Author: kannadanewsnow05

ಬೆಂಗಳೂರು : ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದಂತಹ ಪೌರ ಕಾರ್ಮಿಕರಿಗೆ ಮುಂಬರುವ ಮಾರ್ಚ್ ತಿಂಗಳಿನಲ್ಲಿ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಈ ವಿಚಾರವಾಗಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳ ಸಿಂಧುತ್ವ ಕಾರ್ಯ ನಡೆಯುತ್ತಿದ್ದು, ಆ ಪ್ರಕ್ರಿಯೆಯನ್ನು ಮಾರ್ಚ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ತಂತ್ರಜ್ಞಾನ ಎಷ್ಟೇ ಬೆಳೆದಿದ್ದರೂ ಕೂಡಾ ಪೌರಕಾರ್ಮಿಕರು ಇನ್ನು ಪೊರಕೆಯಿಂದಲೇ ಬೀದಿಗಳನ್ನು ಸ್ವಚ್ಛ ಮಾಡುತ್ತಿದ್ದಾರೆ. ಅದನ್ನು ನಾವು ಬದಲಿಸಲು ಮುಂದಾಗಲಾಗುತ್ತಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರಿಗೆ ಶೀಘ್ರ ಯಾಂತ್ರಿಕೃತ ಯಂತ್ರಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ನಗರದಲ್ಲಿ ಮನೆ-ಮನೆಯಿಂದ ಸಂಗ್ರಹಿಸುವ ಕಸದ ಪದ್ದತಿ ಸರಿಯಾಗಿ ಜಾರಿಯಾಗಬೇಕಿದೆ. ನಾಗರೀಕರು ರಸ್ತೆ ಬದಿ ಕಸ ಬಿಸಾಡುತ್ತಾರೆ, ಅದನ್ನು ಪೌರಕಾರ್ಮಿಕರೇ ಸ್ವಚ್ಛಗೊಳಿಸಬೇಕಿದೆ. ಮನೆ-ಮನೆಯಿಂದ ಕಸ ಸಂಗ್ರಹಿಸುವ ಪದ್ದತಿ ಸರಿಯಾಗಿ ಜಾರಿಯಾದರೆ ಬಹುತೇಕ ಸಮಸ್ಯೆ ನಿವಾರಣೆಯಾಗಲಿದೆ ಎಂದು ಹೇಳಿದರು.

Read More

ಮಂಗಳೂರು : ಕಳೆದ ವರ್ಷ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮ-ಪಾಕಿಸ್ತಾನ, ಬಾಂಗ್ಲಾ ವಲಸಿಗರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಇಂದು ಮಂಗಳೂರಲ್ಲಿ ಮತ್ತೊರ್ವ ಅಕ್ರಮ ಬಾಂಗ್ಲಾ ವಲಸಿಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಬಾಂಗ್ಲಾ ಪ್ರಜೆಯನ್ನು ಅನುರುಲ್ ಶೇಖ್ ಎಂದು ಗುರುತಿಸಲಾಗಿದೆ. ಈತ ಮಂಗಳೂರು ಹೊರವಲಯದ ಮುಕ್ಕ ಗ್ರಾಮದಲ್ಲಿ ನೆಲೆಸಿದ್ದ. ಬಾಂಗ್ಲಾದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ ನನ್ನು (25) ಅರೆಸ್ಟ್ ಮಾಡಲಾಗಿದೆ. ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರಿಂದ ಪ್ರಜೆಯನ್ನು ಅರೆಸ್ಟ್ ಮಾಡಲಾಗಿದೆ ಎನ್ನಲಾಗಿದೆ. ಕಳೆದ ಮೂರು ವರ್ಷದಿಂದ ಕಟ್ಟಡ ಕಾರ್ಮಿಕನಾಗಿ ಅಕ್ರಮವಾಗಿ ನೆಲೆಸಿದ್ದ. ಮೂರು ವರ್ಷದ ಹಿಂದೆ ಅಕ್ರಮವಾಗಿ ಭಾರತ ಗಡಿಯನ್ನು ಪ್ರವೇಶಿಸಿದ್ದ. ಭಾರತ ಮತ್ತು ಬಾಂಗ್ಲಾ ಅಂತರಾಷ್ಟ್ರೀಯ ಗಡಿರೇಖೆ ಲಾಲ್ ಗೋಲ್ ಮೂಲಕ ಶೇಕ್ ಪ್ರವೇಶ ಮಾಡಿದ್ದಾನೆ. ಪಶ್ಚಿಮ ಬಂಗಾಳದ ಮರುಶಿದಾಬಾದ್ ಮೂಲಕ ಭಾರತಕ್ಕೆ ಪ್ರವೇಶಿಸಿದ್ದಾನೆ ಎಂದು ತಿಳಿದುಬಂದಿದೆ.ಅಲ್ಲಿಂದ ಕರ್ನಾಟಕದ ಉಡುಪಿಗೆ ಬಂದು ಅನರುಲ್ ಶೇಕ್ ನೆಲೆಸಿದ್ದಾನೆ. ನಂತರ ಮಂಗಳೂರಿನ…

