Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರಿಗೆ ಇಂದು ಅತ್ಯಂತ ನಿರ್ಣಾಯಕ ದಿನವಾಗಿದೆ. ಕಳೆದ ಹಲವು ತಿಂಗಳುಗಳಿಂದ ಜೈಲಿನಲ್ಲಿರುವ ದರ್ಶನ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದ್ದು, ಸ್ಯಾಂಡಲ್ವುಡ್ ಸುಲ್ತಾನನ ಭವಿಷ್ಯ ಇಂದು ನಿರ್ಧಾರವಾಗಲಿದೆ. ವಿಚಾರಣಾ ಪೀಠ ಮತ್ತು ವರದಿ ಸಲ್ಲಿಕೆ: ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಲಿದೆ. ಈ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಿಂದ ಸಮಗ್ರ ವರದಿಯನ್ನು ಕೇಳಿತ್ತು. ಪ್ರಕರಣದ ತನಿಖೆ ಮತ್ತು ವಿಚಾರಣೆಯ ಸದ್ಯದ ಸ್ಥಿತಿಗತಿಯ ಬಗ್ಗೆ ನ್ಯಾಯಾಲಯವು ಮಾಹಿತಿ ಬಯಸಿದ್ದು, ಇಂದು ಆ ವರದಿಯ ಆಧಾರದ ಮೇಲೆ ಚರ್ಚೆಗಳು ನಡೆಯಲಿವೆ. ಕೋರ್ಟ್ ಕೇಳಿರುವ ಪ್ರಮುಖ ಅಂಶಗಳು: ಜಾಮೀನು ನೀಡುವ ಮುನ್ನ ಸುಪ್ರೀಂ ಕೋರ್ಟ್ ಕೆಲವು ತಾಂತ್ರಿಕ ವಿವರಗಳನ್ನು ಪರಿಶೀಲಿಸುತ್ತಿದೆ. ಈವರೆಗೂ ಎಷ್ಟು ಸಾಕ್ಷಿಗಳ…
ಬೆಂಗಳೂರು: ದೇಶಾದ್ಯಂತ ಇಂಧನ ದರಗಳು ಮತ್ತೆ ಗಗನಕ್ಕೇರುತ್ತಿರುವುದನ್ನು ಖಂಡಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ಆಡಳಿತ ವೈಖರಿಯೇ ಈ ಬೆಲೆ ಏರಿಕೆಗೆ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯು ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯರಿಗೆ ನೀಡಿದ ‘ಕೊಡುಗೆ’ ಎಂದು ಲೇವಡಿ ಮಾಡಿದರು. ಬೆಲೆ ಏರಿಕೆಯು ‘ಮೋದಿ ಕೊಡುಗೆ’ ಕೇಂದ್ರ ಸರ್ಕಾರವು ಸಾಮಾನ್ಯ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಡಿ.ಕೆ. ಶಿವಕುಮಾರ್, ಇಂಧನ ದರ ಏರಿಕೆಯಿಂದಾಗಿ ದೇಶದ ಆರ್ಥಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದರು. “ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನೇ ದಿನೇ ಏರುತ್ತಿರುವುದು ಪ್ರಧಾನಿ ಮೋದಿ ಅವರ ಆಡಳಿತದ ಫಲವಾಗಿದೆ. ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ನೆರವಾಗುವ ಬದಲು ಕೇಂದ್ರ ಸರ್ಕಾರ ತೆರಿಗೆ ವಸೂಲಿಯಲ್ಲಿ ಮಗ್ನವಾಗಿದೆ,” ಎಂದು ಅವರು ವಾಗ್ದಾಳಿ ನಡೆಸಿದರು. ನೆರೆರಾಷ್ಟ್ರಗಳ ಸಂಬಂಧ ಮತ್ತು ಆರ್ಥಿಕ ಸ್ಥಿತಿ ಭಾರತದ ವಿದೇಶಾಂಗ ನೀತಿಯ…
