Author: kannadanewsnow05

ತುಮಕೂರು : ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ 118ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಇಂದು ನೆರವೇರಲಿದೆ. ಗುರುವಿಗೆ ನುಡಿನಮನ ಸಲ್ಲಿಸಲು ಸಿದ್ಧಗಂಗಾ ಮಠ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಮೆಸೇಜ್ ಅವರು ಭಾಗವಹಿಸಲಿದ್ದು ಇಂದು ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಒಂದು ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಲಾಗಿತ್ತು. ಅವರು ಬೇರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಭಾಗವಹಿಸುತ್ತಿಲ್ಲ. ಅವರ ಬದಲಾಗಿ ರಾಜನಾಥ್ ಸಿಂಗ್ ಭಾಗವಹಿಸುತ್ತಿದ್ದಾರೆ.ಗುರುವಂದನೆ ಮತ್ತು ಜಯಂತಿ ಪ್ರಯುಕ್ತ ಇಂದು ಮುಂಜಾನೆಯಿಂದಲೇ ಮಠದಲ್ಲಿ ಧಾರ್ಮಿಕ ಚಟುವಟಿಕೆ ಆರಂಭವಾಗಲಿವೆ.ಗೋಸಲ ಸಿದ್ದೇಶ್ವರ ರಂಗಮಂದಿರದಲ್ಲಿ ಬೆಳಗ್ಗೆ 10:30 ಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಬಂದಿಳಿಯುವ ರಾಜನಾಥ ಸಿಂಗ್‌ ಮೊದಲಿಗೆ ಸ್ವಾಮೀಜಿ ಗದ್ದುಗೆಗೆ ಭೇಟಿ ನೀಡಿ ನಮಿಸಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮಠದ ಕಿರಿಯ ಸ್ವಾಮೀಜಿ ಸಿದ್ದೇಶ್ವರ ಶ್ರೀ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ…

Read More

ಬೆಂಗಳೂರು : ಇಂದಿನಿಂದ ಹಾಲು, ಮೊಸರು ವಿದ್ಯುತ್ ದರ ಹೆಚ್ಚಳವಾಗಲಿದ್ದು, ಜನತೆ ದರ ಹೆಚ್ಚಳದಿಂದ ತತ್ತರಿಸಿ ಹೋಗಿದ್ದಾರೆ. ಸಂಪುಟ ಸಭೆಯಲ್ಲಿ ನಿರ್ಧರಿಸಿದಂತೆ ಇಂದಿನಿಂದ ನಂದಿನಿ ಹಾಲಿನ ದರ 4 ರೂ ಏರಿಕೆ ಮಾಡಿ ಪರಿಷ್ಕೃತ ದರ ಜಾರಿಯಾಗಿದೆ. ಆದರೆ ಬೆಂಗಳೂರಿನ ಜನತೆಗೆ ತ್ರಿಬಲ್ ಶಾಕ್ ಎದುರಾಗಿದ್ದು, ಹಾಲು, ವಿದ್ಯುತ್ ಜೊತೆಗೆ ಇಂದಿನಿಂದ ಅವರು ಕಸಕ್ಕೂ ತೆರಿಗೆ ಕಟ್ಟಬೇಕು. ಹೌದು ಹಾಲು ಕರೆಂಟ್ ದರ ಏರಿಕೆ ಜೊತೆ ಕಸಕ್ಕೂ ತೆರಿಗೆ ಕಟ್ಟಬೇಕಾಗಿದೆ. ಇಂದಿನಿಂದ ಬಿಬಿಎಂಪಿ ಕಸ ಸಂಗ್ರಹಕ್ಕೂ ಸೆಸ್ ಹೇರಲಿದೆ. ಇಂದಿನಿಂದ ಮನೆ, ಅಂಗಡಿ ಮುಂಗಟ್ಟಿನ ಕಸಕ್ಕೂ ತೆರಿಗೆ ಕಟ್ಟಬೇಕು. ಅಂಗಡಿ ಮುಂಗಟ್ಟುಗಳಲ್ಲಿ ಪ್ರತಿ ಕೆಜಿ ಕಸಕ್ಕೆ 12 ರೂಪಾಯಿ ತೆರಿಗೆ ವಸೂಲಿ ಮಾಡಲಿದೆ.ಕಸದ ತೆರಿಗೆ ಮೂಲಕ 600 ಕೋಟಿ ರೂಪಾಯಿ ಆದಾಯದ ನಿರೀಕ್ಷೆ ಹೊಂದಲಾಗಿದೆ. ಪ್ರತಿ ತಿಂಗಳು ಕಸ ಸಂಗ್ರಹ ಮತ್ತು ವಿಲೇವಾರಿ ವೆಚ್ಚ ಅಂತ ಬಿಬಿಎಂಪಿ ಸೆಸ್ ಸಂಗ್ರಹಕ್ಕೆ ಮುಂದಾಗಿದೆ. ಆಸ್ತಿ ತೆರಿಗೆ ಜೊತೆಗೆ ಕಸದ ಸೆಸ್ ವಸೂಲಿ ಮಾಡಲಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಪೂರ್ವ ಮುಂಗಾರು ಮಲೆ ಆರ್ಭಟಿಸಲಿದೆ. ಬಿರುಗಾಳಿ, ಆಲಿಕಲ್ಲು ಸಹಿತ, ಗುಡುಗು ಮಿಂಚಿನೊಂದಿಗೆ ಕರಾವಳಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಮಳೆ ಆರ್ಭಟಿಸಲಿದೆ. ಏಪ್ರಿಲ್ 5 ರಿಂದ ಬೆಂಗಳೂರು ನಗರ ಸುತ್ತಮುತ್ತಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಲಿಕಲ್ಲು ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಕರಾವಳಿ ಕರ್ನಾಟಕ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮೈಸೂರು, ಮಡಿಕೇರಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆ, ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ…

