Author: kannadanewsnow05

ಮಂಡ್ಯ : ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಹೃದಯಾಘಾತಕ್ಕೆ ಮತ್ತೋರ್ವ ಬಾಲಕ ಸಾವನ್ನಪ್ಪಿದ್ದಾನೆ. ಹೌದು ಹಬ್ಬದ ಸಂಭ್ರಮದಲ್ಲಿದ್ದ 17 ವರ್ಷದ ಬಾಲಕನಿಗೆ ಹೃದಯಾಘಾತವಾಗಿ ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಮಲ್ಲಿಗೇರೆ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿ ಚಿರಾಗ್, ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ನಿನ್ನೆ ಸಂಜೆ, ಹಬ್ಬದ ಸಿದ್ಧತೆಗಾಗಿ ಚಿರಾಗ್ ತನ್ನ ತಂದೆ-ತಾಯಿಯೊಂದಿಗೆ ಬಟ್ಟೆ ಖರೀದಿಗೆ ತೆರಳಿದ್ದ. ಈ ವೇಳೆ ಏಕಾಏಕಿ ಅವನಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾನೆ. ಕೂಡಲೇ ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರಾದರೂ, ಆಸ್ಪತ್ರೆಗೆ ತಲುಪುವ ಮುನ್ನವೇ ಚಿರಾಗ್ ಕೊನೆಯುಸಿರೆಳೆದಿದ್ದಾನೆ. ಈ ಘಟನೆ ಕುಟುಂಬದವರಿಗೆ ಮತ್ತು ಗ್ರಾಮಸ್ಥರಿಗೆ ಆಘಾತವನ್ನುಂಟುಮಾಡಿದೆ. ಚಿರಾಗ್‌ನ ಆಕಸ್ಮಿಕ ಸಾವಿನಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಸಾವಿಗೆ ಹೃದಯಾಘಾತವೇ ಕಾರಣ ಎಂದು ದೃಢಪಟ್ಟಿದೆ. ಯುವ ವಯಸ್ಸಿನಲ್ಲೇ ಇಂತಹ ದುರಂತ ಸಂಭವಿಸಿದ್ದು, ಆರೋಗ್ಯದ ಕಡೆಗೆ…

Read More

ಬೆಂಗಳೂರು : ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಜಗದೀಶ್​ನನ್ನು ಕೊನೆಗೂ ಬಂಧಿಸಲಾಗಿದೆ. ದುಬೈನಿಂದ ದೆಹಲಿಗೆ ಬಂದಿಳಿದ ಜಗದೀಶ್​ನನ್ನು ಬಂಧಿಸಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಈಗಾಗಲೇ 16 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಪ್ರಮುಖ ಆರೋಪಿ ಜಗದೀಶ್​ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕಾರಣ ಬಂಧನ ಸಾಧ್ಯವಾಗಿರಲಿಲ್ಲ. ದೇಶದ ಹಲವೆಡೆ ಆತನ ಪತ್ತೆಗೆ ತೀವ್ರ ಶೋಧ ನಡೆಸಿದ್ದ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು, ಆತನ ಇರುವಿಕೆ ಬಗ್ಗೆ ಮಾಹಿತಿ ಪಡೆಯುವ ಸಲುವಾಗಿ ಲುಕ್ ಔಟ್ ಸಕ್ಯೂರ್ಲರ್ (ಎಲ್ಓಸಿ) ಜಾರಿಗೊಳಿಸಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಯ ವಿಶೇಷ ತನಿಖಾ ತಂಡ (ಎಸ್ಐಟಿ)ದ ಹೆಗಲಿಗೆ ವಹಿಸಲಾಗಿತ್ತು. ಪ್ರಕರಣದ ಹಿನ್ನೆಲೆ ಜುಲೈ 15ರಂದು ರಾತ್ರಿ ಹಲಸೂರಿನ ಮನೆಯ ಬಳಿಯೇ​​ ಮಾರಕಾಸ್ತ್ರಗಳಿಂದ ಹೊಡೆದು ಶಿವಪ್ರಕಾಶ್​ನನ್ನು ಹತ್ಯೆಗೈಯ್ಯಲಾಗಿತ್ತು. ಕಿತ್ತಕನೂರು ಬಳಿ ಖರೀದಿಸಿದ್ದ ನಿವೇಶನವೊಂದರ ಸಂಬಂಧಿಸಿದಂತೆ ಆರೋಪಿಗಳು ಬಿಕ್ಲು ಶಿವನಿಗೆ ಪ್ರಾಣ…

