Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಸಹಕಾರ ಸಚಿವ ಕೆ.ಎನ್ ರಾಜಣ್ಣ ವಿರುದ್ಧ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದೀಗ ಪ್ರಕರಣಕ್ಕೆ ಸಬಂಧಿಸಿದಂತೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಸಿಐಡಿಯ ಡಿಜಿಪಿ ಡಾ.ಎಂ.ಎ.ಸಲೀಂ ಮೌಖಿಕವಾಗಿ ವಿವರಣೆ ನೀಡಿದ್ದಾರೆ ಎನ್ನಲಾಗಿದೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಶುಕ್ರವಾರ ಭೇಟಿಯಾಗಿ ಈವರೆಗೆ ಹನಿಟ್ರ್ಯಾಪ್ ಯತ್ನ ಪ್ರಕರಣದಲ್ಲಿ ನಡೆದಿರುವ ವಿಚಾರಣೆ ಕುರಿತು ಡಿಜಿಪಿ ವಿವರಣೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. ವಿಚಾರಣೆಯಲ್ಲಿ ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಪೂರಕವಾದ ಯಾವುದೇ ಪೂರಾವೆಗಳು ಲಭ್ಯವಾಗಿಲ್ಲ ಎನ್ನಲಾಗಿದೆ. ಪ್ರಕರಣ ಸಂಬಂಧ ಸಚಿವ ರಾಜಣ್ಣ ಅವರ ಆಪ್ತ ಸಹಾಯಕ, ವಿಶೇಷಾಧಿಕಾರಿ ಹಾಗೂ ಗನ್ ಮ್ಯಾನ್‌ಗಳನ್ನು ಕೂಡ ವಿಚಾರಣೆ ನಡೆಸಲಾಗಿದೆ. ಆದರೆ ಕೃತ್ಯದ ಬಗ್ಗೆ ತಮಗೇನು ಗೊತ್ತಿಲ್ಲವೆಂದು ಅವರು ಹೇಳಿಕೆ ನೀಡಿದ್ದಾರೆ. ಹೀಗಾಗಿ ಸಚಿವ ರಾಜಣ್ಣ ಅವರ ವಿಚಾರಣೆ ನಡೆಸಬೇಕಿದ್ದು, ಸಚಿವರ…

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಘೋರವಾದ ಘಟನೆ ನಡೆದಿದ್ದು 14 ವರ್ಷದ ಬಾಲಕನೊಬ್ಬ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರಿನ ಅರಗ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಬಾಲಕನನ್ನು ಸುಭಾಷ್ ಎಂದು ತಿಳಿದುಬಂದಿದೆ.ಮೃತ ಸುಭಾಷ್ ಮರಿಯಾಲ ಗ್ರಾಮದ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.ಇಂದು ಮಧ್ಯಾಹ್ನದ ವೇಳೆ ತಮ್ಮ ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತಂತೆ ಸುಭಾಶ್ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈತ ತನ್ನ ಮನೆಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಓದಿನ ಬಗ್ಗೆ ನಿರಾಸಕ್ತಿ ಹೊಂದಿದ್ದ ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.

Read More

ಬೆಂಗಳೂರು : ಕೋವಿಡ್ 19 ಅವಧಿಯಲ್ಲಿ ನಡೆದ ಅಕ್ರಮದ ವರದಿಯನ್ನು ಇಂದು ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ಅಯೋಗವು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಯಿತು. ಕಾವೇರಿ ನಿವಾಸದಲ್ಲಿ ಕೋವಿಡ್ ಅಕ್ರಮದ ವರದಿಯನ್ನು ನಿವೃತ್ತ ನ್ಯಾ. ಜಾನ್ ಮೈಕಲ್ ಕುನ್ಹಾ ಆಯೋಗ ವರದಿ ಸಲ್ಲಿಸಿತು. ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುಮಾರು 7 ಸಂಪುಟವುಳ್ಳ ವರದಿ ಸಲ್ಲಿಕೆ ಮಾಡಲಾಯಿತು. ಒಟ್ಟು 7 ವಾಲ್ಯೂಮ್ ನ 1,808 ಪುಟಗಳು ಇರುವ ವರದಿಯನ್ನು ಸಲ್ಲಿಕೆ ಮಾಡಿತು. ಆಯೋಗವು 1,808 ಪುಟಗಳಿರುವ ವರದಿಯನ್ನು ಸಲ್ಲಿಕೆ ಮಾಡಿತು. ಕೊರೋನಾ ಸಂದರ್ಭದಲ್ಲಿ ನಡೆದ ಹಗರಣಗಳ ಕುರಿತಂತೆ ತನಿಖೆ ನಡೆಸಲು, 2023ರ ಅಗಸ್ಟ್ 25 ರಂದು ಆಯೋಗ ರಚಿಸಲಾಗಿತ್ತು. 2024 ಅಕ್ಟೋಬರ್ 31 ರಂದು ಮೊದಲ ಮಧ್ಯಂತರ ಅವಧಿ ಸಲ್ಲಿಕೆ ಮಾಡಲಾಗಿತ್ತು. 11 ಸಂಪುಟಗಳಲ್ಲಿದ್ದ ಮೊದಲ ತನಿಖೆಯ ವರದಿ ಸಲ್ಲಿಸಲಾಗಿತ್ತು. ಇದೀಗ ಎರಡನೇ ಮಧ್ಯಂತರ ವರದಿಯನ್ನು ಆಯೋಗ ಸಲ್ಲಿಸಿದೆ.

