Author: kannadanewsnow05

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಡಿನ್ನರ್ ಪಾರ್ಟಿ ಭಾರಿ ಸದ್ದು ಮಾಡಿದ್ದು ಈ ವೇಳೆ ಇದಕ್ಕೆ ಬ್ರೇಕ್ ಹಾಕಲು, ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿಗೆ ಭೇಟಿ ನೀಡಿ ಸಚಿವರಿಗೆ ಕೆಲವು ಸೂಚನೆ ನೀಡಿದ್ದರು. ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಸ್ಪಷ್ಟನೆ ನೀಡಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ಮಾಡಿ ಎನ್ನುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಈ ಕುರಿತು ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಹೈಕಮಾಂಡ್ ನಿರ್ಧಾರ ಮಾಡಲಿ. ಸುರ್ಜೆವಾಲ ಜೊತೆಗೆ ಪಕ್ಷದ ಆಗುಹೋಗುಗಳು ಮತ್ತು ಸಂಘಟನೆಯ ಬಗ್ಗೆ ಚರ್ಚೆ ಮಾಡಲಾಗಿದೆ.ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕ ಆಗಬೇಕು ಎಂದು ಹೇಳಿದ್ದೇನೆ. ಅಥವಾ ಇವರನ್ನೇ…

Read More

ಮೈಸೂರು : ಕರ್ನಾಟಕ ಬಿಜೆಪಿಗೆ ಬಿಗ್‌ ಶಾಕ್‌ ಎದುರಾಗಿದೆ. ಹಾಸನದ ಮಾಜಿ ಶಾಸಕ ಪ್ರೀತಂ ಜೆ ಗೌಡ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನುವಂತಹ ಸುದ್ದಿ ಇದೀಗ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಕೆಲ ದಿನಗಳಿಂದ ಬಿಜೆಪಿ ಕಾರ್ಯಕ್ರಮಗಳಲ್ಲಿ ಮತ್ತು ಬಿಜೆಪಿ ವೇದಿಕೆಗಳಲ್ಲಿ ಅವರು ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ.ಬಿಜೆಪಿಯ ಯುವ ಮುಖಂಡರಲ್ಲಿ ಒಬ್ಬರಾಗಿರುವ ಪ್ರೀತಂ ಜೆ ಗೌಡ ಚಾಲ್ತಿಯಲ್ಲಿರುವ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ಸರಿಯಾದ ಯಾವುದೇ ಭವಿಷ್ಯವಿಲ್ಲ ಎಂದು ಕ್ರಮೇಣ ಪಕ್ಷದಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ಹೇಳಲಾಗಿದೆ. ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಪ್ರೀತಂ ಗೌಡ ಆಪ್ತರೊಬ್ಬರು ಬಹಿರಂಗ ಪಡಿಸಿದ್ದು, ಇದು ಭಾರತೀಯ ಜನತಾ ಪಾರ್ಟಿಗೆ ದೊಡ್ಡ ಆಘಾತವಾಗಿದೆ. ಬಿಜೆಪಿಯ ಯುವ ಮುಖಂಡರಲ್ಲಿ ಪ್ರಮುಖರಾಗಿರುವ ಪ್ರೀತಂ ಗೌಡ, ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ನನಗೆ ಯಾವುದೇ ಭವಿಷ್ಯವಿಲ್ಲ…

