Author: kannadanewsnow05

ಕಲಬುರ್ಗಿ : ಕಲಬುರ್ಗಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಸೇರಿ ಮೂವರ ವಿರುದ್ದ ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಗರದ ಸಿದ್ಧಾರ್ಥ ನಗರದ ರಸ್ತೆಯಲ್ಲಿ ಸಾರ್ವಜನಿಕರು, ಆನಂದ ಚಲಾಯಿಸುತ್ತಿದ್ದ ವಾಹನವನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಮಣಿಕಂಠ ರಾಠೋಡ, ಚಾಲಕ ಆನಂದ ಹಾಗೂ ಪ್ರಭು ಕೆರೆಗಳ್ಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೋಲಿಸರು, 57 ಸಾವಿರ ಮೌಲ್ಯದ 16 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ವಾಹನ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಚಾಲಕ ಮಣಿಕಂಠ ರಾಠೋಡ್ ಹೆಸರು ಹೇಳಿದ್ದ, ಪುಡ್ ಇನ್ಸ್ಪೆಕ್ಟರ್ ಯಲ್ಲಾಲಿಂಗ ಅವರು ನೀಡಿದ ದೂರಿನ ಅನ್ವಯ ಅಶೋಕ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಕೂಡ ಹಲವು ಪ್ರಕರಣಗಳಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ FIR ದಾಖಲಾಗಿತ್ತು.

Read More

ಹುಬ್ಬಳ್ಳಿ : ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬಸ್ ನಲ್ಲಿದ್ದ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪರಾಗಿರುವ ಘಟನೆ ಹುಬ್ಬಳ್ಳಿ-ವಿಜಯಪುರ, ಸೋಲಾಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ. ನಿನ್ನೆ ಸಂಜೆ ಹುಬ್ಬಳಿಯಿಂದ ಮಂಟೂರಿಗೆ ತೆರಳುತ್ತಿದ್ದ ಬಸ್​​​​ನ ಇಂಜಿನ್​​​ನಲ್ಲಿ ಹೊಗೆ ಕಾಣಿಸಿದಾಗ ನಂತರ ಬೆಂಕಿ ಸಣ್ಣ ಪ್ರಮಾಣದಲ್ಲಿ ಆವರಿಸಿದೆ. ಕೂಡಲೇ ಚಾಲಕ, ಕಂಡಕ್ಟರ್ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಬೆಂಕಿಯ ತೀವ್ರತೆಗೆ ಬಸ್ ನ ಒಳ ಭಾಗವೂ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟು ಯಶಸ್ವಿಯಾದರು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದು, ಹಳೆ ಬಸ್ ಆಗಿದ್ದರಿಂದ ಶಾರ್ಟ್​​​​ ಸರ್ಕ್ಯೂಟ್​​ನಿಂದಲೇ ಇಂತಹ ಅನಾಹುತ ಆಗುತ್ತಿವೆ. ಗ್ರಾಮಾಂತರ ಭಾಗದಲ್ಲಿ ಹಳೆ ಬಸ್ ಮತ್ತು ಅವಧಿ ಮುಗಿದ ಬಸ್​​ಗಳನ್ನು ಸರ್ಕಾರ ಒಡಿಸಬಾರದು ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಮಂಡ್ಯ : ಸೊಸೈಟಿ ಚುನಾವಣೆಯಲ್ಲೂ ಕೂಡ ಇದೀಗ ರಾಜಕೀಯ ಕೆಸರೆರಚಾಟ ಶುರುವಾಗಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ವೈರತ್ವಕ್ಕೆ ಯುವತಿಯ ಮೇಲೆ ಇದೀಗ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಚೋಳೇನಹಳ್ಳಿ ಗ್ರಾಮದಲ್ಲಿ ಯುವತಿಯ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆದಿದೆ. ಹೌದು ಮಂಡ್ಯದಲ್ಲಿ ಯುವತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಗೆ ವೋಟ್ ಹಾಕಿಸಿದ್ದಕ್ಕಾಗಿ ಯುವತಿಯ ಮೇಲೆ ಹಲ್ಲೆ ನಡೆಸಲಾಗಿದೆ. ನಾಗಮಂಗಲ ತಾಲೂಕಿನ ಚೋಳೇನಹಳ್ಳಿ ಈ ಒಂದು ಘಟನೆ ನಡೆದಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ವೈರತ್ವದ ನಡುವೆ ಯುವತಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ಪರಿಣಾಮ ಯುವತಿಯ ತುಟಿ ಕಟ್ಟಾಗಿದ್ದು, ಹಲ್ಲುಗಳು ಮುರಿದಿದ್ದು ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕಾಂಗ್ರೆಸ್ ಪಕ್ಷಕ್ಕೆ ಓಟು ಹಾಕಿಸಿದ್ದಕ್ಕೆ ಜೆಡಿಎಸ್ ಪುಂಡರು ಯುವತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಜೆಡಿಎಸ್ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಶಾಂತ್ ಮತ್ತು ಗ್ಯಾಂಗ್ ಗುಂಡಾಗಿರಿ ನಡೆಸಿದೆ. ಪ್ರಶಾಂತ್ ಮತ್ತು ಗ್ಯಾಂಗ್ ನ ಗುಂಡಾಗಿರಿಯಿಂದ ಕುಟುಂಬ ಇದೀಗ ಜೀವ…

