Subscribe to Updates
Get the latest creative news from FooBar about art, design and business.
Author: kannadanewsnow05
ಗದಗ : ಇತ್ತೀಚಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ಎಷ್ಟೋ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳ ಹಿಂದೆ ಗದಗ್ ನಲ್ಲಿ ಪೊಲೀಸರು ಹಲವು ಬಡ್ಡಿ ದಂಧೆಕೋರರ ಮನೆಯ ಮೇಲೆ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಜಪ್ತಿ ಮಾಡಿದ್ದರು. ಇದೀಗ ಗದಗದಲ್ಲಿರುವ ಸಂಗಮೇಶ್ ದೊಡ್ಡಣ್ಣವರ್ ಎನ್ನುವ ಬಡ್ಡಿ ದಂಧೆಕೋರನ ಮನೆಯ ಮೇಲೆ ದಾಳಿ ಮಾಡಿ 26 ಲಕ್ಷ ರೂಪಾಯಿ ಪೊಲೀಸರು ಜತ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗಮೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಸಂಗಮೇಶ್ ದೊಡ್ಡಣ್ಣವರ ಮನೆಯಲ್ಲಿ 26.57 ಲಕ್ಷ ಹಣ ಜಪ್ತಿ ವಿಚಾರವಾಗಿ ಒಂದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮಗನ ಲಿವರ್ ಚಿಕಿತ್ಸೆಗೆ ತಂದಿಟ್ಟ ಹಣ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹಣ ಜಪ್ತಿ ಮಾಡಿದ್ದಕ್ಕೆ ಸಂಗಮೇಶ್ ದೊಡ್ಡಣ್ಣವರ್ ಇದೀಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮನೆಯಲ್ಲಿ ನೇಣು ತೆಗೆದುಕೊಂಡು ಸಂಗಮೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗದಗ ನಗರದ ಕಾಶಿವಿಶ್ವನಾಥ ಕಾಲೋನಿ ಮನೆಯಲ್ಲಿ…
ಬಳ್ಳಾರಿ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬ್ಯಾಂಕ್ ದರೋಡೆ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿತ್ತು. ಇದೀಗ ಬಳ್ಳಾರಿಯಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ನಕಲಿ ಚಿನ್ನ ಇಟ್ಟು ಬ್ಯಾಂಕ್ ಸಿಬ್ಬಂದಿಗಳೇ ಲಕ್ಷಾಂತರ ರೂಪಾಯಿ ವಂಚನೆ ಎಸಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು, ನಕಲಿ ಚಿನ್ನ ಇಟ್ಟು ವಂಚನೆ ಎಸಗಿರುವ ಆಕ್ಸಿಸ್ ಬ್ಯಾಂಕ್ ನ ಮೂವರು ಸಿಬ್ಬಂದಿಗಳ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಪೊಲೀಸ್ ಠಾಣೆಯಲ್ಲಿ ಮೂವರು ಸಿಬ್ಬಂದಿಗಳ ವಿರುದ್ಧ FIR ದಾಖಲಾಗಿದೆ. ಆಕ್ಸಿಸ್ ಬ್ಯಾಂಕ್ ನ ಅಡಮಾನ ವಿಭಾಗದ ಮುಖ್ಯಸ್ಥ ಕಾರ್ತಿಕ್, ಶ್ರೀನಿವಾಸ್ ಹಾಗೂ ಅಕ್ಕಸಾಲಿಗ ರಾಮನಗೌಡ ವಿರುದ್ಧ FIR ದಾಖಲಾಗಿದೆ. ಕಳೆದ ವರ್ಷ ಬೇರೆ ಶಾಖೆಗೆ ಆರೋಪಿಗಳು ವರ್ಗಾವಣೆಗೊಂಡಿದ್ದರು. ವರ್ಗಾವಣೆಯಾಗಿ ಒಂದು ವರ್ಷದ ಬಳಿಕ ಮೋಸ ಮಾಡಿರುವುದು ಪತ್ತೆಯಾಗಿದೆ. ಹೇಮಾವತಿ ಎಂಬುವರ…
ಬೆಂಗಳೂರು : ಬಿಜೆಪಿ ಎಂಎಲ್ಸಿ ಶಶಿಲ್ ನಮೋಶಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಪ್ರಕರಣವನ್ನು ರದ್ದು ಕೋರಿ ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆ ನಡೆಸಿದ ಹೈ ಕೋರ್ಟ್ ವಂಚನೆ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. 2009 ಮತ್ತು 2018ರ ನಡುವೆ ಸೊಸೈಟಿ ಆಡಳಿತ ಮಂಡಳಿ ಸದಸ್ಯರಾಗಿದ್ದ ನಮೋಶಿ ಮತ್ತಿತರರು ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ಟೈಫಂಡ್ ಮೊತ್ತವನ್ನು ಪಾವತಿಸಿಲ್ಲ ಮತ್ತು ಉಳಿಕೆ ಸೀಟುಗಳ ಶುಲ್ಕವನ್ನು ಮರು ಪಾವತಿಸಿಲ್ಲ ಎಂದು 2024 ಆಗಸ್ಟ್ ನಲ್ಲಿ HKES ಸದಸ್ಯ ಪ್ರದೀಪ್ ದುಬೈಟಿ ದೂರು ನೀಡಿದ್ದರು. ಈ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠವಂಚನೆ ಆರೋಪ ಸಂಬಂಧದ ಪ್ರಕರಣಗಳಲ್ಲಿ ನೋಂದ ವ್ಯಕ್ತಿ ಇಲ್ಲದೇ ಇತರರು 15 ವರ್ಷಗಳ ಬಳಿಕ ದೂರು ದಾಖಲಿಸುವುದಕ್ಕೆ ಅವಕಾಶವಿಲ್ಲ. ಆರೋಪ ಬೆಳಕಿಗೆ ಬಂದು 6 ವರ್ಷಗಳ ಬಳಿಕವೂ ಯಾವುದೇ ವಿದ್ಯಾರ್ಥಿ ತನಗೆ ಸ್ಟೈಫಂಡ್ ಬಂದಿಲ್ಲ ಎಂಬುದಾಗಿ ದೂರು ದಾಖಲಿಸಿಲ್ಲ ಎಂಬುದಾಗಿ ತಿಳಿಸಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿದಾಗ…
ಬೆಂಗಳೂರು : ಬೆಂಗಳೂರಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ನಿಂತಿದ್ದ ಸ್ಕೂಟರ್ ಗಳು ಹಾಗೂ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಹಾಗೂ ಓರ್ವ ದ್ವಿಚಕ್ರ ವಾಹನ ಸವಾರನಿಗೆ ಗಂಭೀರವಾದ ಗಾಯಗಳಾಗಿವೆ. ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿ ತಡರಾತ್ರಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂ ಗೊಂಡಿದೆ. ಅಪಘಾತದಲ್ಲಿ ಇಬ್ಬರು ಗಾಯಾಳುಗಳಿಗೆ ವೈದೇಹಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಹಲಸೂರು ಗೇಟ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಲಾರಿ ಹಾಗೂ ಟಿಟಿ ವಾಹನ ಮಧ್ಯ ಭೀಕರ ಅಪಘಾತ ಸಂಭವಿಸಿದೆ. ಈ ಒಂದು ಅಪಘಾತದಲ್ಲಿ ಬೆಂಗಳೂರು ಮಹಿಳೆ ಒಬ್ಬರು ಸಾವನ್ನಪ್ಪಿದ್ದು, ಇನ್ನೂಳಿದ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಧ್ಯಪ್ರದೇಶ ಕಟ್ನಾದಲ್ಲಿ ನಡೆದಿದೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಬೆಂಗಳೂರಿನಿಂದ ಟಿಟಿ ವಾಹನದಲ್ಲಿ ತೆರಳುತ್ತಿದ್ದರು. ಮಾರ್ಗ ಮಧ್ಯೆ ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಗಾಯಗೊಂಡ ಐವರನ್ನು ಮಧ್ಯಪ್ರದೇಶದ ಕಟನಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳುಗಳನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ವಿಜಯಪುರ : ಕಳೆದ ಕೆಲವು ದಿನಗಳ ಹಿಂದೆ ವಿಜಯಪುರದ ಮದಿನಾನ ನಗರದ ಬಳಿ ಭೀಮಾ ತೀರದ ಹಂತಕ ಭಾಗಪ ಹರಿಜನನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದಿತ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರದ 2ನೇ ಹೆಚ್ಚುವರಿ ಮತ್ತು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿಗಳಾದ ಪ್ರಕಾಶ್ ಮೇಲಿನಕೇರಿ ಅಲಿಯಾಸ್ ಪಿಂಟ್ಯಾ, ರಾಹುಲ್ ತಳಕೇರಿ, ಮಣಿಕಂಠ ಬೆನಕಪ್ಪ ಹಾಗೂ ಸುದೀಪ್ ಕಾಂಬಳೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರದ 2ನೇ ಹೆಚ್ಚುವರಿ ಮತ್ತು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣ ಹಿನ್ನೆಲೆ ಫೆಬ್ರವರಿ 11 ರಂದು ರಾತ್ರಿ ವಿಜಯಪುರ ನಗರದ ಮದೀನಾ ನಗರದ ಬಾಡಿಗೆ ಮನೆಯಲ್ಲಿದ್ದ ಭೀಮಾತೀರದ ಹಂತಕ ಬಾಗಪ್ಪ ಹರಿಜನನ್ನು ಪ್ರಕಾಶ ಅಲಿಯಾಸ್ ಪಿಂಟ್ಯಾ, ರಾಹುಲ ಭೀಮಾಶಂಕರ ತಳಕೇರಿ, ಸುದೀಪ ಕಾಂಬಳೆ ಹಾಗೂ ಮಣಿಕಂಠ ಅಲಿಯಾಸ್ ಗದಿಗೆಪ್ಪ ಶಂಕ್ರಪ್ಪ ಬೆನಕೊಪ್ಪ ಭಾಗಪ್ಪನನ್ನು ಕೊಡಲಿ ಮತ್ತು ತಲ್ವಾರ್ನಿಂದ ಕೊಚ್ಚಿ…
ಕೊಪ್ಪಳ : ಪೊಲೀಸರ ಸೋಗಿನಲ್ಲಿ ಬಂದ ವಂಚಕರನ್ನು ಅರಿಯದೇ ಮಹಿಳೆಯೊಬ್ಬರು ಚಿನ್ನಾಭರಣ ಕಳೆದುಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ. ಬಂಗಾರದ ಚೈನ್ ಅನ್ನು ಭದ್ರವಾಗಿ ಕಟ್ಟಿಕೊಡುತ್ತೇವೆಂದು ಮಹಿಳೆಗೆ ಕಲ್ಲು ಕಟ್ಟಿಕೊಟ್ಟು ಯಾಮಾರಿಸಲಾಗಿದೆ.ಮಹಿಳೆ ಕೂಡಲೇ ಕುಕನೂರು ಪೋಲಿಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಹೌದು ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ನಿವಾಸಿ ಸುಮಾ ಅಲಬೂರ ಎಂಬವರ ಒಂದೂವರೆ ತೊಲೆಯ ಬಂಗಾರದ ಸರವನ್ನು ಪೊಲೀಸರ ಸೋಗಿನಲ್ಲಿ ಕಳ್ಳರು ಕದ್ದು ಪರಾರಿಯಾಗಿದ್ದಾರೆ.ಇಬ್ಬರು ಬಂದು, ತಾವು ಪೊಲೀಸ್ ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾರೆ. ಪಟ್ಟಣದಲ್ಲಿ ಕಳ್ಳತನದ ಹಾವಳಿ ಹೆಚ್ಚಾಗಿದೆ. ಆಭರಣ ಮೈಮೇಲೆ ಧರಿಸಿ ಓಡಾಡಬೇಡಿ. ಹೀಗೆ ಓಡಾಡಿದರೆ ಯಾರಾದರೂ ಕಳ್ಳರು ಕದ್ದು ಪರಾರಿಯಾಗುತ್ತಾರೆ ಎಂದು ಹೇಳಿದ್ದಾರೆ. ಈ ವೇಳೆ ಮಹಿಳೆ ಇಬ್ಬರೂ ಕಳ್ಳರ ಮೈ ಮೇಲೆ ಪೊಲೀಸ್ ಸಮವಸ್ತ್ರ ಇಲ್ಲದಿರುವುದನ್ನು ನೋಡಿ ಪ್ರಶ್ನಿಸಿದ್ದಾಳೆ. ಆಗ ಸಮವಸ್ತ್ರದಲ್ಲಿ ಬಂದರೆ ಕಳ್ಳರು ಸಿಗಲ್ಲ ಎಂದು ಮಹಿಳೆಗೆ ತಿಳಿಸಿದ್ದಾರೆ.ಪಕ್ಕದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಇದೇ ರೀತಿ ಹೇಳಿ ಆತ ಬಿಚ್ಚಿಕೊಟ್ಟ…
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿದ್ದ ಮಾತ್ರಕ್ಕೆ ಅವರಿಗೆ ಏನು ಕಿರೀಟ ಇರಲ್ಲ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಡಿಕೆ ಶಿವಕುಮಾರ್ ಅವರ ಕುರಿತು ಹೇಳಿಕೆ ನೀಡಿದ್ದರು. ಇದೇ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ ರವರು ಕೆ ಎನ್ ರಾಜಣ್ಣ ಅವರ ಹೇಳಿಕೆಗೆ ತಿರುಗೇಟು ನೀಡಿದ್ದು, ಕೆಪಿಸಿಸಿ ಅಧ್ಯಕ್ಷರಿಗೆ ಕೊಂಬು ಇರುತ್ತೋ ಇಲ್ಲವೋ ಎನ್ನುವುದು ಹೈಕಮಾಂಡ್ ಗೆ ಗೊತ್ತಿರುತ್ತದೆ ಎಂದು ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ ಒಳ್ಳೆಯದಾಗಲಿ ಎನ್ನುವ ಭಾವನೆ ಎಲ್ಲರಿಗೂ ಇದೆ. ಕೆ ಎನ್ ರಾಜಣ್ಣಗೆ ಡಿಕೆ ಶಿವಕುಮಾರ್ ಮೇಲೆ ಪ್ರೀತಿ ಇದೆ. ಅದಕ್ಕೆ ಅವರು ಹಾಗೆ ಮಾತನಾಡುತ್ತಾರೆ. ಕಲ್ಲಿಗೆ ಏಟು ಬಿದ್ದಾಗಲೇ ಶಿಲೆ ಆಗುವುದು. ಅವರು ತಟ್ಟುತ್ತಿದ್ದಾರೆ ತಟ್ಟಲಿ. ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬು ಇದೆಯೋ ಇಲ್ಲವೋ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೋ ಇಲ್ವೋ ಮುಖ್ಯಮಂತ್ರಿ AICC ಅಧ್ಯಕ್ಷರು, ರಾಜ್ಯ ಉಸ್ತುವಾರಿಗಳನ್ನ ಕೇಳಿ.…
ಬೆಂಗಳೂರು : ಬೆಂಗಳೂರಿನಲ್ಲಿ ಪಿಜಿಯಲ್ಲಿ ವಾಸವಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹನುಮಂತ ನಗರದ ಪಿಜಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ವಿದ್ಯಾರ್ಥಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಆದಿತ್ಯಾ ಸಿಂಗ್ (19) ಎಂದು ತಿಳಿದುಬಂದಿದೆ. ಆದಿತ್ಯ ಸಿಂಗ್ ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 1st ಸೆಮಿಸ್ಟರ್ ಒದುತ್ತಿದ್ದನು. ಈತ ಮೂಲತಃ ಉತ್ತರಪ್ರದೇಶ ರಾಜ್ಯದವನಾಗಿದ್ದು, ಬೆಂಗಳೂರಿನಲ್ಲಿ ಅಭ್ಯಾಸ ಮಾಡುತ್ತಿದ್ದನು. ಆದರೆ, ಈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲಿಯೇ ಹನುಮಂತನರದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಹನುಮಂತನಗರ ಠಾಣೆ ಪೊಲೀಸರು ಪಿಜಿಗೆ ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದೀಗ ಮೃತದೇಹದ ಪೋಸ್ಟ್ ಮಾರ್ಟಂ ಬಳಿಕ ಪೋಷಕರಿಗೆ ಶವ ಹಸ್ತಾಂತರಿಸಲಾಗಿದೆ 2ನೇ ಪ್ರಕರಣ ಕಳೆದ ತಿಂಗಳು ಅಂದರೆ ಜ.18ರಂದು ಇದೇ ಬಿಎಂಎಸ್ ಕಾಲೇಜಿನ ಬಹುಮಹಡಿ…
ವಿಜಯಪುರ : ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಹಣ ವ್ಯಾಪ್ತಿಯಲ್ಲಿ 10 ಕಂಟ್ರಿ ಪಿಸ್ತೂಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ 24 ಜೀವಂತ ಗುಂಡುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ವಿಜಯಪುರ ತಾಲೂಕಿನ ಹಂಚಿನಾಳ ತಾಂಡದ ಪ್ರಕಾಶ ರಾಥೋಡ್ ಪ್ರಕಾಶ್ ರಾಠೋಡ್ ಬಳಿದ್ದ 1 ಕಂಟ್ರಿ ಸ್ಕೂಲ್ 3 ಜೀವಂತ ಗುಂಡುಗಳು ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೆ ಇನ್ನು 9 ಕಂಟ್ರಿ ಪೋಸ್ಟಲ್ ಗಳನ್ನು ಹಾಕಿ ಪಡೆದುಕೊಂಡಿರುವ ಪೊಲೀಸರು ಒಟ್ಟು 24 ಜೀವಂತ ಗುಂಡುಗಳನ್ನು ಜಪ್ತಿ ಮಾಡಿದ್ದಾರೆ. 9 ಜನರನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.