Read More

ಬೆಂಗಳೂರು : ಇತ್ತೀಚಿಗೆ ಮನುಷ್ಯ ಮಾನವೀಯತೆ ಅನ್ನೋದನ್ನೇ ಮರೆತುಬಿಟ್ಟಿದ್ದಾನೆ. ಇನ್ನು ಪ್ರಾಣಿಗಳಲ್ಲಿ ಮಾನವೀಯತೆ ಪ್ರೀತಿ ಕರುಣೆ ಇದೆ ಹೊರತು ಮನುಷ್ಯ ರಾಕ್ಷಸರಿಗಿಂತಲೂ ಕಡೆಯಾಗಿದ್ದಾನೆ.ಇದೀಗ ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ರಸ್ತೆ ಮೇಲೆ ತನ್ನ ಪಾಡಿಗೆ ಮಲಗಿದ್ದ ನಾಯಿಯ ಮೇಲೆ ಕಾರು ಹರಿಸಿ ಚಾಲಕನೊಬ್ಬ ವ್ಯಕ್ತಿ ಮೆರೆದಿರುವ ಘಟನೆ ವರದಿಯಾಗಿದೆ. ಹೌದು ಬೀದಿ ನಾಯಿ ಮೇಲೆ ಕಾರು ಹರಿಸಿ ವಿಕೃತಿ ಮೆರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜ.4 ರಂದು ಸಹಕಾರನಗರದ ಎಫ್ ಬ್ಲಾಕ್‌ನ 14ನೇ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು, ದೀಪಕ್ ಧನಂಜಯ್ ಶೋಧನ್ ಎಂಬುವವರು ನೀಡಿದ ದೂರಿನ ಅನ್ವಯ ಆರೋಪಿ ಥಾರ್ ಕಾರು ಚಾಲಕನ ವಿರುದ್ಧ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.4ರ ರಾತ್ರಿ ವೇಗವಾಗಿ ಬಂದ ಥಾರ್ ಚಾಲಕ, ರಸ್ತೆಯಲ್ಲಿ ತಮ್ಮ ಪಾಡಿಗೆ ತಾವು ಮಲಗಿದ್ದ ನಾಯಿಮರಿಗಳತ್ತ ಕಾರು ನುಗ್ಗಿಸಿದ್ದಾನೆ. ಈ ವೇಳೆ ಕಾರಿನ ಚಕ್ರಕ್ಕೆ ಸಿಕ್ಕ ನಾಯಿಯೊಂದು ಸ್ಥಳದಲ್ಲೇ ಒದ್ದಾಡಿ ಬಳಿಕ ಪಕ್ಕದ ಚರಂಡಿಯಲ್ಲಿ ಪ್ರಾಣಬಿಟ್ಟಿದೆ. ನಾಯಿಗಳಿಗೆ…

Read More

ಧಾರವಾಡ : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಯ ವಿಚಾರಣೆಯನ್ನು ನ್ಯಾ.ಎಂನಾಗಪ್ರಸನ್ನ ಅವರಿದ್ದ ಧಾರವಾಡ  ಹೈಕೋರ್ಟ್ ಏಕ ಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿ ಜನವರಿ 27 ಕ್ಕೆ ಮುಂದೂಡಿ ಆದೇಶ ಹೊರಡಿಸಿತು. ಹೌದು ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಅರ್ಜಿ ವಿಚಾರಣೆ ನಡೆದಿದ್ದು, ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಮಣಿಂದರ್ ಸಿಂಗ್ ಹಾಜರಾಗಿದ್ದು, ಸ್ನೇಹಮಯಿ ಕೃಷ್ಣ ಅವರ ಪರವಾಗಿ ಮಣಿಂದರ್ ಸಿಂಗ್ ಅವರು ವಾದ ಮಂಡಿಸಿದರು. ವಿಚಾರಣೆ ಆರಂಭದ ವೇಳೆಯಲ್ಲಿ ನ್ಯಾ.ಎಂ ನಾಗಪ್ರಸನ್ನ ಅವರು ಸಿಬಿಐ ತನಿಖೆಗೆ ವಹಿಸಬೇಕೆ ಬೇಡವೇ ಎಂಬ ಬಗ್ಗೆ ವಾದ ಸೀಮಿತಗೊಳಿಸಿ ಎಂದು ಎರಡು ಕಡೆ ವಕೀಲರಿಗೆ ಸೂಚನೆ ನೀಡಿದರು. ತನಿಖೆ ನಿಷ್ಪಕ್ಷಪಾತವಾಗಿರಬೇಕು ಜನರಲ್ಲಿ ವಿಶ್ವಾಸ ಮೂಡಿಸುವಂತಿರಬೇಕು. ರಾಜಕಾರಣಿಗಳು ಭಾಗಿಯಾಗಿರುವಾಗ ನಿಸ್ಪಕ್ಷಪಾತ ತನಿಖೆ ಕಷ್ಟ. ಹೀಗಾಗಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ…

Read More

ಹಾವೇರಿ : ನಿನ್ನೆ ಸಂಕ್ರಾಂತಿ ಹಬ್ಬದ ದಿನದಂದು ಘೋರವಾದ ದುರಂತ ಸಂಭವಿಸಿದ್ದು, ಪ್ರತ್ಯೇಕ ಘಟನೆಯಲ್ಲಿ ಪುಣ್ಯ ಸ್ನಾನಕ್ಕೆ ಎಂದು ನದಿಗೆ ಇಳಿದಿದ್ದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಹಾವೇರಿ, ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಂಗಳವಾರ ನದಿಯಲ್ಲಿ ಪುಣ್ಯ ಸ್ನಾನ ಮಾಡಲು ಇಳಿದ ಮೂವರು ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹೊಂಕಣ ಗ್ರಾಮದ ಬಳಿ ವರದಾ ನದಿಯಲ್ಲಿ ಇಳಿದ ರಮೇಶ ಕಡ್ಡೇರ(32) ನೀರು ಪಾಲಾಗಿದ್ದಾರೆ. ಅದೇ ರೀತಿಯಾಗಿ ಕೊಪ್ಪಳ ತಾಲೂಕಿನ ಕಾತರಕಿ ಜಾಕ್ವೆಲ್ ಸಮೀಪ ಸ್ನಾನ ಮಾಡಲು ಹೋಗಿದ್ದ ಶೇಖರಗೌಡ ನಾಗನಗೌಡ್ರ(30) ಎಂಬುವರು ನೀರು ಪಾಲಾಗಿದ್ದಾರೆ.ಇನ್ನು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಇಳಿದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ತಿಪ್ಪೇಶ್(21) ನೀರುಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ಹೊಯ್ಸಳ ನಗರದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಬಿಹಾರ್ ಮೂಲದ ವ್ಯಕ್ತಿ ಒಬ್ಬ ಅತ್ಯಾಚಾರ ಎಸಿಗಿದು ಅಲ್ಲಲೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿತ್ತು. ಇದೀಗ ಬಾಲಕಿಯ ಕೊನೆಯ ಕ್ಷಣದ ವಿಡಿಯೋ ವೈರಲ್ ಆಗಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಈ ಒಂದು ಬಾಲಕಿಯ ಕೊನೆ ಕ್ಷಣದ ವಿಡಿಯೋ ದೃಶ್ಯ ಸೆರೆಯಾಗಿದೆ. ಶಾಲಾ ಸಮವಸ್ತ್ರದಲ್ಲಿ ಬಾಲಕಿಯು ಒಂದು ರಸ್ತೆಯ ಮೂಲಕ ಓಡೋಡಿ ಬರುತ್ತಿದ್ದಾಳೆ. ಬಾಲಕಿ ಆರೋಪಿಯಿಂದ ತಪ್ಪಿಸಿಕೊಂಡು ಓಡುತ್ತಿರುವ ದೃಶ್ಯ ಒಂದು ಕಡೆ ಸೆರೆಯಾಗಿದೆ. ಬಳಿಕ ಅತ್ಯಾಚಾರ ಎಸಗಿ ಬಿಹಾರ್ ಮೂಲದ ವ್ಯಕ್ತಿ ಭೀಕರವಾಗಿ ಕೊಲೆ ಮಾಡಿದ್ದಾನೆ. ನಂತರ ಎರಡನೇ ದೃಶ್ಯದಲ್ಲಿ ಬಾಲಕಿಯನ್ನು ಸ್ಥಳೀಯರು ಬೈಕ್ ಮೇಲೆ ಬಾಲಕಿಯನ್ನು ಎತ್ತಿಕೊಂಡು ಆಸ್ಪತ್ರೆಗೆ ಸಾಗಿಸುವ ದೃಶ್ಯ ಮತ್ತೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ ನಗರದ ಹೊಯ್ಸಳ ನಗರದ ವಿನಾಯಕ‌ ಲೇಔಟ್ ನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕೃತ್ಯ ನಡೆದಿದ್ದು, ಅದೇ…

