Author: kannadanewsnow05

ಉತ್ತರಪ್ರದೇಶ : ಪತ್ನಿಯ ಕಾಟಕ್ಕೆ ಮನನೊಂದು ಟೆಕ್ಕಿ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಪತ್ನಿ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಸಂಗಾತಿಯ ಕೊಂಕು ಮಾತಿನಿಂದ ಮನನೊಂದು ಮತ್ತೊಬ್ಬ ಟಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಹೌದು ಆತ್ಮಹತ್ಯೆ ಮಾಡಿಕೊಂಡಂತಹ ಟೆಕ್ಕಿಯನ್ನು ಮಯಾಂಕ್ ಚಂದೆಲ್ ಎಂದು ಗುರುತಿಸಲಾಗಿದೆ. ಕೆಲಸವಿಲ್ಲದ ಕಾರಣ ಮಾನಸಿಕ ಒತ್ತಡದಲ್ಲಿದ್ದರು, ಜತೆಗೆ ತನ್ನ ಸಂಗಾತಿಯ ಕುಹಕ ಮಾತುಗಳನ್ನು ಕೇಳಿ ಮತ್ತಷ್ಟು ಡಿಪ್ರೆಶನ್​ಗೆ ಹೋಗಿದ್ದರು. ಉತ್ತರ ಪ್ರದೇಶದ ಜಲಾಲಾಬಾದ್‌ನವರಾದ ಚಂದೇಲ್, ಬಂಡಾ ಮೂಲದ ಮಹಿಳೆಯೊಂದಿಗೆ ಸುಮಾರು ಏಳು ವರ್ಷಗಳಿಂದ ಸಂಬಂಧ ಹೊಂದಿದ್ದರು. ನೋಯ್ಡಾದ ಸೆಕ್ಟರ್ 73 ರಲ್ಲಿ ನಾಲ್ಕು ವರ್ಷಗಳಿಂದ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದರು. ಡೆತ್​ನೋಟ್​ನಲ್ಲಿ ಏನೂ ಕೆಲಸವಿಲ್ಲ, ಇಡೀ ದಿನ ಮನೆಯಲ್ಲಿ ಕೂತು ತಿನ್ನೋದೊಂದೇ ಕೆಲಸ ಎನ್ನುವ ಮಾತು ತೀರಾ ಮನಸ್ಸು ಹಾಳುಮಾಡಿತ್ತು. ಈ ಎಲ್ಲಾ ಕಾರಣಗಳಿಂದಾಗಿ ತಾನು ಸಾಯುವ…

Read More

ಕಲಬುರ್ಗಿ : ರಿಲ್ಸ್ ಹುಚ್ಚಿಗಾಗಿ ಪುಂಡ ಯುವಕರು ತಲ್ವಾರ್ ಹಿಡಿದುಕೊಂಡು ವಿಡಿಯೋ ಮಾಡಿದ್ದಾರೆ. ಈ ನಡೆಯಲಿ ನಾಲ್ವರು ಯುವಕರ ವಿರುದ್ಧ ಕಲ್ಬುರ್ಗಿಯ ಆರ್‌ಜಿ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ತಲ್ವಾರ್ ಹಿಡಿದು ರೀಲ್ಸ್ ಮಾಡಿದ್ದ ನಾಲ್ವರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಲ್ಬುರ್ಗಿಯ ಆರ್ ಜಿ ನಗರ ಠಾಣೆಯಲ್ಲಿ ನಾಲ್ವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ತಲ್ವಾರ್ ಹಿಡಿದು ನಾಲ್ವರು ಯುವಕರು ರೀಲ್ ಮಾಡಿದ್ದರು.ವಿಡಿಯೋ ಸಾಕ್ಷಿಯಾಗಿ ಇಟ್ಟುಕೊಂಡು ಇದೀಗ ಪೊಲೀಸರು FIR ದಾಖಲಿಸಿದ್ದಾರೆ.

