Subscribe to Updates
Get the latest creative news from FooBar about art, design and business.
Author: kannadanewsnow05
ಯಾದಗಿರಿ : ಅಂಗನವಾಡಿ ಸಹಾಯಕಿಯರ ಗೈರು ಹಾಜರಿ ಸರಿಪಡಿಸಲು ಸಿಡಿಪಿಓ ಮಹಿಳಾ ಅಧಿಕಾರಿ ಒಬ್ಬರು 80,000 ಲಂಚ ಸ್ವೀಕರಿಸುವ ವೇಳೆ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಸಿಡಿಪಿಒ ವನಜಾಕ್ಷಿ 80 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲಕ್ಕೆ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿರ ಗೈರುಹಾಜರಿ ಸರಿಪಡಿಸಲು ಲಂಚ ಸ್ವೀಕಾರ ಮಾಡುತ್ತಿದ್ದರು. 1 ಲಕ್ಷ ಸಿಡಿಪಿಓ ವಣಜಾಕ್ಷಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಈ ವೇಳೆ 80,000 ಹಣ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು ಈ ಕುರಿತು ಏಪ್ರಿಲ್ 22ರಂದು ರಾಜ್ಯ ಚುನಾವಣಾ ಆಯೋಗ ಚುನಾವಣಾ ಅಧಿಸೂಚನೆ ಪ್ರಕಟಿಸಲಿದೆ. ಮೇ 11ರಂದು ಮತದಾನ ನಡೆಯಲಿದ್ದು ಮೇ 14ರಂದು ಫಲಿತಾಂಶ ಹೊರಬೀಳಲಿದೆ. ಹೌದು ಗ್ರಾಮ ಪಂಚಾಯತಿ ಉಪಚುನಾವಣೆಗೆ ಇದೀಗ ದಿನಾಂಕ ಘೋಷಣೆಯಾಗಿದ್ದು, ರಾಜ್ಯ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 22 ರಂದು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದು, ಮೇ 11 ರಂದು ಮತದಾನ ಮತ್ತು ಮೇ 14 ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ ಒಟ್ಟು 222 ಗ್ರಾಮ ಪಂಚಾಯತಿಗಳ, 260 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ವಿವಿಧ ಕಾರಣಗಳಿಂದಾಗಿ ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಮೇ 11 ರಂದು ಮತದಾನ ನಡೆಯಲಿದ್ದು, ಮೇ 14ರಂದು ಗ್ರಾಮ ಪಂಚಾಯಿತಿ ಉಪಚುನಾವಣೆಯ ಫಲಿತಾಂಶ ಹೊರಬೀಳಲಿದೆ.