ಬೆಂಗಳೂರು : ದೇಶದ ಜನತೆಗೆ ಇಂಧನ ಬೆಲೆ ಏರಿಕೆಯ ಬಿಸಿ ತಟ್ಟುತ್ತಲೇ ಇದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾದ ಬೆನ್ನಲ್ಲೇ ಈಗ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (CNG) ಬೆಲೆಯೂ ಗಗನಕ್ಕೇರಿದೆ. ಪ್ರತಿ ಕೆಜಿ ಸಿಎನ್ಜಿ ದರದಲ್ಲಿ 2 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಪರಿಷ್ಕೃತ ದರಗಳು ಇಂದು ಮುಂಜಾನೆಯಿಂದಲೇ ಜಾರಿಗೆ ಬಂದಿವೆ. ಈ ದಿಢೀರ್ ಏರಿಕೆಯು ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದೆ. ಬೆಂಗಳೂರಿನಲ್ಲಿ ಈ ಪರಿಷ್ಕೃತ ದರ ಜಾರಿಯಾದ ನಂತರ ಪ್ರತಿ ಕೆಜಿ ಸಿಎನ್ಜಿ ಬೆಲೆ 93 ರೂಪಾಯಿಗೆ ತಲುಪಿದೆ. ವಿವಿಧ ನಗರಗಳಲ್ಲಿ ಮತ್ತು ವಿತರಕರು ಒದಗಿಸುವ ಸೇವೆಗೆ ಅನುಗುಣವಾಗಿ ದರದಲ್ಲಿ 30 ಪೈಸೆಯಿಂದ 1 ರೂಪಾಯಿವರೆಗೆ ವ್ಯತ್ಯಾಸವಿರಬಹುದು ಎಂದು ಅಂದಾಜಿಸಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಸಿಎನ್ಜಿ ಬೆಲೆ ಏರಿಕೆ ಮತ್ತೊಂದು ಹೊಡೆತ ನೀಡಿದಂತಾಗಿದೆ. ಸಿಎನ್ಜಿ ದರ ಏರಿಕೆಯು ಪ್ರಮುಖವಾಗಿ ಸಾರಿಗೆ ಕ್ಷೇತ್ರದ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ. ನಗರ ಪ್ರದೇಶಗಳಲ್ಲಿ ವೆಚ್ಚ ಕಡಿಮೆ…
ವಿಜಯಪುರ : ವಿಜಯಪುರದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಭಾರಿ ಗಾಳಿ ಸಹಿತ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಪತಿ – ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಗುರುವಾರ ರಾತ್ರಿ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ.ಮೋರಟಗಿ ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ ಹಾಗೂ ಕೀರ್ತಿ ಬಡಿಗೇರ ಮೃತರು ಎಂದು ತಿಳಿದುಬಂದಿದೆ. ತಮ್ಮ ಮನೆಯ ದುರಸ್ತಿ ಮಾಡುತ್ತಿದ್ದ ಕಾರಣ ಕುಟುಂಬವು ಹಳೆಯ ಮನೆಯಲ್ಲಿ ಬಾಡಿಗೆಗೆ ಇತ್ತು. ನಿನ್ನೆ ರಾತ್ರಿ ಭಾರಿ ಗಾಳಿ ಸಹಿತ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾಗಿದ್ದಾರೆ. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಅಗ್ನಿಶಾಮಕ ದಳ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿದ್ದು, ಮಣ್ಣಿನಲ್ಲಿ ಸಿಲುಕಿರುವ ಮೃತರ ಶವಗಳನ್ನು ಹೊರ ತೆಗೆಯುತ್ತಿದೆ. ಸಿಂದಗಿ ಪೊಲೀಸ್…
