Subscribe to Updates
Get the latest creative news from FooBar about art, design and business.
Author: kannadanewsnow05
ಇದು 12 ವರ್ಷಕ್ಕೊಮ್ಮೆ ನಡೆಯೋ ಕುಂಭಮೇಳವಲ್ಲ, ಮನುಷ್ಯನ ಏಳೂ ಜನ್ಮಗಳ ಪಾಪಗಳನ್ನೆಲ್ಲಾ ಒಂದೇ ಸಲಕ್ಕೆ ತೊಳೆಯಬಲ್ಲಂತಹ, ಶತಮಾನಗಳಿಗೊಮ್ಮೆ ಘಟಿಸೋ ದಿವ್ಯಾದ್ಭುತ ಪುಣ್ಯಸ್ನಾನದ ಮಹಾಕುಂಭಮೇಳ…144 ವರ್ಷಕ್ಕೆ ಒಮ್ಮೆ ನಡೆಯುವ ಮಹಾಕುಂಭಮೇಳ ಈ ಬಾರಿ ಪ್ರಯಾಗರಾಜ್.. ಇದೇ ಸಂಕ್ರಾಂತಿಯಿಂದ ಇಂತಾದ್ದೊಂದು ಮಹಾ ಅದ್ಭುತಕ್ಕೆ ತೆರೆದುಕೊಳ್ಳುತ್ತಿದೆ. ಅದ್ಯಾವ್ ಜನ್ಮದಲ್ ಅದೇನ್ ಪುಣ್ಯ ಮಾಡಿದ್ವೋ ನಾವೆಲ್ಲಾ…. ಮನುಷ್ಯನಿಗೆ ಏಳು ಜನ್ಮಕ್ಕೊಮ್ಮೆ ಮಾತ್ರ ಪ್ರಾಪ್ತಿಯಾಗೋ ಪುಣ್ಯವೆನ್ನಲಾಗುವ, ಬರೋಬ್ಬರಿ 144ವರ್ಷಕ್ಕೊಮ್ಮೆ ಘಟಿಸೋ ಮಹಾಕುಂಭಮೇಳಕ್ಕೆ ಇದೇ ಜನವರಿ 13ರ ಪುಷ್ಯ ಹುಣ್ಣಿಮೆಯಂದು ನಾವೆಲ್ಲಾ ಸಾಕ್ಷಿಯಾಗಲಿದ್ದೇವೆ… ಇದೇ ಸಂಕ್ರಾಂತಿಯಿಂದ… ಪ್ರಯಾಗರಾಜ್ ಮಹಾಕುಂಭಮೇಳವು ಫೆಬ್ರವರಿ 26ರ ಶಿವರಾತ್ರಿಯಂದು ಕೊನೆಗೊಳ್ಳಲಿದೆ. ಕುಂಭಮೇಳದ ಕೆಲವೊಂದು ವಿಶೇಷ ಸ್ನಾನಗಳು. ಜನವರಿ 13 : ಪುಷ್ಯಹುಣ್ಣಿಮೆ ಜನವರಿ 14 : ಮಕರಸಂಕ್ರಾಂತಿ. ಜನವರಿ 29 : ಮೌನಿ ಅಮವಾಸ್ಯೆ ಫೆಬ್ರವರಿ 03 : ವಸಂತಪಂಚಮಿ. ಫೆಬ್ರವರಿ 12 : ಮಾಘಹುಣ್ಣಿಮೆ. ಹಾಗೂ, ಫೆಬ್ರವರಿ 26 : ಮಹಾಶಿವರಾತ್ರಿ. ಕುಂಭಮೇಳದಲ್ಲಿ ಮೂರು ವಿಧ… 1. ಪ್ರತಿ 12 ವರ್ಷಗಳಿಗೊಮ್ಮೆ ಆಚರಿಸೋದು ಪೂರ್ಣ…
ಮಧ್ಯಪ್ರದೇಶ : ಇಂದಿನ ಯುವಜನತೆ ಮೊಬೈಲ್ ಎಂಬ ಮಾಯಾ ಲೋಕದಲ್ಲಿ ಮುಳುಗಿಬಿಟ್ಟಿದೆ. ಅದು ಎಷ್ಟೆಂದರೆ ತಮ್ಮ ಸುತ್ತಮುತ್ತಲು ಏನು ನಡೆಯುತ್ತಿದೆ ಎನ್ನುವುದನ್ನು ಅರಿಯದಷ್ಟು ತಮ್ಮ ಒಂದು ಮಾಯಾ ಲೋಕದಲ್ಲಿ ಮುಳುಗಿರುತ್ತಾರೆ. ಇದೀಗ ಇಂಥದ್ದೇ ಘಟನೆ ಯಿಂದ ಇಬ್ಬರು ಸಾವನಪ್ಪಿದ್ದು ಕಾರು ಚಾಲನೆ ಮಾಡುವಾಗ ರಿಯಲ್ಸ್ ನೋಡುತ್ತಾ ಕಾರು ಚಲಾಯಿಸಿದ ಪರಿಣಾಮ, ರಸ್ತೆ ಪಕ್ಕದಲ್ಲಿದ್ದ ನದಿಗೆ ಕಾರು ಉರುಳಿ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಭೋಪಾಲ್ ನಲ್ಲಿ ನಡೆದಿದೆ. ಹೌದು ಈ ಒಂದು ಘಟನೆ ಬಹುಪಾಲ್ ನಲ್ಲಿ ನಡೆದಿದ್ದು ಕಾರು ಚಾಲನೆ ಮಾಡುವ ಕಾರು ಚಾಲಕ ಮೊಬೈಲ್ ನಲ್ಲಿ ರೂಲ್ಸ್ ನೋಡುತ್ತಾ ಕಾರು ಓಡಿಸುತ್ತಿದ್ದ.