Author: kannadanewsnow05

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಿತ್ಯ ಜೀವನದಲ್ಲಿ ಭಗವಂತನ ಅನುಗ್ರಹ ಪಡೆಯಲು ಹಾಗೂ ಸಮಸ್ಯೆಯಿಂದ ಹೊರ ಬರಲು ಜಪ ಮಾಲೆ ಬಹಳ ಸಹಾಯ ಮಾಡುತ್ತದೆ ಯಾರೇ ಆದರೂ ಸರಿ ಭಗವಂತನ ಅನುಗ್ರಹ ಪಡೆಯಲು ಜಪಮಾಲೆ ಇಂದ ಪ್ರಾರ್ಥಿಸುವುದರಿಂದ ನಮಗೆ ಅನುಗ್ರಹ ನೀಡುತ್ತಾನೆ ಭಗವಂತ ಎಂದು ನಂಬುತ್ತಾರೆ ಭಗವಂತನ ನಾಮಗಳನ್ನು ಜಪ ಮಾಲೆಯಿಂದ ಜಪಿಸಿಸುವುದರಿಂದ ವಿಶೇಷವಾದ ಶುಭಫಲ ಸಿಗುತ್ತದೆ ಇನ್ನೂ ಈ ಜಪ ಮಾಲೆಯನ್ನು ವೈಜಯಂತಿ ಮಾಲ ವಿಶೇಷವಾದ ಪ್ರಾಧ್ಯಾಂತ ಹೊಂದಿದೆ ಅದಕ್ಕಿರುವ ಶಕ್ತಿ ಏನು ಅದರಿಂದ ಯಾವ ಶುಭ ಫಲಿತಾಂಶ ಪಡೆಯಬಹುದು ಎಂದು ನೋಡೋಣ. ಲಕ್ಷ್ಮಿ ದೇವಿಗೆ ಇಷ್ಟ ಆಗುವ ಮಾಲೆಗಳಲ್ಲಿ ವೈಜಯಂತಿ ಮಾಲೆ ಕೂಡ ಒಂದು ವೈಜಯಂತಿ ಮಾಲೆ ಲಕ್ಷ್ಮಿ ದೇವಿಗೆ ಬಹಳ ಇಷ್ಟವಾದದ್ದು ಈ ವೈಜಯಂತಿ ಮಾಲೆಯಿಂದ ನೀವು ಲಕ್ಷ್ಮಿ ದೇವಿಗೆ ಸಂಭಂಧಿಸಿದ ವಿಮಲ ಮಾತ್ರ ಸ್ತೋತ್ರವನ್ನು ನೀವು ಪಠಿಸುವುದರಿಂದ ಲಕ್ಷ್ಮಿ ದೇವಿ ನಿಮಗೆ…

Read More

ಶಿವಮೊಗ್ಗ : ಯುವ ಹೋಟೆಲ್ ಉದ್ಯಮಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ನಿನ್ನೆ ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಉದ್ಯಮಿಯನ್ನು ಮಿಥುನ್ (34) ಎಂದು ತಿಳಿದುಬಂದಿದೆ. ಮಿಥುನ್ ತೀರ್ಥಹಳ್ಳಿ ಪಟ್ಟಣದ SBI ಬ್ಯಾಂಕ್ ಬಳಿ ಹೋಟೆಲ್ ನಡೆಸುತ್ತಿದ್ದರು. ತಾಲೂಕಿನ ಹಂಡಿಗೆ ಮೂಲದ ಇವರು ಹೋಟೆಲ್ ಉದ್ಯಮವನ್ನು ಆರಂಭ ಮಾಡಿದ್ದರು. ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಮೃತ ಮಿಥುನ್ ಪತ್ನಿ ಮತ್ತು 8 ತಿಂಗಳ ಮಗು ಜತೆ ಬಾಳೆಬೈಲಿನಲ್ಲಿ ವಾಸವಾಗಿದ್ದರು. ಘಟನೆ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ನಡೆಯಿತು. ಈ ಒಂದು ಸಂಪುಟ ಸಭೆಯಲ್ಲಿ ಸುಮಾರು 35 ವಿಷಯಗಳ ಕುರಿತು ಚರ್ಚಿಸಲಾಯಿತು. ಇದೇ ವೇಳೆ ಬಹು ಮಹತ್ವದ ಜಾತಿಗಣತಿ ವರದಿ ಕುರಿತಂತೆ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ವರದಿಗೆ ಸಂಬಂಧಪಟ್ಟಂತಹ ಮುಟ್ಟಿದ ಲಕೋಟೆಯನ್ನು ತೆರೆಯಲು ಸಂಪುಟ ಇದೆ ವೇಳೆ ನಿರ್ಧರಿಸಿದೆ. ಹೌದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ತೀರ್ಮಾನಸಲಾಗಿದೆ. ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂದಿಡಲು ನಿರ್ಧರಿಸಲಾಗಿದೆ. ಆ ಮೂಲಕ ಕರ್ನಾಟಕವೇ ಎದುರು ನೋಡುತ್ತಿದ್ದ ಜಾತಿಗಣತಿ ವರದಿ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ. ಇಂದಿನ ಸಚಿವ ಸಂಪುಟದಲ್ಲೇ ಜಾರಿಗಣತಿ ವರದಿ ಮಂಡನೆಯಾಗಲಿದೆ ಎನ್ನುವ ಚರ್ಚೆಗಳು ನಡೆದಿದ್ದವು. ಆದ್ರೆ, ಈ ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಬಗ್ಗೆ…

