Author: kannadanewsnow05

ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ತನಿಖಾ ತಂಡದಿಂದ ವರದಿ ಸ್ವೀಕರಿಸಿದರು. ಹೃದಯಘಾತದಿಂದ ಸರಣಿ ಸಾವಿನ ಬಗ್ಗೆ ತನಿಖಾ ವರದಿ ಸಲ್ಲಿಕೆಯಾಗಿದೆ. ಮೇ ಮತ್ತು ಜೂನ್ ತಿಂಗಳಲ್ಲಿ ಮೃತಪಟ್ಟ ನಾಲ್ವರು ಕಾರ್ಡಿಯಾಕ್ ಅರೆಸ್ಟ್ ನಿಂದ ಮೃತಪಟ್ಟಿಲ್ಲವೆಂಬುದು ದೃಢವಾಗಿದೆ ಎಂದರು. ಹೃದಯಾಘಾತಕ್ಕೂ ಕೋವಿಡ್ ಸಂಬಂಧ ಇಲ್ಲವೆಂದು ಹೇಳಲಾಗಿದೆ. ಮಾಹಿತಿಯ ಆಧಾರದ ಮೇಲೆ ಮಕ್ಕಳಿಗೆ ಸ್ಕ್ರೀನಿಂಗ್ ಶುರು ಮಾಡಲಿದ್ದೇವೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಸಿಜಿ ಅಳವಡಿಸಲು ತಜ್ಞರು ಸಲಹೆ ನೀಡಿದ್ದಾರೆ. ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಬೇಕೆಂಬ ಆಲೋಚನೆ ಇದೆ. ಸಿಪಿಆರ್ ತರಬೇತಿ ನೀಡುವಂತೆ ಹೃದ್ರೋಗ ತಜ್ಞರು ಸಲಹೆ ನೀಡಿದ್ದಾರೆ. ಆಟೋ ಕ್ಯಾಬ್ ಚಾಲಕರಿಗೆ ಪ್ರತ್ಯೇಕ ಹೃದಯ ತಪಾಸಣೆಗೆ ಸಲಹೆ ನೀಡಿದ್ದಾರೆ. ಸ್ಕ್ರೀನಿಂಗ್ ಮಾಡಿಸಲು ಚಾಲಕರ ಸಂಘದ ಜೊತೆಗೆ ಮಾತುಕತೆ ಮಾಡುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್…

