Author: kannadanewsnow05

ಬೆಂಗಳೂರು : ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ವೃದ್ಧರೊಬ್ಬರೂ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. ಮೃತ ವೃದ್ಧರನ್ನು ಮೈಲಾರಪ್ಪ (80) ತಿಳಿದು ಬಂದಿದೆ. ಮನೆಯಲ್ಲಿ ಮೊಮ್ಮಗನ ಜೊತೆಗೆ ಮೈಲಾರಪ್ಪ ವಾಸವಿದ್ದರು. ಮೊಮ್ಮಗ ಮನೆಯಿಂದ ಹೊರ ಹೋಗಿದ್ದಾಗ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಮನೆಯಲ್ಲಿ ಬೆಂಕಿ ಹತ್ತಿಕೊಂಡಿದ್ದರಿಂದ ಮೈಲಾರಪ್ಪ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ತಳಕ್ಕೆ ಕೆಂಗೇರಿ ತಾಣೆ ಪೊಲೀಸರು ಭೇಟಿ ನೀಡಿದ್ದು ತನಿಖೆ ಮುಂದುವರೆದಿದೆ.

Read More

ಕೋಲಾರ : ಕೋಲಾರದ ಕೆಜಿಎಫ್ ಚಿನ್ನದ ಗಣಿಯಲ್ಲಿ ಮಣ್ಣು ಕರಿಯುತಿದ ಎಂಟು ಜನರನ್ನು ಅರೆಸ್ಟ್ ಮಾಡಲಾಗಿದೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್. ಉರಿಗಂ ಠಾಣೆ ಪೊಲೀಸರು ಎಂಟು ಜನರನ್ನು ಅರೆಸ್ಟ್ ಮಾಡಿದ್ದಾರೆ. ಗಿಫ್ಟಾರ್ಟ್ ಶಾಪ್ಟ್ ನಲ್ಲಿ ಚಿನ್ನ ಮಿಶ್ರಿತ ಮಣ್ಣನ್ನು ಕದಿಯುತ್ತಿದ್ದರು ಎಂಟು ಚೀಲಗಳಲ್ಲಿ ತುಂಬಿದ 40,000 ಮೌಲ್ಯದ ಚಿನ್ನ ಮಿಶ್ರಿತ ಮಣ್ಣು ಜಪ್ತಿ ಮಾಡಿದ್ದಾರೆ. ಕಳುವು ಸಂಬಂಧ ಉರಿಗಾಂ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಮೈಸೂರು : ಇತ್ತೀಚಿಗೆ ಮೈಸೂರು ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಘಟನೆ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್‌ಗಳು ಅಥವಾ ಇತರ ಯಾವುದೇ ವಸ್ತುಗಳನ್ನು ಬಳಸುವುದು ಹಾಗೂ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಹೀಲಿಯಂ ಅನಿಲವನ್ನು ಬಲೂನ್​​​​ಗೆ ತುಂಬುವ ಸಂದರ್ಭದಲ್ಲಿ ಸಂಭವಿಸಿದ ಘಟನೆಯಿಂದ ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಉಂಟಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಹೀಲಿಯಂ ಅನಿಲವು ಅತ್ಯಧಿಕ ಒತ್ತಡದಲ್ಲಿರುವ ಸಿಲಿಂಡರ್‌ಗಳಲ್ಲಿ ಸಂಗ್ರಹಿಸಲಾಗುತ್ತಿದ್ದು, ಅವುಗಳನ್ನು ಅಜಾಗರೂಕತೆಯಿಂದ ಅಥವಾ ಅಪ್ರಮಾಣಿತ ವಿಧಾನದಲ್ಲಿ ಬಳಸುವುದರಿಂದ ಸಿಲಿಂಡರ್ ಸ್ಫೋಟ, ಉಸಿರುಗಟ್ಟುವಿಕೆ, ಅಗ್ನಿ ಅಪಾಯ, ಸಾರ್ವಜನಿಕರಲ್ಲಿ ಭಯ ಮತ್ತು ಆಶಾಂತಿ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಹಬ್ಬಗಳು, ಜಾತ್ರೆಗಳು, ಪ್ರವಾಸಿ ಕೇಂದ್ರಗಳು, ಸಾರ್ವಜನಿಕ ಸಮಾರಂಭಗಳು ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ ಹೀಲಿಯಂ ಅನಿಲ ಬಳಕೆಯು ಸಾರ್ವಜನಿಕ ಜೀವನದ ಮೇಲೆ ವಿಪರೀತ ಪರಿಣಾಮವನ್ನು ಬೀರಲಿದೆ. ಗಂಭೀರ…