Read More

ಬೆಂಗಳೂರು : ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಮಚ್ಚು ಮತ್ತು ರಾಡ್ ನಿಂದ ಯುವಕನೊಬ್ಬನ ಮೇಲೆ ಹಲವರು ಹಲ್ಲೆ ನಡೆಸಲಾಗಿದ್ದು, ಹಲ್ಲ್ಯ ವೇಳೆ ಯುವಕನ ಮುಂಗೈ ಕಟ್ ಆಗಿದ್ದು, ತಕ್ಷಣ ಯುವಕನನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೈಲನರಸಾಪುರದಲ್ಲಿ ನಡೆದಿದೆ. ನಿನ್ನೆ ಯುವಕನ ವಾಹನವನ್ನು ಅಡ್ಡಗಟ್ಟಿ ಪುಂಡರು ರಸ್ತೆಯಲ್ಲಿ ಅಟ್ಟಹಾಸ ಮೆರೆದಿದ್ದಾರೆ. ಬೈಲನರಸಾಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗ್ರಾಮದ ಸೈಯದ್ ಎಂಬುವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಯ ಪರಿಣಾಮ ಯುವಕನ ಮುಂಗೈ ಕಟ್ಟಾಗಿದೆ. ಗ್ರಾಮದ ಸೈಯದ್ ಜುಲೈನ ಮೇಲೆ ಮಾರಣಾಂತಿಕ ಹಲ್ಲಿ ನಡೆಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಜಹೀದ್ ಖಾನ್ ಆದಿಲ್ ಸಾಮ್ರಾಟ್, ಹಾಗೂ ಆಸಿಫ್ ಖಾನ್ ಎನ್ನುವರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

Read More

ಶಿವಮೊಗ್ಗ : ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್‌, ರಸ್ತೆ ಬದಿಯಿರುವ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸೊರಬ ತಾಲ್ಲೂಕು ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿಯಲ್ಲಿ ನಡೆದಿದೆ. ಈ ಒಂದು ಭೀಕರ ಅಪಘಾತದಲ್ಲಿಕಳೆದ ಸೋಮವಾರ ತಡರಾತ್ರಿ 11 ಗಂಟೆಗೆ ಅಪಘಾತ ನಡೆದಿದೆ.ಈ ಒಂದು ಭೀಕರ ಅಪಘಾತದಲ್ಲಿ ಚಿಕ್ಕಕಬ್ಬೂರು ಗ್ರಾಮದ ಹನುಮಂತಪ್ಪ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಲ್ಲೂರು ವಡ್ಡಿಗೇರಿ ಗ್ರಾಮದ ಲಕ್ಷ್ಮವ್ವ (46) ಮತ್ತು ಕಣಸೋಗಿ ಗ್ರಾಮದ ರೇಣುಕಮ್ಮ (65) ಶಿಕಾರಿಪುರದ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.ಚಿಕ್ಕಕಬ್ಬೂರು ಗ್ರಾಮದ ಹನುಮಂತಪ್ಪ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಲ್ಲೂರು ವಡ್ಡಿಗೇರಿ ಗ್ರಾಮದ ಲಕ್ಷ್ಮವ್ವ (46) ಮತ್ತು ಕಣಸೋಗಿ ಗ್ರಾಮದ ರೇಣುಕಮ್ಮ (65) ಶಿಕಾರಿಪುರದ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಕಣಸೋಗಿಯಿಂದ ಎಸ್‌.ಎನ್‌.ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಎಸ್‌.ಎನ್‌. ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್‌ ಕಂಬಗಳಿಗೆ ಜೀಪ್‌ ಡಿಕ್ಕಿ ಹೊಡೆದು…

