Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ವಿಜಯನಗರ : LPG ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ತಾಯಿ ಮಗ ಈಗ ಚಿಕಿತ್ಸೆ ಫಲಕಾರಿಯಾಗದೆ, ಸಾವನಪ್ಪಿದ್ದಾರೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಲ್ಲೆ ಈ ಒಂದು ಘಟನೆ ಮತ್ತು ವಕೀಲ ಹಾಲಪ್ಪ (43) ಹಾಗೂ ತಾಯಿ ಗಂಗಮ್ಮ (70) ಮೃತ ದುರ್ದೈವಿಗಳು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತಾಯಿ ಹಾಗೂ ಮಗ ಇಬ್ಬರು ಸಾವನಪ್ಪಿದ್ದಾರೆ ಸೆಪ್ಟೆಂಬರ್ 27 ರಂದು ಸಿಲಿಂಡರ್ ಸ್ಫೋಟದಲ್ಲಿ 11 ಜನರು ಗಾಯಗೊಂಡಿದ್ದರು. ಈ ವೇಳೆ 11 ಜನರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ವಕೀಲ ಹಾಲಪ್ಪ ಹಾಗೂ ತಾಯಿ ಗಂಗಮ್ಮ ಸಾವನಪ್ಪಿದ್ದಾರೆ.

Read More

ಚಿಕ್ಕಬಳ್ಳಾಪುರ : ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದಂತಹ ಇನೋವಾ ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ 35 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 6 ಜನರಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂತ್ರಾಲಯದಿಂದ ವಾಪಸ್ ಬರುವ ವೇಳೆ ಈ ಅಪಘಾತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಇವರು ಪ್ರಯಾಣಿಸುತ್ತಿದ್ದ ಇನೋವಾ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಹಾಗಾಗಿ ಸ್ಥಳದಲ್ಲೇ ನಂದಿನಿ (35) ಎನ್ನುವ ಮಹಿಳೆ ಸಾವನಪ್ಪಿದ್ದರೆ, ಕಾಲಿನಲ್ಲಿದ್ದ ಉಳಿದ ಆರು ಜನರಿಗೆ ಗಂಭೀರವಾದ ಗಾಯಗಳಾಗಿವೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ರಸ್ತೆ ಅಪಘಾತ ಸಂಭವಿಸಿದ್ದು, ಜಲ್ಲಿಕಲು ಇದ್ದಿದ್ದರಿಂದ ರಸ್ತೆಗೆ ಯುವತಿಯರಿದ್ದ ಬೈಕ್ ಸ್ಕಿಡ್ ಆಗಿದೆ. ಈ ವೇಳೆ ಕೆಳಗೆ ಬಿದ್ದ ಯುವತಿಯರ ಮೇಲೆ ಕ್ಯಾಂಟರ್ ಹರಿದು ಸ್ಥಳದಲ್ಲೇ ಯುವತಿರಿಬ್ಬರು ಸಾವನ್ನಪ್ಪಿರುವ ಘಟನೆ ಶಿವನಾಪುರ ಕ್ರಾಸ್ ಬಳಿ ಈ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಶಿವನಾಪುರ ಎಂಬಲ್ಲಿ ಕ್ಯಾಂಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಶೈಲಾ (25) ಹಾಗೂ ಶ್ವೇತಾ (22) ಸಾವನಪ್ಪಿದ್ದಾರೆ. ಕಾಮಗಾರಿಯಿಂದಾಗಿ ರಸ್ತೆಯಲ್ಲಿ ಜಲ್ಲಿಕಲ್ಲುಗಳು ಕಿಲಾಡಿದ್ದು ಜಲ್ಲಿಕಲಿನಿಂದಾಗಿ ಬೈಕ್ ಸ್ಕೆಡ್ ಆಗಿ ಇವತಿಯೊಬ್ಬರು ರಸ್ತೆಯ ಮೇಲೆ ಬಿದ್ದಿದ್ದಾರೆ ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್ ಕೆಳಗಿದ್ದ ಯುವತಿಯರ ಮೇಲೆ ಹರಿದಿದೆ. ಇವಳೆ ಇಬ್ಬರು ಯುವತಿಯರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮತವತಿಯರು ಹೊಸಕೋಟೆ ತಾಲೂಕಿನ ಅತಿವತ್ತ ಗ್ರಾಮದವರು ಎಂದು ತಿಳಿದುಬಂದಿದೆ.