Read More

ಬೆಂಗಳೂರು : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿರುವ ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ತಾಣಗಳು ಮತ್ತು ಅವಶೇಷಗಳ ಕಾಯ್ದೆ, 1958 ರ ಅಡಿಯಲ್ಲಿ “ರಾಷ್ಟ್ರೀಯ ಮಹತ್ವದ ಸ್ಮಾರಕ” ಎಂದು ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ನೀಡಿರುವ ಅವರು, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೇ, ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮನವಿ. ಕರ್ನಾಟಕದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಸಾರುವ ವೀರ ರಾಣಿ ಕಿತ್ತೂರು ಚೆನ್ನಮ್ಮನ ಸಮಾಧಿ ತಾಣ ಇರುವುದನ್ನು ಸಮಸ್ತ ಕನ್ನಡಿಗರ ಪರವಾಗಿ ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸಶಸ್ತ್ರ ಹೋರಾಟವನ್ನು ಮುನ್ನಡೆಸಿದ ಮಹಿಳೆಯರಲ್ಲಿ ರಾಣಿ ಚೆನ್ನಮ್ಮ…

Read More

ಬೆಂಗಳೂರು : ಬೆಂಗಳೂರಲ್ಲಿ ನಿನ್ನೆ ಘೋರವಾದ ಘಟನೆ ಸಂಭವಿಸಿದ್ದು, ಬಿಬಿಎಂಪಿ ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿ ಹೋಗುತ್ತಿದ್ದ ಹತ್ತು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಥಣಿಸಂದ್ರದ ಬಳಿ ನಡೆದಿದೆ. ಐಮಾನ್ (10) ಮೃತ ಬಾಲಕ. ತಂದೆಯ ಜತೆ ಬಾಲಕ ಬೈಕ್‌ನಲ್ಲಿ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಬೈಕ್ ನಲ್ಲಿ ತೆರಳುತ್ತಿದ್ದ 10 ವರ್ಷದ ಐಮಾನ್ ಎಂಬ ಬಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ರೊಚ್ಚಿಗೆದ್ದ ಸಾರ್ವಜನಿಕರು, ಕಸ ಎಲ್ಲರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚುತ್ತಿದ್ದಂತೆ ಚಾಲಕ ಕೆಳಗಿಳಿದಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.

