Author: kannadanewsnow05

ಬೀದರ್ : ನಿನ್ನೆ ನಗರದ ಅಲಿಯಾಬಾದ ರಿಂಗ್ ರಸ್ತೆಯಲ್ಲಿರುವ ದಾಬಾವೊಂದರಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ರಿಯಲ್ ಎಸ್ಟೇಟ್ BREAKING : ಬೀದರ್ ನಲ್ಲಿ ಉದ್ಯಮಿಯನ್ನು ಮಚ್ಚಿನಿಂದ ಹತ್ಯೆಗೈದ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್ಉದ್ಯಮಿಯೊಬ್ಬನ ಭೀಕರ ಹತ್ಯೆಯಾಗಿದೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ವೈಜ್ಯನಾಥನನ್ನು ಕೊಲೆ ಮಾಡಿದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಾವದಗಿರಿ ಗ್ರಾಮದ ಜಾನ್ ಬೆಂಡಿ ಮತ್ತು ಸ್ನೇಹಿತ ಉಮೇಶ್ ನ ಬಂಧನವಾಗಿದೆ. ಬೀದರ್ ನ ಅಲಿಯಾಬಾದ್ ರಿಂಗ್ ರೋಡ್ ಬಳಿ ಈ ಒಂದು ಕೊಲೆ ನಡೆದಿತ್ತು. ನಿನ್ನೆ ವೈಜ್ಯನಾಥ್ ದತ್ತಾತ್ರಿ (49) ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಬೀದರ್ ತಾಲ್ಲೂಕಿನ ಹೊನ್ನೀಕೇರಿ ನಿವಾಸಿ ಆಗಿರುವ ಜಾನ್ ಬೆಂಡಿ ಮತ್ತು ಉಮೇಶ್ ಮಚ್ಚಿನಿಂದ ಕೊಚ್ಚಿ ಪರಾರಿ ಆಗಿದ್ದು, ಇದೀಗ ಅರೆಸ್ಟ್ ಆಗಿದ್ದಾರೆ. ಡಾಬಾದಲ್ಲಿ ಕುಳಿತುಕೊಂಡಿದ್ದ ವೈದ್ಯನಾಥ್ ಮೇಲೆ ಅಟ್ಯಾಕ್ ಮಾಡಿದ್ದರು ಅಟ್ಟಾಡಿಸಿ ಮಚ್ಚಿನಿಂದ ಕೊಚ್ಚಿ ಜಾನ್ ಬೆಂಡಿ ಮತ್ತು ಉಮೇಶ್…

Read More

ಬೆಂಗಳೂರು : ಚಲಿಸುತ್ತಿದ್ದ ವಿಮಾನದಲ್ಲಿ ಗಗನಸಖಿಯಿಂದಲೇ ಮಗುವಿನ ಚಿನ್ನ ಕಳ್ಳತನ ಆರೋಪ ಕೇಳಿ ಬಂದಿದ್ದು, ಈ ಕುರಿತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಈ ಕುರಿತು ಮಹಿಳೆಯೊಬ್ಬರು ದೂರು ನೀಡಿದ್ದು, ಇದೀಗ ಇಂಡಿಗೋ ವಿಮಾನದ ಸಿಬ್ಬಂದಿ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೌದು ಇಂಡಿಗೋ ವಿಮಾನದ ಮಹಿಳಾ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕೆಂಪೇಗೌಡ ಏರ್ಪೋರ್ಟ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಮಗುವಿನ ತಾಯಿಯ ದೂರಿನ ಮೇರೆಗೆ ಫ್ಲೈಟ್ ಸಿಬ್ಬಂದಿಯ ವಿರುದ್ಧ ಮೊಕದ್ದಮೆ ದಾಖಲಾಗಿದೆ. ಏಪ್ರಿಲ್ 1ರಂದು ತಿರುವನಂತಪುರಂ ನಿಂದ ದೂರುದಾರೆ ಮಹಿಳೆ ಪ್ರಿಯಾಂಕಾ ಮುಖರ್ಜಿ ಬೆಂಗಳೂರಿಗೆ ಬಂದಿದ್ದರು. ಇಬ್ಬರು ಚಿಕ್ಕ ಮಕ್ಕಳ ಜೊತೆಗೆ ಮಹಿಳೆ ಪ್ರಿಯಾಂಕ ಮುಖರ್ಜಿ ಪ್ರಯಾಣ ಮಾಡಿದ್ದರು. ಮಗು ಅಳುತ್ತಿದ್ದ ಅಂತ 5 ವರ್ಷದ ಮಗುವನ್ನು ಗಗನಸಖಿ ಎತ್ತಿಕೊಂಡಿದ್ದರು. ಮಗುವನ್ನು ವಾಷ್ ರೂಮ್ ಕಡೆ ಎತ್ತಿಕೊಂಡು ಹೋಗಿ ಸರ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿಲಾಗಿದ್ದು, ಇಂಡಿಗೋ ವಿಮಾನದ ಸಿಬ್ಬಂದಿ…

