Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಗೌಡ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಹೌದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ರಜತ್ ವಿನಯ್ ಗೌಡ ರಿಲೀಸ್ ಆಗಿದ್ದು, ನಿನ್ನೆ ನ್ಯಾಯಾಲಯ ಇಬ್ಬರಿಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ನಿನ್ನೆ ಜಾಮೀನು ಪ್ರತಿ ತಡವಾಗಿ ಜೈಲು ಅಧಿಕಾರಿಗಳ ಕೈ ಸೇರಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ರಜತ್ ಮತ್ತು ವಿನಯ ಗೌಡ ಬಿಡುಗಡೆ ಆಗಿದ್ದಾರೆ.
ಬೆಂಗಳೂರು : ಬಗರ್ಹುಕುಂ ಅರ್ಜಿಗಳ ವಿಲೇವಾರಿ ಬಡವರ ಕೆಲಸ. ಸಾವಿರಾರು ಬಡವರು ಅರ್ಜಿ ಹಾಕಿ ಕಾದು ಕುಳಿತಿದ್ದಾರೆ. ಕೆಲ ತಹಸೀಲ್ದಾರರು ಅಸಡ್ಡೆ ತೋರುತ್ತಿದ್ದು, ಶೀಘ್ರ ಎಚ್ಚೆತ್ತುಕೊಂಡು ಮುಂದಿನ 6 ತಿಂಗಳ ಒಳಗಾಗಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಾಕೀತು ಮಾಡಿದ್ದಾರೆ. ಶುಕ್ರವಾರ ವಿಕಾಸ ಸೌಧದಿಂದ ವಿಡಿಯೋ ಕಾನ್ಸರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಸೀಲ್ದಾರರ ಜತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು,ಬಗರ್ಹುಕುಂ ಕೆಲಸಗಳಿಗೆ ಚುರುಕು ಮುಟ್ಟಿಸಬೇಕು ಎಂದು ಎರಡು ವರ್ಷದಿಂದಜಿಲ್ಲಾ ಪ್ರವಾಸ ಮಾಡಿ ಪ್ರಗತಿ ಪರಿಶೀಲನೆ ನಡೆಸುತ್ತಿದ್ದೇನೆ. ಆದರೆ ಕೆಲ ಅಧಿಕಾರಿಗಳು ಬಡವರ ಕೆಲಸಕ್ಕೆ ಅಸಡ್ಡೆ ತೋರುತ್ತಿದ್ದಾರೆ ಎಂದರು. ರಾಜ್ಯದ ಬಹುತೇಕ ಎಲ್ಲಾ ತಾಲೂಕುಗಳಲ್ಲೂ ಬಗರ್ ಹುಕುಂ ಸಮಿತಿ ರಚಿಸಲಾಗಿದ್ದು, ಗ್ರಾಮ ಆಡಳಿತ ಅಧಿಕಾರಿಯಿಂದ ತಹಸೀಲ್ದಾರರ ಎದುರು ಬಂದಿದೆ ಎಂದರೆ ಆ ಅರ್ಜಿ ಬಹುತೇಕ ಅರ್ಹ ಅರ್ಜಿಯೇ ಆಗಿರುತ್ತದೆ. ಹೀಗಾಗಿ ಅಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಭೆನಡೆಸಿ ಅರ್ಹರಿಗೆ ಜಮೀನು…
ಬೆಂಗಳೂರು : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಇತ್ತೀಚಿಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿತ್ತು. ಈಗ ಈ ಒಂದು ಉಚ್ಚಾಟನೆ ಆದೇಶ ಹಿಂಪಡೆಯುವ ಸಲುವಾಗಿ ನಿನ್ನೆ ಬೆಂಗಳೂರಿನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಮ್ ಮಹತ್ವದ ಸಭೆ ನಡೆಸಿತ್ತು. ಹೌದು ಉಚ್ಚಾಟನೆ ಆದೇಶ ವಾಪಸ್ ಪಡೆಯುವಂತೆ ಹೈಕಮಾಂಡ್ ಬಳಿ ರೆಬೆಲ್ ನಾಯಕರ ಮನವಿ ಮಾಡಲು ನಿರ್ಧಾರ ಕೈಗೊಂಡಿದ್ದು, ಮೂರು ರೀತಿಯ ಚಿಂತನೆ ನಡೆಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಹಿಂಪಡೆಯಲು ಮೊದಲನೆಯದಾಗಿ ಬಸನಗೌಡ ಯತ್ನಾಳ್ ಅವರಿಂದಲೇ ಮನವಿ ಪತ್ರ ಬರೆಸುವುದು, ಎರಡನೆಯದಾಗಿ ನಿಯೋಗದಲ್ಲಿ ತೆರಳಿ ವರಿಷ್ಠರನ್ನು ಭೇಟಿ ಮಾಡುವುದು ಮತ್ತು ಮೂರನೇಯದಾಗಿ ಹೈಕಮಾಂಡ್ಗೆ ಸಮೀಪ ಇರುವ ನಾಯಕರಿಂದ ಒತ್ತಡ ಹಾಕಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಆದೇಶ ವಾಪಸ್ ಪಡೆಯುವ ಸಂಬಂಧ ವರಿಷ್ಠರು ಚರ್ಚೆಗೆ ಮನಸ್ಸು ಮಾಡಿದರೆ ಅದಕ್ಕೂ ರೆಡಿ ಎಂಬ ಸಂದೇಶವನ್ನು ಯತ್ನಾಳ್ ಟೀಮ್…
ಮ್ಯಾನ್ಮಾರ್ : ಬ್ಯಾಂಕಾಕ್ : ನಿನ್ನೆ ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟನ್ನು ನಾಶಪಡಿಸಿತು. ನಿನ್ನೆ ಮ್ಯಾನ್ಮಾರ್ನಲ್ಲಿ ಕನಿಷ್ಠ 144 ಜನರು ಸಾವನ್ನಪ್ಪಿದ್ದು ಇದೀಗ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದೆ. ಅಲ್ಲಿ ಎರಡು ತೀವ್ರ ಹಾನಿಗೊಳಗಾದ ನಗರಗಳ ಫೋಟೋಗಳು ಮತ್ತು ವೀಡಿಯೊಗಳು ವ್ಯಾಪಕ ಹಾನಿಯನ್ನು ತೋರಿಸಿದವು. ಹೌದು ಭೂಕಂಪ ದಲ್ಲಿ ಮೃತಪಟ್ಟಿರುವವರ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, ದುರಂತದಲ್ಲಿ 1,670 ಜನರಿಗೆ ಗಾಯಗಳಾಗಿವೆ. 70ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಮ್ಯಾನ್ಮಾರ್ ಮತ್ತು ಬ್ಯಾಂಕಾಕ್ ನಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 1000 ದಾಟುವ ಸಾಧ್ಯತೆ ಇದೆ. ನಿನ್ನೆ ಮಯನ್ಮಾರ್ ಮತ್ತು ಥೈಲ್ಯಾಂಡ್ ನಲ್ಲಿ ಪ್ರಬಲವಾಗಿ ಭೂಕಂಪ ಸಂಭವಿಸಿತ್ತು.ರಿಟರ್ನ್ ಮಾಪ್ ಪಕ್ಕದಲ್ಲಿ ಕಂಪನದ ತೀವ್ರತೆ 7.7 ರಷ್ಟು ದಾಖಲಾಗಿತ್ತು. ಆದರೆ ತಡರಾತ್ರಿ ಮ್ಯಾನ್ಮಾರ್ ನಲ್ಲಿ ಮತ್ತೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಭೂ ಕಂಪನದ 4.2ರಷ್ಟು ತೀವ್ರತೆ ದಾಖಲಾಗಿದೆ. ನೀನೆ 7.7 ರಷ್ಟು…
ಮಂಗಳೂರು : ಮಂಗಳೂರಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡುತ್ತಿದ್ದ ಹಿನ್ನೆಲೆ ಪಿಕಪ್ ವಾಹನದಲ್ಲಿದ್ದ 19 ಗೋವುಗಳನ್ನ ರಕ್ಷಣೆ ಮಾಡಲಾಗಿದೆ. ಮಂಗಳೂರಿನ ಸೂರಲ್ಪಾಡಿ ಬಳಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡುತ್ತಿದ್ದ ವಾಹನ ತಡೆದು ಬಜರಂಗದ ದಳ ಕಾರ್ಯಕರ್ತರು ಗೋವುಗಳನ್ನು ರಕ್ಷಿಸಿದ್ದಾರೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಜರಂಗದಳ ಕಾರ್ಯಕರ್ತರು ವಾಹನ ಚೇಸಿಂಗ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಿಸುತ್ತಿದ್ದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮೂಡುಬಿದರೆಯಿಂದ ಮಂಗಳೂರು ಕಡೆ ಪಿಕಪ್ ವಾಹನ ಬರುತ್ತಿತ್ತು. ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಬಗ್ಗೆ ಮಾಹಿತಿ ಬಂದಿದೆ. ಈ ವೇಳೆ ಬಜರಂಗದಳ ಕಾರ್ಯಕರ್ತರು ವಿಷಯ ಆಧರಿಸಿ ಕಾರಿನಲ್ಲಿ ವಾಹನ ಬೆನ್ನಟ್ಟಿದ್ದಾರೆ. ಸೂರಲ್ಪಾಡಿ ಬಳಿ ಪಿಕಪ್ ವಾಹನವನ್ನು ತಡೆದಿದ್ದಾರೆ. ಈ ವೇಳೆ ಪಿಕಪ್ ವಾಹನದಲ್ಲಿದೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ವಾಹನದಿಂದ 19 ಗೋವುಗಳನ್ನ ಬಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಬಜರಂಗದಳ ಕಾರ್ಯಕರ್ತರು…
ಚಾಮರಾಜನಗರ : ಯುಗಾದಿ ಹಬ್ಬದ ಅಂಗವಾಗಿ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ, ಆಟೋ ಮತ್ತು ಗೂಡ್ಸ್ ವಾಹನಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಹನ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರತಿ ವರ್ಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಹಬ್ಬದ ದಿನದಂದು ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಹಾಗಾಗಿ ವಾಹನದ ದಟ್ಟಣೆಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಇದೀಗ ಮುಂದಾಗಿದ್ದು, ಇಂದಿನಿಂದ ಮಾರ್ಚ್ 31ರವರೆಗೆ ಬೆಟ್ಟಕ್ಕೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಆದೇಶ ಹೊರಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಬಳಿ ವಾಹನಗಳ ಪಾರ್ಕಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ. ಇಂದು ಅಮಾವಾಸ್ಯೆಯ ಪೂಜೆ, ಯುಗಾದಿ ರಥೋತ್ಸವ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ ಹಾಗಾಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಉತ್ತರಕನ್ನಡ : ಸಾರಿಗೆ ಸಂಸ್ಥೆಗೆ ಶಕ್ತಿ ನೀಡಲು ರಾಜ್ಯ ಸರ್ಕಾರ 2 ಸಾವಿರ ಬಸ್ಗಳ ಖರೀದಿಗೆ ಬಜೆಟ್ನಲ್ಲಿ ಅನುದಾನ ನೀಡಿದೆ. ಮೊದಲ ಹಂತದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 300 