Read More

ಮುಂಬೈ : ಮುಸ್ಲಿಂರಿಗೆ ಇದೀಗ ಮಹಾರಾಷ್ಟ್ರ ಸರಕಾರ ಬಿಗ್ ಶಾಕ್ ನೀಡಿದೆ. ಶಿಕ್ಷಣ ಮತ್ತು ಸರಕಾರಿ ಉದ್ಯೋಗಗಳಲ್ಲಿ SEBCಯಡಿ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇಕಡಾ 5 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ಬಗ್ಗೆ ವರದಿಯಾಗಿದೆ. ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರಕಾರ ಈ ಹೊಸ ಆದೇಶವನ್ನು ನೀಡಿದೆ. ಈ ಆದೇಶದಿಂದ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ(SEBC) ವರ್ಗದ ಅಡಿಯಲ್ಲಿ ಮುಸ್ಲಿಂ ಸಮುದಾಯದ ಕೆಲವು ವರ್ಗಗಳಿಗೆ ಈ ಹಿಂದೆ ದೊರೆಯುತ್ತಿದ್ದ ಮೀಸಲಾತಿ ರದ್ದುಗೊಂಡಿದೆ. 2014ರಲ್ಲಿ ಕಾಂಗ್ರೆಸ್‌-ಎನ್ ಸಿಪಿ ಮೈತ್ರಿ ಸರಕಾರ ಈ ಮೀಸಲಾತಿಯನ್ನು ಘೋಷಿಸಿತ್ತು. ಈ ನಿರ್ಧಾರವನ್ನು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು. ನಂತರ ಬಾಂಬೆ ಹೈಕೋರ್ಟ್ ಸರಕಾರಿ ಉದ್ಯೋಗಗಳಲ್ಲಿ ಈ ಮೀಸಲಾತಿಗೆ ಮಧ್ಯಂತರ ತಡೆಯಾಜ್ಞೆ ವಿಧಿಸಿತ್ತು. ಶಿಕ್ಷಣ ಸಂಸ್ಥೆ ಹಾಗೂ ಸರಕಾರಿ ಉದ್ಯೋಗ ಪಡೆಯಲು ಮುಸ್ಲಿಂ ಸಮುದಾಯಕ್ಕೆ ಇದು ಅನುಕೂಲವಾಗಲಿದೆ ಎಂದು ಹೇಳಲಾಗಿತ್ತು. ಇದೀಗ ಹಿಂದಿನ ಸರಕಾರದ ಆದೇಶವನ್ನು ಬಿಜೆಪಿ ಸರಕಾರ ರದ್ದುಪಡಿಸಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಹಣಕ್ಕಾಗಿ ಸ್ಪಾ ನಡೆಸುತ್ತಿದ್ದ ವ್ಯಕ್ತಿಯನ್ನ ಕಿಡ್ನ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜಿಗಣಿ ಮೂಲದ ಅಕ್ಷಯ್, ಜಿಗಣಿ ಮಂಟಪ ಗ್ರಾಮದ ಮಂಜುನಾಥ್ ಮತ್ತು ಆನೇಕಲ್ ತಾಲ್ಲೂಕಿನ ಹೊಂಪಲಘಟ್ಟ ಮೂಲದ ಪ್ರಜ್ವಲ್​​ ಬಂಧಿತರು ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ ಆರೋಪಿ ಮಂಜುನಾಥ್ ಅಪಾರ್ಟ್ಮೆಂಟ್​ನಲ್ಲಿ ಕೆಲಸ ಮಾಡುತ್ತಿದ್ದ. ಅಪಾರ್ಟ್ಮೆಂಟ್​​ನ ಹಣವನ್ನ ದುರ್ಬಳಕೆ ಮಾಡಿಕೊಂಡಿದ್ದ. ಬಳಿಕ ಹಣ ಹೊಂದಿಸಲು ಪ್ರಜ್ವಲ್ ಮತ್ತು ಅಕ್ಷಯ್ ಬಳಿ ಸಹಾಯ ಕೇಳಿದ್ದ. ಮೂರು ಜನ ಸೇರಿ ಮಾಸ್ಟರ್ ಪ್ಲ್ಯಾನ್​ ರೂಪಿಸಿದ್ದರು. ಸ್ಪಾ ಮಾಲೀಕರ ಬಳಿ ಹಣ ಇರುತ್ತೆ ಅಂತ ಕಿಡ್ನ್ಯಾಪ್ ಮಾಡುವುದಕ್ಕೆ ಹೊಂಚು ಹಾಕಿದ್ದರು. ಅದರಂತೆಯೇ ಸ್ಪಾ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಅಶೀತ್ ಜ್ಹಾ, ಮನ್ನುಕುಮಾರ್​​​​​​​​​ರನ್ನ ಹಿಂಬಾಲಿಸಿ ಅಶೀತ್​​ರನ್ನ ಕಿಡ್ನ್ಯಾಪ್​ ಮಾಡಿದ್ದರು. ಬಳಿಕ ಎರಡು ಲಕ್ಷ ರೂ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಇನ್ನು ಕಿಡ್ನ್ಯಾಪ್ ಆಗಿದ್ದ ಅಶೀತ್​ ಮಾತನಾಡಿದ್ದು, ಸ್ಪಾ ಕೆಲಸ ಮುಗಿಸಿಕೊಂಡು ಬೈಕ್​ನಲ್ಲಿ ಬರುತ್ತಿದ್ದೇವು. ಬೆಟ್ಟದಾಸನಪುರ ಬಳಿ…

Read More

ಕೊಪ್ಪಳ : ಕೊಪ್ಪಳದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಓವರ್ ಟೆಕ್ ಮಾಡುವ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಎಂಬ ಗ್ರಾಮದಲ್ಲಿ ನಡೆದಿದೆ. ಬೈಕ್ ನಲ್ಲಿ ಇದ್ದಂತಹ ಶ್ರೀನಿವಾಸ್ (26) ಹಾಗು ಸಿದ್ದನಗೌಡ (25) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ನಿವಾಸಿಗಳು ಎಂದು ತಿಳಿದುಬಂದಿದೆ. ಸೊಸೆ ಬರ್ತಡೆ ಹಿನ್ನೆಲೆಯಲ್ಲಿ ಶ್ರೀನಿವಾಸ್ ಸ್ನೇಹಿತನ ಜೊತೆಗೆ ತೆರಳುತ್ತಿದ್ದರು. ಮುಸಲಾಪುರದಿಂದ ಬೈಕ್ನಲ್ಲಿ ಹಿರೇ ಅರಳಹಳ್ಳಿಗೆ ಇಬ್ಬರು ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಲಾರಿ ಕೆಳಗಡೆ ಸಿಲುಕಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ಕುರಿತು ಬೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ಹಮ್ಮಿಕೊಂಡಿದ್ದಾರೆ ಇದರ ಬೆನ್ನಲ್ಲೇ ರಾಜ್ಯ ಗುತ್ತಿಗೆದಾರರ ಸಂಘದಿಂದ ಗುತ್ತಿಗೆದಾರರು ಮಾರ್ಚ್ 5 ರಂದು ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರಕ್ಕಿಂತಲೂ ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚಿನ ಕಮಿಷನ್ ಕೊಡಬೇಕಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್ ಮಂಜುನಾಥ್ ಗಂಭೀರವಾಗಿ ಆರೋಪಿಸಿದ್ದಾರೆ. ಹಿಂದೆ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರನ್ನು ಬಳಸಿಕೊಂಡು ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರು. ಈಗ ಹಳೆಯ ಸರ್ಕಾರಕ್ಕಿಂತ ಹೆಚ್ಚು ಕಮಿಷನ್ ಕೊಡುವ ಪರಿಸ್ಥಿತಿ ಇದೆ. ಸರ್ಕಾರದಿಂದ ಬರೋಬ್ಬರಿ 37 ಸಾವಿರ ಕೋಟಿ ಬರಬೇಕಿದೆ. ಹಳೆಯ ಬಿಲ್ ಗಳಿಗೆ ಕಮಿಷನ್ ಪಡೆದೆ ಹಣ ಬಿಡುಗಡೆ ಮಾಡುತ್ತಿದ್ದಾರೆ. ನಗರಾಭಿವೃದ್ಧಿ ಇಲಾಖೆಯಲ್ಲಿ ಮಧ್ಯವರ್ತಿಗಳ ಮೂಲಕ ಕೆಲಸ ಆಗುತ್ತದೆ. ತಮಗೆ ಬೇಕಾದವರಿಗೆ ಟೆಂಡರ್ ಕೊಡುತ್ತಿದ್ದಾರೆ.