Author: kannadanewsnow05

ಬೆಂಗಳೂರು : ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಸಂಸದ ಡಾ. ಕೆ ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದರು. ನನ್ನನ್ನು ರಾಜಕೀಯವಾಗಿ ಮುಗಿಸಲು ವಿಜಯೇಂದ್ರ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿ ವೈ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ಈ ಬಚ್ಚಾ ನಿಂದ ನಾವು ಕಲಿಬೇಕಾ ನಮ್ಮನ್ನು ಪಕ್ಷದಿಂದ ಹೊರಗೆ ಹಾಕಿದರೆ ಹಾಕಿ ಎಂದು ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರೇ ಅಧ್ಯಕ್ಷ ಘೋಷಣೆ ಮಾಡಲಿ. ಚುನಾವಣೆ ಯಾಕೆ ಬೇಕು? ವಿಜಯೇಂದ್ರ ಚಡ್ಡಿ ಹಾಕೋ ಮುನ್ನ ನಾನು ಸಂಘಟನೆ ಮಾಡಿದ್ದೇನೆ. ವಿಜಯೇಂದ್ರ ಬಚ್ಚಾ, ನಾವು ಅವನಿಂದ ಕಲಿಯಬೇಕಿಲ್ಲ.ನಮಗೆ ಯಾವುದೇ ಭಯ ಇಲ್ಲ. ಪಕ್ಷದಿಂದ ತೆಗೆದು ಹಾಕ್ತೀರಾ ಹಾಕಲಿ. ನಾವು ಹೆದರೊಲ್ಲ ಎಂದು ಸವಾಲು ಹಾಕಿದರು. ವಿಜಯೇಂದ್ರ ಅವರ ಒರಿಜಿನಲ್ ಬಣ್ಣ ಹೊರಗೆ ಬಂದಿದೆ. ವಿಜಯೇಂದ್ರ ಯಾಕೆ ಸರ್ಕಸ್ ಮಾಡ್ತಿದ್ದೀರಾ ಚುನಾವಣೆ ಅಂತ. ರಾಧಾಮೋಹನ್‌ಗೆ ಹೇಳಿ ರಾಜ್ಯಾಧ್ಯಕ್ಷ ನೀವೇ ಅಂತ…

Read More

ಬೆಳಗಾವಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇತ್ತೀಚಿಗೆ ಕಾಲ್ತುಳಿತ ಸಂಭವಿಸಿ ಭಾರಿ ದುರಂತ ಸಂಭವಿಸಿತ್ತು. ಇದರಲ್ಲಿ ರಾಜ್ಯದ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನಪ್ಪಿದ್ದರು. ಇದೀಗ ಮತ್ತೊರ್ವ ವ್ಯಕ್ತಿ ಸಾವನಪ್ಪಿದ್ದು, ಪ್ರಯಾಗ್ ರಾಜ್ ನಿಂದ ಬೆಳಗಾವಿಗೆ ಆಗಮಿಸುತ್ತಿರುವ ವೇಳೆ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಹೌದು ಪ್ರಯಾಗ್ರಾಜ್ ಯಾತ್ರೆಗೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿ ಮೂಲದ ದೇಶಪಾಂಡೆ ಗಲ್ಲಿಗೆ ನಿವಾಸಿ ರವಿ ಜಟಾರ (61) ಇದೀಗ ಸಾವನ್ನಪ್ಪಿದ್ದಾರೆ. ಪ್ರಯಾಗ್ ರಾಜ್ ದಿಂದ ಬೆಳಗಾವಿಗೆ ವಾಪಸ್ ಆಗುವಾಗ ಪುಣೆಯಲ್ಲಿ ರೈಲಿನಲ್ಲಿ ಅವರಿಗೆ ಹೃದಯಘಾತವಾಗಿ ರವಿ ಜಠಾರ ಸಾವನಪ್ಪಿದ್ದಾರೆ.