Read More

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ದುಬಾರಿ ದುನಿಯಾ ಆರಂಭವಾಗಲಿದೆ. ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ 4 ರೂ.ಗೆ ಏರಿಕೆ ಮಾಡಿ ಅನುಮೋದನೆ ನೀಡಲಾಗಿತ್ತು. ಅದರ ಬೆನ್ನಲ್ಲಿ ಮೊಸರು, ವಿದ್ಯುತ್ ದರ ಹೆಚ್ಚಳವಾಗಿದೆ. ಹಾಗಾಗಿ ಇಂದಿನಿಂದ ಹೋಟೆಲ್ ಗಳಲ್ಲೂ ಸಹ ಟೀ ಕಾಫಿ ದರ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ಹಾಲು, ಮೊಸರಿನ ದರ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಹೋಟೆಲ್‌ಗಳಲ್ಲಿ ಚಹ, ಕಾಫಿ ಸೇರಿದಂತೆ ಹಾಲಿನ ಖಾದ್ಯ, ಸಿಹಿ ತಿನಿಸುಗಳ ಬೆಲೆಯಲ್ಲೂ ಏರಿಕೆಯಾಗಲಿದೆ. ಸದ್ಯ ನಗರದಲ್ಲಿ ಟೀ, ಕಾಫಿ ಬೆಲೆ 15- 20 ಇದೆ. ಇದನ್ನು ಎಷ್ಟರ ಪ್ರಮಾಣದಲ್ಲಿ ಏರಿಕೆ ಮಾಡಬಹುದು ಎಂಬ ಬಗ್ಗೆ ಬೆಂಗಳೂರು ಹೋಟೆಲ್‌ಗಳ ಸಂಘ, ಕರ್ನಾಟಕ ಹೋಟೆಲ್‌ಗಳ ಸಂಘಗಳು ಸಭೆ ಸೇರಿ ನಿರ್ಧರಿಸಲಿವೆ. ನಂದಿನಿ ಹಾಲಿನ ಬೆಲೆಯೂ ಲೀ.ಗೆ 4ರೂ. ಹೆಚ್ಚಳವಾಗುತ್ತಿದ್ದು, ಅದಕ್ಕೆ ಅನುಗುಣವಾಗಿ ಕಾಫಿ-ಟೀ ದರದಲ್ಲಿ ಶೇ.10-15ರಷ್ಟು ಹೆಚ್ಚಳವಾಗಲಿದೆ ಎಂದು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘದ ಗೌರವಾಧ್ಯಕ್ಷ…