Read More

ಬೆಂಗಳೂರು : ಬೆಂಗಳೂರಲ್ಲಿ ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಬೆಂಗಳೂರಿನ ಆರ್ ವಿ ಕಾಲೇಜು ಹಿಂಭಾಗ ರಾಜಕಾಲುವೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ 35 ವರ್ಷದ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೊಳೆತ ಶವ ಕಂಡು ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟ ವ್ಯಕ್ತಿಯ ಎದೆಯ ಮೇಲೆ ಜಯ ಎಂದು ಹಚ್ಚೆ ಹಾಕಿಸಿಕೊಂಡಿರುವುದು ಪತ್ತೆಯಾಗಿದೆ. ಸದ್ಯ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಸ್ಥಳಾಂತರಿಸಿದ್ದಾರೆ. ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಶವ ಶಿಫ್ಟ್ ಆಗಿದ್ದು ಪೊಲೀಸರು ಅನುಮಾನಾಸ್ಪದ ಸಾವು ಎಂದು ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಸರಣಿ ಹೃದಯಾಘಾತ ಸಾವು ಸಂಭವಿಸುತ್ತಿದ್ದು ರಾಜ್ಯ ಸರ್ಕಾರ ಇತ್ತೀಚಿಗೆ ತಾಂತ್ರಿಕ ಸಲಹಾ ಸಮಿತಿ ಒಂದನ್ನು ರಚನೆ ಮಾಡಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವವರ ಕುರಿತು ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ತನಿಖಾ ತಂಡಕ್ಕೆ ಸೂಚನೆ ನೀಡಿತ್ತು. ಇದೀಗ ತನಿಖೆ ಪೂರ್ಣಗೊಳಿಸಿರುವ ತಂಡ ಎಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ.. ಹೌದು ರಾಜ್ಯ ಸರ್ಕಾರಕ್ಕೆ ಇಂದು ಹೃದಯಘಾತದ ವರದಿ ಸಲಿಕೆ ಆಗಿದೆ. ಹಾಸನ ಜಿಲ್ಲೆಯಲ್ಲಿನ ಸರಣಿ ಹೃದಯಾಘಾತದ ರಿಪೋರ್ಟ್ ಸಲ್ಲಿಕೆಯಾಗಿದ್ದು, ಮೂರು ಹಂತದ ತನಿಖಾ ವರದಿ ತನಿಖಾ ತಂಡ ಸಲ್ಲಿಸಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತನಿಖಾ ತಂಡ ಆಗಮಿಸಿದ್ದು, ಅಂತಿಮ ವರದಿಯನ್ನು ವಿಮರ್ಶೆ ನಡೆಸಿ, ವಿಮರ್ಶೆ ಮಾಡಿದ ಬಳಿಕ ಆರೋಗ್ಯ ಸಚಿವರಿಗೆ ವರದಿ ಸಲ್ಲಿಕೆ ಮಾಡಲಾಯಿತು. ವರದಿ ಸಲ್ಲಿಕೆ ಆದ ನಂತರ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಲಿದ್ದಾರೆ. 3 ಮಾದರಿ ಯಾವವು? ಮಾದರಿ 1ರಲ್ಲಿ ಮರಣೋತ್ತರ ಪರೀಕ್ಷೆ ಯಾಗಿರುವ ಪ್ರಕರಣಗಳ ವರದಿ ಇರಲಿದ್ದು, ಮಾದರಿ 2…