Read More

ಶಿವಮೊಗ್ಗ : ಇಂದು ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಪುತ್ರಿಯನ್ನು ಮಚ್ಚಿನಿಂದ ಕೊಲೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ತಾಯಿ ಸೂಸೈಡ್ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಯ ಕ್ವಾಟರ್ಸ್ ನಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆ ಮಾಡಿ 36 ವರ್ಷದ ಶ್ರುತಿ ಪುತ್ರಿ ಪೂರ್ವಿಕಳನ್ನು (11) ಮಚ್ಚಿನಿಂದ ಕೊಂದ ಬಳಿಕ ನೇಣು ಬಿಗಿದುಕೊಂಡು ತಾಯಿ ಶೃತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಮೊಗ್ಗದ ಶರಾವತಿ ನಗರದಲ್ಲಿ ಜಿಲ್ಲಾ ಆಸ್ಪತ್ರೆ ಕ್ವಾರ್ಟರ್ ನಲ್ಲಿ ಈ ಘಟನೆ ನಡೆದಿದ್ದು ಪತಿ ರಾಮಣ್ಣ ಕೆಲಸಕ್ಕೆ ತೆರಳಿದ್ದಾಗ ಪುತ್ರಿಯನ್ನು ಕೊಂದು ಶೃತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡ್ಯೂಟಿ ಮುಗಿಸಿ ರಾಮಣ್ಣ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಶೃತಿ ಮಾನಸಿಕ ಅಸ್ವಸ್ಥೆ ಎಂದು ತಿಳಿದುಬಂದಿದೆ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸದ್ಯ ಘಟನಾ ಸ್ಥಳಕ್ಕೆ ಪೊಲಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ನಿನ್ನೆ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಮುಂದಿನ ಬಾರಿಯೂ ನಾನೇ ದಸರಾ ಮಹೋತ್ಸವ ಉದ್ಘಾಟಿಸುತ್ತೇನೆ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಎಂದು ತಿಳಿಸಿದ್ದಾರೆ. ಇದೀಗ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಸಿಎಂ  ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾತಾನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನಂತರ ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಸುರ್ಜೇವಾಲ, ಯಾರೂ ಪಕ್ಷದ ಚೌಕಟ್ಟು ಮೀರಬಾರದು ಅಂತಾ ಸೂಚನೆ ಕೊಟ್ಟಿದ್ದರೂ ಕೆಲವರು ಅದನ್ನು ಮೀರಿ ಮಾತನಾಡಿದ್ದಾರೆ. ಈ ಬಗ್ಗೆ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಸುರ್ಜೇವಾಲ ತಿಳಿಸಿದ್ದಾರೆ. ಇನ್ನು ಮತಗಳ್ಳತನ ಕುರಿತು ಮಾತನಾಡಿದ ಅವರು, ಮತಗಳ್ಳತನ ಮಹದೇವಪುರ ಮತ್ತು ಆಳಂದ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಬೇರೆ ಬೇರೆ…

