Author: kannadanewsnow05

ಚಾಮರಾಜನಗರ : ಅಭಿವೃದ್ಧಿ ಕಾಣದ ಹಾಗೂ ಹಿಂದುಳಿದ ಜಿಲ್ಲೆ, ಅದರಲ್ಲೂ ಈ ಒಂದು ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ಹಣೆಪಟ್ಟಿ ಹೊಂದಿದ್ದ ಚಾಮರಾಜನಗರದಲ್ಲಿ ಇದೀಗ ಸಂಪುಟ ಸಭೆ ನಡೆಸಲು ಮುಹೂರ್ತ ಫಿಕ್ಸ್ ಆಗಿದೆ. ಹೌದು ಚಾಮರಾಜನಗರಕ್ಕೆ ಭೇಟಿ ನೀಡಿದ ರಾಜಕೀಯ ನಾಯಕರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಹಣೆಪಟ್ಟಿಯನ್ನು ಜಿಲ್ಲೆ ಹೊಂದಿತ್ತು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೆ ಚಾಮರಾಜನಗರದ ಮಲೆ ಮಾದೇಶ್ವರ ಬೆಟ್ಟದಲ್ಲಿ ಫೆಬ್ರವರಿ 15ರಂದು ಸಂಪುಟ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದು ಸಚಿವ ಕೆ ವೆಂಕಟೇಶ್ ಮಾಹಿತಿ ನೀಡಿದರು. ಸಚಿವ ಸಂಪುಟ ಸಭೆ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ನಿವಾರಣೆ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಸಂಪೂರ್ಣ ಒಳಚರಂಡಿ ವ್ಯವಸ್ಥೆ, ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ‌‌. ಗ್ರಾಮಾಂತರ ಮತ್ತು ನಗರ, ಪಟ್ಟಣ ಪ್ರದೇಶಗಳಿಗೆ ಪರಿಪೂರ್ಣ ಮೂಲ ಸೌಕರ್ಯ,…

Read More

ಉಡುಪಿ : ಸಾಲ ನೀಡಿದ್ದ ಬ್ಯಾಂಕ್ ಅಧಿಕಾರಿಗಳು ಮನೆಗೆ ಬಂದು ಸಾಲ ವಾಪಸ್ ನೀಡುವಂತೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದ ಯುವಕನೊಬ್ಬ ಮನೆಯಲ್ಲಿ ಫ್ಯಾನ್ ಗೆ ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಮೃತ ಯುವಕನನ್ನು ನಸ್ರುಲ್ಲಾ(29) ಎಂದು ತಿಳಿದುಬಂದಿದ್ದು, ಈತ ವಿದೇಶದಲ್ಲಿ ಉದ್ಯೋಗದಲ್ಲಿ ತೊಡಗಿಕೊಂಡಿದ್ದ. ಕಳೆದ ಮೂರು ತಿಂಗಳ ಹಿಂದೆ ಅವರು ಊರಿಗೆ ವಾಪಸ್ ಆಗಿದ್ದರು ಈ ವೇಳೆ, ಸಾಲ ನೀಡಿದ ಬ್ಯಾಂಕ್ ಅಧಿಕಾರಿಗಳು ಮನೆಗೆ ಭೇಟಿ ನೀಡುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ನಸ್ರುಲ್ಲಾ ನಿನ್ನೆ ಮನೆಯ ಬೆಡ್ ರೂಂನಲ್ಲಿ ಫ್ಯಾನಿಗೆ ವೇಲ್ ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ 6 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ವಿಚಾರವಾಗಿ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಅವರು ತಿರುಪತಿಯಲ್ಲಿ ರಾಜ್ಯದ ಭಕ್ತರಿಗೆ ಯಾವುದೇ ರೀತಿಯಾದ ತೊಂದರೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಿರುಪತಿಯಲ್ಲಿ ರಾಜ್ಯದ ಯಾವ ಭಕ್ತರಿಗೂ ತೊಂದರೆಯಾಗಿಲ್ಲ. ರಾಜ್ಯದ ಎಂಡೋಮೆಂಟ್ ಅಧಿಕಾರಿಯ ಜೊತೆ ನಾನು ಸಂಪರ್ಕದಲ್ಲಿ ಇದ್ದೇನೆ. ತಿರುಪತಿಯಲ್ಲಿ ಕರ್ನಾಟಕ ಭವನದ ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ಸ್ನಾನ, ತಿಂಡಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ.ಅಲ್ಲಿ ತಕ್ಷಣಕ್ಕೆ ಬೇಕಾಗುವ ಅಗತ್ಯ ಕ್ರಮಕ್ಕೆ ಸ್ಪಂದಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು. ಬಳ್ಳಾರಿ ಮೂಲದ ಮಹಿಳೆಯ ಸಾವಾಗಿಲ್ಲ, ಡಿಸಿ ಸ್ಪಷ್ಟನೆ ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ 6 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ವೇಳೆ ಬಳ್ಳಾರಿ ಮೂಲದ ಮಹಿಳೆಯೊಬ್ಬರು…

Read More

ಯಾದಗಿರಿ : ಕಳೆದ ವರ್ಷ ರಾಜ್ಯದ ಬಳ್ಳಾರಿ ಬೆಳಗಾವಿ ಹಾಗೂ ರಾಯಚೂರಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿ ಬೆಳಿಸಿತ್ತು. ಇದೀಗ ಯಾದಗಿರಿಯಲ್ಲಿ ನವಜಾತ ಶಿಶುಗಳ ಸರಣಿ ಸಾವು ಆಗುತ್ತಿದ್ದು, ಇಂದು ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನಲ್ಲಿ ಮತ್ತೊಂದು ನವಜಾತ ಶಿಶುವಿನ ಸಾವಾಗಿದೆ. ಎರಡು ವಾರದ ಅಂತರಲ್ಲೇ ಮೂರು ನವಜಾತ ಶಿಶುಗಳ ಸಾವಾಗಿದೆ. ಹೌದು ಯಾದಗಿರಿಯಲ್ಲಿ‌ ನವಜಾತ ಶಿಶುಗಳ ಸರಣಿ ಸಾವು ಮುಂದುವರೆದಿದ್ದು, ಎರಡು ವಾರದ ಅಂತರದಲ್ಲೇ ಮೂರು ನವಜಾತ ಶಿಶುಗಳ ಮರಣ ಹೊಂದಿವೆ ಎಂದು ವರದಿಯಾಗಿದೆ. ಹೆರಿಗೆಯಾದ ಬಳಿಕ ನವಜಾತ ಶಿಶು ಸವಾಗಿದೆ ಎಂದು ತಿಳಿದುಬಂದಿದೆ. ತಾಲ್ಲೂಕಿನ ಅನಪುರ ಗ್ರಾಮದ ಗಾಯತ್ರಿ ನವೀನ ದಾಸರಿ ಅವರು ಹೆರಿಗೆಗೆಂದು ಮಂಗಳವಾರ ಪಟ್ಟಣದ ಸಿಎಚ್‌ಸಿಗೆ ಬಂದಿದ್ದರು. ಆದರೆ, ಕೆಲವು ಪರೀಕ್ಷೆಗಳಿಗೆ ವೈದ್ಯರು ಶಿಫಾರಸು ಮಾಡಿದ್ದಾರೆ. ಪರೀಕ್ಷೆ ಮಾಡಿಸಲು ಯಾದಗಿರಿ ನಗರಕ್ಕೆ ತೆರಳಬೇಕಿದ್ದರಿಂದ ಮಂಗಳವಾರ ರಾತ್ರಿ ಪಟ್ಟಣದಲ್ಲಿರುವ ಸಂಬಂಧಿಕರ ಮನೆಯಲ್ಲಿ ತಂಗಿದ್ದಾರೆ.ನಿನ್ನೆ ಮಧ್ಯಾಹ್ನ 2 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ…

Read More

ವಿಜಯನಗರ : ಕೆಲಸದ ಒತ್ತಡದಿಂದ ಬೇಸತ್ತ ನಗರ ಸಭೆಯ ಬಿಲ್ ಕಲೆಕ್ಟರ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಮೃತರನ್ನು ಮಂಜುನಾಥ್ ಎಂದು ತಿಳಿದುಬಂದಿದೆ. ಮಂಜುನಾಥ್ ಅವರು ಹೊಸ ವರ್ಷದ ಆರಂಭದ ದಿನವೇ ತಮಗೆ ಕೆಲಸದ ಒತ್ತಡದ ಇದೆ ಎಂದು ಹೇಳಿ ಪ್ಲಂಬಿಂಗ್‌ಗೆ ಬಳಸುವ ಗಮ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕ ಅವರು ಇಂದು ಮತ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದುಕ್ಕೂ ಮೊದಲು ಆತ್ಮಹತ್ಯೆಗೆ ಯತ್ನಿಸಿದ್ದ ಮಂಜುನಾಥ್ ಮೊಬೈಲ್ ನಲ್ಲಿ ಡೆತ್ ನೋಟ್ ಕುರಿತು ಉಲ್ಲೇಖಿಸಿದ್ದರು. ನನ್ನ ಸಾವಿಗೆ ನಗರಸಭೆಯ ಆಯುಕ್ತ ಚಂದ್ರಪ್ಪ ಮತ್ತು ಕಂದಾಯ ಅಧಿಕಾರಿ ನಾಗರಾಜ್‌ ಕಾರಣ.ಕೆಲಸದಿಂದ ಬೇರೆಡೆ ನಿಯೋಜಿಸಲು ಒಂದು ತಿಂಗಳಿಂದ ಹೇಳುತ್ತಿದ್ದರೂ ತೆಗೆಯುತ್ತಿಲ್ಲ. ರಾತ್ರಿ ನಿದ್ದೆ ಬರುತ್ತಿಲ್ಲ, ಅಧಿಕ ಒತ್ತಡ ಇರುವುದರಿಂದ ನಾನು ಸಾವಿಗೆ ಶರಣಾಗಿದ್ದೀನಿ’ ಎಂಬ ಸಂದೇಶವನ್ನು ತಮ್ಮ ಮೊಬೈಲ್‌ ಫೋನ್‌ನಲ್ಲಿ ಕಳುಹಿಸಿ ಮಂಜುನಾಥ…

Read More

ಹುಬ್ಬಳ್ಳಿ : ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತಂತೆ ಕೇಂದ್ರ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಖಂಡಿಸಿ ಇಂದು ಹುಬ್ಬಳ್ಳಿ ಧಾರವಾಡ ಹಾಗೂ ಬೀದರ್ನಲ್ಲಿ ದಲಿತ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಇನ್ನು ಹುಬ್ಬಳ್ಳಿಯಲ್ಲಿ ಈ ಒಂದು ಬಂದ್ ತೀವ್ರ ಸ್ವರೂಪ ಪಡೆದಿದ್ದು, ಟೈರ್ ಗೆ ಬೆಂಕಿ ಹಚ್ಚಿ ಅಮಿತ್ ಶಾ ವಿರುದ್ಧ ಘೋಷಣೆ ಕೂಗಲಾಯಿತು. ಬಂದ್ ಪರಿಣಾಮದಿಂದ ನಗರದ ಹಲವು ಖಾಸಗಿ ವಾಹನಗಳು ಹಾಗೂ ಬಸ್ ಗಳ ಚಕ್ರದ ಗಾಳಿ ತೆಗೆದು ಹತ್ತಿ ಬಟನಾಕಾರರು ಆಕ್ರೋಶ ಹೊರ ಹಾಕಿದರು. ಇದೇ ವೇಳೆ ಅಂಗಡಿ ಮುಗ್ಗಟ್ಟುಗಳನ್ನು ಕೂಡ ಬಂದ್ ಮಾಡಿಸಿದರು. ಬೆಳಿಗ್ಗೆ 6 ಗಂಟೆಯಿಂದಲೇ ದಲಿತ ಸಂಘಟನೆಗಳು ಸೇರಿದಂತೆ ಇತರೆ ಸಂಘಟನೆಗಳು ಹುಬ್ಬಳ್ಳಿಯ ಪ್ರಮುಖ ಕೇಂದ್ರವಾದ ಚನ್ನಮ್ಮ ಸರ್ಕಲ್ ಹಾಗೂ ಸುತ್ತಮುತ್ತಲಿನ ಎಲ್ಲಾ ವ್ಯಾಪಾರ ವಹಿವಾಟು ನಡೆಸುವ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಿದರು. ಇನ್ನು ಒಳ ರಸ್ತೆಯಲ್ಲಿರುವ ಹಲವು ಅಂಗಡಿಗಳು ಓಪನ್ ಆಗಿದ್ದವು. ಬಂದ್ ಹಿನ್ನೆಲೆಯಲ್ಲಿ ಇಂದು…

Read More

ನಾಗ್ಪುರ್ : ಮದುವೆಯಾಗಿ ಆ ದಂಪತಿಗಳು 25ನೇ ವರ್ಷ ಮುಗಿಸಿ 26ನೇ ವಸಂತಕ್ಕೆ ಕಾಲಿಟ್ಟಿದ್ದಾರೆ ಈ ವೇಳೆ, ವೆಡ್ಡಿಂಗ್ ಆನಿವರ್ಸರಿ ಗೆ ಎಂದು ಖರೀದಿಸಿದ ಹೊಸ ಬಟ್ಟೆಯನ್ನು ಧರಿಸಿಕೊಂಡು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಆದರೆ ನಂತರ ನಡೆದಿದ್ದು ಘೋರ ದುರಂತ. ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ಬಳಿಕ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಹೌದು 26ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪತಿ ಮತ್ತು ಪತ್ನಿ ಸಾವಿಗೆ ಶರಣಾಗಿದ್ದಾರೆ.ಮೃತರನ್ನು 57 ವರ್ಷದ ಜೆರಿಲ್ ಡ್ಯಾಮ್ಸನ್ ಆಸ್ಕರ್ ಮಾನ್‌ಕ್ರೀಫ್ ಅಡುಗೆಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಅವರ ಪತ್ನಿ 46 ವರ್ಷದ ಆನಿ ಜೆರಿಲ್, ಡ್ರಾಯಿಂಗ್​ ರೂಮಿನಲ್ಲಿ ಹಾಸಿಗೆಯ ಮೇಲೆ ಶವವಾಗಿ ಪತ್ತೆಯಾದರು. ದಂಪತಿ 26 ವರ್ಷಗಳ ಹಿಂದೆ ಮದುವೆಯ ದಿನ ಧರಿಸಿದ್ದ ಅದೇ ಉಡುಗೆಗಳನ್ನು ಧರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆರಿಲ್ ಮತ್ತು ಆಯನ್ ದಂಪತಿಗೆ ಮಕ್ಕಳು ಇರಲಿಲ್ಲ. ಡೆತ್‌ನೋಟ್‌ನಲ್ಲಿ ತಮ್ಮ ಸಾವಿಗೆ ಯಾರೂ ಕಾರಣ ಅಲ್ಲ ಎಂಬುದನ್ನು ದಂಪತಿ…

Read More

ರಾಮನಗರ : ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ದಾರುಣವಾಗಿ ಸಾವನಪ್ಪಿರುವ ಘಟನೆ ರಾಮನಗರ ತಾಲೂಕಿನ ಗ್ರಾಮದ ಬಳಿ ಈ ಒಂದು ಭೀಕರವಾದ ಅಪಘಾತ ನಡೆದಿದೆ. ಹೌದು ಈ ಒಂದು ಅಪಘಾತ ರಾಮನಗರದ ಅಚ್ಚಲು ಗ್ರಾಮದ ಬಳಿ ಬೆಳ್ಳಂ ಬೆಳಗ್ಗೆ ಈ ಘಟನೆ ನಡೆದಿದೆ. ಮೃತರನ್ನು ಒಂದೇ ಕುಟುಂಬದ ತಂದೆ ಹಾಗೂ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದ್ದು,ಇನ್ನು ಅಪಘಾತದಲ್ಲಿ ಮೃತ ಮಕ್ಕಳ ತಾಯಿಯು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.. KSRTC ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರದಿಂದ ಕನಕಪುರಕ್ಕೆ ಈ ಒಂದು ಬಸ್ ತೆರಳುತ್ತಿತ್ತು. ಕನಕಪುರದಿಂದ ರಾಮನಗರಕ್ಕೆ ತೆರಳುತ್ತಿದ್ದಾಗ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಹಿನ್ನೆಲೆಯಲ್ಲಿ ರಾಮನಗರ ಮತ್ತು ಕನಕಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ತುಮಕೂರು : ದೂರು ನೀಡಲು ಬಂದಂತಹ ಮಹಿಳೆಯ ಜೊತೆಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತುಮಕೂರು ಜಿಲ್ಲೆಯ ಮಧುಗಿರಿ ಠಾಣೆಯ ಡಿವೈಎಸ್ಪಿ ರಾಮಚಂದ್ರಪ್ಪ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇದರ ಬೆನ್ನಲ್ಲೇ ಮತ್ತೊರ್ವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಹಿನ್ನೆಲೆಯಲ್ಲಿ ರಾಮಚಂದ್ರಪ್ಪ ವಿರುದ್ಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು FIR ದಾಖಲಾಗಿದೆ. ಹೌದು ದೂರು ನೀಡಲು ಬಂದಂತಹ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಈಗಾಗಲೇ ರಾಮಚಂದ್ರಪ್ಪ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇದರ ಬೆನ್ನಲ್ಲೇ, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಹಿಳೆ ಒಬ್ಬರು, ವ್ಯಕ್ತಿ ಒಬ್ಬ ಹಣ ಪಡೆದು ವಂಚಿಸಿದ್ದ ಕುರಿತು ದೂರು ನೀಡಲು ಬಂದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ವ್ಯಕ್ತಿ ಒಬ್ಬ ನಿವೇಶನಕ್ಕಾಗಿ ತನ್ನಿಂದ ಹಣ ಪಡೆದು ಬಳಿಕ ನಿವೇಶನವನ್ನು ನೀಡದೆ ಮತ್ತು ಹಣವನ್ನು ನೀಡದೆ ವಂಚಿಸಿದ್ದ. ಈ ಕುರಿತು ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶಿಸುವಂತೆ ನಾನು…

Read More

ಬೆಂಗಳೂರು : ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ನಕ್ಸಲರು ನಿನ್ನೆ ಬೆಂಗಳೂರಿನ ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಅವರ ಸಮ್ಮುಖದಲ್ಲಿ ಶರಣಾದರು. ಈ ವಿಚಾರವಾಗಿ ನನ್ನ ಪ್ರಕಾರ ಇದೀಗ ಕರ್ನಾಟಕ ನಕ್ಸಲ್ ಮುಕ್ತವಾಗಿದ್ದು, ಶೀಘ್ರದಲ್ಲಿ ಶರಣಾದ ನಕ್ಸಲರಿಗೆ ನ್ಯಾಯ ಕೊಡಿಸುವ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದರು. ನಿನ್ನೆ ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮುಖ್ಯವಾಹಿನಿಗೆ ಬರಮಾಡಿಕೊಂಡು ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು. ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ. ಶಾಂತಿಗಾಗಿ ನಾಗರಿಕ ವೇದಿಕೆಯವರು…

Read More