Read More

ಬೆಂಗಳೂರು : ಬೆಂಗಳೂರಲ್ಲಿ ಇಂದು ಮಧ್ಯಾಹ್ನ 2:30 ಸುಮಾರಿಗೆ ಭೀಕರವಾದ ಅಪಘಾತ ಸಂಭವಿಸಿದ್ದು ವೇಗವಾಗಿ ಬಂದಂತಹ ಲಾರಿ ಬೈಕಿಗೆ ಡಿಕ್ಕಿ ಆದ ಪರಿಣಾಮ, ಬೈಕ್ ಮೇಲಿದ್ದ ಮಹಿಳೆ ರಸ್ತೆ ಮೇಲೆ ಬಿದ್ದಿದ್ದಾಳೆ. ಈ ವೇಳೆ ಲಾರಿ ಮಹಿಳೆ ಮೇಲೆ ಹರಿದು ಆಕೆ ದೇಹ ಸಂಪೂರ್ಣ ಅಪ್ಪಚ್ಚಿಯಾಗಿರುವ ಘಟನೆ ಬೆಂಗಳೂರಿನ 8ನೇ ಮೈಲಿ ಬಳಿ ನಡೆದಿದೆ. ಲಾರಿ ಚಾಲಕನ ಅಟ್ಟಹಾಸಕ್ಕೆ ಮಹಿಳೆಯ ದೇಹ ಅಪ್ಪಚ್ಚಿಯಾಗಿದೆ, ಬೆಂಗಳೂರಿನ ಪೀಣ್ಯಾದ 8ನೇ ಮೈಲಿ ಬಳಿ ಬೈಕ್ ಮೇಲೆ ಲಾರಿ ಹರಿದು ಭೀಕರ ಅಪಘಾತ ಸಂಭವಿಸಿದೆ. ಆದರೆ ಘಟನೆಯಲ್ಲಿ ಒಂದು ವರ್ಷದ ಮಗು ಹಾಗೂ ಗಂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೈಕ್ ಹಿಂಬದಿ ಕುಳಿತಿದ್ದ ಪತ್ನಿ ಲಕ್ಷ್ಮಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ರೊಚ್ಚಿಗೆದ್ದ ಸ್ಥಳೀಯರು ಲಾರಿ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಕಲ್ಲುತ್ತೂರಿ ಲಾರಿ ಚಾಲಕನಿಗೆ ಹಲ್ಲೆ ಮಾಡಿದ್ದಾರೆ. ತಳಕ್ಕೆ ಪಿಣ್ಯ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಉಗ್ರರಿಗೆ ಸಹಕಾರ ನೀಡುತ್ತಿದ್ದ ಮೂವರು ಶಂಕಿತ ಉಗ್ರರನ್ನು ನಿನ್ನೆ ಸಿಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದು, 6 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಸಿಸಿಬಿ ಮೂವರು ಉಗ್ರರನ್ನು ಕಸ್ಟಡಿಗೆ ಪಡೆದುಕೊಂಡಿದೆ. ಇದೀಗ ವಿಚಾರಣೆಯ ವೇಳೆ ಸ್ಪೋಟಕ ಅಂಶ ಬಯಲಾಗಿದ್ದು ಬೆಂಗಳೂರಲ್ಲಿ ಬಾಂಬೆ ಸ್ಪೋಟಿಸಿ ಉಗ್ರ ನಾಸಿರ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಳಿಸುವ ಪ್ಲಾನ್ ಶಂಕಿತ ಉಗ್ರರು ಮಾಡಿದ್ದರು ಎಂದು ತಿಳಿದು ಬಂದಿದೆ. ಹೌದು. 2008ರ ಬೆಂಗಳೂರು ಸ್ಫೋಟದಲ್ಲಿ ಜೈಲುಪಾಲಾಗಿರುವ ಲಷ್ಕರ್‌ ಸಂಘಟನೆಯ ಉಗ್ರ ನಾಸೀರ್‌ ಮುಸ್ಲಿಂ ಯುವಕರ ತಂಡ ಬಳಸಿ ಹೊರ ಬರಲು ಖತರ್ನಾಕ್‌ ಪ್ಲ್ಯಾನ್‌ ಮಾಡಿದ್ದ ವಿಚಾರ ಎನ್‌ಐಎ ಮೂಲಗಳಿಂದ ತಿಳಿದು ಬಂದಿದೆ.