ಇಂಜಿನಿಯರ್ ಗಳ ಖಾಸಗಿ ಕಚೇರಿಗೆ ಕರೆಸಿಕೊಂಡು ಟೆಂಡರ್ ಕೊಡುತ್ತಿದ್ದಾರೆ. ಇಂತಹವರನ್ನು ಸಿಎಂ ಸಿದ್ದರಾಮಯ್ಯ ಹೇಗೆ ಸಹಿಸಿಕೊಂಡಿದ್ದಾರೆ ಎನ್ನುವುದು ದೇವರಿಗೆ ಗೊತ್ತು. ಇದ್ದಿದ್ದರಲ್ಲಿ ಸಚಿವ ಸತೀಶ್ ಜಾರಕಿಹೊಳಿ…

Read More

ಬೆಂಗಳೂರು : ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ನಿಯಮ ಬಾಹಿರವಾಗಿ ಸಾಗಿಸಲಾಗುತ್ತಿದೆ ಎನ್ನುವ ಬಿಜೆಪಿ ಶಾಸಕರ ಆರೋಪಕ್ಕೆ, ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದು, ಬಿಜೆಪಿ ನಾಯಕರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ವಿಜಯೇಂದ್ರ, ಆರ್ ಅಶೋಕ್ ಮನೆ ಮುಂದೇನೆ ಕಸ ಹಾಕಿಸ್ತೀನಿ ಎಂದು ಡಿಕೆ ಶಿವಕುಮಾರ್ ಮಾರ್ನಿಂಗ್ ನೀಡಿದರು. ಈ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯ ಎಲ್ಲಾ ಶಾಸಕರು ಬ್ಲ್ಯಾಕ್‌ಮೇಲ್‌ ಮಾಡ್ತಿದ್ದಾರೆ. ಗೌರವದಿಂದ ಇದ್ರೆ ಸರಿ, ಇಲ್ಲದಿದ್ರೆ ಎಸ್ಮಾ ಕಾಯ್ದೆ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತೆ. ಅಶೋಕ್‌, ವಿಜಯೇಂದ್ರ ಮನೆ ಮುಂದೆನೇ ಕಸ ಹಾಕಿಸಬೇಕಾಗುತ್ತೆ ಅಂತ ಡಿಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ ಕೊಟ್ಟರು. ಕಸ ಎಲ್ಲಾದ್ರೂ ಒಂದು ಕಡೆ ಹಾಕಬೇಕಲ್ವಾ? ಅಲ್ಲೂ ಬೇಡ, ಇಲ್ಲೂ ಬೇಡ ಅಂದ್ರೆ ಎಲ್ಲಿಗೆ ಹೋಬೇಕು? ಈ ಕಸ ಅಶೋಕ್ ಮನೆಗೆ, ವಿಜಯೇಂದ್ರ ಮನೆಗೆ ಅಥವಾ ಬಿಜೆಪಿ ಆಫೀಸಿಗೆ ಹೋಗಬೇಕು. ನಿನ್ನೆ ಲಿಂಬಾವಳಿ ಪ್ರತಿಭಟನೆ ಮಾಡಿದ್ದಾರೆ, ಇವತ್ತು ಅವನು ದೊಡ್ಡಬಳ್ಳಾಪುರ ಎಂಎಲ್‌ಎ ಮಾಡಿದ್ದಾನೆ. ಇವರೆಲ್ಲ ತಮ್ಮ ಕ್ಷೇತ್ರಕ್ಕೆ…

