Subscribe to Updates
Get the latest creative news from FooBar about art, design and business.
Author: kannadanewsnow05
ಗೋವಾ : ಭಾರತದಲ್ಲಿ ಮೋಜು ಮಸ್ತಿ ಮಾಡಲು ಇರುವ ಏಕೈಕ ಪ್ರದೇಶವೆಂದರೆ ಅದು ಗೋವಾ. ದೇಶದ ಅನೇಕ ರಾಜ್ಯ, ಹಾಗೂ ವಿದೇಶಿಗರಿಂದ ಗೋವಾ ರಾಜ್ಯ ಯಾವಾಗಲೂ ತುಂಬಿ ತುಳುಕುತ್ತಿರುತ್ತದೆ. ಇದೀಗ ಗೋವಾದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಪ್ಯಾರಾಗ್ಲೆಡಿಂಗ್ ಮಾಡುತ್ತಿದ್ದ ವೇಳೆ ಪ್ರವಾಸಕ್ಕೆಂದು ಆಗಮಿಸಿದ ಮಹಿಳೆ ಹಾಗೂ ತರಬೇತುದಾರ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಪ್ಯಾರಾಗ್ಲೆಡಿಂಗ್ ಮಾಡುತ್ತಿದ್ದ ವೇಳೆ ಕಂದಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರವಾಸಿ ಮಹಿಳೆ ಮತ್ತು ಆಕೆಯ ತರಬೇತುದಾರ ಸಾವನಪ್ಪಿದ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ.ನಿನ್ನೆ ಸಂಜೆ ಕೇರಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಪುಣೆ ನಿವಾಸಿ ಶಿವಾನಿ ಡೇಬಲ್ ಮತ್ತು ಆಕೆಯ ತರಬೇತುದಾರ ನೇಪಾಳ ಪ್ರಜೆ ಸುಮಲ್ ಸಂಜೆ 5 ಗಂಟೆ ಸುಮಾರಿಗೆ ಕೇರಿ ಪ್ರಸ್ಥಭೂಮಿಯಲ್ಲಿ ಕಂದಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದರೆ. ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಹಸ ಕ್ರೀಡಾ ಕಂಪನಿಯಲ್ಲಿ ಶಿವಾನಿ ಪ್ಯಾರಾಗ್ಲೆಡ್ ಮಾಡಿದ್ದಾರೆ. ಪ್ಯಾರಾಗ್ಲೆಡರ್ ಬಂಡೆಯಿಂದ ಟೇಕಾಫ್ ಆದ ಕೂಡಲೇ ಕಮರಿಗೆ ಬಿದ್ದಿದ್ದು,…
ಮಂಗಳೂರು : ಕಳೆದ 12 ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ನದಿ ಬಳಿ ಕಾಡಂಚಿನಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಭೀಕರವಾಗಿ ಕೊಲೆಯಾಗಿದ್ದ ಸೌಜನ್ಯಳ ತಂದೆ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಯಾಗಿದ್ದ ಚಂದಪ್ಪ ಗೌಡ (58) ಎನ್ನುವರು ತೀವ್ರವಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ವೃತ್ತಿಯಲ್ಲಿ ಗುತ್ತಿಗೆದಾರರಾಗಿರುವ ಇವರು ಕಳೆದ ಎರಡು ದಿನಗಳ ಹಿಂದೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆರೋಗ್ಯದಲ್ಲಿ ಏರುಪೇರಾಗಿ ಉಂಟಾಗಿ ಚಿಕಿತ್ಸೆ ಪಡಿಸಿದೆ ಇಂದು ಅವರು ಸಾವನ್ನಪ್ಪಿದ್ದಾರೆ ಎಂದು ಬಳ್ಳ ಮೂಲಗಳಿಂದ ತಿಳಿದು ಬಂದಿದೆ. ಪತ್ನಿ ನಾಲ್ವರು ಮಕ್ಕಳನ್ನು ಅಗಲಿದ ಚಂದಪ್ಪಗೌಡರ ಅಂತ್ಯಕ್ರಿಯೆಯೂ ಇಂದು ರಾತ್ರಿ 7.30ಕ್ಕೆ ಪಾಂಗಾಳದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿದುಬಂದಿದೆ.
