Author: kannadanewsnow05

ಬೆಂಗಳೂರು : ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಮೀನು ಬಳಕೆ ಮಾಡಿರುವುದಾಗಿ ಬಿಜೆಪಿ ಆರೋಪ ಮಾಡಿದೆ. ಇದೀಗ ಬಿಜೆಪಿ ನಾಯಕರ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಭವನಗಳಿಗೆ ನಾವು ಸರ್ಕಾರಿ ಜಾಗ ಬಳಸಿಕೊಳ್ಳುತ್ತಿದ್ದೇವೆ. ಬಿಜೆಪಿಯವರು ನೂರಾರು ಎಕರೆ ಕೊಟ್ಟಿಲ್ವೇ ಎಂದು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಚಾಣಕ್ಯ ವಿಶ್ವವಿದ್ಯಾಲಯ, ಆರ್ ಎಸ್ ಎಸ್ ಕಚೇರಿಗೆ ಬಿಜೆಪಿ ಅವರು ನೂರಾರು ಎಕರೆ ಭೂಮಿ ಕೊಟ್ಟಿಲ್ಲವೇ? 5 ರಿಂದ 10 ಸಾವಿರ ಅಡಿ ಜಾಗ ಮಂಜೂರು ಮಾಡುತ್ತಿದ್ದೇವೆ. ಬಿಜೆಪಿ ಅವಧಿಯಲ್ಲಿ ಬೆಂಗಳೂರಲ್ಲಿ ನೂರಕ್ಕೂ ಹೆಚ್ಚು ಕಡೆಗಳಲ್ಲಿ ವಿವಿಧ ಟ್ರಸ್ಟ್ ಗಳ ಹೆಸರಿನಲ್ಲಿ ಜಾಗವನ್ನು ಪಡೆದಿದ್ದಾರೆ. ಚಾಣಕ್ಯ ವಿಶ್ವವಿದ್ಯಾಲಯಕ್ಕೆ ನೀಡಿರುವ ಜಾಗ ಪ್ರತಿ ಎಕರೆಗೆ 10 ಕೋಟಿ ಇದೆ. ಆದರೆ ಬಿಜೆಪಿಗರು ಎಕರೆಗೆ 50 ಲಕ್ಷದ ದರದಲ್ಲಿ ಮಂಜೂರು ಮಾಡಿದೆ 100 ಎಕರೆ ಜಾಗ ಮಂಜೂರು ಮಾಡಿದ್ದಾರೆ. ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು. ಇಂತಹ ನೂರಾರು ಉದಾಹರಣೆಗಳನ್ನು ನಾನು ನೀಡಬಲ್ಲೆ, ಬಿಜೆಪಿಯವರು ನಮಗೆ…

Read More

ಕೋಲಾರ : ಜಾಗತಿಕ ಮಟ್ಟದ ಎಕೋ ಸಿಸ್ಟಮ್ ನಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದೆ ಎಂದು ಕೋಲಾರ ತಾಲೂಕಿನ ವೇಮಗಲ್ ನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೋದ್ಯಮ ಸಚಿವ ಎಂಬಿ ಪಾಟೀಲ್ ತಿಳಿಸಿದರು. ಭಾರತದ ಏರೋ ಸ್ಪೇಸ್ ನಲ್ಲಿ 65 ರಷ್ಟು ಕರ್ನಾಟಕದ ಕೊಡುಗೆ ಇದೆ ಏರೋ ಸ್ಪೇಸ್ ಜೊತೆಗೆ ವಿವಿಧ ಕಂಪನಿಗಳ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗಿದೆ ಬೆಂಗಳೂರು ಕೋಲಾರ ಸೇರಿದಂತೆ ಹಲವಡೆ ಡಿಫೆನ್ಸ್ ಕಾರಿಡಾರ್ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ವೆಮಗಲ್ ನಲ್ಲಿ ಖಾಸಗಿ ಹಲಿಕ್ಯಾಪ್ಟರ್ ಉತ್ಪಾದನಾ ಘಟಕ ಶುರುವಾಗುತ್ತಿದೆ. ಇದರಿಂದ ಉದ್ಯೋಗ ಸೃಷ್ಟಿಯಾಗುವುದು ನಿಶ್ಚಿತ. ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಮತ್ತಷ್ಟು ಕೈಗಾರಿಕೆಗಳು ಬರಲಿವೆ ಎಂದು ಸಚಿವ ಎಂಬ ಪಟೇಲ್ ಹೇಳಿಕೆ ನೀಡಿದರು.

