Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಆಪರೇಷನ್ ಸಿಂಧೂರ್ ದಾಳಿ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದರು. ವಿಜ್ಞಾನಿಗಳಿಗೆ ಸೈನಿಕರಿಗೆ ನಾನು ಸೆಲ್ಯೂಟ್ ಹೇಳುತ್ತೇನೆ. ಆಪರೇಷನ್ ಸಿಂಧೂರವನ್ನು ಸೈನಿಕರು ಯಶಸ್ವಿಗೊಳಿಸಿದ್ದಾರೆ. ದೇಶದ ಪ್ರತಿ ತಾಯಿ ಮತ್ತು ಸಹೋದರಿಯರಿಗೂ ಈ ಪರಾಕ್ರಮ ಸಮರ್ಪಣೆ ಎಂದು ತಿಳಿಸಿದರು. ಏಪ್ರಿಲ್ 22ರಂದು ಉಗ್ರರು ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ದಾಳಿ ಮಾಡಿದರು. ನಿರ್ದೋಷಿ ಅಮಾಯಕ ನಾಗರೀಕರನ್ನು ಹತ್ಯೆ ಮಾಡಿದರು. ಧರ್ಮವನ್ನು ಕೇಳಿ ಅಮಾಯಕ ರನ್ನು ಕೊಂದರು ಹೆಂಡತಿ ಮಕ್ಕಳ ಮುಂದೆ ಭೀಕರವಾಗಿ ಕೊಂದರು. ಇದು ಉಗ್ರವಾದದ ಅತ್ಯಂತ ಕ್ರೂರವಾದ ಮುಖವಾಗಿತ್ತು. ನನಗೆ ಇದು ಅತ್ಯಂತ ದುಃಖ ತಂದ ವಿಚಾರವಾಗಿತ್ತು. ಉಗ್ರವಾದದ ವಿರುದ್ಧ ದೇಶದ ಎಲ್ಲರೂ ಒಂದಾಗಿ ನಿಂತಿದ್ದೆವು. ಮಣ್ಣಲ್ಲಿ ಮಣ್ಣು ಮಾಡಲು ಸೇನೆಗೆ ಸ್ವಾತಂತ್ರ್ಯ ಕೊಟ್ಟಿದ್ವಿ. ಸಿಂಧೂರ ಅಳಿಸಿದರೆ ಏನಾಗುತ್ತದೆ ಅಂತ ಅವರಿಗೆ ಗೊತ್ತಾಗಿದೆ. ಹೆಣ್ಣು ಮಕ್ಕಳ ಸಿಂಧೂರ್ ಅಳಿಸಿದ ಉಗ್ರರಿಗೆ ಈಗ ಗೊತ್ತಾಗಿದೆ. ಆಪರೇಷನ್ ಸಿಂಧೂರ ದೇಶದ ಹೆಣ್ಣು ಮಕ್ಕಳಿಗೆ ಸಮರ್ಪಣೆ. ಉಗ್ರವಾದಿಗಳು…
ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಕಾಳಗದಲ್ಲಿ ಅಮೆರಿಕ ಮಧ್ಯಸ್ಥಿಕೆ ವಹಿಸಿ ಕದನ ವಿರಾಮ ಘೋಷಿಸುವಲ್ಲಿ ಯಶಸ್ವಿಯಾಯಿತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಮಧ್ಯಸ್ಥಿಕೆ ವಹಿಸಿ ಈ ಒಂದು ಪಾಕಿಸ್ತಾನ ಮತ್ತು ಭಾರತದ ನಡುವೆ ಕದನ ವಿರಾಮ ಘೋಷಿಸಲು ಕಾರಣಿಕರ್ತರಾಗಿದ್ದಾರೆ. ಆದರೆ ಇದೀಗ ಮತ್ತೆ ಡೊನಾಲ್ಡ್ ಟ್ರಂಪ್ ಕದನ ವಿರಾಮದ ಕ್ರೆಡಿಟ್ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಹೌದು ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸುವಲ್ಲಿ ಡೊನಾಲ್ಡ್ ಟ್ರಂಪ್ ಕೂಡ ಮಹತ್ವದ ಪಾತ್ರವಹಿಸಿದ್ದರು ಎನ್ನಲಾಗುತ್ತಿದೆ. ಇದೀಗ ಡೊನಾಲ್ಡ್ ಟ್ರಂಪ್ ಮತ್ತೆ ಕದನ ವಿರಾಮದ ಕ್ರೆಡಿಟ್ ತೆಗೆದುಕೊಂಡಿದ್ದಾರೆ. ಪರಮಾಣು ಸಂಘರ್ಷವನ್ನು ನಾವು ತಡೆದಿದ್ದೇವೆ. ಅಕಸ್ಮಾತ್ ಕದನ ಮುಂದುವರಿಸಿದರೆ, ವ್ಯಾಪಾರ ಬಂದ್ ಮಾಡಲಾಗುತ್ತೆ ಅಂತ ಹೇಳಿದ್ದೆ. ಎರಡು ದೇಶಗಳ ಜೊತೆಗೆ ವ್ಯಾಪಾರ ಮಾಡಲ್ಲ ಅಂತ ಹೇಳಿದ್ದೆ. ಕರೆ ಮಾಡಿ ಹೇಳಿದ್ದಕ್ಕೆ ಇದೀಗ ಎರಡು ದೇಶಗಳು ಕದನ ವಿರಾಮ ಘೋಷಿಸಿವೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಪರಮಾಣು ಯುದ್ಧ ತಡೆದಿದ್ದೇವೆ. ಪರಮಾಣು…
ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಭೀಮಾನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್ ಮುಂಭಾಗದಲ್ಲಿ ನಡೆದಿದೆ. ಮೃತ ಯುವಕರನ್ನು ಗ್ರಾಮದ ಶಕೀಲ್ (18) ಮಹಿಬೂಬ್ (20) ಎಂದು ಗುರುತಿಸಲಾಗಿದೆ. ಬೇಸಿಗೆ ಹಿನ್ನೆಲೆ ಇಂದು ಸ್ನೇಹಿತರ ಜೊತೆ ಭೀಮಾನದಿಗೆ ಈಜಾಡಲು ಬಂದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗು ಸ್ಥಳೀಯರ ಸಹಾಯದಿಂದ ನೀರಿನಿಂದ ಮೃತದೇಹವನ್ನು ತೆಗೆಯಲಾಗಿದ್ದು, ಸ್ಥಳಕ್ಕೆ ವಡಗೇರಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಒಂದೆಡೆ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಉಗ್ರರ ನೆಲೆಗಳನ್ನು ನಾಶ ಮಾಡಿದೆ. ಅಲ್ಲದೆ ನೂರಕ್ಕೂ ಅಧಿಕ ಉಗ್ರರನ್ನು ಹತ್ಯೆಗೈದಿದೆ. ಇದರ ಮಧ್ಯ ಮಸೀದಿಯಲ್ಲಿದ್ದ ಕುರಾನ್ ಪುಸ್ತಕ ಕದ್ದೊಯ್ದು ಸುಟ್ಟು ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿದೆ. ಹೌದು ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ನಿರ್ಮಾಣ ಹಂತದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ. ಇಂದು ಪ್ರಾರ್ಥನೆಗೆಂದು ಬಂದಾಗ ಕುರಾನ್, ಹದೀಸ್ ಇಲ್ಲದಿರುವುದು ಬೆಳಕಿಗೆ ಬಂದಿದೆ. ಪ್ರಾರ್ಥನೆ ಮುಗಿಸಿದ ಬಳಿಕ ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುವುದು ಕಂಡುಬಂದಿದೆ. ಇದೀಗ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ ಬಳಿಕ ಇಂದು ಎರಡು ದೇಶದ DGMO ಮಹತ್ವದ ಸಭೆ ನಡೆಸಿದರು. ಇದಕ್ಕೂ ಮುನ್ನ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಆಪರೇಷನ್ ಸಿಂಧೂರ್…