Read More

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ದುಬಾರಿ ದುನಿಯಾ ಆರಂಭವಾಗಲಿದೆ. ಏಕೆಂದರೆ ಹಾಲು, ಮೊಸರು, ವಿದ್ಯುತ್ ಸೇರಿದಂತೆ ಸರ್ಕಾರ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದೆ. ಅಲ್ಲದೇ ಟೋಲ್ ಗಳಲ್ಲಿ ಶುಲ್ಕ ಹೆಚ್ಚಿಸಿ ಕೇಂದ್ರ ಸರ್ಕಾರ ಕೂಡ ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಿದೆ. ರಾಜ್ಯದ 66 ಟೋಲ್‌ ಪ್ಲಾಜಾಗಳಲ್ಲಿ ಇಂದಿನಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಬೆಲೆ ಏರಿಕೆ ಹಾಗೂ ವಾರ್ಷಿಕ ಹಣದುಬ್ಬರ ಆಧರಿಸಿ ಟೋಲ್‌ ದರ ಹೆಚ್ಚಿಸಲಾಗಿದ್ದು, ರಾಜ್ಯದ 66 ಟೋಲ್‌ ಪ್ಲಾಜಾಗಳಲ್ಲಿ ಮಂಗಳವಾರದಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಟೋಲ್‌ ಗುತ್ತಿಗೆ ಅವಧಿ ಆಧರಿಸಿ ದರಗಳು ಬದಲಾಗಲಿದ್ದು, ಕನಿಷ್ಠ ಶೇಕಡಾ 3 ರಷ್ಟು ಮತ್ತು ಗರಿಷ್ಠ ಶೇ.5 ರಷ್ಟು ಹೆಚ್ಚಳ-ವಾಗಲಿದೆ. ಈ ಹೆಚ್ಚುವರಿ ಶುಲ್ಕವನ್ನು ಗ್ರಾಹಕರಿಗೆ ವರ್ಗಾಯಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳ ನಿರ್ಣಯ ಮತ್ತು ಸಂಗ್ರಹ) ನಿಯಮ-ಗಳು-2008ರ ಪ್ರಕಾರ ಸಗಟು ಬೆಲೆ ಸೂಚ್ಯಂಕದ ಆಧಾರದಲ್ಲಿ ಟೋಲ್‌ ಶುಲ್ಕ ಹೆಚ್ಚಿಸಲಾಗಿದೆ. ಈ ಹೆಚ್ಚುವರಿ…

Read More

ಬೆಂಗಳೂರು : ರಾಜ್ಯದಲ್ಲಿ ಸಚಿವ ಕೆ.ಎನ್ ರಾಜಣ್ಣ ಮೇಲೆ ಹನಿಟ್ರ್ಯಾಪ್ ಗೆ ಯತ್ನಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆದರೆ ಹನಿಟ್ರ್ಯಾಪ್ ಬದಲಾಗಿ ಕೊಲೆಗೆ ಸಂಚು ರೂಪಿಸಿದ್ದರು ಎನ್ನುವ ಆಡಿಯೋ ಇದೀಗ ಸೋರಿಕೆಯಾಗಿದೆ. ಹತ್ಯೆ ಸುಪಾರಿಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ರಾಜೇಂದ್ರ ಅವರ ಭೇಟಿಗೆ ಯತ್ನಿಸಿದ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ, ರಾಜೇಂದ್ರ ಅವರ ಸುಪಾರಿಗೆ ಸಂಬಂಧಿಸಿದಂತೆ 18 ನಿಮಿಷಗಳ ಟೆಲಿಫೋನ್ ಸಂಭಾಷಣೆಯೊಂದು ಲೀಕ್ ಆಗಿತ್ತು. ಅತ್ತ, ರಾಜೇಂದ್ರ ಅವರು ತಮಗೆ ಸಿಕ್ಕಿರುವ ಕೆಲವು ಸಾಕ್ಷ್ಯಾಧಾರಗಳನ್ನು ಸೇರಿಸಿಕೊಂಡು ತುಮಕೂರು ಎಸ್ಪಿಯವರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ, ತನಿಖೆ ನಡೆಸಿರುವ ಪೊಲೀಸರು ಒಬ್ಬ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read More