Read More

ಮೈಸೂರು : ಅಕ್ರಮವಾಗಿ ಸಂಗ್ರಹಿಸಿದ 1256 ಚೀಲಗಳನ್ನ ಯೂರಿಯಾ ಜಪ್ತಿ ಮಾಡಲಾಗಿದೆ ಕಳ್ಬೆಟ್ಟ ಸಮೀಪದ ಖಾಸಗಿ ಗೋದಾಮಿಯಲ್ಲಿ ಈ ಒಂದು ಅಕ್ರಮವಾಗಿ ಯುರಿಯಾ ಸಂಗ್ರಹಿಸಲಾಗಿತ್ತು. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಳ್ಬೆಟ್ಟ ಗ್ರಾಮದಲ್ಲಿ ಹುಣಸೂರಿನ ಏಜ್ ಪಾಷಾ ಎಂಬುವರಿಗೆ ಗೋದಮಿನಲ್ಲಿ ಅಕ್ರಮವಾಗಿ ಯೂರಿಯ ಸಂಗ್ರಹಿಸಲಾಗಿತ್ತು. ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು ದಾಳಿಯ ವೇಳೆ ಗೋದಾಮಿಲ್ಲಿ ಇದ್ದ ಸಿಬ್ಬಂದಿಗಳು ಓಡಿ ಹೋಗಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಾದಕ ದಂಧೆಕೋರರ ವಿರುದ್ಧ ಸಮರ ಮುಂದುವರೆಸಿರುವ ಬೆಂಗಳೂರು ಪೊಲೀಸರು ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಗಳಿಂದ 10.59 ಕೋಟಿ ರೂಪಾಯಿ ಮೌಲ್ಯದ ಮಾದಕ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ಮೂವರು ವಿದೇಶಿ ಪ್ರಜೆಗಳೂ ಸೇರಿದಂತೆ ಒಟ್ಟು 15 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ವಿವಿಧ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಸೆನೆಗಲ್ ಪ್ರಜೆಯನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬ್ಯಾರಿ ಯಾಯ ಅಲಿಯಾಸ್ ಒಕೊಲಿ ಬಂಧಿತ ಆರೋಪಿಯಾಗಿದ್ದು, 29 ಎಲ್‌ಎಸ್‌ಡಿ ಮಾತ್ರೆಗಳು, 546 ಗ್ರಾಂ ಎಂಡಿಎಂಎ, 152 ಗ್ರಾಂ ಹೈಡ್ರೋ ಗಾಂಜಾ, 131 ಗ್ರಾಂ ಕೊಕೇನ್ ಹಾಗೂ 27 ಎಲ್‌ಎಸ್‌ಡಿ ಸ್ಟ್ರಿಪ್ಸ್ ಸೇರಿದಂತೆ 1.5 ಕೋಟಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕ್ರೀಡಾ ವೀಸಾ ಪಡೆದು ಭಾರತಕ್ಕೆ ಬಂದು ಮಾದಕ ದಂಧೆಯಲ್ಲಿ ತೊಡಗಿದ್ದ ದಕ್ಷಿಣ ಆಫ್ರಿಕಾ ಮೂಲದ ಕೊರ್ಲಿ ಡೇನಿಯಲ್‌ ಎಂಬಾತನನ್ನು ಗೋವಿಂದಪುರ ಠಾಣೆ…

Read More

ಹಾವೇರಿ : ರಾಜ್ಯದಲ್ಲಿ 29 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಬಗ್ಗೆ ಸಭೆ ಕರೆಯುತ್ತೆವೆ ಎಂದು ಹಾವೇರಿಯಲ್ಲಿ ಸಭಾಪತಿ ಬಸವರಾಜ್ ಹೊರಟಿ ಹೇಳಿಕೆ ನೀಡಿದರು.ಹಾವೇರಿಯಲ್ಲಿ ಈ ಕುರಿತು ಮಾತನಾಡಿದ ಅವರು, ಮುಂದಿನ ಅಧಿವೇಶನ ಸಂದರ್ಭದಲ್ಲಿ ಸಭೆ ಕರೆಯಬೇಕು. ತರಗತಿಗೆ ಒಬ್ಬ ಶಿಕ್ಷಕರನ್ನು ಕೊಡುವ ಕೆಲಸ ಆಗಬೇಕು ಈ ವಿಚಾರವಾಗಿ ಶಿಕ್ಷಣ ಇಲಾಖೆಯ ಸಚಿವರಿಗೆ ಕೇಳುತ್ತೇನೆ. ಶಿಕ್ಷಕರ ನೇಮಕ ಮಾಡದಿದ್ದರೆ ಹೇಗೆ ಎಸ್ ಎಸ್ ಎಲ್ ಸಿ ರಿಸಲ್ಟ್ ಕೇಳುತ್ತೀರಿ? ಎಸ್‍ಎಸ್‍ಎಲ್‍ಸಿಯಲ್ಲಿ ಹೇಗೆ ಉತ್ತಮ ಫಲಿತಾಂಶ ನಿರೀಕ್ಷೆ ಮಾಡುತ್ತೀರಿ? ಶಿಕ್ಷಕರ ನೇಮಕಾತಿ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಮಾತನಾಡುತ್ತೇನೆ. ಸರ್ಕಾರ ಎಲ್ಲಾ ನ್ಯೂನ್ಯತೆ ಸರಿಪಡಿಸಲಿ. ಎಮ್ಮಿಯನ್ನು ನೀರಿನಲ್ಲಿ ಮಲಗಿಸಿ ಬೆಲೆ ಕಟ್ಟುವುದು ಬೇಡ ಎಂದು ಅಸಮಾಧಾನ ಹೊರಹಾಕಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಹಾಸ್ಟೆಲಿನ 14ನೇ ಮಹಡಿಯಿಂದ ಬಿದ್ದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ನಾಗದೇವನಹಳ್ಳಿ ಬಳಿ ಇರುವ ವಿಶ್ವವಿದ್ಯಾಲಯದಲ್ಲಿ ಈ ಒಂದು ಘಟನೆ ನಡೆದಿದೆ. ಸರ್ಜಾಪುರದ 20 ವರ್ಷದ ನಯನಾ ಮೃತ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ನಯನಾ ಕಟ್ಟಡದ 14ನೇ ಮಹಡಿಯಿಂದ ಬಿದ್ದು ನಯನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅಪಘಾತದಿಂದ ಬಿದ್ದು ಒದ್ದಾಡುತ್ತಿದ್ದರು, ಆಂಬುಲೆನ್ಸ್ ಹಾಗು ಪೊಲೀಸರು ಸ್ಥಳಕ್ಕೆ ಬಾರದೆ ಇದ್ದಿದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ಮೈಲುಗಲ್ಲಿಗೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಇಶಾ ಫೌಂಡೇಶನ್ ನಿಂದ ಬೆಂಗಳೂರು ಕಡೆಗೆ ಯುವಕ ಯುವತಿ ತೆರಳುತ್ತಿದ್ದರು. ಅಪಘಾತದ ಸ್ಥಳಕ್ಕೆ ಸಂಚಾರಿ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಕೂಡ ಬಂದಿಲ್ಲ ಗಂಟೆಗಳ ಬಳಿಕ ಇಬ್ಬರನ್ನು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿ ವಿರುದ್ಧ ಅಪಪ್ರಚಾರದ ಪ್ರಕರಣವನ್ನು ರದ್ದುಗೊಳಿಸುವ ಮೂಲಕ, ರಿಲೀಫ್ ನೀಡಿದೆ. ವಿಧಾನಸಭೆ ಚುನಾವಣೆ ವೇಳೆಯಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಅವರ ವಿರುದ್ಧದ ಖಾಸಗಿ ದೂರನ್ನು ರದ್ದುಪಡಿಸಿದೆ. ಅಂದಹಾಗೇ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದಂತ ಕರಪ್ಷನ್ ರೇಟ್ ಕಾರ್ಡ್ ಜಾಹೀರಾತು ಸಂಬಂಧ ಬಿಜೆಪಿ ಪರವಾಗಿ ಕೇಶವಪ್ರಸಾದ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣ ರದ್ದುಪಡಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಅರ್ಜಿಯನ್ನು ವಿಚಾರಣೆ ನಡೆಸಿ ಪ್ರಕರಣ ರದ್ದುಪಡಿಸಿದೆ.

Read More

ಮಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಹೇಳಿಕೆ ನೀಡಿದರು. SIT ಅಂತಿಮ ವರದಿಯನ್ನು ಕೋರ್ಟಿಗೂ ಸಲ್ಲಿಸಬೇಕಿದೆ ಅಂತಿಮ ವರದಿ ನೀಡುವವರೆಗೆ ಯಾವುದೇ ನಿರ್ಧಾರಕ್ಕೆ ಬರುವುದಿಲ್ಲ. ಅಂತಿಮ ವರದಿ ನೀಡುವಂತೆ ಎಸ್ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ. ಬುರುಡೆ ಪ್ರಕರಣದಲ್ಲಿ ಈಗಾಗಲೇ ಮಧ್ಯಂತರ ವರದಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಸದನದೊಳಗೆ ಮತ್ತು ಸದಾನಂದ ಹೊರಗೆ ಪ್ರತಿಕ್ರಿಯಿಸಿದ್ದೇನೆ. ಎಸ್ಐಟಿ ಅಂತಿಮ ವರದಿ ಬಂದ ನಂತರ ಕ್ಯಾಬಿನೆಟ್ ನಲ್ಲಿ ಇಡುತ್ತೇವೆ. ಕ್ಯಾಬಿನೆಟ್ ನಲ್ಲಿ ನಿರ್ಧರಿಸಿದ ನಂತರ ಬಹಿರಂಗಗೊಳಿಸುವ ಕೆಲಸ ನಡೆಯುತ್ತೆ ಎಂದು ತಿಳಿಸಿದರು.

Read More

ಚಾಮರಾಜನಗರ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಬಸ್ತಿಪುರದದಲ್ಲಿ ಸಂಭವಿಸಿದೆ. ಬಸ್ತಿಪುರದ ಕಾಲುವೆಯ ಬಳಿ 45 ವರ್ಷದ ಆನಂದ ಎಂಬಾತ ಕುಡಿದ ನಶೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಎಣ್ಣೆ ಏಟಲ್ಲಿ ರಂಪಾಟ ಮಾಡಿ ಆನಂದ್ ಪೆಟ್ರೋಲ್ ಸುರಿದುಕೊಂಡಿದ್ದ. ತನ್ನ ಮೈ ಮೇಲೆ ಪೆಟ್ರೋಲ್ ಸುರಿದು ಆನಂದ್ ಬೆಂಕಿ ಹಚ್ಚಿಕೊಂಡಿದ್ದ. ಬೆಂಕಿಯ ಉರಿ ತಾಳಲಾರದೆ ಆನಂದ್ ಮತ್ತೆ ಕಾಲುವೆಗೆ ಹಾರಿದ್ದಾನೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಸದ್ಯ ಆನಂದನೆಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ ಆನಂದನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ಶಿಫ್ಟ್ ಮಾ

Read More