Read More

ಬೆಂಗಳೂರು : ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ಆರ್ ಎಸ್ ಎಸ್ (RSS) ಗೀತೆಯನ್ನು ಹಾಡಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಇದೆ ವಿಚಾರವಾಗಿ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಹೌದು ಕಳೆದ ಗುರುವಾರ ವಿಧಾನಸಭೆಯಲ್ಲಿ ನಿಂತು ಸದನವನ್ನು ಉದ್ದೇಶಿಸಿ ಮಾತನಾಡುತ್ತಾ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಗೀತೆ ಪಠಿಸಿದ್ದಾರೆ. ಬಿಜೆಪಿ ಶಾಸಕ ಆರ್. ಅಶೋಕ್ ಈ ಅವಘಡದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಶಿವಕುಮಾರ್ ಅವರ ಪಾತ್ರವನ್ನು ನೇರವಾಗಿ ಪ್ರಶ್ನಿಸಿದ್ದಾರೆ ಇದಕ್ಕೆ ಪ್ರತಿಕ್ರಿಯೆಯಾಗಿ, ಉಪಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆಯನ್ನು ಪಠಿಸುವ ಮೊದಲು ವಿರೋಧ ಪಕ್ಷವು ಹಳೆಯ ವಾದಗಳನ್ನು ಪುನರಾವರ್ತಿಸುತ್ತಿದೆ ಎಂದು ಆರೋಪಿಸಿದರು. ಈ ಘಟನೆಯ 73 ಸೆಕೆಂಡುಗಳ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಿಜೆಪಿ ಸದಸ್ಯರ ಸ್ಪಷ್ಟ ಪ್ರತಿಕ್ರಿಯೆಗಳ ನಡುವೆ ಶಿವಕುಮಾರ್ ಅವರ ವಾಚನವನ್ನು ತೋರಿಸುತ್ತದೆ. ಇನ್ನು ಇದೆ ವಿಚಾರವಾಗಿ ನಿನ್ನೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ MLC ಬಿಕೆ ಹರಿಪ್ರಸಾದ್,…

Read More

ಬೆಂಗಳೂರು : ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ಮಾಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ರಿಂದ ಮೂವರು ಆರೋಪಿಗಳನ್ನ ಇದೀಗ ಅರೆಸ್ಟ್ ಮಾಡಲಾಗಿದೆ. ಆರೋಪಿಗಳಾದ ತಬ್ರಾಜ್, ಇಮ್ರಾನ್ ಖಾನ್ ಹಾಗೂ ಅಜೀಜ್ ಖಾನ್ ಎಂಬ ಮೂವರು ಆರೋಪಿಗಳನ್ನು ಕಲಾಸಿಪಾಳ್ಯ ಠಾಣೆ ಪಡಿಸಲು ಅರೆಸ್ಟ್ ಮಾಡಿದ್ದಾರೆ. ಮೂವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಆಗಸ್ಟ್ 24ರಂದು ಸುರೇಂದ್ರ ಕುಮಾರ್ ಮೇಲೆ ಮೂವರು ಆರೋಪಗಳು ಹಲ್ಲೆ ಮಾಡಿದ್ದಾರೆ ಕೇಸರಿ ಶಾಲು ಹಾಕಿದ್ದಕ್ಕೆ ಆರೋಪಿಗಳು ಹಲ್ಲೆ ನಡೆಸಿದ್ದರು. ಆಗಸ್ಟ್​ 24ರ ರಾತ್ರಿ 9:30ರ ಸುಮಾರಿಗೆ ಸುರೇಂದ್ರ ಕುಮಾರ್​ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಆ.24 ರ ರಾತ್ರಿ 9:30ರ ಸುಮಾರಿಗೆ ರಾಯಲ್ ಟ್ರಾವೆಲ್ಸ್ ಕಂಪನಿಯಲ್ಲಿ ಹಲ್ಲೆಗೊಳಗಾದ ಸ್ಲಿಂದರ್ ಕುಮಾರ್ ಮತ್ತು ಹರಿಕೃಷ್ಣ ಕೆಲಸ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಇವರ ಬಳಿಗೆ ಬಂದು, ಸ್ವಿಂದರ್ ಕುಮಾರ್ ಅವರನ್ನು ನಿಲ್ಲಿಸಿಕೊಂಡು “ನೀನು ಯಾಕೆ ಕೇಸರಿ ಟಾವೆಲ್ ಹಾಕಿದ್ದೀಯಾ ಎಂದು ಅವಾಚ್ಯ ಶಬ್ದಗಳಿಂದ ಬೈದು ತಳ್ಳಿದ್ದಾರೆ. ಇದನ್ನು,…

