Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಹಾಸನ : ಈಗ ಹಬ್ಬದ ಸೀಸನ್ ದಸರಾ, ದೀಪಾವಳಿ ಸೇರಿದಂತೆ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇದೇ ಸಮಯದಲ್ಲಿ ಜನರು ಬಟ್ಟೆ ಖರೀದಿಸಲು ಬಟ್ಟೆ ಅಂಗಡಿಗಳಲ್ಲಿ ಆಫರ್ ಗಳ ಮೊರೆ ಹೋಗುತ್ತಾರೆ. ಇಲ್ಲಿ ಹಾಸನದಲ್ಲಿ ಬಟ್ಟೆ ಆಫರ್ ಗೋಸ್ಕರ ಮುಗಿದ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಹೌದು ಬಟ್ಟೆ ಆಫರ್ಗೆ ಮುಗಿಬಿದ್ದ ಜನರನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಲಾಠಿ ಪ್ರಹಾರನಡೆಸಿದ ಘಟನೆ ಹಾಸನ ನಗರದ ಉದಯಗಿರಿ ಬಡಾವಣೆಯಲ್ಲಿ ನಡೆದಿದೆ. ಲಕ್ಷಿ ಬ್ಯಾಡ್ಮಿಂಟನ್ ಅಕಾಡೆಮಿ ಕಟ್ಟಡದಲ್ಲಿ ಬಟ್ಟೆ ಖರೀದಿಗೆ ಆಫರ್ ನೀಡಲಾಗಿತ್ತು. ಅರುಣ್ ಅಡ್ಡ ಮೆನ್ಸ್ ವೇರ್ನವರು ಈ ಬಿಗ್ ಆಫರ್ ನೀಡಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಖರೀದಿಗೆ ನೂಕುನುಗ್ಗಲು ಉಂಟಾದ ಹಿನ್ನೆಲೆ ಪೊಲೀಸರು ಖರೀದಿಗೆ ಬಂದಿದ್ದ ಯುವಕರಿಗೆ ಲಾಠಿ ರುಚಿ ತೋರಿಸಿದ್ದಾರೆ. ಬಟ್ಟೆ ಖರೀದಿಸಲು ನೂಕುನುಗ್ಗಲು ಹೆಚ್ಚಾದ ಹಿನ್ನೆಲೆ ಖರೀದಿಗೆ ಬಂದಿದ್ದವರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ನಡೆಸಿದ್ದಾರೆ.
ಬೆಂಗಳೂರು : ಬೀದರ್ ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ. ಭಾನುವಾರ ರಾತ್ರಿ ಸಚಿವ ರಹೀಂಖಾನ್ ಜೊತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಅರ್ಪಿಸಿದ ಬಳಿಕ ಮಾತನಾಡಿದ ಈಶ್ವರ ಖಂಡ್ರೆ, ತಮ್ಮ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು 3 ದಿನಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವ ಭರವಸೆ ನೀಡಿದ್ದಾರೆ ಎಂದರು. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮವಾಗಿ ಋತುಮಾನಗಳಲ್ಲಿ ಏರುಪೇರಾಗುತ್ತಿದ್ದು, ಇದರ ಪರಿಣಾಮ ಗಡಿ ಜಿಲ್ಲೆ ಬೀದರ್ ಮೇಲೂ ಆಗುತ್ತಿದೆ. ಹೆಚ್ಚಿನ ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಇಲ್ಲದ ನಮ್ಮ ಜಿಲ್ಲೆಯ ಶೇ.75ರಷ್ಟು ಜನರ ಬದುಕು ಕೃಷಿಯನ್ನೇ ಅವಲಂಬಿಸಿದ್ದು, ಈ ವರ್ಷ 4.31 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದೆ.…
ನವದೆಹಲಿ : ಆನ್ಲೈನ್ ಬೆಟ್ಟಿಂಗ್ ಪ್ಲಾಟ್ಫಾರ್ಮ್ ಪ್ರಚಾರ ಪ್ರಕರಣದಲ್ಲಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಶಿಖರ್ ಧವನ್ ಸೇರಿದಂತೆ ಹಲವು ಸೆಲೆಬ್ರಿಟಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ಮುಂದಾಗಿದೆ. ಬೆಟ್ಟಿಂಗ್ನಿಂದ ಬಂದ ಆದಾಯವನ್ನು ಅಪರಾಧದ ಆದಾಯ ಎಂದು ಪರಿಗಣಿಸಿ ಇಡಿ ಈ ಕ್ರಮ ಕೈಗೊಂಡಿದೆ. ಹೌದು ಆನ್ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಪ್ಲಾಟ್ಫಾರ್ಮ್ 1xBet ಪ್ರಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಶಿಖರ್ ಧವನ್, ಸುರೇಶ್ ರೈನಾ ಮತ್ತು ರಾಬಿನ್ ಉತ್ತಪ್ಪ ಅವರ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿ ಮುಂದಾಗಿದೆ ಎಂದು ವರದಿಯಾಗಿದೆ. ಇಡಿ ತನಿಖೆಯ ಪ್ರಕಾರ, ಟೀಂ ಇಂಡಿಯಾದ ಕೆಲವು ಆಟಗಾರರು ಮತ್ತು ಸೆಲೆಬ್ರೆಟಿಗಳು ಈ ಅಪ್ಲಿಕೇಶನ್ ಅನ್ನು ಪ್ರಚಾರ ಮಾಡುವ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಗಳಿಸಿದ್ದಾರೆ. ಈ ಆದಾಯದಿಂದ ಹಲವು ಆಸ್ತಿಗಳನ್ನು ಖರೀದಿಸಲಾಗಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಆಸ್ತಿಗಳನ್ನು ಖರೀದಿಸಲಾಗಿದೆ ಎಂಬುದು ಇಡಿ…
ಚಿತ್ರದುರ್ಗ : ಭಾರತದಲ್ಲಿರುವ ಎಲ್ಲಾ ಧರ್ಮದ ಅನುಯಾಯಿಗಳು ಹಿಂದೂಗಳೇ ಎಂದು ಸಾಣೆಹಳ್ಳಿ ತರಳಬಾಳು ಮಠದ ಪಂಡಿತರಾಧ್ಯ ಸ್ವಾಮೀಜಿ ಹೇಳಿಕೆ ನೀಡಿದರು.ಚಿತ್ರದುರ್ಗದ ಮುರುಘಾ ಮಠದಲ್ಲಿ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ಒಂದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಖಂಡಿತ ಪ್ರಾದೇಶಿಕವಾಗಿ ಲಿಂಗಾಯತರು ಕೂಡ ಹಿಂದೂಗಳೇ, ಲಿಂಗಾಯತರು ಮಾತ್ರ ಅಲ್ಲ ಜೈನರು, ಬೌದ್ಧರು, ಕ್ರೈಸ್ತರು ಭಾರತದಲ್ಲಿರುವ ಎಲ್ಲಾ ಧರ್ಮದ ಅನುಯಾಯಿಗಳು ಹಿಂದೂಗಳು. ಬಸವಣ್ಣನವರು ದಯೆ ಮೂಲದ ಲಿಂಗಾಯತ ಧರ್ಮ ಕೊಟ್ಟಿದ್ದಾರೆ. ನಾವು ಲಿಂಗವಂತರೆಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು. ಹೇಳಿಕೊಳ್ಳುವುದರಲ್ಲಿ ಮುಂದೆ ಇದ್ದೇವೆ. ಆಚರಣೆಯಲ್ಲಿ ಹಿಂದಿದ್ದೇವೆ ಎಂದು ಬಸವ ಸಂಸ್ಕೃತಿ ಅಭಿಯಾನದಲ್ಲಿ ಪಂಡಿತರಾಧ್ಯ ಸ್ವಾಮೀಜಿ ಹೇಳಿಕೆ ನೀಡಿದರು.