Read More

ಉತ್ತರಕನ್ನಡ : ಕೆರೆಯಲ್ಲಿ ಈಜಲು ತೆರಳಿದ್ದ 13 ವರ್ಷದ ಬಾಲಕನೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ತಿಮ್ಮಾಪುರ ಕೆರೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೌದು ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು, ಕೆರೆಯಲ್ಲಿ ಮುಳುಗಿ ನವಾಜ್ ಖಾಜಾ (13} ಎನ್ನುವ ಬಾಲಕ ಸಾವನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ತಿಮ್ಮಾಪುರ ಕೆರೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ

Read More

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ AI ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಈಗ ಇಂಟರ್ನೆಟ್​ನಲ್ಲಿ ಘಿಬ್ಲಿ ಸ್ಟೈಲ್ ಇಮೇಜ್ ಧೂಳೆಬ್ಬಿಸುತ್ತಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ಟುಡಿಯೋ ಘಿಬ್ಲಿ ಶೈಲಿಯ ಫೋಟೋಗಳು ಚರ್ಚೆಯ ವಿಷಯವಾಗಿದೆ.ಎಲ್ಲರೂ ಘಿಬ್ಲಿ ಶೈಲಿಯ ಚಿತ್ರವನ್ನು ರಚಿಸುತ್ತಿದ್ದಾರೆ. ಸದ್ಯಕ್ಕೆ ಘಿಬ್ಲಿ ಇದೀಗ ಟ್ರೆಂಡಿಂಗ್ ನಲ್ಲಿದೆ. ಹೌದು ಇನ್ಸ್ಟಾಗ್ರಾಮ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಈ ಒಂದು ಘಿಬ್ಲಿ ಸಖತ್ ವೈರಲ್ ಆಗುತ್ತಿದ್ದು, ಈ ಒಂದು ಆಪ್ ನಮ್ಮ ಮೆಟ್ರೋಕ್ಕೂ ಕಾಲಿಟ್ಟಿದ್ದು, ಮೆಟ್ರೋ ನಿಲ್ದಾಣದ ಹಲವು ಘಿಬ್ಲಿ ಚಿತ್ರಗಳನ್ನು BMRCL ಹಂಚಿಕೊಂಡಿದೆ. ಬಿಎಂಆರ್‌ಸಿಎಲ್ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಒಟ್ಟು 7 ಚಿತ್ರಗಳನ್ನು ಹಂಚಿಕೊಂಡಿದ್ದು, ಮೊದಲನೇ ಚಿತ್ರದಲ್ಲಿ ನಾಗಸಂದ್ರ ಮೆಟ್ರೋ ನಿಲ್ದಾಣದ ಫೋಟೋ ಹಂಚಿಕೊಂಡಿದೆ. ಬಳಿಕ 2ನೇ ಚಿತ್ರದಲ್ಲಿ ಮೆಟ್ರೋ ಅಧಿಕಾರಿಯ ಚಿತ್ರ ಇದ್ದು, 3ನೇ ಚಿತ್ರದಲ್ಲಿ ಟಿಕೆಟ್ ಕೌಂಟರ್ ಫೋಟೋ ಇದೆ. ಅದೇ ರೀತಿಯಾಗಿ ಪೊಲೀಸ್ ಸಿಬ್ಬಂದಿ ನಿಂತಿರುವ, ಪ್ರವೇಶದ್ವಾರ ಹಾಗೂ ನಿಲ್ದಾಣದ ಹೊರಗಡೆಯಿಂದ ಸೇರಿ ಒಟ್ಟು 7 ಚಿತ್ರಗಳನ್ನು…