Read More

ಬೆಳಗಾವಿ : ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವಿದ್ಯುತ್ ಪರಿವರ್ತಕ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿದೆ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಈ ಒಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಸಹಕಾರಿ ಸಂಘದ ಟಿಸಿ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿದೆ. ಬೆಂಕಿ ತಗುಲಿ ವಿದ್ಯುತ್ ಪರಿವರ್ತಕಗಳು ಹೊತ್ತಿ ಉರಿದಿವೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಲ್ಲಿ ಯಶಸ್ವಿಯಾಗಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮದುವೆ ಸಮಾರಂಭಕ್ಕೆ ಕಲ್ಯಾಣ ಮಂಟಪ ಬಾಡಿಗೆಗೆ ನೀಡುವ ಸಂದರ್ಭದಲ್ಲಿ ಮಂಟಪದ ಮಾಲೀಕರು ವಧು-ವರರ ವಯಸ್ಸಿನ ಕುರಿತ ದಾಖಲೆಗಳನ್ನು ಪರಿಶೀಲಿಸಬೇಕು ಎಂಬ ಕಠಿಣ ನಿಯಮಗಳಿಲ್ಲ ಎಂದು ಹೈ ಕೋರ್ಟ್ ಅಭಿಪ್ರಾಯಪಟ್ಟಿದೆ. ಅಪ್ರಾಪ್ತೆ ಹಾಗೂ ಗರ್ಭಿಣಿಯ ಮದುವೆಗಾಗಿ ಮಂಟಪವನ್ನು ಬಾಡಿಗೆಗೆ ನೀಡಿದ ಮಾಲೀಕರ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತು ಆ ಸಂಬಂಧ ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ. ಅಪ್ರಾಪ್ತೆಯ ಮದುವೆ ಮಾಡಿಕೊಡಲು ಮಂಟಪವನ್ನು ಬಾಡಿಗೆಗೆ ನೀಡುವ ಮೂಲಕ ಬಾಲ್ಯ ವಿವಾಹ ಮಾಡಿದ್ದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ಹುಸೈನ್‌ ಪ್ಯಾಲೇಸ್‌ನ ಮಾಲೀಕ ಅಬ್ದುಲ್‌ ಅಮೀದ್‌ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ರಾಜೇಶ್‌ ರೈ ಅವರಿದ್ದ ಕಲಬುರಗಿ ಹೈಕೋರ್ಟ್​​ ಪೀಠ ಈ ಆದೇಶ ನೀಡಿದೆ ಪ್ರಕರಣದ ಹಿನ್ನೆಲೆ? ಧಾರವಾಡ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 17 ವರ್ಷ 8 ತಿಂಗಳ ವಯಸ್ಸಿನ ಅಪ್ರಾಪ್ತೆಯೊಬ್ಬರು 2024ರ ಮೇ 27ರಂದು ಮಗುವಿಗೆ ಜನ್ಮ ನೀಡಿದ್ದರು.…

Read More