ಚಾಮರಾಜನಗರ : ಸ್ನೇಹಿತರ ಜೊತೆಗೆ ಕಾವೇರಿ ನದಿಗೆ ಈಜಲು ತೆರಳಿದ ಯುವಕನೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಶಿವನಸಮುದ್ರ ವೆಸ್ಲಿ ಸೇತುವೆ ಬಳಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರಿನ ಜೆಪಿ ನಗರ ನಿವಾಸಿ ಸಾಹಿಲ್ ಪಾಷಾ (23) ಎಂದು ತಿಳಿದುಬಂದಿದೆ. ರಂಜಾನ್ ಮುಗಿದ ಹಿನ್ನೆಲೆಯಲ್ಲಿ ಸ್ಸಾಹಿಲ್ ಹಾಗೂ ಸ್ನೇಹಿತರ ಗುಂಪು ಶಿವನಸಮುದ್ರ ಬಳಿಯ ದರ್ಗಾಕ್ಕೆ ಹೋಗಿದ್ದರು. ಪ್ರಾಥನೆ ಸಲ್ಲಿಸಿ ಬಳಿಕ ಸೇತುವೆ ಬಳಿ ಕಲ್ಲುಬಂಡೆ ಬಳಿ ಹೋಗಿದ್ದವರು ನದಿಯಲ್ಲಿ ಈಜಲು ಇಳಿದಿದ್ದಾರೆ. 9 ಜನ ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ.ಈ ವೇಳೆ ನೀರಿನಲ್ಲಿ ಮುಳುಗಿ ಸಾಹಿಲ್ ಸಾವನ್ನಪ್ಪಿದ್ದಾನೆ. ಈ ಒಂದು ಘಟನೆ ಕುರಿತಂತೆ ಕೊಳ್ಳೆಗಾಲ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣದ ಕಲಿಸಿಕೊಂಡ ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ, ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಬಹು ಮಹಡಿ ಕಟ್ಟಡದಿಂದ ಟೆಕ್ಕಿಯೊಬ್ಬ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಅಸೆಟ್ಸ್ ಅಪಾರ್ಟ್ಮೆಂಟ್ನ 13ನೇ ಮಹಡಿಯಿಂದ ಬಿದ್ದು ಟಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಘಟನೆ ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ತಿಂಗಳು ಹಿಂದೆ ಸರಣಿ ಬಾಣಂತಿಯರ ಸಾವುಗಳು ನಡೆದಿತ್ತು. ಇದೀಗ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಡೆತ್ ಎಡಿಟ್ ವರದಿ ಬಿಡುಗಡೆಯ ಮಾಡಿದ್ದಾರೆ. ಬೆಂಗಳೂರಿನಲ್ಲಿ ವರದಿಯ ಕುರಿತು ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್ ಬಾಣಂತಿಯರ ಸಾವಿನ ಬಗ್ಗೆ ಟೆಕ್ನಿಕಲ್ ಕಮಿಟಿ ರಚನೆ ಮಾಡಲಾಗಿತ್ತು. ಟೆಕ್ನಿಕಲ್ ಕಮಿಟಿ ವರದಿಯ ಶಿಫಾರಸು ಸರ್ಕಾರ ಪಡೆದಿದೆ. ಅಗತ್ಯ ಔಷದ ಸಲಕರಣೆ ವೈದ್ಯರು ಜವಾಬ್ದಾರಿ ನಿರ್ವಹಿಸಿದ್ದಾರೆ 70 ಪರ್ಸೆಂಟ್ ಬಾಣಂತಿಯರ ಸಾವುಗಳನ್ನು ನಾವು ತಡೆಯಬಹುದಿತ್ತು. ರಿಂಗರ್ ಲ್ಯಾಕ್ಟೆಕ್ ಸಮಸ್ಯೆಯಿಂದ 18 ಬಾಣಂತಿಯರ ಸಾವಾಗಿದೆ. ಡಿಸೆಂಬರ್ ನಿಂದ ಇದನ್ನು ಸರಿಪಡಿಸಲು ತಯಾರಿ ಮಾಡಿದ್ದೇವೆ ಫ್ರೆಶ್ ಫ್ರೋಜನ್ ಪ್ಲಾಸ್ಮಾ ಇದ್ದಿದ್ದರೆ ಸಾವಿನ ಸಂಖ್ಯೆ ತಡೆಯಬಹುದಿತ್ತು. ಮೊದಲೇ ರಿಸ್ಕ್ ಪ್ರಮಾಣ ಗೊತ್ತಿದ್ದರೆ ಹೆಚ್ಚಿನ ಚಿಕಿತ್ಸೆ ನೀಡಬಹುದಾಗಿತ್ತು. ಬಹಳ ಸುಧಾರಣೆ ಮಾಡುವ ಅವಶ್ಯಕತೆ ಇದೆ ಎಂದು ವರದಿಯಲ್ಲಿ ಗೊತ್ತಾಗಿದೆ ಎಂದುರು. ಬಳ್ಳಾರಿಯಲಿ ಐದು ಸಾವು ಆಗಿರುವಂತೆ 13 ಕಡೆಗಳಲ್ಲೂ…
ರಾಯಚೂರು : ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಗೌರವದ ದುರಂತ ಸಂಭವಿಸಿದ್ದು ಕಾರ್ಮಿಕರ ಕ್ವಾರ್ಟರ್ಸ್ ತೆರವು ಕಾರ್ಯಾಚರಣೆಯ ವೇಳೆ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಟ್ಟಿ ಚಿನ್ನದ ಗಣಿ ಕಂಪನಿಯ ಕ್ವಾಟರ್ಸ್ ನಲ್ಲಿ ಈ ಒಂದು ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕ್ವಾಟರ್ಸ್ ನಲ್ಲಿ ಕಾರ್ಮಿಕರ ಕ್ವಾರ್ಟರ್ಸ್ ತೆರವು ಕಾರ್ಯಾಚರಣೆ ವೇಳೆ ಈ ಒಂದು ಘಟನೆ ನಡೆದಿದ್ದು, ವಿದ್ಯುತ್ ಸಂಪರ್ಕ್ ಕಡಿತಗೊಳಿಸಿದೆ ತೆರವುಗೊಳಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ವಿದ್ಯುತ್ ಪ್ರವಹಿಸಿ 30 ವರ್ಷದ ಯುವಕ ದುರ್ಮರಣ ಹೊಂದಿದ್ದಾನೆ. ಅಧಿಕಾರಿಗಳ ನಿರ್ಲಕ್ಷಕ್ಕೆ ಈ ಒಂದು ದುರಂತ ಸಂಭವಿಸಿದೆ ಎಂದು ಆರೋಪ ಕೇಳಿ ಬಂದಿದೆ. ಘಟನೆ ಕುರಿತಂತೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮೈಸೂರಿನ ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಕರಣದ ಆರೋಪಿ ಆಗಿರುವ ಭವಾನಿ ರೇವಣ್ಣ ಅವರಿಗೆ ಇದೀಗ ಹೈಕೋರ್ಟ್ ಷರತ್ತು ಸಡಿಲಿಸಿದೆ. ಹಾಸನ ಮತ್ತು ಮೈಸೂರಿಗೆ ತೆರಳಲು ಹೈಕೋರ್ಟ್ ಇದೀಗ ಭವಾನಿ ರೇವಣ್ಣ ಅವರಿಗೆ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ. ಹೌದು ಮೈಸೂರು ಜಿಲ್ಲೆಯ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನ ಮತ್ತು ಮೈಸೂರಿಗೆ ತೆರಳಲು ಭವಾನಿ ರೇವಣ್ಣಗೆ ಇದೀಗ ಹೈಕೋರ್ಟ್ ಅನುಮತಿ ನೀಡಿದೆ. ಷರತ್ತು ಬುದ್ಧ ಅನುಮತಿ ನೀಡಿ ಹೈಕೋರ್ಟ್ ಏಕ ಸದಸ್ಯಪೀಠ ಆದೇಶಿಸಿದೆ. ನಿರೀಕ್ಷಣಾ ಜಾಮೀನು ವೇಳೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಇದೀಗ ಶರತ್ತು ಸಡಲಿಸಿದೆ. ಅಲ್ಲದೇ ಸಂತ್ರಸ್ತ ಮತ್ತು ಸಾಕ್ಷಿಗಳ ಮನೆಯ 500 ಮೀಟರ್ ಸುತ್ತಳತೆ ಪ್ರವೇಶಿಸುವಂತಿಲ್ಲ ಎಂದು ಭವಾನಿ ರೇವಣ್ಣಗೆ ಹೈಕೋರ್ಟ್ ಇದೆ ವೇಳೆ ಹೊಸ ಷರತ್ತನ್ನು ವಿಧಿಸಿದೆ.