ಈ ವೇಳೆ ಕಾರು ಕೆರೆಗೆ ಬಿದ್ದು ಇಬ್ಬರು ಸಾವಿಗೀಡಾಗಿದ್ದು, ಮತ್ತೊಬ್ಬ ವ್ಯಕ್ತಿ ಬಹಳ ಕಷ್ಟಪಟ್ಟು ಜೀವವನ್ನು ಉಳಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.ಮೃತರನ್ನು ಪಲಾಶ್ ಗಾಯಕ್ವಾಡ್ ಮತ್ತು ಕಾರು ಚಾಲಕ ವಿನೀತ್ ದಕ್ಷಾ ಎಂದು ಗುರುತಿಸಲಾಗಿದೆ. ಇನ್ನುಳಿದಂತೆ ಪಿಯೂಷ್ ಎಂಬುವವರು ಜೀವ ಉಳಿಸಿಕೊಳ್ಳುವಲ್ಲಿ…
ವಿಜಯಪುರ : ನಿನ್ನೆ ತಡರಾತ್ರಿ ವಿಜಯಪುರ ನಗರದ ಜೈನಾಪುರ ಲೇಔಟ್ ನಲ್ಲಿ ಸಂತೋಷ್ ಎನ್ನುವವರ ಮನೆಯ ಮೇಲೆ ಮುಸುಕುಧಾರಿ ಗ್ಯಾಂಗ್ ಒಂದು ದರೋಡೆಗೆ ಆಗಮಿಸಿ, ಮನೆಯ ಮಾಲೀಕ ಸಂತೋಷ ಎನ್ನುವರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ಪತ್ನಿಯ ಕೊರಳಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಗ್ಯಾಂಗ್ ಮೇಲೆ ಇದೀಗ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಹೌದು ಮುಸುಕುದಾರಿ ಗ್ಯಾಂಗ್ ಮೇಲೆ ವಿಜಯಪುರ ಪೋಲಿಸರಿಂದ ಫೈರಿಂಗ್ ನಡೆದಿದೆ. ವಿಜಯಪುರ ನಗರದ ಹೊರವಲಯದ ಟೋಲ್ ಪ್ಲಾಜಾದಲ್ಲಿ ಫೈರಿಂಗ್ ನಡೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಮುಸುಕುದಾರಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಗೋಲಗುಂಬಜ್ ಸಿಪಿಐ ಮಲ್ಲಯ್ಯ ಮಠಪತಿ, ಪಿಎಸ್ಐ ಘೋರಿಯಿಂದ ಈ ಒಂದು ದಾಳಿ ನಡೆಸಲಾಗಿದೆ. ದರೋಡೆಕೋರ ಮೇಲೆ ಐದು ಸುತ್ತು ಗುಂಡು ಹಾರಿಸಿದ ಪೊಲೀಸರು. ಈ ವೇಳೆ ಮಧ್ಯಪ್ರದೇಶದ ಮೂಲದ ದರೋಡೆಕೋರ ಮಹೇಶ್ ಕಾಲಿಗೆ ಗುಂಡು ತಗುಲಿದೆ. ಸದ್ಯ ಓರ್ವನನ್ನು ವಶಕ್ಕೆ ಪಡೆದು ವಿಜಯಪುರ ಪೊಲೀಸರು ವಿಚಾರಣೆ…
ಕಲಬುರ್ಗಿ : ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು 10 ಎಕರೆಯಲ್ಲಿ ಇದ್ದಂತಹ 500 ಟನ್ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಹೊಸಳ್ಳಿ (ಎಚ್) ಗ್ರಾಮದಲ್ಲಿ ನಡೆದಿದೆ. ಹೌದು ನಿನ್ನೆ ಮಧ್ಯಾಹ್ನ ಗ್ರಾಮದ ಶ್ರೀದೇವಿ ಲಕ್ಷಮಯ್ಯ ಗುತ್ತೇದಾರ ಅವರ ಹೊಲದ ಕಬ್ಬಿಗೆ ಬೆಂಕಿ ಹೊತ್ತಿಕೊಂಡಿದೆ, ಇದಾದ ಬಳಿಕ ಪಕ್ಕದ ಮೋತಿಬಾಯಿ ಜೇನು, ಹಾಗೂ ಲಕ್ಷ್ಮಣ ಧನಸಿಂಗ ಅವರ ಹೊಲಕ್ಕೂ ಬೆಂಕಿ ಹರಡಿದ ಪರಿಣಾಮ ಒಟ್ಟು 10 ಎಕರೆಯಷ್ಟು ಕಬ್ಬು ಸುಟ್ಟು ಕರಕಲಾಗಿದೆ. ಪ್ರತಿ ಎಕರೆಯಲ್ಲಿ 50 ಟನ್ ಸಾಮರ್ಥ್ಯದ ಕಬ್ಬು ಬೆಳೆದಿದ್ದು, 10 ಎಕರೆಯಂತೆ ಸುಮಾರು 500 ಟನ್ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಇದರಿಂದ ರೈತರು 10 ಲಕ್ಷಕ್ಕೂ ಅಧಿಕ ಮೌಲ್ಯದ ಕಬ್ಬು ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಳೆದ ಡಿಸೆಂಬರ್ ನಲ್ಲಿ ನಟ ದರ್ಶನ್ ಪವಿತ್ರಗೌಡ ಸೇರಿ ಎಲ್ಲ ಆರೋಪಿಗಳಿಗೆ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಈ ಒಂದು ಮೇಲ್ಮನವಿಯ ಅರ್ಜಿಯ ವಿಚಾರಣೆ ಇದೇ ಜನವರಿ 24ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ ಹೌದು ನಟ ದರ್ಶನ್ ಮತ್ತು ಗ್ಯಾಂಗ್ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ಜನವರಿ 24 ರಂದು ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸಲಿದೆ. ನಟ ದರ್ಶನ್ ಪವಿತ್ರಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ಪ್ರಶ್ನಿಸಿ ರಾಜ್ಯ ಮೇಲ್ಮನವಿ ಸಲ್ಲಿಸಿದೆ. ಈ ಒಂದು ಅರ್ಜಿಯ ವಿಚಾರಣೆ ಜನವರಿ 24 ರಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದ್ದು, ಅಂದು ಮಹತ್ವದ ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈಗಾಗಲೇ ನಟ ದರ್ಶನ್ ಅವರು ಹೈಕೋರ್ಟಿನ ರೆಗ್ಯುಲರ್…
ಬೆಂಗಳೂರು : ಈಗಾಗಲೇ ಹೊಸ ವರ್ಷದ ಆರಂಭದಲ್ಲಿ ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ಸೇರಿ ಎಲ್ಲ ನಾಲ್ಕು ಸಾರಿಗೆ ನಿಗಮಗಳಲ್ಲಿ ಟಿಕೆಟ್ ದರ ಹೆಚ್ಚಿಸಿರುವ ಬೆನ್ನಲ್ಲೆ ಇದೀಗ ನಮ್ಮ ಮೆಟ್ರೋ ದರ ಏರಿಕೆ ಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮೆಟ್ರೋ ದರ ಪರಿಷ್ಕರಣೆ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿದೆ. ಈ ಸಂಬಂಧ BMRCL ಅಧಿಕಾರಿಗಳ ಮತ್ತು ಫೇರ್ ಹೈಕ್ ಕಮಿಟಿಯ ಹೈವೊಲ್ಟೇಜ್ ಸಭೆ ನಡೆಯಲಿದೆ. ಸಭೆಯಲ್ಲಿ ದರ ಏರಿಕೆ ಫೈನಲ್ ಆಗುವ ಸಾಧ್ಯತೆ ಇದೆ. ಸಭೆಯಲ್ಲಿ ದರ ಏರಿಕೆ, ಜೊತೆಗೆ ಪರಿಷ್ಕೃತ ದರ ನಿಗದಿ ದಿನಾಂಕ ಕೂಡ ಫೈನಲ್ ಆಗುವ ಸಾಧ್ಯತೆ ಇದೆ.ಕಳೆದ ಏಳು ವರ್ಷದಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಿರಲಿಲ್ಲ. ಈಗ ದರ ಏರಿಕೆಗೆ ಮುಂದಾಗಿರುವ ಬಿಎಂಆರ್ಸಿಎಲ್ ದರ ಏರಿಕೆ ಫೈನಲ್ ಮಾಡುವ ನಿಟ್ಟಿನಲ್ಲಿ ಬೋರ್ಡ್ ಮಿಟಿಂಗ್ ಮಾಡಲಿದೆ. ಸದ್ಯದ ಮಾಹಿತಿಯಂತೆ ಜನವರಿ 21ರಿಂದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯಾಗಲಿದೆ ಎಂಬ ವರದಿಗಳಿವೆ. ಪ್ರಸ್ತುತ ನಮ್ಮ ಮೆಟ್ರೋ ಕನಿಷ್ಠ…
