Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ರಾಜ್ಯದಲ್ಲಿ ಮಹಾಮಳೆಗೆ ಬಾರಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಗುಡ್ಡ ಕುಸಿದು ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಈ ಒಂದು ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಮಂಗಳೂರಿನಲ್ಲಿ ಮತ್ತೊಂದು ದುರಂತ ನಡೆದಿದ್ದು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದ್ದ ಇಬ್ಬರು ಮೀನುಗಾರರು ನೀರು ಪಾಲಾಗಿರುವ ಘಟನೆ ತೋಟಬೇಂಗ್ರೇ ಅಳಿವೇ ಬಾಗಿಲುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಹೌದು ಮಂಗಳೂರಿನಲ್ಲಿ ಮಳೆಗೆ ಮತ್ತೊಂದು ಭೀಕರ ದುರಂತ ಸಂಭವಿಸಿದ್ದು, ಸಮುದ್ರದಲ್ಲಿ ನಾಡ ದೋಣಿ ಮುಗುಚಿ ಇಬ್ಬರು ನೀರು ಪಾಲಾಗಿದ್ದಾರೆ. ಸಮುದ್ರದಲ್ಲಿ ಇಬ್ಬರು ಮೀನುಗಾರರು ಕೊಚ್ಚಿ ಹೋಗಿದ್ದಾರೆ. ತೋಟಬೇಂಗ್ರೇ ಅಳಿವೇ ಬಾಗಿಲುವಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಯಶವಂತ ಮತ್ತು ಕಮಲಾಕ್ಷ ಇಬ್ಬರೂ ಮೀನುಗಾರರು ನೀರುಪಾಲಾಗಿದ್ದಾರೆ. ನಾಡ ದೋಣಿಯಲ್ಲಿ ಮೀನುಗಾರಿಕೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಕಡಲಿನ ಅಲೆಯ ಅಬ್ಬರಕ್ಕೆ ನಾಡ ದೋಣಿ ಮುಗುಚಿದೆ. ಈ ವೇಳೆ ನಾಡ ದೋಣಿಯ ಅವಶೇಷಗಳು ಕಡಲ ತೀರದಲ್ಲಿ ಬಂದು ಬಿದ್ದಿವೆ. ಇದೀಗ ಇಬ್ಬರು ಮೀನುಗಾರರಿಗಾಗಿ ಶೋಧ…
ಹುಬ್ಬಳ್ಳಿ : ಅಣ್ಣ ತಮ್ಮನ ಜಗಳ ಬಿಡಿಸಲು ಬಂದಿದ್ದ ತಾಯಿಯನ್ನು ಪಾಪಿ ಮಗನೋಬ್ಬ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ತೊರವಿಹಕ್ಕಲ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪದ್ಮ (46) ಎಂದು ತಿಳಿದುಬಂದಿದೆ. ಮಂಜುನಾಥ್ ಮತ್ತು ಲಕ್ಷ್ಮಣ ಎನ್ನುವ ಸಹೋದರರು ಕಟಿಂಗ್ ಶಾಪ್ ಇಟ್ಕೊಂಡು ಜೀವನ ನಡೆಸುತ್ತಿದ್ದರು. ಕಟಿಂಗ್ ಮಾಡಿದ ಹಣ ಹಂಚಿಕೆ ವಿಚಾರದಲ್ಲಿ ಇಬ್ಬರ ಸಹೋದರರ ನಡುವೆ ಜಗಳ ನಡೆದಿದೆ. ಸಹೋದರರಾದ ಮಂಜುನಾಥ್ ಮತ್ತು ಲಕ್ಷ್ಮಣ ನಡುವೆ ಹಣದ ವಿಚಾರವಾಗಿ ಗಲಾಟೆ ನಡೆದಿದೆ. ಜಗಳ ಬಿಡಿಸಲು ಬಂದಿದ್ದ ತಾಯಿಯ ಹೊಟ್ಟೆಗೆ ಮಂಜುನಾಥ್ ಕಿಟಕಿ ಗಾಜಿನಿಂದ ಇರಿದಿದ್ದಾನೆ. ತಾಯಿ ಪದ್ಮ ಹೊಟ್ಟೆಗೆ ಮಂಜುನಾಥ ಕಿಟಕಿಯ ಗಾಜಿನಿಂದ ಇರಿದಿದ್ದಾನೆ. ತಕ್ಷಣ ಪದ್ಮಾವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಿಸದೆ ನರಳಾಡಿ ಪದ್ಮ ಚಲೂರಿ ಸಾವನಪ್ಪಿದ್ದಾರೆ. ಸದ್ಯ ಅವರ ಮಕ್ಕಳಾದ ಮಂಜುನಾಥ್ ಮತ್ತು ಲಕ್ಷ್ಮಣನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಹಾಸ್ಟೆಲ್ ನಲ್ಲಿದ್ದ ಐವರು ಬಾಲಕಿಯರು ನಾಪತ್ತೆಯಾಗಿದ್ದಾರೆ. ಮಕ್ಕಳ ಆಸರೆ ಬಾಲ ಮಂದಿರದಿಂದ ಬಾಲಕಿಯರು ಇದೀಗ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹಾಸ್ಟೆಲ್ ನವರು ಚಿಕ್ಕಬಳ್ಳಾಪುರ ಗ್ರಾಮ ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಬಳಿಯಿರುವ ಹಾಸ್ಟೆಲ್ನಿಂದ ಐವರು ಬಾಲಕಿಯರು ನಾಪತ್ತೆಯಾಗಿದ್ದಾರೆ. ಮದರ್ ತೆರೇಸಾ ಟ್ರಸ್ಟ್ ಅನ್ನು ಈ ಹಾಸ್ಟೆಲ್ ನಡೆಸುತ್ತಿದೆ. ಅನಾಥ ಹೆಣ್ಣುಮಕ್ಕಳು, ಸಿಂಗಲ್ ಪೇರೆಂಟ್ ಮಕ್ಕಳಿಗೆ ಈ ಒಂದು ಹಾಸ್ಟೆಲ್ ನಲ್ಲಿ ಆಶ್ರಯ ನೀಡಲಾಗುತ್ತದೆ. ಐವರು ಬಾಲಕಿಯರು ನಾಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಟ್ರಸ್ಟ್ ನಿಂದ ಚಿಕ್ಕಬಳ್ಳಾಪುರ ಗ್ರಾಮಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.
ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಗ್ಯಾಸ್ ಸಿಲೆಂಡರ್ ಡೆಲಿವರಿ ಮಾಡಲು ಬಂದ ಡೆಲಿವರಿ ಬಾಯ್ ನಿಂದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತಮಾರಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಮೇ 21ರಂದು ಮಧ್ಯಾಹ್ನದ ವೇಳೆ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಮಹೇಶ್ ಗ್ಯಾಸ್ ಏಜೆನ್ಸಿಯ ಡೆಲಿವರಿ ಬಾಯ್ ಮಹೇಶ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಮಹಿಳೆ ಮೈಸೂರಿಗೆ ತೆರಳಲು ಸಿದ್ಧವಾಗುತ್ತಿದ್ದ ವೇಳೆ ಮಹೇಶ್ ಮನೆಗೆ ಬಂದಿದ್ದಾನೆ. ಮನೆಯ ಬಳಿ ಗ್ಯಾಸ್ ಸಿಲಿಂಡರ್ ವಾಹನ ತಂದು ನಿಲ್ಲಿಸಿದ್ದ. ಮನೆ ಬಾಗಿಲು ಬಡಿದು ಗ್ಯಾಸ್ ಸಿಲಿಂಡರ್ ತೆಗೆದುಕೊಳ್ಳಿ ಅಂದಿದ್ದ. ಈ ವೇಳೆ ನಾವು ಸಿಲಿಂಡರ್ ಬುಕ್ ಮಾಡಿಲ್ಲ ಎಂದು ಮಹಿಳೆ ನಿರಾಕರಿಸಿದ್ದಾರೆ. ಸಿಲಿಂಡರ್ ಖಾಲಿಯಾಗಿದ್ದರೆ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದ. ಆತನ ಮಾತು ನಂಬಿ 950 ನೀಡಿ ಸಿಲಿಂಡರ್ ಪಡೆದಿದ್ದರು. ಈ ವೇಳೆ ಅಡುಗೆಮನೆ ಫೋಟೋ ತೆಗೆಯಬೇಕು ಅಂತ ಮಹೇಶ್ ಹೇಳಿದ್ದಾನೆ. ಫೋಟೋ ತೆಗೆದು ಆನ್ಲೈನ್…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ನಗರದ ಹೊರವಲಯ ಟಿ.ದಾಸರಹಳ್ಳಿಯಲ್ಲಿರುವ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಶೋರೂಂನಲ್ಲಿದ್ದ ಎಲೆಕ್ಟ್ರಿಕ್ ಬೈಕ್ಗಳ ಬ್ಯಾಟರಿ ಬ್ಲಾಸ್ಟ್ ಆಗಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಪೀಣ್ಯಾ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಗ್ನಿ ಅವಘಡದಲ್ಲಿ 4 ಎಲೆಕ್ಟ್ರಿಕ್ ಬೈಕ್ಗಳು ಬೆಂಕಿಗಾಹುತಿಯಾಗಿದೆ. ಇನ್ನೂ ಮನೀಷ್ ಎಂಬುವವರಿಗೆ ಸೇರಿದ್ದ ಎಲೆಕ್ಟ್ರಿಕ್ ಬೈಕ್ ಶೋರೂಂ ಆಗಿದ್ದು, ರಾತ್ರಿ ಶೋರೂಂ ಕ್ಲೋಸ್ ಮಾಡಿ ಮನೆಗೆ ತೆರಳಿದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನಪ್ಪಿದ್ದಾರೆ. ಇದೀಗ ಚಿಕ್ಕಬಳ್ಳಾಪುರದಲ್ಲಿ ವಿದ್ಯುತ್ ಶಾಕ್ ನಿಂದ SSLC ವಿದ್ಯಾರ್ಥಿ ಸಾವನಪ್ಪಿದ್ದಾನೆ. ಹೌದು ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡ ಕಿರುಕುಂಬಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ವಿದ್ಯುತ್ ಶಾಕ್ ನಿಂದ SSLC ವಿದ್ಯಾರ್ಥಿ ಮಾದೇಶ್ (16) ಸಾವನ್ನಪ್ಪಿದ್ದಾನೆ. ಡ್ರೈನೇಜ್ ಪೈಪ್ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಈ ಒಂದು ದುರಂತ ಸಂಭವಿಸಿದೆ. ಪೈಪ್ನಲ್ಲಿ ಸಿಲುಕಿದ್ದ ಕಂಬಿಯನ್ನು ಹೊರಗೆ ಎಳೆಯುತ್ತಿದ್ದಾಗ, ಕಬ್ಬಿಣದ ಕಂಬಿ ವಿದ್ಯುತ್ ತಂತಿಗೆ ತಗುಲಿ ಸ್ಥಳದಲ್ಲೇ ಮಾದೇಶ್ ಸಾವನ್ನಪ್ಪಿದ್ದಾನೆ. ನಿನ್ನೆಯಷ್ಟೇ ಮಾದೇಶ್ SSLC ಮರು ಪರೀಕ್ಷೆ ಬರೆದು ಬಂದಿದ್ದ. ನಂದಿ ಗಿರಿಧಾಮ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ವರ್ಣಾರ್ಭಟದಿಂದ ಇಂದು ಘೋರವಾದ ದುರಂತ ಸಂಭವಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬುವವರ ಮೇಲೆ ಗುಡ್ಡ ಕುಸಿದು ದುರಂತ ಸಂಭವಿಸಿದೆ. ಈ ಒಂದು ದುರಂತದಲ್ಲಿ ಕಾಂತಪ್ಪ ಪೂಜಾರಿ ಅವರ ಪತ್ನಿ ಹಾಗೂ ಅವರಿಬ್ಬರ ಮೊಮ್ಮಕ್ಕಳು ಸಾವನಪ್ಪಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ, ಮಂಗಳೂರಿನ ಉಳ್ಳಾಲದಲ್ಲಿ ಗುಡ್ಡ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಕ್ಷಣ ಮಂಗಳೂರಿಗೆ ತೆರಳಲು ಸಚಿವ ದಿನೇಶ್ ಗುಂಡೂರಾವ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡಿದ್ದಾರೆ.ತಕ್ಷಣ ಜಿಲ್ಲೆಗೆ ತೆರಳಿ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡುರಾವ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ. ಇದೀಗ ಅವಶೇಷಗಳಡಿ ಸಿಲುಕಿದ್ದ ತಾಯಿ ಅಶ್ವಿನಿ ಹಾಗೂ ಮಗು ಆರುಷ್ ರಕ್ಷಣೆ ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗಿದೆ ಒಂದು ವರ್ಷದ ಮಗು ಆರುಷ್ ಕೊನೆಯುಸಿರೆಳಿದಿದ್ದಾನೆ. ಹೌದು ಮಂಗಳೂರಿನ ಉಳ್ಳಾಲದಲ್ಲಿ ಗುಡ್ಡ ಕುಸಿತ ದುರಂತದಲ್ಲಿ ತಾಯಿ ಅಶ್ವಿನಿ ಹಾಗೂ ಮಗುವನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಇದೀಗ ರಕ್ಷಣೆ ಮಾಡಿದ್ದ ಆರುಷ್ ಇದೀಗ ಬದುಕುಳಿದಿಲ್ಲ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳಿದಿದ್ದಾನೆ. ಅಂಬುಲೆನ್ಸ್ ನಲ್ಲಿ ಮಗು ಆರುಷ್ ಸಾವನ್ನಪ್ಪಿದ್ದಾನೆ ಎಂದು ಇದೀಗ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಗುಡ್ಡ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಆರ್ಯನ್ ಸಾವನ್ನಪ್ಪಿದ್ದಾನೆ. ಬಳಿಕ ತಾಯಿ ಅಶ್ವಿನಿ ಹಾಗೂ ತನ್ನ ಇನ್ನೋರ್ವ ಮಗು ಆರುಷ್ ನನ್ನು ಸಿಬ್ಬಂದಿಗಳು ರಕ್ಷಣೆ ಮಾಡಿದ್ದರು. ತಾಯಿ ಮತ್ತು ಮಗುವನ್ನು ರಕ್ಷಣೆ ಮಾಡಿದ್ದರು.…
ಬೆಂಗಳೂರು : ಕರಾವಳಿ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಕೋಮು ಗಲಭೆ ತಡೆಗೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಕೋಮು ಗಲಭೆ ನಿಯಂತ್ರಣ ಕ್ರಮವಾಗಿ ಡಿಐಜಿ, ಎಸ್ಪಿ ವರ್ಗಾವಣೆ ಮಾಡಿದ್ದು, ಆ ಸ್ಥಳಕ್ಕೆ ಹಿರಿಯ ಐಪಿಎಸ್ ಅಧಿಕಾರಿಗಳನ್ನು ನೇಮಿಸಿದೆ. ಇಂದು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಅನುಪಮ್ ಅಗರವಾಲ್, ಐಪಿಎಸ್ (2008) ಮಂಗಳೂರು ನಗರದ ಉಪ ನಿರೀಕ್ಷಕ ಮತ್ತು ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಉಪ ನಿರೀಕ್ಷಕ ಜನರಲ್ ಆಫ್ ಪೊಲೀಸ್, ಆರ್ಥಿಕ ಅಪರಾಧಗಳು, ಅಪರಾಧ ತನಿಖಾ ಇಲಾಖೆ, ಸಿ. ವಂಶಿ ಕೃಷ್ಣ, ಐಪಿಎಸ್ ಅವರನ್ನು ಏಕಕಾಲೀನ ಆರೋಪದಿಂದ ಮುಕ್ತಗೊಳಿಸಲಾಗಿದೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಆಗುತ್ತಿರುವುದರಿಂದ ರಾಜ್ಯ ಸರ್ಕಾರ ಇದೀಗ ಐಪಿಎಸ್ ಅಧಿಕಾರಿಗಳನ್ನು ದಿಢೀರನೇ ಎತ್ತಗಂಡಿ ಮಾಡಿದೆ.…
ಯಾದಗಿರಿ : ರೈತರೊಬ್ಬರ ಬಳಿ ಸಬ್ಸಿಡಿ ಹಣದಲ್ಲಿ 5 ಸಾವಿರ ರೂ. ಫೋನ್ ಪೇ ಮೂಲಕ ಲಂಚ ಪಡೆದ ಹಿನ್ನೆಲೆಯಲ್ಲಿ ಯಾದಗಿರಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವದತ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬದ್ದೆಪಲ್ಲಿ ಗ್ರಾಮದ ರೈತ ಶಂಕರಪ್ಪ ಈರುಳ್ಳಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದರು.ಅವರಿಗೆ ಸರಕಾರ 80 ಸಾವಿರ ರೂ. ಸಬ್ಸಿಡಿ ಹಣ ಮಂಜೂರು ಮಾಡಿತ್ತು. ಸಬ್ಸಿಡಿ ಹಣದಲ್ಲಿ ಸುಮಾರು 20 ಸಾವಿರ ರೂ. ನೀಡುವಂತೆ ಶಿವದತ್ತ ಬೇಡಿಕೆ ಇಟ್ಟಿದ್ದ. ಗುರುವಾರ ರೈತ ಶಂಕರಪ್ಪನಿಗೆ ಲಂಚದ ಹಣ ವರ್ಗಾವಣೆ ಮಾಡಲು ಫೋನ್ ಪೇ ನಂಬರ್ ನೀಡಿದ್ದ. 5 ಸಾವಿರ ರೂ. ಹಣವನ್ನು ಫೋನ್ ಪೇ ಮೂಲಕ ಜಮೆ ಮಾಡಿದ ರೈತ ಬಳಿಕ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ. ಇದರಿಂದಾಗಿ ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್, ಡಿವೈಎಸ್ಪಿ ಜೆ.ಎಚ್.ಇನಾಂದಾರ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ಗಳಾದ ಸಿದ್ದರಾಯ, ಸಂಗಮೇಶ ಅವರ ನೇತೃತ್ವದ ತಂಡ ಯಾದಗಿರಿಯ ಅಂಬೇಡ್ಕರ್ ನಗರದಲ್ಲಿರುವ ತೋಟಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಮೇಲೆ…