Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಪದೇಪದೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಈ ವಿಚಾರವಾಗಿ ಆರ್ ಅಶೋಕ್ ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನ ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೆ ಕಾಂಗ್ರೆಸ್ ಹೈಕಮಾಂಡ್ ತ್ರಿಶಂಕು ಸ್ಥಿತಿಯಲ್ಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಟ್ವೀಟ್ ನಲ್ಲಿ ರಾಜ್ಯದಲ್ಲಿ “ರಣದೀಪ್” ಆಡಳಿತ ಜಾರಿ ಆಗಿದೆಯಾ❓ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಾ❓ಲಾಟರಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ”ರಣದೀಪ್ ” ಆಡಳಿತ ಹೇರಿದೆ. ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್ ಗಳಲ್ಲಿ ಅತೃಪ್ತ ಶಾಸಕಾರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ಸುರ್ಜೆವಲ ಅವರು, ಗುರುವಾರ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ, ಡಿಸಿಎಂ DK…
ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ ಆದರೂ ಕೂಡ ಕೆಲವು ಸ್ವಾಮೀಜಿಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆರ್ ಶೀಘ್ರದಲ್ಲಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದು, ಇದೀಗ ದಾವಣಗೆರೆಯಲ್ಲಿ ಡಿಕೆ ಶಿವಕುಮಾರ್ ಅವರ ಅಭಿಮಾನಿಗಳು ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಜೈ ಘೋಷ ಹಾಕಿರುವ ಘಟನೆ ನಡೆದಿದೆ. ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ವಿಚಾರ ಸದ್ಯಕ್ಕೆ ನಿಲ್ಲದಂತೆ ಕಾಣುತ್ತಿಲ್ಲ. ಏಕೆಂದರೆ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಅಭಿಮಾನಿಗಳು ಇದೀಗ ಪೂಜೆ ಮಾಡಿದ್ದಾರೆ. ದಾವಣಗೆರೆಯಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆದಿದ್ದು ನಗರ ದೇವತೆಯ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 101 ತೆಂಗಿನ ಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಆದಷ್ಟು ಬೇಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಜೈಕಾರ ಹಾಕಿದ್ದಾರೆ…
ಮಂಡ್ಯ : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳು ಮುಂದುವರೆದಿದ್ದು, ಇಂದು ಬೆಳಿಗ್ಗೆ ತಾನೇ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ಮನೆಯಲ್ಲಿ ಟೀ ಕುಡಿಯುತ್ತಿರುವಾಗಲೇ ಖುಸಿದು ಬಿದ್ದು ಹೃದಯಾಘಾತದಿಂದ ಸಾವನಪ್ಪಿದ್ದರು. ಇದೀಗ ಮಂಡ್ಯದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೌದು ಗುಮ್ಮನಹಳ್ಳಿಯಲ್ಲಿ ಮಂಜುನಾಥ್ (44) ಎನ್ನುವ ವಾವ್ಯಕ್ತಿ ಕ್ತಿ ಹೃದಯಘಾರದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು,ನಿನ್ನೆ ರಾತ್ರಿ ಮನೆಯಲ್ಲಿದ್ದಾಗ ಮಂಜುನಾಥ್ ಎನ್ನುವವರಿಗೆ ಎದೆ ನೋವು ಬಂದಿತ್ತು. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮಂಜುನಾಥ್ ಹೃದಯಘಾತದಿಂದ ಸಾವನಪ್ಪಿದ್ದಾರೆ.
ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜ್ವರದಿಂದ ಬಳಲುತ್ತಿದ್ದು, ಹಾಗಾಗಿ ಅವರು ಇದೀಗ ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಇಂದು ನಿಗದಿಯಾಗಿದ್ದ ಎಲ್ಲ ಸರ್ಕಾರಿ, ಖಾಸಗಿ ಕಾರ್ಯಕ್ರಮಗಳು ದಿಢೀರ್ ರದ್ದಾಗಿವೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಸದಾಶಿವ ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿ ಎಲ್ಲ ಕಾರ್ಯಕ್ರಮಗಳನ್ನ ರದ್ದು ಮಾಡಲಾಗಿದೆ.