Read More

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ SIT ಅಧಿಕಾರಿಗಳು ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದು ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಮಾಸ್ಕ್ ಮ್ಯಾನ್ ಚಿನ್ನಯ್ಯನ ಮೊಬೈಲ್ ತಿಮರೋಡಿ ಮನೆಯಲ್ಲಿ ಪತ್ತೆಯಾಗಿದೆ. ಅಲ್ಲದೆ ಎಸ ಐ ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೊಡಿ ಮನೆಯ ಸಿಸಿಟಿವಿ ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದೆ. ಹೌದು ಮಹೇಶ್ ಶೆಟ್ಟಿ ತಿಮರೊಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದೆ. ಎಸ್ಐಟಿಸಿ ಅಧಿಕಾರಿಗಳು ಚಿನ್ನಯ್ಯನ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಅಲ್ಲದೆ ಈ ಒಂದು ಗ್ಯಾಂಗ್ ರಾಜ್ಯದ ಪ್ರತಿಷ್ಠಿತ ಸ್ವಾಮೀಜಿಯವರನ್ನು ಸಹ ಭೇಟಿ ಮಾಡಿದರು ಎಂದು ಮತ್ತೊಂದು ಸ್ಪೋಟಕ ಅಂಶ ಬೆಳಕಿಗೆ ಬಂದಿದೆ.

Read More

ಬೆಂಗಳೂರು: ಸರ್ಕಾರಿ ನೌಕರನ ಪತ್ನಿ ಆತನಗಿಂತಲೂ ಮೊದಲೇ ನಿಧನರಾಗಿ ಆಕೆಗೆ ಮಕ್ಕಳಿಲ್ಲವಾದರೆ ಅಂತಹ ಪ್ರಕರಣಗಳಲ್ಲಿ ನೌಕರನ ಸಹೋದರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯುವ ಹಕ್ಕಿರಲಿದೆ ಎಂದು ಹೈಕೋರ್ಟ್ ಸ್ಪಷ್ಟ ಪಡಿಸಿದೆ. ವಿಜಯಪುರದ ಮುದ್ದೇಬಿಹಾಳದ ಅರಸನಾಳ ಗ್ರಾಮದ ಮೃತ ಉದ್ಯೋಗಿ ವೀರೇಶ್ ಮಂಟಪ್ಪ ಲೋಳಸರ ಅವರ ತಾಯಿ ಮಾಂತವ್ವ ಹಾಗೂ ಸಹೋದರ ಸಂಗಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ. ಪ್ರಕರಣ ಹಿನ್ನೆಲೆ? ವೀರೇಶ್ ಮಂಟಪ್ಪ ಲೋಳಸರ ಅಧಿವರ ಪತ್ನಿ ಸುನಂದಾ 2022ರ ಏಪ್ರಿಲ್ 9ರಂದು ನಿಧನರಾಗಿದ್ದರು. ಅವರಿಗೆ ಮಕ್ಕಳಿರಲಿಲ್ಲ ಮತ್ತು ವೀರೇಶ್ ತಮ್ಮ ತಾಯಿ ಮತ್ತು ಸಹೋದರನನ್ನು ನೋಡಿಕೊಳ್ಳುತ್ತಿದ್ದರು. ಆದ್ದರಿಂದ, ತಾಯಿಯನ್ನು ನೋಡಿಕೊಳ್ಳುತ್ತಿರುವ ಅವರ ಸಹೋದರನಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಒದಗಿಸುವುದು ಸರಿಯಾಗಿಯೇ ಇದೆ ಎಂದು ನ್ಯಾಯಪೀಠ ಹೇಳಿದೆ.

