Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಆಹಾರ ಇಲಾಖೆ ಸಮರ ಸಾರಿದ್ದು, ಆಹಾರ ಗುಣಮಟ್ಟಗಳ ಕುರಿತಂತೆ ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಕಡೆಗಳಲ್ಲಿ ಹಲವು ಆಹಾರ ಪದಾರ್ಥಗಳ ಗುಣಮಟ್ಟ ಪರೀಕ್ಷಿಸಿ ಕೆಲವನ್ನು ಈಗಾಗಲೇ ಬ್ಯಾನ್ ಮಾಡಿದೆ. ಇದೀಗ ಐಸ್ ಕ್ರೀಮ್ ಮತ್ತು ಪನ್ನೀರ್ ಆದ ಬಳಿಕ ತುಪ್ಪ ಹಾಗು ಕೋವಾ ಸರದಿ ಆಗಿದ್ದು, ಕೋವಾದಲ್ಲೂ ಕೂಡ ಕಲಬೆರಿಕೆ ಅಂಶ ಇದೀಗ ಆಹಾರ ಇಲಾಖೆಯ ಪರೀಕ್ಷೆಯಲ್ಲಿ ಹಾನಿಕಾರಕ ಅಂಶ ಬಯಲಾಗಿದೆ ಎಂದು ಆಹಾರ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಬೆಂಗಳೂರಿನ ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಸಿಹಿ ತಿಂಡಿಗಳಿಗೆ ಬಳಸುವ ಕೋವಾದಲ್ಲಿ ಕಲಬೆರಿಕೆ ಅಂಶ ಬಯಲಾಗಿದೆ. ಕೋವಾದಲ್ಲಿ ಕಲಬೆರಿಕೆ ವಿಚಾರ ಇದೀಗ ಬಹಿರಂಗವಾಗಿದೆ. ಆಹಾರ ಇಲಾಖೆ ಪರೀಕ್ಷೆಯಲ್ಲಿ ಇದೀಗ ಕಲಬೆರಿಕೆ ಬಯಲಾಗಿದೆ. ಐಸ್ ಕ್ರೀಮ್ ಪನ್ನೀರ್ ಆಯ್ತು ಇದೀಗ ಕೊವಾದಲ್ಲಿ ಕಲಬರಿಕೆ ಅಂಶ ಪತ್ತೆಯಾಗಿದ್ದು ಹಾಗಾಗಿ ಜನರು ಈ ಕುರಿತು ಎಚ್ಚರಿಕೆ ವಹಿಸಬೇಕು . ಇನ್ನು 296…
ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮನೆಗಳ್ಳತನ ಮಾಡುತ್ತಿದ್ದ ನೇಪಾಳಿ ಗ್ಯಾಂಗ್ ಒಂದನ್ನು ಬೆಂಗಳೂರಿನ ತಲಘಟ್ಟಪುರ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಲಾಲ್, ಕಮಲ್, ಕಿರಣ್, ನೇತ್ರ ಹಾಗು ಬಹದ್ದೂರ್ ಮತ್ತು ರಾಜೇಶ್ ಎನ್ನುವ ಆರೋಪಿಗಳನ್ನು ಬಂಧಿಸಿದ್ದಾರೆ. ಐವರು ಆರೋಪಿಗಳನ್ನ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಬೀಗ ಹಾಕಿದ ಮನೆಗಳನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡುತ್ತಿತ್ತು. ಇತ್ತೀಚಿಗೆ ನೇಪಾಳ ಮೂಲದವರಿಂದಲೇ ಅತಿ ಹೆಚ್ಚು ದರೋಡೆ ಪ್ರಕರಣಗಳು ಬೆಂಗಳೂರಿನಲ್ಲಿ ನಡೆದಿತ್ತು.ಬಂಧಿತರಿಂದ 50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದೀಗ ಅರೆಸ್ಟ್ ಆಗಿರುವ ಎಲ್ಲಾ ಐದು ಆರೋಪಿಗಳನ್ನು ಪೊಲೀಸರು ಜೈಲಿಗೆ ಅಟ್ಟಿದ್ದಾರೆ.