Read More

ಮೈಸೂರು : ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯರ ನಡುವೆ ಗಲಾಟೆ ನಡೆದಿದೆ ಈ ವೇಳೆ ಪತಿಯೊಬ್ಬ ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಬಳಿಕ ನಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನ ಹುಂಡಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಪತ್ನಿಯನ್ನು ತೇಜಸ್ವಿನಿ (26) ಎಂದು ತಿಳಿದುಬಂದಿದ್ದು, ಪತ್ನಿಯನ್ನು ಕೊಂದ ಪತಿಯನ್ನು ದೇವರಾಜ್ ಎಂದು ತಿಳಿದುಬಂದಿದೆ.ಕೊಲೆ ಬಳಿಕ ದೇವರಾಜ್ ನೇರವಾಗಿ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ‌‌ ನೀಡಿದ ಪೊಲೀಸರು, ಪರಿಶೀಲನೆ ನಡೆಸಿ, ಮೃತದೇಹವನ್ನು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

Read More

ದಾವಣಗೆರೆ : ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ಸಿಎಂ ಮಾಡಿಯೇ ಮಾಡುತ್ತೇವೆ. ತಾಕತ್ತಿದ್ದರೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಇಳಿಸಿ ನೋಡೋಣ ಎಂದು ದಾವಣಗೆರೆಯಲ್ಲಿ ಬಿಜೆಪಿಯ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ತಿಳಿಸಿದರು. ಇಂದು ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರುಭೂಮಿಯಲ್ಲಿ ಓಯಸಿಸ್ ಸಿಕ್ಕ ರೀತಿ ಪಕ್ಷಕ್ಕೆ ಬಿವೈ ವಿಜಯೇಂದ್ರ ಸಿಕ್ಕಿದ್ದಾರೆ. ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ. ವಕ್ಫ್ ಅಂತ ಹೇಳಿಕೊಂಡು ಒಂದು ತಂಡ ಗೊಂದಲ ಮಾಡುತ್ತಿದೆ ಎಂದು ಪ್ರೋಕ್ಷವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಬಣಕ್ಕೆ ತಿರುಗೇಟು ನೀಡಿದರು. ಬಿಜೆಪಿಯನ್ನು ಸಂಘಟಿಸಲು ಮತ್ತು ಪುನಃ ಅಧಿಕಾರಕ್ಕೆ ತರಲು ಬಿಎಸ್ ಯಡಿಯೂರಪ್ಪನವರು ರಾಜ್ಯದ ಉದ್ದಗಲಕ್ಕೆ ಪ್ರವಾಸ ಮಾಡಲಿದ್ದಾರೆಯೇ ಹೊರತು ಬಿವೈ ವಿಜಯೇಂದ್ರರನ್ನು ಮುಖ್ಯಮಂತ್ರಿ ಮಾಡಲು ಅಲ್ಲ, ಅವರನ್ನು ಸಿಎಂ ಮಾಡಬೇಕೆನ್ನುವುದು ರಾಜ್ಯದ ಕಾರ್ಯಕರ್ತರ ಮತ್ತು ಜನರ ಸಂಕಲ್ಪವಾಗಿದೆ, ಅವರನ್ನು ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ ಎಂದು ರೇಣುಕಾಚಾರ್ಯ ಹೇಳಿದರು. ಮಹಾನ್ ನಾಯಕನೊಬ್ಬ…