ಬಸ್ಸುಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಎರಡನೆಯ ಹಂತದಲ್ಲಿ ಹೆಚ್ಚಿವರಿಯಾಗಿ 400 ಬಸ್ ಸೇರಿದಂತೆ ಒಟ್ಟು 700 ನೂತನ ಬಸ್ಸುಗಳನ್ನು ನೀಡಲಾಗುತ್ತದೆ ಎಂದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಿನ್ನೆ ಉತ್ತರಕನ್ನಡ ವಿಭಾಗದ ಶಿರಸಿ ಕೇಂದ್ರ ಬಸ್ ನಿಲ್ದಾಣ ಮತ್ತು ಸಾರಿಗೆ ಇಲಾಖೆಯ ಶಿರಸಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೊದಲ ಹಂತದಲ್ಲಿ 300 ಬಸ್ಸುಗಳನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ನೀಡಲು ಸೂಚನೆ ನೀಡಿದ್ದೇನೆ. ಎರಡನೆಯ ಹಂತದಲ್ಲಿ ಹೆಚ್ಚಿವರಿಯಾಗಿ 400 ಬಸ್ಸುಗಳನ್ನು ನೀಡುತ್ತೇನೆ. ಸಂಸ್ಥೆಯು 6 ಜಿಲ್ಲೆಗಳನ್ನು ಒಳಗೊಂಡಿದ್ದು, ಜಿಲ್ಲೆಗೆ 100 ಬಸ್ಸುಗಳಿಗೆ ಹೆಚ್ಚುವರಿಯಾಗಿ 100 ಬಸ್ಸು ಸೇರಿ ಒಟ್ಟು 700 ಬಸ್ಸು ನೀಡಲಾಗುತ್ತದೆ ಎಂದರು.…
ದಾವಣಗೆರೆ / ಉಡುಪಿ : ಯುಗಾದಿ ಹಬ್ಬಕ್ಕೆಂದು ಸ್ವಂತ ಊರಿಗೆ ತೆರಳುತ್ತಿರುವಾಗಲೇ ಎರಡು ಪ್ರತ್ಯೇಕ ಭೀಕರ ಪ್ರಧಾನದಲ್ಲಿ ಇಬ್ಬರು ಯುವಕರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಉಡುಪಿ ಹಾಗೂ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೀರೂರು ಹಾಗೂ ಸಮ್ಮಸಗಿ ರಾಜ್ಯ ಹೆದ್ದಾರಿಯ ಗುಳ್ಳೇಹಳ್ಳಿಯ ಕೂಗಳತೆಯಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಅರ್ಜುನ್ ನಾಯ್ಕ (25), ಹರೀಶ್ ನಾಯ್ಕ (31) ಮೃತ ಯುವಕರು ಎಂದು ತಿಳಿದುಬಂದಿದೆ. ಯುಗಾದಿ ಹಬ್ಬ ಇರುವ ಕಾರಣ ತಮ್ಮ ದ್ವಿಚಕ್ರ ವಾಹನದಲ್ಲಿ ಯುವಕರು ಊರಿಗೆ ಮರಳುವ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಹೋಗಿದೆ. ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಚನ್ನಗಿರಿ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಉಡುಪಿಯಲ್ಲಿ ಕಾರು ಹಾಗೂ ಬಸ್ರೂರು ಸಮೀಪದ ಬಿ.ಹೆಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ…
ಬೆಂಗಳೂರು : ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿ, ಆರೋಗ್ಯ, ಮೂಲಸೌಕರ್ಯ, ರಸ್ತೆ, ಫ್ಲೈವರ್, ಸ್ಕೈಡೆಕ್ ಸೇರಿದಂತೆ ದೂರದೃಷ್ಟಿ ಯೋಜನೆಗಳು ಸೇರಿದಂತೆ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಇಂದು ಬೃಹತ್ ಬೆಂಗಳೂರು ಬಜೆಟ್ ಮಂಡನೆಯಾಗಲಿದೆ. ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಮಕ್ಷಮದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ। ಹರೀಶ್ ಕುಮಾರ್ ಬರೋಬ್ಬರಿ 20 ಸಾವಿರ ಕೋಟಿ ಗಾತ್ರದ ಬಜೆಟ್ ಮಂಡಿಸಲಿದ್ದಾರೆ. ಹೌದು ಬಿಬಿಎಂಪಿಯ 2025-26ನೇ ಸಾಲಿನ ಆಯವ್ಯಯದಲ್ಲಿ ರಾಜಧಾನಿಯ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ₹20 ಸಾವಿರ ಕೋಟಿ ಗಾತ್ರದ ಬಜೆಟ್ ಮಂಡಿಸುವುದಕ್ಕೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳಗ್ಗೆ 11ಕ್ಕೆ ನಗರದ ಪುರಭವನದಲ್ಲಿ ಆಯವ್ಯಯ ಮಂಡಿಸುವುದಕ್ಕೆ ವೇದಿಕೆ ಸಿದ್ಧಪಡಿಸಿಕೊಳ್ಳಲಾಗಿದೆ. ಬಿಬಿಎಂಪಿಯ ಆಡಳಿತಾಧಿಕಾರಿ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಮಕ್ಷಮದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ। ಹರೀಶ್ ಕುಮಾರ್ ಸುಮಾರು 45 ರಿಂದ 50 ನಿಮಿಷ ಆಯವ್ಯಯದ ಭಾಷಣ ಮಂಡಿಸಲಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರದ ಬಜೆಟ್ನಲ್ಲಿ ನಗರ ವಿವಿಧ ಕಾಮಗಾರಿಗಳನ್ನು ಅನುಷ್ಠಾನಕ್ಕೆ…
ನವದೆಹಲಿ : ನಿನ್ನೆ ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟನ್ನು ನಾಶಪಡಿಸಿತು. ಮ್ಯಾನ್ಮಾರ್ನಲ್ಲಿ ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ. 730 ಜನರು ಗಾಯಗೊಂಡಿದ್ದಾರೆ. ಅಲ್ಲಿ ಎರಡು ತೀವ್ರ ಹಾನಿಗೊಳಗಾದ ನಗರಗಳ ಫೋಟೋಗಳು ಮತ್ತು ವೀಡಿಯೊಗಳು ವ್ಯಾಪಕ ಹಾನಿಯನ್ನು ತೋರಿಸಿದವು. ಆದರೆ ಇಂದು ಮ್ಯಾನ್ಮಾರ್ ನಲ್ಲಿ ಮತ್ತೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಭೂ ಕಂಪನದ 4.2ರಷ್ಟು ತೀವ್ರತೆ ದಾಖಲಾಗಿದೆ. ನೀನೆ 7.7 ರಷ್ಟು ತೀವ್ರತೆ ದಾಖಲಾಗಿತ್ತು. ಭೂಕಂಪಕ್ಕೆ ಜನ ತತ್ತರಿಸಿ ಹೋಗಿದ್ದರು. ಆದರೆ ಇಂದು ಮತ್ತೆ ಭೂಮಿ ಕಂಪಿಸಿದ್ದು, 4.2 ರಷ್ಟು ಮತ್ತೆ ಭೂಮಿ ಕಂಪಿಸಿದೆ. ಇದೀಗ ಮ್ಯಾನ್ಮಾರ್ ಬಳಿಕ ಅಫ್ಘಾನಿಸ್ತಾನ್ ನಲ್ಲೂ ಸಹ ಭೂಕಂಪ ಆಗಿದ್ದು, ಬೆಳಿಗ್ಗೆ 4.51 ರ ಸುಮಾರಿಗೆ ಭೂಮಿ ಕಂಪಿಸಿದೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲಾಗಿದೆ. ನಿನ್ನೆ ಸಹ ಮ್ಯಾನ್ಮಾರ್ ಹಾಗು ಬ್ಯಾಂಕಾಕ್ ನಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿ ಸುಮಾರು 144 ಜನರು ಸಾವನ್ನಪ್ಪಿದ್ದು,…














