Author: kannadanewsnow05

ಮೈಸೂರು : ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ಮೈಸೂರಲ್ಲಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಜಿಲೇಟಿನ್ ಕಡ್ಡಿ ಬಾಯಿಯ ಒಳಗೆ ಹಾಕಿ ಸ್ಪೋಟಿಸಿ ಮಹಿಳೆಯ ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಕಿರಾತಕ ಮೊಬೈಲ್ ಬ್ಲಾಸ್ಟ್ ಕಥೆ ಕಟ್ಟಿದ್ದಾನೆ. ಹೌದು ಮೈಸೂರಿನ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಸಿದ್ದರಾಜು ಎಂಬಾತನಿಂದ ರಕ್ಷಿತಾ (20) ಎನ್ನುವ ಯುವತಿಯ ಭೀಕರ ಕೊಲೆಯಾಗಿದೆ. ರಕ್ಷಿತಾ ಹುಣಸೂರು ತಾಲೂಕಿನ ಗೆರಸನಹಳ್ಳಿ ಗ್ರಾಮದ ನಿವಾಸಿ ಆಗಿದ್ದು, ಇನ್ನು ಸಿದ್ದರಾಜು ಪಿರಿಯಾಪಟ್ಟಣ ಬಿಳಿಕೆರೆ ಗ್ರಾಮದ ನಿವಾಸಿಯಾಗಿದ್ದಾನೇ ಎಂದು ತಿಳಿದು ಬಂದಿದೆ. ಹತ್ಯೆಯಾದ ರಕ್ಷಿತಾ ಕೇರಳ ಮೂಲದ ವ್ಯಕ್ತಿಯನ್ನು ವಿವಾಹವಾಗಿದ್ದಳು. ಮದುವೆಯಾದರು ಸಹ ಸಿದ್ದರಾಜು ಜೊತೆಗೆ ರಕ್ಷಿತಾ ಆನಂತಿಕ ಸಂಬಂಧ ಇಟ್ಟುಕೊಂಡಿದ್ದಳು. ಅನೈತಿಕ ಸಂಬಂಧದಿಂದ ಇದೀಗ ರಕ್ಷಿತಾಳನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More

ಬೀದರ್ : ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೋಸ್ಲಾ ಗ್ರಾಮದ ಮೂಲದವರಾದ ತಾಯಿ ತುಕ್ಕಮ್ಮ ಕಿಶನ್ (56) ಹಾಗೂ ಮಗಳು ಸುರೇಖಾ ಗುಂಡಪ್ಪ (30) ಎಂದು ತಿಳಿದುಬಂದಿದೆ. ಮಹಾರಾಷ್ಟ್ರಕ್ಕೆ ಹೋಗಿದ್ದ ಇಬ್ಬರು ಬೈಕ್ ಮೇಲೆ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಹಾಲಿನ ಗೂಡ್ಸ್ ಗಾಡಿ ಟಿವಿಎಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯನನ್ನು ಅರೆಸ್ಟ್ ಮಾಡಿದ್ದು ಇನ್ನೊಂದು ಕಡೆ ಯೂಟ್ಯೂಬರ್ ಸಮೀರ್ ಎಂಡಿ ಎಂದು ಬೆಳತಂಗಡಿ ಠಾಣೆಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾನೆ. ಇದೇ ವಿಚಾರವಾಗಿ ಧರ್ಮಸ್ಥಳ ಪ್ರಕರಣ ಶೇಕಡ 90ರಷ್ಟು ಮುಗಿದಿದೆ ಮತ್ತು ಸಿಬಿಐಗೆ ಪ್ರಕರಣ ವಹಿಸುವ ಅಗತ್ಯವಿಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು. ಧರ್ಮಸ್ಥಳ ಪ್ರಕರಣದ ಕುರಿತು ಸತೀಶ್ ಜಾರಕಿಹೊಳಿ ಹೇಳಿಕೆಗೆ ನೆಲಮಂಗಲದಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ, ಪರಮೇಶ್ವರ್ ಕ್ಲಾರಿಟಿ ಕೊಡಬೇಕು ಎಂಬ ತೀರ್ಮಾನ ತೆಗೆದುಕೊಂಡಿದ್ದರಿಂದ ಒಂದು ಹಂತಕ್ಕೆ ಬಂದಿದೆ. ಎನ್‌ಐಎ, ಸಿಬಿಐ ಬೇಕಾಗಿಲ್ಲ, ನಮ್ಮ ಪೊಲೀಸರೇ ಸಮರ್ಥವಾಗಿದ್ದಾರೆ. ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಬಗ್ಗೆ ವ್ಯಾಪಕವಾಗಿ ಯೂಟ್ಯೂಬರ್ಸ್ ಪರ ಹಾಗೂ ವಿರೋಧ ಇದ್ದರೂ ಎಲ್ಲವೂ ಅಂತ್ಯವಾಗತ್ತದೆ ಎಂದರು. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿಚಾರದ ಕುರಿತು ಮಾತನಾಡಿ, ಅಬ್ದುಲ್ ಕಲಾಂ ರಾಷ್ಟ್ರಪತಿಯವರಾಗಿರಲಿಲ್ವಾ? ಅಬ್ದುಲ್ ಕಲಾಂ ರಾಷ್ಟ್ರಪತಿಯಾಗಿದ್ದಾರೆ ಅಂದ್ರೆ ಬಾನು ಮುಷ್ತಾಕ್ ಉದ್ಘಾಟನೆ ಮಾಡೋದ್ರಲ್ಲಿ ತಪ್ಪೇನಿದೆ? ಅವರು…

Read More

ಮೈಸೂರು : ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ? ಎಂದು ಸಾಹಿತಿ ಬಾನು ಮುಷ್ತಾಕ್ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪೋಸ್ಟ್ ಹಂಚಿಕೊಂಡಿರುವ ಅವರು, 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಬಾನು ಮುಷ್ತಾಕ್ ಮಾತನಾಡಿದ್ದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಬೂಕರ್ ಭಾನು? ಎಂದು ಬರೆದು ಅಸಮಾಧಾನ ಹೊರಹಾಕಿದ್ದಾರೆ. ಭಾಷಣದಲ್ಲಿ ಬಾನು ಮುಷ್ತಾಕ್ ಕನ್ನಡ ಬಾವುಟದ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಈಗ ಕನ್ನಡಿಗರ ಆಕ್ರೋಶಕ್ಕೂ ಗುರಿಯಾಗಿದೆ. ಬಾನು ಮುಸಲ್ಮಾನರು ಎಂಬ ಕಾರಣಕ್ಕೆ ನಾನು ಈ ಮಾತನ್ನು ಹೇಳುತ್ತಿಲ್ಲ. ನಿಮ್ಮ ಸಾಧನೆಗೆ ನಮ್ಮ ಹೆಮ್ಮಯಿದೆ. ನಿಮಗೆ ಬೂಕರ್ ಪ್ರಶಸ್ತಿ ಬಂದಿದೆ. ಇದು ರಾಜ್ಯದ ಜನರಿಗೆ ಖುಷಿ ಇದೆ. ಆದರೆ ದಸರಾ ಜಾತ್ಯತೀತತೆಯ ಪ್ರತೀಕ ಅಲ್ಲ, ಇದು ಧಾರ್ಮಿಕ ಆಚರಣೆ. ಇದು ನಮ್ಮ ಹಬ್ಬ. ಮೈಸೂರಿನ ಯದುವಂಶ…

Read More

ದಕ್ಷಿಣಕನ್ನಡ : ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ಕುರಿತು ಸುಮೊಟೊ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ 2ನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾನೆ. ಕಳೆದ ಎರಡು ದಿನಗಳಿಂದ ಬೆಂಗಳೂರು ಬಾಡಿಗೆ ಮನೆ ಹಾಗೂ ಬಳ್ಳಾರಿಯಲ್ಲಿರುವ ಸ್ವಂತ ಮನೆಗೆ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ಅಂಟಿಸಿ ಬಂದಿದ್ದರು. ನಿನ್ನೆ ಯೂಟ್ಯೂಬರ್ ಸಮೀರ್ ಮೂವರು ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದ. ಇದೀಗ ಇಂದು ಸಹ ಸಮೀರ್ 2ನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾನೆ. ಇನ್ನು ಇದೇ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಮತ್ತೊಂದು ಭೀಕರವಾದ ಮುರ್ಡರ್ ನಡೆದಿದ್ದು, ಯುವಕನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೀರಾಪುರ ಕಾಲೋನಿ ಅಲ್ಲಿ ಮರಿಯಪ್ಪ ಕಟ್ಟಿಮನಿ (24) ಎಂನುಗ ಯುವಕನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಕಲಬುರ್ಗಿ ತಾಲೂಕಿನ ಮೈನಾಳ ಗ್ರಾಮದ ನಿವಾಸಿಯಾಗಿರುವ ಮಾರಪ್ಪ, ಕೊಲೆ ಕುರಿತು ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾವೇರಿ : ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಡ್ಯಾನ್ಸ್ ಮಾಸ್ಟರ್ ಒಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾವೇರೀ ಜಿಲ್ಲೆಯ ಮೋಟೆ ಬೆನ್ನೂರು ಎಂಬಲ್ಲಿ ಚಿತ್ರದುರ್ಗ ಮೂಲದ ಲಿಂಗೇಶ ಎಂಬ ಡಾನ್ಸ್ ಮಾಸ್ಟರ್ ನನ್ನು ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ.ಹಂತಕರು ಕೊಲೆ ಬಳಿಕ ಶವದ ಬಳಿ ಬೈಕ್ ಚಾಕು ನೀರಿನ ಬಾಟಲ್ ಎಸೆದು ಪರಾರಿ ಆಗಿದ್ದಾರೆ.

