Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿಯ ಪ್ರತಿಕಾರವಾಗಿ ಇದೀಗ ಪಾಕಿಸ್ತಾನ್ ಉಗ್ರರ ಶಿಬಿರಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಇದರ ಬೆನ್ನಲ್ಲೆ ಇದೀಗ ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ಪ್ರಯುಕ್ತ ಎರಡು ನಿಮಿಷಗಳ ಕಾಲ ಸುಧೀರ್ಘವಾಗಿ ಯುದ್ಧದ ಸೈರನ್ ಮೊಳಗಿದೆ. ಹೌದು ಮಧ್ಯಾಹ್ನ 3:58 ರಿಂದ ಸಂಜೆ 4ರ ವರೆಗೆ ಸೈರನ್ ಮೊಳಗಿತು. ಸುಮಾರು ಎರಡು ನಿಮಿಷಗಳ ಕಾಲ ಸೈರನ್ ಮೊಳಗಿದೆ. ಬೆಂಗಳೂರಿನ ಸುಮಾರು 35 ಸ್ಥಳಗಳಲ್ಲಿ ಎರಡು ನಿಮಿಷಗಳ ಕಾಲ ಸೈರನ್ ಮೊಳಗಿತು. ಇನ್ನು ಹಲಸೂರಿನಲ್ಲಿರುವ ಅಗ್ನಿಶಾಮಕ ಇಲಾಖೆಯ ಡಿಜಿಪಿ ಕಚೇರಿಯಲ್ಲಿ ಕೂಡ ಮಾಕ್ ಡ್ರಿಲ್ ಪ್ರಯುಕ್ತ ಸೈರನ್ ಮೊಳಗಿದೆ. ಈ ವೇಳೆ ಸಾರ್ವಜನಿಕರು ಸಹ ಸೈರನ್ ಮೊಳಗುವುದನ್ನು ಅಗ್ನಿಶಾಮಕ ಇಲಾಖೆಯ ಮುಂದೆ ನಿಂತು ಕುತೂಹಲದಿಂದ ವೀಕ್ಷಿಸಿದರು. ವೈಯಾಲಿಕಾವಲ್, ಉಪ್ಪಾರಪೇಟೆ ಪೊಲೀಸ್ ಠಾಣೆ, ಕಮರ್ಷಿಯಲ್ ಸ್ಟ್ರೀಟ್, ರಾಜಾಜಿನಗರ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಕೆರೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಅಗ್ನಿಶಾಮಕ ಠಾಣೆ ಸೇರಿದಂತೆ 35 ಸ್ಥಳಗಳಲ್ಲಿ…
ನವದೆಹಲಿ : ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತಿಯ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಇವನು ಕ್ಷಿಪಣಿ ದಾಳಿಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದರೆ. ಹೀಗಾಗಿ ನಾಳೆ ಧರ್ಮ ಶಾಲಾದಲ್ಲಿ ಐಪಿಎಲ್ ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದ್ದು, ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯ ಸ್ಥಳಾಂತರ ಆಗಬಹುದು ಎನ್ನಲಾಗಿದೆ. ಹೌದು ನಾಳೆ ದೆಹಲಿ ಮತ್ತು ಪಂಜಾಬ್ ನಡುವೆ ಐಪಿಎಲ್ ಪಂದ್ಯ ನಡೆಯಲಿದೆ. ಪಂಜಾಬ್ ನ ಧರ್ಮಶಾಲಾದಲ್ಲಿ ಈ ಒಂದು ಐಪಿಎಲ್ ಪಂದ್ಯ ನಡೆಯಲಿದ್ದು ಪಂದ್ಯ ನಡೆಸುವ ಕುರಿತಂತೆ ಬಿಸಿಸಿಐ ನಿರಂತರವಾಗಿ ಕೇಂದ್ರ ಸರ್ಕಾರದ ಜೊತೆಗೆ ಸಂಪರ್ಕದಲ್ಲಿದೆ. ಬಹುತೇಕ ನಾಳೆ ಧರ್ಮಶಾಲಾದಲ್ಲಿ ನಡೆಯಬೇಕಿರುವ ದೆಹಲಿ ಮತ್ತು ಪಂಜಾಬ್ ನಡುವಿನ ಐಪಿಎಲ್ ಪಂದ್ಯ ಸ್ಥಳಾಂತರ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬೆಂಗಳೂರು : ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿd ಅವರು, ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ. ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ.ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ.…
ಬೆಂಗಳೂರು : ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ಗುಂಡಿನ ದಾಳಿ ಬಳಿಕ ಪ್ರತ್ಯುತ್ತರಕ್ಕೆ ನಮ್ಮೆಲ್ಲರ ಬೆಂಬಲವಿದೆ. ದೇಶದ ಹಿತವನ್ನು ಕಾಪಾಡಲು ನಾವೆಲ್ಲ ಒಟ್ಟಾಗಿರುತ್ತೇವೆ. ಇಡೀ ಜನಸಮುದಾಯ ದೇಶದ ರಕ್ಷಣೆಗೆ ಜೊತೆಯಾಗಿ ನಿಲ್ಲಲಿದೆ. ಹಾಗಾಗಿ ಇಂದು ಸಂಜೆ ನಾಲ್ಕು ಗಂಟೆಗೆ ಸಿವಿಲ್ ಡಿಫೆನ್ಸ್ ವತಿಯಿಂದ ಮಾಕ್ ಡ್ರಿಲ್ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಈಗಾಗಲೇ ಕೇಂದ್ರ ಗೃಹ ಇಲಾಖೆ ಮತ್ತು ರಕ್ಷಣಾ ಇಲಾಖೆಯಿಂದ ಕೆಲವು ಸೂಚನೆಗಳು ಬಂದಿದ್ದು, ಅದರಂತೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಿದ್ದೇವೆ. ಈಗಾಗಲೇ ಕೇಂದ್ರ ಸರ್ಕಾರ ಭದ್ರತೆ ನೀಡುತ್ತಿರುವ ಸ್ಥಳಗಳಲ್ಲಿ ಅವರೇ ಭದ್ರತೆ ಮುಂದುವರಿಸಿದ್ದಾರೆ. ನಮ್ಮ ಜವಾಬ್ಧಾರಿ ಇರುವ ಕಡೆ ನಾವು ಮಾಡುತ್ತೇವೆ. ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚಿಸಿದ್ದೇವೆ. ಈಗಾಗಲೇ ಕೇಂದ್ರ ಗೃಹ ಇಲಾಖೆ ಮತ್ತು ರಕ್ಷಣಾ ಇಲಾಖೆಯಿಂದ ಕೆಲವು ಸೂಚನೆಗಳು ಬಂದಿವೆ. ನಾಗರಿಕರ ರಕ್ಷಣೆ ಕುರಿತ ತಯಾರಿಗೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ.…
ಬೆಂಗಳೂರು : ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನಕ್ಕೆ ತಕ್ಕ ಪಾಠ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ ಪಾಕಿಸ್ತಾನಕ್ಕೆ ಉಳಿಗಾಲ ಇಲ್ಲ ಎಂಬ ಸಂದೇಶ ರವಾನೆಯಾಗಿದೆ. ನಮ್ಮ ಸೇನೆ ನಮ್ಮ ಹೆಮ್ಮೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯಲ್ಲಿ ಅಮಾಯಕರನ್ನು ಕೊಂದ ಪಾಕಿಸ್ತಾನದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ.ಭಾರತದಲ್ಲಿ ಅಶಾಂತಿ ಸೃಷ್ಟಿಸುವ ಹಾಗೂ ಭಯೋತ್ಪಾದಕ ಕೃತ್ಯ ಎಸಗುವ ಉಗ್ರಗಾಮಿ ಸಂಘಟನೆಗಳ ಹುಟ್ಟಡಗಿಸುವ ಹೋರಾಟದಲ್ಲಿ ನಾವೆಲ್ಲರೂ ಕೇಂದ್ರ ಸರ್ಕಾರದ ಜೊತೆಗಿದ್ದೇವೆ ದೇಶದ ಜನರು ಒಗ್ಗಟ್ಟಿನ ಬಲವನ್ನು ಸೈನ್ಯಕ್ಕೆ ನೀಡಿದ್ದೇವೆ. ಸಮರ್ಥ ಬಲ ಮೂಡುವ ಹಾಗೆ ಸೂಕ್ತ ಕಾರ್ಯಾಚರಣೆ ಆಗಿದೆ. ಇದು ಯುದ್ಧ ಕಾಲ ಎಲ್ಲರೂ ಸನ್ನದ್ಧರಾಗಿ ಇರಬೇಕು. ಗಡಿಯಿಂದ ಎಷ್ಟು ದೂರ ಇದ್ದೇವೆ ಅನ್ನು ಪ್ರಶ್ನೆ ಅಲ್ಲ. ಎಲ್ಲ ರೀತಿಯ ಜಾಗೃಕತೆ ಇರಬೇಕು. ಆ…
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚುತ್ತಿದ್ದು, ಮಹಿಳೆಯರು ಒಂಟಿಯಾಗಿ ಓಡಾಡದೆ ಇರೋ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಮಳಿಗೆಯ ಶೌಚಗೃಹದಲ್ಲಿ ರಹಸ್ಯ ಕ್ಯಾಮರಾ ಇಟ್ಟು ಮಹಿಳೆಯರ ವಿಡಿಯೋ ಚಿತ್ರೀಕರಿಸಿದ್ದ ಮಳಿಗೆಯ ಸ್ವಚ್ಛತಾ ಕೆಲಸಗಾರನನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೌದು ಬೆಂಗಳೂರಿನ ಪ್ರತಿಷ್ಠಿತ ಸಿಹಿ ತಿನಿಸು ಮಾರಾಟ ಮಳಿಗೆಯ ಶೌಚಗೃಹದಲ್ಲಿ ರಹಸ್ಯ ಕ್ಯಾಮರಾ ಇಟ್ಟು ಮಹಿಳೆಯರ ವಿಡಿಯೋ ಚಿತ್ರೀಕರಿಸಿದ್ದ ಹಿನ್ನೆಲೆಯಲ್ಲಿ ಇದೀಗ ಕೋರಮಂಗಲ ನಿವಾಸಿ ಅಮೋದ್(32) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬಂಧಿತ ಆರೋಪಿ ಬಿಹಾರ್ ಮೂಲದವನು ಎಂದು ತಿಳಿದುಬಂದಿದೆ. ಏ.25ರಂದು ಸಂಜೆ ಕೋರಮಂಗಲದ 60 ಅಡಿ ರಸ್ತೆಯ ಸಿಹಿ ತಿನಿಸು ಮಾರಾಟ ಮಳಿಗೆಗೆ ಬಂದಿದ್ದ ದೂರುದಾರ ಮಹಿಳೆಯು ಮಳಿಗೆಯ ಮೊದಲ ಮಹಡಿಯಲ್ಲಿನ ಮಹಿಳಾ ಶೌಚ ಗೃಹಕ್ಕೆ ಹೋದಾಗ ರಹಸ್ಯ ಕ್ಯಾಮೆರಾ ಇರುವುದು ಕಂಡು ಬಂದಿತ್ತು.ಅಲ್ಲದೆ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಎಚ್ಚರಿಕೆ ನೀಡಿದ್ದರು. ಸಂತ್ರಸ್ತೆ ಶೌಚಗೃಹ ಪ್ರವೇಶಿಸಿದಾಗ ಅದರ ಮುಂಭಾಗದ ಗೋಡೆಯು ಗಟ್ಟಿಯಾಗಿಲ್ಲದಿರುವುದು ಗಮನಕ್ಕೆ…
ದಕ್ಷಿಣಕನ್ನಡ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಯುವಕನೊಬ್ಬ ಅಪ್ರಾಪ್ತೆ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ನಡೆದಿದೆ. ಶಿರ್ಲಾಲು ಗ್ರಾಮದ ನಿವಾಸಿ ಸನತ್ (28ವ) ಎಂಬಾತನೇ ಅತ್ಯಾಚಾರವೆಸಗಿದ ಆರೋಪಿಯಾಗಿದ್ದಾನೆ.ಆರೋಪಿ ಸನತ್ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಬಾಲಕಿಯ ತಂದೆಯೊಂದಿಗೆ ಅಗಾಗ ಮನೆಗೆ ಬರುತ್ತಿದ್ದ. ಈ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಸಲುಗೆಯಿಂದ ಇದ್ದನೆನ್ನಲಾಗಿದೆ. ಬಾಲಕಿಯ ಜನ್ಮ ದಿನದ ಕಾರ್ಯಕ್ರಮಕ್ಕೆ ಬಂದು ಆರೋಪಿ ರಾತ್ರಿ ಮನೆಯಲ್ಲಿ ಉಳಿದುಕೊಂಡಿದ್ದಾನೆ. ರಾತ್ರಿ ವೇಳೆ ಬಾಲಕಿ ಮಲಗಿದ್ದ ಕೋಣೆಗೆ ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದನೆಂದು ದೂರಿನಲ್ಲಿ ಆರೋಪಿಸಲಾಗಿದೆ. ನಂತರದ ದಿನಗಳಲ್ಲಿ ಕೂಡಾ ಆಗಾಗ ರಾತ್ರಿ ವೇಳೆಯಲ್ಲಿ ಬಂದು ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಇದೀಗ ಆರೋಪಿ ಸನತ್ ವಿರುದ್ದ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ದೇಶಾದ್ಯಂತ ನಾಳೆ ಮಾಕ್ ಡ್ರಿಲ್ ನಡೆಸುವಂತೆ MHA ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರದಲ್ಲಿ ನಾಳೆ ಮಾಕ್ ಡ್ರಿಲ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಸಂಜೆ 4 ಗಂಟೆಗೆ ಸೈರನ್ ಮೊಳಗಿಸಲು ಪ್ಲಾನ್ ಮಾಡಲಾಗಿದೆ. ಸಂಜೆ 5:30 ರಿಂದ 7 ಗಂಟೆವರೆಗೆ ಮಾಕ್ ಡ್ರಿಲ್ ನಡೆಯಲಿದ್ದು, ಸಂಜೆ 6:40ರ ಸುಮಾರಿಗೆ ನಗರದಾದ್ಯಂತ ಲೈಟ್ ಆಫ್ ಮಾಡಲಾಗುತ್ತದೆ. ಹಲಸೂರು, ಹಲಸೂರು ಅಗ್ನಿಶಾಮಕ ಠಾಣೆ ಸುತ್ತ ಮಾರ್ಕ ಡ್ರಿಲ್ ನಡೆಯಲಿದೆ ಆಪರೇಷನ್ ಅಭ್ಯಾಸ ಹೆಸರಿನಲ್ಲಿ ಮಾರ್ಕ್ ಡ್ರಿಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೊಡ್ಡ ದೊಡ್ಡ ಕಟ್ಟಡದಿಂದ ರಕ್ಷಣೆ ಮಾಡುವ ಅಣುಕು ಪ್ರದರ್ಶನ ನಡೆಸಲಾಗುತ್ತದೆ. ಕ್ರ್ಯಾಶ್ ಬ್ಲಾಕ್ ಔಟ್ ಅಣುಕು ಪ್ರದರ್ಶನ ಹಿನ್ನೆಲೆ ನಾಳೆ ಸಂಜೆ ಇಡೀ ಬೆಂಗಳೂರಿನ ಆದ್ಯಂತ ಲೈಟ್ಸ್ ಆಫ್ ಆಗಲಿದೆ.ಆಪರೇಷನ್ ಅಭ್ಯಾಸ್ ಹೆಸರಿನಲ್ಲಿ ಅಣಕು ಪ್ರದರ್ಶನ ಮಾಡಲಾಗುತ್ತಿದ್ದು ಹಾಗಾಗಿ ನಾಳೆ ಸಂಜೆ 6:40ಕ್ಕೆ ಬೆಂಗಳೂರಿನದಂತೆ ಲೈಟ್ಸ್ ಆಫ್ ಆಗಲಿದೆ. ಯುದ್ಧದ ಮಾಕ್ ಡ್ರಿಲ್ ಅಂಗವಾಗಿ ಲೈಟ್ಸ್ ಆಫ್ ಮಾಡಲಾಗುತ್ತಿದೆ.
ಹೈದ್ರಾಬಾದ್ : ಆಂಧ್ರಪ್ರದೇಶ ಮತ್ತು ಕರ್ನಾಟಕ ಗಡಿ ಭಾಗದಲ್ಲಿರುವ OMC ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಇದೀಗ ಸಿಬಿಐ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಹೌದು ಈ ಒಂದು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈದರಾಬಾದ್ ನ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯಿತು.ಈ ವೇಳೆ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಜನಾರ್ಧನ ರೆಡ್ಡಿ ಅವರಿಗೆ 7 ವರ್ಷಗಳ ಕಾಲ ಜೈಲು ಶಿಕ್ಷೆ ಪ್ರಕಟಿಸಿದೆ. ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ನೀಡಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಬಂಧನ ಜನಾರ್ದನ ರೆಡ್ಡಿ ನಾನು ಈಗ ಸಾಮಾಜಿಕ ಕಾಯಕಗಳಲ್ಲಿ ತೊಡಗಿದ್ದೇನೆ ನಾನು ಶಾಸಕನಾಗಿದ್ದೇನೆ…
ಚಿತ್ರದುರ್ಗ : ಕಳೆದ ಮೇ 3ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ರೋಚಕ ಗೆಲುವು ಸಾಧಿಸಿತು. ಇನ್ನು ಆರ್ಸಿಬಿ ಸಿಎಸ್ಕೆ ವಿರುದ್ಧ ಗೆಲ್ಲುತ್ತಿದ್ದಂತೆ ಚಿತ್ರದುರ್ಗದಲ್ಲಿ ಆರ್ಸಿಬಿ ಅಭಿಮಾನಿಗಳು ವಿರಾಟ್ ಕೊಹ್ಲಿ ಕಟ್ ಔಟ್ ಮುಂದೆ ಮೇಕೆ ಬಲಿ ಕೊಟ್ಟಿದ್ದಾರೆ. ಮೇಕೆಯನ್ನು ಬಲಿ ಕೊಟ್ಟ ಮೂವರು ಆರ್ಸಿಬಿ ಅಭಿಮಾನಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಹೌದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಿಯಮ್ಮನಹಳ್ಳಿ ಈ ಘಟನೆ ನಡೆದಿತ್ತು. ಮೇಕೆ ಬಲಿ ನೀಡಿದ ಆರೋಪದ ಮೇರೆಗೆ ಆರ್ಸಿಬಿಯ ಮೂವರು ಅಭಿಮಾನಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಣ್ಣ ಪಾಲಯ್ಯ (22), ಜಯಣ್ಣ (23) ಮತ್ತು ತಿಪ್ಪೆಸ್ವಾಮಿ (28) ಎಂದು ಗುರುತಿಸಲಾಗಿದೆ.’call-me-143-kalki’ ಎಂಬ ಹೆಸರಿನ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿರುವ ಈ ವಿಡಿಯೋ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಚೆನ್ನೈ ವಿರುದ್ಧ ಆರ್ಸಿಬಿ ರೋಚಕ ಗೆಲುವು ಸಾಧಿಸಿದ ಬಳಿಕ ಅಭಿಮಾನಿಗಳ ಸಂಭ್ರಮಾಚರಣೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು.…














