Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಈಗಾಗಲೇ ಸಾರಿಗೆ ಬಸ್ ಗಳಲ್ಲಿ ಟಿಕೆಟ್ ದರ ಶೇಕಡಾ 15 ರಷ್ಟು ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಬಿಗ್ ಶಾಕ್ ನೀಡುತ್ತಿದ್ದೂ,, ಮೆಟ್ರೋ ಪ್ರಯಾಣದ ಟಿಕೆಟ್ ದರ ಶೇಕಡ 15 ರಿಂದ 20 ರಷ್ಟು ಹೆಚ್ಚಳ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಿಸಲು ಬಿಎಂಆರ್ ಸಿಲ್ ಸಿದ್ದತೆ ನಡೆಸಿದ್ದು, ಶೇ.15 ರಿಂದ 20 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಜನವರಿ 17 ಕ್ಕೆ ದರ ಪರಿಷ್ಕರಣೆ ಸಮಿತಿ ಸಲ್ಲಿಸಲಿರುವ ಅಂತಿಮ ವರದಿ ಕುರಿತು ಸಮಾಲೋಚನೆ ನಡೆಯಲಿದೆ. ಜನೆವರಿ 17 ರ ಸಭೆಯಲ್ಲಿ ಟಿಕೆಟ್ ದರ ಫೈನಲ್ ಆಗಲಿದೆ ಎಂದು ತಿಳಿದುಬಂದಿದೆ. ನಮ್ಮ ಮೆಟ್ರೋ 2017ರಲ್ಲಿ ಕೊನೆಯ ಬಾರಿ ದರ ಪರಿಷ್ಕರಣೆ ಮಾಡಿತ್ತು. 10-15 ಪ್ರತಿಶತ ಟಿಕೆಟ್ ದರ ಏರಿಕೆ ಮಾಡಲಾಗಿತ್ತು. ಬಳಿಕ ಹಣದುಬ್ಬರ ಹೆಚ್ಚಳ, ಕಾರ್ಯಾಚರಣೆ ವೆಚ್ಚ ಹೆಚ್ಚಳ ನಮ್ಮ…
ಮೈಸೂರು : ಕೇಂದ್ರ ಸಚಿವ ಅಮಿತ್ ಷಾ ಬಿಆರ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆಗೆ ಇದೀಗ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಮೈಸೂರು ಜಿಲ್ಲೆ ಬಂದ್ ಮಾಡಿ ಹಲವು ಸಂಘಟನೆಗಳು ಕರೆ ನೀಡಿವೆ. ಹೌದು ನಾಳೆ ಮೈಸೂರು ಬಂದ್ ಗೆ ಕರ್ನಾಟಕ ರಾಜ್ಯ ರೈತ ಸಂಘಟನೆಗಳು, ದಲಿತ ಸಂಘಟನೆಗಳು,ಮುಸ್ಲಿಂ , ಹಿಂದುಳಿದ ಸಮುದಾಯಗಳ ವೇದಿಕೆ, ದೇವರಾಜ ಮಾರುಕಟ್ಟೆ ವರ್ತಕರ ಸಂಘ,ಮೈಸೂರು ಪಾಲಿಕೆ ಪೌರಕಾರ್ಮಿಕ ಹಾಗೂ ಪಳಚರಂಡಿ ಖಾಯಂ ಹಾಗೂ ಗುತ್ತಿಗೆ ಕಾರ್ಮಿಕ ಸಂಘಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ನಾಳೆ ಮುಂಜಾನೆ 7 ಗಂಟೆಯಿಂದಲೆ ಮೈಸೂರು ಬಂದ್ ಬಿಸಿ ತಟ್ಟಲಿದ್ದು ಪ್ರತಿಭಟನೆಗೆ ಹಲವು ಸಂಘಟನೆಗಳ 10 ತಂಡ ಮಾರ್ಪಾಡು ಮಾಡಿಕೊಳ್ಳಲಾಗಿದೆ. ಕೆಂದ್ರೀಯ ಬಸ್ ನಿಲ್ದಾಣದಲ್ಲಿ ಒಂದು ತಂಡ ,ನಗರ ಬಸ್ ನಿಲ್ದಾಣದಲ್ಲಿ ಒಂದು ತಂಡ ಹೀಗೆ ಮೈಸೂರು ನಗರಕ್ಕೆ ಬರುವ ಪ್ರಮುಖ ರಸ್ತೆ ತಡೆಗೆ ಯೋಚನೆ ಮಾಡಲಾಗಿದೆ.
BIG NEWS : ಚಿಕ್ಕಬಳ್ಳಾಪುರದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ದಂಪತಿ ಸೇರಿ ಇಬ್ಬರು ಮಕ್ಕಳಿಗೆ ಗಾಯ
ಚಿಕ್ಕಬಳ್ಳಾಪುರ : ರಸ್ತೆ ಬದಿಯಲ್ಲಿ ನಿಂತಂತಹ ಲಾರಿಗೆ ವೇಗವಾಗಿ ಬಂದಂತಹ ಕಾರನ್ನು ಡಿಕ್ಕಿ ಹೊಡೆದ ಪರಿಣಾಮ ಕಾಲಿನಲ್ಲಿ ಚಲಿಸುತ್ತಿದ್ದ ದಂಪತಿಗಳು ಸೇರಿದಂತೆ ಇಬ್ಬರು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆ ಬಾವಿ ಬಳಿ ನಡೆದಿದೆ. ಗಾಯಗೊಂಡವರನ್ನು ತುಮಕೂರು ಜಿಲ್ಲೆಯ ಪಾವಗಡದ ರೊಪ್ಪ ಗ್ರಾಮದ ಪವನ್ ಹಾಗೂ ಮಮತಾ ದಂಪತಿ ಸೇರಿದಂತೆ ಅವರ ಮಕ್ಕಳಾದ ವಿಶ್ವಾಸ್ ಹಾಗೂ ಶುಭ್ರತ್ ಎಂದು ತಿಳಿದುಬಂದಿದೆ. ಪಾಂಡಿಚೆರಿ ಪ್ರವಾಸಕ್ಕೆ ಹೋಗಿ ಬರುವಾಗ ಈ ಒಂದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಗನ ಪರಿಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುಟುಂಬದ ಜೊತೆಗೆ ವಿದೇಶಕ್ಕೆ ತೆರಳಿದ್ದರು.ಇದೆ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಏರ್ಪಡಿಸಿಲಾಗಿತ್ತು. ಸೇರಿದಂತೆ 35 ಶಾಸಕರು ಹಲವು ಸಚಿವ ಭಾಗಿಯಾಗಿದ್ದರು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟಕ್ಕೆ ಸೇರಿದರೆ ಅದಕ್ಕೆ ರಾಜಕೀಯ ಏಕೆ ಬೇರೆಸುತ್ತಿರಿ ಎಂದು ಸಿಡಿಮಿಡಿಗೊಂಡಿದ್ದಾರೆ. ಇಂದು ವಿದೇಶ ಪ್ರವಾಸ ಮಾಡಿಸಿಕೊಂಡು ಭಾರತಕ್ಕೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ವರ್ಷದಿಂದ ಎಲ್ಲೂ ಹೊರಗೆ ಹೋಗಿರಲಿಲ್ಲ. ಹೀಗಾಗಿ ಕುಟುಂಬದ ಜೊತೆಗೆ ಹೊಸ ವರ್ಷಕ್ಕೆ ವಿದೇಶಕ್ಕೆ ತೆರಳಿದ್ದೆ. ಔತಣಕೂಟಕ್ಕೆ ಸೇರಿದ್ದನ್ನೂ ರಾಜಕೀಯ ಯಾಕೆ ಬೆರೆಸುತ್ತೀರಿ. ಎಲ್ಲರೂ ಊಟಕ್ಕೆ ಸೇರಿದರೆ ತಪ್ಪೇನು? ನಾನು ಕೆಲವು ಬಾರಿ ಊಟಕ್ಕೆ ಕರೆದಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಕ್ಯಾಬಿನೆಟ್ ಪುನರ್ ರಚನೆ ನಿಮ್ಮನ್ನು ಬ್ಯುಸಿಯಲ್ಲಿಡಲು ದಾರಿ ತಪ್ಪಿಸುತ್ತಿದ್ದಾರೆ ಎಂದರು. ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ಈ ಒಂದು ಕೂಟದಲ್ಲಿ…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಸುತ್ತ ಮುತ್ತ ಭಾಗದಲ್ಲಿ ನಕ್ಸಲರ ಚಟುವಟಿಕೆ ಪುನರಾರಂಭವಾಗಿತ್ತು. ಈ ಸಂದರ್ಭದಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಲಾಗಿತ್ತು. ಇದೀಗ ನಕ್ಸಲರಿಗೆ ಶರಣಾಗಲು ನಾನೇ ಕರೆ ಕೊಟ್ಟಿದ್ದೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ANF ನಕ್ಸಲ್ ಕಾರ್ಯಚರಣೆ ನಡೆಸುತ್ತಿದ್ದು, ಇದೀಗ ಅವರಿಗೆ ಕಾರ್ಯಾಚರಣೆ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಅಲ್ಲದೆ ನಕ್ಸಲರಿಗೆ ಶರಣಾಗಲು ನಾನೇ ಕರೆಕೊಟ್ಟಿದ್ದೇನೆ. ನಕ್ಸಲರ ಮನ ಪರಿವರ್ತನೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಕ್ಸಲರ ಶರಣಾಗತಿಗೆ ಸರ್ಕಾರ ಸಮಿತಿ ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಂಗಳೂರು ಭಾಗದಲ್ಲಿ ನಕ್ಷಲ್ ಚಟುವಟಿಕೆ ಹೆಚ್ಚಾಗಿದ್ದು ಈ ವೇಳೆ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿದ ಬಳಿಕ ಇದೀಗ 6 ನಕ್ಸಲರು ಚಿಕ್ಕಮಂಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ನಿರ್ಧರಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗೋ ಸಾಧ್ಯತೆ ಇದೆ ಎನ್ನಲಾಗಿದೆ.…
ಬೆಂಗಳೂರು : HMPV ವೈರಸ್ ಭಾರತಕ್ಕೂ ಬಂದಿದ್ದು, ಈಗ ಇಂದು ಬೆಂಗಳೂರಿನಲ್ಲಿ 8 ತಿಂಗಳ ಮಗು ಹಾಗೂ 3 ತಿಂಗಳ ಮಕ್ಕಳಲ್ಲಿ ಈ ಒಂದು ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರೋಗ್ಯ ಇಲಾಖೆಗೆ ಎಲ್ಲಾ ರೀತಿಯ ಮುಂಜಾಗೃತ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಮೊದಲ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದು ಅದಕ್ಕೋಸ್ಕರ ಆರೋಗ್ಯ ಸಚಿವ ದಿನೇಶ್ ಗುಂಡೂರ ಸಭೆ ಕರೆದಿದ್ದಾರೆ. ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದು ಅಪಾಯಕಾರಿ ವೈರಸ್ ಅಲ್ಲ ಎಂದರು. ಇದೊಂದು ಚೀನಾ ವೈರಸ್ ಆಗಿದ್ದು, ಕರ್ನಾಟಕಕ್ಕೆ ಬಂದಿದೆ ಎಂದು ಮಾಹಿತಿ ಸಿಕ್ಕಿದೆ.ಅದಕ್ಕೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಗೆ ಮಾತನಾಡಿದ್ದು…
ರಾಯಚೂರು : ರಾಜ್ಯದಲ್ಲಿ ಬಳ್ಳಾರಿ ಬೆಳಗಾವಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಇಡೀ ರಾಜ್ಯವೇ ಬೆಚ್ಚಿ ಬೆಳಿಸಿತ್ತು. ಆದರೆ ಬಾಣಂತಿಯರ ಮರಣ ಮೃದಂಗ ಇಂದಿಗೂ ಸಹ ನಿಲ್ಲುತ್ತಿಲ್ಲ. ಇದೀಗ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಇಂದು ಮತ್ತೋರ್ವ ಬಾಣಂತಿಯ ಸಾವಾಗಿದೆ. ಹೌದು ಮೃತ ಬಾಣಂತಿಯನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ ಸರಸ್ವತಿ (24) ಎಂದು ತಿಳಿದುಬಂದಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಣಂತಿ ಸಾವನ್ನಪ್ಪಿದ್ದಾಳೆ. ಸದ್ಯ ಜಿಲ್ಲೆಯಲ್ಲಿ ಮೂರು ತಿಂಗಳಿನಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ಶಾಲೆ ಮುಗಿಸಿಕೊಂಡು ಮನೆಗೆ ತೆರಳುವ ವೇಳೆ ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್ ಮರದ ತುಂಡು ಬಿದ್ದು 15 ವರ್ಷದ ಬಾಲಕಿ ತೇಜಸ್ವಿನಿ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಕಟ್ಟಡದ ಇಂಜಿನಿಯರ್ ಚಂದ್ರಶೇಖರ್ ಎನ್ನುವವರನ್ನು ವಿವಿ ಪುರಂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಕಟ್ಟಡ ನಿರ್ಮಾಣ ಮಾಡುತ್ತಿರುವ ಇಂಜಿನಿಯರ್ ಅನ್ನು ವಿವಿ ಪುರಂ ಠಾಣೆ ಪೋಲಿಸಿರುವ ಅವಶ್ಯಕತೆ ಪಡೆದುಕೊಂಡು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ.ಘಟನೆ ಸಂಬಂಧ ತೇಜಸ್ವಿನಿ ತಂದೆ ಸುಧಾಕರ್ ರಾವ್ ಅವರು ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲಿಕ, ಗುತ್ತಿಗೆದಾರ, ಎಂಜಿನಿಯರ್, ಬಿಬಿಎಂಪಿ ಅಧಿಕಾರಿಗಳು ವಿರುದ್ಧ ಎಫ್ಐಆರ್ ದಾಖಲಾಗಿದೆ. ಇನ್ನು ಕಟ್ಟಡ ಮಾಲಿಕ, ಗುತ್ತಿಗೆದಾರ ಹಾಗೂ ಘಟನೆ ವೇಳೆ ಕೆಲಸ ಮಾಡುತ್ತಿದ್ದ ಕಟ್ಟಡ ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಇನ್ನು ಕಟ್ಟಡ ನಿರ್ಮಾಣ ಮಾಡಲು ಅನುಮತಿ ನೀಡಿದ ಬಿಬಿಎಂಪಿ ಅಧಿಕಾರಿಗಳು ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸಿಲ್ಲ ಎಂಬುದು ಗೊತ್ತಾಗಿದೆ. ಎಲ್ಲಾ ಆರೋಪಿಗಳನ್ನು ಸದ್ಯದಲ್ಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು…
ಬೆಂಗಳೂರು : ಬೆಂಗಳೂರಲ್ಲಿ ಇದೀಗ ಮತ್ತೊಂದು ದುರಂತ ಸಂಭವಿಸಿದ್ದು, ತನ್ನ ಹುಟ್ಟು ಹಬ್ಬದ ದಿನದಂದೇ ಐಐಎಂ ವಿದ್ಯಾರ್ಥಿ ಒಬ್ಬ ಹಾಸ್ಟೆಲ್ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ಕೈಲಾಶ್ಭಾಯ್ ಪಟೇಲ್ (28) ಎಂದು ಗುರುತಿಸಲಾಗಿದೆ. ಈತ ಗುಜರಾತ್ ಮೂಲದವನು ಎಂದು ತಿಳಿದುಬಂದಿದ್ದು, ಹಾಸ್ಟೆಲ್ ಕಟ್ಟಡದ 3ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು, ಕೈಲಾಶ್ ಮೃತಪಟ್ಟಿದ್ದಾನೆ. ಶನಿವಾರ ನಿಲಯ್ ತನ್ನ ಹುಟ್ಟುಹಬ್ಬವಿದ್ದ ಕಾರಣ ಸ್ನೇಹಿತರೊಂದಿಗೆ ಹೊರಗಡೆ ತೆರಳಿದ್ದ. ನಂತರ ಹಾಸ್ಟೆಲ್ನಲ್ಲಿರುವ ಸ್ನೇಹಿತನ ಕೊಠಡಿಯಲ್ಲಿ ನಿಲಯ್ ಹುಟ್ಟುಹಬ್ಬ ಆಚರಿಸಲಾಗಿತ್ತು. ಬಳಿಕ ತನ್ನ ಕೋಣೆಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಭಾನುವಾರ ಬೆಳಗ್ಗೆ ಹಾಸ್ಟೆಲ್ ಭದ್ರತಾ ಸಿಬ್ಬಂದಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. https://twitter.com/iimb_official/status/1875847536650695126?t=d_6q92nhvI2goVSWR5LAiA&s=19
ಮೈಸೂರು : ಬೈಕ್ ನಲ್ಲಿ ವೇಗವಾಗಿ ಬಂದಂತಹ ಯುವಕನೊಬ್ಬ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಡಿಕ್ಕಿ ಹೊಡೆದ ರಭಸಕ್ಕೆ ಪಕ್ಕದಲ್ಲಿದ್ದ ನದಿಗೆ ಹಾರಿ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಮೃತ ಯುವಕನನ್ನು ಗುರುಪುರ ಗ್ರಾಮದ ಸುಹೇಲ್( 22 ) ಎನ್ನಲಾಗಿದೆ. ಬೋಳರುವ ಹಣಕ್ಕೆ ಹಿಂದಿನಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸೂಹೆಲ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನ ಆಜಾದ್ ನಗರದ ಬಳಿ ನಡೆದಿದೆ. ಸುಹೇಲ್ ಸ್ವಗ್ರಾಮಕ್ಕೆ ವಾಪಸ್ಸಾಗುವ ವೇಳೆ ಎದುರಿನಲ್ಲಿ ಹೋಗುತ್ತಿದ್ದ ಬೊಲೆರೋ ವಾಹನ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ವೇಗವಾಗಿದ್ದ ಬೈಕ್ ಸವಾರ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದು ನದಿಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ವೇಳೆ ಚಾಲಕ ವಾಹನ ಅಲ್ಲಿ ಬಿಟ್ಟು ಪರಾರಿಯಾಗಿದ್ದು, ಹುಣಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












