Author: kannadanewsnow05

ಚಾಮರಾಜನಗರ : ಇತ್ತೀಚಿಗೆ ಬೆಂಗಳೂರಿನಲ್ಲಿ ATM ವಾಹನದಲ್ಲಿ ಇದ್ದಂತ ಕೋಟ್ಯಂತರ ಹಣ ಕಳ್ಳತನ ನಡೆದಿತ್ತು. ಇದೀಗ ಆ ಪ್ರಕರಣ ಬೆನ್ನಲ್ಲೇ ಚಾಮರಾಜನಗರದಲ್ಲಿ ಸಹಕಾರ ಸಂಘದ ಕಚೇರಿ ಬೀಗ ಒಡೆದು 14.12 ಲಕ್ಷ ನಗದು ಹಣವನ್ನು ಕಳ್ಳತನ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಡುಗೂರಿನಲ್ಲಿ ಈ ಒಂದು ದರೋಡೆ ನಡೆದಿದೆ. ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಡುಗೂರಿನಲ್ಲಿ ಇರುವಂತಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯ ಬೀಗ ಒಡೆದು 14.12 ಲಕ್ಷ ನಗದು ಹಣವನ್ನು ಖದೀಮರು ದರೋಡೆ ಮಾಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಚಾಮರಾಜನಗರ ಎಸ್ಪಿ ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಈ ಕುರಿತು ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Read More

ಬೆಳಗಾವಿ : ಇಂದು ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ವಿಶ್ರಾಂತಿ ಪಡೆಯಲು ಸರ್ಕ್ಯೂಟ್ ಹೌಸ್ ಗೆ ತೆರಳಿದರು. ಈ ವೇಳೆ ಹಲವು ಸಚಿವರು ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಸರ್ಕ್ಯೂಟ್ ಹೌಸ್ ಗೆ ಭೇಟಿ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಆರೋಗ್ಯದ ಕುರಿತು ಪುತ್ರ ಯತೀಂದ್ರ ಅವರು ತಂದೆಯವರ ಆರೋಗ್ಯ ಚೆನ್ನಾಗಿದೆ ವೈದ್ಯರು ಮಾತ್ರೆಗಳನ್ನು ಕೊಟ್ಟಿದ್ದಾರೆ. ಗ್ಯಾಸ್ಟ್ರೊಕೇಶನ್ ಇನ್ಫೆಕ್ಷನ್ ಆಗಿದೆ ಡೇರಿಯ ಸಮಸ್ಯೆ ತರ ಆಗಿದೆ. ತಂದೆಯವರು ವಿಶ್ರಾಂತಿ ಪಡೆಯುತ್ತಿದ್ದಾರೆ ನಾಳೆ ಅಧಿವೇಶನಕ್ಕೆ ಬರುತ್ತಾರೆ ಸಿಎಂ ಗೆ ಅನಾರೋಗ್ಯ ಹಿನ್ನಲೆ ಯತೀಂದ್ರ ಅವರು ಕೂಡ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿದ್ದರು.