ಬೆಳಗಾವಿ : ನಿನ್ನೆ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವ ಕುರಿತು ಹೇಳಿಕೆ ನೀಡಿದ್ದರು.ಇದೇ ವಿಚಾರವಾಗಿ ಇಂದು ಬೆಳಗಾವಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಇಂದು ಆಗಮಿಸಿದ್ದು, ಜನವರಿ 21ರಂದು ನಡೆಯುವ ಕಾಂಗ್ರೆಸ್ ಸಮಾವೇಶದ ಪೂರ್ವಸಿದ್ಧತೆ ಪರಿಶೀಲನೆ ಮಾಡಲಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುವುದಿಲ್ಲ. ಬದಲಾವಣೆ ಆಗುವುದಿದ್ದರೆ ಅವರು ಯಾಕೆ ಬರುತ್ತಿದ್ದರು? ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಸ್ಪಷ್ಟನೆ ನೀಡಿದರು. ಇದೆ ವೇಳೆ AICC ಸಮಾವೇಶದ ಪೂರ್ವ ಸಿದ್ಧತೆ ಪರಿಶೀಲನೆಯನ್ನು ನಡೆಸಲು ಸುರ್ಜೆವಾಲಾ ಇದೀಗ ಬೆಳಗಾವಿಗೆ ಆಗಮಿಸಿದ್ದಾರೆ. ಬೆಳಗಾವಿಯಲ್ಲಿ ಎರಡು ದಿನ ಸಮಾವೇಶ ತಯಾರಿ ಪರಿಶೀಲನೆ ಮಾಡಲಿದ್ದಾರೆ. ಜನವರಿ 21ರಂದು ನಡೆಯುವ…
ಕಲಬುರ್ಗಿ : ಮನೆಯ ಮಾಳಿಗೆ ನಿಂತುಕೊಂಡು ಗಾಳಿಪಟ ಹಾರಿಸುತ್ತಿದ್ದ ಸಂದರ್ಭದಲ್ಲಿ ಕೆಳಗೆ ಬಿದ್ದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಕಮಲಾಪುರ ತಾಲ್ಲೂಕಿನ ನವನಿಹಾಳ ಖೀರುನಾಯಕ ತಾಂಡಾದ ನಿವಾಸಿ ಆದಿತ್ಯ ಗಜಾನಂದ ಜಾಧವ (15) ಮೃತ ಬಾಲಕ ಎಂದು ಗುರುತಿಸಲಾಗಿದೆ. ಶಾಲೆ ಮುಗಿಸಿ ಮನೆಗೆ ಬಂದು ಮನೆಯ ಮಾಳಿಗೆಯ ಮೇಲೆ ಹತ್ತಿ ಗಾಳಿಪಟ ಹಾರಿಸುತ್ತಿದ್ದ. ಆದಿತ್ಯ ಬುಧವಾರ ಮಾಳಿಗೆ ಮೇಲೆ ಹತ್ತಿ ಗಾಳಿಪಟ ಹಾರಿಸುತ್ತಿದ್ದ. ಆಯತಪ್ಪಿ ಮೇಲಿಂದ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಬಾಲಕನನ್ನು ಕೂಡಲೇ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಆದಿತ್ಯ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮಂಡ್ಯ : ಮಂಡ್ಯದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಂಸದೆ ಸುಮಲತಾ ಆಪ್ತ ಹಾಗೂ ಅಖಿಲ ಕರ್ನಾಟಕ ಅಂಬರೀಶ್ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಸಂಸದೆ ಸುಮಲತಾ ಬೇಲೂರು