Read More

ಬೆಂಗಳೂರು : ನಟ ದರ್ಶನ್ ಅವರೊಂದಿಗೆ ಬುಲ್ ಬುಲ್ ಚಿತ್ರದೊಂದಿಗೆ ಸ್ಯಾಂಡಲ್ವುಡ್ ಗೆ ಕಾಲಿಟ್ಟ ಡಿಂಪಲ್ ಕ್ವೀನ್ ಎಂದೆ ಅಭಿಮಾನಿಗಳನ್ನು ಹೊಂದಿರುವ ನಟಿ ರಚಿತಾ ರಾಮ್ ಇಂದು 33ನೇ ವಸಂತಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು. ಇದೆ ವೇಳೆ ಅಭಿಮಾನಿಗಳಿಗೆ ನಟಿ ರಚಿತಾ ರಾಮ್ ಸಿಹಿ ಸುದ್ದಿ ಒಂದನ್ನು ನೀಡಿದ್ದು, ನಾನು ಖಂಡಿತವಾಗು, ಮದುವೆ ಆಗಲೇಬೇಕು ಅಂತ ನಿರ್ಧರಿಸಿದ್ದೇನೆ ಆದಷ್ಟು ಬೇಗ ಮದುವೆ ಆಗುತ್ತಾನೆ ಮನೆಯಲ್ಲಿ ಹುಡುಗನ ಹುಡುಕ್ತಾಇದ್ದಾರೆ ಅರೆಂಜ್ ಮ್ಯಾರೇಜ್ ಆಗಿ ಆಗುತ್ತೇನೆ. ನನಗೆ ಕಂಕಣ ಭಾಗ್ಯ ಯಾವಾಗ ಕೂಡಿ ಬರುತ್ತೋ ಗೊತ್ತಿಲ್ಲ ಆದರೆ ಆದಷ್ಟು ಬೇಗ ಮದುವೆ ಆಗುತ್ತೇನೆ ಅಂತ ನಿರ್ಧರಿಸಿದ್ದೇನೆ ಎಂದರು. ಇದೆ ವೇಳೆ ಮೂಗು ಬೊಟ್ಟು ಚುಚ್ಚಿಸಿಕೊಳ್ಳುಬೇಕು ತುಂಬಾ ಆಸೆ ನನ್ನ ಇತ್ತು. ಅಮ್ಮನಿಗೂ ಕೂಡ ಮೂಗು ಬೊಟ್ಟು ಚುಚ್ಚಬೇಕು ಅಂತ ಆಸೆ ಇತ್ತು, ನವರಾತ್ರಿ ಸಂದರ್ಭದಲ್ಲಿ ಒಳ್ಳೆಯ ದಿನಾಂಕ ಮೂಗುಬಿಟ್ಟು ಚುಚ್ಚಿಸಿಕೊಂಡಿದ್ದೇನೆ. ಈ ವೇಳೆ ಮಾಧ್ಯಮದವರು ರಾಜಕೀಯಕ್ಕೆ ಬರುತ್ತೀರಾ ಎಂದು…

Read More

ಮೈಸೂರು : ಕಳೆದ ಫೆಬ್ರುವರಿಯಲ್ಲಿ ಕೇಂದ್ರ ಸರ್ಕಾರ ದಿನಬಳಕೆ ವಸ್ತುಗಳು ಸೇರಿದಂತೆ ಎಲ್ಲದರ ಮೇಲು ಜಿಎಸ್‌ಟಿ ಹೆಚ್ಚಳ ಮಾಡಿದ್ದು, ಇದೀಗ ಕಳೆದ ಕೆಲವು ದಿನಗಳ ಹಿಂದೆ ಕೇಂದ್ರ ದಿನಬಳಕೆ ವಸ್ತುಗಳ ಮೇಲೆ ಜಿಎಸ್‌ಟಿ ಕಡಿತಗೊಳಿಸಿದೆ. ಇದರಿಂದ ರಾಜ್ಯಕ್ಕೆ 15 ಕೋಟಿ ರೂಪಾಯಿ ನಷ್ಟವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದಿನಬಳಕೆ ವಸ್ತುಗಳ ಮೇಲಿನ ಜಿಎಸ್​ಟಿ ಕಡಿತ ಮಾಡಿದ ವಿಚಾರವಾಗಿ ಜಿಎಸ್‌ಟಿ ಕಡಿತದಿಂದ ನಮಗೆ 15 ಕೋಟಿ ರೂಪಾಯಿ ನಷ್ಟವಾಗುತ್ತಿದೆ. ಕಡಿಮೆ ಮಾಡಿದನ್ನ ಸ್ವಾಗತಿಸಬೇಕು ನಷ್ಟ ನಾವೇ ಅನುಭವಿಸಬೇಕು. ಎಂಟು ವರ್ಷ ಕೇಂದ್ರ ಸರ್ಕಾರ ಅತಿ ಹೆಚ್ಚು ಜಿಎಸ್‌ಟಿ ವಸೂಲಿ ಮಾಡಿದೆ. ಆ ಹಣವನ್ನು ಈಗ ವಾಪಸ್ ಕೊಡುತ್ತಾರಾ? ಜಾಸ್ತಿ ಮಾಡುವುದು ಇವರೇ ಕಡಿಮೆ ಮಾಡುವುದು ಇವರೇ ಚುನಾವಣೆ ಗೋಸ್ಕರ ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿತ ಮಾಡಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಹಣ ಬಿಡುಗಡೆ ವಿಚಾರವಾಗಿ ರಾಜಕೀಯ ಮೊದಲಿನಿಂದಲೂ ಕೇಂದ್ರದಿಂದ…

