Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಬಹು ಮಹಡಿ ಕಟ್ಟಡಗಳಲ್ಲಿ, ಅಪಾರ್ಟ್ಮೆಂಟ್ ಗಳಲ್ಲಿ, ಆಸ್ಪತ್ರೆ ಮತ್ತು ದೊಡ್ಡ ದೊಡ್ಡ ಕಂಪನಿಗಳಲ್ಲಿ ಲಿಫ್ಟ್ ಗಳ ವ್ಯವಸ್ಥೆ ಇರುತ್ತದೆ. ಆದರೆ ಕೆಲವು ಬಾರಿ ತಾಂತ್ರಿಕ ದೋಷಗಳಿಂದ ಲಿಫ್ಟ್ ಕೈ ಕೊಟ್ಟರೆ, ಜೀವಕ್ಕೆ ಆಪತ್ತು ಎದುರಾಗುವ ಸಂಭವಿವಿರುತ್ತದೆ ಇದೀಗ ಹಾವೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕೂಡ ಇಂತಹದೇ ಘಟನೆ ನಡೆದಿದ್ದು ತಾಂತ್ರಿಕ ದೋಷಗಳಿಂದ ವ್ಯಕ್ತಿ ಒಬ್ಬ ಲಿಫ್ಟ್ ನಲ್ಲಿಯೇ ಸಿಲುಕಿ ಪರದಾಟ ನಡೆಸಿರುವ ಘಟನೆ ವರದಿಯಾಗಿದೆ. ಹೌದು ವ್ಯಕ್ತಿಯೊಬ್ಬ ಸ್ಥಗಿತಗೊಂಡ ಲಿಫ್ಟ್ನಲ್ಲಿ ಸಿಲುಕಿ ಕೆಲಕಾಲ ಪರದಾಡಿದ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ರೋಗಿಯ ಜೊತೆಗೆ ಆಸ್ಪತ್ರೆಗೆ ಬಂದಿದ್ದ ಮಂಜುನಾಥ ಎಂಬವರು ಲಿಫ್ಟ್ನಲ್ಲಿ ಸಿಲುಕಿ ಗಾಬರಿಗೊಂಡಿದ್ದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮಂಜುನಾಥ ಅವರನ್ನು ರಕ್ಷಣೆ ಮಾಡಿದೆ. ಒಂದು ಮತ್ತು ಎರಡನೇ ಮಹಡಿ ಮಧ್ಯದಲ್ಲಿ ಲಿಫ್ಟ್ ಸ್ಥಗಿತಗೊಂಡಿದ್ದರಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಜಿಲ್ಲಾಸ್ಪತ್ರೆ ತಾಂತ್ರಿಕ ಸಿಬ್ಬಂದಿ ಲಿಫ್ಟ್ ಅನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಈ ಆಚಾತುರ್ಯ ನಡೆದಿದೆ ಎಂದು…
ಚಿತ್ರದುರ್ಗ : ಚಿತ್ರದುರ್ಗದ ಗೋನೂರು ಬ್ರಿಡ್ಜ್ ಬಳಿ ನೇತ್ರಾವತಿ (27) ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಇದು ಅಪಘಾತವಲ್ಲ ಕೊಲೆ ಎಂಬ ಆರೋಪದ ಮೇಲೆ ಓಬಯ್ಯನ ಹಟ್ಟಿ ಗೊಲ್ಲರಹಟ್ಟಿ ನಿವಾಸಿ ಲೋಕೇಶ್ (30) ಎನ್ನುವ ಆರೋಪಿಯ ಬಂಧನವಾಗಿದೆ. ಏಪ್ರಿಲ್ 6 ರಂದು ಎಂ ಕೆ ಹಟ್ಟಿ ಗ್ರಾಮದ ನೇತ್ರಾವತಿ ಶವ ಪತ್ತೆಯಾಗಿತ್ತು. ಹಿಟ್ ಅಂಡ್ ರನ್ ಶಂಕಿಸಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು. ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನೇತ್ರಾವತಿ ಜೊತೆಗೆ ಲೋಕೇಶ್ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಲೋಕೇಶ್ ವಿರುದ್ಧ ನೇತ್ರಾವತಿ ಸಂಬಂಧಿಕರಿಂದ ಇದೀಗ ಕೊಲೆ ಆರೋಪ ಕೇಳಿ ಬಂದಿದೆ. ಲೋಕೇಶ್ ಬೈಕ್ ನಿಂದ ಕೆಳಗೆ ಬೀಳಿಸಿ ನೇತ್ರಾವತಿಯ ಕೊಲೆ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಇದೀಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸರ ಗುಂಡಿನ ಸದ್ದು ಕೇಳಿಸಿದ್ದು ಪೊಲೀಸರ ಮೇಲೆ ಹಲ್ಲೆ ನಡೆಸಿದ ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಹೊರವಲಯದಲ್ಲಿ ನಡೆದಿದೆ. ಹೌದು ಹುಬ್ಬಳ್ಳಿಯಲ್ಲಿ ರೌಡಿಶೀಟರ್ ಮಲಿಕ್ ಆದೋನಿ ಕಾಲಿಗೆ ಫೈರಿಂಗ್ ಮಾಡಿದ್ದು, ಹುಬ್ಬಳ್ಳಿಯ ಆನಂದ ನಗರದ ಹೊರವಲಯದಲ್ಲಿ ಪೊಲೀಸರು ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹಳೆ ಹುಬ್ಬಳ್ಳಿ ಠಾಣೆಯ ಪಿಎಸ್ಐ ವಿಶ್ವನಾಥ್ ಅವರು ರೌಡಿಶೀಟರ್ ಮಲಿಕ್ ಆದೋನಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಿನ್ನೆ ಹಣಕಾಸಿನ ವಿಚಾರವಾಗಿ ಗಲಾಟೆ ಆಗಿತ್ತು. ವಿಚಾರಣೆಯ ವೇಳೆ ಪೊಲೀಸರ ಮೇಲೆ ಮಲಿಕ್ ಆಧೋನಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಪಿಎಸ್ಐ ವಿಶ್ವನಾಥ್ ಮಲಿಕ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಪಿಎಸ್ಐ ವಿಶ್ವನಾಥ್, ಪಿಸಿಗಳಾದ ಕಲ್ಲನಗೌಡ, ಶರೀಫ್ ಎನ್ನುವವರಿಗೆ ಗಾಯಗಳಾಗಿವೆ. ಗಾಯಾಳು ಪೊಲೀಸರು ಮತ್ತು ಆರೋಪಿ ಮಲಿಕ್ ಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ, ಅದೇ ರೀತಿ ಜೀವನದಲ್ಲೂ ಏರುಪೇರು ಆಗುತ್ತಲೇ ಇರುತ್ತದೆ. ಒಂದು ವೇಳೆ ತಂತ್ರ ಶಕ್ತಿಯಿಂದ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ,ಶತ್ರುಗಳಿಂದ ನಿಮಗೆ ತೊಂದರೆಯಾಗುತ್ತಿದ್ದರೆ ,ಗಂಡ-ಹೆಂಡತಿ ನಡುವೆ ಯಾವುದಾದರೂ ವಿಚಾರಕ್ಕೆ ಯಾವಾಗಲೂ ಕಲಹ ಆಗುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಜೀವನವಿಡಿ ಸುಖ ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು…
ಮಂಡ್ಯ :- ವಿಶ್ವವಿಖ್ಯಾತ, ಐತಿಹಾಸಿಕ ಮೇಲುಕೋಟೆ ಕ್ಷೇತ್ರದ ಶ್ರೀ ಚೆಲುವನಾರಾಯಣಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ವಿಶ್ವಾವಸು ಸಂವತ್ಸರದ ಚೈತ್ರ ಮಾಸದ ಪುಷ್ಯ ನಕ್ಷತ್ರದ ಶುಭ ದಿನದಂದು ವಜ್ರಖಚಿತ ವೈರಮುಡಿ ಧರಿಸಿದ್ದ ಚೆಲುವನಾರಾಯಣಸ್ವಾಮಿಯು ದೇವಾಲಯದಿಂದ ಹೊರ ಬರುತ್ತಿದ್ದಂತೆ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು ಗೋವಿಂದ, ಗೋವಿಂದ ಎಂಬ ಜಯಘೋಷಗಳನ್ನು ಮೊಳಗಿಸಿದರು. ಗಂಡ-ಭೇರುಂಡ ಸ್ವರೂಪಿ ಚಂದ್ರಪ್ರಭೆ ಪ್ರಭಾವಳಿಯ ಮಧ್ಯದಲ್ಲಿ ಅಲಂಕಾರ ಸ್ವರೂಪಿಯಾಗಿದ್ದ ಸ್ವಾಮಿಯ ಉತ್ಸವವನ್ನು ನೋಡಿ ಭಕ್ತರು ದರ್ಶನ ಪಡೆದು