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಇತ್ತೀಚಿಗೆ AI ಬಂದು ಎಂತೆಂತ ವಿಡಿಯೋಗಳನ್ನು ನಾವು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದೇವೆ. ಪ್ರಧಾನಿ ಮೋದಿಯಿಂದ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಸೇರಿದಂತೆ ಸೆಲೆಬ್ರಿಟಿಗಳವರೆಗೂ AI ಅಪ್ಲಿಕೇಶನ್ ನಿಂದ ಚಿತ್ರ ವಿಚಿತ್ರ ವಿಡಿಯೋಗಳು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಇದೀಗ ಈ ಒಂದು AI ಅಪ್ಲಿಕೇಶನ್ ಕುರಿತು ನಟಿ ಶ್ರೀ ಲೀಲಾ ಅಭಿಮಾನಿಗಳಿಗೆ ಕರೆ ಕೊಟ್ಟಿದ್ದರೆ. ತಮ್ಮ ಟ್ವೀಟ್ ಖಾತೆಯ ಮೂಲಕ ನಟಿ ಶ್ರೀ ಲೀಲಾ ಅವರು ನಾನು ನನ್ನ ಕೈಗಳನ್ನು ಜೋಡಿಸಿ ಪ್ರತಿಯೊಬ್ಬ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ವಿನಂತಿಸುತ್ತೇನೆ, AI-ಜನರೇಟೆಡ್ ಅಸಂಬದ್ಧತೆಯನ್ನು ಬೆಂಬಲಿಸಬೇಡಿ. ತಂತ್ರಜ್ಞಾನವನ್ನು ಬಳಸುವುದು ಮತ್ತು ದುರುಪಯೋಗ ಪಡಿಸಿಕೊಳ್ಳುವುದರ ನಡುವೆ ವ್ಯತ್ಯಾಸವಿದೆ. ತಂತ್ರಜ್ಞಾನದಲ್ಲಿನ ಪ್ರಗತಿಯು ಜೀವನವನ್ನು ಸರಳಗೊಳಿಸಲು ಉದ್ದೇಶಿಸಲಾಗಿದೆ, ಅದನ್ನು ಸಂಕೀರ್ಣಗೊಳಿಸಲು ಅಲ್ಲ, ನನ್ನ ಅಭಿಪ್ರಾಯದಲ್ಲಿ ಪ್ರತಿಯೊಬ್ಬ ಹುಡುಗಿಯೂ ಮಗಳು, ಮೊಮ್ಮಗಳು, ಸಹೋದರಿ, ಸ್ನೇಹಿತೆ ಅಥವಾ ಸಹೋದ್ಯೋಗಿ ಇರುತ್ತಾಳೆ, ಅವಳು ಕಲೆಯನ್ನು ತನ್ನ ವೃತ್ತಿಗಳಲ್ಲಿ ಒಂದಾಗಿ ಆರಿಸಿಕೊಂಡರೂ ಸಹ. ನಾವು ಸಂರಕ್ಷಿತ ವಾತಾವರಣದಲ್ಲಿದ್ದೇವೆ ಎಂಬ…

Read More

ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ತಿದ್ದುಪಡಿ ಸೇರಿದಂತೆ 5 ವಿಧೇಯಕಗಳನ್ನ ಅಂಗೀಕಾರ ಮಾಡಲಾಯಿತು. 5 ವಿಧೇಯಕಗಳು 1) ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2) ಬಾಂಬೆ ಸಾರ್ವಜನಿಕ ನ್ಯಾಸ (ಕರ್ನಾಟಕ ತಿದ್ದುಪಡಿ) ವಿಧೇಯಕ 3) ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 4) ಔಷಧ ಮತ್ತು ಪ್ರಸಾಧನಾ ಸಾಮಗ್ರಿ ಕರ್ನಾಟಕ (ತಿದ್ದುಪಡಿ) ವಿಧೇಯಕ 5) ಕೆಂಪೇಗೌಡ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರ (2ನೇ ತಿದ್ದುಪಡಿ) ಬಿಲ್ ಅಂಗೀಕಾರವಾಯಿತು

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಟ್ರಯಲ್ ವಿಚಾರಣೆ ನಡೆಯಿತು ವಿಚಾರಣೆಯ ಬಳಿಕ ಕೋರ್ಟ್ ನಾಳೆಗೆ ವಿತರಣೆ ಮುಂದೂಡಿ ಆದೇಶ ಹೊರಡಿಸಿದರು. ಇದೆ ವೇಳೆ ಪ್ರಕರಣದ ಆರೋಪಿ ಪವಿತ್ರ ಗೌಡ ಇರುವ ಸೆಲ್ ಗೆ ಟಿವಿ ಅಳವಡಿಸಿಲು ಜಡ್ಜ್ ಸೂಚನೆ ನೀಡಿದರು ಅಲ್ಲದೆ ದಿನಪತ್ರಿಕೆ ಗ್ರಂಥಾಲಯದ ಪುಸ್ತಕ ಒದಗಿಸಲು ಸೂಚನೆ ನೀಡಿದ್ದಾರೆ ಟಿವಿ ರೇಡಿಯೋ ದಿನಪತ್ರಿಕೆ ಮ್ಯೂಸಿಕ್ ಮೆಡಿಟೇಶನ್ ಮನೆ ಊಟಕ್ಕೆ ಪವಿತ್ರ ಗೌಡ ಪರ ವಕೀಲರು ಬೇಡಿಕೆ ಇಟ್ಟಿದ್ದರು. ಆದರೆ ಟಿವಿ ದಿನಪತ್ರಿಕೆ ಹಾಗೂ ಗ್ರಂಥಾಲಯದ ಪುಸ್ತಕ ಒದಗಿಸಲು ಮಾತ್ರ ಜಡ್ಜ್ ಆದೇಶಿಸಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ಮೈಸೂರಲ್ಲಿ ಸ್ನಾನಕ್ಕೆ ಎಂದು ಗೀಸರ್ ಆನ್ ಮಾಡಿದ್ದಾಗ ಗೀಸರ್ ಅನೀಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಅಲ್ಲದೇ ಬೆಂಗಳೂರಲ್ಲಿ ಇತ್ತೀಚೆಗಷ್ಟೇ ಸ್ನಾನ ಮಾಡುವುದಕ್ಕೆ ಬಾತ್ ರೂಮ್ ಗೆ ಹೋದ ತಾಯಿ ಮಗು ಗ್ಯಾಸ್‌ ಗೀಸರ್ ನಿಂದಾಗಿ ಸಾವನ್ನಪ್ಪಿದ್ದರು. ಇದೆ ರೀತಿ ಇನ್ನು ಹಲವಾರು ದುರಂತಗಳು ನಡೆದಿದ್ದವು. ಆದರೆ ಗೀಸರ್ ಬಳಸೋಕು ಮುನ್ನ ಅದನ್ನು ಯಾವ ರೀತಿ ಬಳಸಬೇಕು? ಯಾವ ಮುನ್ನೆಚರಿಕೆ ವಹಿಸಬೇಕು ಅನ್ನೋದನ್ನ ತಿಳಿಯೋಣ ಮೊದಲಿಗೆ ಗೀಸರ್ ಬಗ್ಗೆ ಮಾಹಿತಿ ತಿಳಿದುಕೊಂಡರೆ ಬಹಳ ಒಳ್ಳೆಯದು ಮನೆಯ ಬಾತ್ ರೂಮ್ ನಲ್ಲಿ ಗೀಸರ್ ಅನ್ನು ಫಿಕ್ಸ್ ಮಾಡುವ ಸಂದರ್ಭದಲ್ಲಿ, ಪರಿಣಿತರೊಂದಿಗೆ ಅಥವಾ ಎಲೆಕ್ಟ್ರೀಷಿಯನ್ ಜೊತೆಗೆ ಈ ಗೀಸರ್ ಗೆ ಸಂಬಂಧ ಪಟ್ಟ ಮಾಹಿತಿಯನ್ನು ಸರಿಯಾಗಿ ಕೇಳಿ ತಿಳಿದುಕೊಳ್ಳಿ.ಗೀಸರ್‌ ಸೆಟ್ಟಿಂಗ್ ಮಾಡುವ ಕನೆಕ್ಷನ್ ನಲ್ಲಿ ಆಚೆ ಈಚೆ ಆಗಿದ್ದರೆ ಅಥವಾ ಗ್ಯಾಸ್ ಲೀಕೇಜ್ ಆಗಿದ್ದರೆ ಏನೆಲ್ಲಾ ಮುನ್ನಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು, ಬಾತ್‌ ರೂಮ್ ನಲ್ಲಿ ಕಿಟಕಿ ಅಥವಾ…

