Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಬಳ್ಳಾರಿ ವಿಜಯನಗರ ಬೆಳಗಾವಿಯಲ್ಲಿ ಇದೀಗ ಕರೋನ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಹಿಂದೂ ಸಹ ಬೆಂಗಳೂರಿನಲ್ಲಿ ಎರಡು ಕರೋನಾ ಕೇಸ್ ಪತ್ತೆಯಾಗಿವೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ, ಆಸ್ಪತ್ರೆಯಲ್ಲಿರುವ ಗರ್ಭಿಣಿ ಹಾಗೂ ಬಾಣಂತಿಯರ ಮೇಲೆ ತೀವ್ರ ನಿಗಾ ಇಡಲಾಗಿದೆ. ಗರ್ಭಿಣಿಯರು ಹಾಗೂ ಬಾಣಂತಿಯರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಆಸ್ಪತ್ರೆಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಇದೀಗ ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ವೈದ್ಯರು ಬಾಣಂತಿಯರಿಗೆ ಮತ್ತು ಗರ್ಭಿಣಿಯರಿಗೆ ಸೂಚನೆ ನೀಡಿದ್ದಾರೆ. ಗರ್ಭಿಣಿಯರು ಹಾಗೂ ಬಾಣಂತಿಯರು ಎಚ್ಚರ ವಹಿಸಬೇಕು. ಮಾಸ್ಕ ಧರಿಸಬೇಕು ಹಾಗೂ ಜನಸಂದಣಿ ಸ್ಥಳಗಳಲ್ಲಿ ಓಡಾಡಬೇಡಿ. ಮಗುವಿನ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಮಗುವಿನ ಆರೋಗ್ಯದ ದೃಷ್ಟಿಯಿಂದ ಬಾಡಂತಿಯರು ಎಚ್ಚರಿಕೆ ವಹಿಸಬೇಕು ಎಂದು ವೈದ್ಯರು ಸೂಚನೆ ನೀಡಿದ್ದಾರೆ.
ಹಾವೇರಿ : ಕಳೆದ 2024 ಜನವರಿ 8ರಂದು ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ನಡೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ ಜೈಲಿನಿಂದ ರಿಲೀಸ್ ಆದ ಬೆನ್ನಲ್ಲೇ ಮೆರವಣಿಗೆ ರೋಡ್ ಶೋ ನಡೆಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಇದೀಗ ಜುಲೈ 3ರವರೆಗೆ ಆರೋಪಿಗಳು ಮತ್ತೆ ಜೈ ಸೇರಿದ್ದಾರೆ. ರೋಡ್ ಶೋ ನಡೆಸಿದ್ದ 7 ಆರೋಪಿಗಳಿಗೆ ಜೂನ್ 2 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.ಆರೋಪಿಗಳಿಗೆ ತಾಲೂಕು ಮ್ಯಾಜಿಸ್ಟ್ರೇಟ್ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಈ ಹಿನ್ನೆಲೆ ಆರೋಪಿಗಳನ್ನ ಮತ್ತೆ ಹಾವೇರಿ ಸಬ್ ಜೈಲಿಗೆ ಹಾಕಲಾಗಿದೆ. ಈ ಆರೋಪಿಗಳು ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದಲ್ಲಿ 17 ತಿಂಗಳು ಜೈಲಿನಲ್ಲಿದ್ದರು. ಕಳೆದ ನಾಲ್ಕು ದಿನಗಳ ಹಿಂದಷ್ಟೇ ಜಾಮೀನು ಪಡೆದು ಹೊರ ಬಂದಿದ್ದರು. ಜಾಮೀನು ಸಿಕ್ಕಿದ್ದೇ ತಡ ಆರೋಪಿಗಳು 30 ಕಿ.ಮೀ ರೋಡ್ ಶೋ ನಡೆಸಿದ್ದರು. ರೋಡ್ ಶೋ ವಿಡಿಯೋಗಳನ್ನು ಮಾಡಿ ಸಾಮಾಜಿಕ…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿಕೊಂಡು, ಕೃಷಿ ಹೊಂಡದಲ್ಲಿ ಕೈಕಾಲು ತೊಳೆಯುವಾಗ ಕಾಲು ಜಾರಿ ಬಿದ್ದು ಉಪನ್ಯಾಸಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚೇಳೂರು ತಾಲೂಕಿನ ವಂಗಿಮಳ್ಳು ಗ್ರಾಮದಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ಮೃತರನ್ನು ಶಂಕರರೆಡ್ಡಿ (48) ಎಂದು ತಿಳಿದುಬಂದಿದೆ. ಮೃತ ಶಂಕರರೆಡ್ಡಿ ತಮ್ಮ ಜಮೀನಿನಲ್ಲಿ ಕೃಷಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ಬರುವಾಗ ಜಮೀನು ಪಕ್ಕದ ಮಂಜುನಾಥ್ ರೆಡ್ಡಿಯವರ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಕೈಕಾಲು ತೊಳೆಯಲು ಹೋಗಿದ್ದಾರೆ.ಈ ವೇಳೆ ಅಲ್ಲಿನ ಪಾಚಿಯಿಂದಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಗ್ರಾಮದ ಉಪನ್ಯಾಸಕರಾಗಿದ್ದು, ಇದರ ಜೊತೆಯಲ್ಲಿ ಕೃಷಿ ಕೆಲಸ ಮಾಡುತ್ತಿದ್ದರು.
