Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಇತ್ತೀಚಿಗೆ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದೆ. ಇದೀಗ ಯುವ ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಲಮೂಡ ಗ್ರಾಮದ ಯುವ ರೈತ ಓಂಕಾರ ಚಂದ್ರಪ್ಪ ಬಿರಾದಾರ (24) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಕ್ಕದ ಗಿಡಕ್ಕೆ ಸೋಮವಾರ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಬೆಳಿಗ್ಗೆ ನೋಡಿದ ಸಾರ್ವಜನಿಕರು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಓಂಕಾರ ತಾಯಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಕಮಲಾಪುರ ಕೆನರಾ ಬ್ಯಾಂಕಿನಲ್ಲಿ ₹1.25 ಲಕ್ಷ ಸಾಲವಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ದೇಶದಲ್ಲಿ ಅರಣ್ಯ ಭೂಮಿ ಒತ್ತುವರಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ ದೊರೆತಿದೆ. ಈ ಕುರಿತು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು,ದೇಶದ 25 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 13,000 ಚದರ ಕಿಲೋಮೀಟರ್ನಷ್ಟು ಅರಣ್ಯ ಭೂಮಿ ಒತ್ತುವರಿ ಆಗಿದೆ. ಹೀಗೆ ಒತ್ತುವರಿ ಯಾದ ಪ್ರದೇಶವು ದೆಹಲಿ, ಸಿಕ್ಕಿಂ ಮತ್ತು ಗೋವಾ ರಾಜ್ಯಗಳ ಒಟ್ಟು ವಿಸ್ತೀರ್ಣಕ್ಕಿಂತಲೂ ಹೆಚ್ಚು. ಅರಣ್ಯ ಭೂ ಅತಿಕ್ರಮಣದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಮೂರನೇ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.ದೇಶದ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತನಗೆ ಸಲ್ಲಿಸಿದ ಮಾಹಿತಿಯನ್ನು ಕೇಂದ್ರ ಸರ್ಕಾರವು ಇತ್ತೀಚೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ಸಲ್ಲಿಸಿದೆ. ಅದರನ್ವಯ 25 ರಾಜ್ಯಗಳಲ್ಲಿ ಒಟ್ಟು 13056 ಚ.ಕಿ.ಮೀ ನಷ್ಟು ಅರಣ್ಯ ಒತ್ತುವರಿಯಾಗಿದೆ. ಇನ್ನೂ 10 ರಾಜ್ಯಗಳು ಅರಣ್ಯ ಭೂಮಿ ಒತ್ತುವರಿ ಮಾಹಿತಿ ಸಲ್ಲಿಸಬೇಕಿದೆ ಎಂದು ಹೇಳಿದೆ. 2024ರ ಮಾರ್ಚ್ವರೆಗಿನ ಅಂಕಿ ಅಂಶಗಳ ಪ್ರಕಾರ 5460.9 ಕಿ.ಮೀ ಅರಣ್ಯ ಭೂಮಿ ಒತ್ತುವರಿಯೊಂದಿಗೆ ಮಧ್ಯಪ್ರದೇಶ ಮೊದಲ…