Read More

ತಾರೀಕು 27:08:2025 ಬುಧವಾರದಂದು ಚತುರ್ಥಿ ತಿಥಿ, ಘಟಕ:18:27 (ಹಗಲು01:37pm ರವರೆಗೆ) ಶ್ರೀ ವರ ಸಿದ್ಧಿ ವಿನಾಯಕ ವ್ರತವನ್ನು ಆಚರಿಸಲಾಗುತ್ತದೆ. ಅದಕ್ಕೂ ಮುಂಚೆ ಶ್ರೀ ಗಣೇಶ ಮೂರ್ತಿಯನ್ನು ಮನೆಗೆ ತರಲು ಈ ರೀತಿ ಮಾಡಿರಿ… 1. ಶ್ರೀ ಗಣೇಶ ಮೂರ್ತಿಯನ್ನು ಮನೆಗೆ ತರಲು ಮನೆಯಲ್ಲಿನ ಕರ್ತ (ಪ್ರಮುಖ) ಪುರುಷನು ಇತರರೊಂದಿಗೆ ಹೋಗಬೇಕು, 2. ಮೂರ್ತಿಯನ್ನು ಕೈಯಲ್ಲಿ ತೆಗೆದುಕೊಳ್ಳುವವರು ಹಿಂದೂ ವೇಷಭೂಷಣವನ್ನುಧರಿಸಿರಬೇಕು ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. 3. ಮೂರ್ತಿಯನ್ನು ತರುವಾಗ ಅದರ ಮೇಲೆ ರೇಷ್ಮೆ ಹತ್ತಿ( ನೂಲಿನ) ಅಥವಾ ಖಾದಿಯ ಸ್ವಚ್ಛ ಬಟ್ಟೆಯನ್ನು ಹಾಕಬೇಕು. ಮೂರ್ತಿಯನ್ನು ಮನೆಗೆ ತರುವಾಗ ಮೂರ್ತಿಯ ಮುಖವು ತರುವವನ ಕಡೆ ಮತ್ತು ಬೆನ್ನು ಮುಂದಿನ ಬದಿಗಿರಬೇಕು.ಮೂರ್ತಿಯ ಮುಂಭಾಗದಿಂದ ಸುಗುಣ ತತ್ವ ಮತ್ತು ಹಿಂಭಾಗದಿಂದ…

Read More

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ SIT ಅಧಿಕಾರಿಗಳು ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದು ಶೋಧ ಕಾರ್ಯ ನಡೆಸಿದ್ದು, ಈ ವೇಳೆ ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದೆ. ಹೌದು ಮಹೇಶ್ ಶೆಟ್ಟಿ ತಿಮರೊಡಿ ಮನೆಯಲ್ಲಿ ಚೆನ್ನಯ್ಯನ ಮೊಬೈಲ್ ಪತ್ತೆಯಾಗಿದೆ. ಎಸ್ಐಟಿಸಿ ಅಧಿಕಾರಿಗಳು ಚಿನ್ನಯ್ಯನ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಅಲ್ಲದೆ ಈ ಒಂದು ಗ್ಯಾಂಗ್ ರಾಜ್ಯದ ಪ್ರತಿಷ್ಠಿತ ಸ್ವಾಮೀಜಿಯವರನ್ನು ಸಹ ಭೇಟಿ ಮಾಡಿದರು ಎಂದು ಮತ್ತೊಂದು ಸ್ಪೋಟಕ ಅಂಶ ಬೆಳಕಿಗೆ ಬಂದಿದೆ.