ಬಾಂಬ್‌ ಸ್ಫೋಟಿಸಿ  ಸಿನಿಮಾ ಸ್ಟೈಲ್‌ನಲ್ಲಿ ಪರಪ್ಪನ ಅಗ್ರಹಾರದಿಂದ ಪರಾರಿಯಾಗಲು ಟಿ ನಾಸೀರ್‌ಮುಂದಾಗಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ದಳದ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಚು ರೂಪಿಸಲು ಎಎಸ್‌ಐ ಚಾಂದ್‌ ಪಾಷಾ ನೆರವು ನೀಡುವುದಾಗಿ ಹೇಳಿದ್ದ. ಸಿಎಆರ್ ಉತ್ತರ ವಿಭಾಗದಲ್ಲಿರುವ ಚಾಂದ್‌ ಪಾಷಾ ನಾಸೀರ್‌ನನ್ನು…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, 7ನೇ ತರಗತಿ ವಿದ್ಯಾರ್ಥಿ ಒಬ್ಬ ವಸತಿ ಶಾಲೆಯ ಕೊಠಡಿಯಲ್ಲೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ನಾರಾಯಣ ಪಾಳ (13) ಎಂದು ತಿಳಿದುಬಂದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿರುವ ಇಂದಿರಾ ಗಾಂಧಿ ಬಾಲಕರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಹಾಸನದಲ್ಲಿ ಸರಣಿ ಹೃದಯಾಘಾತದಿಂದ ಸಾವನಪ್ಪಿರುವ ಹಿನ್ನೆಲೆಯಲ್ಲಿ ಸರ್ಕಾರ ತನಿಖೆಗೆ ಆದೇಶ ನೀಡಿ ತಂಡ ರಚನೆ ಮಾಡಿತ್ತು. ಇದೀಗ ತಜ್ಞರು ವರದಿಯಲ್ಲಿ ಸಡನ್ ಆಗಿ ಎಷ್ಟು ಮಂದಿ ಸತ್ತಿದ್ದಾರೆ? ಮೇ ಜೂನ್ ನಲ್ಲಿ ಒಟ್ಟು 24 ಜನರು ಸತ್ತಿದ್ದಾರೆ. 24 ಮಂದಿ ಪೈಕಿ 20 ಜನರಿಗೆ ಹೃದಯಾಘಾತ ಕನ್ಫರ್ಮ್ ಆಗಿದೆ. ನಾಲ್ವರಿಗೆ ಹೃದಯಘಾತವೇ ಆಗಿಲ್ಲ ಎಂದು ವರದಿಯಾಗಿದೆ. ನಾಲ್ವರಲ್ಲಿ ಒಬ್ಬನಿಗೆ ಕಿಡ್ನಿ ಸಮಸ್ಯೆ ಮತ್ತು ಮತ್ತೊಬ್ಬರಿಗೆ ಆಕ್ಸಿಡೆಂಟ್ ಆಗಿದೆ. ಇನ್ನೊಬ್ಬ ವ್ಯಕ್ತಿಗೆ ಸಿವಿಯರ್ ಗ್ಯಾಸ್ ಟ್ರೊ ಸಮಸ್ಯೆಯಿಂದ ಬಿಪಿ ಸಮಸ್ಯೆ ಉಂಟಾಗಿದೆ. ಇನ್ನೂ ನಾಲ್ಕನೇ ವ್ಯಕ್ತಿಗೆ ಇತರ ಆರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ್ದಾನೆ. ಹಾಸನದಲ್ಲಿ ಹೃದಯಾಘಾತ ಸರಣಿ ಸಾವು ಹಿನ್ನೆಲೆಯಲ್ಲಿ ತಜ್ಞರು ಸಮಿತಿ ಸಿದ್ದ ಪಡಿಸಿದೆ. ಇನ್ನು 20 ಪ್ರಕರಣಗಳಲ್ಲಿ 3 ನಾನ್ ಹಾರ್ಟ್ ಅಟ್ಯಾಕ್ ಡೆತ್ ಆಗಿದ್ದು ಮೂವರಿಗೆ ಈಗಾಗಲೇ ಒಮ್ಮೆ ಹೃದಯಘಾತವಾಗಿತ್ತು. ಇನ್ನೊಬ್ಬನಿಗೆ ಆಂಜಿಯೋಪ್ಲಾಸ್ಟ್ ಮಾಡಲಾಗಿತ್ತು. ಒಟ್ಟು ಏಳು ಹೃದಯಾಘಾತ ಪ್ರಕರಣಗಳ ಪೋಸ್ಟ್ ಮಾರಾಟ ಮಾಡಲಾಗಿತ್ತು. 7 ಮರಣೋತ್ತರ…