ನವದೆಹಲಿ : ನಿನ್ನೆ ಮಂಡ್ಯದಲ್ಲಿ ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ಒಬ್ಬಳು ಅಪಘಾತದಲ್ಲಿ ಸಾವನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಮತ್ತೊಂದು ಘಟನೆಯಲ್ಲಿ ತನ್ನ ಮದುವೆ ಆಮಂತ್ರಣ ಪತ್ರಿಕೆ ಹಂಚಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಮದುವೆಯ ವರ ಕಾರಿನಲ್ಲಿ ಸುಟ್ಟು ಕರಕಲಾಗಿರುವ ಘೋರ ಘಟನೆ ನವದೆಹಲಿಯ ಘಾಜಿಪುರದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ನಡೆದಿದೆ. ಹೌದು ಗ್ರೇಟರ್ ನೋಯ್ಡಾದ ನಿವಾಸಿ ಅನಿಲ್ ಮೃತ ವರ ಎಂದು ತಿಳಿದುಬಂದಿದೆ. ನಿನ್ನೆ ಅನೀಲ್ ಆಮಂತ್ರಣ ಪತ್ರಿಕೆ ಹಂಚಲು ಹೊರಗೆ ಹೋಗಿದ್ದ ಸಂದರ್ಭ ಘಟನೆ ಸಂಭವಿಸಿದೆ. ಸಂಜೆಯಾದರೂ ವಾಪಸ್ ಬಾರದ್ದನ್ನು ಕಂಡು ಕರೆ ಮಾಡಿದೆವು. ಆದರೆ ಅವರ ಮೊಬೈಲ್ ಸ್ವಿಚ್ಆಫ್ ಆಗಿತ್ತು. ರಾತ್ರಿ 11:30ರ ಸುಮಾರಿಗೆ ಅನಿಲ್ಗೆ ಅಪಘಾತವಾಗಿದ್ದು, ಆಸ್ಪತ್ರೆಯಲ್ಲಿದ್ದಾರೆ ಎಂದು ಪೊಲೀಸರು ಕರೆ ಮಾಡಿದ್ದರು ಎಂದು ಅನಿಲ್ ಅಣ್ಣ ಸುಮಿತ್ ತಿಳಿಸಿದ್ದಾರೆ. ಈ ಒಂದು ಅಪಘಾತದಲ್ಲಿ ಕಾರಿಗೆ ಹೇಗೆ ಬೆಂಕಿ ಹತ್ತಿಕೊಂಡಿದೆ ಎನ್ನುವುದು ಮಾತ್ರ ತಿಳಿದಿಲ್ಲ. ಘಟನೆ ಕುರಿತು ಪ್ರಕರಣ…
ಕಲಬುರ್ಗಿ : ಶಾರ್ಟ್ ಸರ್ಕ್ಯೂಟ್ ನಿಂದ ಕನ್ನಡಕದ ಅಂಗಡಿಯೊಂದು ಹೊತ್ತಿ ಉರಿದಿದೆ. ಈ ವೇಳೆ ಅಂಗಡಿಯಲ್ಲಿದ್ದಂತಹ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಕಲಬುರ್ಗಿ ನಗರದ ಬಿಗ್ ಬಜಾರ್ ಎದುರುಗಡೆ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಹೌದು ನಗರದ ಕೇಂದ್ರ ಭಾಗದಲ್ಲಿರುವಂತಹ ಬಿಗ್ ಬಜಾರ್ ಎದುರುಗಡೆ ಇರುವ AEIS ಆಪ್ಟಿಕಲ್ ಅಂಗಡಿಯಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದ್ದು ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ಪೊಲೀಸ್ ಕ್ವಾರ್ಟರ್ಸ್ ನಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಹಲ್ಲೆ ಮಾಡಿದ್ದು ಅಲ್ಲದೆ, ವರದಕ್ಷಿಣೆ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಇತ್ತೀಚಿಗೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಠಾಣೆಯಲ್ಲಿ ಪಿಎಸ್ಐ ನಿತ್ಯಾನಂದ ಪತ್ನಿ ದೂರು ನೀಡಿದ್ದರು. ಇದೀಗ ಈ ಒಂದು ದೂರಿನ ಅನ್ವಯದ ಮೇಲೆ PSI ನಿತ್ಯಾನಂದನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹೌದು ಚಿಕ್ಕಮಗಳೂರು ಜಿಲ್ಲೆಯ ಕಳಸ ಠಾಣೆಯ ಪಿಎಸ್ಐ ನಿತ್ಯಾನಂದ ಅಮಾನತು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಪಿಎಸ್ಐ ನಿತ್ಯಾನಂದನ ವಿರುದ್ಧ ರಾತ್ರೋರಾತ್ರಿ ಪತ್ನಿ ಠಾಣೆಗೆ ಬಂದು ದೂರು ನೀಡಿದ್ದರು.ಕಳಸ ಪೋಲಿಸ್ ವಸತಿಗೃಹದಲ್ಲಿ ನನ್ನ ಮೇಲೆ ನಿತ್ಯಾನಂದ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಅಮಿತಾ ದೂರು ನೀಡಿದ್ದರು. ಮಾನಸಿಕ ಹಾಗು ದೈಹಿಕ ಹಿಂಸೆ ನೀಡಿದ್ದು ಅಲ್ಲದೆ, ವರದಕ್ಷಿಣೆ ಕಿರುಕುಳ ನೀಡಿದ್ದ. ಮಹಿಳೆಯರ ಜೊತೆಗೆ ಪತಿ ನಿತ್ಯಾನಂದ ಅನೈತಿಕ ಸಂಬಂಧ ಹೊಂದಿದ್ದ ಅಲ್ಲದೆ ವರದಕ್ಷಣೆ ಕಿರುಕುಳ ನೀಡುತ್ತಿದ್ದಾನೆ ಎಂದು ಪತ್ನಿ ಅಮಿತಾ ಕಳಸ ಠಾಣೆಗೆ…
ಬೆಳಗಾವಿ : ಸಿಎಂ ಸಿದ್ದರಾಮಯ್ಯ ಕುರಿತು ನಾಜಿಯಾ ಖಾನ್ ಇದೀಗ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಮಹಿಳೆಯರ ಜೊತೆ ಸಿಎಂ ಸಿದ್ದರಾಮಯ್ಯ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ಈ ಒಂದು ಹೇಳಿಕೆ ನೀಡಿದ್ದಾರೆ. ಸಿಎಂ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರಿಗೆ ಮುತ್ತು ನೀಡುತ್ತಾರೆ. ಸಿದ್ದರಾಮಯ್ಯ ನಡೆಯ ಬಗ್ಗೆ ನಾನು ವಿರೋಧಿಸಿದ್ದೇನೆ. ಪಕ್ಷದ ಮಹಿಳಾ ವಕ್ತಾರೆಯರಿಗೆ ಸಿದ್ದರಾಮಯ್ಯನವರು ಮತ್ತು ನೀಡುತ್ತಾರೆ.ಚಲನಚಿತ್ರ ನಟಿಯರನ್ನು ಕೂಡ ಬಿಡದೆ ಸಿಎಂ ಸಿದ್ದರಾಮಯ್ಯ ಅಪ್ಪಿಕೊಳ್ಳುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಂದುವರೆದು ಮಹಿಳಾ ಪತ್ರಕರ್ತೆಯರ ಜೊತೆಗೂ ಸಿಎಂ ಅಸಭ್ಯವಾಗಿ ವರ್ತಿಸಲು ಯತ್ನಿಸಿದ್ದಾರೆ. ನನ್ನ ಬಳಿ ನೊಂದ ಮಹಿಳಾ ಪತ್ರಕರ್ತೆಯರಲ್ಲಿ ಲಿಸ್ಟ್ ಕೂಡ ಇದೆ ಎಂದು ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಕುರಿತು ನಾಜಿಯಾ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿ : ತನ್ನ ಪತಿ ಪರಸ್ತ್ರೀ ಜೊತೆಗೆ ಓಡಿ ಹೋಗಿದ್ದಾನೆ. ಹಾಗಾಗಿ ಆತನನ್ನು ಹುಡುಕಿ ಕೊಡುವಂತೆ ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸುತ್ತಿರುವ ಘಟನೆ ಬೆಳಗಾವಿ ತಾಲೂಕಿನ ಮಾರಿಹಾಳ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಪರಸ್ತ್ರಿ ಜೊತೆಗೆ ಪತಿ ಪರಾರಿಯಾಗಿದ್ದಾನೆ. ಕೂಡಲೇ ನನ್ನ ಪತಿಯನ್ನು ಹುಡುಕಿ ಕೊಡಿ ಎಂದು ಠಾಣೆಯ ಮುಂದೆ ಗ್ರಾ.