ಸಂಭ್ರಮಿಸಿದರು. ರಾಮಾನುಜಾಚಾರ್ಯರ ಸನ್ನಿಧಿಯಲ್ಲಿ ಪ್ರಥಮ ಪೂಜೆ ಸಲ್ಲಿಸಿದ ನಂತರ ವೈರಮುಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವ ಸಾಗುವ ರಾಜಬೀದಿಯನ್ನು ತಳಿರು-ತೋರಣ, ವಿಶೇಷ ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿತ್ತು. ಬೀದಿಯ ಎರಡೂ ಬದಿಯಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದರು. ರಾಜ್ಯ ಮಾತ್ರವಲ್ಲದೇ ಪಕ್ಕದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದಿಂದಲೂ ಸಹಸ್ರಾರು ಭಕ್ತಾದಿಗಳು ಆಗಮಿಸಿದ್ದರು.ಮೇಲುಕೋಟೆಯ ವಸತಿ ಗೃಹಗಳು, ಛತ್ರಗಳು ಭಕ್ತರಿಂದ ಕಿಕ್ಕಿರಿದು ತುಂಬಿದ್ದವು. ಇದಕ್ಕೂ ಮುನ್ನ, ಸೋಮವಾರ ಬೆಳಿಗ್ಗೆ ಜಿಲ್ಲಾ ಖಜಾನೆ…
ದಾವಣಗೆರೆ : ಈಗಾಗಲೇ ಕೋಡಿ ಶ್ರೀಗಳು ಉತ್ತರ ಕರ್ನಾಟಕ ಭಾಗದ ಸಚಿವರಾದಂತಹ ಎಂ ಬಿ ಪಾಟೀಲ್ ರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಇದರ ಬೆನ್ನಲ್ಲೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಡಿಸೆಂಬರ್ ಒಳಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆ ಅಕಸ್ಮಾತ್ ಆಗದಿದ್ದರೆ ನನ್ನನ್ನು ಬಂದು ಕೇಳಿ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ಡಿಸೆಂಬರ್ ಒಳಗೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಆಗದಿದ್ದರೆ ನನ್ನನ್ನು ಬಂದು ಕೇಳಿ. ಈಗಾಗಲೇ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಹೇಳಿದ್ದೇನೆ. ತೆನೆ ಹಾಗಾಗಿ ಮುಂದಿನ ಡಿಸೆಂಬರ್ ಒಳಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆ ಅಕಸ್ಮಾತ್ ಆಗದಿದ್ದರೆ ಆಗ ನನ್ನನ್ನು ಬಂದು ಕೇಳಿ ಎಂದು ಡಿಕೆ ಶಿವಕುಮಾರ್ ಪರವಾಗಿ ಬ್ಯಾಟಿಂಗ್ ಬೀಸಿದ್ದಾರೆ. ಡಿಸೆಂಬರ್ ಒಳಗೆ ಸಿಎಂ ಬದಲಾವಣೆಯಾಗ್ತಾರೆ, ಡಿಕೆ ಶಿವಕುಮಾರ್ ಮುಂದಿನ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ. ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ದೋಷಾರೋಪ ನಿಗದಿಗೆ ಕೋರ್ಟ್ ದಿನಾಂಕ ಗೊತ್ತು ಪಡಿಸಲಿದೆ. ಪ್ರಕರಣ ಸಂಬಂಧ ಸದ್ಯ ಎಲ್ಲಾ 17 ಆರೋಪಿಗಳು ಕೂಡ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಜಾಮೀನು ರದ್ದು ಕೋರಿರುವ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ಪರಿಶೀಲನೆಯಲ್ಲಿದೆ.
ಬೆಂಗಳೂರು : ಈಗಾಗಲೇ ಐಪಿಎಲ್ ಹಬ್ಬ ಶುರುವಾಗಿದ್ದು, ಹಲವು ಮ್ಯಾಚ್ ಗಳು ಮುಗಿದಿವೆ. ಇನ್ನು ಇದೇ ಒಂದು ಐಪಿಎಲ್ ಪಂದ್ಯಾವಳಿಯ ವೇಳೆ ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತದೆ. ಇದೀಗ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಐಪಿಎಲ್ ಬೆಟ್ಟಿಂಗ್ಗಳನ್ನು ಪ್ರಮೋಷನ್ ಮಾಡುವ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳಿಗೆ ಸೈಬರ್ ಕ್ರೈಮ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನೋಟಿಸ್ ಕೊಟ್ಟು ಎಚ್ಚರಿಕೆ ನೀಡಿದ್ದಾರೆ. ಹೌದು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳು ಎನಿಸಿಕೊಂಡಿರೋ ವರುಣ್ ಆರಾಧ್ಯ, ಸೋನುಗೌಡ, ಶಿಲ್ಪಾಗೌಡ, ದೀಪಕ್ ಗೌಡ ಸೇರಿ 40ಕ್ಕೂ ಹೆಚ್ಚು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳಿಗೆ ಸೈಬರ್ ಕ್ರೈಂ ಪೊಲೀಸರಿಂದ ವಾರ್ನಿಂಗ್ ಸಿಕ್ಕಿದೆ. ಇವರ ಇನ್ಸ್ಟಾಗ್ರಾಂ ಚಟುವಟಿಕೆಗಳನ್ನು ನೋಡಿ ಈ ವಾರ್ನಿಂಗ್ ನೀಡಲಾಗಿದೆ.ಇದು ಮರುಕಳಿಸಿದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸರು ವಾರ್ನಿಂಗ್ ನೀಡಿದ್ದಾರೆ. ಇನ್ಸ್ಟಾಗ್ರಾಮ್ ಚಟುವಟಿಕೆ ಗಮನಿಸಿರುವ ಪೊಲೀಸರು ಕರೆ ಮಾಡಿ ಇವರುಗಳನ್ನು ವಿಚಾರಣೆಗೆ ಪೊಲೀಸರು ಕರೆದಿದ್ದಾರೆ. ಈಗಾಗಲೇ 20ಕ್ಕೂ ಹೆಚ್ಚು ಜನ ರೀಲ್ಸ್ ಇನ್ಫ್ಲುಯೆನ್ಸರ್ಗಳ ವಿಚಾರಣೆ ನಡೆದಿದೆ ಎನ್ನಲಾಗಿದೆ. ಇಲ್ಲಿ ಕೇವಲ ಬೆಂಗಳೂರಿನವರು ಮಾತ್ರ…
ಬೆಂಗಳೂರು : ಪತಿಗೆ ಬೇರೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ ಇದೆ ಎಂದು ಮನನೊಂದ ಪತ್ನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಬ್ಬಾಳದ ಕನಕನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಬಾಹರ್ ಅಸ್ಮಾ (29) ಎಂದು ತಿಳಿಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಮದುವೆ ಆಗಿದ್ದರು. ಆತನಿಗೆ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪ ಕೇಳಿಬಂದಿದೆ.ಆದರೆ ಪೋಷಕರು ಪತಿಯೇ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಹಾಲಿನ ದರ, ವಿದ್ಯುತ್ ದರ ಮತ್ತು ಡೀಸೆಲ್ ದರ ಏರಿಕೆಯನ್ನು ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಿನ್ನೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆ ಆರಂಭ ಮಾಡಿದೆ. ಇದರ ಬದನಲ್ಲೇ ನಿನ್ನೆ ಕೇಂದ್ರ ಸರ್ಕಾರ ಎಲ್ ಪಿ ಜಿ ಸಿಲಿಂಡರ್ ಗ್ಯಾಸ್ ಬೆಲೆ ರೂ.50 ಹಾಗೂ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸುಂಕ ಹೆಚ್ಚಳ ಮಾಡಿದೆ. ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಜನಾಕ್ರೋಶ ಯಾತ್ರೆ ಬಿಜೆಪಿ ಮುಂದುವರಿಸಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಜನರಿಗೆ ತಿಳಿಸಲಿ ಎಂದು ಟಾಂಗ್ ನೀಡಿದರು. ಈ ಕುರಿತು ಕೇಂದ್ರ ಸರ್ಕಾರದಿಂದಲೂ ಬೆಲೆ ಏರಿಕೆ ವಿಚಾರವಾಗಿ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಡಿಕೆ ಶಿವಕುಮಾರ್ ಇದೀಗ ಆಕ್ರೋಶ ಹೊರ ಹಾಕಿದ್ದಾರೆ. ಈಗ ಬಿಜೆಪಿಯವರು ಬಹಳ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಆಕ್ರೋಶದಲ್ಲಿ ಇವತ್ತೇ ಬೋರ್ಡ್ ಬದಲಾವಣೆ ಮಾಡಬೇಕು. ನನ್ನ ಫೋಟೋ ಸಿದ್ದರಾಮಯ್ಯ ಫೋಟೋ ತೆಗೆಯಬೇಕು ಎಂದು ಕಿಡಿ ಕಾರಿದರು. ಕೇಂದ್ರ ಸರ್ಕಾರ ಸಹ ಬೆಲೆ ಏರಿಕೆ…














