ್ಜ್ ಸಿಎಂ ಪುಷ್ಪಲತಾ ಆದೇಶ ಹೊರಡಿಸಿದ್ದಾರೆ. ಕೃತ್ಯ ನಡೆದ ಒಂದೇ ವರ್ಷದಲ್ಲಿ ವಿಚಾರಣೆ ಮುಗಿಸಿ ಶಿಕ್ಷೆ ಪ್ರಕಟಿಸಿದ್ದಾರೆ. 4 ವರ್ಷದ ಬಾಲಕಿಗೆ ಆರೋಪಿ ಚಾಕೊಲೇಟ್ ಆಮಿಷ ಒಡ್ಡಿ ಕರೆದೊಯ್ದಿದ್ದ. ಮನೆಗೆ ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. 2024 ಫೆಬ್ರವರಿ 27 ರಂದು ನಂದಗಡ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ತನಿಖೆ ನಡೆಸಿ ಪೊಲೀಸರು ಎರಡು ತಿಂಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದೀಗ ಆರೋಪಿಗೆ ಜಡ್ಜ್ 20 ವರ್ಷ ಶಿಕ್ಷೆ ತಂಡ ವಿಧಿಸಿ…

Read More

ತುಮಕೂರು : ತುಮಕೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಇಬ್ಬರು ದಿವ್ಯಾಂಗ ಮಕ್ಕಳೊಂದಿಗೆ ತಾಯಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಅದಲಗೆರೆ ಯಲ್ಲಿ ಇಬ್ಬರು ದಿವ್ಯಾಂಗ ಮಕ್ಕಳ ಜೊತೆಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದು, ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಆಗಲ ಗೆರೆ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ತಾಯಿ ವಿಜಯಲಕ್ಷ್ಮಿ (45) ಮಗಳು ಚೂಡಾಮಣಿ (23) ಹಾಗು ಪುತ್ರ ನರಸಿಂಹರಾಜು (14) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಚೇಳೂರು ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ : ಬೇಸಿಗೆ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ತೆಪ್ಪ ಮುಗುಚಿ ಆರು ಜನರ ಪೈಕಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ವಿಜಯಪುರ ತಾಲೂಕಿನ ಕುಮಟಗಿ ಕೆರೆಯಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಮೊಹಮ್ಮದ್ ಕೈಫ್ ನಿಸಾರ್ ಜಮಾದಾರ್ (19) ಹಾಗೂ ಸೋಯಲ್ ಹತ್ತರಕಿಹಾಳ (25) ಎಂಬಿಬ್ಬರು ಮೃತಪಟ್ಟಿದ್ದಾರೆ. ಅಗ್ನಿಶಾಮಕದಳ, ಪೊಲೀಸರು ಹಾಗೂ ಸ್ಥಳೀಯ ಈಜುಗಾರರು ಸ್ಥಳಕ್ಕೆ ಬಂದು ಶೋಧ ನಡೆಸಿದ್ದರು. ಮೊಹಮ್ಮದ್ ಕೈಫ್ ನಿಸಾರ್ ಜಮಾದಾರ್ ಎಂಬವರನ್ನು ನೀರಿನಿಂದ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಂದು ಸೋಯಲ್ ಹತ್ತರಕಿಹಾಳ ಅವರ ಶವ ಸಿಕ್ಕಿದೆ.

Read More

ಕೊಪ್ಪಳ : ಇತ್ತೀಚೆಗೆ ಬೆಂಗಳೂರಿನಲ್ಲಿ ನೀರು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಕೊಪ್ಪಳದಲ್ಲಿ ಕೂಡ ಅಂತದ್ದೆ ಘಟನೆ ನಡೆದಿದ್ದು, ಶಾಲೆಗೆ ಹೊರಟಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಸ್ಥಳದಲ್ಲೇ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ನಡೆದಿದೆ. ಮೃತ ಶಿಕ್ಷಕಿಯನ್ನು ಜಂಗಮರ ಕಲ್ಗುಡಿ ಗ್ರಾಮದ ಹೊಸಕೇರಿಯ ಹರಿತಾ ಶ್ರೀನಿವಾಸ (26) ಎಂದು ಗುರುತಿಸಲಾಗಿದೆ. ಶಾಲೆಯ ವಾಹನ ದಿನನಿತ್ಯ ಗ್ರಾಮಕ್ಕೆ ಬಂದು ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿತ್ತು. ಎಂದಿನಂತೆ ಶಾಲೆಗೆ ಹೋಗಲು ತಮ್ಮ ಮನೆಯಿಂದ ಬೈಕ್‌ನಲ್ಲಿ ಶಿಕ್ಷಕಿ ಹರಿತಾ ಬಂದಿದ್ದಾರೆ. ಆದರೆ, ರಾತ್ರಿ ಇಡೀ ಸುರಿದ ಮಳೆಯಿಂದಾಗಿ ವಿದ್ಯುತ್‌ ತಂತಿ ಶಿಕ್ಷಕಿಯ ಮೇಲೆ ಬಿದ್ದಿದ್ದು, ಶಿಕ್ಷಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಶಿಕ್ಷಕಿ ವಿದ್ಯಾನಗರದಲ್ಲಿರುವ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.

Read More

ಉತ್ತರಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ಕಾರಿನಲ್ಲಿ 1 ಕೋಟಿ ನಗದು ಹಣ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಕರಣದ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿ ಆಗಲು ಯತ್ನಿಸಿದ್ದಾರೆ ಈ ವೇಳೆ ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಹೌದು ಜನೆವರಿ 29 ರಂದು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ರಾಮನಗುಳಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಕ್ರೇಟಾ ಕಾರಿನಲ್ಲಿ 1 ಕೋಟಿ ರೂ.ನಗದು ಪತ್ತೆಯಾಗಿತ್ತು. ಈ ಒಂದು ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ಮಂಗಳೂರು ಮೂಲದ ತಲ್ಲತ್ತ ಹಾಗು ನವಫಾಲ್ ಗೆ ಇದೀಗ ಗುಂಡೇಟು ತಗುಲಿದೆ. ಆರೋಪಿಗಳನ್ನು ಅಂಕೋಲಾ ಕಡೆ ಕರೆದೊಯ್ಯುವಾಗ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾರೆ. ಆತ್ಮ ರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ನಾಲ್ವರು…

Read More

ಬೆಂಗಳೂರು : ಬೈಕ್ ನಲ್ಲಿ ಮೊಬೈಲ್ ನಲ್ಲಿ ಮಾತನಾಡುವುದೇ ದೊಡ್ಡ ತಪ್ಪು ಅಂತದ್ರಲ್ಲಿ ಇಲ್ಲೊಬ್ಬ ಆಸಾಮಿ ಐಪಿಎಲ್ ಪಂದ್ಯ ವೀಕ್ಷಣೆ ಮಾಡಿದ್ದಾನೆ. ಈ ಕುರಿತು ಟ್ವಿಟರ್ ನಲ್ಲಿ ವಿಡಿಯೋ ಸಮೇತ ಬೆಂಗಳೂರಿನ ಶಿವಾಜಿನಗರ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಬೈಕ್ ಸವಾರನನ್ನು ಠಾಣೆಗೆ ಕರೆಸಿ, ದಂಡ ವಿಧಿಸಿ ತಿಳುವಳಿಕೆ ಹೇಳಿ ಕಳುಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೈಕ್ ಓಡಿಸುತ್ತಾ ಮೊಬೈಲ್ ನಲ್ಲಿ ಐಪಿಎಲ್ ಪಂದ್ಯ ವೀಕ್ಷಿಸಿದವನಿಗೆ ದಂಡ ವಿಧಿಸಲಾಗಿದೆ. ಬೆಂಗಳೂರಿನ ಶಿವಾಜಿನಗರದ ಬ್ರಾಡ್ ರಸ್ತೆಯಲ್ಲಿ ಬೈಕ್ ಓಡಿಸುತ್ತಾ ಪಂದ್ಯ ವೀಕ್ಷಣೆ ಮಾಡುತ್ತಿದ್ದ. ಎಲೆಕ್ಟ್ರಿಕ್ ಬೈಕ್ ಸವಾರನಿಗೆ ಸಂಚಾರಿ ಪೊಲೀಸರು ಇದೀಗ ದಂಡ ವಿಧಿಸಿದ್ದಾರೆ.ಬೈಕ್ ಓಡಿಸುವಾಗ ಐಪಿಎಲ್ ವೀಕ್ಷಿಸುತ್ತಿದ್ದವರ ಬಗ್ಗೆ ವಿಡಿಯೋ ಸಹಿತ ದೂರು ನೀಡಲಾಗಿತ್ತು. ಈ ಕುರಿತು ಟ್ವಿಟರ್ ನಲ್ಲಿ ವಿಡಿಯೋ ಸಹಿತ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಲಾಗಿತ್ತು. ಹಾಗಾಗಿ ವಿಡಿಯೋ ಆಧಾರದಲ್ಲಿ ಟಿವಿ ಬೈಕ್ ಸವಾರ ಪ್ರಶಾಂತ್ ನನ್ನು ಕರೆಸಿ ಸಂಚಾರಿ…