Read More

ಬೆಂಗಳೂರು : ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸಿಬಿಐ ತನಿಖೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು. ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆಯಲ್ಲಿ ಸಿಎಂ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ನೀಡಿದೆ. ಅಲ್ಲದೇ ತನಿಖೆಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿದ ಮೇಲ್ಮನವಿ ವಿಚಾರಣೆ ನಡೆಯಿತು. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಮೇಲ್ಮನವಿ ಕೂಡ ವಿಚಾರಣೆ ನಡೆಯಿತು. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ ಮತ್ತೆ ನೋಟಿಸ್ ನೀಡಲಾಗಿದೆ. ನ್ಯಾ.ವಿ. ಕಾಮೇಶ್ವರ ರಾವ್ ಹಾಗೂ ನ್ಯಾ. ಸಿಎಂ ಜೋಶಿ ಅವರಿಂದ ಪೀಠ ಆದೇಶ ಹೊರಡಿಸಿದೆ. ಬಳಿಕ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಮುಂದೂಡಿತು.

Read More

ದಾವಣಗೆರೆ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಐದು ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತೇನೆ 2028 ರಲ್ಲೂ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಡಿಕೆ ಶಿವಕುಮಾರ್ ಅವರಿಗೆ ಕೆಲವು ಶಾಸಕರಷ್ಟೇ ಬೆಂಬಲ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇತ್ತ ನೊಣವಿನ ಕೆರೆಯ ಶ್ರೀ ಶಿವಯೋಗಿಸ್ವರ ಸ್ವಾಮೀಜಿಗಳು ಈ ಅವಧಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಹೌದು ಈ ಅವಧಿಯಲ್ಲೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಕಾಡುಸಿದ್ದೇಶ್ವರ ಮಠದ ನೊಣವಿನಕೆರೆಯ ಶಿವಯೋಗಿಶ್ವರ ಶ್ರೀಗಳು ಭವಿಷ್ಯ ನುಡಿದಿದ್ದು, ಶ್ರೀಮಠ ಜನರ ಸಂಕಲ್ಪದ ಮೇರೆಗೆ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸುತ್ತಾರೆ. ಡಿಕೆ ಶಿವಕುಮಾರ್ ಯಾವಾಗಲೂ ಮಠಕ್ಕೆ ಬರುತ್ತಾರೆ. ಆದರೆ ರಾಜಕೀಯವಾಗಿ ಬರಲ್ಲ ಜನಸೇವೆ ಮಾಡಲು ಅವಕಾಶ ಸಿಗಲೆಂದು ಆಶೀರ್ವಾದ ಮಾಡುತ್ತೇವೆ ಎಂದು ದಾವಣಗೆರೆ ಜಿಲ್ಲೆಯ ಸೊಕ್ಕೆ ಗ್ರಾಮದಲ್ಲಿ ಶಿವಯೋಗಿಶ್ವರ ಶ್ರೀಗಳು ಹೇಳಿಕೆ ನೀಡಿದರು.

Read More

ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ಅವರನ್ನು ಭೇಟಿಯಾದ ಬಳಿಕ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಯಾವುದೇ ರೀತಿಯ ಸಚಿವ ಸಂಪುಟ ಪುನಾರಚನೆಯು ಇಲ್ಲ, ಯಾವುದೇ ನಾಯಕತ್ವದ ಬದಲಾವಣೆಯು ಇಲ್ಲ ಎಂದು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಹುದ್ದೆ ಖಾಲಿ ಇಲ್ಲ ಅಂತ ಡಿಕೆ ಶಿವಕುಮಾರ್ ಅವರೇ ಹೇಳಿದ್ದಾರೆ ಹಾಗಾಗಿ ಸದ್ಯಕ್ಕೆ ಸಚಿವ ಸಂಪುಟ ಪುನಃ ರಚನೆಯನ್ನು ಇಲ್ಲ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯು ಆಗಿಲ್ಲ. ನಾಯಕತ್ವ ಬದಲಾವಣೆ ಎಂದು ಯಾರೂ ಹೇಳಿದ್ದು ವೈಯಕ್ತಿಕ ಅಭಿಪ್ರಾಯವಲ್ಲ ಪಕ್ಷದ ತೀರ್ಮಾನ ಆಗುತ್ತಾ ಎಂದು ತಿಳಿಸಿದರು ಕ್ರಾಂತಿ ಅಂದರೆ ಬದಲಾವಣೆನಾ ಎಂದು ಸಿಎಂ ಸಿದ್ದರಾಮಯ್ಯ ಇದೇ ಬಳಿ ಪ್ರಶ್ನಿಸಿದರು ಬದಲಾವಣೆಯ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಕೆಸಿ ವೇಣುಗೋಪಾಲ್ ಹೇಳಬೇಕು. https://twitter.com/ANI/status/1943213372209778725 2023ರ ಚುನಾವಣೆ ವೇಳೆ ಏನು ಆಯಿತು? 2028 ರಲ್ಲೂ ಕೂಡ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಮತ್ತು ಡಿಕೆ ಶಿವಕುಮಾರ್ ಬದ್ಧರಾಗಿದ್ದೇವೆ.…

Read More