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು ಬ್ಯಾಡ್ಮಿಂಟನ್ ಕೋಚಿಂಗ್ ಸೆಂಟರ್ ಗೆ ತೆರಳುತ್ತಿದ್ದ 16 ವರ್ಷದ ಬಾಲಕಿಯ ಮೇಲೆ ಕೋಚ್ ಒಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 16 ವರ್ಷದ ಬಾಲಕಿಯ ಮೇಲೆ ಬ್ಯಾಡ್ಮಿಂಟನ್ ಕೋಚ್ ಅತ್ಯಾಚಾರ ಎಸಗಿದ್ದಾನೆ. 2 ವರ್ಷಗಳಿಂದ ಬ್ಯಾಡ್ಮಿಂಟನ್ ಕೋಚಿಂಗ್ ಪಡೆಯುತ್ತಿದ್ದ ಬಾಲಕಿ. ತರಬೇತಿ ನೀಡುವ ನೆಪದಲ್ಲಿ ಬಾಲಕಿಯ ಮೇಲೆ ಕೋಚ್ ಅತ್ಯಾಚಾರ ಎಸಗಿದ್ದಾನೆ. ತಮಿಳುನಾಡು ಮೂಲದ ಸುರೇಶ್ ಬಾಲಾಜಿ (26) ಎನ್ನುವ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆಗಾಗ ಬಾಲಕಿಯನ್ನು ಕೋಚ್ ಸುರೇಶ್ ತನ್ನ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ. ಈ ವೇಳೆ ಬಾಲಕಿಯ ಮೇಲೆ ಕೋಚ್ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಕುರಿತು ಯಾರಿಗಾದರೂ ಹೇಳಿದರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದನಂತೆ . ಬಳಿಕ ಬಾಲಕಿ ರಜೆಗೆ ಎಂದು ಅಜ್ಜಿ ಮೆನೆಗೆ ತೆರಳಿದ್ದಾಳೆ. ಈ ವೇಳೆ ಬಾಲಕಿ ಅಜ್ಜಿಯ ಮೊಬೈಲಿಂದ ಬಾಲಕಿ ನಗ್ನ ಫೋಟೋಗೆ…

Read More

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಸರ್ಕಾರ ಹಾಲಿನ ದರ, ವಿದ್ಯುತ್ ದರವನ್ನು ಏರಿಕೆ ಮಾಡಿತ್ತು. ಬಳಿಕ ಡೀಸೆಲ್ ದರ ಕೂಡ 2 ರೂಪಾಯಿ ಏರಿಕೆ ಮಾಡಿತ್ತು. ಹಾಗಾಗಿ ಇದೀಗ ಏಪ್ರಿಲ್ 14ರಂದು ಡೀಸೆಲ್ ದರ ಏರಿಕೆ ಖಂಡಿಸಿ ಲಾರಿ ಮಾಲೀಕರ ಸಂಘವು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಹೌದು ಬೆಂಗಳೂರಿನಲ್ಲಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿಕೆ ನೀಡಿದ್ದು, ಎಬ್ರಿಲ್ 14ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತೇವೆ. 6 ತಿಂಗಳ ಅಂತರದಲ್ಲಿ ಐದು ರೂಪಾಯಿ ಏರಿಕೆಯಾಗಿದೆ. ಸರ್ಕಾರವನ್ನು ಕರೆದು ಮಾತನಾಡುವ ಕೆಲಸ ಮಾಡಿಲ್ಲ. ರಾಜ್ಯ ಹೆದ್ದಾರಿಯಲ್ಲಿ ಕೂಡ ಶುಲ್ಕ ಸಂಗ್ರಹ ಮಾಡುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು. ಲಾರಿ ಮುಷ್ಕರಕ್ಕೆ ಏರ್ಪೋರ್ಟ್ ಟ್ಯಾಕ್ಸಿಗಳು ಸಹ ಬೆಂಬಲ ನೀಡಿದ್ದು, ಡೀಸೆಲ್ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಲಾರಿ ಮಾಲೀಕರ ಸಂಘ ಆಕ್ರೋಶ ಹೊರಹಾಕಿದೆ. ಡೀಸೆಲ್ ದರ ಏರಿಕೆ ನಿರ್ಧಾರ ವಾಪಾಸ್ ಪಡೆಯಲು ಆಗ್ರಹಿಸಿದ್ದರು ಲಾರಿ ಮಾಲೀಕರ ಸಂಘದ ಒತ್ತಾಯಕ್ಕೆ ರಾಜ್ಯ ಸರ್ಕಾರ…

Read More

ಬೆಳಗಾವಿ : ತನ್ನ ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿ ಆಗುತ್ತಾನೆ ಎಂದು ಪಾಪಿ ಪತ್ನಿ ಒಬ್ಬಳು ತನ್ನ ಗಂಡನ ಹತ್ಯೆಗೆ ಸುಪಾರಿ ನೀಡಿದ್ದು ಅಲ್ಲದೆ, ತನ್ನ ಗಂಡ ಕೊಲೆ ಆಗುತ್ತಿರುವುದನ್ನು ಮೊಬೈಲ್ ನಲ್ಲಿ ವಿಡಿಯೋ ಕಾಲ್ ಮೂಲಕ ನೋಡಿ ವಿಕೃತಿ ಮೆರೆದಿರುವ ಪತ್ನಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಈ ಒಂದು ಘಟನೆ ಎರಡರಂದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಾಡಿಕೊಪ್ಪದಲ್ಲಿ ನಡೆದಿತ್ತು. ಹೌದು ಗಂಡನ ಕೊಲೆಗೆ ಸುಪಾರಿ ಕೊಟ್ಟಂತಹ ಪತ್ನಿ ಶೈಲಾ ಅರೆಸ್ಟ್ ಆಗಿದ್ದಾಳೆ. ಬೆಳಗಾವಿ ಜಿಲ್ಲೆಯ ಖಾನಾಪುರದ ಗಾಡಿಕೊಪ್ಪದಲ್ಲಿ ಈ ಒಂದು ಭೀಕರ ಕೊಲೆ ನಡೆದಿತ್ತು. ಏಪ್ರಿಲ್ 2 ರಂದು ಶಿವನಗೌಡ ಪಾಟೀಲ್ ಎನ್ನುವ ವ್ಯಕ್ತಿಯ ಬರ್ಬರ ಹತ್ಯೆ ಆಗಿತ್ತು. ಶಿವನಗೌಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.ರುದ್ರಪ್ಪ ಹೊಸೆಟ್ಟಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ. ಇದೀಗ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ತನಿಖೆ ವೇಳೆ ಶಿವನಗೌಡ ಕೊಲೆಯ ಹತ್ಯೆ ಬಯಲಾಗಿದೆ.ಪತಿಯ ಕೊಲೆಯಾದ ಬಳಿಕ ಏಪ್ರಿಲ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಅನಾರೋಗ್ಯದಿಂದ ಬೇಸತ್ತ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಗೊಲ್ಲರಹಟ್ಟಿ ಎಂಬಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪುರುಷೋತ್ತಮ (27) ಎಂದು ತಿಳಿದುಬಂದಿದೆ. ಮಾಗಡಿ ತಾಲೂಕು ರಾಮನಗರ ಜಿಲ್ಲೆ ಬಾಳೆನಹಳ್ಳಿಯ ನಿವಾಸಿಯಾಗಿರುವ ಪುರುಷೋತ್ತಮ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪುರುಷೋತ್ತಮ್ ಕಳೆದ 5 ವರ್ಷದಿಂದ ಹೆಂಡತಿ ಹಾಗೂ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅನಾರೋಗ್ಯದಿಂದ ಬೆಸತ್ತು ಗೊಲ್ಲರಹಟ್ಟಿಯಲ್ಲಿ ರೂಂ ಡೋರ್ ಲಾಕ್ ಮಾಡಿಕೊಂಡು ನೇಣಿಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ, ತುಟ್ಟಿಭತ್ಯೆ ಹೆಚ್ಚಳ ಮಾಡುವಂತೆ ಇದೀಗ ರಾಜ್ಯ ಸರ್ಕಾರಿ ನೌಕರರು ಕೂಡ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್‌.ಷಡಕ್ಷರಿ ಅವರು ಆರ್ಥಿಕ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಅಖಿಲ ಭಾರತ ಬೆಲೆ ಸೂಚ್ಯಂಕ ಆಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ಕರ್ನಾಟಕ ರಾಜ್ಯ ಸರ್ಕಾರವೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಈ ಹಿಂದಿನಿಂದಲೂ ಮಂಜೂರು ಮಾಡಿರುತ್ತದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ಜ.1, 2025ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ. 2ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿರುತ್ತದೆ. ಅದರಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜ.1,2025 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.2 ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಬೇಕು ಎಂದು ಷಡಕ್ಷರಿ ಕೋರಿದ್ದಾರೆ.