Read More

ಗುಜರಾತ್ : ಗುಜರಾತ್ ನಲ್ಲಿ ಘೋರ ದುರಂತವೊಂದು ನಡೆದಿದ್ದು, ಅಪಾರ್ಟ್​​ಮೆಂಟ್​​ನ ಲಿಫ್ಟ್ ನಲ್ಲಿ ಸಿಲುಕಿ ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಗುಜರಾತ್ ನ ನವ್ಸಾರಿ ಜಿಲ್ಲೆಯ ವಿಜಲ್ಪುರ್ ಪ್ರದೇಶದಲ್ಲಿ ನಡೆದಿದೆ.ನೀರವ್ ಸ್ಕ್ವೇರ್ ಅಪಾರ್ಟ್‌ಮೆಂಟ್‌ನಲ್ಲಿ ಎರಡನೇ ಮಹಡಿಯಿಂದ ಕೆಳಗೆ ಹೋಗುವಾಗ ಬಾಲಕ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ. ನಂತರ ಲಿಫ್ಟ್ ಅನ್ನು ಕಟ್ಟರ್‌ನಿಂದ ಕತ್ತರಿಸಿ ಬಾಲಕನನ್ನು ಹೊರ ತೆಗೆಯಲಾಯಿತು. ತಾಯಿ ಮನೆಗೆ ಬೀಗ ಹಾಕುತ್ತಿರುವಾಗ, ಬಾಲಕ ಲಿಫ್ಟ್​ ಒಳಗೆ ಪ್ರವೇಶಿಸಿದ್ದ, ಆ ಸಮಯದಲ್ಲಿ ಲಿಫ್ಟ್ ಸ್ಟಾರ್ಟ್ ಆಗಿ ಬಾಲಕ ಅದರಲ್ಲಿ ಸಿಲುಕಿಕೊಂಡಿದ್ದ.ತಾಯಿ ಕೂಡ ಲಿಫ್ಟ್ ನಲ್ಲಿ ಅವರನ್ನು ಹಿಂಬಾಲಿಸುತ್ತಿದ್ದರು, ಆದರೆ ಬಾಲಕ ಮೊದಲು ಒಳಗೆ ಪ್ರವೇಶಿಸಿದ್ದ ಕೂಡಲೇ ಲಿಫ್ಟ್​ ಸ್ಟಾರ್ಟ್​ ಆಗಿತ್ತು. ಘಟನೆಯ ಸಮಯದಲ್ಲಿ, ಲಿಫ್ಟ್ ಎರಡನೇ ಮಹಡಿಯಿಂದ ಕೆಳಗೆ ಇಳಿಯುತ್ತಿತ್ತು ಮತ್ತು ಬಾಲಕನ ದೇಹದ ಒಂದು ಭಾಗ ಲಿಫ್ಟ್‌ನಲ್ಲಿ ಸಿಲುಕಿಕೊಂಡಿತ್ತು.ಘಟನೆಯ ನಂತರ ತಕ್ಷಣವೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ಒಂದು ಗಂಟೆ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ, ಅಗ್ನಿಶಾಮಕ ಸಿಬ್ಬಂದಿ ಕಟ್ಟರ್ ಯಂತ್ರದ…

Read More

ಮೈಸೂರು : ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಈ ವಿಚಾರವಾಗಿ ಎಸ್​ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯ ಹೊರಬರುತ್ತದೆ, ಇದರಲ್ಲಿ ಯಾರು ರಾಜಕೀಯ ಮಾಡಬಾರದು. ಈ ಪ್ರಕರಣದಲ್ಲಿ ಎನ್​ಐಎ ತನಿಖೆಗೆ ವಹಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಮೈಸೂರಿನಲ್ಲಿ ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಆಯೋಜಿಸಿದ್ದ ಪರಮೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರವಾಗಿ ಸದನದಲ್ಲಿ ಈಗಾಗಲೇ ಉತ್ತರ ನೀಡಿದ್ದೇನೆ. ಸತ್ಯ ಹೊರಬರಬೇಕು ಎಂದು ಎಸ್​ಐಟಿ ರಚನೆ ಮಾಡಿದ್ದೇವೆ. ಈ ನಡುವೆ ಅನೇಕರು ಅನೇಕ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಹೇಳಿಕೆಗಳಿಂದ ಸತ್ಯ ಹೊರಬರುವುದಿಲ್ಲ, ಹೇಳಿಕೆ ನಿಲ್ಲಿಸಿ ತನಿಖೆ ಮುಂದುವರೆಸಲು ಅವಕಾಶ ಮಾಡಿಕೊಡಬೇಕು ಆವಾಗ ಸತ್ಯ ಹೊರಬರುತ್ತದೆ. ಇದರಲ್ಲಿ ರಾಜಕೀಯ ಮಾಡಬಾರದು. ಈ ಪ್ರಕರಣದಿಂದ ಸತ್ಯ ಹೊರಬರಬೇಕೆಂಬುದೇ ನಮ್ಮ ಉದ್ದೇಶ ಎಂದರು.

Read More