ಬೆಂಗಳೂರು : ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಪ್ರತಿ ಲೀಟರ್ ನಂದಿನಿ ಹಾಲಿನ ದರ 4 ರೂ.ಏರಿಕೆ ಮಾಡಿ ಸಂಪುಟ ಅನುಮೋದನೆ ನೀಡಿತ್ತು. ಅಲ್ಲದೇ ಮೊಸರು, ವಿದ್ಯುತ್ ದರ ಏರಿಕೆ ಮಾಡಲಾಗಿದ್ದು, ಇಂದಿನಿಂದ ಇವೆಲ್ಲದರ ಮೇಲಿನ ಪರಿಕೃತ ದರ ಜಾರಿಯಾಗಲಿದೆ. ಹೌದು ಈಗಾಗಲೇ ರಾಜ್ಯದಲ್ಲಿ ಬಸ್ಸು, ಮೆಟ್ರೋ ಪ್ರಯಾಣ ದರ ಹೆಚ್ಚಳ ಬೆನ್ನಲ್ಲೇ ರಾಜ್ಯದ ಜನತೆಗೆ ಇಂದಿನಿಂದ ಹಾಲಿನ ದರ, ವಿದ್ಯುತ್ ಶುಲ್ಕ, ವಿದ್ಯುತ್ ಸಂಪರ್ಕದ ನಿಗದಿತ ಶುಲ್ಕ, ಇವಿ ಕಾರುಗಳ ಮೇಲಿನ ತೆರಿಗೆ ಹೆಚ್ಚಳದ ಶಾಕ್ ತಟ್ಟಲಿದೆ. ಬಳಕೆದಾರರ ಸೆಸ್ ಹೆಸರಿನಲ್ಲಿ ಹೊಸ ಹೊರೆ ಹೆಗಲೇರಲಿದ್ದು, ಜನಸಾಮಾನ್ಯರ ದುನಿಯಾ ಮತ್ತಷ್ಟು ದುಬಾರಿ ಆಗಲಿದೆ. ಜತೆಗೆ, ಕೇಂದ್ರ ಸರ್ಕಾರ ರಾಜ್ಯದಲ್ಲಿನ 66 ಟೋಲ್ ರಸ್ತೆಗಳಿಗೂ ಅನ್ವಯಿಸುವಂತೆ ಟೋಲ್ ದರವನ್ನು ಶೇ.2ರಿಂದ 5ರಷ್ಟು ಹೆಚ್ಚಳ ಮಾಡಿದೆ. ಹೀಗಾಗಿ, ರಾಜ್ಯದ ಬಡವರು ಮಾಧ್ಯಮವರ್ಗದವರಿಗೆ ಯುಗಾದಿ ಹಬ್ಬಕ್ಕೆ ಸಿಹಿಗಿಂತ ಕಹಿನೆ ರಾಜ್ಯ ಸರ್ಕಾರ ನೀಡಿದೆ. ಬೆಲೆ ಏರಿಕೆ ಸಂಬಂಧ ಈಗಾಗಲೇ ರಾಜ್ಯದ…

Read More

ಶಿವಮೊಗ್ಗ : ನಿನ್ನೆ ಇಡೀ ರಾಜ್ಯಾಧ್ಯಂತ ರಂಜಾನ್ ಹಬ್ಬ ಆಚರಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ ರಾಜ್ಯದ ಈ ಜಿಲ್ಲೆಗಳಲ್ಲಿ ರಂಜಾನ್ ಪ್ರಾರ್ಥನೆ ವೇಳೆ, ಪ್ಯಾಲಿಸ್ತಾನಿ ಪರವಾಗಿ ಘೋಷಣೆ ಕೂಗಿರಿವ ಘಟನೇ ವರದಿಯಾಗಿದೆ.ಹೌದು ಶಿವಮೊಗ್ಗ, ಕೊಪ್ಪಳ ಜಿಲ್ಲೆಗಳಲ್ಲಿ ರಂಜಾನ್ ಪ್ರಾರ್ಥನೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರದ ಈದ್ಗಾ ಮೈದಾನದಲ್ಲಿ ನಮಾಜ್ ಬಳಿಕ ಎಸ್​ಡಿಪಿಐ ‘ಪ್ಯಾಲೆಸ್ತೀನ್ ಫ್ರೀ’ ನಾಮಫಲಕ ಪ್ರದರ್ಶನ ಮಾಡಿತು. ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಮರು ಸಾಗರದ ಕೆಳದಿ ರಸ್ತೆಯ ಈದ್ಗಾ ಮೈದಾನದಲ್ಲಿ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆ ಬಳಿಕ ಎಸ್​ಡಿಪಿಐ ಸಂಘಟನೆ ಕಾರ್ಯಕರ್ತರು ‘ಪ್ಯಾಲೆಸ್ತೀನ್ ಫ್ರೀ’, ಪ್ಯಾಲೆಸ್ತೀನ್, ಗಾಜಾಪಟ್ಟಿ ಮೇಲೆ ಇಸ್ರೇಲ್ ದಾಳಿ ನಿಲ್ಲಿಸುವಂತೆ ಫಲಕ ಪ್ರದರ್ಶಿಸಿದರು. ಇದೆ ರೀತಿ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲೂ ನಡೆಯಿತು.ಗಂಗಾವತಿಯಲ್ಲಿ ಬೆಳಗ್ಗೆ ಪ್ರಾರ್ಥನೆ ವೇಳೆ ಪ್ಯಾಲೆಸ್ತೀನ್​ ಪರ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಸೂಟ್ಕೇಸ್ ನಲ್ಲಿ ಶವವನ್ನ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ರಾಕೇಶ್ ಕಡೇಕರ್​ಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶಿಸಲಾಗಿದೆ. ನಿನ್ನೆ ರಾತ್ರಿ ಆರೋಪಿಯನ್ನು ಬೆಂಗಳೂರಿಗೆ ಕರೆತಂದಿದ್ದ ಪೊಲೀಸರು ಇಂದು ಕೋರಮಂಗಲ ಎನ್​​ಜಿವಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ನಿವಾಸಕ್ಕೆ ಹಾಜರುಪಡಿಸಿದ್ದರು. ಹೌದು ಆರೋಪಿಯನ್ನು ಪೊಲೀಸರು ಇಂದು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ಬಳಿಕ ಆರೋಪಿ ರಾಕೇಶ್‌ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ನಿನ್ನೆ ರಾತ್ರಿ ಆರೋಪಿಯನ್ನು ಪೊಲೀಸರು ಬೆಂಗಳೂರಿಗೆ ಕರೆತಂದಿದ್ದರು. ಪುಣೆಯಿಂದ ಬೆಂಗಳೂರಿಗೆ ಆರೋಪಿ ರಾಕೇಶನನ್ನು ಪೊಲೀಸರು ಕರೆತಂದಿದ್ದರು. ಸದ್ಯ ರಾಕೇಶ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾನೆ. ಪ್ರಕರಣ ಹಿನ್ನೆಲೆ? ಪತ್ನಿಯ ಕೊಲೆ ಮಾಡಿದ ರಾಕೇಶ್‌, ಶವದ ಕಾಲುಗಳನ್ನ ಮುರಿದು ಶವವನ್ನ ಟ್ರ್ಯಾಲಿ ಬ್ಯಾಗ್‌ಗೆ ತುಂಬಿದ್ದ. ಅದೇ ಬ್ಯಾಗ್‌ನನ್ನ ಎಳೆಯುವಾಗ ಹ್ಯಾಂಡಲ್‌ ಕಟ್ ಆಗಿದೆ. ಹೀಗಾಗಿ ಶವವನ್ನ ಅಲ್ಲೇ ಬಿಟ್ಟು ಕಾರ್‌ನಲ್ಲಿ ಎಸ್ಕೇಪ್ ಆಗಿದ್ದ. ಮಾರ್ಚ್‌ 27ರಂದು ಮಧ್ಯಾಹ್ನ ಗೌರಿ…

Read More

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಯುಗಾದಿ ಹಬ್ಬದ ದಿನದಂದು ಘೋರವಾದ ದುರಂತ ಒಂದು ಸಂಭವಿಸಿದೆ. ಯುಗಾದಿ ಹಿನ್ನೆಲೆಯಲ್ಲಿ ಪುಣ್ಯ ಸ್ನಾನಕ್ಕೆಂದು ತ್ರಿವೇಣಿ ಸಂಗಮದಲ್ಲಿ ನದಿಗೆ ಇಳಿದಿದ್ದ ಬಾಲಕ ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ನಡೆದಿದೆ. ಮೃತ ಬಾಲಕನನ್ನು ಶರಣ್ (13) ಎಂದು ತಿಳಿದುಬಂದಿದೆ. ಮೃತ ಶರಣ್ ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿಯಾಗಿದ್ದು, ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಬಂದಿದ್ದ. ಇವಳೇ ಸ್ನಾನಕ್ಕೆ ಎಂದು ನದಿಗೆ ಹೇಳಿದಾಗ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಶವವನ್ನು ಹೊರ ತೆಗೆದಿದ್ದಾರೆ. ಕುಟುಂಬಸ್ಥ ಆಕ್ರಂದನ ಮುಗಿಲು ಮುಟ್ಟಿದೆ.

Read More