Read More

ಹಾವೇರಿ : ಹಾಲಿನ ದರ ಇಳಿಕೆಯನ್ನು ಖಂಡಿಸಿ ಹಾವೇಮುಲ್ ಮುಂದೆ ರೈತರು ಇದೀಗ ಪ್ರತಿಭಟನೆ ನಡೆಸುತ್ತಿದ್ದಾರೆ. ಹಾವೇರಿ ಹಾಲು ಒಕ್ಕೂಟದ ಕಚೇರಿ ಬಾಗಿಲು ಹಾಕಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಚೇರಿಯಲ್ಲಿದ್ದ ಸಿಬ್ಬಂದಿಗಳನ್ನು ಹೊರಹಾಕಿ ಹಾಲು ಉತ್ಪಾದಕರಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರತಿ ಲೀಟರ್ ಹಾಲಿಗೆ 3.50 ಇಳಿಸಿದ ಹಾವೇರಿ ಹಾಲು ಒಕ್ಕೂಟವು ಈ ಒಂದು ಒಕ್ಕೂಟದ ನಿರ್ಧಾರಕ್ಕೆ ಹಾಲು ಉತ್ಪಾದಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದುವರೆ ತಿಂಗಳ ಹಿಂದೆ ಕೂಡ 1.50 ರೂಪಾಯಿಯನ್ನು ಹಾಲು ಒಕ್ಕೂಟ ಇಳಿಕೆ ಮಾಡಿತ್ತು. ನಂದಿನಿ ಹಾಲಿನ ದರ ಏಪ್ರಿಲ್ 1ರಿಂದ ಲೀಟರಿಗೆ 4 ರೂಪಾಯಿ ಹೆಚ್ಚಿಸಿರುವ ಸರ್ಕಾರ, ಹಾವೇರಿ ಹಾಲು ಒಕ್ಕೂಟ ನಷ್ಟದಲ್ಲಿದೆ ಅಂತ ನೆಪ ಹೇಳಿ ಹಾಲಿನ ದರ ಇಳಿಕೆ ಮಾಡಿದ್ದಾರೆ. ಹೀಗಾಗಿ ಹಾಲು ಉತ್ಪಾದಕರು ದರ ಇಳಿಕೆ ಮಾಡಿದನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಸುಮಾರು 50ಕ್ಕೂ ಹೆಚ್ಚು ರೈತರು ಹಾಲು ಒಕ್ಕೂಟದ ಕಚೇರಿ ಬಳಿ ಧರಣಿ ನಡೆಸುತ್ತಿದ್ದಾರೆ.

Read More