ಬಾಗಲಕೋಟೆ : ಮುಡಾ ಆರೋಪದಿಂದ ಸಿಎಂ ಸಿದ್ದರಾಮಯ್ಯ ಮುಕ್ತರಾಗಲಿ ಎಂದು ಪೂಜೆ ನಡೆಸಲಾಗಿದೆ. ಹೌದು ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮಾನಿಯಿಂದ ದೀರ್ಘ ದಂಡ ನಮಸ್ಕಾರ ಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಬಂದಿರುವ ಎಲ್ಲಾ ಕಂಟಕ ದೂರ ಆಗಲೆಂದು ಅಭಿಮಾನಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಸುಮಾರು 10 ಕಿಲೋಮೀಟರ್ ದೀರ್ಘ ದಂಡ ನಮಸ್ಕಾರ ಹಾಕಿ ಅಭಿಮಾನಿ ಪೂಜಿ ಸಲ್ಲಿಸಲಿದ್ದಾರೆ. ಸಂಗಮ ಕ್ರಾಸ್ ನಿಂದ ಕೂಡಲಸಂಗಮದವರೆಗೆ ದೀರ್ಘ ದಂಡ ನಮಸ್ಕಾರ ಹಾಕಲಿದ್ದಾರೆ. ಸಂಗಮನಾಥ ದೇಗುಲಕ್ಕೆ ಪೂಜೆ ಸಲ್ಲಿಸಲಿದ್ದಾರೆ, ವಿಜಯಪುರದ ಯಾರನಾಳ ಗ್ರಾಮದ ನಿವಾಸಿ ಶ್ರೀಶೈಲ್ ವಾಲಿಕಾರ್ ಅವರು ಈ ಒಂದು ಸೇವೆ ಸಲ್ಲಿಸಿದ್ದಾರೆ. ಮೈಮೇಲೆ ಹಸ್ತದ ಬಟ್ಟೆ ತೊಟ್ಟು ಕಾಂಗ್ರೆಸ್ ಶಾಲು ಧರಿಸಿ ದೀರ್ಘ ದಂಡ ನಮಸ್ಕಾರ ಹಾಕುತ್ತಿದ್ದಾರೆ.
ರಾಮನಗರ : ಅಪಘಾತ ಒಂದರಲ್ಲಿ ಅಳಿಯ ಸಾವನಪ್ಪಿರುವ ಸುದ್ದಿಯನ್ನು ಕೇಳಿ ಸೋದರತ್ತೆಯು ಕೂಡ ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶಿವನಹಳ್ಳಿಯಲ್ಲಿ ನಡೆದಿದೆ. ಶಿವನಹಳ್ಳಿ ಗ್ರಾಪಂ ಬಿಲ್ ಕಲೆಕ್ಟರ್ ನಾಗೇಶ್(42) ಅಪಘಾತದಲ್ಲಿ ಸಾ*ವಿಗೀಡಾಗಿದ್ದರೆ, ಅವರ ಸೋದರತ್ತೆ ಶಿವರುದ್ರಮ್ಮ(63) ಸುದ್ದಿ ತಿಳಿಯುತ್ತಿದ್ದಂತೆ ಆಘಾತಗೊಂಡು ಸಾವಿಗೀಡಾಗಿದ್ದಾರೆ. ಭಾನುವಾರ ಮೇಲುಕೋಟೆಯಲ್ಲಿ ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ಮೇಲು ಕೋಟೆಗೆ ಹೋಗಿದ್ದರು.ಮದುವೆ ಮುಗಿಸಿ ಹಿಂದಿರುಗುತ್ತಿರುವಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಗೇಶ್ ಸ್ಥಳದಲ್ಲೇ ಸಾವಿಗೀಡಾದರೆ, ಇವರ ಪತ್ನಿ ನೀಲಮ್ಮ ಪ್ರಜ್ಞೆ ಕಳೆದುಕೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ನಾಗೇಶ್ ಅಪಘಾತದಲ್ಲಿ ಸಾ*ವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ಇತ್ತ ಶಿವನಹಳ್ಳಿ ಗ್ರಾಮದಲ್ಲಿ ಇವರ ಸೋದರತ್ತೆ ಶಿವರುದ್ರಮ್ಮ ತೀವ್ರ ಆಘಾತಗೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿತ್ತಾದರೂ ಕೂಡ ಶಿವರುದ್ರಮ್ಮ ಹೃದಯಾಘಾತದಿಂದ ಸಾವನಪ್ಪಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಕೊಲೆ ಪ್ರಕರಣದ ಪ್ರಮುಖ ಆರೋಪಿ A1ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆಯ ಬಳಿಕ ನ್ಯಾಯಾಧೀಶರು ಮೇ 20ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದರು. ಇಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ವಿಚಾರಣೆ ನಡೆಯಿತು. A1 ಪವಿತ್ರಾಗೌಡ, ನಂದೀಶ್, , ವಿನಯ್, ನಾಗರಾಜ್, ಪವನ್, ಲಕ್ಷ್ಮಣ್, ದೀಪಕ್, ಕಾರ್ತಿಕ್, ಪ್ರದೋಷ್ ಹಾಗು ಕೇಶವಮೂರ್ತಿ ಸೇರಿದಂತೆ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದರು. ಇನ್ನು A2 ನಟ ದರ್ಶನ್ ಹೊರತುಪಡಿಸಿ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದೆ ವೇಳೆ ದರ್ಶನ್ ಪರ ವಕೀಲರು ಅನಾರೋಗ್ಯದಿಂದ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕೋರ್ಟ್ ಗೆ ಗೈರಾಗಿದ್ದ ದರ್ಶನ್ ಪರ ವಕೀಲರಿಗೆ ಎಚ್ಚರಿಕೆ ನೀಡಿದರು. ಕೋರ್ಟ್ ಗೆ ಗೈರಾಗಿದ್ದ ದರ್ಶನ್ ಪರ ವಕೀಲರಿಗೆ ಯಾವುದೇ ಕಾರಣಕ್ಕೂ ಕೋರ್ಟ್ ವಿಚಾರಣೆಗೆ ಗೈರಾಗಬಾರದು…
ವಿಜಯನಗರ : ಸದ್ಯ ಈರುಳ್ಳಿ ಹಾಗು ಟೊಮೆಟೊ ದರದಲ್ಲಿ ಭಾರಿ ಕುಸಿತ ಕಂಡಿದ್ದು, ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ರೈತರು ಟೊಮೆಟೊ ಮತ್ತು ಈರುಳ್ಳಿಯನ್ನು ರಸ್ತೆಗೆ ಸುರಿದು ಪ್ರತಿಭಟನೆ ಮಾಡಿದರು. ಹೌದು ರೈತರು ಟೊಮೆಟೊ ಬೆಳೆದು ಉತ್ತಮ ಬೆಲೆ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಮಾರುಕಟ್ಟೆಗೆ ಟೊಮೆಟೊ, ಈರುಳ್ಳಿಯನ್ನು ತಂದಿದ್ದರು.ಮಾರುಕಟ್ಟೆಯಲ್ಲಿ 20 ಕೆಜಿ ಟೊಮೆಟೊ ಟ್ರೇ ದರ ರೂ. 20 ಮತ್ತು 30ಕ್ಕೆ ಕುಸಿತಗೊಂಡಿದೆ. ಅಲ್ಲದೇ ಸಂತೆಯಲ್ಲಿ 3 ಕೆಜಿ ಟೊಮೆಟೊ 10 ರೂ.ಗೆ ಮಾರಾಟವಾಗುತ್ತಿದೆ. ತಾಲೂಕು ಕೇಂದ್ರಗಳಲ್ಲಿ ಟೊಮೆಟೊ ಮತ್ತು ಈರುಳ್ಳಿಯನ್ನು ಖರೀದಿ ಮಾಡಲು ಸರ್ಕಾರ ಮುಂದಾಗಬೇಕು. ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಯಲ್ಲಿ ಅದನ್ನು ಖರೀದಿ ಮಾಡಿ, ರೈತರ ನೆರವಿಗೆ ಧಾವಿಸಬೇಕು ಎಂದು ತಹಶೀಲ್ದಾರ್ಗೆ ರೈತರ ನಿಯೋಗ ಮನವಿಯನ್ನು ಸಲ್ಲಿಕೆ ಮಾಡಿದೆ. ಖರೀದಿ ಕೇಂದ್ರದಲ್ಲಿ ಕ್ವಿಂಟಾಲ್ಗೆ 4 ಸಾವಿರ ರೂ. ನಂತೆ ದರವನ್ನು ನಿಗದಿ ಮಾಡಬೇಕು ಎಂದು ರೈತರು ಅಗ್ರಹಿಸಿದ್ದಾರೆ.
ರಾಮನಗರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ಕಲಹ ನಡೆದಿದ್ದು, ದೊಡ್ಡಪ್ಪನ ಮಗನ ಮೇಲೆ ಚಿಕ್ಕಪ್ಪನ ಮಗ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಏಳಗಳ್ಳಿ ಗ್ರಾಮದಲ್ಲಿ ಈ ಒಂದು ಗಲಾಟೆ ನಡೆದಿದೆ. ಚಿಕ್ಕಪ್ಪನ ಮಗ ರಘುನಿಂದ ಲೋಕೇಶ್ ಮೇಲೆ ಹಲ್ಲೆ ನಡೆದಿದೆ. ಲೋಕೇಶ್ ರೇಷ್ಮೆ ಸೊಪ್ಪು ತರುವಾಗ ಮನೆಯ ಬಳಿ ಮಾರಕಾಸ್ತ್ರಗಳಿಂದ ರಾಘು ದಾಳಿ ಮಾಡಿದ್ದಾನೆ ತಕ್ಷಣ ದಯಾನಂದ ಸಾಗರ್ ಆಸ್ಪತ್ರೆಗೆ ಗಾಯಾಳು ಲೋಕೇಶ್ ದಾಖಲಾಗಿದ್ದಾನೆ. ಘಟನೆಯ ನಂತರ ಆರೋಪಿ ರಘು ಪರಾರಿ ಆಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಾಗಿ ಬಲೆ ಬೀಸಿದ್ದಾರೆ.
ಬೆಂಗಳೂರು : ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗ ಮತ್ತು ಬೆಂಗಳೂರಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಜುನಾಥ ಗೌಡಗೆ ಇಡಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಕೂಡ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಜುನಾಥಗೌಡನನ್ನು ಇಡಿ ಅಧಿಕಾರಿಗಳು ಇದೀಗ ವಿಚಾರಣೆ ನಡೆಸುತ್ತಿದ್ದಾರೆ. ಅಪೇಕ್ಸ್ ಬ್ಯಾಂಕ್ ಗೆಸ್ಟ್ ಹೌಸ್ ನಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳಿಂದ ಮಂಜುನಾಥಗೌಡ ವಿಚಾರಣೆ ನಡೆಯುತ್ತಿದೆ. ಮ್ಯಾನೇಜರ್ ಗು ಶಾಕ್ 2014 ರಲ್ಲಿ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಮನೆ ಮೇಲೆ ಇಡಿ ದಾಳಿ ಮಾಡಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ…
ಯಾದಗಿರಿ : ಕಳೆದ 3 ವರ್ಷದಿಂದ ನನಗೆ ಸಂಬಳ ಆಗಿಲ್ಲ ಎಂದು ಗ್ರಾಂ ಪಂಚಾಯತ್ ಸ್ವಚ್ಛತಾ ವಾಹಿನಿ ಚಾಲಕಿ ಕಣ್ಣೀರು ಹಾಕಿದ್ದಾರೆ. ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಪುರ ಅವರ ಮುಂದೆ ಕಣ್ಣೀರು ಹಾಕಿದ್ದಾರೆ. ಹತ್ತಿಗುಡೂರು ಗ್ರಾಮ ಪಂಚಾಯತಿ ಸ್ವಚ್ಛತಾ ವಾಹಿನಿ ಚಾಲಾಕಿ ಅನಿರಾಧಾ ಅವರು, ಕಳೆದ 3 ವರ್ಷಗಳಿಂದ ನಾನು ಸಂಬಳ ಇಲ್ಲದೆ ದುಡಿಯುತ್ತಿದ್ದೇನೆ. ಜೀವನ ನಿರ್ವಹಣೆ ತುಂಬಾ ಕಷ್ಟವಾಗಿದೆ. ಹಾಗಾಗಿ ಶೀಘ್ರದಲ್ಲಿ ವೇತನ ಮಾಡಿಸಿಕೊಡಿ ಎಂದು ಚಾಲಕಿ ಸಚಿವರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಈ ವೇಳೆ ಶರಣಬಸಪ್ಪ ದರ್ಶನಾಪುರ ನಾನು ಈ ಕ್ಷೇತ್ರದ ಶಾಸಕನಿದ್ದೇನೆ. ಕಳೆದ ಮೂರು ವರ್ಷಗಳಿಂದ ವೇತನ ಇಲ್ಲ ಅಂತ ಹೇಳುತ್ತಿದ್ದೀಯಲ್ಲಮ್ಮ ನನ್ನನ್ನು ಭೇಟಿಯಾಗಿ ಒಂದು ಮಾತು ಹೇಳಬೇಕು ತಾನೆ? ಅಧಿಕಾರಿಗಳಿಗೆ ಹೇಳಿ ಶೀಘ್ರದಲ್ಲಿ ವೇತನ ಬಿಡುಗಡೆ ಮಾಡಿಸುವುದಾಗಿ ಈ ವೇಳೆ ಸಚಿವ ಶರಣಬಸಪ್ಪ ದರ್ಶನಾಪುರ್ ಭರವಸೆ ಕೊಟ್ಟಿದ್ದಾರೆ.
ಶಿವಮೊಗ್ಗ : 2014 ರಲ್ಲಿ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಮನೆ ಮೇಲೆ ಇಡಿ ದಾಳಿ ಮಾಡಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಇದೀಗ ಜಾರಿ ನಿರ್ದೇಶನಲಯದ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 8ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. 2014ರ ಜೂನ್ ನಲ್ಲಿ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಈ ಒಂದು ಹಗರಣ ನಡೆದಿತ್ತು. ಶಿವಮೊಗ್ಗದ ಗಾಂಧಿ ಬಜಾರ್ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಹಗರಣ ನಡೆದಿತ್ತು. ಆ ವೇಳೆ ಡಿಸಿಸಿ ಬ್ಯಾಂಕ್ ಶಾಖೆಯ ಮ್ಯಾನೇಜರ್ ಶೋಭಾ ಆಗಿದ್ದರು. ಬ್ಯಾಂಕಿನ ವಾಹನ ಚಾಲಕನಾಗಿದ್ದ ಶಿವಕುಮಾರ್ ಮನೆಯ ಮೇಲು ರೇಡ್ ಮಾಡಲಾಗಿದ್ದು, ಏಕಕಾಲಕ್ಕೆ ಎರಡು ಕಡೆ ದಾಳಿ ನಡೆಸಿರುವ ವಿಡಿಯೋ…