Read More

ಬೆಂಗಳೂರು : ಎಲೆಕ್ಟ್ರಿಕಲ್ ಗುತ್ತಿಗೆದಾರನಿಗೆ ಟ್ರಾನ್ಸ್ಫಾರ್ಮರ್ ನೀಡಲು ಬೆಸ್ಕಾಂ ಸಹಾಯಕ ಇಂಜಿನಿಯರ್ ಒಬ್ಬರು 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುವ ವೇಳೆ, ಬೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಲೆಕ್ಟ್ರಿಕಲ್‌ ಗುತ್ತಿಗೆದಾರ ಆಗಿರುವ ಮಾರುತಿ ರಾಮಣ್ಣ ಎನ್ನುವವರಿಗೆ, ಟ್ರಾನ್ಸ್‌ಫಾರ್ಮರ್‌ ನೀಡಲು ಇಸ್ರೋ ಬಡಾವಣೆ ಉಪ ವಿಭಾಗದ ಸಹಾಯಕ ಎಂಜಿನಿಯರ್ ವಿನಯ್ ಕುಮಾರ್ ಅವರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವಿನಯ್ 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಎಲೆಕ್ಟ್ರಿಕಲ್ ಗುತ್ತಿಗೆದಾರ ಮಾರುತಿ ಲೋಕಾಯುಕ್ತಕ್ಕೆ ಈ ಕುರಿತು ದೂರು ನೀಡಿದ್ದರು.ದೂರು ಆಧರಿಸಿ, ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿ ಅಡಿವೇಶ್ ಗುಡಿಗೊಪ್ಪ ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರು ನಗರ ಎಸ್‌ಪಿ ಶ್ರೀನಾಥ ಮಹಾದೇವ ಜೋಷಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು.

Read More

ಹಾವೇರಿ : ಹಾವೇರಿಯಲ್ಲಿ ತಡರಾತ್ರಿ ಭೀಕರವಾದ ಅಪಘಾತವಾಗಿದ್ದು, ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಮೃತರನ್ನು ಕುಸುಮಾ (56) ಮತ್ತು ಕುಮಾರ (34) ಎಂದು ಗುರುತಿಸಲಾಗಿದೆ‌. ಮೃತರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ನಿವಾಸಿಗಳು. ಹಂಸಭಾವಿಯ ತಮ್ಮ ಸಂಬಂಧಿಕರ ಮನೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಕುರಿತು ಹಿರೇಕೆರೂರು ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಯುವ ಸಮುದಾಯ ರಾಜಕೀಯ ಕ್ಷೇತ್ರಕ್ಕೆ ಬರಬೇಕು ರಾಜಕಾರಣಕ್ಕೆ ಬರಲು ಮಹತ್ವಾಕಾಂಕ್ಷೆ ಅಲ್ಲ, ಒಂದು ವಿಷನ್ ಬೇಕು. ಉತ್ತಮ ವಿಷನ್ ನೊಂದಿಗೆ ರಾಜಕೀಯಕ್ಕೆ ಬನ್ನಿ ಎಂದು ಯುವ ಸಮುದಾಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಕನ್ನಡಿಗ ಉದ್ಯಮಿ ನಿಖಿಲ್ ಕಾಮತ್ ಅವರು ನಡೆಸಿದ ಸಂದರ್ಶನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿದ್ದು, ರಾಜಕೀಯ ಕ್ಷೇತ್ರದ ಬಗ್ಗೆ ಪ್ರಧಾನಿ ಮೋದಿಗೆ ನಿಖಿಲ್ ಕಾಮತ್ ಪ್ರಶ್ನೆ ಮಾಡಿದ್ದಾರೆ. ರಾಜಕೀಯ ಕ್ಷೇತ್ರಕ್ಕೆ ಹೋಗಬೇಡ ಕೆಟ್ಟದ್ದು ಎಂದು ಮನೆಯಲ್ಲಿ ಹೇಳಿದ್ದರು ಎಂದು ಕಾಮತ್ ರಾಜಕಾರಣದ ಬಗ್ಗೆ ಪ್ರಧಾನಿ ಮೋದಿಗೆ ಪ್ರಶ್ನಿಸಿದಾಗ ಹಾಗಿದ್ದರೆ ನೀವು ನನ್ನ ಮುಂದೆ ಮಾತನಾಡುತ್ತಿರಲಿಲ್ಲ.ನಾವು ರಾಜಕೀಯ ಕ್ಷೇತ್ರದಲ್ಲಿ ಇದ್ದೇವೆ ಹಾಗೇನಾದರೂ ಆಗಿದೆಯೇ? ಎಂದು ನಿಖಿಲ್ ಕಾಮತ್ ಪ್ರಶ್ನೆಗೆ ಪ್ರಧಾನಿ ಮೋದಿ ಉತ್ತರಿಸಿದ್ದಾರೆ. ಯುವ ಸಮುದಾಯ ರಾಜಕೀಯ ಕ್ಷೇತ್ರಕ್ಕೆ ಬರಬೇಕು.ರಾಜಕಾರಣಕ್ಕೆ ಬರಲು ಮಹತ್ವಾಕಾಂಕ್ಷೆ ಅಲ್ಲ, ವಿಷನ್ ಬೇಕು. ಉತ್ತಮ ವಿಷನ್ ನೊಂದಿಗೆ ರಾಜಕೀಯಕ್ಕೆ ಬನ್ನಿ ಎಂದು ಕರೆ ನೀಡಿದ್ದಾರೆ. ಹಲವು…