Read More

ಕಲಬುರ್ಗಿ : ಶಾರ್ಟ್ ಸರ್ಕ್ಯೂಟ್ ನಿಂದ ಹೊಲದಲ್ಲಿದ್ದಂತಹ ತೋಟದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮನೆಯಲ್ಲಿದ್ದ ಸುಮಾರು 10 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿರಾಳ್ ಗ್ರಾಮದಲ್ಲಿ ಈ ಒಂದು ಬೆಂಕಿ ಅವಘಡ ಸಂಭವಿಸಿದೆ. ಹೌದು ಯಡ್ರಾಮಿ ತಾಲೂಕಿನ ಬಿರಾಳ್ ಗ್ರಾಮದ ಈರಣ್ಣ ಭಜಂತ್ರಿ ಎಂಬ ರೈತರಿಗೆ ಸೇರಿದ ತೋಟದ ಮನೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಈ ಒಂದು ಘಟನೆಯಿಂದಾಗಿ ಮನೆಯಲ್ಲಿದ್ದ ಅಪಾರ ಪ್ರಮಾಣದ ದವಸ ಧಾನ್ಯ, ಮನೆಯ ಪರಿಕರಗಳು ಸುಟ್ಟು ಭಸ್ಮವಾಗಿವೆ. ಮನೆಯಲ್ಲಿದ್ದ 10 ಲಕ್ಷ ರೂ. ಮೌಲ್ಯದ ಹತ್ತಿ, ತೊಗರಿ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ. ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಲ್ಲಿ ಯಶಸ್ವಿಯಾದರು

Read More

ಬೆಂಗಳೂರು : ಮಾವನ ಲೈಂಗಿಕ ಕಿರುಕುಳ ತಾಳದೆ ಟೆಕ್ಕಿ ಯುವತಿಯೊಬ್ಬಳು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಚ್‌ಎಎಲ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿಯನ್ನು ಸುಹಾಸಿ ಸಿಂಗ್ (24) ಎಂದು ತಿಳಿದುಬಂದಿದೆ. ಯುವತಿಯ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಏನಿದು ಪ್ರಕರಣ? ಸುಹಾಸಿ ಸಿಂಗ್‌ ಮತ್ತು ಪ್ರವೀಣ್‌ ಸಿಂಗ್‌ ಸಂಬಂಧಿಗಳು. ಇಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಉತ್ತಮ ಸಂಬಂಧ ಬೆಳೆದಿದೆ. ಇಬ್ಬರು ಒಟ್ಟಿಗೆ ಹೊರಗಡೆ ಹೋಗುತ್ತಿದ್ದರು. ಹೀಗೆ ಹೊರಗಡೆ ಹೋಗಿದ್ದಾಗ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಖಾಸಗಿ ವಿಡಿಯೋ ಹಾಗೂ ಫೋಟೋಗಳನ್ನು ಇಟ್ಟುಕೊಂಡು ಸ್ವತಃ ಮಾವನೇ ಸೊಸೆಯನ್ನು ಮಂಚಕ್ಕೆ ಕರೆದಿದ್ದಾರೆ. ಅವಳ ಖಾಸಗಿ ವಿಡಿಯೋ ತೋರಿಸಿ ವಿಕೃತಿಯಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಇನ್ನು ನೀನು ದೈಹಿಕವಾಗಿ ತನಗೆ ಸ್ಪಂದಿಸದಿದ್ದರೆ ನಿನ್ನ…