Read More

ರಾಯಚೂರು : ರಾಜ್ಯದಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ರಾಯಚೂರು ಜಿಲ್ಲೆಯಲ್ಲಿ ಕತ್ತು ಸೀಳಿ ಎಂ ಎಸ್ ಸಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಹೊರಭಾಗದಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಕೊಲೆ ಆರೋಪಿ ಮುಬೀನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರೀತಿಯ ವಿಚಾರಕ್ಕೆ ಆರೋಪಿ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆಯಾದ ವಿದ್ಯಾರ್ಥಿನಿಯನ್ನು ಸಿಫಾ (22) ಎಂದು ತಿಳಿದುಬಂದಿದೆ. ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂ ಎಸ್ ಸಿ ಓದುತ್ತಿದ್ದ ಶಿಫಾ ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ನಿವಾಸಿಯಾಗಿದ್ದಾಳೆ. ಇದೀಗ ಪರಿಚಯಸ್ತ ಮುಬೀನ್ ನಿಂದಲೇ ವಿದ್ಯಾರ್ಥಿನಿ ಸಿಫಾ ಕೊಲೆಯಾಗಿದ್ದಾಳೆ. ಸದ್ಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಒಂದು ಕಡೆ ಲೋಕಾಯುಕ್ತ ಸಂಸ್ಥೆ ಇನ್ನೊಂದು ಕಡೆ ಜಾರಿ ನಿರ್ದೇಶನಾಲಯ (ED) ಸಂಸ್ಥೆ ಕೂಡ ಸಂಪೂರ್ಣ ತನಿಖೆ ನಡೆಸಿದ್ದು ಇದೀಗ ಇಡಿ ತಾತ್ಕಾಲಿಕ ಶಕ್ತಿ ಆದೇಶದಲ್ಲಿ ಸ್ಪೋಟಕವಾದ ಮಾಹಿತಿ ಬಹಿರಂಗವಾಗಿದ್ದು, ಮುಡಾದಲ್ಲಿ ಸೈಟ್ ಗಳ ಹಂಚಿಕೆಯ ಪರಿಹಾರಾರ್ಥವಾಗಿ ಅಕ್ರಮ ಹಣ ವರ್ಗಾವಣೆ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಅಕ್ರಮ ಹಣ ವರ್ಗಾವಣೆ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ ಆಗಿರುವ ಬಗ್ಗೆ ಇಡಿಯು ದಾಖಲೆಗಳಲ್ಲಿ ಉಲ್ಲೇಖಿಸಿದ್ದು ಅಕ್ರಮ ಹಣ ವರ್ಗಾವಣೆ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎಂದು 102 ಪುಟಗಳ ಇಡಿಯ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ ಎಂದು ತಿಳಿದುಬಂದಿದೆ. ಜಮೀನನ್ನು 3,24,700 ಮುಡಾದಿಂದ ಸ್ವಾಧೀನ ಪಡೆದುಕೊಂಡಿದ್ದಾರೆ. ಜಮೀನನ್ನು ತಪ್ಪು ಮಾಹಿತಿ ಪ್ರಭಾವ ಬಳಸಿ ಡಿನೋಟಿಫಿಕೇಶನ್ ಮಾಡಲಾಗಿದೆ. ಬಿಎಂ ಮಲ್ಲಿಕಾರ್ಜುನಸ್ವಾಮಿ ಕೃಷಿ ಜಮೀನು ಎಂದು ಖರೀದಿ…

Read More

ದಾವಣಗೆರೆ : ಸದ್ಯಕ್ಕೆ ರಾಜ್ಯ ಬಿಜೆಪಿ ನಾಯಕರಲ್ಲಿ ಎಲ್ಲವೂ ಸರಿಯಿಲ್ಲ. ಒಬ್ಬೊಬ್ರದು ಒಂದೊಂದು ಬಣವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಮುಗಿಬಿದ್ದಿದ್ದಾರೆ. ಒಂದು ಕಡೆ ಶಾಸಕ ಯತ್ನಾಳ್ ಕಿಡಿ ಕಾರಿದರೆ ಇನ್ನೊಂದು ಕಡೆ ಸಂಸದ ಡಾ. ಕೆ ಸುಧಾಕರ್ ಅವರು ನಿನ್ನೆ ವಾಗ್ದಾಳಿ ನಡೆಸಿದ್ದಾರೆ. ಕೆ ಸುಧಾಕರ್ ಮಾತನಾಡಿರುವ ವಿಚಾರವಾಗಿ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಇವರಿಂದಲೇ ರಾಜ್ಯದಲ್ಲಿ ಬಿಜೆಪಿ ಸೋತಿದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿವೈ ವಿಜಯೇಂದ್ರ ವಿರುದ್ಧ ಸಂಸದ ಸುಧಾಕರ್ ಸಮಾಧಾನ ವಿಚಾರವಾಗಿ ಸುಧಾಕರ್ ವಿರುದ್ಧ ಏಕವಚನದಲ್ಲಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಗ್ಗೆ ಮಾತನಾಡಿದರೆ ಹುಷಾರ್ ನಿನ್ನ ಬಂಡವಾಳ ಬೈಲು ಮಾಡುತ್ತೇನೆ. ನೀನು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಸಚಿವ ಸ್ಥಾನ ಕೊಡಲಿಲ್ಲ. ಆಗ ನೀನು ಇಂಧನ ಸಚಿವ ಆಗಬೇಕು ಎಂದು ಪಟ್ಟು ಹಿಡಿದಿದ್ದೆ. ಕಾಂಗ್ರೆಸ್ ಪಕ್ಷದಲ್ಲಿ ಏನು ಆಗದೆ ಇದ್ದಾಗ ಬಿಜೆಪಿಗೆ ಬಂದೆ.…

Read More

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಜನರು ಸರಣಿ ಆತ್ಮಹತ್ಯೆ ಮಾಡಿಕೊಂಡಂತಹ ಪ್ರಕರಣಗಳು ನಡೆದಿದ್ದವು. ಇದೀಗ ಮೈಕ್ರೋ ಫೈನಾನ್ಸ್ ಗಳ ಕಡಿವಾಣಕ್ಕೆ ಸುಗ್ರೀವಾಜ್ಞೆ ಜಾರಿಗೆ ತರಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ಅಸ್ತು ಎಂದಿದೆ. ಹೌದು ಫೈನಾನ್ಸ್ ಗಳ ಕಡಿವಾಡಕ್ಕೆ ಸುಗ್ರೀವಾಜ್ಞೆ ಜಾರಿಗೆ ತರಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಮಹತ್ವದ ಸಭೆ ನಡೆದಿತ್ತು. ಸುಗ್ರೀವಾಜ್ಞೆ ಜಾರಿಗೆ ರಾಜ್ಯಪಾಲರ ಬಳಿ ಅಂಕಿತ ಪಡೆಯಲು ಸಂಪುಟ ಸಭೆ ನಿರ್ಧಾರ ಮಾಡಿದ್ದು, ಹಾಗಾಗಿ ಸುಗ್ರೀವಾಜ್ಞೆ ಜಾರಿ ಮಾಡಲು ಇದೀಗ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

Read More

ವಿಜಯಪುರ : ಗಂಡ ಹೆಂಡತಿಯ ಜಗಳ ಬಿಡಿಸಲು ಬಂದ ಅತ್ತೆಯನ್ನೇ ಅಳಿಯನೊಬ್ಬ ಭೀಕರವಾಗಿ ಕೊಲೆ ಮಾಡಿ ಬಳಿಕ ಶವವನ್ನು ಕೆನಾಲ್‌ಗೆ ಎಸೆದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಮೃತರನ್ನು ಶಿರಶ್ಯಾಡ ಗ್ರಾಮದ ಗೌರಾಬಾಯಿ ಈರಣ್ಣ ನರಳಿ(65) ಕೊಲೆಯಾಗಿರುವ ಮಹಿಳೆ ಎಂದು ತಿಳಿದುಬಂದಿದೆ.ಇನ್ನು ಅತ್ತೆಯನ್ನು ಕೊಲೆ ಮಾಡಿರುವ ಅಳಿಯನನ್ನು ಭೀಮಪ್ಪ ಗುಗ್ಗರಿ ಎಂದು ತಿಳಿದುಬಂದಿದೆ. ಗೌರಾಬಾಯಿ ಪುತ್ರಿ ದೇವಕಿಯನ್ನು ಭೀಮಪ್ಪ ಮದುವೆಯಾಗಿದ್ದ. ನಿರಂತರ ಮದ್ಯ ಸೇವನೆ ಸಂಬಂಧ ಪತಿ-ಪತ್ನಿ ನಡುವೆ ಜಗಳ ನಡೆದಿತ್ತು. ಇವರಿಬ್ಬರಿಗೆ ಬುದ್ಧಿ ಹೇಳಿ, ಸಂಧಾನ ಮಾಡಲು ಗೌರಾಬಾಯಿ ಮಂಗಳವಾರ ಬಂದಿದ್ದರು. ಆಗ ಕುಡಿದ ಮತ್ತಿನಲ್ಲಿ ಸಿಟ್ಟಿಗೆದ್ದು ದೊಣ್ಣೆಯಿಂದ ಆಕೆಯನ್ನು ಅಳಿಯ ಭೀಮಪ್ಪ ಹತ್ಯೆ ಮಾಡಿದ್ದಾನೆ. ಬಳಿಕ, ಶವವನ್ನು ಚೀಲದಲ್ಲಿ ಕಟ್ಟಿ ಗ್ರಾಮದ ಬಳಿಯಿರುವ ಕೆನಾಲ್ ಗೆ ಬಿಸಾಕಿದ್ದಾನೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಪತ್ನಿಗೆ ಜೀವ ಬೆದರಿಕೆ ಹಾಕಿದ್ದಾನೆ. ನಂತರ ದೇವಕಿ ದೇವರಹಿಪ್ಪರಗಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಘಟನಾ…