ಪಂ ಸದಸ್ಯೆ ವಾಣಿಶ್ರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿ ತಾಲೂಕಿನ ಮಾರಿಹಾಳ ಠಾಣೆ ಎದರು ವಾಣಿಶ್ರೀ ಧರಣಿ ನಡೆಸುತ್ತಿದ್ದಾರೆ. 25 ದಿನಗಳ ಹಿಂದೆ ಪತಿ ಪರಸ್ತ್ರೀ ಜೊತೆಗೆ ಒಡಿ ಹೋಗಿದ್ದಾನೆ, ಮಾಸಾಬಿ ಎಂಬ ವಿವಾಹಿತ ಜೊತೆಗೆ ಬಸವರಾಜ್ ಓಡಿ ಹೋಗಿದ್ದಾನೆ ಎಂದು ಆರೋಪಿಸುತ್ತಿದ್ದು ಮಾರಿಹಾಳ ಠಾಣೆಗೆ ದೂರು ನೀಡಲು ಬಂದರೂ ಸಹ ಪೊಲೀಸರು ಸ್ಪಂದಿಸುತ್ತಿಲ್ಲ ಪೊಲೀಸರು ಸುಳ್ಳು ಹೇಳುತ್ತಿದ್ದಾರೆ ಎಂದು ವಾಣಿಶ್ರೀ ಆರೋಪಿಸಿದ್ದಾರೆ. ನನ್ನ ಮಕ್ಕಳು ಕೂಡ ಕರೆದುಕೊಂಡು ಹೋಗಿದ್ದಾನೆ. ಆಕೆ ನನ್ನ ಮಕ್ಕಳನ್ನು ನೋಡಿಕೊಳ್ಳುತ್ತೇನೆ ಎಂದು ಕರೆ ಮಾಡಿ ಹೇಳುತ್ತಾಳೆ. ಹಾಗಾಗಿ ಅವಳು ಆಕೆ…
ಉತ್ತರಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಅಮಾನವೀಯ ಘಟನೆ ನಡೆದಿದ್ದು, ಗರ್ಭ ಧರಿಸಿದ್ದ ಹಸುವಿನ ರುಂಡವನ್ನೇ ಕತ್ತರಿಸಿರುವ ದುರುಳರು ದೇಹವನ್ನು ಕೊಂಡೊಯ್ದಿರುವ ಘಟನೆ ನಡೆದಿದೆ. ಹೌದು ಇಂತಹ ಒಂದು ಕೃತ್ಯ ಎಸಗಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೃಷ್ಣ ಆಚಾರಿ ಎಂಬುವವರಿಗೆ ಸೇರಿದ ಹಸುವನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ನಿನ್ನೆ ಮೇವಿಗಾಗಿ ಬಿಟ್ಟಿದ್ದ ಹಸು ರಾತ್ರಿಯಾದರೂ ಬಂದಿರಲಿಲ್ಲ. ಬೆಳಿಗ್ಗೆ ಹಸುವಿಗಾಗಿ ಮಾಲೀಕ ಕೃಷ್ಣ ಆಚಾರ್ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಹಸುವಿನ ರಕ್ತ, ಕಾಲು, ರುಂಡ ಪತ್ತೆಯಾಗಿದೆ. ದುಷ್ಕರ್ಮಿಗಳು ಕೇವಲ ಹಸುವಿನ ರುಂಡವನ್ನು ಮಾತ್ರ ಅಲ್ಲಿ ಬಿಟ್ಟು ದೇಹವನ್ನು ಸೇವನಿಗೆ ಎಂದು ತೆಗೆದುಕೊಂಡು ಹೋಗಿದ್ದಾರೆ ಎಂದು ಹಸುವಿನ ಮಾಲೀಕರಾದಂತಹ ಕೃಷ್ಣ ಆಚಾರಿ ಅನುಮಾನ…
ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಆಗಾಗ ಅಹಿತಕರ ಘಟನೆಗಳು ಹಾಗೂ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುತ್ತವೆ. ಇದೀಗ ನಮ್ಮ ಮೆಟ್ರೋ ಟ್ರ್ಯಾಕ್ ಕೆಳಬಾಗದಲ್ಲಿರುವಂತಹ ಲಕ್ಷಾಂತರ ಮೌಲ್ಯದ ಕಾಪರ್ ವಿದ್ಯುತ್ ಕೇಬಲ್ ಅನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದಾರೆ. ಆದರೆ ಮೆಟ್ರೋ ಸಿಬ್ಬಂದಿಗಳೇ ಈ ಒಂದು ಕೃತ್ಯ ಎಸಗಿದ್ದಾರೆ ಎನ್ನುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಹೌದು ನಮ್ಮ ಮೆಟ್ರೋ ರೈಲು ಟ್ರ್ಯಾಕ್ ಕೆಳಭಾಗದ ವಿದ್ಯುತ್ ಕೇಬಲ್ ಕಳುವು ಪಿಲ್ಲರ್ 12, 13 ಮತ್ತು 14ರ ಬಳಿ ಅಳವಡಿಸಿದ್ದ ಪವರ್ ಕೇಬಲ್ ಅನ್ನು ಕಳ್ಳತನ ಮಾಡಲಾಗಿದೆ. ಪೀಣ್ಯ, ರಾಜಾಜಿನಗರ ಹಾಗೂ ಬಸವನಗುಡಿಯ ಮೆಟ್ರೋ ಮಾರ್ಗದಲ್ಲಿ ಕೇಬಲ್ ಕಳ್ಳತನ ಮಾಡಲಾಗಿದೆ. ಉದ್ದದ ವಿದ್ಯುತ್ ಕೇಬಲ್ ಗಳನ್ನು ತುಂಡು ತುಂಡಾಗಿ ಮಾಡಿ ಕಳುವು ಮಾಡಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಕಾಪರ್ ವಿದ್ಯುತ್ ಕೇಬಲ್ ಇದೀಗ ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ.ಪವರ್ ಕೇಬಲ್ ಕಳವು ಹಿಂದೆ ಮೆಟ್ರೋ ಸಿಬ್ಬಂದಿಗಳ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ.ಈ ಬಗ್ಗೆ ಮೆಟ್ರೋ ಸಹಾಯಕ ಭದ್ರತಾ ಅಧಿಕಾರಿ…
ರಾಯಚೂರು : ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ನಾನು ರೈತನಾಯಕ ಬಿಎಸ್ ಯಡಿಯೂರಪ್ಪ ಅBIG NEWS : ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ಬಿವೈ ವಿಜಯೇಂದ್ರ ಹೇಳಿಕೆವರ ಮಗನಾಗಿ ಹೇಳುತ್ತಿದ್ದೇನೆ ಎಂದು ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಮಾತನಾಡಿದ ಬಿ ವೈ ವಿಜೇಂದ್ರ ಅವರು, ವಿರೋಧಿ ಬಣಕ್ಕೆ ತಿರುಗೇಟು ನೀಡಿದ್ದಾರೆ. ಶಿಕಾರಿಪುರಕ್ಕೆ ಸೀಮಿತವಾಗದೆ ಪಕ್ಷವನ್ನು ಸಂಘಟನೆ ಮಾಡುತ್ತಿದ್ದೇನೆ ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಗುರು ಹಿರಿಯರ ಆಶೀರ್ವಾದದಿಂದ ನಾನು ಮುನ್ನಡೆಯುತ್ತಿದ್ದೇನೆ. ಭಗವಂತನ ಕೃಪೆ ಹರ ಗುರು ಚರಮೂರ್ತಿಗಳ ಆಶೀರ್ವಾದ ಇದೆ. ಮುಂದಿನ ದಿನಗಳಲ್ಲಿ ಭಗವಂತ ಶಕ್ತಿ ಕೊಟ್ಟಾಗ ಕೆಲಸ ಮಾಡುತ್ತೇನೆ ಎಂದರು. ನೀರಾವರಿ ಯೋಜನೆಗಳು ಯುವಕರಿಗೆ ಉದ್ಯೋಗ ಕಲ್ಪಿಸುತ್ತೇನೆ. ಈಗಲೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. ಭಗವಂತ ಶಕ್ತಿ ಕೊಟ್ಟರೆ ಸರ್ವಾಂಗೀನ…













