Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಆಗಾಗ ಸಂಭವಿಸುತ್ತದೆ ಇದೀಗ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಮನೆಯಲ್ಲಿದ್ದ ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಹೌದು ಅಡುಗೆ ಅನಿಲ ಸೋರಿಕೆಯಾಗಿ ಮನೆಯಲ್ಲಿದ್ದ 6 ಜನರಿಗೆ ಗಾಯಗಳಾಗಿರುವ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊಂದಿಕೊಂಡಿದೆ. ಮನೇಲಿದ್ದ ಮಕ್ಕಳು ಸೇರಿ 6 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳಿಗೆ ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ. ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ…
ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಶಾಲೆಯ ಮೇಲೆ ಹೆಜ್ಜೆನು ದಾಳಿ ಮಾಡಿದೆ. ಪ್ರಾರ್ಥನೆ ಮುಗಿಸಿ ಶಾಲೆಯೊಳಗೆ ಹೋಗುವಾಗ ವಿದ್ಯಾರ್ಥಿಗಳ ಮೇಲೆ ಹೆಜ್ಜೆನು ದಾಳಿ ಮಾಡಿದೆ. ಶಾಲೆಯ ಸುಮಾರು 15 ಮಕ್ಕಳ ಮೇಲೆ ದಾಳಿ ಮಾಡಿದ್ದು, ಘಟನೆಯಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಕಕ್ಕಿಂಜೆ ಆಸ್ಪತ್ರೆಯಲ್ಲಿ ಸದ್ಯಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಜ್ಜೆನು ದಾಳಿ ಹಿನ್ನೆಲೆಯಲ್ಲಿ ಶಿಕ್ಷಕರು ಶಾಲೆಗೆ ರಜೆ ನೀಡಿದ್ದಾರೆ.
ಕೋಲಾರ : ಮನೆಯ ಮುಂದಿನ ರಸ್ತೆಯ ವಿಚಾರಕ್ಕೆ ವ್ಯಕ್ತಿಯ ಮೇಲೆ ಹಾರೆಯಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಮನೆಯ ಮುಂದಿನ ರಸ್ತೆ ವಿಚಾರಕ್ಕೆ ವ್ಯಕ್ತಿ ಒಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹಾರೆಯಿಂದ ಹೊಡೆದು ಮಂಜುನಾಥ್ (38) ಎನ್ನುವ ವ್ಯಕ್ತಿಯೊಬ್ಬರ ಹತ್ಯೆಯಾಗಿದೆ. ಕಣ್ಣೂರು ಗ್ರಾಮದ ಮುನಿವೆಂಕಟಪ್ಪ ಹಾಗೂ ರಾಜೇಶ್ ಎಂಬುವವರು ಮಂಜುನಾಥ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಮಂಜುನಾಥ್ ಹಾಗೂ ಮುನಿ ವೆಂಕಟಪ್ಪ ಕುಟುಂಬದ ನಡುವೆ ಈ ಒಂದು ಗಲಾಟೆ ನಡೆದಿದೆ.ರಸ್ತೆ ವಿವಾದ ವಿಚಾರಕ್ಕೆ ಹಾರಯಿಂದ ಹೊಡೆದು ಮಂಜುನಾಥನನ್ನು ಕೊಲೆ ಮಾಡಿದ್ದಾರೆ. ಕ್ಯಾಸಂಬಳ್ಳಿ ಠಾಣೆ ಪೋಲಿಸರಿಂದ ಮುನಿ ವೆಂಕಟಪ್ಪ ಹಾಗೂ ರಾಜೇಶನ್ನು ಬಂಧಿಸಿದ್ದು, ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ : ಸಾಮಾನ್ಯವಾಗಿ ಬೇಸಿಗೆ ಬಂತೆಂದರೆ ಸಾಕು ಲೋಡ್ ಹೆಡಿಂಗ್ ಕಾಮಗಾರಿ ಅಂತ ಹೆಸರು ಹೇಳಿ ಪದೇ ಪದೇ ಕರೆಂಟ್ ತೆಗೆಯುತ್ತಿದ್ದರು ಆದರೆ ಈ ಬಾರಿ ಎಲ್ಲೂ ಕೂಡ ಹಾಗೆ ಇಲ್ಲ. ರಾಜ್ಯದಲ್ಲಿ ಎಲ್ಲೂ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಇಂಧನ ಖಾತೆಯ ಸಚಿವ ಕೆಜೆ ಜಾರ್ಜ್ ಅವರು ಸ್ಪಷ್ಟಪಡಿಸಿದರು. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲೂ ಕೂಡ ಲೋಡ್ ಶೆಡ್ಡಿಂಗ್ ಇಲ್ಲ ಕೆಲವು ಕಡೆಗಳಲ್ಲಿ ನಿರ್ವಹಣೆ ಇದ್ದಾಗ ತೊಂದರೆಯಾಗಿರಬಹುದು ಅಷ್ಟೇ. ಅದು ಬಿಟ್ಟು ಎಲ್ಲೂ ಲೋಡ್ ಶೆಡ್ಡಿಂಗ್ ಎನ್ನುವ ಮಾತೇ ಇಲ್ಲ ಎಂದು ಅವರು ತಿಳಿಸಿದರು. ಇನ್ನು ವಿದ್ಯುತ್ ದರ ಏರಿಕೆಯಾಗುತ್ತೆ ಎನ್ನುವುದರ ಕುರಿತು, ವಿದ್ಯುತ್ ದರ ಏರಿಕೆಯಾದ ತಕ್ಷಣ ಗೃಹಜ್ಯೋತಿ ಯೋಜನೆ ನಿಲ್ಲಿಸಲ್ಲ. ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಇಂಧನ ಇಲಾಖೆ ಸಚಿವ ಜಯ ಜಾರ್ಜ್ ಹೇಳಿಕೆ ನೀಡಿದರು.
