Author: kannadanewsnow05

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗೋದು ಗ್ಯಾರಂಟಿ. ಅದನ್ನು ತಪ್ಪಿಸೋಕೆ ಯಾರಿಂದಾನು ಸಾಧ್ಯವಿಲ್ಲ ಎಂದು ವೀರಪ್ಪ ಮೊಯ್ಲಿ ಹೇಳಿಕೆ ನೀಡಿದ್ದರು. ಇದೀಗ ಈ ಒಂದು ಹೇಳಿಕೆ ನಡುವೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಕಂಡುಬಂದಿದ್ದು, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ಮಾಡಿದ್ದಾರೆ. ಹೌದು ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ಧು, ಭಾರಿ ಕುತೂಹಲ ಮೂಡಿಸಿದೆ. ಖರ್ಗೆ ಭೇಟಿ ಬಳಿಕ ಮಾತನಾಡಿದ ಅವರು, ನಾನು ಖರ್ಗೆಯವರನ್ನು ಭೇಟಿ ಮಾಡದೆ ಬಿಜೆಪಿ ಆಫೀಸ್ ಗೆ hoglab? ಖರ್ಗೆ ಕಾಂಗ್ರೆಸ್ ಅಧ್ಯಕ್ಷರು ಅವರು ರಾಜ್ಯಕ್ಕೆ ಬಂದಾಗ ನಾನು ಅವರಿಗೆ ಗೌರವ ಕೊಡದೆ ಇನ್ಯಾರಿಗೆ ಕೊಡೋಕೆ ಆಗುತ್ತೆ? ಇದು ನಮ್ಮ ಕರ್ತವ್ಯ ಪಕ್ಷದ ವಿಚಾರ ಹಾಗೂ ಹೊಸ ಕಾಂಗ್ರೆಸ್ ಭವನ ಉದ್ಘಾಟನೆ ವಿಚಾರವಾಗಿ ದಿನಾಂಕ ನೀಡುವ ಕುರಿತು ಮಾತುಕತೆ ಆಗಿದೆ ಎಂದು ತಿಳಿಸಿದರು.

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರದಲ್ಲಿ ಕುಟುಂಬ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಂಡಿಪುರಕ್ಕೆ ಬಂದಿದ್ದ ದಂಪತಿ ಮತ್ತು 10 ವರ್ಷದ ಬಾಲಕ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರು ಮೂಲದ ಜೆ. ನಿಶಾಂತ್(40) ಮತ್ತು ಅವರ ಪತ್ನಿ, ಪುತ್ರ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಬಿಬಿಎಂಪಿ ನೌಕರ ಅಂತ ಹೇಳಿ ರೂಮ್ ಬುಕ್ ಮಾಡಿದ್ದ ನಿಶಾಂತ್. ಬಿಬಿಎಂಪಿ ನೌಕರ ಎಂದು ಫೇಕ್ ಐಡಿ ನೀಡಿದ್ದ ನಿಶಾಂತ್, ನಾಪತ್ತೆಯಾಗಿರುವ ನಿಶಾಂತ್ ಮೈತುಂಬ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ನಿಶಾಂತ್ ಸದ್ಯ ಯಾವುದೇ ಕೆಲಸ ಕಾರ್ಯ ಮಾಡುತ್ತಿರಲಿಲ್ಲ ಸಾಲಕ್ಕೆ ಹೆದರಿ ಕುಟುಂಬದ ಸಮೇತ ನಿಶಾಂತ್ ಬಂಡಿಪುರಕ್ಕೆ ಬಂದಿದ್ದ. ಈ ವೇಳೆ ಕಂಟ್ರಿ ಕ್ಲಬ್ ರೆಸಾರ್ಟ್ ನಲ್ಲಿ ಬಿಬಿಎಂಪಿ ನೌಕರ ಎಂದು ರೂಮ್ ಪಡೆದಿದ್ದ. ಪತ್ನಿ ಚಂದನ ಪುತ್ರನೊಂದಿಗೆ ಬಂಡಿಪುರಕ್ಕೆ ಬಂದಿದ್ದ ಎನ್ನಲಾಗಿದೆ.ಸ್ಥಳಕ್ಕೆ ಚಾಮರಾಜನಗರ ಎಸ್ಪಿ ಡಾ.ಬಿ.ಟಿ. ಕವಿತಾ ಭೇಟಿ ನೀಡಿ…