Read More

ಬೆಂಗಳೂರು : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇದುವರೆಗೂ ರಾಜ್ಯದ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ 8 ಜನರು ಸಂಪರ್ಕಕ್ಕೆ ಸಿಕ್ಕಿಲ್ಲ. ಇನ್ನೂ ಘಟನೆಯಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಂದು ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದ ಪ್ರಯಾಗ್​ರಾಜ್​ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಡಿದಿರುವ ನಾಲ್ವರು ಕನ್ನಡಿಗರಿಗೆ ಕರ್ನಾಟಕ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಈಗಾಗಲೇ ನಾಲ್ವರು ಕನ್ನಡಿಗರ ಪಾರ್ಥೀವ ಶರೀರಗಳನ್ನು ಬೆಳಗಾವಿಗೆ ತರಲು ಏರ್ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೃತ ದೇಹಗಳನ್ನು ರಿಸೀವ್ ಮಾಡಿಕೊಳ್ಳುತ್ತಾರೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಇವತ್ತು ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವುದರಿಂದ ನಾಳೆ ವಾಪಸ್ಸು ಹೋದ ಬಳಿಕ ಪರಿಹಾರ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.

Read More

ರಾಯಚೂರು : ರಾಜ್ಯದಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ರಾಯಚೂರು ಜಿಲ್ಲೆಯಲ್ಲಿ ಕತ್ತು ಸೀಳಿ MSC ಓದುತ್ತಿದ್ದ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಹೊರಭಾಗದಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿನಿಯನ್ನು ಸಿಫಾ (22) ಎಂದು ತಿಳಿದುಬಂದಿದೆ. ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂ ಎಸ್ ಸಿ ಓದುತ್ತಿದ್ದ ಸಿಫಾ ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ನಿವಾಸಿಯಾಗಿದ್ದಾಳೆ. ಪರಿಚಯಸ್ತರೇ ವಿದ್ಯಾರ್ಥಿನಿ ಸಿಫಾಳನ್ನು ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದ್ದು, ಘಟನಾ ಸ್ಥಳಕ್ಕೆ ಸಿಂಧನೂರು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬಿಜೆಪಿಯ ಬಣ ಬಡಿದಾಟ ಇದೀಗ ಬೀದಿಗೆ ಬಂದಿದ್ದು, ಒಂದು ಕಡೆ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ ಹಾಗೂ ಸಂಸದ ಕೆ. ಸುಧಾಕರ್ ಅವರು ವಾಗ್ದಾಳಿ ನಡೆಸುತ್ತಿದ್ದರೆ, ಇನ್ನೊಂದು ಕಡೆ ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ಅವರ ನಡುವೆ ಬಿರುಕು ಮೂಡಿದೆ. ನಿನ್ನೆ ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಸಂಸದ ಕೆ ಸುಧಾಕರ್ ವಿರುದ್ಧ ಇದೀಗ ಶಾಸಕ ಎಸ್ ಆರ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಿರಲು ಕೋವಿಡ್ ಹಗರಣಗಳೆ ಕಾರಣ ಎಂದು ಆರೋಪಿಸಿದ್ದಾರೆ. ನೀನು ಮಂತ್ರಿ ಆಗಿದ್ದಾಗ ದುರಹಂಕಾರಿ ಆಗಿರಲಿಲ್ಲವೇ? ಶಾಸಕರ ಮಂತ್ರಿಗಳ ಫೋನ್ ತೆಗೆಯುತ್ತಿದ್ದೇಯ? ಯಲಹಂಕ ಕಾರ್ಯಕರ್ತರು ಹೋದರೆ ಮನೆಗೆ ಸೇರಿಸುತ್ತಿದ್ದೆಯ? ನಿನಗೆ ತಾಕತ್ತಿದ್ದರೆ ಬೇರೆ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸು. ಯಲಹಂಕದಲ್ಲಿ ನೀನು ಒಂದು ವೋಟ ಲೀಡರ್ ತೆಗೆದುಕೋ. ಕೋವಿಡ್ನಿಂದ ಸತ್ತ ಆತ್ಮಗಳ ಆಶೀರ್ವಾದ ನಿನಗೆ ಇರಬೇಕು. ಪಕ್ಷದ ಸಿಸ್ಟಮ್ ನಿನಗೆ ಗೊತ್ತಿರಲಿ ಸುಧಾಕರ್. ಕ್ಷೇತ್ರದಲ್ಲಿ ಬಂದು ನನ್ನ ವಿರುದ್ಧವೇ…

Read More