Read More

ಶಿವಮೊಗ್ಗ : ಧರ್ಮಸ್ಥಳ ಪ್ರಕರಣದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ್ದ ಮಾಸ್ಕ್​​ ಮ್ಯಾನ್ ಎಂದೇ ಪ್ರಖ್ಯಾತನಾಗಿದ್ದ ಸಿ.ಎನ್. ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದ್ದರೂ, ಬಿಡುಗಡೆಯ ಭಾಗ್ಯವಿಲ್ಲದೆ ಜೈಲಿನಲ್ಲಿಯೇ ಉಳಿಯುವಂತಾಗಿತ್ತು. ಇದರಿಂದ ಮಂಕಾಗಿದ್ದ ಚಿನ್ನಯ್ಯ ಇದೀಗ ಶಿವಮೊಗ್ಗ ಸೆಂಟ್ರಲ್ ಜೈಲಿನಿಂದ ಚಿನ್ನಯ್ಯ ರಿಲೀಸ್ ಆಗಿದ್ದಾನೆ. ಇಂದು (ಡಿಸೆಂಬರ್ 17) ಚಿನ್ನಯ್ಯ ಪತ್ನಿ ಮಲ್ಲಿಕಾ ಒಂದು ಲಕ್ಷ ಬಾಂಡ್ ಕೊಟ್ಟಿದ್ದು, ಜೊತೆಗೆ ಇಬ್ಬರು ಜಾಮೀನುದಾರರು ಮತ್ತು ಒಬ್ಬರ ಶ್ಯೂರಿಟಿ ಕೊಡಿಸಿದ್ದಾರೆ. ಬಳಿಕ ಕೋರ್ಟ್​, ಡಿಸೆಂಬರ್ 17 ರಂದು ಚಿನ್ನಯ್ಯನ ಬಿಡುಗಡೆಗೆ ಆದೇಶ ಹೊರಡಿಸಿದೆ. ಜಾಮೀನು ಷರತ್ತು ಪೂರೈಸಿದ 23 ದಿನಗಳ ನಂತರ ಚಿನ್ನಯ್ಯ ರಿಲೀಸ್ ಆಗಿದ್ದಾನೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಚಿನ್ನಯ್ಯ ಪತ್ನಿ ಮಲ್ಲಿಕಾ ಶೂರಿಟಿ ನೀಡಿದ್ದಾರೆ. 4 ತಿಂಗಳಿಂದ ಶಿವಮೊಗ್ಗ ಜೈಲಲ್ಲಿ ಇದ್ದರೂ. ಶೂರಿಟಿ ಪೂರೈಸಿದ ನಂತರ ಚಿನ್ನಯ್ಯ ಇದೀಗ ಬಿಡುಗಡೆ ಆಗಿದ್ದಾನೆ. ಪತ್ನಿ ಮಲ್ಲಿಕಾ, ಸಹೋದರ ರತ್ನಾ ಜೊತೆಗೆ ಸಿ.ಎಸ್ ಚಿನ್ನಯ್ಯ ಮನೆಗೆ ತೆರಳಿದ್ದಾನೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಭೀಕರ ಕೊಲೆ ಪ್ರಕರಣದ ಕುರಿತು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ನಲ್ಲಿ ಟ್ರಯಲ್ ಪುನರಾರಂಭಗೊಂಡಿತು.ಈ ವೇಳೆ ಕೋರ್ಟ್ ಪವಿತ್ರಾಗೌಡ ಪರ ವಕೀಲರ ವಾದ ಆಲಿಸಿ ವಿಚಾರಣೆ ನಾಳೆಗೆ ಮುಂದೂಡಿತು. ವಿಚಾರಣೆಯ ವೇಳೆ ರೇಣುಕಾ ಸ್ವಾಮಿ ತಾಯಿ ರತ್ನಪ್ರಭಾ ಹೇಳಿಕೆಗೆ ಆರೋಪಿ ಪವಿತ್ರ ಗೌಡ ಪರ ವಕೀಲ ಬಾಲನ್ ಅವರು ಪಾರ್ಟಿ ಸವಾಲು ಹಾಕಿದ್ದು, ಜೂನ್ 11ರಂದು ಪೊಲೀಸರು ವಿಚಾರಣೆ ಮಾಡಿದ್ದರ ಎಂದು ಕೇಳಿದರು ಇಲ್ಲ ಜೂನ್ 14ರಂದು ಉತ್ತರಿಸಿದ್ದೇನೆ ಎಂದು ರತ್ನಪ್ರಭಾತ ತಿಳಿಸಿದರು. 2024 ಜೂನ್ 8ರಂದು ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಅಪೋಲೋ ಫಾರ್ಮಸಿಗೆ ಹೋಗಿ ಕೆಲಸ ಮಾಡಿದ್ದ ಹೌದಾ ಅಂತ ಪವಿತ್ರಾ ಪರ ವಕೀಲ ಬಾಲನ್ ಕೇಳಿದಾಗ ರೇಣುಕಾ ಸ್ವಾಮಿ ತಾಯಿ ರತ್ನಪ್ರಭಾ ಅವರು ಇಲ್ಲ ಎಂದು ಉತ್ತರಿಸಿದರು. ಶವಾಗಾರದಲ್ಲಿ…

Read More

ಬೆಳಗಾವಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿರುವ 15 ವರ್ಷ ಮೀರಿದ ವಾಹನಗಳಿಗೆ ಒಂದು ವರ್ಷ ವಿಸ್ತರಣೆಯ ಜೊತೆಗೆ, ಸುಸ್ಥಿತಿಯಲ್ಲಿರುವ ಕೆಲ ವಾಹನಗಳಿಗೆ ಗುಜರಿ ನೀತಿಯಡಿ ವಿನಾಯಿತಿ ನೀಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪರಿಷತ್ತಿನಲ್ಲಿ ಸದಸ್ಯರಾದ ಗೋವಿಂದ ರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎನ್.ಐ.ಸಿ. ಅವರು ಒದಗಿಸಿರುವ ಮಾಹಿತಿಯ ಪ್ರಕಾರ ಡಿ.4ರ ಅಂತ್ಯಕ್ಕೆ 15 ವರ್ಷದ ಅವಧಿ ಮೀರಿದ ಒಟ್ಟು 18,552 (ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಹೊರತುಪಡಿಸಿ) ಸರ್ಕಾರಿ ವಾಹನಗಳ ನೋಂದಣಿಯನ್ನು ಕೇಂದ್ರ ಸರ್ಕಾರವು ವಾಹನ್ ಪೋರ್ಟಲ್‌ನಲ್ಲಿ ರದ್ದುಪಡಿಸಿದೆ. ಈ 18,552 ವಾಹನಗಳ ಪೈಕಿ ಆರ್‌ವಿಎಸ್‌ಎಫ್‌ನಲ್ಲಿ ಒಟ್ಟು 1,493 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ. 17,059 ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದು ಬಾಕಿ ಇರುತ್ತದೆ ಎಂದರು. ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ 15 ವರ್ಷ ಮೀರಿದ ವಾಹನಗಳನ್ನು…

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕಬ್ಬು ಕಟಾವು ಮಾಡುವ ಯಂತ್ರಕ್ಕೆ ಸಿಲುಕಿ ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ. ಬಾರವ್ವ ಕೋಬಡಿ (60) ಹಾಗೂ ಲಕ್ಷ್ಮೀಬಾಯಿ ರುದ್ರಗೌಡರ (65) ಎಂದು ತಿಳಿದುಬಂದಿದೆ. ಕಟಾವು ವೇಳೆ ಮುಂದೆ ನೋಡದೆ ಡ್ರೈವರ್ ವಾಹನ ಚಲಾಯಿಸಿದ್ದಾನೆ ಇಬ್ಬರೂ ಮಹಿಳೆಯರ ತಲೆ ಯಂತ್ರದಲ್ಲಿ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಕಬ್ಬಿಣ ಗದ್ದೆಗೆ ಕೂಲಿ ಕೆಲಸಕ್ಕೆ ಎಂದು ಇಬ್ಬರು ಮಹಿಳೆಯರು ಬಂದಿದ್ದರು. ಚಾಲಕನ ನಿರ್ಲಕ್ಷದಿಂದ ಕೂಲಿಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ತಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ. ಘಟನೆ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.

Read More