ಗದಗ : ಸಾಮಾನ್ಯವಾಗಿ ಲವ್ ಜಿಹಾದ್ ಎಂದ ತಕ್ಷಣ ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಪ್ರೀತಿಸಿ, ಓಡಿ ಹೋಗಿ ಮದುವೆ ಆಗೋದನ್ನ ಲವ್ ಜಿಹಾದ್ ಎಂದು ಕರೆಯುತ್ತಾರೆ. ಆದರೆ ಈಗ ಗದಗದಲ್ಲಿ ವಿಚಿತ್ರವಾದ ಘಟನೆ ಒಂದು ನಡೆದಿದ್ದು ಮುಸ್ಲಿಂ ಯುವತಿ ಒಬ್ಬಳನ್ನು ವಿವಾಹವಾದ ಹಿಂದು ಯುವಕ ಮದುವೆಯಾದ ಬಳಿಕ ಯುವತಿಯ ವಿರುದ್ಧ ಲವ್ ಜಿಹಾದ್ ಆರೋಪ ಮಾಡಿದ್ದಾನೆ. ಈ ಒಂದು ಘಟನೆ ಗದಗದಲ್ಲಿ ನಡೆದಿದ್ದು ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಹೌದು ಯುವಕನಿಗೆ ಯುವತಿಯಿಂದಲೇ ಲವ್ ಆರೋಪ ಕೇಳಿ ಬಂದಿದ್ದು, ಮುಸ್ಲಿಂ ಯುವತಿಯ ವಿರುದ್ಧ ಹಿಂದೂ ಯುವಕ ಗಂಭೀರವಾದ ಆರೋಪ ಮಾಡಿದ್ದಾನೆ. ತಹಸಿನ್ ಹೊಸಮನಿ ಎಂಬ ಯುವತಿ ಜೊತೆಗೆ ವಿಶಾಲ್ ಕುಮಾರ್ ಪ್ರೇಮ ವಿವಾಹ ಆಗಿದ್ದ. ಗದಗದ ಗಾಂಧಿನಗರದ ಸೆಟಲ್ಮೆಂಟ್ ಏರಿಯಾದ ನಿವಾಸಿಯಾಗಿರುವ ವಿಶಾಲ್ ಕುಮಾರ್ ನವೆಂಬರ್ 24 2024 ರಂದು ಈ ಇಬ್ಬರು ರಿಜಿಸ್ಟರ್ ಮದುವೆಯಾಗಿದ್ದರು. ಮದುವೆ ಬಳಿಕ ಮುಸ್ಲಿಂ ಸಂಪ್ರದಾಯದಂತೆ ಮದುವೆಗೆ ತಹಸೀನ್ ಒತ್ತಾಯಿಸಿದ್ದಾಳೆ. ಬಳಿಕ ಏಪ್ರಿಲ್…
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನಲ್ಲಿ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಇದೀಗ ಪೊಲೀಸರು ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಭೈರತಿ ಬಸವರಾಜ್ ಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಬಿಜೆಪಿ ಶಾಸಕ ಭೈರತಿ ಬಸವರಾಜ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನನಗೆ ಯಾವುದು ಮಾಹಿತಿ ಇಲ್ಲ. ಯಾರು ಏನು ಅಂತ ಗೊತ್ತಿಲ್ಲ. ಯಾವುದೊ ದುರುದೇಶದಿಂದ ಈ ರೀತಿ ಪೊಲೀಸರಿಗೆ ಕಂಪ್ಲೇಂಟ್ ಕೊಟ್ಟಿದ್ದಾರೆ. ಪೊಲೀಸರಿಗೆ ಕಂಪ್ಲೇಂಟ್ ಕೊಡುವಾಗ, ನನಗೆ ಮಾಹಿತಿ ಕೇಳಬೇಕಾಗಿತ್ತು ಅಲ್ವಾ? ಏನು ಕೇಳದೆ ನನ್ನ ಮೇಲೆ FIR ದಾಖಲೆ ಮಾಡಿದ್ದಾರೆ.…
ಹಾಸನ : ಕಳೆದ ಒಂದುವರೆ ತಿಂಗಳಲ್ಲಿ ಹಾಸನ ಜಿಲ್ಲೆಯೊಂದರಲ್ಲಿ ಅತಿ ಹೆಚ್ಚು ಹೃದಯಘಾತದಿಂದ ಸರಣಿ ಸಾವುಗಳು ಸಂಭವಿಸಿದ್ದರ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆಏನ್ ರಾಜಣ್ಣ ಅವರು ಆರೋಗ್ಯ ಅಧಿಕಾರಿಗಳೊಂದಿಗೆ ಮಹಾತ್ವದ ಸಭೆ ನಡೆಸಿ, ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿರುವ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಎಂದು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳ ಹೃದಯ ತಪಾಸಣೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹಠಾತ್ ಸಾವುಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಇದೀಗ ಆರೋಗ್ಯ ತಪಾಸನೆ ಮಾಡಲಾಗುತ್ತಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ಶಾಲೆಗಳಿಗೆ ತೆರಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳೆ ತಪಾಸಣೆ ಮಾಡುತ್ತಿದ್ದಾರೆ. ಇತ್ತೀಚಿಗೆ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ…
ಬಾಗಲಕೋಟೆ : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನಪುತ್ತಿರುವವರ ಸರಣಿ ಸಾವುಗಳು ಮುಂದುವರೆದಿದ್ದು, ಇದೀಗ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಮನೆಯ ಹೊರಗಡೆ ಟೀ ಕುಡಿಯುತ್ತಿರುವಾಗಲೇ ಹೃದಯಾಘಾತದಿಂದ ನಗರ ಸಭೆಯ ಮಾಜಿ ಅಧ್ಯಕ್ಷ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹೃದಯಾಘಾತದಿಂದ ನಗರಸಭೆಯ ಮಾಜಿ ಅಧ್ಯಕ್ಷ ಸಿದ್ದು ಮೀಸಿ (63) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ನಗರಸಭೆಯ ಮಾಜಿ ಅಧ್ಯಕ್ಷರಾಗಿದ್ದ ಸಿದ್ದು ಮೀಸಿ ಮನೆಯ ಹೊರಗಡೆ ಚಹಾ ಕುಡಿಯುವ ವೇಳೆ ಹೃದಯಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಜಮಖಂಡಿಯ ಅಂಬೇಡ್ಕರ್ ಸರ್ಕಲ್ ಬಳಿ ಸಿದ್ದು ಮೀಸಿಯವರ ಮನೆ ಇದ್ದು, ಬೆಳಿಗ್ಗೆ ಈ ಒಂದು ಘಟನೆ ನಡೆದಿದೆ. ಮೃತ ಸಿದ್ದುಮೀಸಿ ಜಮಖಂಡಿ ತಾಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಸಹ ಆಗಿದ್ದರು.