ಸೋಮಶೇಖರ್ ಮಂಡ್ಯ ಶಾಸಕ ಗಣಿಗ ರವಿಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸ್ಥಳೀಯ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇಲೂರು ಸೋಮಶೇಖರ್ ಇದೀಗ ಸೇರ್ಪಡೆಯಾಗಿದ್ದಾರೆ. ಸುಮಲತಾಗೆ ಕೈಕೊಟ್ಟು ಏಕಾಏಕಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸೋಮಶೇಖರ್ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇದೀಗ ಗ್ರೀನ್ ಸಿಗ್ನಲ್ ಸಿಕ್ಕಿದೆ ಮಂಡ್ಯ ರಾಜಕಾರಣದಲ್ಲಿ ಸಕ್ರಿಯ ವಾಗುತ್ತೇನೆ ಎಂದಿದ್ದ ಸುಮಲತಾ ಹೊಸ ವರ್ಷದ ಬಳಿಕ ರಾಜಕಾರಣದಲ್ಲಿ ಸಕ್ರಿಯಾಗುತ್ತಿದ್ದೇನೆ ಎಂದು ತಿಳಿಸಿದ್ದರು.ಆದರೆ ಇದೇ ಸಂದರ್ಭದಲ್ಲಿ ಸುಮಲತಾಗೆ ಕೈಕೊಟ್ಟು ಇದೀಗ ಬೇಲೂರು ಸೋಮಶೇಖರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಮಂಡ್ಯದಲ್ಲಿ ಸಹಜವಾಗಿ ಮೈತ್ರಿ ಪಕ್ಷಗಳಿಗೆ ದೊಡ್ಡ…
ವಿಜಯಪುರ : ವಿಜಯಪುರ ನಗರದಲ್ಲಿ ದರೋಡೆಗೆ ಬಂದಿದ್ದವರಿಂದ ಮನೆ ಮಾಲೀಕನ ಹತ್ಯೆಗೆ ಯತ್ನಿಸಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.ವಿಜಯಪುರ ನಗರದ ಜೈನಾಪುರ ಲೇಔಟ್ ನಲ್ಲಿ ಒಂಟಿ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿರುವ ಘಟನೆ ತಡರಾತ್ರಿ ನಡೆದಿದೆ. ಹೌದು ನಿನ್ನೆ ರಾತ್ರಿ ಮನೆಗೆ ಹೋಗಿ ರಾಡ್, ತಲ್ವಾರ್ ಹಾಗೂ ಮಚ್ಚಿನಿಂದ ಬೆದರಿಸಿ ದರೋಡೆಗೆ ಯತ್ನಿಸಲಾಗಿದೆ ಮನೆಯಲ್ಲಿದ್ದ ದಂಪತಿ ಮೇಲೆ ಮಸುಕು ದಾರಿ ಗ್ಯಾಂಗ್ ಒಂದು ಹಲ್ಲೆ ನಡೆಸಿದೆ. ಮನೆಯಲ್ಲಿದ್ದ ಸಂತೋಷ್ಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ.ಮನೆಯ ಮಾಲೀಕ ಸಂತೋಷ್ ಬೆನ್ನು ಹೊಟ್ಟೆ ಭಾಗಕ್ಕೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಅಲ್ಲದೆ ಸಂತೋಷ್ ಪತ್ನಿ ಭಾಗ್ಯಲಕ್ಷ್ಮಿ ಮೇಲೂ ಗ್ಯಾಂಗ್ ಇಟ್ಟಿಗೆಯಿಂದ ಹಲ್ಲೆ ನಡೆಸಿದೆ. ಈ ವೇಳೆ ಬಾಗ್ಯಲಕ್ಷ್ಮಿ ಕತ್ತಿನಲ್ಲಿದ್ದ ಚಿನ್ನದ ಸರ ಕಿತ್ತು ಗ್ಯಾಂಗ್ ಮನೆಯಿಂದ ಪರಾರಿಯಾಗಿದೆ. ಗೂಡ್ಸ್ ವಾಹನದಲ್ಲಿ ಮಸುಕದಾರಿ ಗ್ಯಾಂಗ್ ನಿಂದ ಈ ಒಂದು ಕೃತ್ಯ ನಡೆದಿದೆ ಘಟನೆಯಿಂದ ಜೈನಪುರ ಲೇಔಟ್ ನಿವಾಸಿಗಳು ಸಹಜವಾಗಿ ಬೆಚ್ಚಿಬಿದ್ದಿದ್ದಾರೆ. ಗಾಯಾಳು ಸಂತೋಷಕ್ಕೆ ಸದ್ಯ ಆಸ್ಪತ್ರೆಯಲ್ಲಿ…