Read More

ವಿಜಯಪುರ : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ ಇದೇ ವಿಚಾರವಾಗಿ ಇದೀಗ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ವಿಜಯಪುರದಲ್ಲಿ ಮೇ 11ರಂದು ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದು, ಪಂಚಮಸಾಲಿ ಸಮುದಾಯಕ್ಕೆ ಈ ಒಂದು ಸಮಾವೇಶದಲ್ಲಿ ಪಾಲ್ಗೊಳ್ಳಲು ಕರೆ ನೀಡಿದ್ದಾರೆ. ಹೌದು ಇಂದು ವಿಜಯಪುರದ ಚೆನ್ನಮ್ಮ ಸಭಾಭವನದ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಶಾಸಕ ಯತ್ನಾಳ್ ಪರವಾಗಿ ನಿಲ್ಲೋಣವೆಂದು ಸ್ವಾಮೀಜಿ ಕರೆ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಸಮಾವೇಶ ನಡೆಸೋಕೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನಿರ್ಧರಿಸಿದ್ದು, ವಿರಾಟ್ ರಾಷ್ಟ್ರೀಯ ರ‍್ಯಾಲಿ ಎಂಬ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಈ ಒಂದು ಸಮಾವೇಶದಲ್ಲಿ 5 ಲಕ್ಷದಿಂದ 10 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಖಂಡಿಸಿ ಪಂಚಮಸಾಲಿ ಸಮುದಾಯ ಇದೀಗ ಸಮರ…

