Subscribe to Updates
Get the latest creative news from FooBar about art, design and business.
Author: kannadanewsnow05
ಕೊಪ್ಪಳ : ಇತ್ತೀಚೆಗೆ ಬೆಂಗಳೂರಿನಲ್ಲಿ ನೀರು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಕೊಪ್ಪಳದಲ್ಲಿ ಕೂಡ ಅಂತದ್ದೆ ಘಟನೆ ನಡೆದಿದ್ದು, ಶಾಲೆಗೆ ಹೊರಟಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಸ್ಥಳದಲ್ಲೇ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ನಡೆದಿದೆ. ಮೃತ ಶಿಕ್ಷಕಿಯನ್ನು ಜಂಗಮರ ಕಲ್ಗುಡಿ ಗ್ರಾಮದ ಹೊಸಕೇರಿಯ ಹರಿತಾ ಶ್ರೀನಿವಾಸ (26) ಎಂದು ಗುರುತಿಸಲಾಗಿದೆ. ಶಾಲೆಯ ವಾಹನ ದಿನನಿತ್ಯ ಗ್ರಾಮಕ್ಕೆ ಬಂದು ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿತ್ತು. ಎಂದಿನಂತೆ ಶಾಲೆಗೆ ಹೋಗಲು ತಮ್ಮ ಮನೆಯಿಂದ ಬೈಕ್ನಲ್ಲಿ ಶಿಕ್ಷಕಿ ಹರಿತಾ ಬಂದಿದ್ದಾರೆ. ಆದರೆ, ರಾತ್ರಿ ಇಡೀ ಸುರಿದ ಮಳೆಯಿಂದಾಗಿ ವಿದ್ಯುತ್ ತಂತಿ ಶಿಕ್ಷಕಿಯ ಮೇಲೆ ಬಿದ್ದಿದ್ದು, ಶಿಕ್ಷಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಶಿಕ್ಷಕಿ ವಿದ್ಯಾನಗರದಲ್ಲಿರುವ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.
ಉತ್ತರಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ಕಾರಿನಲ್ಲಿ 1 ಕೋಟಿ ನಗದು ಹಣ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಕರಣದ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿ ಆಗಲು ಯತ್ನಿಸಿದ್ದಾರೆ ಈ ವೇಳೆ ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಹೌದು ಜನೆವರಿ 29 ರಂದು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ರಾಮನಗುಳಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಕ್ರೇಟಾ ಕಾರಿನಲ್ಲಿ 1 ಕೋಟಿ ರೂ.ನಗದು ಪತ್ತೆಯಾಗಿತ್ತು. ಈ ಒಂದು ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ಮಂಗಳೂರು ಮೂಲದ ತಲ್ಲತ್ತ ಹಾಗು ನವಫಾಲ್ ಗೆ ಇದೀಗ ಗುಂಡೇಟು ತಗುಲಿದೆ. ಆರೋಪಿಗಳನ್ನು ಅಂಕೋಲಾ ಕಡೆ ಕರೆದೊಯ್ಯುವಾಗ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾರೆ. ಆತ್ಮ ರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ನಾಲ್ವರು…