ಬೆಂಗಳೂರು : IPL ಉದ್ಘಾಟನಾ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ತಂಡ ಬೆಂಗಳೂರು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹೌದು ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಲಿದೆ. ಇದರೊಂದಿಗೆ, ಬೆಂಗಳೂರಿನಲ್ಲಿ ಪ್ರಸಕ್ತ ಋತುವಿನ ಮೊದಲ ಐಪಿಎಲ್ ಪಂದ್ಯ ನಡೆದಂತಾಗಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರೂ ಸಿದ್ಧತೆ ಮಾಡಿಕೊಂಡಿದ್ದಾರೆ. ವಾಹನ ನಿಲುಗಡೆ, ವಾಹನ ನಿಲುಗಡೆ ನಿಷೇಧ ವಿವರವನ್ನು ಹಂಚಿಕೊಂಡಿದ್ದಾರೆ. ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂದು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ. ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣ ಸುತ್ತಮುತ್ತ ವಾಹನಗಳ…
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ನಾಡ ಬಂದೂಕಿನಿಂದ ಗುಂಡು ಹಾರಿಸಿ ವ್ಯಕ್ತಿಯೊಬ್ಬ ಅತ್ತೆ, ನಾದಿನಿ ಹಾಗು ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನು ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಮಾಗಲು ಗ್ರಾಮದಲ್ಲಿ ಈ ಒಂದು ಘೋರವಾದ ಘಟನೆ ನಡೆದಿದೆ. ಅತ್ತೆ ಜ್ಯೋತಿ (50) ನಾದಿನಿ ಸಿಂಧು (26) ಹಾಗು ಮಗಳು ಮೌಲ್ಯ (7) ಎನ್ನುವವರನ್ನು ರತ್ನಾಕರ್ ಎನ್ನುವ ವ್ಯಕ್ತಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. ರತ್ನಾಕರ ಮನೆಯ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇತ್ತೀಚಿಗಷ್ಟೇ ಕೊಡಗು ಜಿಲ್ಲೆಯಲ್ಲಿ ಹೆಂಡತಿಗೆ ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ ನಾಲ್ವರನ್ನು ಕೊಚ್ಚಿ ಕೊಂದು ಪತಿಯೊಬ್ಬ ಪರಾರಿಯಾಗಿದ್ದ ಘಟನೆ ನಡೆದಿತ್ತು. ಬಳಿಕ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಚಿಕ್ಕಮಗಳೂರಲ್ಲು ಸಹ…
ಬೆಂಗಳೂರು : ರಾಜ್ಯದಲ್ಲಿ ನಿನ್ನೆಯಿಂದ ದುಬಾರಿ ದುನಿಯಾ ಆರಂಭವಾಗಿದ್ದು, ಹಾಲಿನ ದರ ವಿದ್ಯುತ್ ದರ ಏರಿಕೆಯಾಗಿದೆ. ಅಲ್ಲದೇ ಬೆಂಗಳೂರಲ್ಲಿ ಕಸಕ್ಕೂ ಸೆಸ್ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ 2025-26ನೇ ಸಾಲಿನ ಆರ್ಥಿಕ ವರ್ಷ ನಿನ್ನೆಯಿಂದ ಆರಂಭಗೊಂಡಿದ್ದರೂ ಆಸ್ತಿ ತೆರಿಗೆ ಪಾವತಿಗೆ ಬಿಬಿಎಂಪಿ ವೆಬ್ ಸೈಟ್ ಸಿದ್ಧವಾಗದ ಕಾರಣ ಇನ್ನೂ ಎರಡೂರು ದಿನ ಆಸ್ತಿ ಮಾಲೀಕರು ತೆರಿಗೆ ಪಾವತಿ ಸಾಧ್ಯವಾಗುವುದಿಲ್ಲ. ಆಸ್ತಿ ತೆರಿಗೆ ಪಾವತಿ ಪೋರ್ಟಲನ್ನು ಎನ್ಐಸಿ ಅಭಿವೃದ್ಧಿ ಮತ್ತು ನಿರ್ವಹಣೆ ಮಾಡುತ್ತಿದೆ. ಪ್ರಸಕ್ತ ಸಾಲಿನಿಂದ ಬಿಬಿಎಂಪಿ ವ್ಯಾಪ್ತಿಯ ಕಟ್ಟಡಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಘನತ್ಯಾಜ್ಯ ಶುಲ್ಕ ವಿಧಿಸಿ ಆಸ್ತಿ ತೆರಿಗೆಯೊಂದಿಗೆ ವಸೂಲಿಗೆ ತೀರ್ಮಾನಿಸಲಾಗಿದೆ. ಜತೆಗೆ, ಸುಸ್ತಿ ಉಳಿಸಿಕೊಂಡ ಆಸ್ತಿ ಮಾಲೀಕರಿಗೆ ಆಸ್ತಿ ತೆರಿಗೆಯ ಶೇ.100ರಷ್ಟು ದಂಡ ವಿಧಿ ಸುವುದು, ಬಡ್ಡಿ ವಿಧಿಸುವುದಕ್ಕೆ ಸಂಬಂಧಿಸಿ ದಂತೆ ಆಸ್ತಿ ತೆರಿಗೆ ಪಾವತಿಸುವ ವೆಬ್ ಸಾಕಷ್ಟು ಬದಲಾಗಬೇಕಾಗಿದೆ. ಪೋರ್ಟಲ್ ಸಿದ್ದ ಪಡಿಸುವುದು ಬಾಕಿ ಇರುವ ಕಾರಣ 2-3 ದಿನ ತೆರಿಗೆ ಪಾವತಿ ತಡವಾಗಲಿದೆ ಎಂದಿದ್ದಾರೆ ಅಧಿಕಾರಿಗಳು. ಶೇ.5ರಷ್ಟು ವಿನಾಯಿತಿ…
ವಿಜಯಪುರ : ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದು ಅಲ್ಲದೆ, ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೀಡಿದ್ದ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಕ್ರಮ ಕೈಗೊಂಡಿತ್ತು. ಆದರೆ ಇದಕ್ಕೆ ಯಾವುದಕ್ಕೂ ಜಗ್ಗದೆ ಬಗದೇ ಶಾಸಕ ಯತ್ನಾಳ್ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. 2028 ರಲ್ಲಿ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾತನಾಡಿದ್ದು, ಮತ್ತೆ ಬಿ.ಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂತ್ರಿ ಆಗಿ ಎಂದು ಆಗ ಬಸವರಾಜ ಬೊಮ್ಮಾಯಿ ಹೇಳಿದ್ದರು. ಆಗ ನಾನು ಅಭಿವೃದ್ಧಿಗೆ ಹಣ ಕೊಡಿ ಮಂತ್ರಿಗಿರಿ ಬೇಡ ಎಂದು ನಾನು ಅವರಿಗೆ ಹೇಳಿದ್ದೆ. ಕಾರಿನ ಮೇಲೆ ಕೆಂಪು ಗೂಟ ಹಾಕಿಕೊಂಡು ಓಡಾಡುವ ಶೋಕಿ…
ಬೆಂಗಳೂರು : ನಿನ್ನೆಯಿಂದಲೇ ರಾಜ್ಯದಲ್ಲಿ ಹಾಲಿನ ದರ ಲೀಟರ್ ಗೆ 4 ರೂ. ಹೆಚ್ಚಳವಾಗಿದ್ದು, ಅಲ್ಲದೇ ಮೊಸರು, ವಿದ್ಯುತ್ ದರ, ಸೇರಿದಂತೆ ಬೆಂಗಳೂರಲ್ಲಿ ಕಸಕ್ಕೂ ಸೆಸ್ ನೀಡಬೇಕಾಗಿದೆ. ಇದೆಲ್ಲದರ ಮಧ್ಯ ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಮಧ್ಯರಾತ್ರಿಯಿಂದ ಡಿಸೈಲ್ ಅನ್ನು ಪ್ರತಿ ಲೀಟರ್ ಗೆ 2 ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ ಮಾರಾಟ ತೆರಿಗೆ ದರವನನು ಶೇಕಡಾ 21.17ಕ್ಕೆ ಏರಿಸಲಾಗಿದೆ. ಹೀಗಾಗಿ ಪ್ರತಿ ಲೀಟರ್ ಮೇಲೆ 2 ರೂಪಾಯಿ ಏರಿಕೆಯಾಗಿದೆ. ಏರಿಕೆ ಬಳಿಕ ಕರ್ನಾಟಕದಲ್ಲ ಡೀಸೆಲ್ ಮಾರಟ ದರ 91.02 ರೂಪಾಯಿ ಆಗಿದೆ. ಪರಿಷ್ಕೃತ ಮಾರಾಟ ದರವೂ ನರೆಯ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಇರುತ್ತದೆ ಎಂದು ಸರ್ಕಾರ ತನ್ನ ಅಧಿಸೂಚನೆಯಲ್ಲಿ ಹೇಳಿದೆ. ಹೌದು ಇಂದಿನಿಂದಲೇ ಕರ್ನಾಟಕದಲ್ಲಿ ಡೀಸೆಲ್ ಬೆಲೆ ಏರಿಕೆ ಮಾಡಿದೆ. ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಕರ್ನಾಟಕ ಸರ್ಕಾರ ಹೆಚ್ಚಿಸಿದೆ. ಬಳಿಕ…