ಮೈಸೂರು : ಮೈಸೂರಿನಲ್ಲಿ ನಿನ್ನೆ ತಾನೆ ಉದ್ಯಮಿಯೊಬ್ಬ ತನ್ನ ಪತ್ನಿ ಮಗ ಹಾಗೂ ತಾಯಿಯನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮರುದಿನವೇ ಇದೀಗ ಮೈಸೂರಲ್ಲಿ ಮತ್ತೊಂದು ಬೆಟ್ಟಿ ಬೆಳಿಸುವ ಘಟನೆ ವರದಿಯಾಗಿದ್ದು ಆನ್ಲೈನ್ ಬೆಟ್ಟಿಂಗ್ಗೆ ಒಂದೇ ಕುಟುಂಬದ ಮೂವರು ಬಳಿಯಾಗಿರುವ ಘಟನೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ನಡೆದಿದೆ. ಹೌದು ಮೈಸೂರು ತಾಲೂಕಿನ ಹಂಚ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಆನ್ಲೈನ್ ಬೆಟ್ಟಿಂಗ್ IPL ಬೆಟ್ಟಿಂಗ್ ಚಟಕ್ಕೆ ಬಿದ್ದು ಇದೀಗ ಒಂದೇ ಕುಟುಂಬದ ಅಣ್ಣ, ತಮ್ಮ ಹಾಗೂ ಆತನ ಪತ್ನಿ ಮೂವರು ನೇಣು ಬಿಗಿದುಕೊಂಡು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಐಪಿಎಲ್ ಆನ್ಲೈನ್ ಬೆಟ್ಟಿಂಗ್ ನಿಂದಾಗಿ ಇದೀಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ತಮ್ಮ ನಾದಿನಿ ಮೇಲೆ ಆರೋಪಿಸಿ ಜೋಶಿ ಆಂಥೋನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಜೋಬಿ ಪತ್ನಿ ಶರ್ಮಿಳ ವಿರುದ್ಧ ಆಂಥೋನಿ ಸಾಲದ ಆರೋಪ ಮಾಡಿದ್ದ ಮೋಸದಿಂದ ಸಾಲ…
ಬೆಂಗಳೂರು : ಕಲ್ಬುರ್ಗಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶಗಳು ಪತ್ತೆಯಾಗಿದ್ದರ ಹಿನ್ನೆಲೆಯಲ್ಲಿ ಇದೀಗ ಶಿಕ್ಷಣ ಇಲಾಖೆಯ ಇನ್ನು ಮುಂದೆ ಸರಕಾರಿ ಶಾಲೆಗಳಲ್ಲಿ ಚಿಕ್ಕಿ ವಿತರಣೆ ಇಲ್ಲ ಎಂದು ತಿಳಿಸಿದೆ. ಹೌದು ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಚಿಕ್ಕ ವಿತರಣೆ ಇಲ್ಲ. ಕಲ್ಬುರ್ಗಿಯಲ್ಲಿ ಮಕ್ಕಳಿಗೆ ಕೊಟ್ಟ ಚಿಕ್ಕಿ ತಿನ್ನಲು ಯೋಗ್ಯವಾಗಿರಲಿಲ್ಲ. ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶ ಇದೀಗ ಚಿಕ್ಕಿಯಲ್ಲಿ ಪತ್ತೆಯಾಗಿದೆ. ಸಕ್ಕರೆ ಅಂಶ ಹೆಚ್ಚಿನ ಮಟ್ಟದಲ್ಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಈ ಸಂಬಂಧ ಇಲಾಖೆ ಹೆಚ್ಚುವರಿ ಆಯುಕ್ತರು ಪತ್ರ ಬರೆದಿದ್ದರು. ಹಾಗಾಗಿ ಮಕ್ಕಳಿಗೆ ಚಿಕ್ಕಿ ವಿತರಣೆ ಮಾಡಿದರೂ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಪಹಾರ ಯೋಜನೆಯಡಿ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಣೆ ಮಾಡಬೇಕು. ಚಿಕ್ಕಿ ವಿತರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.2022-23ನೇ ಸಾಲಿನಲ್ಲಿ ಪ್ರಧಾನಮಂತ್ರಿ ಪೋಷಣ ಶಕ್ತಿ ನಿರ್ಮಾಣ…
ಬೆಂಗಳೂರು : ಜೈಲಿನಲ್ಲಿ ಅಣ್ಣನನ್ನು ನೋಡಲು ಹೋಗಿ ತಮ್ಮನೊಬ್ಬ ಲಾಕ್ ಆದ ಪ್ರಕರಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ಅಣ್ಣನನ್ನು ನೋಡಲು ತೆರಳಿದ್ದ ವೇಳೆ ಆರೋಪಿ ಅಪ್ರೋಜ್ ಪಾಷಾ ಪೊಲೀಸರ ಅತಿಥಿಯಾಗಿದ್ದಾನೆ. ಜೈಲಿನಲ್ಲಿ AI ಕ್ಯಾಮೆರಾದಿಂದ ಡಕಾಯಿತಿ ಕೇಸ್ ನಲ್ಲಿ ಅಪ್ರೋಜ್ ಲಾಕ್ ಆಗಿದ್ದಾನೆ. ಕಳೆದ 10 ವರ್ಷದ ಹಿಂದೆ ಡಕಾಯಿತ್ ಕೇಸ್ನಲ್ಲಿ ಅಪ್ರೋಜ್ ಜೈಲು ಸೇರಿದ್ದ. ಜಾಮೀನಿನ ಮೇಲೆ ಆರೋಪಿ ಅಪ್ರೋಜ್ ಪಾಷಾ ಹೊರಗಡೆ ಇದ್ದ ಕೇಸ್ ಟ್ರಯಲ್ ವೇಳೆ ಕೋರ್ಟಿಗೆ ಹಾಜರಾಗದೆ ಆತ ಕಳ್ಳಾಟ ನಡೆಸಿದ್ದಾನೆ. ಆಫ್ರೋಜ್ ಪಾಷಾ ಬಂಧನಕ್ಕೆ ಹಲವಾರು ಬಾರಿ ವಾರೆಂಟ್ ನೀಡಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ.
ಚಿಕ್ಕಮಗಳೂರು : ಕುಡಿಯಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಅತ್ತೆಯನ್ನು ಹೊತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿ ಬಳಿಕ ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತಿಬೈಲು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲು ಗ್ರಾಮದಲ್ಲಿ ಕುಡಿಯಬೇಡ ಎಂದಿದಕ್ಕೆ ಅತ್ತೆಯನ್ನು ಕೊಂದು ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತೆ ಯಮುನಾ (65) ಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಅಳಿಯ ಶಶಿಧರ್ (48) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಫಿ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಶಶಿಧರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾಫಿ ತೋಟದ ಕೆಲಸಕ್ಕೆ ಎಂದು ಯಮುನಾ ಮಗಳ ಮನೆಗೆ ಹೋಗಿದ್ದಾರೆ. ಈ ವೇಳೆ ಕುಡಿಯಬೇಡ ಎಂದು ಅತ್ತೆಯ ಮುನ ಶಶಿಧರ್ ಗೆ ಬುದ್ಧಿ ಹೇಳಿದ್ದಾರೆ. ಕುಡಿದ ಮತ್ತಿನಲ್ಲಿ ಶಶಿಧರ್ ಸುತ್ತಿಗೆಯಿಂದ ಅತ್ತಿಗೆ ಯಮುನಾ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ತಾನು ಮರಕ್ಕೆ ನೀಡು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು…
ಮೈಸೂರು : ಮೈಸೂರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯಾಗಿರುವ ಸತೀಶ್ ಜೈಲಿನಿಂದ ರಿಲೀಸ್ ಆಗಿದ್ದಾನೆ. ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪಿ ಸತೀಶ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಜಾಮೀನಿನ ಮೇಲೆ ಇಂದು ಜೈಲಿನಿಂದ ಸತೀಶ್ ಬಿಡುಗಡೆಯಾಗಿದ್ದಾನೆ. ನಿನ್ನೆ ಸತೀಶ್ ಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಮೈಸೂರಿನ 2ನೇ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಒಬ್ಬರ ಶೂರಿಟಿ ತೆಗೆದುಕೊಂಡು ಕೋರ್ಟ್ ಬಿಡುಗಡೆಗೆ ಸೂಚಿಸಿತ್ತು. ನಿನ್ನೆ ಸಂಜೆ ತಡವಾದ ಕಾರಣ ಸತೀಶ್ ಬಿಡುಗಡೆಗೆ ಸಾಧ್ಯವಾಗಿರಲಿಲ್ಲ. ಹಾಗಾಗಿ ಇಂದು ಜಾಮೀನು ಪ್ರಕ್ರಿಯೆ ಮುಗಿಸಿ ಸತೀಶ್ ಬಿಡುಗಡೆಯಾಗಿದ್ದಾನೆ.