ಕೋಲಾರ ಸೆ 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಕನಕನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ ಅಹಲ್ಯಾಬಾಯಿ ಹೋಳ್ಕರ್ ಮಾದರಿಯಾದರೆ ಸಾಮಾಜಿಕ ಬದ್ಧತೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾದರಿಯಾಗಿದ್ದಾರೆ. ಈ ಎಲ್ಲಾ ಹಿರಿಯ ಮಾದರಿಗಳು ಸಮಾಜದ ಆಸ್ತಿ ಆಗಿರುವುದು ನಮಗೆಲ್ಲಾ ಹೆಮ್ಮೆ ತರುವ ಜೊತೆಗೆ ಪ್ರೇರಣೆ ಕೂಡ ಆಗಲಿ ಎಂದು ಕರೆ ನೀಡಿದರು. ಪ್ರತಿಭೆ ಎನ್ನುವುದು ಒಟ್ಟು ಸಮಾಜದ ಕೊಡುಗೆ. ಹೀಗಾಗಿ ಪ್ರತಿಭಾವಂತರು ಸಮಾಜದ ಆಸ್ತಿ ಆಗಬೇಕು ಎನ್ನುವುದು ನನ್ನ ಭಾವನೆ. ಪ್ರತಿಭೆ ಪ್ರತಿಯೊಬ್ಬರ ಒಳಗೂ ಇರುತ್ತದೆ. ಈ…
ಕೊಪ್ಪಳ : ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆ ವಿಚಾರವಾಗಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಕೊಪ್ಪಳದ ಓರ್ವ ಶಿಕ್ಷಕನನ್ನು ಅಮಾನತು ಮಾಡಿ, ಅಮಾನತು ಮಾಡಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಆದೇಶ ಹೊರಡಿಸಿದ್ದಾರೆ. ಜೂಲಕುಂಟಿ ಸರ್ಕಾರಿ ಶಾಲೆಯ ಸಹಾಯಕ ಶಿಕ್ಷಕ ರಾಮಪ್ಪ ಸಸ್ಪೆಂಡ್ ಆಗಿದ್ದು, ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕುಂಟಿ ಗ್ರಾಮದಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಸಮೀಕ್ಷೆಯಲ್ಲಿ ಶೂನ್ಯ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ರಾಮಪ್ಪನನ್ನು ಅಮಾನತುಗೊಳಿಸಲಾಗಿದೆ. ಕೆಲದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಮಾಡಿ ಕೊಂಡಿರುವ ರಾಮಪ್ಪ ಇದುವರೆಗೂ ಯಾವುದೇ ಮನೆಗೆ ಸಮೀಕ್ಷೆಗೆ ತೆರಳದ ಕರ್ತವ್ಯ ಲೋಪ ಎಸಗಿಸಿದ್ದಾನೆ. ಹೀಗಾಗಿ ಸಹಾಯಕ ಶಿಕ್ಷಕನನ್ನು ಅವನತ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.
ಉಡುಪಿ : ಇತ್ತೀಚಿಗೆ ಉಡುಪಿಯಲ್ಲಿ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮುಹಮ್ಮದ್ ಫೈಸಲ್ ಖಾನ್ (27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮುಹಮದ್ ಶರೀಫ್ (37) ಹಾಗೂ ಸುರತ್ಕಲ್ ಕೃಷಾಪುರದ ಅಬ್ದುಲ್ ಶುಕೂರು ಯಾನೆ ಅದ್ದು(43) ಬಂಧಿತ ಆರೋಪಿಗಳು. ಯಾವುದೋ ವ್ಯವಹಾರದ ಕಾರಣಕ್ಕಾಗಿ ಸಹಚರರೇ ಸೇರಿಕೊಂಡು ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಶನಿವಾರ ಮಣಿಪಾಲದಿಂದ ಕೊಡವೂರಿಗೆ ಒಂದೇ ಕಾರಿನಲ್ಲಿ ತೆರಳಿದ್ದ ಮೂವರು ಸಹಚರರು, ಸೈಫುದ್ದೀನ್ ತನ್ನ ಕೊಡವೂರಿನ ಮನೆಯ ಬಾಗಿಲು ತೆಗೆಯುತ್ತಿದ್ದಂತೆ ಹಿಂದಿನಿಂದ ಚೂರಿ ಹಾಗೂ ತಲವಾರಿನಿಂದ ಇರಿದು ಕೊಲೆಗೈದಿದ್ದರು. ಅಲ್ಲದೆ, ಈ ಹಿಂದೆ ಸೈಫುದ್ದೀನ್ ಮುಂದಾಳತ್ವದಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿಯೂ ಈ ಮೂವರು ಭಾಗಿಯಾಗಿದ್ದರು. ಈ ಮೂವರು ಆರೋಪಿಗಳು ಸೈಫುದ್ದೀನ್ನ ಜೊತೆಗಿದ್ದು, ವ್ಯವಹಾರಗಳಲ್ಲಿ ಸಹಕಾರ ನೀಡುತ್ತಿದ್ದರು. ಈ ನಿಟ್ಟಿನಲ್ಲಿ ಪೊಲೀಸರು ಮೂರು ತಂಡ…
ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣವೂ ಕೂಡ ಇದೆ ಎಂಬೂದನ್ನು ವಿಜ್ಞಾನ ತಿಳಿಸಿದೆ. ಹಿಂದೂ ಧರ್ಮದಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಹೆಚ್ಚಿನ ಪೂಜೆ ಹಾಗೂ ದೇವರ ಕಾರ್ಯಕ್ರಮಗಳಲ್ಲಿ ಉಪಯೋಗಿಸುತ್ತಾರೆ. ಈ ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.? ಯಾವ ಕಾರಣಕ್ಕಾಗಿ ವೀಳ್ಯದೆಲೆ ಹಾಗೂ ಅಡಿಕೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ ನೋಡಿ: ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…
ಬೆಂಗಳೂರು : ನಮ್ಮ ಕುಟುಂಬ ಮುಗಿಸೋಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಡಿಕೆಶಿ ನೀವು ಮುಂದೆ ಜೈಲಿಗೆ ಹೋಗುವ ದಿನ ಬರುತ್ತದೆ. ನೀವು ಯಾವ ರೀತಿ ಆಟ ಆಡುತ್ತಿದ್ದೀರಿ ನನಗೆ ಗೊತ್ತಿದೆ. ಎಲ್ಲದಕ್ಕೂ ದೇವರು ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕೊಟ್ಟೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿಯಲ್ಲಿ ಸರ್ಕಾರದಿಂದ ಮಾಡಲು ಉದ್ದೇಶಿಸಿರುವ ಇಂಟಿಗ್ರೇಟೆಡ್ ಟೌನ್ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ, ವರ್ಚುವಲ್ ಲೈವ್ ಮೂಲಕ ಮಾತನಾಡಿದ ಹೆಚ್ಡಿಕೆ, ನಾನು ಬದುಕಿರುವವರೆಗೂ ರೈತರ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಳ್ಳುವುದಕ್ಕೆ ಬಿಡೋದಿಲ್ಲ. ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಜೈಲಿಗೆ ಹೋಗೋ ಕಾಲ ಕೂಡ ಸನ್ನಿಹಿತವಾಗಿದ್ದು, ರೈತರ ಜೊತೆ ನಾನು ನಿಲ್ಲುತ್ತೇನೆ. ಅನಿವಾರ್ಯವಾದರೆ ನಾನೇ ಬರುತ್ತೇನೆ ಎಂದರು. ಕಳೆದ ಹಲವು ದಿನಗಳಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿಯಲ್ಲಿ ಸರ್ಕಾರದಿಂದ ಮಾಡಲು…
ಕೋಲಾರ : ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಬದ್ಧತೆ ಹಾಗೂ ಶೋಷಣೆ ಗೊತ್ತಿದೆ ಹಾಗಾಗಿಯೇ ಅವರು ಇಂದು ಜಾತಿಗಣತಿ ಮಾಡಿಸುತ್ತಿದ್ದಾರೆ. ಕುರುಬ ಸಮಾಜದವರು ಯಾಕೆ ಹಿಂದೂ ಧರ್ಮ ಬರೆಸಬೇಕು ಅಂದರೆ, ಹಿಂದೂ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದಂತವರು ಹಾಲುಮತಸ್ಥರು ಎಂದು ಕೋಲಾರದಲ್ಲಿ ಕಾಗಿನೆಲೆ ಶಾಖಾ ಮಠದ ಈಶ್ವರಾನಂದಪುರಿ ಶ್ರೀಗಳು ಹೇಳಿಕೆ ನೀಡಿದರು. ಕೋಲಾರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬೇರೆ ಯಾರೇ ಸಿಎಂ ಇದಿದ್ದರೆ ಗಣತಿ ನಡೆಯುತ್ತಿರಲಿಲ್ಲ ಜನರ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿ ತಿಳಿಯಲು ಸಮೀಕ್ಷೆ ಮಾಡಲಾಗುತ್ತಿದೆ ಸಿಎಂ ಸಿದ್ದರಾಮಯ್ಯ ಕೈಗೊಂಡಿರುವ ಎರಡನೇ ಬಾರಿಯ ಸಮೀಕ್ಷೆ ಯಶಸ್ವಿಯಾಗಬೇಕು ರಾಜ್ಯದಲ್ಲಿ ಧರ್ಮ ಬರೆಸುವ ವಿಚಾರದಲ್ಲಿ ಸಾಕಷ್ಟು ಗೊಂದಲದಲ್ಲಿದ್ದಾರೆ. ಕೆಲವರು ವೀರಶೈವ ಅಂತ ಬರೆಸಿದರೆ ಕೆಲವರು ಲಿಂಗಾಯತ ಬರಿಸುತ್ತಾರೆ. ಕೆಲವರು ಹಿಂದೂ ಎಂದು ಮತ್ತೆ ಕೆಲವರು ಬೇರೆ ಧರ್ಮವನ್ನು ಬರೆಸುತ್ತಾರೆ. ಯಾವುದೇ ಗೊಂದಲ ಉಪಜಾತಿಗಳಿಲ್ಲದ ಜಾತಿ ಎಂದರೆ ಕುರುಬ ಸಮಾಜ. ಇಂದು ಅಖಂಡ ಕರ್ನಾಟಕದಲ್ಲಿ ಕುರುಬ ಸಮಾಜಕ್ಕೆ ಯಾವುದೇ ಗೊಂದಲ ಇಲ್ಲ. ಕುರುಬ ಸಮಾಜದವರು ಯಾಕೆ…







