Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದರ ಹಿನ್ನೆಲೆಯಲ್ಲಿ ನಿನ್ನೆ ಲೋಕಾಯುಕ್ತ ಅಧಿಕಾರಿಗಳು ಓರ್ವ ಐಎಎಸ್ ಅಧಿಕಾರಿ ಸೇರಿದಂತೆ 8 ಸರಕಾರಿ ಅಧಿಕಾರಿಗಳ ನಿವಾಸದ ಮೇಲೆ ದಾಳಿ ಮಾಡಿದ್ದು ದಾಳಿಯ ವೇಳೆ ಚಿನ್ನ ನಗದು ಸೇರಿದಂತೆ ಒಟ್ಟು 37.41 ಕೋಟಿಯ ಆಸ್ತಿ ಪತ್ತೆಯಾಗಿದೆ. ಹೌದು ನಿನ್ನೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ 41 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಪ್ರಮಾಣದ ಚರ-ಸ್ಥಿರಾಸ್ತಿ ಪತ್ತೆ ಮಾಡಿದ್ದಾರೆ.ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದರು. ಐಐಎಸ್ ಮಹಿಳಾ ಅಧಿಕಾರಿ ಒಳಗೊಂಡಂತೆ ಎಂಟು ಮಂದಿ ಅಧಿಕಾರಿಗಳ ಮನೆಗಳ ದಾಳಿ ನಡೆಸಿದ್ಧಾರೆ. ದಾಳಿ ವೇಳೆ ಮನೆಯಲ್ಲಿ ಅಪಾರ ಪ್ರಮಾಣದ ಆಸ್ತಿ, ಜಮೀನಿಗೆ ಸೇರಿದ ಪತ್ರಗಳು, ಲಕ್ಷಾಂತರ ರೂಪಾಯಿ ನಗದು, ಕೋಟಿ ಬೆಳೆಬಾಳುವ ಚಿನ್ನಾಭರಣ ಸೇರಿದಂತೆ ಒಟ್ಟು 37.41 ಕೋಟಿ ರೂ ಮೌಲ್ಯದ ಆಸ್ತಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು…
ಹೈದ್ರಾಬಾದ್ : ಇತ್ತೀಚಿಗೆ ಆನ್ ಲೈನ್ ಗೇಮ್ ನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಿದ್ದು, ಇದೀಗ ಹೈದ್ರಾಬಾದ್ ನಲ್ಲಿ 23 ವರ್ಷದ ಯುವಕನೊಬ್ಬ ಆನ್ಲೈನ್ ಗೇಮಿಂಗ್ ಆದ ಲುಡೋದಲ್ಲಿ ಸುಮಾರು 5 ಲಕ್ಷ ರೂ. ಹಣವನ್ನು ಕಳೆದುಕೊಂಡ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ನಲ್ಲಿ ಲುಡೋ ಗೇಮ್ನಲ್ಲಿ ಭಾರೀ ಹಣ ಕಳೆದುಕೊಂಡ ನಂತರ ಆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಗಡ್ಡಮೀಡಿ ವೆಂಕಟೇಶ್ (23) ಎಂದು ಗುರುತಿಸಲಾಗಿದ್ದು, ರೋಸ್ಟ್ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ.ವೆಂಕಟೇಶ್ ಮೂಲತಃ ಮಹಬೂಬ್ನಗರ ಜಿಲ್ಲೆಯ ನರ್ವಾ ಮಂಡಲದ ಜಕ್ಲರ್ ಗ್ರಾಮದವನು. ಅವನು 4 ವರ್ಷಗಳ ಹಿಂದೆ ಹೈದರಾಬಾದ್ಗೆ ತೆರಳಿದ್ದ. ಅಲ್ಲಿ ಅವನು ರೋಸ್ಟ್ ಕೆಫೆಯಲ್ಲಿ ತೋಟಗಾರನಾಗಿ ಕೆಲಸ ಮಾಡುತ್ತಿದ್ದ. ವೆಂಕಟೇಶ್ ಮೊಬೈಲ್ ಅಪ್ಲಿಕೇಶನ್ ಮೂಲಕ ಲುಡೋ ಆಟವನ್ನು ಆಡುತ್ತಿದ್ದನು. ಅಲ್ಲಿ ಬೆಟ್ಟಿಂಗ್ ಮಾಡಿದ್ದ. ಅವನು ಆಟವಾಡುವಾಗ 5 ಲಕ್ಷ ರೂಪಾಯಿಗಳನ್ನು ಕಳೆದುಕೊಂಡನು. ಅಪಾರ ಆರ್ಥಿಕ ನಷ್ಟದಿಂದ ತೀವ್ರವಾಗಿ ಮನನೊಂದ ಅವನು ಆತ್ಮಹತ್ಯೆ ಮಾಡಿಕೊಳ್ಳುವ…
ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಡ್ರಗ್ಸ್, ಮಾದಕ ವಸ್ತುಗಳ ಮಾರಾಟ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತು ಸಾಗಣೆ-ಬಳಕೆ ನಿಯಂತ್ರಣಕ್ಕೆ ಗುರಿ ನಿಗದಿಪಡಿಸುವ ಮೂಲಕ ರಾಜ್ಯವನ್ನು ಮಾದಕ ಮುಕ್ತವನ್ನಾಗಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದರು. ನಿನ್ನೆ ವಿಧಾನಸೌಧದಲ್ಲಿ ನಡೆದ 6ನೇ ರಾಜ್ಯ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡ್ರಗ್ಸ್ ತಡೆಗೆ ಸಂಬಂಧಿಸಿದಂತೆ ಮಾಹಿತಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ವೆಬ್ಸೈಟ್ ನವೀಕರಿಸಬೇಕು. ಜತೆಗೆ ಬೆಳಗಾವಿ ಜಿಲ್ಲೆಯಲ್ಲಿ ಅನುಸರಿಸುತ್ತಿರುವ ಕ್ರಮವನ್ನು ಮಾದರಿಯಾಗಿಸಿ ಕೊಂಡು ಇತರ ಜಿಲ್ಲೆಗಳಲ್ಲೂ ಅನುಸರಿಸಬೇಕು. ಮಾದಕ ವಸ್ತುಗಳ ಕಳ್ಳ ಸಾಗಣೆ ತಡೆಯಲು ವಿಮಾನನಿಲ್ದಾಣಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು. ಕಸ್ಟಮ್ಸ್ ಅಧಿಕಾರಿಗಳನ್ನು ಸಮಿತಿಗೆ ಆಹ್ವಾನಿಸಬೇಕು ಎಂದು ಸೂಚಿಸಿದರು. ನೋಂದಾಯಿತವಲ್ಲದ ಔಷಧ ಸಂಸ್ಥೆಗಳನ್ನು ಗುರುತಿಸಿ ಅವುಗಳವಿರುದ್ಧಕ್ರಮಕೈಗೊಳ್ಳಬೇಕು. ವ್ಯಸನ ಮುಕ್ತ ಕೇಂದ್ರಗಳ ನಿರ್ವಹಣೆಗೆ ಸುಧಾರಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ಗಳನ್ನು ರೂಪಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಜಿಲ್ಲಾಧಿಕಾರಿಗಳು ಪ್ರತಿ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಟ ದರ್ಶನ್ ಹಾಗು 7 ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಇಂದು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ ಮನವಿಯ ಅರ್ಜಿಯ ವಿಚಾರಣೆ ನಡೆಯಲಿದೆ ಹಾಗಾಗಿ ನಟ ದರ್ಶನ್ ಗೆ ಇಂದು ಬಿಗ್ ಡೇ ಅಂತಾನೆ ಹೇಳಬಹುದು. ಹೌದು ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ನಲ್ಲಿ ಜಾಮೀನು ರದ್ದು ಕೋರಿದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ನಟ ದರ್ಶನ್ ಪರವಾಗಿ ವಕೀಲ ಸಿದ್ಧಾರ್ಥ ದವೆ ವಾದ ಮಂಡಿಸಲಿದ್ದಾರೆ. ಈಗಾಗಲೇ ಸುಪ್ರೀಂ ಕೋರ್ಟ್ ಕೇಸಿನ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದೆ. ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಅಂತಿಮ ಆದೇಶ ನೀಡುವ ಸಾಧ್ಯತೆ ಇದೆ. ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ ಹೈಕೋರ್ಟ್…
ರಾಯಚೂರು : ನಿನ್ನೆ ರಾಯಚೂರಲ್ಲಿ ಘೋರ ದುರಂತವೊಂದು ನಡೆದಿದ್ದು, ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಮರವೊಂದು ಮುರಿದುಬಿದ್ದು ಗಂಡ-ಹೆಂಡತಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡಿದಿದೆ. ಮೃತರನ್ನು ನಾಗಲಾಪುರ ಗ್ರಾಮದ ರಮೇಶ್ (26) ಮತ್ತು ಅನುಸೂಯಾ (24) ಎಂದು ತಿಳಿದುಬಂದಿದೆ.ದಂಪತಿಯು ಮುದಗಲ್ನಿಂದ ನಾಗಲಾಪುರಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ದಂಪತಿಯ ಮೂರು ವರ್ಷದ ಮಗು ಸೌಜನ್ಯಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಗುವನ್ನು ಮುದಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು : ಅಭಿನಯ ಸರಸ್ವತಿ ಎಂದೇ ಖ್ಯಾತಿ ಹೊಂದಿದ್ದ ಹಿರಿಯ ಬಹುಭಾಷಾ ನಟಿ ಬಿ ಸರೋಜಾದೇವಿ ಇತ್ತೀಚಿಗೆ ನಿಧನರಾಗಿದ್ದಾರೆ. ಇನ್ನೂ ಬಿ ಸರೋಜಾದೇವಿ ನೆನಪು ಮಾತ್ರ.ಇದೀಗ, ಬಿ. ಸರೋಜಾದೇವಿ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಬೇಕೆಂದು ಮನವಿ ಮಾಡಲಾಗಿದೆ. ಹೌದು ನಿನ್ನೆ ಹಿರಿಯ ನಟಿ, ಬಿಜೆಪಿ ಮುಖಂಡರಾದ ತಾರಾ ಅನುರಾಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ ಅವರನ್ನು ಭೇಟಿ ಮಾಡಿದ ತಾರಾ, ಹಿರಿಯ ಕಲಾವಿದೆ ದಿ.ಬಿ. ಸರೋಜಾದೇವಿ ಅವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದರು. ನಂತರ ಮುಖ್ಯಮಂತ್ರಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡ ಸಿಎಂ, ಜನರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು. https://twitter.com/CMofKarnataka/status/1947931955376623901?t=lcjtsyJC0XWwgVMhedu_oA&s=19