Read More

ಬೆಂಗಳೂರು : ಕೇವಲ ಮದುವೆಯಾಗಿ ಎರಡೇ ತಿಂಗಳು ಕಳಿಯುವಷ್ಟರಲ್ಲಿ ಕೌಟುಂಬಿಕ ಕಲಹದಿಂದ ಬೆಸತ್ತು, ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿವೇಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಕಾನ್ಸ್ಟೇಬಲ್ ಅನ್ನು ಗೋವಿಂದ ಎಂದು ತಿಳಿದುಬಂದಿದ್ದು, ಕಳೆದ ಎರಡು ತಿಂಗಳ ಹಿಂದೆ ಅವರಿಗೆ ಮದುವೆಯಾಗಿತ್ತು ಕೌಟುಂಬಿಕ ಕಲಹದಿಂದ ಅವರು ಬೇಸತ್ತಿದ್ದರು ಎನ್ನಲಾಗಿದ್ದು, ನಗರದ ಕ್ವಾಟ್ರಸ್‍ನಲ್ಲಿರುವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.ಘಟನೆ ಸಂಬಂಧ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗ್ಲೇ ರೆಗ್ಯುಲರ್ ಬೇಲ್ ಪಡೆದು ಬಿಡುಗಡೆಯಾಗಿರುವ ನಟ ದರ್ಶನ್ ಹಾಗೂ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳು ಹಾಜರಾಗಲಿದ್ದಾರೆ. ಹೌದು ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಇಂದು ಬೆಂಗಳೂರಿನ ಸೇಷನ್ಸ್ ಕೋರ್ಟ್ ಗೆ ನಟ ದರ್ಶನ್ ಹಾಜರಾಗಲಿದ್ದಾರೆ. ಅಲ್ಲದೇ A1 ಆರೋಪಿ ಪವಿತ್ರ ಗೌಡ A2 ದರ್ಶನ್ ಮುಖಾಮುಖಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಎಲ್ಲಾ ಆರೋಪಿಗಳನ್ನು ಕೂಡ ಪೊಲೀಸರು ಇಂದು ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಒಂದು ವೇಳೆ ಕೋರ್ಟಿಗೆ ಹಾಜರಾಗದಿದ್ದಲ್ಲಿ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಬೇಕು. ಶೀಘ್ರದಲ್ಲಿ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಯಾಗಲಿದೆ. ಹಾಗಾಗಿ ಇಂದು ಅಕಸ್ಮಾತ್ ಕೋರ್ಟ್ ಗೆ ದರ್ಶನ್ ಹಾಜರಾದರೆ, ನಟ ದರ್ಶನ್ ಹಾಗೂ ಪವಿತ್ರ ಗೌಡ ಮುಖಾಮುಖಿ ವಿಚಾರಣೆ ಎದುರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ

Read More

ಬೆಂಗಳೂರು : ಕಾಂಗ್ರೆಸ್ ನಾಯಕರ ಬೆನ್ನೆಲೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪರಾಜಿತ ಬಿಜೆಪಿ ಅಭ್ಯರ್ಥಿಗಳ ಜೊತೆಗೆ ಭೋಜನಕೂಟ ಸಭೆ ನಡೆಸಲಿದ್ದು, ಅಲ್ಲದೆ ಮಾಜಿ ಸಚಿವರು, ಶಾಸಕರುಗಳು ಕೂಡ ಈ ಒಂದು ಭೋಜನಕೂಟ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಖಾಸಗಿ ಹೋಟೆಲಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದೆ ಸಂವಿಧಾನ ಗೌರವ ಅಭಿಯಾನದ ವಿಚಾರವಾಗಿ ಈ ಒಂದು ಸಭೆ ನಡೆಯಲಿದ್ದು, ಸುಧೀರ್ಘ ಕಾಲದ ಬಳಿಕ ಪರಾಜೀತ ಅಭ್ಯರ್ಥಿಗಳ ಜೊತೆಗೆ ಈ ಒಂದು ಸಭೆ ನಡೆಯಲಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನೊಂದು ಕಡೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿ ಬಿ ವೈ ವಿಜಯೇಂದ್ರ ಅವರ ವಿರುದ್ಧ ದೂರು ನೀಡಿದ…

Read More

ಬೆಂಗಳೂರು : ಆಕೆಗೆ ಈಗಾಗಲೇ 7 ಮದುವೆಯಾಗಿತ್ತು. ಆದರೆ ತನಗೆ 7 ಮದುವೆ ಆಗಿದ್ದನ್ನು ಮುಚ್ಚಿಟ್ಟು, ವ್ಯಕ್ತಿಯ ಜೊತೆಗೆ ಎಂಟನೇ ಮದುವೆಯಾದ ಆಕೆ ಮದುವೆಯಾದ ಬಳಿಕ ಪತಿಗೆ ಪಿಎಫ್ ಹಣ ಹಾಗೂ ಚಿನ್ನಾಭರಣ ನೀಡುವಂತೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಿರುಕುಳ ನೀಡಿದ್ದಾಳೆ. ಈ ಕುರಿತು ನೊಂದ ಪತಿ ತನ್ನ ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೌದು ಏಳು ಮದುವೆಯಾಗಿರುವ ವಿಚಾರ ಮುಚ್ಚಿಟ್ಟ ಮಹಿಳೆ, ಎಂಟನೇ ಮದುವೆಯಾಗಿ ಪತಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಎಂಟನೆ ಮದುವೆಯಾಗಿದಲ್ಲದೇ ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿ ಸುಳ್ಳು ಪ್ರಕರಣ ದಾಖಲಿಸಿ ಬೆದರಿಕೆ ಹಾಕಿ ಕಿರುಕುಳ ನೀಡುತ್ತಿರುವ ಆರೋಪದಡಿ ಮಹಿಳೆ ಸೇರಿ ನಾಲ್ವರ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾಗಣಪತಿ ನಗರ ನಿವಾಸಿ ರಾಮಕೃಷ್ಣ (62) ಎಂಬುವವರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ಮಂಡ್ಯ ಜಿಲ್ಲೆ ಮದ್ದೂರು ಟೌನ್‌ನ ಎಚ್‌. ಎಂ.…

Read More

ಬೆಂಗಳೂರು: ಕಳೆದ 2022ರ ಜೂ.6ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆ ಪ್ರಕಾರ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಶಾಲಾ ಕಟ್ಟಡದ ಸುರಕ್ಷತೆ ಪ್ರಮಾಣ ಪತ್ರ ಮತ್ತು ನಕ್ಷೆ ಅನುಮೋದನೆ, ಅಗ್ನಿ ಸುರಕ್ಷತಾ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆಯ ಕಾರ್ಯದರ್ಶಿ ಪ್ರಭಾಕರ ಅರಸ್‌ ಸೇರಿ ಹಲವು ಶಾಲೆಗಳು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯಪೀಠ ಈ ಆದೇಶವನ್ನು ನೀಡಿದೆ. ಅಲ್ಲದೆ, ಈ ನಿಯಮಗಳನ್ನು ಸರ್ಕಾರಿ ಶಾಲೆಗಳೂ ಸಹ ಪಾಲಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಸುತ್ತೋಲೆಯಂತೆ ಶಾಲೆಗಳಿಗೆ ಅಂತಿಮ ಮಾನ್ಯತೆ ನೀಡುವ ಮುನ್ನವೇ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯವಾಗಿದೆ. ಅದರ ಉದ್ದೇಶ ಶಾಲಾ ಕಟ್ಟಡಗಳಲ್ಲಿ ಬಿಲ್ಡಿಂಗ್‌ ಬೈಲಾ ಮತ್ತು ಇತರ ನಿಯಮಗಳನ್ನು ಪಾಲನೆ ಮಾಡಬೇಕು ಎಂಬುದಾಗಿದೆ, ಇಲಾಖೆ ಹೊಸ ಷರತ್ತುಗಳೇನೂ ವಿಧಿಸಿಲ್ಲ, ಹಾಲಿ ನಿಯಮಗಳಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸೂಚನೆ ನೀಡಿದೆ. ಹಾಗಾಗಿ…

Read More