Read More

ಉಡುಪಿ : ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಹಿತಿಯ ಮೇರೆಗೆ ಉಡುಪಿ ಮಹಿಳಾ ಠಾಣೆಯ ಪೊಲೀಸರು ಶಾರದಾ ನಗರದಲ್ಲಿರುವ ಮನೆಯ ಮೇಲೆ ದಾಳಿ ಮಾಡಿ ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸತೀಶ್ ಎಂಬಾತ ಸಂತ್ರಸ್ಥೆಗೆ ಕೆಲಸ ಕೊಡುವುದಾಗಿ ಪುಸಲಾಯಿಸಿ ಮೂಡಬಿದ್ರೆಯಿಂದ ಶಾರದ ನಗರದಲ್ಲಿರುವ ಶ್ರೀಲತಾ ಎಂಬವರ ಮನೆಗೆ ಕಳುಹಿಸಿದ್ದನು.ಅಲ್ಲಿ ಶ್ರೀಲತಾ ಆಕೆಯನ್ನು ವೇಶ್ಯಾವಾಟಿಕೆ ಚಟುವಟಿಕೆ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಈ ವೇಳೆ ರೂಮಿನಲ್ಲಿ ಕೂತುಕೊಂಡು ಇರು ಎಂದು ಒತ್ತಾಯದಿಂದ ಇರಿಸಿಕೊಂಡಿರುವುದಾಗಿ ದೂರಲಾಗಿದೆ. ಈ ಕುರಿತು ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು ಸಂತ್ರಸ್ಥೆಯನ್ನು ರಕ್ಷಿಸಿದರು. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೀದರ್ : ಬೀದರ್ ನಲ್ಲಿ ಭೀಕರವಾದ ಕೊಲೆ ನಡೆದಿದ್ದು, ತಂಗಿಯನ್ನು ಪ್ರೀತಿಸಿದ ಎಂಬ ಕಾರಣಕ್ಕೆ ಯುವತಿಯ ಸಹೋದರರು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ಜರುಗಿದೆ. ಕೊಲೆಯಾದ ಯುವಕನನ್ನು ಪ್ರಶಾಂತ್ ಬಿರಾದರ್ (25) ಎಂದು ತಿಳಿದುಬಂದಿದೆ.ಯಲ್ಲಾಲಿಂಗ ಮೇತ್ರೆ, ಪ್ರಶಾಂತ್ ಮೇತ್ರೆ ಕೊಲೆ ಆರೋಪಿಗಳು ಎನ್ನಲಾಗಿದೆ. ಸ್ಥಳಕ್ಕೆ ಡಿವೈಎಸ್‌ಪಿ ನ್ಯಾಮೇಗೌಡ, ಸಿಪಿಐ ಅಲಿಸಾಬ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಯುವಕ ಹಾಗೂ ಆರೋಪಿಗಳ ಸಹೋದರಿ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಶುಕ್ರವಾರ ರಾತ್ರಿ 9 ಗಂಟೆಗೆ ನಿರಗೂಡಿ ಗ್ರಾಮದಲ್ಲಿ ಪ್ರಶಾಂತ್ ಹಾಗೂ ಯುವತಿ ಸಹೋದರರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಪ್ರಶಾಂತ್ ತಲೆ ಮೇಲೆ ಯುವತಿಯ ಸಹೋದರರು ಕಲ್ಲು ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