Read More

ತಮಿಳುನಾಡು : ಕನ್ನಡ, ತಮಿಳು, ತೆಲುಗು ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿ ಹೆಸರುವಾಸಿಯಾದ ಖ್ಯಾತ ಬಹುಭಾಷಾ ನಟಿ ತ್ರಿಷಾ ಮನೆಗೆ ಬಾಂಬ್ ಸ್ಪೋಟಿಸುವ ಬೆದರಿಕೆ ಕರೆ ಬಂದಿದೆ. ಹೌದು ಬೆಳ್ಳಂಬೆಳಿಗ್ಗೆ ಪೊಲೀಸರಿಗೆ ವಿಪರೀತ ಕೆಲಸ ಕೊಟ್ಟಿದ್ದಾರೆ ಕೆಲ ದುರುಳರು. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಮನೆಗಳಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ್ದಾರೆ. ಚೆನ್ನೈ ಪೊಲೀಸರು ತ್ರಿಷಾ ಹಾಗೂ ಇನ್ನೂ ಕೆಲವು ಸೆಲೆಬ್ರಿಟಿಗಳು, ರಾಜಕಾರಣಿಗಳ ಮನೆಗಳಿಗೆ ಶ್ವಾನದಳದೊಟ್ಟಿಗೆ ತೆರಳಿ ತನಿಖೆ ನಡೆಸಿದ್ದು, ಬಾಂಬ್ ಕರೆಗಳು ನಕಲಿ ಎಂದು ಸ್ಪಷ್ಟನೆ ನೀಡಿದ್ದಾರೆ. ನಟ ವಿಜಯ್ ಅಭಿಮಾನಿಗಳ ಕೃತ್ಯ? ನಟ ವಿಜಯ್ ಅವರ ಅಭಿಮಾನಿಗಳದ್ದೇ ಈ ಕೆಲಸ ಆಗಿರಬಹುದು ಎಂಬ ಅನುಮಾವನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ. ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ 41 ಮಂದಿ ಮೃತರಾಗಿದ್ದು, ಪ್ರಕರಣದ ಬಗ್ಗೆ ಸಿಎಂ ಸ್ಟಾಲಿನ್ ಅವರು ಗಂಭೀರವಾದ ಆದೇಶಗಳನ್ನು ಪೊಲೀಸರಿಗೆ ನೀಡಿದ್ದಾರೆ. ವಿಜಯ್ ಪಕ್ಷದ ಕೆಲ ಮುಖಂಡರನ್ನು ಈಗಾಗಲೇ ಬಂಧಿಸಲಾಗಿದೆ. ಇನ್ನು ನಟಿ ತ್ರಿಷಾ, ಮೃತರ ಬಗ್ಗೆ ಪೋಸ್ಟ್…

Read More

ಮೈಸೂರು : ಡಿಸೆಂಬರ್ ನಲ್ಲಿ ಹೊಸ ಮನೆ ಗೃಹ ಪ್ರವೇಶ ಮಾಡುತ್ತೇನೆ. ಗೃಹಪ್ರವೇಶ ಒಂದು ಕಾರ್ಯಕ್ರಮಕ್ಕೆ ಯಾರನ್ನು ಆಹ್ವಾನಿಸುವುದಿಲ್ಲ ಎಂದು ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಹೊಸಮನೆ ಕೆಲಸ ಬಹುತೇಕ ಮುಕ್ತಾಯವಾಗಿದೆ. ಈಗಿರುವ ಮನೆ ನನ್ನದಲ್ಲ ಮರಿಸ್ವಾಮಿ ಅವರದು. ಮರಿಸ್ವಾಮಿ ನನಗೆ ಹಾಗೂ ನನ್ನ ಮಗನಿಗೆ ಅನ್ನದಾತರಾಗಿದ್ದಾರೆ. ನನಗೆ ನನ್ನ ಮಗ ಮತ್ತು ಸ್ನೇಹಿತರಿಗೆ ಊಟ ಹಾಕುವುದು ಮರಿಸ್ವಾಮಿ. ಗೃಹಪ್ರವೇಶ ಮಾಡಿದ ಬಳಿಕ ಹೊಸ ಮನೆಗೆ ಹೋಗುತ್ತೇನೆ. ಜನರನ್ನು ಭೇಟಿ ಮಾಡಲು ಈ ಮನೆ ಬೆಳಸಿಕೊಳ್ಳುತ್ತೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ಬೆಳಗಾವಿ : ಒಂದೆಡೆ ನಿನ್ನೆ ಮುಂದಿನ ವರ್ಷ ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಹೇಳುವ ಮೂಲಕ ಪೂರ್ಣವಧಿ ನಾನೇ ಸಿಎಂ ಆಗಿರುತ್ತೇನೆ ಎಂದು ಪರೋಕ್ಷವಾಗಿ ಹೇಳಿದ್ದು, ಇನ್ನೊಂದೆಡೆ ಮುಂದಿನ ನವೆಂಬರ್-ಡಿಸೆಂಬರ್ ತಿಂಗಳೊಳಗೆ ರಾಜ್ಯದಲ್ಲಿ ಕ್ರಾಂತಿ ಆಗುವುದು ನಿಶ್ಚಿತ. ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವುದು ನೂರಕ್ಕೆ ನೂರರಷ್ಟು ನಿಜ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ ನುಡಿದರು. ಬೆಳೆ ಹಾನಿ ಸಮೀಕ್ಷೆಗೆ ಭೇಟಿ ನೀಡುವ ಮುನ್ನ ಇಂದು ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದ ಆಗಿರುವುದು ನಿಜ. ಈಗ ಜಗಳ ಆರಂಭವಾಗಿದೆ‌. ಈಗಾಗಲೇ ಕ್ರಾಂತಿ ಅಂತ ಹೇಳಿ ಸಚಿವ ರಾಜಣ್ಣ ಮನೆಗೆ ಹೋಗಿದ್ದಾರೆ‌.‌ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ, ಡಿ.ಕೆ.ಶಿವಕುಮಾರ್ ಹಠ ಬಿಡುತ್ತಿಲ್ಲ. ಕಾಂಗ್ರೆಸ್ ಜಗಳದಲ್ಲಿ ಸರ್ಕಾರ ಪತನವಾದರೆ ನಾವೇನೂ ಸರ್ಕಾರ ಮಾಡಲ್ಲ. ನಾವು ಚುನಾವಣೆಗೆ ಹೋಗಲು ಸಿದ್ದರಿದ್ದೇವೆ‌ ಎಂದರು. ಸಿಎಂ ಸಿದ್ದರಾಮಯ್ಯ ಗ್ಯಾಂಗ್‌ಗೆ ಜಾತಿ ಸಮೀಕ್ಷೆ ಮಾತ್ರ ಮುಖ್ಯ. ಜಾತಿಗಳ ಮಧ್ಯೆ ಬೆಂಕಿ…

Read More