Read More

ಕಲಬುರ್ಗಿ : ಇಂದು ಕಲ್ಬುರ್ಗಿಯಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರವಾದಂತಹ ಮರ್ಡರ್ ನಡೆದಿದ್ದು, ಕಬ್ಬಿಣದ ರಾಡ್ ನಿಂದ ಹೊಡೆದು ರೌಡಿಶೀಟರ್ ಓರ್ವನನ್ನು ಕೊಲೆ ಮಾಡಲಾಗಿದೆ. ಈ ಒಂದು ಘಟನೆ ಕಲಬುರ್ಗಿಯ ಕಾಕಡೆ ಚೌಕ್ ಬಳಿ ಲಂಗರ್ ಹನುಮಾನ್ ದೇವಸ್ಥಾನದ ಸಮೀಪ ವೀರೇಶ್ ಸಾರಥಿ(40) ಎನ್ನುವ ರೌಡಿ ಶೀಟರ್ ನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಕೊಲೆಯಾದ ರೌಡಿಶೀಟರ್ ಕಲಬುರಗಿ ಭವಾನಿ ನಗರದ ನಿವಾಸಿಯಾಗಿದ್ದಾನೆ ಎಂದು ತಿಳಿದುಬಂದಿದ್ದು, ಕೊಲೆಗೂ ಮುನ್ನ ದುಷ್ಕರ್ಮಿಗಳು ದೇಗುಲದ ಬಳಿ ಕರೆಸಿಕೊಂಡು ಕೊಲೆ ಮಾಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ರಾಮನಗರ : ಅರಣ್ಯದಲ್ಲಿ ಪಾರ್ಟಿ ಮಾಡುತ್ತಿದ್ದನ್ನು ಪ್ರಶ್ನಿಸಿದ ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕುರುಬಳ್ಳಿ ದೊಡ್ಡಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.ಘಟನೆ ಸಂಬಂಧ ಓರ್ವ ರೌಡಿ ಶೀಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕುರುಬಳ್ಳಿ ದೊಡ್ಡಿಯ ಅರಣ್ಯ ಪ್ರದೇಶದಲ್ಲಿ ಕುಳಿತು ಆರೋಪಿಗಳು ಪಾರ್ಟಿ ಮಾಡುತ್ತಿದ್ದರು ಪಾರ್ಟಿ ಮಾಡುತ್ತಿರುವುದನ್ನು ಅರಣ್ಯ ಇಲಾಖೆ ಸಿಬ್ಬಂದಿ ವೇಳೆ ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ ಅರಣ್ಯ ಇಲಾಖೆಗೆ ಸಿಬ್ಬಂದಿ ಜೊತೆಗೂ ಗಲಾಟೆ ಮಾಡಿದ್ದಾರೆ. ಗಲಾಟೆ ಮಾಡಿ ವಾಹನಕ್ಕೆ ಬೆಂಕಿ ಹಚ್ಚಲು ಆರೋಪಿಗಳು ಮುಂದಾಗಿದ್ದರು. ಕೂಡಲೇ ಸಿಬ್ಬಂದಿಗಳು 112 ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಘಟನಾ ಸ್ಥಳಕ್ಕೆ ಬಂದ ಪೋಲೀಸರ ಜೊತೆಗೂ ಗಲಾಟೆ ಮಾಡಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿ ಟ್ಯಾಬ್ ಒಡೆದು ಹಾಕಿದ್ದಾರೆ. ಹಲ್ಲೆ ಮಾಡಿದ ರೌಡಿ ಶೀಟರ್ ಕಿರಣ್, ಸುಂದರ್ ಹಾಗು ಪ್ರತಾಪ್ ಎನ್ನುವ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಪರಾರಿಯಾದ ಇನ್ನಿಬ್ಬರು…