ಬೆಂಗಳೂರು : ಬೆಳಗಾವಿಯ ಸುವರ್ಣಸೌಧದ ಬಳಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಇತ್ತೀಚಿಗೆ ಪಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಂಚಮಸಾಲಿ ಸಮುದಾಯದ ಶ್ರೀಗಳಾದ ಜಯ ಮೃತ್ಯುಂಜಯ ಸ್ವಾಮೀಜಿಯವರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು. ಇಂದು ಹೈಕೋರ್ಟ್ ನಲ್ಲಿ ನಿವೃತ್ತ ನ್ಯಾಯಮೂರ್ತಿಗಳು ಈ ಒಂದು ಅರ್ಜಿ ವಿಚಾರಣೆ ನಡೆಸಿ ರಾಜ್ಯ ಸರ್ಕಾರಕ್ಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುವಂತೆ ಆದೇಶ ನೀಡಿದೆ. ಹೌದು ಪ್ರಕರಣ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆಗೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಕಾಲಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶ ನೀಡಿದೆ. ಸುವರ್ಣ ಸೌಧದ ಬಳಿ ಪ್ರತಿಭಟನೆ ನಡೆಸುವಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಬಸವ ಜಯಂತಿಯ ಶ್ರೀ ಮತಿತರರು ಈ ಒಂದು ಘಟನೆಗೆ ಸಂಬಂಧಿಸಿದಂತೆ ರಿಟ್ ಅರ್ಜಿ ಸಲ್ಲಿಸಿದ್ದರು. ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು…
ಬೆಂಗಳೂರು : ಇತ್ತೀಚಿಗೆ ಅಧಿವೇಶನದಲ್ಲಿ ಪಂಚಾಯತ್ ರಾಜ್ ವಿವಿ ಕುಲಪತಿ ನೇಮಕ ತಿದ್ದುಪಡಿ ಕುರಿತು ವಿಧೇಯಕ ಮಂಡನೆ ಮಾಡಲಾಗಿತ್ತು. ಇದೀಗ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಅವರು ವಿವಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡದೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಹೌದು ಪಂಚಾಯತ್ ರಾಜ್ ವಿವಿ ಕುಲಪತಿ ನೇಮಕ ವಿಚಾರವಾಗಿ ರಾಜಪಾಲರು ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಗರಂ ಆಗಿದ್ದಾರೆ. ಪಂಚಾಯತ್ ರಾಜ್ ವಿವಿ ಕುಲಪತಿ ನೇಮಕ ವಿಚಾರಕ್ಕೆ ರಾಜಪಾಲರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿವಿ ತಿದ್ದುಪಡಿ ವಿಧೇಯಕ ಅನುಮೋದನೆ ನೀಡದೆ ರಾಜ ಸರ್ಕಾರಕ್ಕೆ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ವಿಧೇಯಕ ಅನುಮೋದನೆ ಆಗದಿದ್ದಕ್ಕೆ ಹಳೆ ನಿಯಮ ಜಾರಿಯಲ್ಲಿದ್ದು, ಹಳೆ ನಿಯಮದ ಪ್ರಕಾರವೇ ವಿಶ್ವವಿದ್ಯಾಲಯ ಕುಲಪತಿ ಹುದ್ದೆಗೆ ನೇಮಕ ಮಾಡಲಾಗುತ್ತದೆ. ತಕ್ಷಣ ನೇಮಕ ಮಾಡಿ ಎಂದು ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅಲ್ಲದೆ ಒಂದು ತಿಂಗಳೊಳಗೆ ಕ್ರಮ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.…
ಧಾರವಾಡ : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಸವರಾಜ್ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಹೌದು ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಆರೋಪಿ ಬಸವರಾಜ್ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಿದ ಹಿನ್ನೆಲೆಯಲ್ಲಿ ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಆರೋಪಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಧೀಶರಾದ ಎಂ.ನಾಗಪ್ರಸನ್ನ ಅವರು ಅರ್ಜಿವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದೆ ವೇಳೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಾಲ್ಕು ವಾರಗಳಲ್ಲಿ ಟ್ರಯಲ್ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆ ನೀಡಿತು. ಯೋಗೀಶ್ ಗೌಡ ಪತ್ನಿ ಮಲ್ಲವ್ವ ಸಲ್ಲಿಸಿದ್ದ ಅರ್ಜಿ ಕೂಡ ಇದೆ ವೇಳೆ ವಜಾ ಗೊಂಡಿತು.