Read More

ಬೆಂಗಳೂರು : ಮ್ಯಾನ್ಮಾರ್ ಮತ್ತು ಬ್ಯಾಂಕಾಕ್ ನಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿದ್ದು, ಇದುವರೆಗೂ 1,600 ಜನರು ಈ ಒಂದು ಭೂಕಂಪನದಲ್ಲಿ ಸಾವನ್ನಪ್ಪಿದ್ದಾರೆ. ಅಲ್ಲದೆ 3000ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ಎಂದು ಬ್ಯಾಂಕಾಕ್ ಗೆ ತೆರಳಿದ್ದ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕನ್ನಡಿಗರು ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ. ಇನ್ನು ಬ್ಯಾಂಕಾಕ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ಕನ್ನಡಿಗರ ಪೈಕಿ ರೋಹಿತ್ ಎನ್ನುವವರು ಪತ್ನಿ ಮಕ್ಕಳ ಜೊತೆಗೆ ಬ್ಯಾಂಕಾಕ್ ಪ್ರವಾಸಕ್ಕೆ ಹೋಗಿದ್ದರು. ಹೋಟೆಲ್ ನಲ್ಲಿ ಮಧ್ಯಾಹ್ನ ಊಟದ ವೇಳೆ ಭೂಕಂಪವಾಗಿತ್ತು. ಊಟ ಮಾಡದಿದ್ದಕ್ಕೆ ತಲೆ ತಿರುಗುವ ಅನುಭವವಾಗುತ್ತಿದೆ ಅಂದುಕೊಂಡಿದ್ವಿ. ಎಲ್ಲರಿಗೂ ಅದೇ ಅನುಭವ ಆದಾಗ ಭೂಕಂಪ ಎಂದು ಗೊತ್ತಾಯಿತು. ಹೋಟೆಲ್ ಸಿಬ್ಬಂದಿ ಕೊಡಲೇ ಎಲ್ಲರನ್ನು ಹೊರಗಡೆ ಕಳುಹಿಸಿದರು. ಸುಮಾರು 4 ಗಂಟೆಗಳ ಕಾಲ ಯಾರನ್ನು ಕಟ್ಟಡದ ಒಳಗೆ ಬಿಡಲಿಲ್ಲ. ಪತ್ನಿ ಮಕ್ಕಳು ಸಮೇತ ಎಲ್ಲರೂ ರಸ್ತೆಯಲ್ಲಿ ನಿಂತಿದ್ದೆವು. ಅಂಗಡಿ ಮುಂಗಟ್ಟುಗಳಿಂದ ಎಲ್ಲರೂ ಹೊರಗೆ ಓಡೋಡಿ ಬಂದಿದ್ರು.…

Read More

ಬೆಂಗಳೂರು : ಮಾರ್ಚ್ 31ರಿಂದ ಅಂದರೆ ನಾಳೆಯಿಂದ ರಾಜ್ಯಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯು ಮಹತ್ವದ ಮುನ್ಸೂಚನೆ ನೀಡಿದೆ.ಏಪ್ರಿಲ್‌ 3ರಂದು ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಸಾಧ್ಯತೆ ಎಂದು ತಿಳಿಸಿದ್ದು, ಏಪ್ರಿಲ್ 4 & 5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವವಿದೆ ಎಂದು ತಿಳಿಸಿದೆ. ಏಪ್ರಿಲ್‌ 3ರಂದು ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಅತಿ ವೇಗದ ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಲಿದೆ.ಶನಿವಾರ ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವೆಡೆ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಮಾತ್ರ ಎಂದಿನಂತೆ ಒಣ ಹವೆ ಇತ್ತು. ಏಪ್ರಿಲ್‌ 4 ಮತ್ತು ಏಪ್ರಿಲ್‌ 5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಹಾಗೂ ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More

ಬಳ್ಳಾರಿ : ರೈತರಿಗೆ ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಇಂದು ಬಳ್ಳಾರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮ ನಾಯ್ಕ್ ಗೆ ಮುತ್ತಿಗೆ ಹಾಕಿ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಕೆಎಂಎಫ್ ಘಟಕದ ಮುಂದೆ ಮುತ್ತಿಗೆ ಹಾಕಿ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ನಷ್ಟದ ಮಾಹಿತಿ ನೀಡಿ ಅಧಿಕಾರಿಗಳು ಹಣ ಕಡಿತ ಮಾಡಿದ್ದರು. ಪ್ರತಿ ಲೀಟರ್ಗೆ 1 ರೂಪಾಯಿ 50 ಪೈಸೆ ಕಡಿತ ಮಾಡಿದ್ದ ರಾಬಕೋವಿ ಒಕ್ಕೂಟ. ಹಾಗಾಗಿ ಇದೀಗ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮುತ್ತಿಗೆ ಹಾಕಲಾಗಿದೆ.

Read More