ಬೆಂಗಳೂರು : ಬೈಕ್ ನಲ್ಲಿ ಮೊಬೈಲ್ ನಲ್ಲಿ ಮಾತನಾಡುವುದೇ ದೊಡ್ಡ ತಪ್ಪು ಅಂತದ್ರಲ್ಲಿ ಇಲ್ಲೊಬ್ಬ ಆಸಾಮಿ ಐಪಿಎಲ್ ಪಂದ್ಯ ವೀಕ್ಷಣೆ ಮಾಡಿದ್ದಾನೆ. ಈ ಕುರಿತು ಟ್ವಿಟರ್ ನಲ್ಲಿ ವಿಡಿಯೋ ಸಮೇತ ಬೆಂಗಳೂರಿನ ಶಿವಾಜಿನಗರ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಬೈಕ್ ಸವಾರನನ್ನು ಠಾಣೆಗೆ ಕರೆಸಿ, ದಂಡ ವಿಧಿಸಿ ತಿಳುವಳಿಕೆ ಹೇಳಿ ಕಳುಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೈಕ್ ಓಡಿಸುತ್ತಾ ಮೊಬೈಲ್ ನಲ್ಲಿ ಐಪಿಎಲ್ ಪಂದ್ಯ ವೀಕ್ಷಿಸಿದವನಿಗೆ ದಂಡ ವಿಧಿಸಲಾಗಿದೆ. ಬೆಂಗಳೂರಿನ ಶಿವಾಜಿನಗರದ ಬ್ರಾಡ್ ರಸ್ತೆಯಲ್ಲಿ ಬೈಕ್ ಓಡಿಸುತ್ತಾ ಪಂದ್ಯ ವೀಕ್ಷಣೆ ಮಾಡುತ್ತಿದ್ದ. ಎಲೆಕ್ಟ್ರಿಕ್ ಬೈಕ್ ಸವಾರನಿಗೆ ಸಂಚಾರಿ ಪೊಲೀಸರು ಇದೀಗ ದಂಡ ವಿಧಿಸಿದ್ದಾರೆ.ಬೈಕ್ ಓಡಿಸುವಾಗ ಐಪಿಎಲ್ ವೀಕ್ಷಿಸುತ್ತಿದ್ದವರ ಬಗ್ಗೆ ವಿಡಿಯೋ ಸಹಿತ ದೂರು ನೀಡಲಾಗಿತ್ತು. ಈ ಕುರಿತು ಟ್ವಿಟರ್ ನಲ್ಲಿ ವಿಡಿಯೋ ಸಹಿತ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಲಾಗಿತ್ತು. ಹಾಗಾಗಿ ವಿಡಿಯೋ ಆಧಾರದಲ್ಲಿ ಟಿವಿ ಬೈಕ್ ಸವಾರ ಪ್ರಶಾಂತ್ ನನ್ನು ಕರೆಸಿ ಸಂಚಾರಿ…
ಹಾವೇರಿ : ಹಾಲಿನ ದರ ಇಳಿಕೆಯನ್ನು ಖಂಡಿಸಿ ಹಾವೇಮುಲ್ ಮುಂದೆ ರೈತರು ಇದೀಗ ಪ್ರತಿಭಟನೆ ನಡೆಸುತ್ತಿದ್ದಾರೆ. ಹಾವೇರಿ ಹಾಲು ಒಕ್ಕೂಟದ ಕಚೇರಿ ಬಾಗಿಲು ಹಾಕಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಚೇರಿಯಲ್ಲಿದ್ದ ಸಿಬ್ಬಂದಿಗಳನ್ನು ಹೊರಹಾಕಿ ಹಾಲು ಉತ್ಪಾದಕರಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರತಿ ಲೀಟರ್ ಹಾಲಿಗೆ 3.50 ಇಳಿಸಿದ ಹಾವೇರಿ ಹಾಲು ಒಕ್ಕೂಟವು ಈ ಒಂದು ಒಕ್ಕೂಟದ ನಿರ್ಧಾರಕ್ಕೆ ಹಾಲು ಉತ್ಪಾದಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದುವರೆ ತಿಂಗಳ ಹಿಂದೆ ಕೂಡ 1.50 ರೂಪಾಯಿಯನ್ನು ಹಾಲು ಒಕ್ಕೂಟ ಇಳಿಕೆ ಮಾಡಿತ್ತು. ನಂದಿನಿ ಹಾಲಿನ ದರ ಏಪ್ರಿಲ್ 1ರಿಂದ ಲೀಟರಿಗೆ 4 ರೂಪಾಯಿ ಹೆಚ್ಚಿಸಿರುವ ಸರ್ಕಾರ, ಹಾವೇರಿ ಹಾಲು ಒಕ್ಕೂಟ ನಷ್ಟದಲ್ಲಿದೆ ಅಂತ ನೆಪ ಹೇಳಿ ಹಾಲಿನ ದರ ಇಳಿಕೆ ಮಾಡಿದ್ದಾರೆ. ಹೀಗಾಗಿ ಹಾಲು ಉತ್ಪಾದಕರು ದರ ಇಳಿಕೆ ಮಾಡಿದನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಸುಮಾರು 50ಕ್ಕೂ ಹೆಚ್ಚು ರೈತರು ಹಾಲು ಒಕ್ಕೂಟದ ಕಚೇರಿ ಬಳಿ ಧರಣಿ ನಡೆಸುತ್ತಿದ್ದಾರೆ.