ನವದೆಹಲಿ : ಆಪರೇಷನ್ ಸಿಂಧೂರ್ ಕುರಿತು ಭಾರತದ ಮೂರು ಸೇನಾ ಅಧಿಕಾರಿಗಳು ಇಂದು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು. ನವದೆಹಲಿಯ ಮೀಡಿಯಾ ಸೆಂಟರ್ ನಲ್ಲಿ ಸುದ್ದಿಗೋಷ್ಠಿ ನಡೆಸಿದರು.ಈ ವೇಳೆ ಮಾತು ಆರಂಭಿಸಿದ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮೊದಲಿಗೆ ವಿರಾಟ್ ಕೊಹ್ಲಿಯ ಟೆಸ್ಟ್ ನಿವೃತ್ತಿಯ ಬಗ್ಗೆ ಮಾತನಾಡಿದರು. ನಾವು ಇಂದು ಕ್ರಿಕೆಟ್ ಬಗ್ಗೆ ಮಾತನಾಡಬಹುದು. ನಿಮಗೆಲ್ಲರಿಗೂ ತಿಳಿದಿರುವ ಹಾಗೆ ವಿರಾಟ್ ಕೊಹ್ಲಿ ಇಂದು ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲಾ ಭಾರತೀಯರಂತೆ ನನಗೂ ಕೂಡ ಕೊಹ್ಲಿ ನೆಚ್ಚಿನ ಕ್ರಿಕೆಟಿಗ.70 ರ ದಶಕದಲ್ಲಿ ನನ್ನ ಶಾಲೆಯ ದಿನಗಳಲ್ಲಿ ನಡೆದ ಒಂದು ಘಟನೆ ನನಗೆ ಈಗಲೂ ನೆನಪಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ಆಶಸ್ ಸರಣಿ ನಡೆದಿತ್ತು. ಈ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಇಂಗ್ಲೆಂಡ್, ಆಸ್ಟ್ರೇಲಿಯಾದ ಇಬ್ಬರು ಬೌಲರ್ಗಳ ಮುಂದೆ ದೂಳಿಪಟವಾಗಿತ್ತು. ಇಬ್ಬರು ಆಸೀಸ್ ವೇಗಿಗಳಾದ ಜೆಫ್ ಥಾಮ್ಸನ್ ಮತ್ತು ಡೆನ್ನಿಸ್ ಲಿಲ್ಲಿ ಇಂಗ್ಲಿಷ್ ಬ್ಯಾಟಿಂಗ್ ಲೈನ್ ಅಪ್ ಅನ್ನು ಛಿದ್ರಗೊಳಿಸಿದ್ದರು. ಜೆಫ್…
ಮಂಡ್ಯ : ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ಕೆಲವು ದಿನಗಳ ಹಿಂದೆ ಅವರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದಿದ್ದರು, ಈ ಸಂಬಂಧ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಂದೆಯ ಆರೋಗ್ಯದ ಬಗ್ಗೆ ಉತ್ತರ ನಿಖಿಲ್ ಕುಮಾರಸ್ವಾಮಿ ಇದೀಗ ಮಾಹಿತಿ ನೀಡಿ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, ಕುಮಾರಸ್ವಾಮಿಯವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ. ಮೇ 14ರಂದು ಕ್ಯಾಬಿನೆಟ್ ಸಭೆಯಲ್ಲಿ ಭಾಗಿಯಾಗುತ್ತಾರೆ. ಅವರ ತಂದೆ ತಾಯಿಯ ಕೆಲಸ ಕಾರ್ಯ ಶ್ರೀರಕ್ಷೆಯಾಗಿ ಆರೋಗ್ಯ ಕಾಪಾಡುತ್ತೆ. ನಾಡಿನ ಜನತೆಯ ಪ್ರೀತಿ, ಪ್ರಾರ್ಥನೆಗೆ ಕುಮಾರಸ್ವಾಮಿ ಚೆನ್ನಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಉತ್ತರಕನ್ನಡ : ಭಾರತ ಹಾಗೂ ಪಾಕಿಸ್ತಾನದ ನಡುವೆ ಇದೀಗ ಕದನ ವಿರಾಮ ಘೋಷಣೆಯಾಗಿದ್ದು, ಇಂದು ಸಂಜೆ ಭಾರತ ಮತ್ತು ಪಾಕಿಸ್ತಾನದ DGMO ಮಾತುಕತೆ ನಡೆಸಲಿದ್ದಾರೆ. ಇದಕು ಮುನ್ನ ದೇಶದ ಎಲ್ಲೆಡೆ ಮಾಕ್ ಡ್ರಿಲ್ ನಡೆಸಲು ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಈ ಹಿನ್ನೆಲೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಮಾಕ್ ಡ್ರಿಲ್ ನಡೆಸಲಾಗಿದೆ. ಇದೀಗ ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಕ್ ಡ್ರಿಲ್ ನಡೆಸಲಾಯಿತು. ಉತ್ತರ ಕನ್ನಡ ಜಿಲ್ಲೆಯ ಆರು ಸ್ಥಳಗಳಲ್ಲಿ ಇಂದು ಮಾಕ್ ಡ್ರಿಲ್ ನಡೆಸಲಾಯಿತು. ಬಿಣಗಾ ಗ್ರಾಮದ ಆದಿತ್ಯ ಬಿರ್ಲಾ ವಸತಿ ಗ್ರಹದಲ್ಲಿ ಮಾರ್ಕ್ ಡ್ರಿಲ್ ನಡೆಸಲಾಯಿತು. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಗ್ರಾಮದಲ್ಲಿ ಬಾಂಬ್ ಬಿದ್ದ ವಾತಾವರಣ ಸೃಷ್ಟಿಸಿ ಅಣುಕು ಪ್ರದರ್ಶನ ನಡೆಸಲಾಯಿತು. 40 ಜನರನ್ನು ರಕ್ಷಿಸಿ ಬೈತ್ಕೋಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಯಿತು. ಅಗ್ನಿಶಾಮಕದಳ ಎನ್ ಡಿ ಆರ್ ಎಫ್ ಮತ್ತು ಪೊಲೀಸರು ರಕ್ಷಿಸಿ ಸ್ಥಳಾಂತರಿಸಿದರು. ಬಾಂಬ್ ಪತ್ತೆ, ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಯಿತು.…
ನವದೆಹಲಿ : ಈಗಾಗಲೇ ಭಾರತದ ಆಪರೇಷನ್ ಸಿಂಧೂರ್ ದಾಳಿಕೆ ಪಾಕಿಸ್ತಾನ ಅಕ್ಷರಶಹಃ ನಲುಗಿದೆ. ಇಷ್ಟಾದರೂ ಕೂಡ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಮತ್ತೆ ಭಾರತದ ಮೇಲೆ ದಾಳಿಗೆ ಪ್ರಯತ್ನ ಮಾಡುತ್ತಲೇ ಇದೆ. ಇತ್ತ ಭಾರತ ದಾಳಿ ಮಾಡಿದರೆ, ಅತ್ತ ಇನ್ನೊಂದು ಭಾಗದಿಂದ ಬಲೂಚ್ ಲಿಬ್ರೇಶನ್ ಆರ್ಮಿ ಪಾಕಿಸ್ತಾನದ ಸೈನಿಕರನ್ನು ಕೊಂದಿದೆ. ಹೌದು ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡುತ್ತಿದ್ದಂತೆ ಆರ್ಮಿ ಸಹ ಪಾಕಿಸ್ತಾನದ ಹಲವು ಸೈನಿಕರನ್ನು ಹತ್ಯೆಗೈದಿದೆ. ಇದೀಗ ಬಲೂಚಿಸ್ತಾನ್ ಲಿಬರೇಷನ್ ಫ್ರಂಟ್ (BLF) ನ ಕಮಾಂಡರ್ ಭಾರತಕ್ಕೆ ಬೇಡಿಕೆ ಇಟ್ಟಿದ್ದು ನಮಗೆ 93,000 ಗಳನ್ನು ಕೊಡಿ ನಾವು ಪಾಕಿಸ್ತಾನವನ್ನು ಕೂಡಲೇ ಮುಗಿಸುತ್ತೇವೆ. ನಮಗೆ ಶಸ್ತ್ರಾಸ್ತ್ರಗಳನ್ನು ಕೊಟ್ಟರೆ ಪಾಕಿಸ್ತಾನವನ್ನು ಹುಡಿಸ್ ಮಾಡುತ್ತೇವೆ ಎಂದು ಬಲೂಚಿಸ್ತಾನ್ ಲಿಬರೇಷನ್ ಫ್ರಂಟ್ ಕಮಾಂಡರ್ ಭಾರತಕ್ಕೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೆ ನಿನ್ನೆ ಬಲೂಚ್ ಲಿಬ್ರೇಶನ್ ಆರ್ಮಿ ಸಹ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಸಹ ನಿಮಗೆ ಬೆಂಬಲ ಕೊಡುತ್ತೇವೆ. ಪಾಕಿಸ್ತಾನದ ಮೇಲೆ ನೀವು ಯಾವುದೇ ದಿಟ್ಟ…
ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಇಂದು ನವದೆಹಲಿಯಲ್ಲಿ ಭಾರತದ ಮೂವರು ಸೇನಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ರಾಜೀವ್ ಘಾಯ್ ಅವರು ಆಪರೇಷನ್ ಸಿಂದಗಿ ಕುರಿತಂತೆ ಮಾಹಿತಿ ನೀಡಿದರು. ಪಾಕಿಸ್ತಾನದ ಕಿರಾನಾ ಬೆಟ್ಟ, ಪರಮಾಣು ಕೇಂದ್ರದ ಮೇಲೆ ನಾವು ದಾಳಿ ನಡೆಸಿಲ್ಲ. ಆದರೆ ಕೇವಲ 3 ಗಂಟೆಗಳಲ್ಲಿ ಪಾಕಿಸ್ತಾನದ 11 ವಾಯುನೆಲೆಗಳನ್ನು ನಾಶಪಡಿಸಿದ್ದೇವೆ. ಪಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಪಾಕಿಸ್ತಾನದ ಡ್ರೋನ್ ಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿದ್ದೇವೆ. ಪಾಕಿಸ್ತಾನದ ಚೀನಾ ನಿರ್ಮಿತ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದೇವೆ. ಜಮ್ಮು ಕಾಶ್ಮೀರದ ಪಹಲ್ಗಾಂ ದಾಳಿಗೆ ಪ್ರತಿಕಾರ ತೀರಿಸಿದ್ದೇವೆ. ನೌಕಾ ಸೇನೆ ಎಲ್ಲದಕ್ಕೂ ಸರ್ವಸನದ್ಧವಾಗಿದೆ.ಶತ್ರುಗಳ ಜೆಟ್ ಗಳನ್ನು ಹತ್ತಿರ ಸುಳಿಯಲು ಸಹ ಬಿಡಲ್ಲ. 29 ಮೆಗ್ ಜೆಟ್ ಗಳು ಸನ್ನದ್ಧವಾಗಿವೆ. ಪಾಕಿಸ್ತಾನ ದಾಳಿ ಮಾಡಿದರೆ ನಾವು ಪ್ರತಿದಾಳಿ ಮಾಡುತ್ತೇವೆ. ಭಾರತೀಯ ಸೇನೆಯ ಎಲ್ಲಾ ಶಸ್ತ್ರಗಳು ಸನ್ನದ್ಧವಾಗಿವೆ. ಮಿಲಿಟರಿ ಸೇನೆ ಅಲರ್ಟ್…
ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಸೇನಾಧಿಕಾರಿಗಳು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ಈ ವೇಳೆ ಭಾರತೀಯ ವಾಯು ಸೇನೆಯ ಮುಖ್ಯಸ್ಥ ಅವಧೆಶ್ ಕೆ.ಭಾರ್ತಿ ಮಾತನಾಡಿ, ಭಾರತೀಯ ಸೇನೆಯ ಹೋರಾಟ ಉಗ್ರರ ವಿರುದ್ಧ ಇದೆ. ಉಗ್ರರಿಗೆ ಪಾಕಿಸ್ತಾನ ಕುಮ್ಮಕ್ಕೂ ನೀಡುತ್ತಿದೆ. ಮೇ 7 ರಂದು ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದೇವೆ. ನಮ್ಮ ಹೋರಾಟ ಪಾಕಿಸ್ತಾನ ಸೇನೆಯ ವಿರುದ್ಧ ಅಲ್ಲ ಭಾರತೀಯ ಸೇನೆಯ ಹೋರಾಟ ಏನಿದ್ದರೂ ಉಗ್ರರ ವಿರುದ್ಧ ಮಾತ್ರ. ಆದರೆ ಪಾಕಿಸ್ತಾನ ಮಾತ್ರ ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ ಎಂದರು. ಏರ್ ಫೈನ್ಸ್ ಫೈಟರ್ ಮಿಸೈಲ್ ಬಳಸಿ ದಾಳಿ ಮಾಡಿದ್ದೇವೆ. ಸರ್ಫೇಸ್ ಟು ಸರ್ಫೇಸ್ ಟು ಮೂಲಕ ದಾಳಿ ಮಾಡಿದ್ದೇವೆ. ಪಾಕಿಸ್ತಾನ ಸೇನೆಯು ಉಗ್ರರಿಗೆ ಸಹಕಾರ ಮತ್ತು ನೆರವು ನೀಡುತ್ತಿದೆ, ಉಗ್ರರ ನೆಲೆಗಳನ್ನು ಹುಡುಕಿ ನಾವು ಹೊಡೆದಿದ್ದೇವೆ. ಭಾರತೀಯ…