Read More

ರಾಯಚೂರು : ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುತ್ತಿದ್ದು, ರಾಯಚೂರು ಜಿಲ್ಲೆಯಲ್ಲಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಪರೀಕ್ಷಾ ಮೇಲ್ವಿಚಾರಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಯಚೂರು ತಾಲೂಕಿನ ಸಿಂಗನೋಡಿ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆ ವೇಳೆ ಅಭ್ಯರ್ಥಿಗಳ ಬದಲಿಗೆ ಬೇರೆಯವರಿಂದ ಪರೀಕ್ಷೆ ಬರೆಯಿಸಿರುವ ಆರೋಪ ಕೇಳಿ ಬಂದಿದೆ. ಇಬ್ಬರು ವಿದ್ಯಾರ್ಥಿಗಳ ಜಾಗದಲ್ಲಿ ಬೇರೆ ಇಬ್ಬರಿಂದ ಪರೀಕ್ಷೆ ಬರೆದಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಿಂದಿ ಪರೀಕ್ಷೆ ವೇಳೆ ಈ ಅಕ್ರಮ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಪರೀಕ್ಷಾ ಮೇಲ್ವಿಚಾರಕ ಹಾಗೂ ನಾಲ್ಕು ವಿದ್ಯಾರ್ಥಿಗಳ ವಿರುದ್ದ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೀಗೊಂದು ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲಿಸಿದಾಗ, ಬೇರೆ ಅಭ್ಯರ್ಥಿ ಪರೀಕ್ಷೆಗೆ ಕುಳಿತಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಚಿಕ್ಕಬಳ್ಳಾಪುರ : ಗುತ್ತಿಗೆದಾರನ ಬಳಿ 3 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ಅಧಿಕಾರಿ ಒಬ್ಬರು, 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ. ಲೋಕಾಯುಕ್ತ ದಾಳಿಯ ವೇಳೆ ಅಧಿಕಾರಿಯ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಕೃಷಿ ಅಧಿಕಾರಿಯ ಶಂಕರಯ್ಯ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೃಷಿ ಅಧಿಕಾರಿ ಶಂಕರಯ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. ಕೃಷಿ ಅಧಿಕಾರಿ ಶಂಕರಯ್ಯ ಗುತ್ತಿಗೆದಾರ ಮಂಜುನಾಥ ಬಳಿ 3 ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ವೇಳೆ ಶಂಕರಯ್ಯ ಬ್ಯಾಗ್ ಚೆಕ್ ಮಾಡಿದಾಗ ಬ್ಯಾಗ್ ನಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಈ ವೇಳೆ ಅಧಿಕಾರಿಗಳು ಹಣ ಎಣಿಸಲು ಮಿಷನ್ ತರಿಸಿಕೊಂಡಿದ್ದಾರೆ. 1 ಲಕ್ಷ ಲಂಚ ಮುಂಗಡವಾಗಿ ಶಂಕರಯ್ಯ…

Read More

ಉಡುಪಿ : ಉಡುಪಿಯಲ್ಲಿ ಘೋರವಾಸ ದುರಂತ ಸಂಭವಿಸಿದ್ದು, ಗದ್ದೆಯಲ್ಲಿ ಕೃಷಿ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ನಂದಿಸಲು ಹೋದ ರೈತರೊಬ್ಬರು ಅದೇ ಬೆಂಕಿಗೆ ಬಿದ್ದು ಸಜೀವ ದಹನವಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ ಎಂದು ಗುರುತಿಸಲಾಗಿದೆ. ಮಹಾಲಿಂಗ ಇಂದು ಕೃಷಿ ಉದ್ದೇಶಕ್ಕಾಗಿ ತಮ್ಮ ಗದ್ದೆಯಲ್ಲಿ  ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಗೆ ಸುತ್ತಲೂ ಆವರಿಸಿದ್ದು, ಸಮೀಪದ ನಾಗಬನಕ್ಕೂ ಬೆಂಕಿ ಹಬ್ಬುತ್ತಿತ್ತೆನ್ನಲಾಗಿದೆ. ಇದರಿಂದ ಕೂಡಲೇ ಎಚ್ಚೆತ್ತ ಬೇಬಿ ಅಲ್ಲಿಗೆ ತೆರಳಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದರು. ಆದರೆ ಈ ವೇಳೆ ಇಲ್ಲಿ ಮಹಾಲಿಂಗ ದೇವಾಡಿಗ ಬೆಂಕಿಯ ಮಧ್ಯೆ ಸಿಲುಕಿ ಸಾವನ್ನಪ್ಪಿದರು ಎಂದು ತಿಳಿದುಬಂದಿದೆ. ಕೂಡಲೇ ಅಗ್ನಿಶಾಮಕದಳ ದವರಿಗೆ ಮಾಹಿತಿ ನೀಡಲಾಯಿತು. ಆದರೆ ಅಗ್ನಿಶಾಮಕದಳದ ವಾಹನ ಸ್ಥಳಕ್ಕೆ ಬರಲು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಹಿನ್ನೆಲೆ ಕಾರ್ಯಾಚರಣೆಗೆ ತೊಡಕಾಗಿತ್ತು. ಇದರಿಂದ ರೈತ ಸಜೀವ ದಹನವಾಗಿದ್ದಾರೆ.ಈ…