ಬೆಂಗಳೂರು : ಏಪ್ರಿಲ್ 1 ರಿಂದ ರಾಜ್ಯ ಸರ್ಕಾರ ರಾಜ್ಯದಲ್ಲಿ ನಂದಿನಿ ಹಾಲಿನ ದರ, ವಿದ್ಯುತ್ ದರ, ಡಿಸೈಲ್ ದರ ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಇದರಿಂದ ಸಹಜವಾಗಿ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇದಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿ ರಾಜ್ಯ ಸರ್ಕಾರಗಳು ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ತೆರಿಗೆ ಏರಿಕೆ ಮಾಡುತ್ತವೆ ಎಂದು ಸಮರ್ಥನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಗಳು ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ತೆರಿಗೆ ಏರಿಕೆ ಮಾಡುತ್ತವೆ. ಡೀಸೆಲ್ ಮತ್ತು ಪೆಟ್ರೋಲ್ ಬೆಲೆ 2 ರೂಗೆ ಏರಿಕೆ ಸ್ವಾಭಾವಿಕ. ಕೇಂದ್ರ ಸರ್ಕಾರ ತೆರಿಗೆ ನಿಯಂತ್ರಿಸಿದರೆ ರಾಜ್ಯಗಳಿಗೆ ಅನುಕೂಲವಾಗುತ್ತದೆ.ಬೆಲೆ ಏರಿಕೆ ಕೇಂದ್ರ ಸರ್ಕಾರದ ನೀತಿಗಳಿಂದ ಆಗುತ್ತದೆ. ತೆರಿಗೆ ವಿಚಾರದಲ್ಲಿ ಕೇಂದ್ರವೇ ಹೆಚ್ಚು ನಿಯಂತ್ರಣ ಹೊಂದಿದೆ ಎಂದು ತಿಳಿಸಿದರು.
ಹಾವೇರಿ : ಹಾವೇರಿಯಲ್ಲಿ ನಾಡ ಬಾಂಬ್ ಸ್ಫೋಟಗೊಂಡು ನಾಯಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಜಲ್ಲಾಪುರ ಗ್ರಾಮದಲ್ಲಿ ನಡೆದಿದೆ. ನಾಡಬಾಂಬ್ ಸ್ಪೋಟಗೊಂಡು ನಾಯಿ ಸಾವನಪ್ಪಿದೆ. ಗ್ರಾಮದ ಮಲ್ಲಿಕಾರ್ಜುನ ಗೌಡಗೆ ಸೇರಿದ ಜಮೀನಿನಲ್ಲಿ ನಾಡ ಬಾಂಬ್ ಪತ್ತೆಯಾಗಿದೆ. ಪ್ರಾಣಿಗಳನ್ನು ಬೇಟೆ ಆಡುವ ಉದ್ದೇಶದಿಂದ ನಾಡ ಬಾಂಬ್ ಇಟ್ಟಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಒಟ್ಟು 3 ನಾಡ ಬಾಂಬ್ ಗಳನ್ನು ದುಷ್ಕರ್ಮಿಗಳು ಪ್ರಾಣಿಗಳ ಬೇಟೆಗೆ ಇಟ್ಟಿದ್ದರು ಎನ್ನಲಾಗಿದೆ. ಒಂದು ನಾಡ ಬಾಂಬ್ ನಾಯಿ ಕಚ್ಚಿದ್ದರಿಂದ ಸ್ಫೋಟಗೊಂಡು ನಾಯಿ ಸಾವನಪ್ಪಿದೆ. ಇನ್ನುಳಿದ ಎರಡು ಜೀವಂತ ನಾಡ ಬಾಂಬ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಘಟನೆ ಕುರಿತಂತೆ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಂಗಳೂರು : ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನು ಈ ಒಂದು ಅತ್ಯಾಚಾರ ಪ್ರಕರಣದಿಂದ ಕೈಬಿಡಲು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಅತ್ಯಾಚಾರ ಪ್ರಕರಣದಿಂದ ಕೈ ಬಿಡಲು ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿ ಆದೇಶ ಹೊರಡಿಸಿದೆ. ಹೌದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಅತ್ಯಾಚಾರ ಪ್ರಕರಣದಿಂದ ಕೈಬಿಡಲು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಕೋರ್ಟ್ ವಿಚಾರಣೆ ನಡೆಸಿದ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೆ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಬೆಂಗಳೂರು : ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಆಗಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.