ನವದೆಹಲಿ: ಕಳೆದ ಮೇ 3ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್ ಯುಜಿ-2026’ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ನಿರ್ಧಾರ ಕೈಗೊಂಡಿದೆ. ಹಳೆಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಬರುವ ಜೂನ್ 21 ರಂದು ದೇಶಾದ್ಯಂತ ಮರು ಪರೀಕ್ಷೆ ನಡೆಸಲು ಎನ್ಟಿಎ ದಿನಾಂಕ ನಿಗದಿಪಡಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಕ್ರಮ: ಮೇ ಮೊದಲ ವಾರದಲ್ಲಿ ನಡೆದಿದ್ದ ಈ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು ಎನ್ನಲಾಗಿದ್ದು, ಇದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಆತಂಕ ಮೂಡಿಸಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ಎನ್ಟಿಎ, ಪರೀಕ್ಷೆಯ ಪಾರದರ್ಶಕತೆಯನ್ನು ಕಾಪಾಡುವ ದೃಷ್ಟಿಯಿಂದ ಈ ಹಿಂದಿನ ಪರೀಕ್ಷೆಯನ್ನು ಅಸಿಂಧುಗೊಳಿಸಿ ಆದೇಶ ಹೊರಡಿಸಿವೆ. ಸಿಬಿಐ ಹೆಗಲಿಗೆ ತನಿಖೆಯ ಜವಾಬ್ದಾರಿ: ಈ ಹಗರಣದ ಹಿಂದೆ ದೊಡ್ಡ ಜಾಲವಿರುವ ಶಂಕೆಯಿದ್ದು, ಪ್ರಕರಣದ ಆಳವಾದ…
ನವದೆಹಲಿ: ದೇಶದಲ್ಲಿ ತೈಲ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ್ದ ಕರೆಗೆ ದೆಹಲಿ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ. ತೈಲ ಉಳಿತಾಯ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ದೆಹಲಿ ಸರ್ಕಾರವು ತನ್ನ ನೌಕರರಿಗೆ ವಾರದಲ್ಲಿ ಎರಡು ದಿನ ‘ವರ್ಕ್ ಫ್ರಮ್ ಹೋಮ್’ (ಮನೆಯಿಂದಲೇ ಕೆಲಸ) ಮಾಡಲು ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕ್ರಮದಿಂದ ಇಂಧನ ಬಳಕೆಯಲ್ಲಿ ಗಣನೀಯ ಇಳಿಕೆಯಾಗುವ ನಿರೀಕ್ಷೆಯಿದೆ. ತೈಲ ಉಳಿತಾಯದ ಈ ಅಭಿಯಾನವನ್ನು ಮತ್ತಷ್ಟು ಬಲಪಡಿಸಲು ದೆಹಲಿ ಸರ್ಕಾರವು ಸಭೆಗಳ ವಿಚಾರದಲ್ಲೂ ಮಹತ್ವದ ಬದಲಾವಣೆ ತಂದಿದೆ. ಇನ್ಮುಂದೆ ಸರ್ಕಾರಿ ಇಲಾಖೆಗಳಲ್ಲಿ ನಡೆಯುವ ಒಟ್ಟು ಸಭೆಗಳ ಪೈಕಿ ಶೇಕಡಾ 50 ರಷ್ಟು ಸಭೆಗಳನ್ನು ಆನ್ಲೈನ್ ಮೂಲಕವೇ ನಡೆಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಅನಗತ್ಯ ಓಡಾಟಕ್ಕೆ ಬ್ರೇಕ್ ಬೀಳಲಿದ್ದು, ಇಂಧನ ವ್ಯಯವಾಗುವುದನ್ನು ತಡೆಯಬಹುದಾಗಿದೆ. ಕೇವಲ ಸಾಮಾನ್ಯ ನೌಕರರಿಗೆ ಮಾತ್ರವಲ್ಲದೆ, ಸಚಿವರು ಮತ್ತು ಜನಪ್ರತಿನಿಧಿಗಳಿಗೂ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಅದರಂತೆ, ಯಾವೊಬ್ಬ…