ಬೆಂಗಳೂರು : ಮದ್ಯ ಸೇವಿಸಲು ಹಣ ಕೊಡದಿದ್ದಕ್ಕೆ ಪತ್ನಿಯ ಜೊತೆ ಜಗಳವಾಡಿದ ಪತಿ, ಬಾತ್ರೂಮ್ ಆಸಿಡ್ ಸುರಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಸೀಡೆದಹಳ್ಳಿಯಲ್ಲಿ ನಡೆದಿದೆ. ಬಾತ್ರೂಮ್ ತೊಳೆಯುವ ಆಸಿಡ್ ನಿಂದ ಪತಿ ಸುರೇಶ್ ಪತ್ನಿಯ ಮೇಲೆ ದಾಳಿ ನಡೆಸಿದ್ದಾನೆ. ಪತ್ನಿಯ ಮೇಲೆ ಆಸಿಡ್ ದಾಳಿ ನಡೆಸಿದ ಪತಿಯನ್ನು ಸುರೇಶ್ ಎಂದು ತಿಳಿದುಬಂದಿದೆ. 26 ವರ್ಷಗಳ ಹಿಂದೆ ಸಂತ್ರಸ್ತೆಯನ್ನು ಆರೋಪಿ ಸುರೇಶ್ ಮದುವೆಯಾಗಿದ್ದ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನ ಊರಿನಲ್ಲಿ ಈ ದಂಪತಿಗಳು ವಾಸವಿದ್ದರು. ಮೈತುಂಬ ಸಾಲ ಮಾಡಿಕೊಂಡು ಸುರೇಶ್ ಕೆಲಸಕ್ಕೆ ಹೋಗುವುದನ್ನೇ ಬಿಟ್ಟಿದ್ದ. ಸಾಲಗಾರರ ಕಾಟಕ್ಕೆ ಎರಡು ತಿಂಗಳ ಹಿಂದೆ ಕುಟುಂಬ ಸಮೇತ ಬೆಂಗಳೂರಿಗೆ ಬಂದಿದ್ದ. ಬಾಗಲಗುಂಟೆ ಪೊಲೀಸ್ ಠಾಣೆಯ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಕುಟುಂಬ ವಾಸವಿತ್ತು. ಜೀವನ ನಡೆಸಲು ಸುರೇಶ್ ಪತ್ನಿ ಬ್ಯೂಟಿಷಿಯನ್ ಕೆಲಸಕ್ಕೆ ಹೋಗುತ್ತಿದ್ದರು. ಮೇ 19 ರಂದು ಸುರೇಶ್ ಮದ್ಯ ಸೇವಿಸಲು ಪತ್ನಿಯ ಬಳಿ ಹಣ ಕೇಳಿದ್ದಾನೆ. ಹಣಕೊಡದಿದ್ದಾಗ ಜಗಳ ಮಾಡಿಕೊಂಡು ಸುರೇಶ್ ಮನೆ ಬಿಟ್ಟು ಹೊರಗೆ ಹೋಗಿದ್ದ.…
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಮಲತಂದೆಯಿಂದಲೇ 3 ವರ್ಷದ ಬಾಲಕನ ಹತ್ಯೆ ನಡೆದಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಹಾರ್ ಮೂಲದ ನಾಲ್ವರು ಹಂತಕರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಅರೆಸ್ಟ್ ಮಾಡಿದ್ದಾರೆ. ಬಂಧಿತರು ಬಿಹಾರ್ ಮೂಲದವರು ಎಂದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರೋಗೋಪ್ಪ ಹತ್ತಿ ಫ್ಯಾಕ್ಟರಿಯಲ್ಲಿ ಮಹಿಳೆ ಮತ್ತು ಆಕೆಯ ಪತಿ ಕೆಲಸಕ್ಕೆ ಇದ್ದರು. ತನ್ನೊಟ್ಟಿಗೆ ಪುತ್ರ ಕಾರ್ತಿಕ್ ನನ್ನು ಮಹಿಳೆ ಕರೆದುಕೊಂಡು ಬಂದಿದ್ದಳು. ಮದ್ಯ ಸೇವಿಸಿ ಬಂದು ಪತ್ನಿಯ ಜೊತೆಗೆ ಮಹೇಶ್ವರ ಮಾಂಜಿ ಜಗಳವಾಡಿದ್ದ.ಮಹೇಶ್ವರ್ ಜೊತೆಗೆ ಮಹಿಳೆ 2ನೇ ಮದುವೆ ಆಗಿದ್ದಳು. ಹಾಗಾಗಿ ಮಗನನ್ನು ಯಾಕೆ ಕರೆದುಕೊಂಡು ಬಂದಿದ್ಯ ಅಂತ ಜಗಳ ಮಾಡಿದ್ದ ಮಲತೊಂದೆ ಮಹೇಶ್ವರ ಮಾಂಜಿ ಸೇರಿದಂತೆ ನಾಲ್ವರಿಂದ ಹಲ್ಲೆಗೆ ಯತ್ನಿಸಲಾಗಿದೆ. ಈ ವೇಳೆ 3 ವರ್ಷದ ಮಗನನ್ನು ತಾಯಿ ಬಿಟ್ಟು ಓಡಿ ಹೋಗಿದ್ದಾಳೆ. ಅಲ್ಲೇ ಇದ್ದ ಕಾರ್ತಿಕ್ ಮೇಲೆ ಪಾಪಿಗಳು ರಾಕ್ಷಸಿಯ ವರ್ತನೆ ತೋರಿದ್ದು ಕಟ್ಟಿಗೆಯಿಂದ ಹೊಡೆದು ಎಲ್ಲೆಂದರಲ್ಲಿ ಸುಟ್ಟು…
ಹಾಸನ : ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಭಾರಿ ಅವಾಂತರ ಸೃಷ್ಟಿಯಾಗಿದ್ದು, ನಿಯಂತ್ರಣ ತಪ್ಪಿ ಮೀನು ಸಾಗಿಸುತ್ತಿದ್ದ ಲಾರಿ ಒಂದು ಪಲ್ಟಿಯಾಗಿದೆ. ಹಾಸನ ಜಿಲ್ಲೆಯ ರಾಟೆ ಮನೆ ಬಳಿ ಈ ಒಂದು ಅಪಘಾತ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. KA-20 AB-4796 ನಂಬರಿನ ಲಾರಿ ಅಪಘಾತವಾಗಿದ್ದು, ಕೆಲ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಬೆಂಗಳೂರು : ರಾಜ್ಯದಲ್ಲಿ ಇದೀಗ ಕೊರೊನಾ ಸೋಂಕು ಏರಿಕೆ ಆಗುತ್ತಿದ್ದು, ಈಗಾಗಲೇ ಇಂದಿನಿಂದಲೇ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೊರೋನ ಟೆಸ್ಟ್ ನಡೆಸಲಾಗುತ್ತಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ನಿನ್ನೆ ಸೋಂಕಿಗೆ ವೃದ್ಧರೊಬ್ಬರು ಸಾವನ್ನಪ್ಪಿದ್ದರು. ಇದೀಗ ಬೆಂಗಳೂರಿನಲ್ಲಿ ಮತ್ತೆ ಎರಡು ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹೌದು ಬೆಂಗಳೂರಲ್ಲಿ ಮತ್ತೆ ಎರಡು ಕೊರೊನ ಪೊಸಿಟೀವ್ ಕೇಸ್ ಪತ್ತೆಯಾಗಿದ್ದು, ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಇಬ್ಬರಿಗೆ ಕೊರೊನ ಪೋಸಿಟಿವ್ ವರದಿ ಬಂದಿದೆ. 38 ವರ್ಷದ ಯುವಕ ಮತ್ತು 45 ವರ್ಷದ ವ್ಯಕ್ತಿಗಳಿಗೆ ಇದೀಗ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಟ್ರಾವೆಲ್ ಹಿಸ್ಟರಿ ಇಲ್ಲದೆ ಇಬ್ಬರಿಗೂ ಇದೀಗ ಕೊರೊನಾ ಸೋಂಕು ಒಕ್ಕರಿಸಿದೆ.ಹಾಗಾಗಿ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಬಂದಿದ್ದು, ಇದೀಗ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.
ಬೆಂಗಳೂರು : ಅತ್ಯಾಚಾರದ ಪ್ರಕರಣದಲ್ಲಿ ಮಡೆನೂರು ಮನು ವಶಕ್ಕೆ ಪಡೆದ ಪ್ರಕರಣ ಸಂಬಂಧ ಈಗ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು ವಿಷಯ ಗೊತ್ತಿದ್ದರೂ ಅತ್ಯಾಚಾರ ಸಂತ್ರಸ್ತರಿಗೆ ದೂರು ನೀಡದಂತೆ ತಡೆದಿದ್ದ ಕೆಲ ನಟ ನಟಿಯರನ್ನು ತನಿಖೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಹಾಗಾಗಿ ಕೆಲವು ಸಿನಿ ತಾರೆಯರಿಗೆ ಇದೀಗ ಭಯ ಶುರುವಾಗಿದೆ. ಅತ್ಯಾಚಾರ ಆರೋಪ ಹೊತ್ತಿರುವ ಮಡೇನೂರು ಮನು ಹಾಗೂ ಸಂತ್ರಸ್ತೆಯ ಇಬ್ಬರ ನಡುವಿನ 31 ತಿಂಗಳ ವಾಟ್ಸಾಪ್ ಚಾಟ್ ಈಗ ಪೊಲೀಸರು ಪಡೆದುಕೊಂಡಿದ್ದಾರೆ. ಸಂತ್ರಸ್ತ ಹಾಗೂ ನಟ ಮನು ಮದ್ಯ ಸಾವಿರಾರು ಸಂದೇಶಗಳ ವಿನಿಮಯವಾಗಿದ್ದು, 2022ರ ನವೆಂಬರ್ ಇಂದ 2025 ಮೇ ವರೆಗಿನ ವಾಟ್ಸಾಪ್ ಚಾಟ್ ಇದೀಗ ಪೊಲೀಸರು ಪಡೆದುಕೊಂಡಿದ್ದಾರೆ. ಮದುವೆ ಹೆಸರಿನಲ್ಲಿ ಅತ್ಯಾಚಾರ ಎಸಗಿ ದೈಹಿಕ ಹಲ್ಲೆ ಮಾಡಿದ್ದಾನೆ. ಜೀವ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೇ ದೂರಿನಲ್ಲಿ ಉಲ್ಲೆಖಿಸಿದ್ದಾರೆ. ನಟ ಮನುವನ್ನು ಕಸ್ಟಡಿಗೆ ಪಡೆದು ಇದೀಗ ಪೊಲೀಸರು ಹೇಳಿಕೆ ದಾಖಲಿಸಿದ್ದಾರೆ. ಮನುಗೆ ಸೇರಿದ ಎರಡು ಮೊಬೈಲ್ ಹಾಗೂ ಸಂತ್ರಸ್ತೇ ಎರಡು…
ಬೆಂಗಳೂರು : ನೈಋುತ್ಯ ಮುಂಗಾರು ಶನಿವಾರ ಕೇರಳ ಮತ್ತು ಕರ್ನಾಟಕ ಕರಾವಳಿಗೆ ಪ್ರವೇಶಿಸುವುದರೊಂದಿಗೆ, ಈ ಬಾರಿ ವಾಡಿಕೆಗಿಂತ ಒಂದು ವಾರ ಮುಂಚಿತವಾಗಿ ಮಳೆಗಾಲ ಆರಂಭವಾಗಿದೆ. 16 ವರ್ಷಗಳ ನಂತರ ಇಂತಹದ್ದೊಂದು ವಿಶೇಷ ದಾಖಲೆ ನಿರ್ಮಾಣವಾಗಿದೆ. ರಾಜ್ಯದಲ್ಲಿ ಒಂದು ವಾರಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಅವಧಿಗೂ ಮುನ್ನವೇ ಆಗಮಿಸಿ ಬೇಸಿಗೆಯ ಬೇಗೆಗೆ ತೆರೆ ಎಳೆದಿದೆ. ಹೌದು ನೈಋುತ್ಯ ಮುಂಗಾರು ಶನಿವಾರ ಕೇರಳ ಮತ್ತು ಕರ್ನಾಟಕ ಕರಾವಳಿಗೆ ಪ್ರವೇಶಿಸುವುದರೊಂದಿಗೆ, ಈ ಬಾರಿ ವಾಡಿಕೆಗಿಂತ ಒಂದು ವಾರ ಮುಂಚಿತವಾಗಿ ಮಳೆಗಾಲ ಆರಂಭವಾಗಿದೆ. ಕೇರಳದಲ್ಲಿ ಒಂದು ವಾರ ಮುಂಚೆಯೇ ಮುಂಗಾರು ಮಳೆ ಆರಂಭವಾಗಲಿದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ಆರಂಭವಾಗುತ್ತಿದ್ದು ಈ ಬಾರಿ ಒಂದು ವಾರದ ಮುಂಚೆಯೇ ಆರಂಭವಾಗಿದೆ. 2009ರಲ್ಲಿ ಮೇ 25ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗಿತ್ತು. ಹದಿನಾರು ವರ್ಷಗಳ ಹಿಂದೆ ಒಂದು ವಾರ ಮುಂಚೆ ಮುಂಗಾರು ಪ್ರವೇಶವಾಗಿತ್ತು. ವಿಶೇಷವೆಂದರೆ, ಕೇರಳಕ್ಕೆ ಪ್ರವೇಶಿಸಿ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸಾಮಾನ್ಯವಾಗಿ ಮನೆಯಲ್ಲಿ ನೈರುತ್ಯದಲ್ಲಿ ವಾಯುವ್ಯದಲ್ಲಿ ಪಶ್ಚಿಮದಲ್ಲಿ ದಕ್ಷಿಣದಲ್ಲಿ ಮಲಗುವ ಕೋಣೆಗಳು ಇರುವುದು ಸರ್ವೇಸಾಮಾನ್ಯ ಆದರೆ ಬಹಳಷ್ಟು ಮನೆಗಳಲ್ಲಿ ನಾವು ನೈರುತ್ಯದಲ್ಲಿ ಬೆಡ್ರೂಮ್ ಮಲಗು ಕೊಣೆ ಮಾಡಿದ್ದೇವೆ ಎನ್ನುವ ವಿಚಾರ ತಿಳಿಸುತ್ತಾರೆ ಹೊರತಾಗಿ ನೈರುತ್ಯದ ಪ್ರಭಾವ ಏನು ಎತ್ತ ಎನ್ನುವುದನ್ನು ಅರಿತುಕೊಂಡಿಲ್ಲ. ಈಗಾಗಲೇ ಈಶಾನ್ಯದ ಕೋಣೆಯನ್ನು ಮಲಗೋ ಕೋಣೆ ಅಥವಾ ಸ್ಟಡಿ ರೂಮ್ ಮಾಡಿದ್ದಲ್ಲಿ ಏನು ಎತ್ತ ಎನ್ನುವ ವಿಚಾರವನ್ನು ಈಗಾಗಲೇ ತಿಳಿಸಲಾಗಿದೆ ಆದರೆ ನೈರುತ್ಯ ಕೋಣೆಯನ್ನು ಮಕ್ಕಳಿಗಾಗಿ ಮೀಸಲಿರಿಸಿದ್ದಲ್ಲಿ ಅದು ಎಷ್ಟು ಸಮಂಜಸ ಅಥವಾ ಸೂಕ್ತ ಎಂಬುವುದನ್ನು ತಿಳಿಯೋಣ. ಮನೆಯ ವಾಸ್ತು ವಿಚಾರಕ್ಕೆ ಬಂದಾಗ ಶೀಘ್ರವಾಗಿ ಪರಿಣಾಮ ಮತ್ತು ಫಲಿತಾಂಶ ಏನಾದರೂ ಇದೆ ಅಂದಾಗ ಅದು ನೈರುತ್ಯದ ಭಾಗ ನೈರುತ್ಯದ ಭಾಗ ರಾಹು ರಾಕ್ಷಸತ್ವ ಮತ್ತು ಪೃಥ್ವಿ ತತ್ವಕ್ಕೆ ಸಂಬಂಧಪಟ್ಟಂತದ್ದು. ಸಾಮಾನ್ಯವಾಗಿ ಎಲ್ಲರೂ ತಿಳಿದಿರುವ ಹಾಗೆ ಮನೆಯ ಯಜಮಾನ ಮತ್ತು ಯಜಮಾನಿಯ…