ಬೆಂಗಳೂರು : ಕೋರ್ಟಿಗೆ ಬಂದು ಸಾಕ್ಷಿ ಹೇಳುತ್ತಾಳೆ ಎಂದು ಪತ್ನಿಗೆ ಪತಿಯೊಬ್ಬ ಚಾಕು ಇರಿದಿರುವ ಘಟನೆ ನಡೆದಿದೆ. ಪತ್ನಿ ಚಿನ್ನದ ಅಂಗಡಿಗೆ ಬಂದಾಗ ಪತ್ನಿಯ ಮೇಲೆ ಪತಿಯೊಬ್ಬ ಚಾಕುವಿನಿಂದ ಇರದಿದ್ದಾನೆ. 38 ವರ್ಷದ ಜಮುನಾ ಕುತ್ತಿಗೆಗೆ ಪಾಪಿ ಪತಿ ಗುರುಮೂರ್ತಿ ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿಂದ ನಡೆದಿದೆ. 11 ವರ್ಷದ ಕಲಹಕ್ಕೆ ಸಾಕ್ಷಿ ಹೇಳುತ್ತಾಳೆ ಅಂತ ಹಲ್ಲೆ ಮಾಡಿದ್ದಾನೆ. ಬೆಂಗಳೂರಿನ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಪತಿ ಗುರುಮೂರ್ತಿ ಅಟ್ಟಹಾಸ ಮೆರೆದಿದ್ದಾನೆ. ಮೂರು ದಿನಗಳ ಹಿಂದೆ ಪತ್ನಿ ಜಮುನಾ ಕಾಲು ಚೈನು ಖರೀದಿಗೆ ಚಿನ್ನದ ಅಂಗಡಿಗೆ ಬಂದಿದ್ದಳು ಈ ವೇಳೆ ಪತ್ನಿಯ ಹುಡುಕಿಕೊಂಡು ಪತಿ ಗುರುಮೂರ್ತಿ ಬಂದಿದ್ದ. ಜಮುನಾ ಚಲನವಲನ ಗಮನಿಸಿ ಪ್ಲಾನ್ ಮಾಡಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಕಳೆದ 11 ವರ್ಷಗಳಿಂದ ಜಮುನಾ ಮತ್ತು ಗುರುಮೂರ್ತಿ ಬೇರೆಯಾಗಿದ್ದರು. ಈ ಹಿಂದೆಯು ಕೂಡ ಪತ್ನಿಗೆ ಚಾಕುವಿನಿಂದ ಗುರುಮೂರ್ತಿ ಇರಿದಿದ್ದ. ಜಮುನಾಳನ್ನು ಕೊಲೆ ಮಾಡೋಕೆ ಪತಿ…
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನಲ್ಲಿ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಈ ಕುರಿತು ಬಿಜೆಪಿ ಶಾಸಕ ಭೈರತಿ ಬಸವರಾಜ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನನಗೆ ಯಾವುದು ಮಾಹಿತಿ ಇಲ್ಲ. ಯಾರು ಏನು ಅಂತ ಗೊತ್ತಿಲ್ಲ. ಯಾವುದೊ ದುರುದೇಶದಿಂದ ಈ ರೀತಿ ಪೊಲೀಸರಿಗೆ ಕಂಪ್ಲೇಂಟ್ ಕೊಟ್ಟಿದ್ದಾರೆ. ಪೊಲೀಸರಿಗೆ ಕಂಪ್ಲೇಂಟ್ ಕೊಡುವಾಗ, ನನಗೆ ಮಾಹಿತಿ ಕೇಳಬೇಕಾಗಿತ್ತು ಅಲ್ವಾ? ಏನು ಕೇಳದೆ ನನ್ನ ಮೇಲೆ FIR ದಾಖಲೆ ಮಾಡಿದ್ದಾರೆ. ಈ ವಿಚಾರ ಯಾರು ಏನು ಅಂತ ಮಾಹಿತಿ ಇಲ್ಲ ಅದಕ್ಕೂ ನನಗೂ ಯಾವುದೇ ರೀತಿ ಸಂಬಂಧ ಇಲ್ಲ. ಯಾರು ನನ್ನ ಹೆಸರು ಹೇಳಿದ್ದಾರೋ…