ಯಡಿಯೂರಪ್ಪ ಕುಟುಂಬ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಕ್ತಿ ಆಗೋವರೆಗೂ ನಾನು ಬಿಜೆಪಿಗೆ ವಾಪಸ್ ಆಗಲ್ಲ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಪಥ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ರನ್ನ ವಾಪಸ್ ಬಿಜೆಪಿಗೆ ತರಲು ರಮೇಶ್ ಜಾರಕಿಹೊಳಿ ಫಡ್ನವಿಸ್ ಜೊತೆ ಮಾತುಕತೆ ಮಾಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ಕೃಷ್ಣ ಮತ್ತು ಭೀಮಾ ನದಿಗೆ ನೀರು ಬಿಡುವಂತೆ ಫಡ್ನವಿಸ್ ಭೇಟಿಯಾಗಿದ್ದು. ನನ್ನ ಸಲುವಾಗಿ ಚರ್ಚೆ ಮಾಡೋದು ಅವಶ್ಯಕತೆ ಇಲ್ಲ. ಯಾಕೆಂದರೆ 6 ವರ್ಷ ಹೊರಗೆ ಹಾಕಿದ್ದಾರೆ. ಯಡಿಯೂರಪ್ಪ ಕುಟುಂಬ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಕ್ತಿಯಾಗುವವರೆಗೆ ನಾನು ಬಿಜೆಪಿಗೆ ಹೋಗಲ್ಲ ಎಂದರು. ಇನ್ನು ಹೊಸ ಪಕ್ಷ ಕಟ್ಟುವ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ್ ಅವರು,…
ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನಟಿ ರನ್ಯಾ ರಾವ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂರನೇ ಆರೋಪಿಯನ್ನು ಅರೆಸ್ಟ್ ಮಾಡಿದ್ದು ಡಿ ಆರ್ ಐ ಅಧಿಕಾರಿಗಳು ಮೂರನೇ ಆರೋಪಿಯಾಗಿರುವ ಬಳ್ಳಾರಿ ಮೂಲದ ಸಾಹಿಲ್ ನನ್ನು ವಿಚಾರಣೆಗೆ ಒಳಪಡಿಸಿದಾಗ ಸ್ಪೋಟಕವಾದ ಮಾಹಿತಿ ಬಾಯ್ಬಿಟ್ಟಿದ್ದಾನೆ. ಹೌದು ಡಿ ಆರ್ ಐ ಎದುರು ಮೂರನೇ ಆರೋಪಿ ಸಾಹಿಲ್ ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾನೆ. ಪ್ರಕರಣದ ಮೂರನೇ ಆರೋಪಿ ಆಗಿರುವ ಸಾಹಿಲ್ ರನ್ಯಾರಾವ್ ಕಳೆದ ಮೂರೇ ಮೂರು ತಿಂಗಳಲ್ಲಿ ದುಬೈ ನಿಂದ 49.6 ಕೆಜಿ ಚಿನ್ನ ತಂದಿದ್ದಾಳೆ ಎಂದು ಡಿ ಆರ್ ಐ ಅಧಿಕಾರಿಗಳ ಮುಂದೆ ಬಾಯಿ ಬಿಟ್ಟಿದ್ದಾನೆ. ಮೂರೇ ತಿಂಗಳಲ್ಲಿ ಬರೋಬ್ಬರಿ 49.6 ಕೆ.ಜಿನ ಸಾಗಾಟ ಮಾಡಲಾಗಿದ್ದು ಬೆಂಗಳೂರಿಗೆ ರನ್ಯಾರಾವ್ 49.6 ಕೆಜಿ ಚಿನ್ನ ಸಾಗಿಸಿದ್ದಾಳೆ. ನವೆಂಬರ್ ನಿಂದಲೇ 49.6 ಕೆಜಿ ಚಿನ್ನ ಸಾಧಿಸಿದ್ದಾಳೆ ದುಬೈ ನಿಂದ ಚಿನ್ನ ತಂದು ಕನ್ಯಾ ರಾವ್…
ಬೆಂಗಳೂರು : ಒಂದುವರೆ ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಎಂ ಎನ್ ಕುಮಾರ್ ಅವರನ್ನು ಪಿರಿಯಾಪಟ್ಟಣದ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಚೆಕ್ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ವುಡ್ನ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.1.25 ಕೋಟಿ ರೂ. ವಂಚಿಸಿರುವ ವಿಚಾರವಾಗಿ ಕೇಸ್ ದಾಖಲಾಗಿದ್ದು, ಸದ್ಯ ಎಂಎನ್ ಕುಮಾರ್ ಅವರನ್ನು ಮೆಡಿಕಲ್ ಟೆಸ್ಟ್ಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ. ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಎಂ.ಎನ್ ಕುಮಾರ್ ಅವರನ್ನು ಕೋರ್ಟ್ ಸೂಚನೆ ಮೇರೆಗೆ ಬುಧವಾರ ತಡರಾತ್ರಿ 2ಗಂಟೆ ಸುಮಾರಿಗೆ ಹಾಸನದಲ್ಲಿ ಬಂಧಿಸಿದ್ದಾರೆ.