Read More

ಬೆಂಗಳೂರು : ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿ ಬಳಿ ಕೇಂದ್ರ ಸಚಿವ HD ಕುಮಾರಸ್ವಾಮಿ ವಿರುದ್ಧ 6 ಎಕರೆ ಒತ್ತುವರಿ ಸಂಬಂಧ ಸ್ಥಳೀಯ ತಹಸೀಲ್ದಾರ್‌ ನೀಡಿರುವ ನೋಟಿಸ್‌ ಪ್ರಶ್ನಿಸಿ ಎಚ್‌.ಡಿ. ಕುಮಾರಸ್ವಾಮಿ ಹೈ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಸಂಬಂಧ ಇಂದು ನ್ಯಾ.ಎನ್ ಎಸ್ ಸಂಜಯ್ ಗೌಡ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಜಡ್ಜ್ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿ, ಅಲ್ಲಿವರೆಗೂ ಮಧ್ಯಂತರ ರಿಲೀಫ್ ವಿಸ್ತರಿಸಿ ಆದೇಶಿಸಿತು. ಎಚ್ ಡಿ ಕುಮಾರಸ್ವಾಮಿ ಪರವಾಗಿ ಉದಯ ಹೊಳ್ಳ ಮತ್ತು ಎಂ.ವಿ ನಿಶಾಂತ್ ವಾದ ಮಂಡಿಸಿದರು. 1986 ರಲ್ಲಿ ಖರೀದಿಸಿದ ಜಮೀನನ್ನು ಈಗ ಒತ್ತುವರಿ ಎನ್ನುತ್ತಿದ್ದಾರೆ. ಭೂ ಕಂದಾಯ ಕಾಯ್ದೆಯ ತಿದ್ದುಪಡಿ ಪ್ರಶ್ನಿಸುತ್ತೇವೆ ಎಂದು ವಾದಿಸಿದರು. ಈ ವೇಳೆ ನ್ಯಾಯಧೀಶರು ಅರ್ಜಿ ವಿಚಾರಣೆ ಏಪ್ರಿಲ್ 8ಕ್ಕೆ ಹೈಕೋರ್ಟ್ ಮುಂದೂಡಿತು. ಅಲ್ಲಿಯವರೆಗೂ ಮಧ್ಯಂತರ ರಿಲೀಫ್ ವಿಸ್ತರಿಸಿ ಹೈ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ? ಎಚ್‌.ಡಿ. ಕುಮಾರಸ್ವಾಮಿ ಮತ್ತು ಅವರ ಸಂಬಂಧಿ…

Read More

ಹಾವೇರಿ : ಕಳೆದ ಕೆಲವು ದಿನಗಳ ಹಿಂದೆ ಕೊಪ್ಪಳದಲ್ಲಿ ತಾಯಿ ಸಾವನಪ್ಪಿದ್ದರೂ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಒಬ್ಬ ತಾಯಿಯ ಸಾವಿನ ನೋವಲ್ಲು ಪರೀಕ್ಷೆ ಬರೆದಿದ್ದ ಘಟನೆ ನಡೆದಿತ್ತು. ಇದೀಗ ಹಾವೇರಿಯಲ್ಲೂ ಕೂಡ ಅಂತಹದ್ದೇ ಘಟನೆ ನಡೆದಿದ್ದು, ತಂದೆಯ ಸಾವಿನ ನೋವಿನಲ್ಲೂ ಕೂಡ ಅಣ್ಣ ಮತ್ತು ತಂಗಿ ಇಬ್ಬರು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿರುವ ಘಟನೆ ವರದಿಯಾಗಿದೆ. ಹೌದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಪದ್ಮಾವತಿಪುರ ತಾಂಡಾ ನಿವಾಸಿಗಳಾಗಿರುವ ರಕ್ಷಿತಾ ಹನುಮಂತಪ್ಪ ಲಮಾಣಿ ಮತ್ತು ಧನರಾಜ ಹನುಮಂತಪ್ಪ ಲಮಾಣಿ ರಾಣೇಬೆನ್ನೂರು ನಗರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ. ಇಂದು ಎಸ್‌ಎಸ್‌ಎಲ್‌ಸಿಯ ಕೊನೆಯ ಪರೀಕ್ಷೆ ಇತ್ತು. ಬೆಳಗ್ಗೆ ತಂದೆ ಹನುಮಂತಪ್ಪ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಮನೆಯಲ್ಲಿ ತಂದೆ ಮೃತಪಟ್ಟಿದ್ದರೂ ಸಹ ನಗರದ ಪರೀಕ್ಷೆ ಕೇಂದ್ರಕ್ಕೆ ತೆರಳಿ ಕೊನೆಯ ಹಿಂದಿ ಪರೀಕ್ಷೆ ಬರೆದಿದ್ದಾರೆ.

Read More