Read More

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲರ್ಟ್​ ಘೋಷಣೆ: ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಲಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆಯ ವೈದ್ಯರು ಮಹಾ ಎಡವಟ್ಟು ಒಂದನ್ನು ಮಾಡಿದ್ದಾರೆ ವ್ಯಕ್ತಿಯ ಗಂಟಿನ ಆಪರೇಷನ್ ವೇಳೆ ಕರುಳು ಕಟ್ ಮಾಡಿರುವ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಹೌದು ಹೊಟ್ಟೆ ನೋವೆಂದು ವ್ಯಕ್ತಿಯೊಬ್ಬರು ಜೂನ್ 20ರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ವೈದ್ಯರು ವ್ಯಕ್ತಿಯ ಹೊಟ್ಟೆಯಲ್ಲಿ ಗಂಟು ಇರೋದು ಕಂಡು ಬಂದಿದೆ. ಬಳಿಕ ವ್ಯಕ್ತಿಗೆ ಆಪರೇಷನ್ ಮಾಡಬೇಕು ಎಂದು ಹೇಳಿದ್ದಾರೆ. ಈ ವೇಳೆ ವೈದ್ಯರು ವ್ಯಕ್ತಿಗೆ ಆಪರೇಷನ್ ಮಾಡುವಾಗ ಗಂಟು ಸಮೇತ ಕರುಳು ಸಹ ಕಟ್ ಮಾಡಿದ್ದಾರೆ. ಮಹೇಶ್ ಮಾದರ್ ಎನ್ನುವ ವ್ಯಕ್ತಿಯ ಕರುಳು ಕಟ್ ಮಾಡಿದ್ದಾರೆ ಜೂನ್. 20 ರಂದು ಹೊಟ್ಟೆ ನೋವು ಎಂದು ಮಹೇಶ್ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನವೇ ಬಿಮ್ಸ್ ವೈದ್ಯರು ಆಪರೇಷನ್ ಮಾಡಿದ್ದಾರೆ ಕರುಳು ಕಟ್ ಮಾಡಿ ವೈದ್ಯರು ಹೊಲಿಗೆ ಹಾಕಿ ಕಳುಹಿಸಿದ್ದಾರೆ ಮನೆಗೆ ಹೋದ ಬಳಿಕ ಮಹೇಶ್ ಗೆ ಮತ್ತೆ ವಿಪರೀತ ಹೊಟ್ಟೆ ನೋವು ಕಂಡು ಬಂದಿದೆ ಸ್ಕ್ಯಾನ್…

Read More

ಕೇರಳ : ಹಲವಾರು ಮಹಿಳೆಯರಿಂದ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಮ್‌ಕೂಟತಿಲ್ ರಾಜೀನಾಮೆ ನೀಡಿದ ಒಂದು ದಿನದ ನಂತರ, ಇದೀಗ ಶಾಸಕ ರಾಹುಲ್ ನನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿದೆ. ಹೌದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಶಾಸಕ ರಾಹುಲ್ ಮಮಕೂಟತಿಲ್ ನನ್ನ ಇದೀಗ ಕಾಂಗ್ರೆಸ್ ಅಮಾನತು ಗೊಳಿಸಿದೆ. ಕೇರಳದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಾಹುಲ್ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಇದೀಗ ಕಾಂಗ್ರೆಸ್ ಅಮಾನತುಗೊಳಿಸಿದೆ.

Read More