Read More

ಬೆಂಗಳೂರು : ಸಾರ್ವಜನಿಕರ ಎದುರು ಹವಾ ಸೃಷ್ಟಿಸಲು ಪುಂಡರು ಗನ್ ಮಚ್ಚುಗಳನ್ನು ಪ್ರದರ್ಶಿಸಿ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೈಲನರಸಾಪುರದಲ್ಲಿ ನಡೆದಿದೆ. ಹೌದು ಬೈಲನರಸಾಪುರದಲ್ಲಿ ಗನ್ ಮಚ್ಚು ಹಿಡಿದು ಪುಂಡರ ಅಟ್ಟಹಾಸ ಮೆರೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಸಾರ್ವಜನಿಕರ ಮಧ್ಯೆ ಹವಾ ಸೃಷ್ಟಿಸಲು ಪುಂಡರು ಮಚ್ಚು ಮತ್ತು ಗನ್ ಗಳನ್ನು ಪ್ರದರ್ಶಿಸಿ ಪುಂಡಾಟ ಮೆರೆದಿದ್ದಾರೆ. ಸಾರ್ವಜನಿಕರಲ್ಲಿ ಹವಾ ಸೃಷ್ಟಿಸಲು ಪುಂಡರು ಗನ್ ಮತ್ತು ಮಚ್ಚುಗಳನ್ನು ಪ್ರದರ್ಶಿಸಿ ಪುಂಡಾಟ ಮೆರೆದಿದ್ದಾರೆ. ಪುಂಡರ ಅಟ್ಟಹಾಸ ಮಿತಿ ಮೀರಿದರೂ ಕೂಡ ಪೊಲೀಸರು ಸೈಲೆಂಟ್ ಆಗಿದ್ದಾರೆ.ನಂದಗುಡಿ ಠಾಣೆಯ ಪೊಲೀಸರ ವಿರುದ್ಧ ಇದೀಗ ಗ್ರಾಮಸ್ಥರು ಅಸಮಾಧಾನ ಹೊರಹಾಕುತ್ತಿದ್ದಾರೆ.ಪುಂಡರ ಅಟ್ಟಹಾಸಕ್ಕೆ ಬ್ರೇಕ್ ಹಾಕುವಂತೆ ಗ್ರಾಮಸ್ಥರು ಇದೀಗ ಒತ್ತಾಯಿಸುತ್ತಿದ್ದಾರೆ.

Read More

ಹುಬ್ಬಳ್ಳಿ : ತನ್ನ ಪ್ರೇಯಸಿಯೊಂದಿಗೆ ಮನಸ್ತಾಪ ಉಂಟಾಗಿ ಯುವಕನೊಬ್ಬ ಆಕೆಯ ಖಾಸಗಿ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಂದೇಶ ಉಣಕಲ್ ಎಂದು ತಿಳಿದುಬಂದಿದ್ದು ಈತ ತನ್ನ ಪ್ರೇಯಸಿಯೊಂದಿಗೆ ಮನಸ್ತಾಪ ಮಾಡಿಕೊಂಡಿದ್ದಾನೆ. ಕಳೆದ ಶನಿವಾರ ಮನೆಯಿಂದ ನಾಪತ್ತೆಯಾಗಿದ್ದು ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಸಂದೇಶ, ಮೋಟಾರ್ ಬೈಕ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಏಕಾಏಕಿ ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ. ಈ ಕುರಿತು ಕುಟುಂಬಸ್ಥರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇನ್ನು ನನ್ನ ಸಾವಿಗೆ ಸಂಜನಾ ಕಾರಣ ಎಂದು ತಾಯಿ ವಾಯ್ಸ್ ಮೆಸೇಜ್ ಕಳುಹಿಸಿ ಸಾವಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.

Read More