Read More

ಬೆಂಗಳೂರು : ಪತ್ನಿಯ ಕಿರುಕುಳ ತಾಳಲಾರದೆ ಇತ್ತೀಚೆಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಅತುಲ್ ಸುಭಾಷ್ ಪತ್ನಿ, ಅತ್ತೆ ಹಾಗೂ ಸೇರಿದಂತೆ ಮೂವರು ಆರೋಪಿಗಳನ್ನು ಮಾರತಹಳ್ಳಿ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಪೊಲೀಸರು ನಿನ್ನೆ ಬೆಳಿಗ್ಗೆ ಮೂವರನ್ನು ಬಂಧಿಸಿದ್ದು ರಾತ್ರಿ ಜಡ್ಜ್ ಮುಂದೆ ಹಾಜರುಪಡಿಸಿದ್ದರು ಇದೀಗ ನಾಲ್ವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಹೌದು ಪತ್ನಿಯ ಕಿರುಕುಳಕ್ಕೆ ಬೇಸತ್ತು ಟಕ್ಕಿ ಅತುಲ್ ಸುಭಾಷ್ ಸುಮಾರು 24 ಪುಟಗಳಷ್ಟು ಟೆಕ್ನೋಟ್ ನಲ್ಲಿ ಪತ್ನಿ ಹಾಕಿರುಕೊಳ್ಳದ ಬಗ್ಗೆ ಉಲ್ಲೇಖಿಸಿ ಆತ್ಮಹತ್ಯೆಗೆ ಶರಣಾಗಿದ್ದರು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಅತುಲ್ ಸುಭಾಷ್ ಪತ್ನಿ ನಿಖಿತಾ ಸಿಂಘಾನಿಯ, ನೀಶಾ, ಹಾಗೂ ಅನುರಾಗ್ ಸಿಂಘಾನಿಯ ಅವರನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣ ಹಿನ್ನೆಲೆ? ಳೆದ ಸೋಮವಾರ ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಯುಪಿ ಮೂಲದ ಟೆಕ್ಕಿ…

Read More

ತುಮಕೂರು : ಮನೆಯ ಬೀಗ ಮುರಿದು ನಗದು ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ವಿಶ್ವ ಮೋಹನ ಗುಪ್ತ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಸುಮಾರು 30 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ, ನಗದು ಕಳ್ಳತನ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಪತ್ನಿಯ ಕಿರುಕುಳ ತಾಳಲಾರದೆ ಇತ್ತೀಚೆಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಅತುಲ್ ಸುಭಾಷ್ ಪತ್ನಿ ಸೇರಿದಂತೆ ಮೂವರು ಆರೋಪಿಗಳನ್ನು ಉತ್ತರಪ್ರದೇಶದ ಅಲಹಾಬಾದ್ ನಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹೌದು ಪತ್ನಿಯ ಕಿರುಕುಳಕ್ಕೆ ಬೇಸತ್ತು ಟಕ್ಕಿ ಅತುಲ್ ಸುಭಾಷ್ ಸುಮಾರು 24 ಪುಟಗಳಷ್ಟು ಕಿರುಕುಳದ ಬಗ್ಗೆ ಡೆತ್ ನೋಟ್ ಅಲ್ಲಿ ಉಲ್ಲೆಖಿಸಿದ್ದರು. ಪತ್ನಿ ತಮಗೆ ನೀಡುತ್ತಿರುವ ಕಿರುಕುಳದ ಬಗ್ಗೆ ಉಲ್ಲೇಖಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಅತುಲ್ ಸುಭಾಷ್ ಪತ್ನಿ ನಿಖಿತಾ ಸಿಂಘಾನಿಯ, ನೀಶಾ, ಹಾಗೂ ಅನುರಾಗ್ ಸಿಂಘಾನಿಯ ಅವರನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣ ಹಿನ್ನೆಲೆ? ಕಳೆದ ಸೋಮವಾರ ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಯುಪಿ ಮೂಲದ ಟೆಕ್ಕಿ ಸೂಸೈಡ್ ಮಾಡಿಕೊಳ್ತಾರೆ. ಅವರು ಸೂಸೈಡ್‌ಗೂ ಮುನ್ನ 24 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ ಮತ್ತು 90 ನಿಮಿಷದ ವಿಡಿಯೋವನ್ನು ಮಾಡಿದ್ದಾರೆ.ಈ…