ಮೈಸೂರು : ಮೈಸೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, 2 ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮೈಸೂರು ಜಿಲ್ಲೆಯ ಆನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ಕುಮಾರ್ (30) ಹಾಗೂ ಮಹೇಶ್ (22) ಸಾವನಪ್ಪಿದ್ದಾರೆ. ಘಟನೆಯಲ್ಲಿ ಬಸವರಾಜು ಗದಗ್ ಮತ್ತು ಇನ್ನೋರ್ವ ಬಸವರಾಜು ಸೇರಿದಂತೆ ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು, ಗಾಯಾಳುಗಳಿಗೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕವಲಂದೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಬೆಂಗಳೂರು : IPL ಉದ್ಘಾಟನಾ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ತಂಡ ಬೆಂಗಳೂರು ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹೌದು ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಲಿದೆ. ಇದರೊಂದಿಗೆ, ಬೆಂಗಳೂರಿನಲ್ಲಿ ಪ್ರಸಕ್ತ ಋತುವಿನ ಮೊದಲ ಐಪಿಎಲ್ ಪಂದ್ಯ ನಡೆದಂತಾಗಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರೂ ಸಿದ್ಧತೆ ಮಾಡಿಕೊಂಡಿದ್ದಾರೆ. ವಾಹನ ನಿಲುಗಡೆ, ವಾಹನ ನಿಲುಗಡೆ ನಿಷೇಧ ವಿವರವನ್ನು ಹಂಚಿಕೊಂಡಿದ್ದಾರೆ. ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬುಧವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ. ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣ ಸುತ್ತಮುತ್ತ ವಾಹನಗಳ…
ಬೆಂಗಳೂರು : ರಾಜ್ಯದಲ್ಲಿ ಸಚಿವ ಕೆ.ಎನ್ ರಾಜಣ್ಣ ಮೇಲೆ ಹನಿಟ್ರ್ಯಾಪ್ ಗೆ ಯತ್ನಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆದರೆ ಹನಿಟ್ರ್ಯಾಪ್ ಬದಲಾಗಿ ಕೊಲೆಗೆ ಸಂಚು ರೂಪಿಸಿದ್ದರು ಎನ್ನುವ ಆಡಿಯೋ ಇದೀಗ ಸೋರಿಕೆಯಾಗಿದೆ. ಹತ್ಯೆ ಸುಪಾರಿಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ರಾಜೇಂದ್ರ ಅವರ ಭೇಟಿಗೆ ಯತ್ನಿಸಿದ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮತ್ತೋರ್ವ ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಆರೋಪಿ ಗುಂಡನ ಲವರ್ ಯಶೋಧಾಳನ್ನು ಖಾಕಿ ವಶಕ್ಕೆ ಪಡೆದುಕೊಂಡಿದೆ. ಯಶೋಧಳನ್ನು ವಶಕ್ಕೆ ಪಡೆದು ಬೆನ್ನಲ್ಲೇ ಆರೋಪಿ ಗುಂಡಾ ಪರಾರಿಯಾಗಿದ್ದಾನೆ ಸೋಮನ ಸಹಚರ ಗುಂಡನಿಗಾಗಿ ಇದೀಗ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಇತ್ತೀಚೆಗೆ, ರಾಜೇಂದ್ರ ಅವರ ಸುಪಾರಿಗೆ ಸಂಬಂಧಿಸಿದಂತೆ 18 ನಿಮಿಷಗಳ ಟೆಲಿಫೋನ್ ಸಂಭಾಷಣೆಯೊಂದು ಲೀಕ್ ಆಗಿತ್ತು. ಅತ್ತ, ರಾಜೇಂದ್ರ ಅವರು ತಮಗೆ ಸಿಕ್ಕಿರುವ ಕೆಲವು ಸಾಕ್ಷ್ಯಾಧಾರಗಳನ್ನು ಸೇರಿಸಿಕೊಂಡು ತುಮಕೂರು ಎಸ್ಪಿಯವರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ, ತನಿಖೆ ನಡೆಸಿರುವ ಪೊಲೀಸರು ಓರ್ವ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ…