Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮೂರು ದಿನಗಳ ಹಿಂದೆ ಬೆಂಗಳೂರಿನ ಚೆನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕ ಗಂಧಾರ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ, ಅಮ್ಮ ಅಮ್ಮ ಅಣ್ಣ ಎಲ್ಲರ ಜೊತೆಗೂ ಚೆನ್ನಾಗಿಯೇ ಇದ್ದ ಆ ಬಾಲಕ ಏಕಾಏಕಿ ನೇಣಿಗೆ ಶರಣಾಗಿದ್ದು ಎಲ್ಲರಿಗೂ ಶಾಕ್ ಆಗಿತ್ತು. ಈ ಪ್ರಕರಣದ ತನಿಖೆಗೆ ಇಳಿದಾಗ ಹಲವರು ಶಾಕಿಂಗ್ ವಿಚಾರಗಳು ಮುನ್ನೆಲೆಗೆ ಬಂದಿವೆ. ರಾತ್ರಿ ಎಲ್ಲರ ಜೊತೆಗೆ ಊಟ ಮಾಡಿ ತನ್ನ ಪ್ರೀತಿಯ ನಾಯಿ ರಾಕಿ ಜೊತೆಗೆ ಮಲಗಿದ್ದ ಗಂಧಾರ್ ಬೆಳಗಿನ ವೇಳೆ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದ. ನೇಣಿಗೆ ಶರಣಾಗುವ ಮೊದಲು ಒಂದು ಡೆತ್ ನೋಟ್ ಬರೆದಿದ್ದ. ಅದರಲ್ಲಿ ತಂದೆ ತಾಯಿಯನ್ನು ಉದ್ದೇಶಿಸಿ ನೀವು ನನ್ನನ್ನು ಹದಿನಾಲ್ಕು ವರ್ಷ ಚೆನ್ನಾಗಿಯೇ ಸಾಕಿದ್ದೀರಿ. ನಿಮ್ಮ ಜೊತೆಗೆ ನಾನು ತುಂಬಾ ಖುಷಿಯಾಗಿದ್ದೆ. ಆದರೆ ನಾನು ಹೋಗುವ ಸಮಯ ಬಂದಿದೆ. ನೀವು ಈ ಪತ್ರ ಓದುವ ವೇಳೆಗೆ ನಾನು…
ಬೆಂಗಳೂರು : ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಸವಾಲು ಹಾಕಿದ್ದು ರಾಹುಲ್ ಗಾಂಧಿಯವರು ಮಾಡಿರುವ ಮತಗಳ್ಳತನದ ದಾಖಲೆಗಳನ್ನು ಸುಳ್ಳು ಎಂದು ಸಾಬೀತಪಡಿಸಿದರೆ, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತಗಳನ್ನು ಬಗ್ಗೆ ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಐದು ರೀತಿಯಲ್ಲಿ ಮತಗಳ್ಳತನ ಆಗಿದೆ ಎಂದು ರಾಹುಲ್ ಗಾಂಧಿಯವರು ಹೇಳಿದ್ದಾರೆ ಹೀಗಾಗಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ನಾವು ಕೊಟ್ಟಿರುವ ದಾಖಲೆಗಳನ್ನು ಪರಿಶೀಲನೆ ಮಾಡದೆ ಚುನಾವಣಾ ಆಯೋಗ ಮತ್ತು ಬಿಜೆಪಿ ಸುಳ್ಳು ಎಂದು ಹೇಳುತ್ತಿದೆ. ನಾವು ಸಾವಿರಾರು ದಾಖಲೆಗಳನ್ನು ಬಿಡುಗಡೆ ಮಾಡಿದ್ದೇವೆ. ಅದನ್ನು ಪರಿಚಯ ಮಾಡಿ ಕರ್ತವ್ಯ ಮಾಡುವುದನ್ನು ಬಿಟ್ಟು, ರಾಹುಲ್ ಗಾಂಧಿ ವಿರುದ್ಧ ಆರೋಪ ಮಾಡಿದರೆ ಹೇಗೆ? ನಾವು ಸತ್ಯ ಎಂದು ಹೇಳಿ…
ಬೆಂಗಳೂರು : ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಎಕ್ಸ್ ಮೂಲಕ ಕಿಡಿಕಾರಿದ್ದಾರೆ. ಗುರುವಾರ ರಾಹುಲ್ಗಾಂಧಿ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಗಂಭೀರ ಆರೋಪ ಮಾಡಿದ್ದರು. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಹಾಗೂ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ ಮಾಡುತ್ತಿದ್ದಾರೆ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿಗಳ ಪಿತೂರಿ ನಡೆಯುತ್ತಿದೆ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ. ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಬಾಬು ಎಂಬವರು ಗುರುವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ತಮ್ಮ ಸಾವಿಗೆ ಸಂಸದ ಡಾ.ಕೆ.ಸುಧಾಕರ್ ಕಾರಣ ಎಂದು ಡೆತ್ನೋಟ್ ಬರೆದಿಟ್ಟಿದ್ದಾರೆ. ಬಾಬು ಅವರ ಪತ್ನಿ ನೀಡಿದ ದೂರಿನ ಆಧಾರದಲ್ಲಿ ಸಂಸದರ ವಿರುದ್ಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಬಾಬು ಅವರ ಪತ್ನಿ ಶಿಲ್ಪಾ ನೀಡಿದ ದೂರಿನ ಮೇರೆಗೆ ಎ1 ಆರೋಪಿಯಾಗಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್, ಎ2 ನಾಗೇಶ್, ಎ3 ಮಂಜುನಾಥ್ ವಿರುದ್ಧ ಬಿಎನ್ಎಸ್ ಕಾಯ್ದೆ 108, 352, 351(2) 3(5) ಎಸ್ಸಿ-ಎಸ್ಟಿ ಕಾಯ್ದೆಯ ಸೆಕ್ಸನ್ 3 ಸಬ್ (2) ಅಡಿ ಪ್ರಕರಣ ದಾಖಲಾಗಿದೆ. ಹಣ ವಂಚನೆ, ಬೆದರಿಕೆ, ಮಾನಸಿಕ ಹಿಂಸೆ, ನಿಂದನೆ, ಆತ್ಮಹತ್ಯೆಗೆ ಪ್ರೇರಣೆ ಹಾಗು ದಲಿತ ವ್ಯಕ್ತಿಯ ಮೇಲೆ ದೌರ್ಜನ್ಯ ಆರೋಪಗಳನ್ನು ಮಾಡಲಾಗಿದೆ. ದೂರಿನಲ್ಲಿ ಏನಿದೆ? ಡಾ.ಕೆ.ಸುಧಾಕರ್, ನಾಗೇಶ್ ಮತ್ತು ಮಂಜುನಾಥ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಬಾಬು ಅವರಿಂದ ಮೋಸದಲ್ಲಿ…
ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದೇಶದಲ್ಲಿ ಗೊಂದಲ ಉಂಟಾಗಿದ್ದು, ನಿನ್ನೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪೌರಾಡಳಿತ ಸಚಿವ ರಹೀಂ ಖಾನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದೀಗ ಎಂದು ಈ ಒಂದು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಹೌದು ನಿನ್ನೆ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿತ್ತು. ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹಾಸನದಲ್ಲಿ ಕೃಷ್ಣ ಬೈರೇಗೌಡ, ಬಳ್ಳಾರಿಯಲ್ಲಿ ರಹೀಂ ಖಾನ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ರಹೀಮ್ ಖಾನ್ ನೇಮಕ ಆದೇಶವನ್ನು ಹಿಂಪಡೆದಿದೆ ರಹೀಮ್ ಖಾನ್ ಅವರನ್ನು ಕೇವಲ ಸ್ವಾತಂತ್ರ್ಯ ಧ್ವಜಾರೋಹಣಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಸಚಿವ ಜಮೀರ್ ಖಾನ್ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.
ಬೆಂಗಳೂರು : ಧರ್ಮಸ್ಥಳದಲ್ಲಿ ಈಗಾಗಲೇ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಉತ್ಖನನ ಕಾರ್ಯ ನಡೆಸುತ್ತಿದ್ದಾರೆ. ಅದರ ಬೆನ್ನಲ್ಲೇ ನಿನ್ನೆ ಯೂಟ್ಯೂಬರ್ಗಳ ಮೇಲೆ ಸ್ಥಳೀಯರು ಹಲ್ಲೆ ಮಾಡಿ ಗಲಾಟೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ ಈ ವೇಳೆ ಬಿಗ್ ಬಾಸ್ ಮಾಜಿ ಸ್ಪರ್ಧಿಸಿ ಕೂಡ ಅಲ್ಲಿಯೇ ಇದ್ದರು ಅವರ ಸಮ್ಮುಖದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆದಿದೆ. ಇನ್ನು ಈ ವಿಚಾರವಾಗಿ ರಜತ್ ಕಿಶನ್ ನನಗೆ ಕೊಲೆ ಬೆದರಿಕೆ ಬರುತ್ತಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಕೊಲೆ ಬೆದರಿಕೆ ಬರುತ್ತಿದೆ ಎಂದು ರಜತ್ ಆರೋಪ ಮಾಡಿದ್ದು, ಪೊಲೀಸ್ ಕಮಿಷನರ್ ಗೆ ಈ ಕುರಿತು ದೂರು ಕೊಡುತ್ತೇನೆ ಎಂದು ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ ಸ್ಪೋಟಕ ಹೇಳಿಕೆ ನೀಡಿದ್ದಾರೆ ಕೊಲೆ ಬೆದರಿಕೆ ಹಾಕುವವರಿಗೆ ಬುದ್ದಿ ಕಲಿಸಬೇಕು ಎಂದು ಹೇಳಿಕೆ ನೀಡಿದ್ದಾರೆ. ಗಿರೀಶ್ ಮತ್ತು ಮಹೇಶ್ ಸರ್ ಅವರ ಜೊತೆ ಮಾತುಕತೆ ನಡೆಸಿ ಎಲ್ಲಾ ಮುಗಿದ ಮೇಲೆ ನಾನು ಸೌಜನ್ಯ ಮನೆಗೆ ಹೋಗಿ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣ ಈಗಾಗಲೇ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ ಇದರಬಿನಲ್ಲೇ ಇದೀಗ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ಬಿಜೆಪಿ ಗಂಭೀರವಾದ ಆರೋಪ ಮಾಡಿದ್ದು ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಕೋಟ್ಯಂತರ ರೂಪಾಯಿ ಗೋಲ್ಮಾಲ್ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಬಿಜೆಪಿ ಸದಸ್ಯ ಕೆ ಎಸ್ ನವೀನ್ ಬಿಜೆಪಿ ನಾಯಕ ಕೆ.ಎಸ್. ನವೀನ್ ಅವರು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದಂತಹ ಆರೋಗ್ಯ ತಪಾಸಣೆ ಶಿಬಿರದಲ್ಲಿ ಅವ್ಯವಹಾರ ನಡೆದಿದೆ ಎನ್ನಲಾಗಿದೆ. ಕೋಟಿ ಕೋಟಿಗಟ್ಟಲೇ ಹಣ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಗೋಲ್ಮಾಲ್ನಲ್ಲಿ ಸಚಿವ…
ಬೆಂಗಳೂರು : ಪ್ರಮುಖ ರಾಜ್ಯಗಳ ಲೋಕಸಭಾ ಚುನಾವಣೆಯಲ್ಲಿ ನಕಲಿ ಮತದಾನ ಅಥವಾ ವೋಟ್ ಚೋರಿ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಅದನ್ನು ಚುನಾವಣಾ ಆಯೋಗ ನಿರಾಕರಿಸಿತ್ತು. ಆದರೆ, ಕಾಂಗ್ರೆಸ್ನಿಂದ ಈ ಬಗ್ಗೆ ಸಂಪೂರ್ಣವಾಗಿ ಸಂಶೋಧನೆ ಮಾಡಿಸಲಾಗಿದ್ದು, ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ 6.5 ಲಕ್ಷ ಒಟ್ಟು ಮತಗಳ ಪೈಕಿ 1,00,250 ನಕಲಿ ಮತ ಚಲಾವಣೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇದೀಗ ರಾಹುಲ್ ಗಾಂಧಿ ಆರೋಪದ ವಿಚಾರವಾಗಿ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಆರೋಪ ವಿಚಾರವಾಗಿ ರಾಹುಲ್ ಗಾಂಧಿ ಆರೋಪವನ್ನು ನಾನು ಗಮನಿಸಿದ್ದೇನೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಮಾಹಿತಿ ನೀಡಿದ್ದು ರಾಹುಲ್ ಗಾಂಧಿ ಆರೋಪದ ಬಗ್ಗೆ ಬಹಿರಂಗವಾಗಿ ಹೇಳಿಕೆ ಕೊಡುವುದಿಲ್ಲ. ಲಿಖಿತ ರೂಪದಲ್ಲಿ ಮಾಹಿತಿ ನೀಡುತ್ತೇನೆ ಎಂದು ವಿ.ಅನ್ಬುಕುಮಾರ್ ಕುಮಾರ್ ತಿಳಿಸಿದರು. ಆಗಸ್ಟ್ 7, ಮಧ್ಯಾಹ್ನ 2.30 ಕ್ಕೆ ಈ ವರದಿಯನ್ನು ಸಲ್ಲಿಸಿದಾಗ ಚುನಾವಣಾ ಆಯೋಗ ಮತ್ತು ಬಿಜೆಪಿ ಇನ್ನೂ…
ರಾಯಚೂರು : ರಾಯಚೂರಲ್ಲಿ ಇಂದು ಘೋರವಾದ ಘಟನೆ ಒಂದು ನಡೆದಿದ್ದು, ಜಿಲ್ಲೆಯ ಅರಕೇರಾ ತಾಲೂಕಿನ ಆಲ್ದರ್ತಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು ಅಂಗನವಾಡಿ ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂಗನವಾಡಿ ಶಿಕ್ಷಕಿ ಮೇಲೆಯೇ ಕಟ್ಟಡದ ಸೀಲಿಂಗ್ ಕುಸಿದು ಬಿದ್ದಿದ್ದು, ಅಂಗನವಾಡಿ ಶಿಕ್ಷಕಿ ಮಹಾದೇವಮ್ಮಗೆ ಗಂಭೀರ ಗಾಯಗಳಾಗಿವೆ. ತಲೆ, ಕೈ, ಬೆನ್ನಿಗೆ ತೀವ್ರ ಪೆಟ್ಟುಗಳಾಗಿ ಶಿಕ್ಷಕಿ ಕುಸಿದು ಬಿದ್ದಿದ್ದಾರೆ. ಛಾವಣಿ ಮೇಲ್ಪದರ ಬಿದ್ದ ರಭಸಕ್ಕೆ ಶಿಕ್ಷಕಿ ಕುಳಿತಿದ್ದ ಕುರ್ಚಿ ಮುರಿದುಹೋಗಿದೆ. ಕೂಡಲೇ ಸಹಾಯಕ್ಕೆ ಬಂದ ಗ್ರಾಮಸ್ಥರು ಗಾಯಗೊಂಡ ಶಿಕ್ಷಕಿಯನ್ನ ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಂಗನವಾಡಿ ಶಾಲೆಯಲ್ಲಿದ್ದ 20ಕ್ಕೂ ಹೆಚ್ಚು ಮಕ್ಕಳು ಅದೃಷ್ಟವಶಾತ್ ಪಾರಾಗಿದ್ದಾರೆ. ಶಿಕ್ಷಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
ನವದೆಹಲಿ : ಪ್ರಮುಖ ರಾಜ್ಯಗಳ ಲೋಕಸಭಾ ಚುನಾವಣೆಯಲ್ಲಿ ನಕಲಿ ಮತದಾನ ಅಥವಾ ವೋಟ್ ಚೋರಿ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಅದನ್ನು ಚುನಾವಣಾ ಆಯೋಗ ನಿರಾಕರಿಸಿತ್ತು. ಆದರೆ, ಕಾಂಗ್ರೆಸ್ನಿಂದ ಈ ಬಗ್ಗೆ ಸಂಪೂರ್ಣವಾಗಿ ಸಂಶೋಧನೆ ಮಾಡಿಸಲಾಗಿದ್ದು, ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ 6.5 ಲಕ್ಷ ಒಟ್ಟು ಮತಗಳ ಪೈಕಿ 1,00,250 ನಕಲಿ ಮತ ಚಲಾವಣೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಆಗಸ್ಟ್ 7, ಮಧ್ಯಾಹ್ನ 2.30 ಕ್ಕೆ ಈ ವರದಿಯನ್ನು ಸಲ್ಲಿಸಿದಾಗ ಚುನಾವಣಾ ಆಯೋಗ ಮತ್ತು ಬಿಜೆಪಿ ಇನ್ನೂ ಪ್ರತಿಕ್ರಿಯಿಸಿಲ್ಲ. ದೊಡ್ಡ ಪ್ರಮಾಣದ ಕಳ್ಳತನ ಅಥವಾ “ಮತ ಚೋರಿ” ಎಂಬ ತಮ್ಮ ಹೇಳಿಕೆಯನ್ನು ಬೆಂಬಲಿಸುವ ವಿವರವಾದ ಪ್ರಸ್ತುತಿಯ ಭಾಗವಾಗಿ, ಕರ್ನಾಟಕದಲ್ಲಿ ಕಾಂಗ್ರೆಸ್ 28 ಸ್ಥಾನಗಳಲ್ಲಿ 16 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು, ಆದರೆ ಕೇವಲ ಒಂಬತ್ತು ಸ್ಥಾನಗಳನ್ನು ಮಾತ್ರ ಗೆದ್ದಿದೆ ಎಂದು ಅವರು ಹೇಳಿದರು. ಬೆಂಗಳೂರು ಸೆಂಟ್ರಲ್ನಲ್ಲಿನ ಸೋಲು ಅನುಮಾನವನ್ನು ಹುಟ್ಟುಹಾಕಿತು, ವಿಶೇಷವಾಗಿ ಎಂದು ಅವರು…