Read More

ಚಿಕ್ಕಮಗಳೂರು : ಟೂರಿಸ್ಟ್ ವಾಹನದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಸಂಪೂರ್ಣವಾಗಿ ವಾಹನಕ್ಕೆ ಬೆಂಕಿ ವ್ಯಾಪಿಸಿದ ಪರಿಣಾಮ, ಪೂರ್ತಿಯಾಗಿ ವಾಹನ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖದಲ್ಲಿ ನಡೆದಿದೆ ಅದೃಷ್ಟವಶಾತ್ ಟೂರಿಸ್ಟ್ ವಾಹನದಲ್ಲಿ ಸಂಚರಿಸುತ್ತಿದ್ದ 11 ಜನರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ‌.‌ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ಚಾಲೆಗೆ ವಾಹನ‌ ಸಂಪೂರ್ಣ ಸುಟ್ಟು ಹೋಗಿದೆ‌. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ. ಕೂಡಲೇ ಅಗ್ನಿಶಾಮಕ ದಳದವರಿಗೆ ಘಟನೆ ಕುರಿತು ಮಾಹಿತಿ ನೀಡಿದ್ದು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಟೂರಿಸ್ಟ್ ವಾಹನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದರು.ಬಳಿಕ ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಾವು ನಂಬಿರುವ ಯಾವುದೋ ವ್ಯಕ್ತಿ ನಮಗೆ ಮೋಸ ಮಾಡಿದಾಗ ನಾವು ಅತ್ಯಂತ ವಿಶ್ವಾಸ ಇಟ್ಟಿರುವ ವ್ಯಕ್ತಿ ನಮ್ಮ ಬೆನ್ನಿಗೆ ಚೂರಿ ಹಾಕಿದಾಗ ನಮ್ಮ ಮನಸ್ಸು ಅತ್ಯಂತ ಭಯಂಕರ ಸಿಟ್ಟು ಮತ್ತು ಪ್ರತಿಶೋಧ ದಿಂದ ತುಂಬಿ ಕೊಳ್ಳುತ್ತದೆ ಏಕೆಂದರೆ ನಾವು ಅವರ ಜೊತೆಗೆ ತುಂಬಾ ಸಮಯದಿಂದ ಆತ್ಮೀಯ ಆಗಿರುತ್ತೇವೆ ನಮ್ಮ ಮನ ನಮ್ಮ ಧನ ಮತ್ತು ತನ ಎಲ್ಲವನ್ನೂ ಅವರ ಮೇಲೆ ಬಂಡವಾಳ ಹಾಕುತ್ತೇವೆ ಇಷ್ಟೆಲ್ಲಾ ಮಾಡಿದ ಮೇಲೆ ಯಾರೋ ನಮಗೆ ಮೋಸ ಮಾಡಿದಾಗ ಮನಸ್ಸಿಗೆ ತುಂಬಾ ನೋವು ಆಗುತ್ತದೆ. ತುಂಬಾ ಕಷ್ಟ ಆಗುತ್ತದೆ ನಾವು ಅವರಲ್ಲಿ ಇಟ್ಟ ನಂಬಿಕೆ ಪಡೆದ ಪ್ರೀತಿ ಪಡೆದ ವಿಶ್ವಾಸದಲ್ಲಿ ಏನು ಕಡಿಮೆ ಆಯಿತು ಎಂದು ಯೋಚಿಸುತ್ತೇವೆ ಇಂತಹ ಸಮಯದಲ್ಲಿ ನಾವು ಏಕಾಂಗಿ ಆಗಿ ಬಿಡುತ್ತವೆ ಅವರ ನೆನಪು ನಮಗೆ ಎಡ ಬಿಡದೆ ಕಾಡುತ್ತಾ ಇರುತ್ತದೆ ಅದೇ…

Read More

ಮೈಸೂರು : ಇಂದು ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನ ಯಾತ್ರೆ ನಡೆಯಲಿದೆ ಇದರ ಮಧ್ಯ ಮತ್ತೆ ಜಾಮಿಯಾ ಮಸೀದಿ ವಿವಾದ ಮುನ್ನೆಲೆಗೆ ಬಂದಿದೆ. ಯಾತ್ರೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಸಂಪೂರ್ಣ ಕೇಸರಿಮಯವಾಗಿದ್ದು, ನಿಮಿಷಾಂಬ ದೇಗುಲದ ಬಳಿ ಯಾತ್ರೆಗೆ ಇಂದು ಚಾಲನೆ ಸಿಗಲಿದೆ. ಮಧ್ಯಾಹ್ನ 12ಕ್ಕೆ ಹನುಮ ಸಂಕೀರ್ತನ ಯಾತ್ರೆಗೆ ಚಾಲನೆ ಸಿಗಲಿದೆ. ಹೌದು ಇದೀಗ ಜಾಮಿಯಾ ಮಸೀದಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಂದು ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶ್ರೀರಂಗಪಟ್ಟಣದಲ್ಲಿ ಸಾವಿರಾರು ಪೊಲೀಸರ ಬಿಗಿ ಭದ್ರತೆಯ ನಡುವೆ ಈ ಒಂದು ಶೋಭಾಯಾತ್ರೆ ನಡೆಯಲಿದೆ. ಹಾಗಾಗಿ ಸಾವಿರಾರು ಪೊಲೀಸರಿಂದ ಹದ್ದಿನ ಕಣ್ಣು ಇಡಲಾಗಿದೆ ಯಾವುದೇ ಅಹಿತಕರ ಘಟನೆ ನಡೆದಂತೆ ಭದ್ರತೆ ಒದಗಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಾವಿರಾರು ಪೊಲೀಸರಿಂದ ಹದ್ದಿನ ಕಣ್ಣು ಇಡಲಾಗಿದೆ. ಹನುಮ ಸಂಕೀರ್ತನ ಯಾತ್ರೆ ಹಿನ್ನೆಲೆಯಲ್ಲಿ, ಜಾಮಿಯಾ ಮಸೀದಿಗೆ ಸಾರ್ವಜನಿಕರ ನಿರ್ಬಂಧ ಹೇರಲಾಗಿದೆ. ಮಸೀದಿಯ ಮುಂಭಾಗವೇ ಈ ಒಂದು ಸಂಕೀರ್ತನ ಯಾತ್ರೆ ಸಾಗಲಿದ್ದು…

Read More

ದಾವಣಗೆರೆ : ಬೆಳಗಾವಿಯಲ್ಲಿ 2ಎ ಮೀಸಲಾತಿ ಹೋರಾಟದ ನೇತೃತ್ವ ವಹಿಸಿದ್ದ ಕೂಡಲ ಸಂಗಮ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಮುಗಿಸಲು, ಹೋರಾಟಗಾರರ ಮೇಲೆ ಗೋಲಿಬಾರ್ ಮಾಡಲು ಸಂಚು ಮಾಡಿದ್ದರು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸ್ಫೋಟಕವಾದ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀ ಜಯ ಮೃತ್ಯುಂಜಯ ಸ್ವಾಮಿಗಳು ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿದ್ದಾರೆ. ಪ್ರತಿಭಟನೆ ನೇತೃತ್ವ ವಹಿಸಿರುವ ಅವರನ್ನೇ ಮುಗಿಸಿದರೆ, ರಾಜ್ಯದಲ್ಲಿ ಇಡೀ ಹೋರಾಟವೇ ನಿಲ್ಲುತ್ತದೆಂದು ಗೋಲಿಬಾರ್ ಮಾಡಲು ಕೆಲವರು ಪ್ಲಾನ್ ಮಾಡಿಕೊಂಡಿದ್ದರು. ಎಂದರು. ಪಂಚಮಸಾಲಿ, ಮಲೆಗೌಡ, ಗೌಡ ಲಿಂಗಾಯತ, ದೀಕ್ಷಾ ಗೌಡಗೂ ಮೀಸಲಾತಿ, ಲಿಂಗಾಯತ ಒಳಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸುವಂತೆ ನಿರಂತರ ಹೋರಾಡುತ್ತಾ ಬಂದಿದ್ದಾರೆ. ಸ್ವಾಮೀಜಿ ಮೇಲಿನ ಹಲ್ಲೆ, ದೌರ್ಜನ್ಯ, ಬಂಧನವನ್ನು ಸಮಸ್ತ ಮಠಾಧೀಶರು, ಸ್ವಾಮೀಜಿಗಳು ಖಂಡಿಸಬೇಕು ಎಂದರು. ಶ್ರೀಗಳು, ಸಮಾಜದ ಮುಖಂಡರು, ಹೋರಾಟಗಾರರ ಮೇಲೆ ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು. ಹೋರಾಟಗಾರರ ಲಾಠಿ ಬೀಸದೇ, ಮುತ್ತು ಕೊಡಲು ಕೇಳಬೇಕಿತ್ತಾ…

Read More

ಬೆಳಗಾವಿ : ಇತ್ತೀಚಿಗೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳು ಸಿಗರೇಟ್ ಸೇದುತ್ತಾ ಇಸ್ಪೀಟ್ ಆಡುತ್ತಿರುವ ವಿಡಿಯೋ ಭಾರಿ ವೈರಲ್ ಆಗಿತ್ತು. ಇದೀಗ ಹಿಂಡಲಗಾ ಜೈಲಿನಲ್ಲಿ ಮತ್ತೊಂದು ಘಟನೆ ನಡೆದಿದ್ದು ಗಾಂಜಾ ಗಾಗಿ ಜೈಲರ್ ಹಾಗೂ ಖೈದಿ ನಡುವೆ ಗಲಾಟೆ ನಡೆದಿದ್ದು ವಿಚಾರಣಾಧೀನ ಕೈದಿ ಒಬ್ಬ ಜೈಲರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬಳಕೆಗೆ ಬಂದಿದೆ. ಹೌದು ಸಹಾಯಕ ಜೈಲರ್ ಮೇಲೆ ಕೈದಿಯಿಂದಲೇ ಮಾರಣಾಂತಿಕ ಹಲ್ಲೆ ನಡೆದಿದೆ. ಸಹಾಯಕ ಜೈಲರ್ ಜಿ ಆರ್ ಕಾಂಬಳೆ ಮೇಲೆ ಕೈದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ವಿಚಾರಣಾಧೀನ ಕೈದಿ ಶಾಹಿದ್ ಖುರೇಷೆಯಿಂದ ಹಲ್ಲೆ ನಡೆದಿದೆ. ಡಿಸೆಂಬರ್ 11ರಂದು ಜೈಲಿನಲ್ಲಿ ನಡೆದಂತಹ ಘಟನೆ ಇದೀಗ ತಡವಾಗಿ ಬಳಕೆಗೆ ಬಂದಿದೆ. ಅಧಿವೇಶನ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಬೆಳಗಾವಿಯ ಹಿಂಡಲಗಾ ಜೈಲು ಅಧಿಕಾರಿಗಳು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ವೈದ್ಯರಿಂದ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ…

Read More