Read More

ರಾಮನಗರ : ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ರಾಮನಗರ ತಾಲೂಕಿನ ಲಕ್ಷ್ಮಿಪುರದಲ್ಲಿ ಕಾಂಗ್ರೆಸ್ ಶಾಸಕ HC ಬಾಲಕೃಷ್ಣ ಹೇಳಿಕೆ ನೀಡಿದರು. ರಾಮನಗರ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವುದಕ್ಕೆ ನಮ್ಮ ನಾಯಕರು ಒಪ್ಪಿಕೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸೂಕ್ತ ವ್ಯಕ್ತಿಯನ್ನು ಗುರುತಿಸಿದರೆ ಸ್ವಾಗತ ಮಾಡುತ್ತೇವೆ. ಯಾವುದೇ ಕಂಡೀಶನ್ ಹಾಕಿ ಅಧ್ಯಕ್ಷ ಸ್ಥಾನ ಬಿಡುತ್ತಾರೆ ಅನ್ನೋದು ಸುಳ್ಳು. ಹೈಕಮಾಂಡ್ ಅವರು ಹೇಳಿದರೆ ಬಿಟ್ಟು ಕೊಡೋಕೆ ಡಿಸಿಎಂ ಡಿಕೆ ಶಿವಕುಮಾರ್ ಸಿದ್ದರಿದ್ದಾರೆ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಶಾಸಕ ಎಚ್ ಸಿ ಬಾಲಕೃಷ್ಣ ಸುಳಿವು ನೀಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಕ್ರಮಗಳು, ದರೋಡೆ ಕೆಲಸ ನಡೆಯುತ್ತಿವೆ. ಘೋರಿ ಮೊಹ್ಮದ್, ಘಜನಿ ಮೊಹ್ಮದ್ ಹಾಗೂ ಮಲ್ಲಿಕ್ ಖಫೂರ್ ಇಂತಹವರು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕುಳಿತು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನಾನು ಎಚ್‍ಡಿ ಕುಮಾರಸ್ವಾಮಿಗೆಲ್ಲ ಹೆದರುವ ಮಗನೇ ಅಲ್ಲ ಎಂದು ಗುಡುಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹೆಚ್​ ಡಿ ಕುಮಾರಸ್ವಾಮಿಗೆ ಹೆದರುವ ಮಗನಲ್ಲ. ನೋಡಪ್ಪ, ಕುಮಾರಸ್ವಾಮಿಗೆ ನಾನು ಹೇಳುತ್ತೇನೆ. ಎಷ್ಟು ವ್ಯವಹಾರ ಇದೆ. ಅದನ್ನು ಬಿಡುಗಡೆ ಮಾಡಲಿ. ನನಗೂ ಗೊತ್ತಿದೆ. ನಾನು ಏನಾದ್ರೂ ತಪ್ಪು ಮಾಡಿದ್ರೆ ಯಾವ ಶಿಕ್ಷೆ ಬೇಕಾದ್ರೂ ಕೊಡಲಿ. ನನ್ನ ಆಸ್ತಿ, ಮಕ್ಕಳ ಮತ್ತು ಕುಟುಂಬದ ಆಸ್ತಿ ಎಷ್ಟಿದೆ?, ಅದನ್ನೆಲ್ಲಾ ತೆಗೆಸಿದ್ದಾರೆ. ಕುಮಾರಸ್ವಾಮಿಗೆಲ್ಲಾ ಹೆದರುವಂತಹ ಮಗ ಅಲ್ಲ ಎಂದಿದ್ದಾರೆ. ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ.‌ ನಾವೇನು ಈಗ ಬೆಲೆ ಏರಿಕೆ ಮಾಡಿಲ್ಲ. ಅವರು ಬೆಲೆ ಏರಿಕೆ…

Read More