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಗ್ರಾಹಕರ ನಿದ್ದೆಗೆಡಿಸಿದೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಚಿನ್ನ ಖರೀದಿ ಮಾಡಬೇಡಿ ಮತ್ತು ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡಿ ಎಂದು ನೀಡಿದ್ದ ಕರೆಯ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ದಿಢೀರ್ ಬದಲಾವಣೆಗಳಾಗಿವೆ. ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಏರಿಕೆ ಕಂಡುಬಂದ ಬೆನ್ನಲ್ಲೇ, ಈಗ ಅಕ್ಕಿ ಮತ್ತು ಅಡುಗೆ ಎಣ್ಣೆಯ ದರವೂ ಗಗನಕ್ಕೇರುತ್ತಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅಕ್ಕಿ ದರದಲ್ಲಿ ಭಾರಿ ಏರಿಕೆ: ಮಾರುಕಟ್ಟೆಯಲ್ಲಿ ಅಕ್ಕಿಯ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹೋಲ್ ಸೆಲ್ ಮತ್ತು ರಿಟೇಲ್ ಎರಡೂ ವಿಭಾಗಗಳಲ್ಲಿ ಗ್ರಾಹಕರಿಗೆ ಬಿಸಿ ತಟ್ಟಿದೆ. ಸಗಟು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಅಕ್ಕಿಗೆ ಸುಮಾರು 4 ರಿಂದ 5 ರೂಪಾಯಿ ಹೆಚ್ಚಳವಾಗಿದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಇದು ಬರೋಬ್ಬರಿ 8 ರಿಂದ 10 ರೂಪಾಯಿ ತನಕ ಏರಿಕೆಯಾಗುವ ಸಾಧ್ಯತೆ ಇದೆ. ಈ ಹಿಂದೆ ಇದ್ದ ದರಕ್ಕೆ ಹೋಲಿಸಿದರೆ, 25 ಕೆಜಿಯ ಅಕ್ಕಿ ಚೀಲದ ದರದಲ್ಲಿ…
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದ ಬಳಿ ಭದ್ರಾ ಬಲದಂಡೆ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘೋರ ಘಟನೆ ಸಂಭವಿಸಿದೆ. ಈ ದುರ್ಘಟನೆಯು ವಿದ್ಯಾರ್ಥಿಗಳ ಕುಟುಂಬಸ್ಥರು ಹಾಗೂ ಕಾಲೇಜು ವಲಯದಲ್ಲಿ ಶೋಕದ ಛಾಯೆ ಮೂಡಿಸಿದೆ. ಮೃತರ ವಿವರ: ಮೃತಪಟ್ಟ ವಿದ್ಯಾರ್ಥಿಗಳನ್ನು ವಿವೇಕ್ ಮತ್ತು ಮಾನಸ ಎಂದು ಗುರುತಿಸಲಾಗಿದೆ. ಇವರಿಬ್ಬರೂ ದಾವಣಗೆರೆಯ ಹೆಸರಾಂತ BIET (ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ) ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಗೆಳೆಯರೊಂದಿಗೆ ವಿಹಾರಕ್ಕೆಂದು ತೆರಳಿದ್ದ ಈ ವಿದ್ಯಾರ್ಥಿಗಳು ವಿಧಿಯ ಆಟಕ್ಕೆ ಬಲಿಯಾಗಿದ್ದಾರೆ. ಘಟನೆಯ ಹಿನ್ನೆಲೆ: ಮಾಹಿತಿಯ ಪ್ರಕಾರ, BIET ಕಾಲೇಜಿನ ಸುಮಾರು 10 ವಿದ್ಯಾರ್ಥಿಗಳ ತಂಡವು ಮರಬನಹಳ್ಳಿ ಸಮೀಪವಿರುವ ಭದ್ರಾ ಬಲದಂಡೆ ನಾಲೆ ವೀಕ್ಷಿಸಲು ಹಾಗೂ ವಿಹಾರಕ್ಕಾಗಿ ತೆರಳಿದ್ದರು. ಈ ವೇಳೆ ನಾಲೆಯ ನೀರಿನ ಸೆಳೆತವನ್ನು ಅರಿಯದೆ ಈಜಲು ಮುಂದಾದಾಗ ವಿವೇಕ್ ಮತ್ತು ಮಾನಸ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಉಳಿದ ವಿದ್ಯಾರ್ಥಿಗಳು ಸಹಾಯಕ್ಕಾಗಿ ಕೂಗಿಕೊಂಡರೂ ಯಾವುದೇ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಿಷ್ಟಾಚಾರದ ವೇಳೆ ತಮಗೆ ಕುಡಿಯಲು ನೀರು ನೀಡಿದ ಅಧಿಕಾರಿಯೊಬ್ಬರ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕಡು ಬಿಸಿಲಿನಲ್ಲಿ ಕಾಮಗಾರಿ ವೀಕ್ಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಕೇವಲ ನೀರು ತಂದಿದ್ದಕ್ಕೆ ಸಿಎಂ ಆಕ್ರೋಶ ಹೊರಹಾಕಿದ್ದಾರೆ. ಮೈಸೂರು ನಗರದಾದ್ಯಂತ ನಡೆಯುತ್ತಿರುವ ಪ್ರಮುಖ ರಸ್ತೆ ಹಾಗೂ ಮೂಲಸೌಕರ್ಯ ಕಾಮಗಾರಿಗಳ ಗುಣಮಟ್ಟ ಮತ್ತು ಪ್ರಗತಿಯನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಬಿರು ಬಿಸಿಲಿನಲ್ಲಿ ಸುತ್ತಾಡಿ ಸುಸ್ತಾಗಿದ್ದ ಮುಖ್ಯಮಂತ್ರಿಗಳಿಗೆ ಎಂಜಿನಿಯರ್ ಒಬ್ಬರು ಕುಡಿಯುವ ನೀರಿನ ಬಾಟಲಿಯನ್ನು ನೀಡಲು ಮುಂದಾದರು. ಈ ವೇಳೆ ಸಿಎಂ ಕಿಡಿಕಾರಿದ್ದಾರೆ. ನೀರು ನೀಡಲು ಬಂದ ಅಧಿಕಾರಿಯನ್ನು ಕಂಡು ಗರಂ ಆದ ಸಿದ್ದರಾಮಯ್ಯ, “ಏ ಜ್ಯೂಸ್ ಇಲ್ವೇನಯ್ಯ? ಏ ಇವನ್ಯಾವನೋ ಬಿಸಿಲಲ್ಲಿ ಎಳನೀರು ತರಬೇಕಲ್ವಾ?” ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದ್ದಾರೆ. ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ಸಿಎಂ, ಕೇವಲ ನೀರು ತಂದಿದ್ದಕ್ಕೆ ಅಧಿಕಾರಿಗಳ ಸಮಯಪ್ರಜ್ಞೆಯ ಬಗ್ಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರಿಗೆ ನಾಳೆ ಅತ್ಯಂತ ಮಹತ್ವದ ದಿನವಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಅವರ ಮುಂದಿನ ಭವಿಷ್ಯ ಹಾಗೂ ಜೈಲು ವಾಸದ ಅಂತ್ಯದ ಬಗ್ಗೆ ನಾಳೆ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಈ ಪ್ರಮುಖ ವಿಚಾರಣೆಯು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಲ್ಲಿ ನಡೆಯಲಿದೆ. ಈಗಾಗಲೇ ಹೈಕೋರ್ಟ್ನಲ್ಲಿ ಜಾಮೀನು ನಿರಾಕರಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ, ದರ್ಶನ್ ಪರ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ಈ ಬಾರಿ ಪ್ರಬಲ ವಾದ ಮಂಡಿಸಲು ಸಜ್ಜಾಗಿದ್ದಾರೆ. ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಿಂದ ಸಮಗ್ರ ವರದಿಯನ್ನು ಕೇಳಿತ್ತು. ಈ ವರದಿಯಲ್ಲಿ ಪ್ರಮುಖವಾಗಿ ಪ್ರಕರಣದ ಪ್ರಗತಿಯ ಬಗ್ಗೆ ಪ್ರಶ್ನಿಸಲಾಗಿತ್ತು. ಇದುವರೆಗೆ ಎಷ್ಟು ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ? ಇನ್ನೂ ಎಷ್ಟು ಸಾಕ್ಷಿಗಳು ಬಾಕಿ ಇದ್ದಾರೆ? ಮತ್ತು ಇಡೀ…