ಮಂಗಳೂರು : ಇಂದು ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ ಜಿಲ್ಲೆಗಳ ಎಲ್ಲ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ತಾಲೂಕಿನಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ವರೆಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ನದಿ, ಸಮುದ್ರ ತೀರ ಪ್ರದೇಶಗಳಿಗೆ ಸಾರ್ವಜನಿಕರು ತೆರಳದಂತೆ ಸೂಚನೆ ನೀಡಿದ್ದಾರೆ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ ಇನ್ನು ಭಾರಿ ಮಳೆ ಹಿನ್ನೆಲೆಯಲ್ಲಿ ಎಂದು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ, ಐಟಿಐ ಕಾಲೇಜು ಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಇಂದು ರಜೆ ನೀಡಿ ಉಡುಪಿ ಜಿಲ್ಲಾಧಿಕಾರಿ ಟೀ.ಕೆ ಸ್ವರೂಪ ಆದೇಶ ಹೊರಡಿಸಿದ್ದಾರೆ
ಬೆಂಗಳೂರು : ಬೆಂಗಳೂರಲ್ಲಿ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಉತ್ತರ ಪ್ರದೇಶ ಮೂಲದ ಸುಮನ್ (22) ಮೃತ ಮಹಿಳೆ ಎಂದು ತಿಳಿದುಬಂದಿದೆ. ಸುಮನ್ ಪತಿ ಶಿವಂ ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಕಳೆದ ಎರಡು ದಿನಗಳ ಹಿಂದೆಯೇ ಮಹಿಳೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮನೆಯ ಮಾಲೀಕ ಬಾಡಿಗೆ ಕೇಳಲು ಬಂದಾಗ ಈ ಒಂದು ಪ್ರಕರಣ ಬಯಲಿಗೆ ಬಂದಿದೆ. ಗಂಡ ಶಿವಂ ಇಂದು ಬೆಳಿಗ್ಗೆ ಮನೆಯಿಂದ ಹೊರ ಹೋಗಿದ್ದ. ಪತ್ನಿ ಮೃತಪಟ್ಟರು ಪತಿ ಶಿವಂ ಮೃತದೇಹದ ಜೊತೆಯಲ್ಲಿಯೇ ಇದ್ದ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪತಿ ಶಿವಂನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ 2020ರಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಗಲಭೆ ಸಂಬಂಧ ತಪ್ಪೊಪ್ಪಿಕೊಂಡಿದ್ದ ಮೂವರು ಆರೋಪಿಗಳಿಗೆ ಕಠಿಣ ಶಿಕ್ಷೆ ಜೊತೆಗೆ ದಂಡ ವಿಧಿಸಿ NIA ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಗಲಭೆ ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಾದ ಎ-14 ಸೈಯದ್ ಇಕ್ರಮುದ್ದೀನ್ ಅಲಿಯಾಸ್ ನವೀದ್, ಎ-16 ಸೈಯದ್ ಆಸಿಫ್, ಎ-18 ಮೊಹಮ್ಮದ್ ಅತೀಫ್ ಗೆ 7 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 46 ಸಾವಿರ ರೂಪಾಯಿ ದಂಡ ವಿಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಏನಿದು ಡಿಜೆ ಹಳ್ಳಿ ಗಲಭೆ ಪ್ರಕರಣ? ಪ್ರವಾದಿ ಮಹಮ್ಮದ್ ಪೈಗಂಬರ್ ಅವರನ್ನು ನಿಂದನೆ ಮಾಡಲಾಗಿದೆ ಎಂದು ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ಗಲಭೆ ನಡೆದಿತ್ತು. ಸಾಮಾಜಿಕ ಜಾಲಾತಾಣ ಫೇಸ್ಬುಕ್ನಲ್ಲಿ ವಿವಾದಾತ್ಮಕ ಅಂಶ ಹಂಚಿಕೊಂಡ ಆರೋಪದಿಂದ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ…
ಬಾಗಲಕೋಟೆ : ಖಾಸಗಿ ಶಾಲೆಯ ಮನೆ ಬಸ್ ಪಲ್ಟಿಯಾಗಿ 11 ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ಬಳಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ರಾಯಲ್ ಪ್ಯಾಲೇಸ್ ಇಂಟರ್ನ್ಯಾಷನಲ್ ಶಾಲೆಯ ಖಾಸಗಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 11 ಮಕ್ಕಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳು ಮಕ್ಕಳಿಗೆ ಲೋಕಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಲೋಕಾಪುರದ ಕಡೆಗೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿದೆ.