Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಕೋಡಿಮಠದ ಶ್ರೀಗಳು ಆಗಾಗ ದೇಶದ, ರಾಜ್ಯದ ಬಗ್ಗೆ ಭವಿಷ್ಯವನ್ನ ನುಡಿಯುತ್ತಲೇ ಇರುತ್ತಾರೆ. ಅದು ಯಾವಾಗಲೂ ನಿಜವಾಗಿದೆ ಕೂಡ. ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ಮತ್ತೆ ರಾಜಕೀಯ ಕುರಿತು ಭವಿಷ್ಯ ನುಡಿದಿದ್ದು, ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ ಎಂದು ಹೇಳಿದ್ದಾರೆ. ಇನ್ನು ಕೊರೊನ ಸೋಂಕು ಕುರಿತು ಈಗಾಗಲೇ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ಸಂಬಂಧ ಈಗಾಗಲೇ ಜನರಿಗೆ ಆತಂಕ ಶುರುವಾಗಿದೆ. ಇದರನಡುವೆ ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಇನ್ನು ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟದ ತೊಂದರೆಯಾಗಿ ಸಾವು ಸಂಭವಿಸುವ ಸಾಧ್ಯತೆ ಇರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಲೋಕಕ್ಕೆ ವಾಯು ಹಾಗೂ ಜಲದಿಂದ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪುವ ಸಾಧ್ಯತೆ ಇದೆ. ಭೂಕಂಪಗಳು ಸಂಭವಿಸಲಿವೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸನ ಮನೆಗೆ ಕಾರ್ಮೋಡ ಕವಿದಿತ್ತು. ಯುದ್ಧ ಭೀತಿ ಮತ್ತೆ ಆರಂಭವಾಗಲಿದೆ. ಜನರಲ್ಲಿ…
ಹಾಸನ : ವಿರಾಜಪೇಟೆ ಕಾಂಗ್ರೆಸ್ ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ 35 ವರ್ಷದ ಶೃತಿ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶೃತಿ ಮನೆಯಲ್ಲಿಯೇ ವಿಷ ಸೇವಿಸಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಹೀಗಾಗಿ ಅವರನ್ನು ಹಾಸನದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಲ್ಗನೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶೃತಿ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ನಿಗೂಢವಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.
ಮೈಸೂರು : ನಿನ್ನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಕೆರೆಗೆ ಹಾರಿ ಒಂದೇ ಕುಟುಂಬದ ಮೂರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕುಟುಂಬಕ್ಕೆ ಕಾನೂನು ಪದವಿ ಓದುತ್ತಿದ್ದ ಹಿರಿಯ ಮಗಳ ತೀರ್ಮಾನವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮರ್ಯಾದೆಗೆ ಹೆದರಿ ತಂದೆ ತಾಯಿ ಮತ್ತು ಮತ್ತೋರ್ವ ಪುತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ನಿನ್ನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದ ಮಹದೇವಸ್ವಾಮಿ ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಕೆರೆಯಲ್ಲಿ ಮೂವರ ಮೃತ ದೇಹಗಳು ಪತ್ತೆಯಾಗಿವೆ. ಮಾದೇವಸ್ವಾಮಿ ಮತ್ತು ಮಂಜುಳಾ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಅರ್ಪಿತಾ ಮತ್ತು ಹರ್ಷಿತ ಇಬ್ಬರು ಹೆಣ್ಣುಮಕ್ಕಳ ಜೊತೆಗೆ ಪೋಷಕರು ವಾಸವಾಗಿದ್ದರು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗ್ರಾಮ ಬಿಟ್ಟು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ ವಾಸಿಸುತ್ತಿದ್ದರು. ಎಚ್ ಡಿ ಕೋಟೆಯಲ್ಲೂ ಕೂಡ…
ಯಾದಗಿರಿ : ಜಿಲ್ಲಾ ಕಾಂಗ್ರೆಸ್ನ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ತನ್ನ ಪತ್ನಿಯನ್ನು ಕೆಳಗಿಳಿಸಿ ಆಕೆಯ ಸ್ಥಾನದಲ್ಲಿ ಬೇರೊಬ್ಬರನ್ನು ನೇಮಿಸಿದ್ದಕ್ಕೆ ಆಕ್ರೋಶಗೊಂಡ ಪತಿ, ಜಿಲ್ಲಾ ಕಾಂಗ್ರೆಸ್ ಕಚೇರಿಗೇ ಬೆಂಕಿಯಿಟ್ಟ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲಾ ಕಾಂಗ್ರೆಸ್ನ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ಮಂಜುಳಾ ಗೂಳಿಯವರನ್ನು ಶುಕ್ರವಾರವಷ್ಟೇ ಬದಲಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಮಹಿಳಾ ಘಟಕದ ಅಧ್ಯಕ್ಷೆಯಾಗಿ ನಿಲೋಫರ್ ಬಾದಲ್ ಎಂಬುವರನ್ನು ಆಯ್ಕೆ ಮಾಡಲಾಗಿತ್ತು. ವಿರೋಧದ ಮಧ್ಯೆಯೂ ಪತ್ನಿಯ ಸ್ಥಾನಕ್ಕೆ ನಿಲೋಫರ್ ಬಾದಲ್ರನ್ನು ಆಯ್ಕೆ ಮಾಡಿದ್ದಕ್ಕೆ ಮಂಜುಳಾ ಅವರ ಪತಿ, ಪಿಯು ಉಪನ್ಯಾಸಕನಾಗಿರುವ ಶಂಕರ್ ಗೂಳಿ ಆಕ್ರೋಶಗೊಂಡಿದ್ದ. ಹೀಗಾಗಿ, ಶಂಕರ್ ಗೂಳಿ ರೌಡಿಶೀಟರ್ ಬಾಪುಗೌಡ ಅಗತೀರ್ಥ ಎಂಬಾತನ ಜೊತೆಗೂಡಿ ಶನಿವಾರ ಬೆಳಗಿನ ಜಾವ ನಗರದ ಕನಕದಾಸ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯ ಕಟ್ಟಡದ ಬಾಗಿಲು ಮತ್ತು ಕಿಟಕಿಗೆ ಪೆಟ್ರೋಲ್ ಸುರುವಿ, ಬೆಂಕಿಯಿಟ್ಟಿದ್ದಾನೆ. ಘಟನೆಯಿಂದಾಗಿ ಕಚೇರಿಯ ಕಿಟಕಿ, ಬಾಗಿಲು, ಎಸಿ, ಸೋಫಾ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ರಾತ್ರಿ ವೇಳೆ ಬೆಂಕಿ ಹಚ್ಚಿದ್ದರಿಂದ ಯಾವುದೇ ಪ್ರಾಣ ಹಾನಿ…
ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ, ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಇದಲ್ಲದೇ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಭಾರೀ ಮಳೆಯಾಗಲಿದೆ. ಹೀಗಾಗಿ 6 ಜಿಲ್ಲೆಗಳಲ್ಜ್ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ವ್ಯಾಪಕ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಮೇ 24ರಿಂದ ಮೇ 27ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಹಾಸನ, ಧಾರವಾಡ, ಚಾಮರಾಜನಗರ ಜಿಲ್ಲೆಗೆ ಆರೆಂಟ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಲಬುರಗಿ : ರಾಜ್ಯ ವಿಧಾನಸಭೆಗೆ ಈಗ ಚುನಾವಣೆ ನಡೆದರೆ ಬಿಜೆಪಿ 150-160 ಸ್ಥಾನ ಗೆಲ್ಲುತ್ತೆ ಎಂದು ಖಾಸಗಿ ಸಮೀಕ್ಷೆಯೊಂದು ಹೇಳಿದೆ ಎಂದು ಕಲಬುರ್ಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ಛಲವಾದಿ ನಾರಾಯಣ ಸ್ವಾಮಿ ಯವರ ಗೃಹಬಂಧನ ಖಂಡಿಸಿ, ಬಿಜೆಪಿ ಹಮ್ಮಿಕೊಂಡಿದ್ದ ಕಲಬುರಗಿ ಚಲೋದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗ್ಯಾರಂಟಿ ಜಾರಿ ಹಿನ್ನೆಲೆಯಲ್ಲಿ ರಾಜ್ಯ ದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿ ತಗೊಂಡಿವೆ. ಹೀಗಾಗಿ, ಜನ ಬೇಸರಗೊಂಡಿದ್ದಾರೆ ಎಂದು ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ಆಪರೇಷನ್ ಸಿಂದೂರದ ಬಗ್ಗೆ ಇಡೀ ಜಗತ್ತೆ ಮೆಚ್ಚಿದೆ. ಆದರೆ, ಕಾಂಗ್ರೆಸ್ ನವರು ಮಾತ್ರ ಅಪಸ್ತರದ ಮಾತನಾಡುತ್ತಿದ್ದಾರೆ.’ನಮ್ಮ ಪಾಕಿ ಸ್ತಾನ’ ಅಂತ ಎಐసిసి ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಯವರೇ ಹೇಳುತ್ತಾರೆ. ಇದನ್ನು ಪ್ರಶ್ನೆ ಮಾಡಿದ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಈ ಅವಮಾನ ಮಾಡೋ ದಾ? ಎಂದು ಪ್ರಶ್ನಿಸಿದರು.ಅಧಿಕಾರ ಶಾಶ್ವತ ಅಲ್ಲ ಪ್ರಿಯಾಂಕ್ ಖರ್ಗೆಯವರೇ, ದರ್ಪ, ಸೊಕ್ಕು ಮುರಿಯುವ ಕೆಲಸ ಈ ಭಾಗದ ಜನ ಮಾಡ್ತಾರೆ.…
ತುಮಕೂರು : ತುಮಕೂರಲ್ಲಿ ಘೋರ ದುರಂತ ನಡೆದಿದ್ದು, ಮನೆ ಹತ್ತಿರ ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ಹಿಂಡೊಂದು ತಲೆಯ ಚರ್ಮ ಹಾಗೂ ಕರುಳಿನ ಭಾಗ ಹೊರಗೆ ಬರುವಂತೆ ದಾಳಿ ನಡೆಸಿದ್ದು, 6 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ನಡೆದಿದೆ. ಅಯ್ಯನಬಾವಿ ನಿವಾಸಿ ದಿವ್ಯಾ (6) ಮೃತ ಮಗು ಎಂದು ತಿಳಿದುಬಂದಿದೆ. ಮಹಲಿಂಗಯ್ಯ ಅವರ ಮಗಳು ಎಂದಿನಂತೆ ಮನೆ ಹತ್ತಿರ ಆಟವಾಡುತ್ತಿದ್ದ ಸಮಯದಲ್ಲಿ ನಾಯಿಗಳ ಹಿಂಡು ಏಕಾಏಕಿ ದಾಳಿ ನಡೆಸಿದ್ದು, ಮಗುವನ್ನು ಕಿತ್ತು ತಿನ್ನಲು ಯತ್ನಿಸಿವೆ. ಪರಿಣಾಮ ಮಗುವಿನ ತಲೆಯ ಚರ್ಮ, ಹೊಟ್ಟೆಯಲ್ಲಿನ ಕರಳು ಆಚೆ ಬಂದಿವೆ. ಮಗುವಿನ ಮುಖ, ಕೈ, ಕಾಲು ತೊಡೆ ಭಾಗಗಳನ್ನ ನಾಯಿಗಳು ಕಿತ್ತು ಹಾಕಿವೆ. ರಕ್ತದ ಮಡುವಿನಲ್ಲಿ ಬಿದ್ದು ಚೀರಾಡುತ್ತಿದ್ದ ಮಗುವನ್ನ ಕಂಡ ಸಾರ್ವಜನಿಕರು ನಾಯಿಗಳ ಹಿಂಡನ್ನು ಓಡಿಸಿ ಕೂಡಲೇ ತಿಪಟೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಹಾಸನ ಮೆಡಿಕಲ್ ಕಾಲೇಜು…
ಬೆಂಗಳೂರು : ಇಂದು ಕೇಂದ್ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (UPSC) ನಡೆಯಲಿದೆ. ಹೀಗಾಗಿ, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ನಮ್ಮ ಮೆಟ್ರೋ ಸಂಚಾರ ಒಂದು ಗಂಟೆ ಮುಂಚಿತವಾಗಿ ಅಂದರೆ 6 ಗಂಟೆಗೆ ಆರಂಭವಾಗಲಿದೆ. ಹೌದು ಇಂದು ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಲಿದೆ. ಪ್ರತಿ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಮೆಟ್ರೋ ರೈಲು ಸಂಚಾರ ಆರಂಭ ಆಗುತ್ತಿತ್ತು. ಇಂದು ಯುಪಿಎಸ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಒಂದು ಗಂಟೆ ಮುಂಚಿತವಾಗಿ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಲಿದೆ. ನಾಲ್ಕು ಟರ್ಮಿನಲ್ ಗಳಾದ ವೈಟ್ ಫೀಲ್ಡ್, ಚಲ್ಲಘಟ್ಟ, ಮಾದಾವರ ಹಾಗೂ ರೇಷ್ಮೆ ಸಂಸ್ಥೆಯಿಂದ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲುಗಳು ಸಂಚಾರ ಆರಂಭಿಸಲಿದೆ. ನೇರಳೆ ಹಸಿರು ಎರಡು ಮಾರ್ಗದಲ್ಲೂ ಕೂಡ ಬೆಳಗ್ಗೆ 6 ಗಂಟೆಯಿಂದಲೇ ಸಂಚಾರ ಆರಂಭಿಸಲಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಒಂದು ತಿಂಗಳಿಗಾಗುವಷ್ಟು ಟೆಸ್ಟ್ ಕಿಟ್ ತೆಗೆದಿಡುವಂತೆ ಸೂಚನೆ ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಅಲ್ಲದೇ ನಿನ್ನೆ ಬೆಂಗಳೂರಲ್ಲಿ ಕೊರೊನ ಸೊಂಕಿಗೆ ವೃದ್ಧರೊಬ್ಬರರು ಬಲಿಯಾಗಿದ್ದಾರೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆಯಿಂದ ದಾಖಲಾಗಿರುವ ರೋಗಿಗಳಿಂದ ಆಸ್ಪತ್ರೆ ಸಿಬ್ಬಂದಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಬೇಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಿ. ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ.…
ಬೆಂಗಳೂರು : ರಾಜ್ಯಕ್ಕೆ ಕೊರೊನಾ ಮತ್ತೆ ಒಕ್ಕರಿಸಿದೆ. ರಾಜ್ಯಾದ್ಯಂತ 38 ಸಕ್ರಿಯ ಪ್ರಕರಣಗಳು ದೃಢಪಟ್ಟಿದ್ದು, ಅದರಲ್ಲಿ 32 ಬೆಂಗಳೂರಿನಲ್ಲಿವೆ. ವಿಜಯನಗರ, ಮೈಸೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ಕಾಲಿಟ್ಟಿದೆ. ಕೊರೊನಾದಿಂದ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೌದು ನಿನ್ನೆ ಬೆಂಗಳೂರಿನಲ್ಲಿ ವೈಟ್ ಫೀಲ್ಡ್ ನ 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ.ನಿನ್ನೆ ವಿಜಯನಗರ ಜಿಲ್ಲೆಯಲ್ಲಿ ಒಬ್ಬರು, ಮೈಸೂರಿನಲ್ಲಿ ಇಬ್ಬರಿಗೆ ಮತ್ತು ಬೆಂಗಳೂರಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಕೆಲ ಸಲಹೆಗಳನ್ನು ನೀಡಿದ್ದಾರೆ. ಸಲಹಾ ಸಮಿತಿ ಸೂಚನೆ ಮೇರೆಗೆ ಇಂದಿನಿಂದ ದಿಂದ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ…