Read More

ಬೆಂಗಳೂರು : ಇಂದು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತ ಘಟನೆ ಬೀದರ್ ನಲ್ಲಿ ನಡೆದಿದ್ದು, ಎಟಿಎಂ ಗೆ ಹಣ ಹಾಕುವ ವೇಳೆ ದುಷ್ಕರ್ಮಿಗಳು ಹಾಡು ಹಗಲೇ ಶೂಟೌಟ್ ನಡೆಸಿ ಒಬ್ಬ ಸಿಬ್ಬಂದಿಯನ್ನು ಹತ್ಯೆಗೈದು ಸುಮಾರು 83 ಲಕ್ಷ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಇಂದು ಬೀದರ್ನಲ್ಲಿ ನಡೆದಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ATM ಗೆ ಹಣ ಹಾಕುವಾಗ ಕ್ಯಾಮೆರಾ ಇರಬೇಕು, ಸೆಕ್ಯೂರಿಟಿ ಗಾರ್ಡ್ ಇರಬೇಕು. ಹಣ ಹಾಕುವಾಗ ಬಂದೂಕು ಹಾಗೂ ಕ್ಯಾಮರಾ ಇರಬೇಕು. ಸೆಕ್ಯೂರಿಟಿ ಗಾರ್ಡ್ ಗಳಿಗೆ, ಸಿಬ್ಬಂದಿಗಳಿಗೆ ಸ್ಟ್ಯಾಂಡಿಂಗ್ ಇಂಟ್ರಕ್ಷನ್ ಕೊಟ್ಟಿರುತ್ತೇವೆ. ಪ್ರಕರಣದ ಕುರಿತು ಡೀಟೇಲ್ ರಿಪೋರ್ಟ್ ತೆಗೆದುಕೊಂಡ ನಂತರ ಮಾತನಾಡುತ್ತೇನೆ ಎಂದು ತಿಳಿಸಿದರು. ಆರೋಪಿಗಳ ಹಿನ್ನೆಲೆ ಏನಿದೆ ಅಂತ ನೋಡಬೇಕು. ದರೋಡೆ ಅಷ್ಟಕ್ಕೆ ಸೀಮಿತನ ಅಥವಾ ಬೇರೆ ಇನ್ಯಾವುದೋ ಉದ್ದೇಶ ಇತ್ತೋ ಅಂತ ನೋಡಬೇಕು…

Read More

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು ಈ ಒಂದು ಸಭೆಯಲ್ಲಿ ಸುಮಾರು 35 ವಿಷಯಗಳ ಕುರಿತು ಚರ್ಚಿಸಿದ್ದೇವೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. ಸಚಿವ ಸಂಪುಟ ಸಭೆಯಲ್ಲಿ 35 ವಿಷಯಗಳನ್ನು ಚರ್ಚೆ ಮಾಡಿದ್ದೇವೆ ಎಂದು ಸಂಪುಟದ ಸಭೆಯ ನಂತರ ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿಕೆ ನೀಡಿದರು. ಮಂಡ್ಯದಲ್ಲಿ ಕೃಷಿ ತೋಟಗಾರಿಕೆ ಇಂಟಿಗ್ರೇಟೆಡ್ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಅಲ್ಲದೇ 5ನೇ ರಾಜ್ಯ ಹಣಕಾಸು ಆಯೋಗದ ಅವಧಿ ವಿಸ್ತರಣೆಗೆ ಸಂಪುಟದಲ್ಲಿ ಅನುಮೋದನೆ ದೊರೆತಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.

Read More

ತುಮಕೂರು : ಇತ್ತೀಚಿಗೆ ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ವಯೋ ವಿರುದ್ಧರು ಎನ್ನದೆ ಹೃದಯಘಾತ ಹಾಗೂ ಹೃದಯ ತಮ್ಮನ ದಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದೀಗ ಸ್ನೇಹಿತರ ಜೊತೆಗೆ ಮಾತನಾಡುತ್ತಿರುವಾಗಲೇ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿ ಒಬ್ಬ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ. ಹೌದು ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವನನಪ್ಪಿದ್ದಾನೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಈ ಒಂದು ಘಟನೆ ಸಂಭವಿಸಿದೆ.ಕಾಲೇಜಿನ ಮುಂದೆಯೇ ವಿದ್ಯಾರ್ಥಿ ಶಮಂತ್ (17) ಕುಸಿದು ಬಿದ್ದಿದ್ದಾನೆ.ಸ್ನೇಹಿತರ ಜೊತೆ ಮಾತನಾಡುತ್ತಿದ್ದಾಗ ಶಮಂತ್ ಕುಸಿದು ಬಿದ್ದಿದ್ದ. ತಕ್ಷಣ ಆದನ್ನು ಆಸ್ಪತ್ರೆಗೆ ಕರೆದೋಯ್ಯುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.

Read More