Read More

ಮಂಗಳೂರು : ಶಾಸಕ ವೇದವ್ಯಾಸ ಕಾಮತ್ ಅವರ ಪ್ರಚೋದನೆಯಿಂದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಇದೀಗ ಶಾಸಕ ವೇದವ್ಯಾಸ ಕಾಮತ್ ಸೇರಿ 11 ಜನರ ವಿರುದ್ಧ, FIR ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ್ ಪ್ರಭು ನೀಡಿದ ದೂರಿನ ಅನ್ವಯ ಶಾಸಕ ವೇದವಾಸ್ ಕಾಮತ್ ವಿರುದ್ಧ FIR ದಾಖಲಾಗಿದೆ. ನಿನ್ನೆ ರಾತ್ರಿ ಶಕ್ತಿ ನಗರದ ಬಳಿ ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಮೇಲೆ ಹಲ್ಲೆ ನಡೆದಿತ್ತು. ಏಳೆಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ವೇದವ್ಯಾಸ ಕಾಮತ್ ಪ್ರಚೋದನೆಯಿಂದ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮ ಕಳಶೋತ್ಸವ ಹಿನ್ನೆಲೆಯಲ್ಲಿ ಐವನ್ ಡಿಸೋಜಾ ಬರುತ್ತಾರೆಂದು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ಈ ವೇಳೆ ಶಾಸಕ ವೇದವಾಸ್ ಕಾಮತ್ ಸ್ಥಳಕ್ಕೆ ಆಗಮಿಸಿ ದೇಗುಲಕ್ಕೆ ಕಲ್ಲು ಹೊಡೆಯುವವರಿಗೆ ಇಲ್ಲೇನು ಕೆಲಸ ಎಂದಿದ್ದರು. ಶಾಸಕ ವೇದವ್ಯಾಸ್ ಕಾಮತ್ ಮಾತಿಗೆ ಸ್ಥಳದಲ್ಲಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹೆಚ್ಚು ಕಲಾವಿದರು ಭಾಗವಹಿಸದಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಬೇಸರ ಹೊರಹಾಕಿ ಯಾರಿಗೆ ಎಲ್ಲಿ ನಟ್ಟು ಬೋಲ್ಟ್ ಸರಿ ಮಾಡಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಹೇಳಿಕೆ ನೀಡಿದರು. ಇದೀಗ ಈ ಹೇಳಿಕೆಗೆ ನಿರ್ದೇಶಕ ಟಿಎಸ್ ನಾಗಾಭರಣ ಆಕ್ರೋಶ ಅವರ ಹಾಕಿದ್ದು ಡಿಕೆ ಶಿವಕುಮಾರ್ ಅವರು ಅಂತಹ ಸಂಸ್ಕಾರಕ್ಕೆ ಒಗ್ಗಿ ಹೋಗಿದ್ದಾರೆ ಎಂದು ಕಿಡಿ ಕಾರಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಿತ್ರರಂಗದವರಿಗೆ ಡಿಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್ ನೀಡಿದ ವಿಚಾರವಾಗಿ ನಿರ್ದೇಶಕ ಟಿ.ಎಸ್ ನಾಗಾಭರಣ ಆಕ್ರೋಶ ಅವರ ಹಾಕಿದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆ ಅವರ ಸಂಸ್ಕಾರ ತೋರಿಸುತ್ತದೆ. ಡಿಕೆ ಶಿವಕುಮಾರ್ ಆ ಸಂಸ್ಕಾರಕ್ಕೆ ಒಗ್ಗಿ ಹೋಗಿದ್ದಾರೆ.ಅಷ್ಟು ದೊಡ್ಡ ವೇದಿಕೆಯಲ್ಲಿ ಹಾಗೆ ಮಾತನಾಡಿದ್ದು ತಪ್ಪು ಡಿಸಿಎಂ ಡಿಕೆ ಹೇಳಿಕೆಯಿಂದ ಯಾರಿಗೂ ಏನು ಆಗಿಲ್ಲ. ಕನ್ನಡ ಚಿತ್ರರಂಗದಲ್ಲಿರುವ ಪ್ರತಿಯೊಬ್ಬನು ನಾಯಕನೇ ರಾಜಕೀಯಕ್ಕೆ ಸಿನಿಮಾ ತರಬೇಡಿ ಸಿನಿಮಾಗೆ ರಾಜಕೀಯ ತರಬೇಡಿ ಎಂದು ನಿರ್ದೇಶಕ…

Read More

ಬೆಂಗಳೂರು : ಇಂದು ರಾಜ್ಯ ಗುತ್ತಿಗೆದಾರರ ಸಂಘವು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಾಕಿ ಬಿಲ್ ಪಾವತಿಸುವಂತೆ ಮನವಿ ಮಾಡಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಮಿಷನ್ ಕೊಡೋದು ಅಪರಾಧ ತೆಗೆದುಕೊಳ್ಳುವುದು ಕೂಡ ಅಪರಾಧ. ಹಾಗಾಗಿ ಗುತ್ತಿಗೆದಾರರು ಕಮಿಷನ್ ಕೊಡೋದೇ ಬೇಡ ಎಂದು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಹೇಳಿದ ರೀತಿ ಆಗಲ್ಲ 30,000 ಕೋಟಿ ಬಾಕಿ ಇದೆ ಅದನ್ನು ಕೊಡಿ ಎಂದು ಕೇಳಿದ್ದಾರೆ. ಏಪ್ರಿಲ್ ನಲ್ಲಿ ಕೊಡೋಣ ಎಂದು ಹೇಳಿದ್ದೇನೆ. ಗುತ್ತಿಗೆದಾರ ನಿಯೋಗದಿಂದ ಕಮಿಷನ್ ಪಡೆಯುತ್ತಿರುವ ಆರೋಪ ವಿಚಾರವಾಗಿ ನಾನು ಕಮಿಷನ್ ಪಡೆದಿಲ್ಲ. ಯಾರಿಂದಲೂ ನಾನು ಹಣ ಕೇಳಿಲ್ಲ. ಬಾಕಿ ಬಿಲ್ ಉಳಿಸಿಕೊಂಡಿದ್ದು ಯಾರಿಂದ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಪ್ರಶ್ನಿಸಿದರು. ಈ ಹಿಂದೆ ಬಜೆಟ್ ನಲ್ಲಿ ಹಣ ಇಡದೆ ಟೆಂಡರ್ ಕರೆದಿದ್ದಾರೆ. ಅದಕ್ಕೆ ನಾವು ಹೊಣೆನಾ? ಎಂದು ಪ್ರಶ್ನಿಸಿದರು.ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಕೊಡಬೇಕು ಅಲ್ಲವೇ? ಗುತ್ತಿಗೆದಾರರು ಕಮಿಷನ್ ಕೊಡೋದೇ ಬೇಡ. ಲಂಚ…

Read More

ಬೆಂಗಳೂರು : ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಸಿಎಂ ಎಂಬ ವೀರಪ್ಪ ಮೊಯ್ಲಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೊಯ್ಲಿ ಹೇಳೋದು ಇನ್ನೊಬ್ರು ಹೇಳೋದು ಮುಖ್ಯವಲ್ಲ. ಹೈಕಮಾಂಡ್ ಏನು ಹೇಳುತ್ತಾರೆ ಅದನ್ನು ಮಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು. ಮೊಯ್ಲಿ ಹೇಳಿದ್ದೇನು? ನಿನ್ನೆ ಕಾರ್ಕಳದಲ್ಲಿ ಡಿಕೆ ಶಿವಕುಮಾರ್ ಗೆ ಪ್ರಥಮ ಬಾರಿ ಎಂಎಲ್‌ಎ ಟಿಕೆಟ್ ಕೊಡಿಸಿದವ ನಾನು. ಇವತ್ತು ಯಶಸ್ವಿ ನಾಯಕರಾಗಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ.ಅವರು ಸದ್ಯದಲ್ಲೇ ಮುಖ್ಯಮಂತ್ರಿ ಆಗಬೇಕು. ಕಾರ್ಕಳ ಗೊಮ್ಮಟೇಶ್ವರನ ಪುಣ್ಯಭೂಮಿ,ಅವರು ಗೊಮ್ಮಟೇಶ್ವರನ ತರ ಬೆಳೆಯಲಿ.ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ.…

Read More

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಅಪಹರಿಸಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಉದ್ಯಮಿ ಬಸವರಾಜ್ ಅಂಬಿ ನನ್ನ ಅಪಹರಣಕ್ಕೂ ಸಚಿವ ಸತೀಶ್ ಜಾರಕಿಹೊಳಿ ಅವರಿಗೂ ಯಾವುದೇ ರೀತಿಯಾದಂತಹ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಪುರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಅಪಹರಣಕ್ಕೂ ಸತೀಶ್ ಜಾರಕಿಹೊಳಿಗೂ ಯಾವುದೇ ಸಂಬಂಧವಿಲ್ಲ. ಅಂದು ಕಾರು ರಿಪೇರಿ ಮಾಡಿಸಲು ನಾನು ಸಾಂಗ್ಲಿಗೆ ತೆರಳಿದ್ದೆ. ಚಿಕ್ಕೋಡಿಗೆ ಬರುತ್ತಿದ್ದಂತೆ ಕಾರು ಅಡ್ಡಗಟ್ಟಿ ನನ್ನನ್ನು ಅಪಹರಿಸಿದರು. ಗೋವಾ ಘಾಟ್ ನಲ್ಲಿ ಕಾರನು ಪ್ರಪಾತಕ್ಕೆ ತಳ್ಳುವ ಬೆದರಿಕೆ ಹಾಕಿದರು.ಬಳಿಕ ಮನೆಗೆ ಕರೆ ಮಾಡಿ 5 ಕೋಟಿ ಹಣ ಕೇಳುವಂತೆ ಹೇಳಿದರು. ದಿನಕ್ಕೆ ಮೂರರಿಂದ ನಾಲ್ಕು ಕಾರುಗಳನ್ನು ಬದಲಾಯಿಸಿ ಸುತ್ತಿಸಿದರು. ಕರ್ನಾಟಕ ಮಹಾರಾಷ್ಟ್ರ ಗೋವಾ ರಾಜ್ಯಗಳಲ್ಲಿ ನನ್ನನ್ನು ಸುತ್ತಾಡಿಸಿದರು. ಪೊಲೀಸರಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಹಣ ಕೂಡ ರೆಡಿ ಮಾಡಿಕೊಳ್ಳಲು ಪತ್ನಿಗೆ ನಾನು ಹೇಳಿದ್ದೆ ಪೊಲೀಸರು…

Read More

ಮಂಗಳೂರು : CISF ಮಹಿಳಾ ಅಧಿಕಾರಿಯೊಬ್ಬರು ಮದುವೆಯಾಗುವುದಾಗಿ ಹೇಳಿ ಯುವಕನೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಆಮೇಲೆ ವಂಚನೆ ಈಸಾಗ್ರಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ನೊಂದ ಯುವಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಅಭಿಷೇಕ್ ಸಿಂಗ್ (40) ಎಂದು ತಿಳಿದುಬಂದಿದ್ದು, ಮಂಗಳೂರು ನಗರದ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದಾನೆ. ವಿಡಿಯೋದಲ್ಲಿ ಅಭಿಷೇಕ್ ಸಿಂಗ್ CISF ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ಅವರೊಂದಿಗೆ ಸಂಬಂಧ ಹೊಂದಿದ್ದ.ಮೋನಿಕಾ ಸಿಹಾಗ್ ಅವರು ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ಅಭಿಷೇಕ್ ಸಿಂಗ್ ಅವರ ಜೊತೆ ಸಂಬಂಧ ಬೆಳೆಸಿದ್ದರು ಎನ್ನಲಾಗಿದೆ. ಅಭಿಷೇಕ್ ಸಿಂಗ್ ಮೂಲತಃ ಉತ್ತರ ಪ್ರದೇಶದವನಾಗಿದ್ದು, ತಮಿಳುನಾಡಿನ ಚೆನ್ನೈನಲ್ಲಿ ಖಾಸಗಿ ಕಂಪನಿ ಒಂದರಲ್ಲಿ ಕೆಲಸ…

Read More